Connect with us

ದಿನದ ಸುದ್ದಿ

ಜನವರಿ 1 ರಂದು ಸುಕೋ ಬ್ಯಾಂಕ್ ‘ರಜತ ಸಂಭ್ರಮ’ : ಮೋಹಿತ್ ಮಸ್ಕಿ

Published

on

ಸುದ್ದಿದಿನ,ಬಳ್ಳಾರಿ: ಸುಕೋ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಮೋಹಿತ್ ಮಸ್ಕಿ ಅವರು ಸುಕೋ ಬ್ಯಾಂಕ ಕ್ಕೇಂದ್ರ ಕಚೇರಿ ಬಳ್ಳಾರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸುಕೋ ಬ್ಯಾಂಕ್’ ತನ್ನ ಇಪ್ಪತ್ತೈದು ವರ್ಷಗಳ ಸಾರ್ಥಕ ಸೇವೆಯನ್ನು ಸಲ್ಲಿಸಿ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಹಿನ್ನಲೆಯಲ್ಲಿ ಜನವರಿ 1, 2019 ರಿಂದ ವರ್ಷಪೂರ್ತಿ ತನ್ನ ಎಲ್ಲಾ ಶಾಖೆಗಳಲ್ಲಿ `ರಜತ ಸಂಭ್ರಮ’ವನ್ನು ಆಚರಿಸಲಿದೆ.

ಜನವರಿ 5ರ ಶನಿವಾರ ಬೆಳಗ್ಗೆ 6 ಗಂಟೆಗೆ `ರಜತ ಸಂಭ್ರಮ’ ಪ್ರಾರಂಭವಾಗಲಿದೆ. ರಜತ ಸಂಭ್ರಮ ಆಚರಣೆಯ ಅಂಗವಾಗಿ `ಸುಸ್ಥಿರ ಕೃಷಿ’ಗಾಗಿ ಮ್ಯಾರಥಾನ್ ಓಟ ಬೆಳಗ್ಗೆ 6 ಗಂಟೆಗೆ. ಮಧ್ಯಾಹ್ನ 12 ಗಂಟೆಗೆ ಬರಗೆದ್ದ ಕೃಷಿಕರ ಜೊತೆ ಜಿಲ್ಲಾ ಪಂಚಾಯಿತಿಯ `ನಜೀರ್‍ಸಾಬ್’ ಸಭಾಂಗಣದಲ್ಲಿ ಸಂವಾದ. `ಫುಡ್ ಟ್ಯಾಲೆಂಟ್ ಹಂಟ್ ಫಾರ್ ಸ್ಟಾರ್ಟ್‍ಅಪ್’ ಹಿನ್ನಲೆಯಲ್ಲಿ ಉತ್ತರ ಕರ್ನಾಟಕದ ಮರೆಯಾದ ಖಾದ್ಯಗಳು ಮತ್ತು ಸಿರಿಧಾನ್ಯ ಖಾದ್ಯಗಳ ತಯಾರಿಕೆ, ಪ್ರದರ್ಶನ ಮತ್ತು ಕಡ್ಢಾಯ ಮಾರಾಟವನ್ನು ಬಸವಭವನದಲ್ಲಿ ಸಂಜೆ 6 ಗಂಟೆಗೆ. ಸಭಾಂಗಣದಲ್ಲಿ `ಸುಕೃತ ಕೃಷಿ’ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು `ಸುಕೋ ಸಂಗೀತ ಸಂಭ್ರಮ’ ಜಿûೀ ಟಿ.ವಿ ಯ ಸರೆಗಮಪದಲ್ಲಿ ವಿಜೇತರಾದ ಖ್ಯಾತ ಬಾಲ ಕಲಾವಿದರಿಂದ ನಡೆಯಲಿದೆ.

ಸುಸ್ಥಿರ ಕೃಷಿಗಾಗಿ ಸಾವಿರದ ಓಟ:-`ಸುಸ್ಥಿರ ಕೃಷಿ’ಗಾಗಿ ಧ್ಯೇಯವಾಕ್ಯದ ಅಡಿ ನಡೆಯುವ ಮ್ಯಾರಥಾನ್, ಜನವರಿ 5ರ ಶನಿವಾರ, ಬೆಳಗ್ಗೆ 6:15 ಗಂಟೆಗೆ ಶ್ರೀಕನಕ ದುರ್ಗಮ್ಮ ದೇವಸ್ಥಾನದ ಆವರಣದಿಂದ ಪ್ರಾರಂಭ. ಗಡಿಗಿ ಚೆನ್ನಪ್ಪ ವೃತ್ತ, ರೈಲ್ವೆ ನಿಲ್ದಾಣ, ಎಚ್‍ಆರ್ ಗವಿಯಪ್ಪ ವೃತ್ತದಲ್ಲಿಯ ಶ್ರೀಬಸವೇಶ್ವರ ಪ್ರತಿಮೆ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ (ಓವರ್‍ಬ್ರಿಡ್ಜ್), ಬಸವನಕುಂಟೆ ಸರ್ಕಲ್, ವಾಲ್ಮೀಕಿ ವೃತ್ತ (ಎಸ್.ಪಿ. ಸರ್ಕಲ್) ಮೂಲಕ ಶ್ರೀಕನಕ ದುರ್ಗಮ್ಮ ದೇವಸ್ಥಾನದ ಆವರಣದಲ್ಲಿ ವಿರಾಮಗೊಳ್ಳಲಿದೆ.

ಕರ್ನಾಟಕದ ಕೃಷಿಸಾಧಕರು, ರೈತರು, ಸುಕೃತ ಕೃಷಿ ಪ್ರಶಸ್ತಿ ಪುರಸ್ಕøತರು, ಪ್ರಗತಿಪರರು, ಕೃಷಿ ತಜ್ಞರು, ವಿದ್ಯಾರ್ಥಿಗಳು ಮತ್ತು ನಗರವಾಸಿಗಳು ಸೇರಿ ಓಟದಲ್ಲಿ 1000ಕ್ಕೂ ಹೆಚ್ಚು ಜನ ಓಟಗಾರರು ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ. 14 ವರ್ಷ ಮೇಲ್ಪಟ್ಟವರು ಓಟದಲ್ಲಿ ಪಾಲ್ಗೊಳ್ಳಲು ಮುಕ್ತ ಅವಕಾಶ. ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಥಮ ರೂಪಾಯಿ 25,000, ದ್ವಿತೀಯ ರೂಪಾಯಿ 15,000 ಮತ್ತು ತೃತೀಯ ರೂಪಾಯಿ 10000 ಬಹುಮಾನ ನೀಡಲಾಗುತ್ತದೆ.

ಬರಗೆದ್ದ’ ಕೃಷಿಕರೊಂದಿಗೆ ಕೃಷಿ ಸಚಿವರ ಸಂವಾದ : ನಜೀರ್‍ಸಾಬ್ ಸಭಾಂಗಣ, ಜಿಲ್ಲಾ ಪಂಚಾಯಿತಿ, ಬಳ್ಳಾರಿ. ಸಮಯ : ಮಧ್ಯಾಹ್ನ 12 ಗಂಟೆಗೆ. ಬಳ್ಳಾರಿ ಜಿಲ್ಲಾ ಪಂಚಾಯಿತಿಯ ನಜೀರ್‍ಸಾಬ್ ಸಭಾಂಗಣದಲ್ಲಿ ಶನಿವಾರ ಮಧ್ಯಾಹ್ನ 12 ಗಂಟೆಯಿಂದ `ಬರಗೆದ್ದ ಕೃಷಿಕರ ಜೊತೆ ಸಂವಾದ’. ಸುಕೋ ಬ್ಯಾಂಕ್ ಪ್ರಾಯೋಜಿತ `ಸುಕೃತ ಕೃಷಿ’ ಪ್ರಶಸ್ತಿ ಸಂಚಾಲನ ಸ್ವತಂತ್ರ ಸಮಿತಿಯು ಕರ್ನಾಟಕ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸರ್ಕಾರದ ಯಾವುದೇ ಸೌಲಭ್ಯಗಳನ್ನು ಪಡೆಯದೇ, ಸ್ವಯಂ ಶ್ರಮ.ಹಾಗೂ ಛಲದಿಂದ ಕೃಷಿಯಲ್ಲಿ ಯಶಸ್ವನ್ನು ಸಾಧಿಸಿ, ನಾಡಿನ ಕೃಷಿಕರಿಗೆ ಮಾದರಿಯಾಗಿ, ಅನೇಕರಿಗೆ ಮಾರ್ಗದರ್ಶನ ನೀಡುತ್ತಿರುವ ಬರಗೆದ್ದ ಅನೇಕ ರೈತರನ್ನು ಭೇಟಿ ಮಾಡಿ, 45 ಸಾಧಕರನ್ನು ಗುರುತಿಸಿ, ಸಂವಾದಕ್ಕೆ ಆಯ್ಕೆ ಮಾಡಿದೆ.

ಈ ಸಾಧಕರು ಕೃಷಿಯನ್ನು ಆಯ್ಕೆ ಮಾಡಿಕೊಂಡಿದ್ದರ ಹಿನ್ನಲೆ, ಶ್ರಮ, ಗುರಿ ತಲುಪಿದ ಯೋಜನೆ (ಪ್ಲಾನಿಂಗ್), ಯಶಸ್ಸು, ಎದುರಿಸಿದ ಸವಾಲುಗಳು, ಗುರಿ ತಲುಪಿದಾಗ ಸಿಕ್ಕ ಸಮಾಧಾನ ಇನ್ನಿತರೆಗಳ ಬಗ್ಗೆ ಮನದಾಳದ ಮಾತುಗಳ ಮೂಲಕ ತಮ್ಮ ಅನುಭವವನ್ನು ಸಂವಾದದಲ್ಲಿ ಹಂಚಿಕೊಳ್ಳಲಿದ್ದಾರೆ. ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಈ ಸಾಧಕರ ಶ್ರಮ ಮತ್ತು ಸಾಧನೆಯನ್ನು ನಾಡಿಗೆ ಪರಿಚಯಿಸುವ ಜವಾಬ್ದಾರಿಯನ್ನು ನಿರ್ವಹಿಸುವ ಮೂಲಕ `ಸುಕೋ ಬ್ಯಾಂಕ್’ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಪರೋಕ್ಷವಾಗಿ ಸೇವೆ ಸಲ್ಲಿಸುತ್ತಿರುವುದು ಸಂತೋಷದ ವಿಷಯ. `ಫುಡ್ ಟ್ಯಾಲೆಂಟ್ ಹಂಟ್ ಫಾರ್ ಸ್ಟಾರ್ಟ್‍ಅಪ್’
(ಆಹಾರ ಪ್ರತಿಭಾನ್ವೇಷಣೆಯಿಂದ ಉದ್ದಿಮೆಯತ್ತ)
ಅಡುಗೆ ಮನೆಗೆ ಸೀಮಿತವಾಗಿದ್ದ ಆಹಾರ ತಯಾರಿಸುವ ಪ್ರತಿಭೆಗಳನ್ನು ಉದ್ಯಮಿಗಳನ್ನಾಗಿ ರೂಪಾಂತರ ಮಾಡುವಲ್ಲಿ `ಸುಕೋ ಬ್ಯಾಂಕ್’ ಉತ್ತರ ಕರ್ನಾಟಕದ ಮರೆತುಹೋದ ತಿಂಡಿಗಳು ಮತ್ತು `ಸಿರಿಧಾನ್ಯ’ ಖಾದ್ಯಗಳ ತಯಾರಿಕೆಯ ಸ್ಪರ್ಧೆ – ಪ್ರದರ್ಶನ ಮತ್ತು ಕಡ್ಢಾಯ ಮಾರಾಟ ಮೇಳವನ್ನು, ಬಸವಭವನದಲ್ಲಿ ಸಂಜೆ 6 ಗಂಟೆಗೆ ಏರ್ಪಡಿಸಿದೆ ಎಂದರು.‌

ಸುಕೋ ಬ್ಯಾಂಕ್ ಕಾರ್ಯನಿರ್ವಹಿಸುವ 11 ಜಿಲ್ಲೆಗಳಲ್ಲಿ ಎರೆಡು ವಿಭಾಗಗಳಲ್ಲಿ (ಉತ್ತರ ಕರ್ನಾಟಕದ ಮರೆತುಹೋದ ಖಾದ್ಯಗಳು ಮತ್ತು ಸಿರಿಧಾನ್ಯ ಖಾದ್ಯಗಳು) ಸ್ಪರ್ಧೆ ನಡೆಯಲಿದೆ. ಸ್ಪರ್ಧಾಳುಗಳು ಎರೆಡೂ ವಿಭಾಗಗಳಲ್ಲಿ ಸ್ಪರ್ಧಿಸಲು ಅವಕಾಶವಿದೆ. ಸ್ಪರ್ಧೆಯು ಮೊದಲ ಹಂತದಲ್ಲಿ ಜಿಲ್ಲಾ ಮಟ್ಟದಲ್ಲಿ ನಡೆದು, ಕೊನೆಯ ಸುತ್ತಿನಲ್ಲಿ ಮೆಗಾ ಫೈನಲ್ (ಬಳ್ಳಾರಿಯಲ್ಲಿ) ನಡೆಯಲಿದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ಪಡದವರು, ಮೆಗಾ ಫೈನಲ್‍ಗೆ ಆಯ್ಕೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ರೂಪಾಯಿ 10,000, ದ್ವಿತೀಯ ರೂಪಾಯಿ 7500 ಮತ್ತು ತೃತೀಯ ಬಹುಮಾನವಾಗಿ ರೂಪಾಯಿ 5000 ನೀಡಲಾಗುತ್ತದೆ. ಮೆಗಾ ಫೈನಲ್‍ನಲ್ಲಿ ಪ್ರಥಮ ಬಹುಮಾನ ರೂಪಾಯಿ 25,000, ದ್ವಿತೀಯ ಬಹುಮಾನ ರೂಪಾಯಿ 15,000 ಮತ್ತು ತೃತೀಯ ಬಹುಮಾನವಾಗಿ ರೂಪಾಯಿ 10,000. ಸ್ಪರ್ಧೆಯಲ್ಲಿ ಭಾಗವಹಿಸುವ ಆಸಕ್ತಿಯುಳ್ಳವರು ಹತ್ತಿರದ ಸುಕೋ ಬ್ಯಾಂಕ್ ಶಾಖೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಬಹುದಾಗಿದೆ.

ಈ ಮೂಲಕ ಪ್ರತಿಭಾನ್ವಿತ ಅಡುಗೆ ತಯಾರಿಕರನ್ನು ಪ್ರೋತ್ಸಾಹಿಸಿ, ಉದ್ಯಮ ಕ್ಷೇತ್ರಕ್ಕೆ ಪರಿಚಯ ಮಾಡಿ, ಆಹಾರ ಉದ್ಯಮದಲ್ಲಿ ಭದ್ರವಾಗಿ ನೆಲೆಯೂರಲು ಅಗತ್ಯ ತಾಂತ್ರಿಕ ಮತ್ತು ಆಡಳಿತಾತ್ಮಕ ನೆರವು ನೀಡುವ ಜವಾಬ್ದಾರಿ `ಸುಕೋ ಬ್ಯಾಂಕ್’ನದ್ದು. ಒಂದರ್ಥದಲ್ಲಿ ಪ್ರತಿಭಾನ್ವೇಷಣೆಯ ಜೊತೆ ಜೊತೆಯಲ್ಲಿ ಉದ್ಯಮಿಗಳಾಗುವ ಹೊಸ ಕನಸನ್ನು ಮೂಡಿಸುವ ಜವಾಬ್ದಾರಿಯುತ ಪ್ರಯತ್ನ ಸುಕೋ ಬ್ಯಾಂಕ್‍ನದ್ದಾಗಿದೆ.
ಜಿಲ್ಲಾವಾರು ಮತ್ತು ಮೆಗಾ ಫೈನಲ್‍ನ ಎಲ್ಲಾ ಸ್ಪರ್ಧೆಗಳಲ್ಲೂ ಜನಪ್ರಿಯ ನಟ, ಸಿಹಿಕಹಿ ಚಂದ್ರು ಪ್ರಮುಖ ತೀರ್ಪುಗಾರರು. ಮತ್ತು ಸಮನ್ವಯ ತೀರ್ಪುಗಾರರಾಗಿ ಮರ್ಚೇಡು ಮಲ್ಲಿಕಾಜುನಗೌಡ ಅವರು ಕಾರ್ಯನಿರ್ವಹಿಸಲಿದ್ದಾರೆ.
`ಸುಕೃತ ಕೃಷಿ’ ಪ್ರಶಸ್ತಿ ಮತ್ತು ಸುಕೋ ಸಂಗೀತ

ಸಂಭ್ರಮ:- ಸುಕೃತ ಕೃಷಿ ಪ್ರಶಸ್ತಿ ಸಂಚಾಲನಾ ಸಮಿತಿ ಆಯ್ಕೆ ಮಾಡಿರುವ, ನಾಡಿನ ದಿಕ್ಸೂಚಿ ಆಗಿರುವ ಓರ್ವ ಕೃಷಿಕರು ಮತ್ತು ಓರ್ವ ಕೃಷಿ ತಂತ್ರಜ್ಞಾನ ಸಾಧಕರಿಗೆ ಬಸವಭವನದ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ. ಪ್ರಶಸ್ತಿಯು ಒಂದು ಲಕ್ಷ ರೂಪಾಯಿ, ಪಾರಿತೋಷಕ ಮತ್ತು ಅಭಿನಂದನೆಯ ಪ್ರಶಂಸಾ ಪತ್ರವನ್ನು ಒಳಗೊಂಡಿರುತ್ತದೆ. ಈಬಾರಿಯ `ಸುಕೃತ ಕೃಷಿ’ ಪ್ರಶಸ್ತಿ ಪುರಸ್ಕøತರ ಹೆಸರುಗಳನ್ನು ಸುಕೃತ ಪ್ರಶಸ್ತಿ ಸಂಚಾಲನಾ ಸಮಿತಿ ಶೀಘ್ರದಲ್ಲೇ ಪ್ರಕಟಿಸಲಿದೆ. ಕೃಷಿ ಸಾಧಕರ ಕುರಿತು ಸಾಕ್ಷ್ಯಚಿತ್ರ ಮತ್ತು ಪುಸ್ತಕವನ್ನು ಪ್ರಕಟಿಸಲಾಗುತ್ತದೆ. ಕಳೆದ ಬಾರಿ ಸುಕೃತ ಕೃಷಿ ಪ್ರಶಸ್ತಿ ಸಂಚಾಲನಾ ಸಮಿತಿಯು ‘ಉತ್ತಮ ಕೃಷಿಕ’ ಪ್ರಶಸ್ತಿಯನ್ನು ಸಾಗರದ ಶ್ರೀ ಮುತ್ತಣ್ಣ ಪೂಜಾರ್ ಅವರಿಗೆ ‘ಉತ್ತಮ ಕೃಷಿ ತಂತ್ರಜ್ಞಾನ’ ಪ್ರಶಸ್ತಿಯನ್ನು ಶಿರಸಿಯ ಶ್ರೀ ಲಕ್ಷ್ಮೀ ನಾರಾಯಣ ಹೆಗಡೆ ಅವರಿಗೆ ಪ್ರದಾನ ಮಾಡಲಾಗಿತ್ತು. ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗಡೆ ಅವರು ಪ್ರಶಸ್ತಿ ಪ್ರದಾನ ಮಾಡಿದ್ದರು. ಪ್ರತೀ ಸಲ ಪ್ರಶಸ್ತಿ ಪ್ರದಾನ ಮಾಡುವ ದಿನಾಂಕವನ್ನು ಮಾತ್ರ ಸುಕೋ ಬ್ಯಾಂಕ್ ನಿರ್ಧರಿಸಲಿದ್ದು, ವಿಜೇತರನ್ನು ನಿರ್ಧರಿಸುವುದು ಹಾಗೂ ಅವರ ಬಗ್ಗೆ ಸಾಕ್ಷ್ಯ ಚಿತ್ರ, ಪುಸ್ತಕಗಳನ್ನು ಪ್ರಕಟಿಸುವುದು ಕೃಷಿ ಪ್ರಶಸ್ತಿ ಸಂಚಾಲನಾ ಸ್ವತಂತ್ರ ಸಮಿತಿಯ ಜವಾಬ್ದಾರಿಯಾಗಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಜಿ. ಟಿ.ವಿ.ಯ ಸರಿಗಮಪ ಸರಣಿಯಲ್ಲಿ ವಿಜೇತರಾದ ಬಾಲ ಕಲಾವಿದರಾದ ಶ್ರೀ ಜ್ಞಾನೇಶ್, ಕು. ಪ್ರಕೃತಿ ರೆಡ್ಡಿ ಹಾಗೂ ಶ್ರೀ ವಿಶ್ವ ಪ್ರಸಾದ್ ಅವರು ಸುಕೋ ಸಂಗೀತ ಸಂಜೆಯನ್ನು ನಡೆಸಿಕೊಡಲಿದ್ದಾರೆ ಎಂದು ಹೇಳಿದರು. ಮ್ಯಾನೇಜಿಂಗ್ ಡೈರೆಕ್ಟರ್ ಪರಿಮಾಳಚಾರ್ ಅಗ್ನಿಹೋತ್ರಿ, ಬೋರ್ಡ್ ಸೆಕ್ರೆಟರಿ ವೆಂಕಟೇಶ ರಾವ್ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ10 hours ago

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ. ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ,...

ದಿನದ ಸುದ್ದಿ10 hours ago

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ತಿರಸ್ಕೃತಗೊಂಡ...

ದಿನದ ಸುದ್ದಿ3 days ago

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ....

ದಿನದ ಸುದ್ದಿ3 days ago

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ...

ದಿನದ ಸುದ್ದಿ4 days ago

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ. ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ...

ದಿನದ ಸುದ್ದಿ5 days ago

ಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ

ಸುದ್ದಿದಿನ,ದಾವಣಗೆರೆ:ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ದಿಮೆ ಮಳಿಗೆಗಳು ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿ ನಾಮಫಲಕವನ್ನು ಅಳವಡಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ. ಒಂದು...

ದಿನದ ಸುದ್ದಿ6 days ago

ದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ದಾವಣಗೆರೆ ತಾಲ್ಲೂಕಿನ ಕಂದಗಲ್ಲು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಲಿಂಗೇಶ್ವರ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಡಳಿತಕ್ಕೆ ಒಳಪಟ್ಟಿದೆ. ನಿಯಮಬಾಹಿರವಾಗಿ ಸಾಮಾನ್ಯ...

ದಿನದ ಸುದ್ದಿ2 weeks ago

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ...

ದಿನದ ಸುದ್ದಿ3 weeks ago

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,...

ದಿನದ ಸುದ್ದಿ3 weeks ago

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ...

Trending