Connect with us

ದಿನದ ಸುದ್ದಿ

ಜನವರಿ 1 ರಂದು ಸುಕೋ ಬ್ಯಾಂಕ್ ‘ರಜತ ಸಂಭ್ರಮ’ : ಮೋಹಿತ್ ಮಸ್ಕಿ

Published

on

ಸುದ್ದಿದಿನ,ಬಳ್ಳಾರಿ: ಸುಕೋ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಮೋಹಿತ್ ಮಸ್ಕಿ ಅವರು ಸುಕೋ ಬ್ಯಾಂಕ ಕ್ಕೇಂದ್ರ ಕಚೇರಿ ಬಳ್ಳಾರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸುಕೋ ಬ್ಯಾಂಕ್’ ತನ್ನ ಇಪ್ಪತ್ತೈದು ವರ್ಷಗಳ ಸಾರ್ಥಕ ಸೇವೆಯನ್ನು ಸಲ್ಲಿಸಿ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಹಿನ್ನಲೆಯಲ್ಲಿ ಜನವರಿ 1, 2019 ರಿಂದ ವರ್ಷಪೂರ್ತಿ ತನ್ನ ಎಲ್ಲಾ ಶಾಖೆಗಳಲ್ಲಿ `ರಜತ ಸಂಭ್ರಮ’ವನ್ನು ಆಚರಿಸಲಿದೆ.

ಜನವರಿ 5ರ ಶನಿವಾರ ಬೆಳಗ್ಗೆ 6 ಗಂಟೆಗೆ `ರಜತ ಸಂಭ್ರಮ’ ಪ್ರಾರಂಭವಾಗಲಿದೆ. ರಜತ ಸಂಭ್ರಮ ಆಚರಣೆಯ ಅಂಗವಾಗಿ `ಸುಸ್ಥಿರ ಕೃಷಿ’ಗಾಗಿ ಮ್ಯಾರಥಾನ್ ಓಟ ಬೆಳಗ್ಗೆ 6 ಗಂಟೆಗೆ. ಮಧ್ಯಾಹ್ನ 12 ಗಂಟೆಗೆ ಬರಗೆದ್ದ ಕೃಷಿಕರ ಜೊತೆ ಜಿಲ್ಲಾ ಪಂಚಾಯಿತಿಯ `ನಜೀರ್‍ಸಾಬ್’ ಸಭಾಂಗಣದಲ್ಲಿ ಸಂವಾದ. `ಫುಡ್ ಟ್ಯಾಲೆಂಟ್ ಹಂಟ್ ಫಾರ್ ಸ್ಟಾರ್ಟ್‍ಅಪ್’ ಹಿನ್ನಲೆಯಲ್ಲಿ ಉತ್ತರ ಕರ್ನಾಟಕದ ಮರೆಯಾದ ಖಾದ್ಯಗಳು ಮತ್ತು ಸಿರಿಧಾನ್ಯ ಖಾದ್ಯಗಳ ತಯಾರಿಕೆ, ಪ್ರದರ್ಶನ ಮತ್ತು ಕಡ್ಢಾಯ ಮಾರಾಟವನ್ನು ಬಸವಭವನದಲ್ಲಿ ಸಂಜೆ 6 ಗಂಟೆಗೆ. ಸಭಾಂಗಣದಲ್ಲಿ `ಸುಕೃತ ಕೃಷಿ’ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು `ಸುಕೋ ಸಂಗೀತ ಸಂಭ್ರಮ’ ಜಿûೀ ಟಿ.ವಿ ಯ ಸರೆಗಮಪದಲ್ಲಿ ವಿಜೇತರಾದ ಖ್ಯಾತ ಬಾಲ ಕಲಾವಿದರಿಂದ ನಡೆಯಲಿದೆ.

ಸುಸ್ಥಿರ ಕೃಷಿಗಾಗಿ ಸಾವಿರದ ಓಟ:-`ಸುಸ್ಥಿರ ಕೃಷಿ’ಗಾಗಿ ಧ್ಯೇಯವಾಕ್ಯದ ಅಡಿ ನಡೆಯುವ ಮ್ಯಾರಥಾನ್, ಜನವರಿ 5ರ ಶನಿವಾರ, ಬೆಳಗ್ಗೆ 6:15 ಗಂಟೆಗೆ ಶ್ರೀಕನಕ ದುರ್ಗಮ್ಮ ದೇವಸ್ಥಾನದ ಆವರಣದಿಂದ ಪ್ರಾರಂಭ. ಗಡಿಗಿ ಚೆನ್ನಪ್ಪ ವೃತ್ತ, ರೈಲ್ವೆ ನಿಲ್ದಾಣ, ಎಚ್‍ಆರ್ ಗವಿಯಪ್ಪ ವೃತ್ತದಲ್ಲಿಯ ಶ್ರೀಬಸವೇಶ್ವರ ಪ್ರತಿಮೆ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ (ಓವರ್‍ಬ್ರಿಡ್ಜ್), ಬಸವನಕುಂಟೆ ಸರ್ಕಲ್, ವಾಲ್ಮೀಕಿ ವೃತ್ತ (ಎಸ್.ಪಿ. ಸರ್ಕಲ್) ಮೂಲಕ ಶ್ರೀಕನಕ ದುರ್ಗಮ್ಮ ದೇವಸ್ಥಾನದ ಆವರಣದಲ್ಲಿ ವಿರಾಮಗೊಳ್ಳಲಿದೆ.

ಕರ್ನಾಟಕದ ಕೃಷಿಸಾಧಕರು, ರೈತರು, ಸುಕೃತ ಕೃಷಿ ಪ್ರಶಸ್ತಿ ಪುರಸ್ಕøತರು, ಪ್ರಗತಿಪರರು, ಕೃಷಿ ತಜ್ಞರು, ವಿದ್ಯಾರ್ಥಿಗಳು ಮತ್ತು ನಗರವಾಸಿಗಳು ಸೇರಿ ಓಟದಲ್ಲಿ 1000ಕ್ಕೂ ಹೆಚ್ಚು ಜನ ಓಟಗಾರರು ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ. 14 ವರ್ಷ ಮೇಲ್ಪಟ್ಟವರು ಓಟದಲ್ಲಿ ಪಾಲ್ಗೊಳ್ಳಲು ಮುಕ್ತ ಅವಕಾಶ. ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಥಮ ರೂಪಾಯಿ 25,000, ದ್ವಿತೀಯ ರೂಪಾಯಿ 15,000 ಮತ್ತು ತೃತೀಯ ರೂಪಾಯಿ 10000 ಬಹುಮಾನ ನೀಡಲಾಗುತ್ತದೆ.

ಬರಗೆದ್ದ’ ಕೃಷಿಕರೊಂದಿಗೆ ಕೃಷಿ ಸಚಿವರ ಸಂವಾದ : ನಜೀರ್‍ಸಾಬ್ ಸಭಾಂಗಣ, ಜಿಲ್ಲಾ ಪಂಚಾಯಿತಿ, ಬಳ್ಳಾರಿ. ಸಮಯ : ಮಧ್ಯಾಹ್ನ 12 ಗಂಟೆಗೆ. ಬಳ್ಳಾರಿ ಜಿಲ್ಲಾ ಪಂಚಾಯಿತಿಯ ನಜೀರ್‍ಸಾಬ್ ಸಭಾಂಗಣದಲ್ಲಿ ಶನಿವಾರ ಮಧ್ಯಾಹ್ನ 12 ಗಂಟೆಯಿಂದ `ಬರಗೆದ್ದ ಕೃಷಿಕರ ಜೊತೆ ಸಂವಾದ’. ಸುಕೋ ಬ್ಯಾಂಕ್ ಪ್ರಾಯೋಜಿತ `ಸುಕೃತ ಕೃಷಿ’ ಪ್ರಶಸ್ತಿ ಸಂಚಾಲನ ಸ್ವತಂತ್ರ ಸಮಿತಿಯು ಕರ್ನಾಟಕ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸರ್ಕಾರದ ಯಾವುದೇ ಸೌಲಭ್ಯಗಳನ್ನು ಪಡೆಯದೇ, ಸ್ವಯಂ ಶ್ರಮ.ಹಾಗೂ ಛಲದಿಂದ ಕೃಷಿಯಲ್ಲಿ ಯಶಸ್ವನ್ನು ಸಾಧಿಸಿ, ನಾಡಿನ ಕೃಷಿಕರಿಗೆ ಮಾದರಿಯಾಗಿ, ಅನೇಕರಿಗೆ ಮಾರ್ಗದರ್ಶನ ನೀಡುತ್ತಿರುವ ಬರಗೆದ್ದ ಅನೇಕ ರೈತರನ್ನು ಭೇಟಿ ಮಾಡಿ, 45 ಸಾಧಕರನ್ನು ಗುರುತಿಸಿ, ಸಂವಾದಕ್ಕೆ ಆಯ್ಕೆ ಮಾಡಿದೆ.

ಈ ಸಾಧಕರು ಕೃಷಿಯನ್ನು ಆಯ್ಕೆ ಮಾಡಿಕೊಂಡಿದ್ದರ ಹಿನ್ನಲೆ, ಶ್ರಮ, ಗುರಿ ತಲುಪಿದ ಯೋಜನೆ (ಪ್ಲಾನಿಂಗ್), ಯಶಸ್ಸು, ಎದುರಿಸಿದ ಸವಾಲುಗಳು, ಗುರಿ ತಲುಪಿದಾಗ ಸಿಕ್ಕ ಸಮಾಧಾನ ಇನ್ನಿತರೆಗಳ ಬಗ್ಗೆ ಮನದಾಳದ ಮಾತುಗಳ ಮೂಲಕ ತಮ್ಮ ಅನುಭವವನ್ನು ಸಂವಾದದಲ್ಲಿ ಹಂಚಿಕೊಳ್ಳಲಿದ್ದಾರೆ. ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಈ ಸಾಧಕರ ಶ್ರಮ ಮತ್ತು ಸಾಧನೆಯನ್ನು ನಾಡಿಗೆ ಪರಿಚಯಿಸುವ ಜವಾಬ್ದಾರಿಯನ್ನು ನಿರ್ವಹಿಸುವ ಮೂಲಕ `ಸುಕೋ ಬ್ಯಾಂಕ್’ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಪರೋಕ್ಷವಾಗಿ ಸೇವೆ ಸಲ್ಲಿಸುತ್ತಿರುವುದು ಸಂತೋಷದ ವಿಷಯ. `ಫುಡ್ ಟ್ಯಾಲೆಂಟ್ ಹಂಟ್ ಫಾರ್ ಸ್ಟಾರ್ಟ್‍ಅಪ್’
(ಆಹಾರ ಪ್ರತಿಭಾನ್ವೇಷಣೆಯಿಂದ ಉದ್ದಿಮೆಯತ್ತ)
ಅಡುಗೆ ಮನೆಗೆ ಸೀಮಿತವಾಗಿದ್ದ ಆಹಾರ ತಯಾರಿಸುವ ಪ್ರತಿಭೆಗಳನ್ನು ಉದ್ಯಮಿಗಳನ್ನಾಗಿ ರೂಪಾಂತರ ಮಾಡುವಲ್ಲಿ `ಸುಕೋ ಬ್ಯಾಂಕ್’ ಉತ್ತರ ಕರ್ನಾಟಕದ ಮರೆತುಹೋದ ತಿಂಡಿಗಳು ಮತ್ತು `ಸಿರಿಧಾನ್ಯ’ ಖಾದ್ಯಗಳ ತಯಾರಿಕೆಯ ಸ್ಪರ್ಧೆ – ಪ್ರದರ್ಶನ ಮತ್ತು ಕಡ್ಢಾಯ ಮಾರಾಟ ಮೇಳವನ್ನು, ಬಸವಭವನದಲ್ಲಿ ಸಂಜೆ 6 ಗಂಟೆಗೆ ಏರ್ಪಡಿಸಿದೆ ಎಂದರು.‌

ಸುಕೋ ಬ್ಯಾಂಕ್ ಕಾರ್ಯನಿರ್ವಹಿಸುವ 11 ಜಿಲ್ಲೆಗಳಲ್ಲಿ ಎರೆಡು ವಿಭಾಗಗಳಲ್ಲಿ (ಉತ್ತರ ಕರ್ನಾಟಕದ ಮರೆತುಹೋದ ಖಾದ್ಯಗಳು ಮತ್ತು ಸಿರಿಧಾನ್ಯ ಖಾದ್ಯಗಳು) ಸ್ಪರ್ಧೆ ನಡೆಯಲಿದೆ. ಸ್ಪರ್ಧಾಳುಗಳು ಎರೆಡೂ ವಿಭಾಗಗಳಲ್ಲಿ ಸ್ಪರ್ಧಿಸಲು ಅವಕಾಶವಿದೆ. ಸ್ಪರ್ಧೆಯು ಮೊದಲ ಹಂತದಲ್ಲಿ ಜಿಲ್ಲಾ ಮಟ್ಟದಲ್ಲಿ ನಡೆದು, ಕೊನೆಯ ಸುತ್ತಿನಲ್ಲಿ ಮೆಗಾ ಫೈನಲ್ (ಬಳ್ಳಾರಿಯಲ್ಲಿ) ನಡೆಯಲಿದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ಪಡದವರು, ಮೆಗಾ ಫೈನಲ್‍ಗೆ ಆಯ್ಕೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ರೂಪಾಯಿ 10,000, ದ್ವಿತೀಯ ರೂಪಾಯಿ 7500 ಮತ್ತು ತೃತೀಯ ಬಹುಮಾನವಾಗಿ ರೂಪಾಯಿ 5000 ನೀಡಲಾಗುತ್ತದೆ. ಮೆಗಾ ಫೈನಲ್‍ನಲ್ಲಿ ಪ್ರಥಮ ಬಹುಮಾನ ರೂಪಾಯಿ 25,000, ದ್ವಿತೀಯ ಬಹುಮಾನ ರೂಪಾಯಿ 15,000 ಮತ್ತು ತೃತೀಯ ಬಹುಮಾನವಾಗಿ ರೂಪಾಯಿ 10,000. ಸ್ಪರ್ಧೆಯಲ್ಲಿ ಭಾಗವಹಿಸುವ ಆಸಕ್ತಿಯುಳ್ಳವರು ಹತ್ತಿರದ ಸುಕೋ ಬ್ಯಾಂಕ್ ಶಾಖೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಬಹುದಾಗಿದೆ.

ಈ ಮೂಲಕ ಪ್ರತಿಭಾನ್ವಿತ ಅಡುಗೆ ತಯಾರಿಕರನ್ನು ಪ್ರೋತ್ಸಾಹಿಸಿ, ಉದ್ಯಮ ಕ್ಷೇತ್ರಕ್ಕೆ ಪರಿಚಯ ಮಾಡಿ, ಆಹಾರ ಉದ್ಯಮದಲ್ಲಿ ಭದ್ರವಾಗಿ ನೆಲೆಯೂರಲು ಅಗತ್ಯ ತಾಂತ್ರಿಕ ಮತ್ತು ಆಡಳಿತಾತ್ಮಕ ನೆರವು ನೀಡುವ ಜವಾಬ್ದಾರಿ `ಸುಕೋ ಬ್ಯಾಂಕ್’ನದ್ದು. ಒಂದರ್ಥದಲ್ಲಿ ಪ್ರತಿಭಾನ್ವೇಷಣೆಯ ಜೊತೆ ಜೊತೆಯಲ್ಲಿ ಉದ್ಯಮಿಗಳಾಗುವ ಹೊಸ ಕನಸನ್ನು ಮೂಡಿಸುವ ಜವಾಬ್ದಾರಿಯುತ ಪ್ರಯತ್ನ ಸುಕೋ ಬ್ಯಾಂಕ್‍ನದ್ದಾಗಿದೆ.
ಜಿಲ್ಲಾವಾರು ಮತ್ತು ಮೆಗಾ ಫೈನಲ್‍ನ ಎಲ್ಲಾ ಸ್ಪರ್ಧೆಗಳಲ್ಲೂ ಜನಪ್ರಿಯ ನಟ, ಸಿಹಿಕಹಿ ಚಂದ್ರು ಪ್ರಮುಖ ತೀರ್ಪುಗಾರರು. ಮತ್ತು ಸಮನ್ವಯ ತೀರ್ಪುಗಾರರಾಗಿ ಮರ್ಚೇಡು ಮಲ್ಲಿಕಾಜುನಗೌಡ ಅವರು ಕಾರ್ಯನಿರ್ವಹಿಸಲಿದ್ದಾರೆ.
`ಸುಕೃತ ಕೃಷಿ’ ಪ್ರಶಸ್ತಿ ಮತ್ತು ಸುಕೋ ಸಂಗೀತ

ಸಂಭ್ರಮ:- ಸುಕೃತ ಕೃಷಿ ಪ್ರಶಸ್ತಿ ಸಂಚಾಲನಾ ಸಮಿತಿ ಆಯ್ಕೆ ಮಾಡಿರುವ, ನಾಡಿನ ದಿಕ್ಸೂಚಿ ಆಗಿರುವ ಓರ್ವ ಕೃಷಿಕರು ಮತ್ತು ಓರ್ವ ಕೃಷಿ ತಂತ್ರಜ್ಞಾನ ಸಾಧಕರಿಗೆ ಬಸವಭವನದ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ. ಪ್ರಶಸ್ತಿಯು ಒಂದು ಲಕ್ಷ ರೂಪಾಯಿ, ಪಾರಿತೋಷಕ ಮತ್ತು ಅಭಿನಂದನೆಯ ಪ್ರಶಂಸಾ ಪತ್ರವನ್ನು ಒಳಗೊಂಡಿರುತ್ತದೆ. ಈಬಾರಿಯ `ಸುಕೃತ ಕೃಷಿ’ ಪ್ರಶಸ್ತಿ ಪುರಸ್ಕøತರ ಹೆಸರುಗಳನ್ನು ಸುಕೃತ ಪ್ರಶಸ್ತಿ ಸಂಚಾಲನಾ ಸಮಿತಿ ಶೀಘ್ರದಲ್ಲೇ ಪ್ರಕಟಿಸಲಿದೆ. ಕೃಷಿ ಸಾಧಕರ ಕುರಿತು ಸಾಕ್ಷ್ಯಚಿತ್ರ ಮತ್ತು ಪುಸ್ತಕವನ್ನು ಪ್ರಕಟಿಸಲಾಗುತ್ತದೆ. ಕಳೆದ ಬಾರಿ ಸುಕೃತ ಕೃಷಿ ಪ್ರಶಸ್ತಿ ಸಂಚಾಲನಾ ಸಮಿತಿಯು ‘ಉತ್ತಮ ಕೃಷಿಕ’ ಪ್ರಶಸ್ತಿಯನ್ನು ಸಾಗರದ ಶ್ರೀ ಮುತ್ತಣ್ಣ ಪೂಜಾರ್ ಅವರಿಗೆ ‘ಉತ್ತಮ ಕೃಷಿ ತಂತ್ರಜ್ಞಾನ’ ಪ್ರಶಸ್ತಿಯನ್ನು ಶಿರಸಿಯ ಶ್ರೀ ಲಕ್ಷ್ಮೀ ನಾರಾಯಣ ಹೆಗಡೆ ಅವರಿಗೆ ಪ್ರದಾನ ಮಾಡಲಾಗಿತ್ತು. ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗಡೆ ಅವರು ಪ್ರಶಸ್ತಿ ಪ್ರದಾನ ಮಾಡಿದ್ದರು. ಪ್ರತೀ ಸಲ ಪ್ರಶಸ್ತಿ ಪ್ರದಾನ ಮಾಡುವ ದಿನಾಂಕವನ್ನು ಮಾತ್ರ ಸುಕೋ ಬ್ಯಾಂಕ್ ನಿರ್ಧರಿಸಲಿದ್ದು, ವಿಜೇತರನ್ನು ನಿರ್ಧರಿಸುವುದು ಹಾಗೂ ಅವರ ಬಗ್ಗೆ ಸಾಕ್ಷ್ಯ ಚಿತ್ರ, ಪುಸ್ತಕಗಳನ್ನು ಪ್ರಕಟಿಸುವುದು ಕೃಷಿ ಪ್ರಶಸ್ತಿ ಸಂಚಾಲನಾ ಸ್ವತಂತ್ರ ಸಮಿತಿಯ ಜವಾಬ್ದಾರಿಯಾಗಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಜಿ. ಟಿ.ವಿ.ಯ ಸರಿಗಮಪ ಸರಣಿಯಲ್ಲಿ ವಿಜೇತರಾದ ಬಾಲ ಕಲಾವಿದರಾದ ಶ್ರೀ ಜ್ಞಾನೇಶ್, ಕು. ಪ್ರಕೃತಿ ರೆಡ್ಡಿ ಹಾಗೂ ಶ್ರೀ ವಿಶ್ವ ಪ್ರಸಾದ್ ಅವರು ಸುಕೋ ಸಂಗೀತ ಸಂಜೆಯನ್ನು ನಡೆಸಿಕೊಡಲಿದ್ದಾರೆ ಎಂದು ಹೇಳಿದರು. ಮ್ಯಾನೇಜಿಂಗ್ ಡೈರೆಕ್ಟರ್ ಪರಿಮಾಳಚಾರ್ ಅಗ್ನಿಹೋತ್ರಿ, ಬೋರ್ಡ್ ಸೆಕ್ರೆಟರಿ ವೆಂಕಟೇಶ ರಾವ್ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

Published

on

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

ಅವರು ಶನಿವಾರ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಸಂಸ್ಥೆಯು ಏರ್ಪಡಿಸಿದ್ದ ದ್ವಿತೀಯ ಘಟಿಕೋತ್ಸವ ಸಮಾರಂಭವನ್ನು ಉದ್ಪಾಟಿಸಿ ಮಾತನಾಡಿದರು.

ಈಗಿನ ದಿನಮಾನಗಳಲ್ಲಿ ಇಡೀ ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ, ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.

ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ. ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.

ಆಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ಆರೋಗ್ಯ ಸೇವೆಗಳು ಇಂದಿನ ವೈದ್ಯಕೀಯ ಕ್ಷೇತ್ರದ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸುತ್ತಿವೆ. ಇಂತಹ ತಾಂತ್ರಿಕ ಕ್ರಾಂತಿಯ ಯುಗದಲ್ಲಿ ಪದವಿ ಪಡೆದು ಹೊರಬರುತ್ತಿರುವ ನೂತನ ವೈದ್ಯರು ಕೇವಲ ಸಾಂಪ್ರದಾಯಿಕ ವೈದ್ಯಕೀಯ ಜ್ಞಾನಕ್ಕೆ ಸೀಮಿತವಾಗದೆ, ಆಧುನಿಕ ವಿಜ್ಞಾನದ ನೂತನ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಉಭಯ ಕ್ಷೇತ್ರಗಳ ನಡುವೆ ಬಲವಾದ ಸೇತುವೆಯಾಗಿ ಕೆಲಸ ಮಾಡಬೇಕಾದ ತುರ್ತು ಅಗತ್ಯವಿದೆ ಎಂದರು.

ಕೃತಕ ಬುದ್ಧಿಮತ್ತೆಯು ರೋಗನಿರ್ಣಯವನ್ನು ಹೆಚ್ಚು ನಿಖರ ಹಾಗೂ ವೇಗವಾಗಿಸಲು ನೆರವಾದರೆ, ಡಿಜಿಟಲ್ ಆರೋಗ್ಯ ಸೇವೆಗಳು ದೂರದ ಊರುಗಳಿಗೂ ಚಿಕಿತ್ಸೆಯನ್ನು ತಲುಪಿಸಲು ಸಹಕಾರಿಯಾಗಿವೆ. ಆದ್ದರಿಂದ, ಹೊಸ ತಲೆಮಾರಿನ ವೈದ್ಯರು ಕೇವಲ ದಿನನಿತ್ಯದ ಕ್ಲಿನಿಕ್ ಅಥವಾ ಆಸ್ಪತ್ರೆಯ ಚಿಕಿತ್ಸೆಗೆ ಸೀಮಿತವಾಗದೆ, ತಂತ್ರಜ್ಞಾನದ ದತ್ತಾಂಶಗಳನ್ನು ಬಳಸಿಕೊಂಡು ಹೊಸ ರೋಗಗಳಿಗೆ ಪರಿಹಾರ ಕಂಡುಕೊಳ್ಳುವ ಉತ್ತಮ ಸಂಶೋಧಕರಾಗಬೇಕು. ಇದರೊಂದಿಗೆ, ಸಮಾಜದಲ್ಲಿ ತಂತ್ರಜ್ಞಾನ ಮತ್ತು ಆರೋಗ್ಯದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರಾಗಿಸಿ, ಮಾನವೀಯ ಕಾಳಜಿಯೊಂದಿಗೆ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ನೈಜ ಮಾರ್ಗದರ್ಶಕರಾಗಿ ಹೊರಹೊಮ್ಮಬೇಕಿದೆ ಎಂದು ತಿಳಿಸಿದರು.

ವೈದ್ಯಕೀಯ ಸೇವೆಯು ಅತ್ಯಂತ ಪವಿತ್ರವಾದ ಮಾನವೀಯ ಸೇವೆಯಾಗಿದೆ. ರೋಗಿಗಳಿಗೆ ಔಷಧಿಗಿಂತ ಮುಂಚಿತವಾಗಿ ವೈದ್ಯರ ಪ್ರೀತಿಯ ನುಡಿಗಳು ಹಾಗೂ ಸಕಾರಾತ್ಮಕ ನಡವಳಿಕೆಯ ಅಗತ್ಯವಿರುತ್ತದೆ. ಆದ್ದರಿಂದ ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಗುಜರಾತ್‌ನ ಜಾಮ್‌ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಗ್ಲೋಬಲ್ ಟ್ರೆಡಿಷನಲ್ ಮೆಡಿಸಿನ್ ಸೆಂಟರ್’ ಸ್ಥಾಪಿಸುತ್ತಿದೆ ಎಂದು ತಿಳಿಸಿದರು.

ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ: ಶ್ರೀನಿವಾಸ್ ಬನ್ನಿಗೊಳ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಎಸ್.ವಿ.ಹಲಸೆ, ತಪೋವನ ಸಂಸ್ಥೆಯ ಅಧ್ಯಕ್ಷ ಡಾ. ಶಶಿಕುಮಾರ್ ವಿ.ಎಂ, ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ಅಶ್ವಿನಿ ಕೆ.ಆರ್., ಡಾ.ಸುಮನ ಭಟ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ16 hours ago

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ...

ದಿನದ ಸುದ್ದಿ2 days ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ...

ದಿನದ ಸುದ್ದಿ5 days ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

ದಿನದ ಸುದ್ದಿ6 days ago

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ...

ದಿನದ ಸುದ್ದಿ6 days ago

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ...

ದಿನದ ಸುದ್ದಿ6 days ago

ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ....

ದಿನದ ಸುದ್ದಿ6 days ago

ಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕೃಷಿ ಇಲಾಖೆ ಹಾಗೂ ಆತ್ಮ (ATMA) ಯೋಜನೆಯಡಿ 2026-27ನೇ ಸಾಲಿನ ವಿವಿಧ ಕೃಷಿ ಪ್ರಶಸ್ತಿಗಳಿಗಾಗಿ ದಾವಣಗೆರೆ ಜಿಲ್ಲೆಯ ಅರ್ಹ ಹಾಗೂ ಆಸಕ್ತ ರೈತ ಮತ್ತು ರೈತ...

ಅಂಕಣ1 week ago

ಕವಿತೆ | ದೇವರ ಹೂವು

~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು...

ದಿನದ ಸುದ್ದಿ1 week ago

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ...

ದಿನದ ಸುದ್ದಿ1 week ago

ಆಶ್ರಯ ಯೋಜನೆ – ಆವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30...

Trending