Connect with us

ದಿನದ ಸುದ್ದಿ

ನಿಮ್ಮ ಮದುವೆ ವಿಳಂಬ ಆಗುತ್ತದೆಯೇ? ಇಲ್ಲಿದೆ ಸೂಕ್ತ ಮಾಹಿತಿ ಹಾಗೂ ಪರಿಹಾರ

Published

on

ನಿಮ್ಮ ಮದುವೆ ವಿಳಂಬ ಆಗುತ್ತದೆಯೇ? ಇಲ್ಲಿದೆ ಸೂಕ್ತ ಮಾಹಿತಿ ಹಾಗೂ ಪರಿಹಾರ.

ಸೋಮಶೇಖರ್B.Sc
ಜಾತಕ ಬರಹಗಾರರು, ಜಾತಕ ವಿಶ್ಲೇಷಣೆಗಾರರು, ರಾಶಿ ಹರಳು,ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಎಲ್ಲರ ಜೀವನದ ಒಂದು ಪ್ರಮುಖ ಅಂಶ ಮದುವೆ. ವಿವಾಹ ತಡವಾಗಲು ಜನ್ಮಜಾತಕದಲ್ಲಿ ಜನ್ಮ ಲಗ್ನ ಅಥವಾ ಜನ್ಮ ರಾಶಿಯಿಂದ ಎಳನೇ ಮನೆಯಲ್ಲಿ ಶನಿ ಇರುವುದು ಅಥವಾ ಏಳನೇ ಮನೆಯ ಅಧಿಪತಿ ಶನಿ ಆಗಿರುವುದು. ಇಂಥ ಪರಿಸ್ಥಿತಿಗಳಲ್ಲಿ ವಯಸ್ಸು ಮೂವತ್ತು ದಾಟುವ ತನಕ ವಿವಾಹ ಕಷ್ಟಸಾಧ್ಯ ಇಲ್ಲಿ ನಾವು ಶನಿಗ್ರಹ ದೋಷಪರಿಹಾರ ಹೊರತುಪಡಿಸಿ ಇನ್ಯಾವ ಪರಿಹಾರಗಳನ್ನು ಮಾಡಿದರೂ ಫಲ ದುರ್ಲಭ. ಶನೈಶ್ಚರ ದೋಷ ಪರಿಹಾರಕ್ಕಾಗಿ ಶಮೀಸಮಿತ್ತು ಹಾಗು ಕೃಸರಾನ್ನ ದ್ರವ್ಯದಲ್ಲಿ ಶನಿವಾರದಂದು ಶನಿ ಶಾಂತಿ ಹವನ ಮಾಡಿಸುವುದು. ಆದರೆ ಯಾವುದೇ ಕಾರಣಕ್ಕೂ ಸಪ್ತಮಾಧಿಪತಿಮ ರತ್ನವನ್ನು ಧರಿಸಬಾರದು.

ಇನ್ನೂ ವಿವಾಹಕ್ಕೆ ವಿಘ್ನ ಮಾಡುವ ಇನ್ನೊಂದು ಪ್ರಮುಖ ಕಾರಣ ಜಾತಕದಲ್ಲಿ ಬರುವ ಸರ್ಪದೋಷ ಸರ್ಪದೋಷಗಳಲ್ಲಿ ಹತ್ತು ಹಲವು ವಿಧಿಗಳಿವೆ. ಆದರೆ ಅವುಗಳಲ್ಲಿ ವಿವಾಹಕ್ಕೆ ವಿಘ್ನ ಮಾಡುವ ಸರ್ಪದೋಷವೇ ಕಾಳ ಸರ್ಪದೋಷ. ಇಲ್ಲಿ ಗಮನಿಸಲೇ ಬೇಕಾದ ಅಂಶ ಎಂದರೆ ಆಶ್ಲೇಷಾ ಬಲಿ ಪೂಜೆ ಅಥವಾ ಸರ್ಪ ಸಂಸ್ಕಾರ ಕಾಳಸರ್ಪ ದೋಷಕ್ಕೆ ಪರಿಹಾರ ಅಲ್ಲ. ಅಷ್ಟೇ ಅಲ್ಲ ಕ್ಷೇತ್ರಗಳಲ್ಲಿ ಕೇವಲ ರಾಹುಗ್ರಹಕ್ಕೆ ಹಾಗೂ ಕೇತುಗ್ರಹಕ್ಕೆ ಒಂದು ಅಷ್ಟೋತ್ತರ ಪೂಜೆ ಮಾಡಿದರೆ ಕಾಳಸರ್ಪದೋಷಕ್ಕೆ ಪರಿಹಾರ ಆಗೊದಿಲ್ಲ. ತಾವಾಗಲೀ ತಮ್ಮ ಕುಟುಂಬದವರಿಂದಾಗಲೀ ಸರ್ಪ ವಧೆ ಆಗಿದ್ದಲ್ಲಿ ಸರ್ಪಸಂಸ್ಕಾರದ ಅವಶ್ಯಕತೆ ಇರುತ್ತದೆ ಹಾಗೂ ನಾಗದೇವತಾ ಆರಾಧನೆಗಳಲ್ಲಿ ಆಶ್ಲೇಷಾ ಬಲಿ ಪೂಜಾ ಬರುತ್ತದೆ. ಕಾಳ ಸರ್ಪ ದೋಷ ಪರಿಹಾರವಾಗಿ ವಿವಾಹ ಸಿದ್ಧಿಯಾಗಲು ವೇದೋಕ್ತ ಮಂತ್ರಗಳಿಂದ ಕಾಳಸರ್ಪದೋಷ ಪರಿಹಾರ ಶಾಂತಿ ಹವನ ಮಾಡಿಸಬೇಕು.

ಇನ್ನೂ ಮಾತುಕತೆ ಹಂತದಲ್ಲೇ ಮದುವೆಗಳು ಮುರಿದು ಬೀಳಲು ಮತ್ತೊಂದು ಪ್ರಮುಖವಾದ ಕಾರಣ ಜನ್ಮಲಗ್ನ ಅಥವಾ ರಾಶಿಯಿಂದ ಏಳನೇ ಮನೆಯಲ್ಲಿ ಕೇತುಗ್ರಹ ಕುಟುಂಬದಲ್ಲಿ ಇರುವ ಪ್ರೇತಭಾಧೆಗಳಿಂದ ವಿವಾಹದಲ್ಲಿ ತೊಂದರೆಗಳನ್ನು ಸಪ್ರಮದ ಕೇತು ತಿಳಿಸುತ್ತಾನೆ. ಇದಕ್ಕಾಗಿ ಗೋಕರ್ಣಾದಿ ಕ್ಷೇತ್ರಗಳಲ್ಲಿ ಪ್ರೇತೋದ್ಧಾರ-ಮೋಕ್ಷನಾರಾಯಣ ಬಲಿಪೂಜಾ ಆಚರಿಸುವುದು ಪರಿಹಾರ. ಇಲ್ಲಿ ತಿಳಿಯಬೇಕಾದ ಇನ್ನೊಂದು ಅಂಶ ಎಂದರೆ ಕೇತುಗ್ರಹ ಅಭಿಮಾನಿ ದೇವತೆ ಮಹಾಗಣಪತಿ ಆಗಿರುವುದರಿಂದ ಅಷ್ಟದ್ರವ್ಯ ಮಹಾಗಣಪತಿ ಹವನದಿಂದಲೂ ಸಹ ನಿರ್ವಘ್ನವಾಗಿ ವಿವಾಹ ಸಿದ್ಧಿಯಾಗುತ್ತದೆ.
ಇನ್ನೂ ಸರ್ವರಿಗೂ ಅನ್ವಯಿಸುವಂತೆ ಹೇಳಬೇಕಾದರೆ ಉತ್ತಮ ವಿವಾಹ ಸಿದ್ಧಿ ಆಗಬೇಕು ಎಂದಾದಲ್ಲಿ ಅವರ ಜನ್ಮಲಗ್ನ ಹಾಗು ಜನ್ಮರಾಶಿಯ ಏಳನೇ ಮನೆಯ ಅಧಿಪತಿ ಗ್ರಹವನ್ನು ಹಾಗೂ ಆಗ್ರಹದ ಅಭಿಮಾನಿ ದೇವತೆಯ ಆರಾಧನೆ ಮಾಡಬೇಕು. ಹೇಗೆ ಅಂದರೆ

ಮೇಷ-ವೃಶ್ಚಿಕ ಲಗ್ನ ಅಥವಾ ರಾಶಿಯವರು ಶುಕ್ರಗ್ರಹದ ಆರಾಧನೆ, ಲಕ್ಷ್ಮಿನಾರಾಯಣ ಹೃದಯ ಪಾರಾಯಣ ದುರ್ಗಾ ಆರಾಧನೆ, ಚಂಡಿಕಾ ಪಾರಾಯಣ ಮಾಡಿಸಬಹುದು.
.
ವೃಷಭ- ತುಲಾ ರಾಶಿ ಅಥವಾ ಲಗ್ನದವರು ಕುಜ ಜಪ, ಹವನ, ಸುಬ್ರಹ್ಮಣ್ಯ ಕ್ಷೇತ್ರ ದರ್ಶನ ಹಾಗೂ ಆರಾಧನೆ, ತೊಗರಿಬೆಳೆ ದಾನ ಇತ್ಯಾದಿಗಳನ್ನು ಮಾಡಬಹುದು
.
ಮಿಥನ-ಕನ್ಯಾ ರಾಶಿ ಹಾಗೂ ಲಗ್ನದವರು ಗುರು ಮಂತ್ರ ಜಪ-ಹವನ, ರಾಘವೇಂದ್ರ ಸ್ವಾಮಿಗಳ ಆರಾಧನೆ, ಶಿರಡಿ ಸಾಯಿಬಾಬಾ ಪೂಜೆ, ಕಡಲೆ ದಾನ ಮಾಡುವುದು ಉತ್ತಮ.

ಧನು ಹಾಗೂ ಮೀನ ರಾಶಿ ಲಗ್ನಕ್ಕೆ ಸೇರಿದವರು ಬುಧ ಮಂತ್ರ ಜಪ, ಹವನ, ವಿಷ್ಣು ಸಹಸ್ರನಾಮ ಪಾರಾಯಣ, ಪುರುಷ ಸೂಕ್ತ ಹವನ, ಹೆಸರು ಕಾಳು ದಾನ ಮಾಡಬಹುದು.

ಕರ್ಕಟ ಹಾಗು ಸಿಂಹ ರಾಶಿ ಲಗ್ನಕ್ಕೆ ಸೇರಿದವರು ಅವಶ್ಯವಾಗಿ ಶನೈಶ್ವರನ ಆರಾಧನೆ ಮಾಡಬೇಕು. ಅದರಲ್ಲೂ ವಿಶೇಷವಾಗಿ ಶನಿ ಶಾಂತಿ ಹವನ, ಶನೈಶ್ವರ ವ್ರತ, ರುದ್ರದೇವರ ಆರಾಧನೆ ಮಾಡುವುದು, ಕರಿ ಎಳ್ಳು ಹಾಗೂ ಉತ್ತಮವಾದ ಶುದ್ಧವಾದ ಎಳ್ಳೆಣ್ಣೆ ದಾನ ಮಾಡಬೇಕು.

ಮಕರ ರಾಶಿ, ಲಗ್ನಕ್ಕೆ ಸೇರಿದವರು ಚಂದ್ರ ಜಪ-ಹವನ, ದುರ್ಗಾ ದೀಪ ನಮಸ್ಕಾರ, ಪೂಜೆ, ಮುತೈದೆಯರ ಆರಾಧನೆ ಮಾಡಬಹುದು.

ಕುಂಭ ಲಗ್ನ, ರಾಶಿಗೆ ಸೇರಿದವರು ಆದಿತ್ಯ ಹೃದಯ ಪರಣ, ಗೋದಿ ದಾನ, ಸೂರ್ಯ ಮಂತ್ರ ಜಪ, ಹವನ, ಈಶ್ವರನ ಆರಾಧನೆ ಮಾಡಬಹುದು.
ವಿವಾಹ ಸಿದ್ಧಿಗಾಗಿ ರತ್ನಧಾರಣೆ ಮಾಡುವವರೂ ಜನ್ಮ ಲಗ್ನ ಅಥವಾ ರಾಶಿಯ ಪಂಚಮಾಧಿಪತಿ ಭಾಗ್ಯಾಧಿಪತಿ ಅಥವಾ ಲಾಭಾಧಿಪತಿ ಗ್ರಹದ ರತ್ನಕ್ಕೆ ಜಲ, ಕ್ಷೀರ ಹಾಗೂ ಆ ಗ್ರಹದ ಧಾನ್ಯದಿಂದ ಸಂಸ್ಕರಿಸಿ ಧಾರಣೆ ಮಾಡಿದರೆ ಉತ್ತಮ ಫಲ ಸಿಗುವುದು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿರಿ.

-ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

Published

on

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.

ನಡೆದಿದ್ದೇನು?

ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.

ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ

ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.

ತಮಿಳುನಾಡಿನಲ್ಲಿ ಅಂತ್ಯಕ್ರಿಯೆ

ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.

ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌; ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್‌ಗೆ ನೇರ ಪ್ರವೇಶಕ್ಕೆ https://khtigadag.ac.in/AdmissionForm.pdf ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) https://khtigadag.ac.in/Lateralentryadmissionform.pdf ಈ ಲಿಂಕ್‌ಗಳ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 30 ರೊಳಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

Published

on

ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.

ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್​ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.

ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ.‌ ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending