Connect with us

ದಿನದ ಸುದ್ದಿ

ನಿಮ್ಮ ಮದುವೆ ವಿಳಂಬ ಆಗುತ್ತದೆಯೇ? ಇಲ್ಲಿದೆ ಸೂಕ್ತ ಮಾಹಿತಿ ಹಾಗೂ ಪರಿಹಾರ

Published

on

ನಿಮ್ಮ ಮದುವೆ ವಿಳಂಬ ಆಗುತ್ತದೆಯೇ? ಇಲ್ಲಿದೆ ಸೂಕ್ತ ಮಾಹಿತಿ ಹಾಗೂ ಪರಿಹಾರ.

ಸೋಮಶೇಖರ್B.Sc
ಜಾತಕ ಬರಹಗಾರರು, ಜಾತಕ ವಿಶ್ಲೇಷಣೆಗಾರರು, ರಾಶಿ ಹರಳು,ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಎಲ್ಲರ ಜೀವನದ ಒಂದು ಪ್ರಮುಖ ಅಂಶ ಮದುವೆ. ವಿವಾಹ ತಡವಾಗಲು ಜನ್ಮಜಾತಕದಲ್ಲಿ ಜನ್ಮ ಲಗ್ನ ಅಥವಾ ಜನ್ಮ ರಾಶಿಯಿಂದ ಎಳನೇ ಮನೆಯಲ್ಲಿ ಶನಿ ಇರುವುದು ಅಥವಾ ಏಳನೇ ಮನೆಯ ಅಧಿಪತಿ ಶನಿ ಆಗಿರುವುದು. ಇಂಥ ಪರಿಸ್ಥಿತಿಗಳಲ್ಲಿ ವಯಸ್ಸು ಮೂವತ್ತು ದಾಟುವ ತನಕ ವಿವಾಹ ಕಷ್ಟಸಾಧ್ಯ ಇಲ್ಲಿ ನಾವು ಶನಿಗ್ರಹ ದೋಷಪರಿಹಾರ ಹೊರತುಪಡಿಸಿ ಇನ್ಯಾವ ಪರಿಹಾರಗಳನ್ನು ಮಾಡಿದರೂ ಫಲ ದುರ್ಲಭ. ಶನೈಶ್ಚರ ದೋಷ ಪರಿಹಾರಕ್ಕಾಗಿ ಶಮೀಸಮಿತ್ತು ಹಾಗು ಕೃಸರಾನ್ನ ದ್ರವ್ಯದಲ್ಲಿ ಶನಿವಾರದಂದು ಶನಿ ಶಾಂತಿ ಹವನ ಮಾಡಿಸುವುದು. ಆದರೆ ಯಾವುದೇ ಕಾರಣಕ್ಕೂ ಸಪ್ತಮಾಧಿಪತಿಮ ರತ್ನವನ್ನು ಧರಿಸಬಾರದು.

ಇನ್ನೂ ವಿವಾಹಕ್ಕೆ ವಿಘ್ನ ಮಾಡುವ ಇನ್ನೊಂದು ಪ್ರಮುಖ ಕಾರಣ ಜಾತಕದಲ್ಲಿ ಬರುವ ಸರ್ಪದೋಷ ಸರ್ಪದೋಷಗಳಲ್ಲಿ ಹತ್ತು ಹಲವು ವಿಧಿಗಳಿವೆ. ಆದರೆ ಅವುಗಳಲ್ಲಿ ವಿವಾಹಕ್ಕೆ ವಿಘ್ನ ಮಾಡುವ ಸರ್ಪದೋಷವೇ ಕಾಳ ಸರ್ಪದೋಷ. ಇಲ್ಲಿ ಗಮನಿಸಲೇ ಬೇಕಾದ ಅಂಶ ಎಂದರೆ ಆಶ್ಲೇಷಾ ಬಲಿ ಪೂಜೆ ಅಥವಾ ಸರ್ಪ ಸಂಸ್ಕಾರ ಕಾಳಸರ್ಪ ದೋಷಕ್ಕೆ ಪರಿಹಾರ ಅಲ್ಲ. ಅಷ್ಟೇ ಅಲ್ಲ ಕ್ಷೇತ್ರಗಳಲ್ಲಿ ಕೇವಲ ರಾಹುಗ್ರಹಕ್ಕೆ ಹಾಗೂ ಕೇತುಗ್ರಹಕ್ಕೆ ಒಂದು ಅಷ್ಟೋತ್ತರ ಪೂಜೆ ಮಾಡಿದರೆ ಕಾಳಸರ್ಪದೋಷಕ್ಕೆ ಪರಿಹಾರ ಆಗೊದಿಲ್ಲ. ತಾವಾಗಲೀ ತಮ್ಮ ಕುಟುಂಬದವರಿಂದಾಗಲೀ ಸರ್ಪ ವಧೆ ಆಗಿದ್ದಲ್ಲಿ ಸರ್ಪಸಂಸ್ಕಾರದ ಅವಶ್ಯಕತೆ ಇರುತ್ತದೆ ಹಾಗೂ ನಾಗದೇವತಾ ಆರಾಧನೆಗಳಲ್ಲಿ ಆಶ್ಲೇಷಾ ಬಲಿ ಪೂಜಾ ಬರುತ್ತದೆ. ಕಾಳ ಸರ್ಪ ದೋಷ ಪರಿಹಾರವಾಗಿ ವಿವಾಹ ಸಿದ್ಧಿಯಾಗಲು ವೇದೋಕ್ತ ಮಂತ್ರಗಳಿಂದ ಕಾಳಸರ್ಪದೋಷ ಪರಿಹಾರ ಶಾಂತಿ ಹವನ ಮಾಡಿಸಬೇಕು.

ಇನ್ನೂ ಮಾತುಕತೆ ಹಂತದಲ್ಲೇ ಮದುವೆಗಳು ಮುರಿದು ಬೀಳಲು ಮತ್ತೊಂದು ಪ್ರಮುಖವಾದ ಕಾರಣ ಜನ್ಮಲಗ್ನ ಅಥವಾ ರಾಶಿಯಿಂದ ಏಳನೇ ಮನೆಯಲ್ಲಿ ಕೇತುಗ್ರಹ ಕುಟುಂಬದಲ್ಲಿ ಇರುವ ಪ್ರೇತಭಾಧೆಗಳಿಂದ ವಿವಾಹದಲ್ಲಿ ತೊಂದರೆಗಳನ್ನು ಸಪ್ರಮದ ಕೇತು ತಿಳಿಸುತ್ತಾನೆ. ಇದಕ್ಕಾಗಿ ಗೋಕರ್ಣಾದಿ ಕ್ಷೇತ್ರಗಳಲ್ಲಿ ಪ್ರೇತೋದ್ಧಾರ-ಮೋಕ್ಷನಾರಾಯಣ ಬಲಿಪೂಜಾ ಆಚರಿಸುವುದು ಪರಿಹಾರ. ಇಲ್ಲಿ ತಿಳಿಯಬೇಕಾದ ಇನ್ನೊಂದು ಅಂಶ ಎಂದರೆ ಕೇತುಗ್ರಹ ಅಭಿಮಾನಿ ದೇವತೆ ಮಹಾಗಣಪತಿ ಆಗಿರುವುದರಿಂದ ಅಷ್ಟದ್ರವ್ಯ ಮಹಾಗಣಪತಿ ಹವನದಿಂದಲೂ ಸಹ ನಿರ್ವಘ್ನವಾಗಿ ವಿವಾಹ ಸಿದ್ಧಿಯಾಗುತ್ತದೆ.
ಇನ್ನೂ ಸರ್ವರಿಗೂ ಅನ್ವಯಿಸುವಂತೆ ಹೇಳಬೇಕಾದರೆ ಉತ್ತಮ ವಿವಾಹ ಸಿದ್ಧಿ ಆಗಬೇಕು ಎಂದಾದಲ್ಲಿ ಅವರ ಜನ್ಮಲಗ್ನ ಹಾಗು ಜನ್ಮರಾಶಿಯ ಏಳನೇ ಮನೆಯ ಅಧಿಪತಿ ಗ್ರಹವನ್ನು ಹಾಗೂ ಆಗ್ರಹದ ಅಭಿಮಾನಿ ದೇವತೆಯ ಆರಾಧನೆ ಮಾಡಬೇಕು. ಹೇಗೆ ಅಂದರೆ

ಮೇಷ-ವೃಶ್ಚಿಕ ಲಗ್ನ ಅಥವಾ ರಾಶಿಯವರು ಶುಕ್ರಗ್ರಹದ ಆರಾಧನೆ, ಲಕ್ಷ್ಮಿನಾರಾಯಣ ಹೃದಯ ಪಾರಾಯಣ ದುರ್ಗಾ ಆರಾಧನೆ, ಚಂಡಿಕಾ ಪಾರಾಯಣ ಮಾಡಿಸಬಹುದು.
.
ವೃಷಭ- ತುಲಾ ರಾಶಿ ಅಥವಾ ಲಗ್ನದವರು ಕುಜ ಜಪ, ಹವನ, ಸುಬ್ರಹ್ಮಣ್ಯ ಕ್ಷೇತ್ರ ದರ್ಶನ ಹಾಗೂ ಆರಾಧನೆ, ತೊಗರಿಬೆಳೆ ದಾನ ಇತ್ಯಾದಿಗಳನ್ನು ಮಾಡಬಹುದು
.
ಮಿಥನ-ಕನ್ಯಾ ರಾಶಿ ಹಾಗೂ ಲಗ್ನದವರು ಗುರು ಮಂತ್ರ ಜಪ-ಹವನ, ರಾಘವೇಂದ್ರ ಸ್ವಾಮಿಗಳ ಆರಾಧನೆ, ಶಿರಡಿ ಸಾಯಿಬಾಬಾ ಪೂಜೆ, ಕಡಲೆ ದಾನ ಮಾಡುವುದು ಉತ್ತಮ.

ಧನು ಹಾಗೂ ಮೀನ ರಾಶಿ ಲಗ್ನಕ್ಕೆ ಸೇರಿದವರು ಬುಧ ಮಂತ್ರ ಜಪ, ಹವನ, ವಿಷ್ಣು ಸಹಸ್ರನಾಮ ಪಾರಾಯಣ, ಪುರುಷ ಸೂಕ್ತ ಹವನ, ಹೆಸರು ಕಾಳು ದಾನ ಮಾಡಬಹುದು.

ಕರ್ಕಟ ಹಾಗು ಸಿಂಹ ರಾಶಿ ಲಗ್ನಕ್ಕೆ ಸೇರಿದವರು ಅವಶ್ಯವಾಗಿ ಶನೈಶ್ವರನ ಆರಾಧನೆ ಮಾಡಬೇಕು. ಅದರಲ್ಲೂ ವಿಶೇಷವಾಗಿ ಶನಿ ಶಾಂತಿ ಹವನ, ಶನೈಶ್ವರ ವ್ರತ, ರುದ್ರದೇವರ ಆರಾಧನೆ ಮಾಡುವುದು, ಕರಿ ಎಳ್ಳು ಹಾಗೂ ಉತ್ತಮವಾದ ಶುದ್ಧವಾದ ಎಳ್ಳೆಣ್ಣೆ ದಾನ ಮಾಡಬೇಕು.

ಮಕರ ರಾಶಿ, ಲಗ್ನಕ್ಕೆ ಸೇರಿದವರು ಚಂದ್ರ ಜಪ-ಹವನ, ದುರ್ಗಾ ದೀಪ ನಮಸ್ಕಾರ, ಪೂಜೆ, ಮುತೈದೆಯರ ಆರಾಧನೆ ಮಾಡಬಹುದು.

ಕುಂಭ ಲಗ್ನ, ರಾಶಿಗೆ ಸೇರಿದವರು ಆದಿತ್ಯ ಹೃದಯ ಪರಣ, ಗೋದಿ ದಾನ, ಸೂರ್ಯ ಮಂತ್ರ ಜಪ, ಹವನ, ಈಶ್ವರನ ಆರಾಧನೆ ಮಾಡಬಹುದು.
ವಿವಾಹ ಸಿದ್ಧಿಗಾಗಿ ರತ್ನಧಾರಣೆ ಮಾಡುವವರೂ ಜನ್ಮ ಲಗ್ನ ಅಥವಾ ರಾಶಿಯ ಪಂಚಮಾಧಿಪತಿ ಭಾಗ್ಯಾಧಿಪತಿ ಅಥವಾ ಲಾಭಾಧಿಪತಿ ಗ್ರಹದ ರತ್ನಕ್ಕೆ ಜಲ, ಕ್ಷೀರ ಹಾಗೂ ಆ ಗ್ರಹದ ಧಾನ್ಯದಿಂದ ಸಂಸ್ಕರಿಸಿ ಧಾರಣೆ ಮಾಡಿದರೆ ಉತ್ತಮ ಫಲ ಸಿಗುವುದು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿರಿ.

-ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending