ದಿನದ ಸುದ್ದಿ
ಸುಳ್ವಾಡಿ ವಿಷ ಪ್ರಸಾದ ಸೇವನೆ ಪ್ರಕರಣ : ತಪ್ಪು ಯಾರೆ ಮಾಡಿದ್ರು ಅಂತವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆಯಾಗಿದೆ : ಸಿದ್ದರಾಮಯ್ಯ
ಸುದ್ದಿದಿನ,ಮೈಸೂರು :ಸುಳ್ವಾಡಿಯ ವಿಷ ಪ್ರಸಾದ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಘಟನೆ ಪುಡ್ ಪಾಯಿಸನ್ ನಿಂದ ಅಗಿಲ್ಲ. ಯಾರೋ ಪಾತಕಿಗಳು ಪ್ರಸಾದದಲ್ಲಿ ವಿಷ ಬೆರೆಸಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ಯಾಗಬೇಕು. ಈಗಾಗಲೇ ಸಿ.ಎಂ.ತನಿಖೆಗೆ ಆದೇಶ ಮಾಡಿದ್ದಾರೆ. ನಾನು ಕೂಡ ಸಿ.ಎಂ.ಬಳಿ ಮಾತನಾಡಿ ಉನ್ನತಮಟ್ಟದ ತನಿಖೆಗೆ ಆಗ್ರಹಿಸ್ತೇನೆ. ಈ ಘೋರ ದುರಂತದ ಘಟನೆಗೆ ಕಾರಣತಾದ ಪಾತಕಿಗಳಿಗೆ ಶಿಕ್ಷೆಯಾಗಬೇಕು ಎಂದು ಮೈಸೂರಿನಲ್ಲಿ ಮಾಜಿ ಸಿ.ಎಂ. ಸಿದ್ರಾಮಯ್ಯ ಹೇಳಿದರು.
ವಿಷದ ಅಂಶ ಹೊಟ್ಟೆಯೊಳಗೆ ಸೇರಿರೋ ಕಾರಣ. ರೋಗಿಗಳು ಹೊರಳಾಡೋದು, ನರಳಾಡೋದು ಮಾಡ್ತಿದ್ದಾರೆ.
ಆದ್ರೆ ದೇವರ ಪ್ರಸಾದದಲ್ಲಿ ವಿಷ ಹಾಕೋದು ಅಂದ್ರೆ ಇದು ದುರಂತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.
ಘಟನೆ ನಡೆದಿರೋದು ದೊಡ್ಡ ದುರಂತ.ಈಗಾಗಲೇ ಮೃತಪಟ್ಟ ಕುಟುಂಬಕ್ಕೆ ಸರ್ಕಾರದಿಂದ 5ಲಕ್ಷ ಘೋಷಣೆ ಆಗಿದೆ.ಏನೂ ತಪ್ಪು ಮಾಡದ ಅಮಾಯಕರು ಘಟನೆಯಲ್ಲಿ ಮೃತಪಟ್ಟಿದ್ದಾರೆ. ತಪ್ಪು ಯಾರೆ ಮಾಡಿದ್ರು ಅಂತವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆಯಾಗಿದೆ. ಪಂಚಾಮೃತ ಹಾಗೂ ಬಾತ್ನಲ್ಲಿ ವಿಷ ಹಾಕಲಾಗಿದೆ. ಇದು ಫುಡ್ ಪಾಯಿಸನ್ನಿಂದ ಆಗಿರೋದಲ್ಲ.
ಹಾಗಾಗಿ ಎಲ್ಲ ಮಾಹಿತಿಯನ್ನ ವೈದ್ಯರ ಬಳಿ ಪಡೆದುಕೊಂಡಿದ್ದೇನೆ. ಮೃತರ ಕುಟುಂಬಕ್ಕೆ ದೇವರ ದುಖ ಭರಿಸುವ ಶಕ್ತಿ ನೀಡಲಿ ಎಂದರು
ಕುಟುಂಬದಲ್ಲಿನ ಮಕ್ಕಳ ಭವಿಷ್ಯದ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ವಿದ್ಯಾಭ್ಯಾಸ ಹಾಗೂ ಜೀವನ ನಿರ್ವಹಣೆಗೆ ಸರ್ಕಾರದಿಂದ ಸಹಾಯ ಮಾಡಲಾಗುವುದು. ಕೆಆರ್ ಆಸ್ಪತ್ರೆಯಲ್ಲಿ ಉತ್ತಮ ಸೌಲಭ್ಯವಿದೆ. ವೈದ್ಯರು ಅಸ್ವಸ್ಥರ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ ಎಂದರು.
ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿ ವಿಷಾಹಾರ ಸೇವನೆಯಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವವರ ಯೋಗಕ್ಷೇಮ ವಿಚಾರಿಸಿದೆ. ಅಸ್ವಸ್ಥರಿಗೆ ನೀಡುತ್ತಿರುವ ಚಿಕಿತ್ಸಾ ಸೌಲಭ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದೇನೆ ಹಾಗೂ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಿದ್ದೇನೆ. pic.twitter.com/FbD3Hwm7MW
— Siddaramaiah (@siddaramaiah) December 15, 2018
ಚಾಮರಾಜನಗರ ಜಿಲ್ಲೆಯಲ್ಲಿ ವಿಷಾಹಾರ ಸೇವನೆಯಿಂದ ಹಲವರು ಮೃತಪಟ್ಟಿರುವ ಸುದ್ದಿ ಆಘಾತವನ್ನುಂಟು ಮಾಡಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಪುಟ್ಟರಂಗ ಶೆಟ್ಟಿ, ಹನೂರು ಕ್ಷೇತ್ರದ ಶಾಸಕರಾದ ನರೇಂದ್ರ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ.
— Siddaramaiah (@siddaramaiah) December 14, 2018
ದುರಂತದಲ್ಲಿ ಮೃತರಾದವರ ಕುಟುಂಬದವರಿಗೆ ಪರಿಹಾರ, ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಸಚಿವರು ಹಾಗೂ ಶಾಸಕರಿಗೆ ಸೂಚಿಸಿದ್ದೇನೆ.
ಚಾಮರಾಜನಗರ ಜಿಲ್ಲಾಧಿಕಾರಿಗಳ ಜೊತೆಗೂ ಮಾತನಾಡಿ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ ಹಾಗೂ ಪ್ರಕರಣದ ಬಗ್ಗೆ ಕೂಡಲೇ ತನಿಖೆ ನಡೆಸುವಂತೆ ಸೂಚಿಸಿದ್ದೇನೆ.— Siddaramaiah (@siddaramaiah) December 14, 2018
ಸುದ್ದಿದಿನ.ಕಾಂ|ವಾಟ್ಸಾಪ್|9986715401