ದಿನದ ಸುದ್ದಿ
ಭಾನುವಾರದ ಭವಿಷ್ಯ| ದಾಂಪತ್ಯ, ಕೌಟುಂಬಿಕ ಕಲಹ, ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ಪರಿಹಾರ : ಕರೆಮಾಡಿ
ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ: 9945410150
ಮೇಷ ರಾಶಿ
ಕೆಲವು ಮಾತುಗಳಿಂದ ಮನಸ್ಸಿಗೆ ಸಂಕಟ. ಹೂಡಿಕೆಗಳಲ್ಲಿ ಜಾಗ್ರತೆ ವಹಿಸಿ. ಕುಟುಂಬದವರ ಮಾತುಗಳನ್ನು ಪಾಲಿಸುವುದು ಲಾಭ. ಕೆಲಸದಲ್ಲಿನ ಶಿಸ್ತಿನಿಂದ ಪ್ರಮಾದಗಳು ಜರುಗಬಹುದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಷಭ ರಾಶಿ
ನಿಮ್ಮ ಧೈರ್ಯ ಬಲಿಷ್ಠತೆ ಇವುಗಳು ತೋರ್ಪಡಿಕೆಗಾಗಿ ಅಲ್ಲ. ಕೆಲವು ದುಸ್ಸಾಹಸಕ್ಕೆ ಕೈ ಹಾಕುವುದು ನಿಮಗೆ ಹಿತವಲ್ಲ. ಹಣಕಾಸಿನ ಸ್ಥಿತಿಯು ಹಳೆಯ ಯೋಜನೆಗಳಿಂದ ಲಾಭದಾಯಕವಾಗಲಿದೆ. ನಿಮ್ಮ ಸಾಧನೆಯಿಂದಲೇ ಖ್ಯಾತಿ ಪಡೆಯುತ್ತೀರಿ. ಸಂಗಾತಿಯೊಡನೆ ಪ್ರೀತಿಯಿಂದ ಇರುವುದು ಒಳ್ಳೆಯ ಬೆಳವಣಿಗೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಿಥುನ ರಾಶಿ
ನಿಮ್ಮ ವಿವೇಚನಾರಹಿತ ಆರ್ಥಿಕ ಚಟುವಟಿಕೆಯು ಸಮಸ್ಯೆಯಲ್ಲಿ ಸಿಲುಕಬಹುದು. ಕುಟುಂಬದವರ ವಿಶ್ವಾಸ ಗೆಲ್ಲುವುದು ಮುಖ್ಯ. ನಿಮ್ಮ ಕಷ್ಟದ ಸಂದರ್ಭದಲ್ಲಿ ನಿಮ್ಮ ಪತ್ನಿ ನಿಮ್ಮನ್ನು ಕೈ ಹಿಡಿದು ನಡೆಸುವವರು. ಉದ್ಯಮ ವಲಯದಲ್ಲಿ ಗುಣಮಟ್ಟದ ವಸ್ತುಗಳ ತಯಾರಿಕೆಯು ನಿಮಗೆ ಲಾಭ ತಂದುಕೊಡುತ್ತದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕರ್ಕಾಟಕ ರಾಶಿ
ಇಂದು ನೀವು ಮುಕ್ತ ವಾತಾವರಣ ಬಯಸುವಿರಿ. ಪರಿಸರದ ಒಂದು ಭಾಗವಾಗಿ ಆನಂದಿಸುವಿರಿ. ಹೊಸ ಉದ್ಯೋಗ ಅವಕಾಶಗಳು ಸಿಗಲಿದೆ. ಆತ್ಮೀಯ ವರ್ಗದ ಜನಗಳ ಚುಚ್ಚು ಮಾತು ನಿಮ್ಮನ್ನು ಚಿಂತೆ ಗೊಳಿಸುತ್ತದೆ. ಪತ್ನಿಯ ಮನೆ ಕಡೆಯಿಂದ ಕಿರಿಕಿರಿ ಸಾಧ್ಯತೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಸಿಂಹ ರಾಶಿ
ಕುಟುಂಬದಲ್ಲಿನ ನಿರುದ್ಯೋಗ ಸಮಸ್ಯೆಗಳು ಬೇಸರ ತರಿಸಬಹುದು. ಅವಕಾಶಗಳು ನಿಮ್ಮ ಮುಂದೆ ಇದ್ದರು ಅದನ್ನು ಉಪಯೋಗಿಸಿಕೊಳ್ಳುವ ಸಾಮರ್ಥ್ಯ ಕಡಿಮೆ ಇದೆ. ಕೆಲವು ನಿಂದನೆ ಮಾತುಗಳಿಗೆ ಬೆಲೆ ಕೊಡದೆ ಇರುವುದು ಉತ್ತಮ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕನ್ಯಾ ರಾಶಿ
ಯಾವುದೇ ಅಡೆತಡೆಯಿಲ್ಲದೆ ಕೆಲಸ ಕಾರ್ಯದಲ್ಲಿ ಜಯ ಸಂಪಾದನೆ ಆಗಲಿದೆ. ವ್ಯವಹಾರಸ್ಥರಿಗೆ ಶುಭ ಫಲಗಳು. ಮಕ್ಕಳಿಗಾಗಿ ನೂತನ ಕ್ರಿಯಾತ್ಮಕ ಚಟುವಟಿಕೆಯಲ್ಲಿ ತೊಡಗುವಿರಿ. ಬಾಕಿ ಉಳಿದಿರುವ ಕೆಲಸವು ಪೂರ್ಣ ಮಾಡುವಿರಿ. ನಿಮ್ಮಲ್ಲಿನ ಆಲಸ್ಯತನ ಕಡಿಮೆಯಾಗ ಬೇಕಾಗಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ತುಲಾ ರಾಶಿ
ಆರ್ಥಿಕ ಮುಗ್ಗಟ್ಟಿನಿಂದ ಕೆಲಸವನ್ನು ಸ್ಥಗಿತಗೊಳಿಸ ಬೇಕಾದ ಸಂದರ್ಭ ಬರಬಹುದು. ನಿಮ್ಮ ಕೆಲವು ನಡೆಯನ್ನು ಆತ್ಮೀಯರು ಟೀಕೆ-ಟಿಪ್ಪಣಿ ಮಾಡಲಿದ್ದಾರೆ. ಇಂದು ಪ್ರವಾಸವನ್ನು ಮಾಡದಿರುವುದು ಸೂಕ್ತ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆ ಕಾಯ್ದುಕೊಳ್ಳಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಶ್ಚಿಕ ರಾಶಿ
ನಿಮ್ಮ ವ್ಯವಸ್ಥಿತ ಕಾರ್ಯಗಳಿಗೆ ಜನರಿಂದ ಉತ್ತಮ ಸಹಕಾರ ದೊರೆಯಲಿದೆ. ನಿಮ್ಮ ಆಲೋಚನೆಗಳಿಗೆ ಮಹತ್ವದ ಸ್ಥಾನ ಸಿಗುವ ಸಾಧ್ಯತೆ ಇದೆ. ದೇವಸ್ಥಾನಗಳ ಭೇಟಿನೀಡುವ ನಿಮ್ಮ ಮನ ಇಚ್ಛೆ ಫಲಿಸಲಿದೆ. ಸಾಮಾಜಿಕ ರಾಜಕೀಯ ಕ್ಷೇತ್ರಗಳಲ್ಲಿ ಉತ್ತಮ ವಾತಾವರಣ ಕಂಡು ಬರಲಿದೆ. ನಿಮ್ಮ ಪ್ರತಿಯೊಂದು ಆಶೋತ್ತರಗಳಿಗೆ ಪತ್ನಿಯಿಂದ ಸಹಕಾರ ದೊರೆಯಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಧನಸ್ಸು ರಾಶಿ
ನಿಮ್ಮ ಶಕ್ತಿ ಅನುಸಾರ ಯೋಜನೆಗಳಲ್ಲಿ ಪಾಲ್ಗೊಳ್ಳುವುದು ಒಳ್ಳೆಯದು. ಪ್ರತಿಯೊಂದು ಹೆಜ್ಜೆ ಸಹ ತಾಳ್ಮೆ ಮತ್ತು ಯೋಚಿಸಿ ಇಡುವುದನ್ನು ರೂಡಿಸಿಕೊಳ್ಳಿ. ಮಾಡಲು ಇಚ್ಚಿಸಿರುವ ಕೆಲಸವನ್ನು ಪೂರ್ಣ ಮುಗಿಸುವ ತನಕ ಬಿಡಬೇಡಿ. ನಿಮ್ಮ ಮನಸ್ಸನ್ನು ಆದಷ್ಟು ಪ್ರಶಾಂತವಾಗಿ ಇಟ್ಟುಕೊಳ್ಳಿ ವಿನಾಕಾರಣ ಗೊಂದಲ ಮಾಡಿಕೊಳ್ಳುವುದು ಬೇಡ. ಉದ್ಯೋಗದ ಆಯ್ಕೆಯಲ್ಲಿ ಪರಣಿತರ ಸಲಹೆಯನ್ನು ಪಡೆಯಿರಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಕರ ರಾಶಿ
ಇಂದು ದೈವ ಸಂಕಲ್ಪದ ಮೊರೆ ಹೋಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಒದಗುವ ಸಂಕಷ್ಟಗಳಿಗೆ ಸೂಕ್ತ ಪರಿಹಾರವನ್ನು ಹುಡುಕಿ. ಕೌಟುಂಬಿಕ ವ್ಯಾಜ್ಯಗಳು ಹೆಚ್ಚಾಗುವ ಸಂದರ್ಭ ಬರಬಹುದು. ಹಣಕಾಸಿನ ಪರಿಸ್ಥಿತಿಯನ್ನು ನೋಡಿಕೊಂಡು ಕೆಲಸವನ್ನು ಒಪ್ಪಿಕೊಳ್ಳುವುದು ಒಳ್ಳೆಯದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕುಂಭ ರಾಶಿ
ನಿಮ್ಮಲ್ಲಿ ಹೊಳೆಯುವ ಆರ್ಥಿಕ ದಾರಿಯು ನಿಮ್ಮ ಭವಿಷ್ಯವನ್ನು ಸುಸ್ಥಿರದಲ್ಲಿ ಇಡಲಿದೆ. ನಿಮ್ಮ ಕೆಲಸಗಳಿಗೆ ಸಮಾಜದಲ್ಲಿ ಉತ್ತಮ ಸಹಕಾರ ದೊರೆಯಲಿದೆ. ನಿಮ್ಮ ಕಾರ್ಯಗಳಲ್ಲಿ ಸಮಸ್ಯೆಗಳು ಹೆಚ್ಚಾಗಬಹುದು ಆದಷ್ಟು ಅದು ಅದರ ಪರಿಹಾರಕ್ಕೆ ಮುಂದಾಗಿ. ಇನ್ನೊಬ್ಬರ ಮಾತುಗಳನ್ನು ಕೇಳಿ ಬಂಡವಾಳ ಹಾಕಿ ಸಮಸ್ಯೆ ಎದುರಿಸುವ ಸಾಧ್ಯತೆಯಿದೆ ಎಚ್ಚರವಿರಲಿ. ಇಂದು ಆರ್ಥಿಕ ಮುಗ್ಗಟ್ಟಿನಿಂದ ಸಾಲ ಪಡೆಯುವ ಪ್ರಮೇಯ ಬರಬಹುದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮೀನ ರಾಶಿ
ಕುಟುಂಬದೊಡನೆ ಪ್ರವಾಸದ ಚಿಂತನೆ ಮಾಡುವಿರಿ. ಕಲಾತ್ಮಕ ಕರ್ಮಿಗಳಿಗೆ ಅವಕಾಶಗಳು ಹೆಚ್ಚಾಗಲಿದೆ. ನಿಮ್ಮ ಸ್ವಸಾಮರ್ಥ್ಯ ಬಲದಿಂದ ಕಾರ್ಯೋನ್ಮುಖರಾಗಿ ಸಾಮಾಜಿಕ ಕ್ಷೇತ್ರದಲ್ಲಿ ಮಿಂಚಲಿದ್ದೀರಿ. ನಿಮ್ಮ ಕೆಲಸಗಳಿಂದ ಜನಮನ್ನಣೆ ಹೆಚ್ಚಾಗಲಿದೆ. ಕಷ್ಟದ ಕೆಲಸವನ್ನು ಸಹ ಸುಲಭವಾಗಿ ಮಾಡಿ ಮುಗಿಸುವಿರಿ. ಹಿರಿಯರು ನೀಡಿರುವ ಜವಾಬ್ದಾರಿಯನ್ನು ಚಾಚೂ ತಪ್ಪದೇ ಪಾಲಿಸುವುದು ಒಳ್ಳೆಯದು. ನಿಮ್ಮ ಆರ್ಥಿಕ ವ್ಯವಹಾರವನ್ನು ವಿಸ್ತರಣೆ ಮಾಡಲು ಪ್ರಯತ್ನಿಸಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ: 9945410150

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ11 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ10 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

