Connect with us

ಲೈಫ್ ಸ್ಟೈಲ್

ಭಾನುವಾರದ ಭವಿಷ್ಯ | ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ

Published

on

ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.

ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ:
9945410150

ಮೇಷ ರಾಶಿ

ಈ ದಿನ ಹೆಚ್ಚಿನ ಶ್ರಮ ಕಾಣಬಹುದಾಗಿದೆ. ಕೆಲಸವನ್ನು ಪೂರ್ತಿಗೊಳಿಸುವ ಜವಾಬ್ದಾರಿ ನಿಮ್ಮ ಮೇಲೆ ಬೀಳಬಹುದು. ನಿಮ್ಮ ವ್ಯಕ್ತಿತ್ವವನ್ನು ವಿಶ್ವಾಸ ಹಾಗೂ ದೃಢತೆಯತ್ತ ರೂಪಿಸಿಕೊಳ್ಳಬೇಕಾಗಿದೆ. ವ್ಯವಹಾರದಲ್ಲಿ ಬುದ್ಧಿವಂತಿಕೆಯಿಂದ ಲಾಭಗಳಿಸುವ ಪ್ರಯತ್ನಮಾಡಿ. ಯೋಜನೆಗಳಲ್ಲಿ ನಿರೀಕ್ಷಿತ ಗೆಲುವು ಸಾಧಿಸಲು ನೀವು ನಿಮ್ಮದೇ ಆದ ರೂಪರೇಷೆಗಳನ್ನು ಸಿದ್ಧಪಡಿಸಿಕೊಳ್ಳಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ

ಅನಗತ್ಯವಾಗಿ ಬೇರೆಯವರ ಮಾತುಗಳಿಗೆ ಕಟ್ಟು ಬೀಳಬೇಡಿ. ಜನಗಳೊಂದಿಗೆ ಬೆರೆಯಲು ಪ್ರಯತ್ನಿಸಿ. ನಿಮ್ಮಲ್ಲಿನ ಸಂಕೋಚ ಸ್ವಭಾವನ್ನು ತೆಗೆದುಹಾಕಿ. ನಿಮ್ಮ ಪ್ರತಿಭೆಗೆ ಸೂಕ್ತ ಮನ್ನಣೆ ದೊರೆಯಲಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ

ನಿಮ್ಮ ಭೋಗವಿಲಾಸತನ ಜೀವನವನ್ನು ಹಾಗೂ ದುಂದುವೆಚ್ಚಗಳಿಗೆ ಕಡಿವಾಣ ಹಾಕಿ ಮುನ್ನಡೆಯಿರಿ. ಭವಿಷ್ಯದ ಬಗೆಗಿನ ನಿಮ್ಮ ದೃಷ್ಟಿಕೋನ ವಿಶಾಲ ವಾಗಿರಲಿ. ನೀವು ನಡೆಸುತ್ತಿರುವ ಯೋಜನೆ ಬಗೆಗಿನ ಕಾರ್ಯವೈಖರಿಯೂ ಉತ್ತಮವಾಗಿದ್ದು ಅದನ್ನೇ ಮುಂದುವರಿಸುವುದು ಒಳ್ಳೆಯದು, ಕೆಲವು ಜನಗಳು ನಿಮ್ಮ ದಿಕ್ಕುತಪ್ಪಿಸುವ ಸಾಧ್ಯತೆ ಕಂಡುಬರುವುದು.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ

ಬಂಡವಾಳ ಕ್ರೂಢೀಕರಣ ಮಾಡುವ ವಿಷಯದಲ್ಲಿ ಹಲವರು ನಿಮ್ಮ ನೆರವಿಗೆ ಬರುವ ಸಾಧ್ಯತೆ ಇದೆ. ಆಲಸ್ಯತನ ಅಥವಾ ಕೆಲವು ಗೊಂದಲಗಳು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಕೆಳಹಂತಕ್ಕೆ ತಳ್ಳಲ್ಪಡುತ್ತದೆ ಎಚ್ಚರವಿರಲಿ. ಉದ್ಯೋಗದ ಸ್ಥಳದಲ್ಲಿ ಸುಖಾಸುಮ್ಮನೆ ಸಮಸ್ಯೆಗಳು ಸೃಷ್ಟಿಯಾಗಬಹುದು ಅಥವಾ ಕೆಲವು ದೋಷಾರೋಪಣೆಗಳು ನಿಮ್ಮ ಮೇಲೆ ಬರುವ ಸಾಧ್ಯತೆ ಇದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ

ನೀವು ಇಂದು ತೆಗೆದುಕೊಳ್ಳುವ ನಿರ್ಧಾರಗಳು ಭವಿಷ್ಯದ ಬುನಾದಿಗೆ ಉತ್ತಮ ಮಾರ್ಗ ಆಗಲಿದೆ. ಹಿರಿಯರ ಸಲಹೆಗಳಿಂದ ನಿಮ್ಮ ಆರ್ಥಿಕ ವ್ಯವಸ್ಥೆ ಸದೃಢವಾಗುತ್ತದೆ, ಹಾಗೂ ಉಳಿತಾಯ, ಹೂಡಿಕೆಗಳಲ್ಲಿ ಆಸಕ್ತಿ ಬೆಳೆಯಲಿದೆ. ನಿಮ್ಮ ಕೆಲಸದಲ್ಲಿ ಸಂಪೂರ್ಣ ಯಶಸ್ಸು ಪಡೆಯುತ್ತೀರಿ ಆದರೆ ಅದರ ಶ್ರೇಯಸ್ಸು ಪರರ ಪಾಲಾಗುವ ಸಾಧ್ಯತೆ ಇರಲಿದೆ ಎಚ್ಚರವಹಿಸಿ. ದೈಹಿಕ ಕಾರ್ಯಕ್ಷಮತೆಯಲ್ಲಿ ಸಮಸ್ಯೆಗಳು ತಲೆದೋರಬಹುದು ಆದಷ್ಟು ಆರೋಗ್ಯದ ಕಡೆ ಗಮನ ನೀಡಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ

ರಾಜಿ ಪಂಚಾಯಿತಿಗಳಲ್ಲಿ ಇಂದು ಪಾಲ್ಗೊಳ್ಳದಿರುವುದು ಒಳ್ಳೆಯದು ಏಕೆಂದರೆ ನಿಮ್ಮ ಬಗ್ಗೆ ಅಪಾರ್ಥ ಸೃಷ್ಟಿಯಾಗಲಿದೆ. ನಿಮಗೆ ಆಸಕ್ತಿಯಿರುವ ವಿಷಯಗಳಲ್ಲಿ ಮುಂದುವರೆಯುವುದು ಒಳ್ಳೆಯದು, ಇನ್ನೊಬ್ಬರ ಬಲವಂತವನ್ನು ಕಡೆಗಣಿಸಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ

ಅವಿಸ್ಮರಣೀಯ ಎನಿಸುವ ಘಟನೆಗಳು ಜರುಗುವುದ್ದನ್ನು ಈ ದಿನ ನೋಡಬಹುದಾಗಿದೆ. ಕುಟುಂಬದ ಜೊತೆಗೆ ಸ್ವಲ್ಪಮಟ್ಟಿಗೆ ಕಾಲಕಳೆಯಲು ಪ್ರಯತ್ನಿಸಿ ಇದರಿಂದ ನಿಮ್ಮ ಒತ್ತಡಗಳು ದೂರವಾಗಲಿದೆ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭಗಳು ಎದುರಾಗಬಹುದು ಆದಷ್ಟು ಈದಿನ ಮುಂದೂಡುವುದು ಒಳಿತು. ಕುಟುಂಬದಲ್ಲಿ ಶುಭ ಸುದ್ದಿಯನ್ನು ಕೇಳುವ ಸಾಧ್ಯತೆಗಳು ಕಾಣಬಹುದು. ಇತರರ ಒತ್ತಾಯಕ್ಕೆ ನೀವು ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಬೇಡ, ನಿಮಗೆ ಸರಿ ಕಂಡದ್ದನ್ನು ಮಾಡಲು ಮುಂದಾಗಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ

ಚಟುವಟಿಕೆ ಶೀಲರಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಕುಟುಂಬದಲ್ಲಿನ ವೈಯಕ್ತಿಕ ಸಮಸ್ಯೆಗಳು ಇತ್ಯರ್ತ ವಾಗಲಿದೆ. ಇಂದು ನಿಮ್ಮನ್ನು ಭೇಟಿಯಾಗಲು ಆತ್ಮೀಯರು ಬರಬಹುದು ಅವರೊಡನೆ ಉತ್ತಮ ಬಾಂಧವ್ಯ ರೂಢಿಸಿಕೊಳ್ಳಿ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಪರಿಹಾರ ಮಾಡುವುದು ಒಳಿತು. ಸಂಗಾತಿಯ ಹಿತಾಸಕ್ತಿಯಿಂದ ನಿಮ್ಮೆಲ್ಲಾ ಕಾರ್ಯಗಳು ಪ್ರಗತಿಯತ್ತ ಸಾಗಲಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ

ಶುಭ ಸುದ್ದಿಗಳಿಂದ ಮನೆಯಲ್ಲಿ ಸಂತಸದ ವಾತಾವರಣ ಕಂಡುಬರುತ್ತದೆ. ಮನಸ್ಥಿತಿಯು ಯಾವುದೋ ಒಂದು ವಿಷಯದಲ್ಲಿ ಕೊರಗುತ್ತಿರುವುದು ಇದನ್ನು ಸರಿಪಡಿಸಿಕೊಳ್ಳಿ. ಹೂಡಿಕೆಗಳಲ್ಲಿ ಅತ್ಯಂತ ಜಾಗ್ರತೆವಹಿಸಿ. ನಯವಂಚಕರ ಹಾವಳಿಯಿಂದ ಪಾರಾಗಲು ಸೂಕ್ಷ್ಮ ಬುದ್ಧಿಯನ್ನು ಉಪಯೋಗಿಸಿ. ಹಿಡಿದ ಕೆಲಸವು ಈ ದಿನ ಸಂಪೂರ್ಣ ಮಾಡಿ ಮುಗಿಸುವಿರಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ

ಉದ್ಯೋಗದಲ್ಲಿನ ಸಮಸ್ಯೆಯನ್ನು ನಿವಾರಣೆಗೆ ಆದ್ಯತೆ ನೀಡಿ. ನಿಮ್ಮ ಮನಸ್ಥಿತಿಯನ್ನು ಆದಷ್ಟು ಸುಧಾರಿಸಿಕೊಳ್ಳುವುದು ಒಳಿತು. ಆರೋಗ್ಯದ ಕಡೆಗೆ ಗಮನವಿರಲಿ. ಈ ದಿನ ನವೀನ ಕಲ್ಪನೆಗಳಿಂದ ಆರ್ಥಿಕ ಸಂಪತ್ತು ವೃದ್ಧಿಯಾಗುವುದು. ನಿಮ್ಮ ಬಹು ಯೋಜಿತ ಕೆಲಸವು ಕಾರ್ಯರೂಪಕ್ಕೆ ಬರುವುದನ್ನು ಈ ದಿನ ಕಾತರದಿಂದ ನೀವು ಕಾಯುವಿರಿ. ಹಿರಿಯರೊಡನೆ ನಿಮ್ಮ ಮಹತ್ವದ ವಿಷಯಗಳನ್ನು ಚರ್ಚೆ ನಡೆಸುವ ಸಾಧ್ಯತೆ ಇದೆ. ಬಹುದಿನದ ಸಮಸ್ಯೆಗಳಿಗೆ ಅಥವಾ ವ್ಯಾಜ್ಯಗಳಿಗೆ ಪರಿಹಾರ ದೊರಕುತ್ತದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ

ಉದ್ಯೋಗದಲ್ಲಿ ಅಸ್ತಿತ್ವಕ್ಕಾಗಿ ಹೋರಾಡಬೇಕಾದ ಹೊಣೆಗಾರಿಕೆ ನಿಮ್ಮದಾಗಿದೆ. ಹೂಡಿಕೆಗಳು ಲಾಭಾಂಶದಿಂದ ಕೂಡಿರುತ್ತದೆ. ಮಧ್ಯವರ್ತಿ ಕೆಲಸಗಾರರಲ್ಲಿ ಉತ್ತಮ ಆದಾಯ ನಿರೀಕ್ಷಿಸಬಹುದು. ಮಕ್ಕಳಿಂದ ಸಂತಸದ ವಾತಾವರಣ ಕಂಡುಬರುತ್ತದೆ. ಪ್ರೇಮಿಗಳಲ್ಲಿ ಪರಸ್ಪರ ಭಿನ್ನಾಭಿಪ್ರಾಯ ತಲೆದೋರಬಹುದು ಆದಷ್ಟು ಲಘುವಾಗಿ ಮಾತನಾಡಿ ಪೇಚಿಗೆ ಸಿಲುಕಬೇಡಿ. ಸೋಲುಗಳು ನಿಮ್ಮ ಜೀವನದ ಬಹುದೊಡ್ಡ ಪಾಠ ಕಲಿಸಿಕೊಡುತ್ತದೆ ಆದಷ್ಟು ದರ್ಪ ಸ್ವಭಾವವನ್ನು ತ್ಯಜಿಸುವುದು ಸೂಕ್ತ. ಚರ್ಚಾ ಕೋಟಗಳಲ್ಲಿ ವಾದ-ವಿವಾದಗಳು ವಿವಾದ ಸ್ವರೂಪ ಪಡೆಯಬಹುದು ಎಚ್ಚರವಿರಲಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ

ಸಂಗಾತಿಯ ಮನೋಭಿಲಾಷೆಯನ್ನು ಪೂರ್ಣಗೊಳಿಸುವಿರಿ, ಅವರ ಕಠಿಣ ಸ್ವಭಾವವು ನಿಮ್ಮ ಒಳಿತಿಗಾಗಿ ಇರವುದು. ಉದ್ಯೋಗ ಸ್ಥಳದಲ್ಲಿ ನಿಮ್ಮ ಕೆಲವು ವರ್ತನೆಗಳು ಇರುಸುಮುರುಸು ತಂದುಕೊಡಬಹುದು ಎಚ್ಚರವಿರಲಿ. ಸಹವರ್ತಿಗಳಿಂದ ಕಿರಿಕಿರಿ ಬರಬಹುದು ಆದಷ್ಟು ಈ ದಿನ ತಾಳ್ಮೆಯಿಂದ ಮಾತನಾಡಿ. ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಿ. ಆತುರದಿಂದ ಮಾಡಿದ ಹೂಡಿಕೆಗಳು ನಷ್ಟ ತರಬಹುದಾದ ಸಾಧ್ಯತೆ ಇದೆ. ಸಮಗ್ರ ದೃಷ್ಟಿಕೋನದಿಂದ ಬಂಡವಾಳ ಹೂಡಿಕೆ ಮಾಡಿ. ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ಜಯ ಸಂಪಾದನೆ ಆಗುತ್ತದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ದಿನದ ಸುದ್ದಿ

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

Published

on

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.

ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.

ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.

ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ

Published

on

ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ **”ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – 2026″**ಕ್ಕೆ ದಾವಣಗೆರೆಯ ಕವಿ ಹಾಗೂ ಪತ್ರಕರ್ತ ಪಾಪು ಗುರು ಅವರ “ಈ ಹೊತ್ತಿಗೆ ಇಷ್ಟು ಸಾಕು” ಕವನ ಹಸ್ತ ಪ್ರತಿ ಆಯ್ಕೆಯಾಗಿದೆ.

ಪ್ರಶಸ್ತಿಗೆ ಈ ಬಾರಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 53 ಕವನ ಹಸ್ತಪ್ರತಿಗಳು ಬಂದಿದ್ದು, ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಪಾಪು ಗುರು ಅವರ ಕೃತಿ ಪ್ರಶಸ್ತಿಗೆ ಪಾತ್ರವಾಗಿದೆ.

ಪ್ರಶಸ್ತಿಯು ₹5,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ ತಿಂಗಳಲ್ಲಿ ಕೊಪ್ಪಳದಲ್ಲಿ ನಡೆಯಲಿರುವ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಾಹಿತ್ಯೋತ್ಸವದ ಸಂಚಾಲಕ ಮಹೇಶ್ ಬಳ್ಳಾರಿ ತಿಳಿಸಿದ್ದಾರೆ.

ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಪು ಗುರು ಅವರ ‘ಮುಳ್ಳೆಲೆಯ ಮದ್ದು’, ‘ಮಣ್ಣೇ ಮೊದಲು’ ಕವನ ಸಂಕಲನಗಳು ಹಾಗೂ ‘ಸೂಜಿ’ ಕಾದಂಬರಿ ಪ್ರಕಟವಾಗಿವೆ. ಅಲ್ಲದೆ ‘ಕೆಂಪು ಕಾಂಡದ ಹೂ’ ಮತ್ತು ‘ಹಸಿರು ಹಾದಿಯ ಹೆಜ್ಜೆಗಳು’ ಕೃತಿಗಳನ್ನು ಸಂಪಾದನೆ ಮಾಡಿದ್ದಾರೆ. ಅವರ ಸೂಳೆಕೆರೆಯ ಇತಿಹಾಸದ ಹಿನ್ನೆಲೆ ಇರುವ ‘ಶಾಂತದೇವಿ’ ಕಾದಂಬರಿ ಮುದ್ರಣ ಹಂತದಲ್ಲಿದೆ.

ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಪಾಪು ಗುರು ಅವರಿಗೆ ದೊರೆತಿರುವ ಈ ಪ್ರಶಸ್ತಿ ಸಾಹಿತ್ಯ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಇವರಿಗೆ ಜಿಲ್ಲೆಯ ಅಭಿಮಾನಿಗಳು, ಪತ್ರಕರ್ತರು ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಸಂತೆಬೆನ್ನೂರು ಫೈಜ್ನಟ್ರಾಜ್ ಹಾಗೂ ಹೆಚ್ ಬಿ. ಇಂದ್ರಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending