Connect with us

ಭಾವ ಭೈರಾಗಿ

ಕವಿತೆ | ನ್ಯಾಯ ಕೇಳುತ್ತಿವೆ ಪಾರಿವಾಳಗಳು

Published

on

 

ಜಾತಿ ಮತಗಳ ದ್ವೇಷದಲ್ಲಿ
ಸುಟ್ಟು ಹೋದ ಗುಡಿಸಲುಗಳು
ಉರಿದು ಎದ್ದು ಹೊಗೆಯಾಗಿ
ನಭಕೆ ಚಿಮ್ಮಿ ಹಕ್ಕಿಗಳಾಗಿ
ನ್ಯಾಯ ಕೇಳುತ್ತಿವೆ ಪಾರಿವಾಳಗಳು
ಕೋರ್ಟಿನ ಮುಂದೆ.

ಉತ್ತಿದವರು ಬಿತ್ತಿದವರು
ಕೂಳಿಲ್ಲದೆ ಬತ್ತಿ ಹೋದವರು
ಆಳಿದವರು ಬಾಳಿದವರು
ಅಧಿಕಾರವಿಲ್ಲದೆ ಅಸ್ಪೃಶ್ಯರಾದವರು
ಪಾಲು ಕೇಳುತ್ತಿವೆ ಪಾರಿವಾಳಗಳು
ಸೌಧದ ಮುಂದೆ.

ಕಾಲಕಾಲದಿಂದಲೂ ನಿಮಗೆ
ಮನೆಗಳನ್ನು ಕಟ್ಟಿದವರು
ಮನಗಳನ್ನು ಕಟ್ಟಿದವರು
ನಾಡಿಲ್ಲದೆ, ಗೂಡಿಲ್ಲದೆ, ಕಾಡಿಲ್ಲದೆ
ಜಾಗ ಕೇಳುತ್ತಿವೆ ಪಾರಿವಾಳಗಳು
ಬಂಗಲೆಗಳ ಮುಂದೆ.

ಆನೆ ಕುದುರೆ ಕಾಲಾಳುಗಳು
ಬಣ ಬಣಗಳ ನಡುವೆ
ಬಡಿದಾಡಿ ಸತ್ತವರು
ನಿಮಗಾಗಿಯೆ ಜೀವ ತೆತ್ತವರು
ಬದುಕು ಕೇಳುತ್ತಿವೆ ಪಾರಿವಾಳಗಳು
ಅರಮನೆಗಳ ಮುಂದೆ.

ಶತಮಾನಗಳ ನೋವ ಬಿಕ್ಕಳಿಸಿ
ನ್ಯಾಯಕ್ಕಾಗಿ ಆಗ್ರಹಿಸಿ
ಚಿಲಿಪಿಲಿ ಕಿಚಿಪಿಚಿ ದನಿಯ ಎತ್ತರಿಸಿ
ಹಾಡುತ್ತಿರುವ ಹಕ್ಕಿಗಳನ್ನು
ಕಾಯುತ್ತಾ ನಿಂತಿವೆ ಪ್ರತಿಮೆಗಳು
ಊರಿನ ಮುಂದೆ.

ಡಾ. ಪ್ರಸನ್ನ ನಂಜಾಪುರ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ನಮ್ಮ‌ ಪೂರ್ವಿಕ ಶಿವನೂ ; ಅವರ ಡುಬಾಕು ಸನಾತನವೂ..

Published

on

  • ಹರ್ಷಕುಮಾರ್ ಕುಗ್ವೆ

ಲಿಂಗವು ದೇವರಲ್ಲ ಶಿವನು ದೇವರಲ್ಲ
ಶಕ್ತಿಯೂ ದೇವರಲ್ಲ. ಮನುಷ್ಯನ ಕಲ್ಪನೆಯ ಆಳವನ್ನು ಮೀರಿದ ಯಾವ ದೇವರೂ ಇಲ್ಲ. ಅಸಲಿಗೆ ಇಡೀ ಜಗತ್ತನ್ನು ನಡೆಸುವ ದೇವರೆಂಬುದೇ ಇಲ್ಲ.

ಶಿವನು ನಮ್ಮ ಪೂರ್ವಿಕ, ಗೌರಿ ಅತವಾ ಶಕ್ತಿ ನಮ್ಮ ಪೂರ್ವಿಕಳು. ಗಂಗೆ ನಮ್ಮ ಬದುಕು. ಶಿವನ ಕೊರಳಿನ ನಾಗ ನಮ್ಮ ಕುಲ. ಲಿಂಗ ಫಲವಂತಿಕೆಯ ಸಂಕೇತವೂ ಹೌದು, ಶಿವ ಶಕ್ತಿಯರ ಸಮಾಗಮದ ಸಂಕೇತವೂ ಹೌದು. ನಮ್ಮ ಜನರಿಗೆ ಸಂಕೇತಗಳು ಶಕ್ತಿಯಾಗಿದ್ದವು, ಪ್ರೇರಣೆಯಾಗಿದ್ದವು. ಡೊಳ್ಳು ಹೊಡೆದು ಕೇಕೆ ಹಾಕಿದಾಗ ಮಳೆ ಬಂದರೆ, ನಮ್ಮ ಡೊಳ್ಳಿನ ಸದ್ದಿನ ಶಕ್ತಿಯಿಂದಲೇ, ನಮ್ಮ ಕೇಕೆಯಿಂದಲೇ ಮಳೆ ಬಂತು ಎಂದು ನಂಬಿದರು. ಇದನ್ನು primitive magic ಪರಿಕಲ್ಪನೆ ಎನ್ನಲಾಗಿದೆ.‌ ನಮ್ಮ ಬಳ್ಳಾರಿಯ ಸಂಗನಕಲ್ಲಿನಲ್ಲಿ 3000 ವರ್ಷಗಳ ಹಿಂದೆ ಕಲ್ಲು ಬಂಡೆಗಳ ಮೇಲೆ ಕೆತ್ತಿದ ಹೋರಿ ಮತ್ತು ಉದ್ದ ಕೊಂಬಿನ ಕೆತ್ತನೆಗಳು ಸಹ ಇಂತಹ ಒಂದು ಆದಿಮ ಮಾಂತ್ರಿಕ ಶಕ್ತಿಯ ಆಚರಣೆಯಾಗಿದೆ.

ನಂಬಿಕೆಗಳನ್ನು ಸಂಸ್ಕೃತಿಯಾಗಿ, ಪರಂಪರೆಯಾಗಿ ಗ್ರಹಿಸಬೇಕೇ ಹೊರತು ದೇವರಾಗಿ ಅಲ್ಲ. ದೇವ ಎಂಬ ಕಲ್ಪನೆಯೇ ದ್ರಾವಿಡರಲ್ಲಿ ಇರಲಿಲ್ಲ. 50 ಸಾವಿರ ವರ್ಷಗಳಿಂದ ಬಂದ ಲಿಂಗ- ಯೋನಿ ಪೂಜೆ, ಗೌರಿ ಪೂಜೆ, 9,000 ವರ್ಷಗಳಿಂದ ಬಂದ ಬೂಮ್ತಾಯಿ ಪೂಜೆ, ಅರಳಿ ಮರದ ಪೂಜೆ, ಐದು ಸಾವಿರ ವರ್ಷಗಳಿಂದ ಬಂದ ಶಿವನ ಪೂಜೆ, ಗಣಪತಿ ಪೂಜೆ, ನಾಗನ ಪೂಜೆ, 4000 ವರ್ಷಗಳಿಂದ ಬಂದ ಗತಿಸಿದ ಹಿರೀಕರ ಪೂಜೆ, ಇದರ ಮುಂದುವರಿಕೆಯಾಗಿಯೇ 2600 ವರ್ಷಗಳ ಹಿಂದೆ ಬುದ್ದ ಗುರುವು ತೀರಿದ ಬಳಿಕ ಅವನ ಅಸ್ತಿಯನ್ನು ಇಟ್ಟ ಸ್ತೂಪಗಳನ್ನು ಪೂಜಿಸಿದೆವು, ದೂಪ ಹಾಕಿದೆವು..‌. ಇದುವೇ ಈ ನೆಲದ ಪೂಜನ ಸಂಸ್ಕತಿಯಾಗಿತ್ತು.

‘ದೇವ’ ಮತ್ತು ಅಸುರ ಇಬ್ಬರೂ ಬಂದಿದ್ದು ಮಧ್ಯ ಏಷ್ಯಾದಿಂದ ಹೊರಟಿದ್ದ ಆರ್ಯರಿಂದಲೇ. ಅವರಿಗೆ ಪೂಜೆ ಗೊತ್ತಿರಲಿಲ್ಲ. ಯಜ್ಞ ಗೊತ್ತಿತ್ತು, ಹೋಮ ಗೊತ್ತಿತ್ತು. ‘ದೇವ’ ಅತವಾ “ದ-ಏವ” ಕೂಡಾ ಮೂಲದಲ್ಲಿ ಆರ್ಯರ ಪೂರ್ವಿಕ ಕುಲ ನಾಯಕರೇ ಆಗಿದ್ದಾರು.‌.. ಹೀಗಾಗಿಯೇ ಆರ್ಯ ವೈದಿಕರ ದೇವ ಎಂದರೆ ಅವರ ದಾಯಾದಿಗಳಾಗಿದ್ದ ಪಾರ್ಸಿಯನ್ (ಜೊರಾಸ್ಟ್ರಿಯನ್) ಆರ್ಯ ಅವೆಸ್ತನ್ನರಿಗೆ ಕೆಡುಕಿನ ಸಂಕೇತ‌ವಾಗಿತ್ತು. ಹಾಗೇ ಆರ್ಯ ವೈದಿಕರು ಕೆಡುಕು ಎಂದ ಅಸುರ (ಅಹುರ) ಆರ್ಯ ಅವೆಸ್ತನ್ನರ ಪಾಲಿಗೆ “ನಾಯಕ”ನಾಗಿದ್ದ. ಅವರನ್ನು ಅಹುರ ಮಜ್ದಾ ಎಂದು ಕರೆದು ಆರಾದಿಸಿದರು.

ಭಾರತಕ್ಕೆ ಪ್ರವೇಶಿಸಿದ ಬಳಿಕ ಆರ್ಯ ವೈದಿಕರಿಗೆ ಈ ನೆಲದ ಮೊದಲ ನಿವಾಸಿಗಳ ಮೇಲೆ ಯಜಮಾನಿಕೆ ಸ್ತಾಪಿಸಬೇಕಿತ್ತು. ಅದಕ್ಕಾಗಿ ನಮ್ಮಿಂದ ಪೂಜೆಗೊಳ್ಳುತ್ತಿದ್ದ ಪೂರ್ವಿಕರನ್ನು ತಮ್ಮ “ದೇವರು” ಮಾಡಿದರು. ಆ ದೇವರ ಪೂಜೆಗೆ ಅವರೇ ನಿಂತರು. ತಮ್ಮ ಜುಟ್ಟು ಬಿಟ್ಟುಕೊಂಡು ನಮ್ಮ ಜುಟ್ಟು ಹಿಡಿದರು. ನಾವು ಪೂರ್ವಿಕರನ್ನು ಬಿಟ್ಟು ಕೊಟ್ಟು, ಅವರ ಕೈಯಲ್ಲಿ ದೇವರುಗಳ ಪೂಜೆ ನಡೆಯುವಾಗ ನಮ್ಮ ಪೂರ್ವಿಕರಿಗೆ ಗೊತ್ತೇ ಇರದಿದ್ದ ವೇದ ಮಂತ್ರಗಳನ್ನ ಕೇಳಿ ಪುನೀತರಾದೆವು. ಈ ಮಂತ್ರ ಭಾಷೆಯೇ ದೇವರಿಗೆ ಅರ್ಥವಾಗುವುದು ಎಂದು ಪುಂಗಿದ್ದಕ್ಕೆ ತಲೆಯಾಡಿಸಿ ಕೈಮುಗಿದು ಗರ್ಭಗುಡಿಯ ಹೊರಗೆ ಸಾಲಿನಲ್ಲಿ ನಿಂತೆವು.‌ ಮುಂದಿನ 2000 ವರ್ಷಗಳ ಕಾಲ ಗುಲಾಮರಾದೆವು.‌ ಪುರಾಣಗಳನ್ನು ಕೇಳಿದೆವು, ನಂಬಿದೆವು ಮತಿಗೆಟ್ಟೆವು, ಗತಿಗೆಟ್ಟೆವು.

ಇನ್ನೂ ಉಳಿದಿರುವುದೇನು?
ನಾವು ಶಿವನ ವಕ್ಕಲು, ಗೌರಿ- ಗಂಗೆಯರ ಒಕ್ಕಲು. ಅವರು ಇಂದ್ರ ಅಗ್ನಿಯರ ವಕ್ಕಲಾಗಿದ್ದವರು ತಮ್ಮ ದೇವರಿಗೆ ಕಿಮ್ಮತ್ತಿಲ್ಲ ಎಂದರಿತು ಅವರನ್ನೇ ಬಿಟ್ಟರು. ಈಗ ಹೇಳುತ್ತಾರೆ ನಾವೇ ಸನಾತನರು ಎಂದು! ಅವರ ಡುಬಾಕು ಸನಾತನದಲ್ಲಿ ನಮ್ಮತನ ಕಳೆದುಕೊಂಡ “ಶೂದ್ರ ಮುಂಡೇಮಕ್ಕಳಾಗಿ”, ಅವರಿಗಾಗಿ ಬಾಳು ಬದುಕು ಹಾಳುಮಾಡಿಕೊಂಡು, ಅವರ ಹೋಮ ಹವನ ಮಾಡಿಸಿ, ನಮ್ಮ ಉಳಿಕೆ ಕಾಸು ಕಳೆದುಕೊಂಡು, ಗೌರವ ಗನತೆ ಕಳೆದುಕೊಳ್ಳುವುದೇ ಇವತ್ತಿನ ಸನಾತನ!

– ಹರ್ಷಕುಮಾರ್ ಕುಗ್ವೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕವಿತೆ | ಗಾಯದ ಬೆಳಕು

Published

on

  • ಕಾವ್ಯ ಎಂ ಎನ್, ಶಿವಮೊಗ್ಗ

ನೋವ ಹಾಡುವುದನ್ನೇ ಕಲಿತೆ
ಬದುಕು ಬಿಕ್ಕಿತು..

ಗಾಯದ ಬೆಳಕು
ಹೊತ್ತಿ ಉರಿದು
ತಮವೆಲ್ಲ ತಣ್ಣಗಾದಾಗ
ಚುಕ್ಕಿಬೆರಳಿಗೆ ಮುಗಿಲು ತೋರಿದೆ
ಕೆಂಡದಂತ ಹಗಲು ನೆತ್ತಿಪೊರೆಯಿತು.

ಅದ್ಯಾವ ಕಾಡು ಮಲ್ಲಿಗೆಯ
ಹಾಡು ಕರೆಯಿತೊ ಏನೊ
ಎದೆ ಹಾದಿಯ ತುಂಬೆಲ್ಲಾ ಬೇಸಿಗೆ.

ಒಡಲು ತುಂಬಿ ಕಡಲು
ಜೀಕಿ ದಡ ಮುಟ್ಟಿದ
ಕಪ್ಪೆಚಿಪ್ಪಿನೊಳಗೆಲ್ಲಾ
ಸ್ವಾತಿ ಮುತ್ತು…

ಓಡುವ ಆಮೆಯಂತ ಗಡಿಯಾರ
ಮೈತುಂಬ ಮುಳ್ಳ ಹೊತ್ತು
ಸಾಗಿಸುತ್ತಿದೆ ಭವದ ಭಾರ.

ನನ್ನ ನಿನ್ನ ರೂಹು ತಿಳಿದ
ಕಾಡು ಗಿಡ ಮರ ಬೆಟ್ಟ ಬಯಲೆಲ್ಲಾ
ಕಥೆ ಕಟ್ಟಿ ಪಿಸುಗುಡುತ್ತಿವೆ
ಉಟ್ಟ ಉಸಿರಿನ ಬಟ್ಟೆ ಕಳಚಿದ ಮೇಲೆ
ಎಲ್ಲವೂ ಬೆತ್ತಲೆ…

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕವಿತೆ | ನಾನೊಲಿದೆನಯ್ಯಾ

Published

on

  • ರಮ್ಯ ಕೆ ಜಿ, ಮೂರ್ನಾಡು

ಲೆಯುತ್ತಿದೆ ಈ ರೂಹು
ನನ್ನೊಳಗಿಂದ ಚಿಗಿದು
ನಿನ್ನ ತುದಿಬೆರಳಲಿ ಕುಣಿದು
ಗಾಳಿತುಟಿಯ ಸೋಕಿದಾಕ್ಷಣ
ಬೆವೆತು,
ಮಳೆ ಹೊಯ್ಯಿಸಿ
ಮಣ್ಣ ಘಮದೊಳಗೆ
ಲೀನವಾಗುವಂತೆ.

ಹೊಳೆಯುತ್ತದೆ ನಿನ್ನ
ಕಣ್ಣಬೊಂಬೆಯೊಳಗೆ,
ಎಷ್ಟೋ ನೋವು ಕುಡಿದ
ನದಿಯೆದೆಯೊಳಗೆ,
ನೆನಪ ಮೀಟುವ ಘಳಿಗೆಗೆಲ್ಲ
ಪಾರಿಜಾತದ ಪರಿಮಳವುಳಿವಂತೆ.

ಕಲೆಯುತ್ತದೆ ಮತ್ತೆ,
ನಿನ್ನ ಮಾತು ಜೀವವಾಗುವಂತೆ
ನಗೆಬೆಳಕು ಕೈಹಿಡಿದು
ಜೊತೆ ನಡೆಯುವಂತೆ
ಅನಂತ ಬಾನು-
ಪ್ರೇಮಗಡಲಿಗೆ ಬಾಗುವಂತೆ
ತಿರುವುಗಳಲಿ ಹೊರಳಿ,
ಕವಲಾಗುವಾಗ
ಹಾಡೊಂದು ಕಾಡುವಂತೆ
ಜಪಮಣಿ ಎಣಿಸುವ
ಬೆರಳು, ಲೆಕ್ಕ ಮರೆತು
ಉಸಿರ ಪಲುಕನು
ಚಿತ್ರವಾಗಿಸುವಂತೆ.

ಕವಯಿತ್ರಿ : ರಮ್ಯ ಕೆ.ಜಿ,ಮೂರ್ನಾಡು

ಕವಿತೆ : ರಮ್ಯ ಕೆ ಜಿ, ಮೂರ್ನಾಡು

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು. ಶಾಸಕ ನಿವಾಸದಲ್ಲಿ ಶನಿವಾರ...

ದಿನದ ಸುದ್ದಿ2 days ago

ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್‌ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು....

ದಿನದ ಸುದ್ದಿ3 days ago

2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ. ಅರ್ಹರನ್ನು...

ದಿನದ ಸುದ್ದಿ3 days ago

ಅನ್ನಭಾಗ್ಯ ಯೋಜನೆ | ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ...

ದಿನದ ಸುದ್ದಿ3 days ago

ದಾವಣಗೆರೆ | ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ ; ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ

ಸುದ್ದಿದಿನ,ದಾವಣಗೆರೆ: ಅಂತರ್ಜಲ ಪ್ರಾಧಿಕಾರದ ನಿರಾಪೇಕ್ಷಣಾ ಪತ್ರವನ್ನು ಪಡೆಯದೆ ಮನೆಯ ಬೋರ್ ವೆಲ್ಲಿನಿಂದ ವಾಣಿಜ್ಯ ಉದ್ದೇಶಕ್ಕಾಗಿ ಸರತಿ ಸಾಲಿನಲ್ಲಿ ಸತತ ನಾಲ್ಕೈದು ವರ್ಷಗಳಿಂದ ಟ್ಯಾಂಕರ್ ಗಳ ಮೂಲಕ ದಿನಕ್ಕೆ...

ದಿನದ ಸುದ್ದಿ4 days ago

ಖಾತ್ರಿ ಯೋಜನೆಯ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ :‌ ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಬೆಂಗಳೂರು:ಗ್ಯಾರಂಟಿ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ; ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಪಕ್ಷ ನಾಯಕರ ಆರೋಪಕ್ಕೆ, ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿವೇಶನ...

ದಿನದ ಸುದ್ದಿ4 days ago

ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರಡ್‍ಸೆಟ್ ಸಂಸ್ಥೆ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ...

ದಿನದ ಸುದ್ದಿ4 days ago

ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ

ಸುದ್ದಿದಿನ,ದಾವಣಗೆರೆ:ಹರಿಹರ ತಾಲ್ಲೂಕು ಕ್ರೀಡಾಂಗಣದಲ್ಲಿರುವ ವಾಣಿಜ್ಯ ಮಳಿಗೆಗಳನ್ನು ಮಾಸಿಕ ಬಾಡಿಗೆ ಆಧಾರದ ಮೇಲೆ ನೀಡಲು ಹರಾಜು ಕರೆಯಲಾಗಿದ್ದು, ಕಾರಣಾಂತರಗಳಿಂದ ಹರಾಜು ದಿನಾಂಕವನ್ನು ಮಾ.20 ರ ಬೆಳಿಗ್ಗೆ 11.00 ಗಂಟೆಗೆ...

ದಿನದ ಸುದ್ದಿ4 days ago

ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’

ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಚನ್ನಗಿರಿ ನ್ಯಾಯಾಯದಲ್ಲಿ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಧೀಶರಾಗಿರುವ ಕು.ಶಮಾ...

ದಿನದ ಸುದ್ದಿ4 days ago

ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ

ಡಾ. ವೆಂಕಟೇಶ್ ಬಾಬು ಎಸ್., ಪ್ಲೇಸ್ಮೆಂಟ್ ಆಫೀಸರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ ನಮಗೆಲ್ಲರಿಗೂ ಒಂದು ಉತ್ತಮ ಜೀವನವನ್ನ ನಿರ್ಮಿಸಲು ಉದ್ಯೋಗ ಅತ್ಯಗತ್ಯ. ಆದರೆ, ಇತ್ತೀಚಿನ...

Trending