Connect with us

ದಿನದ ಸುದ್ದಿ

ಸಹಜತೆಯೇ ಸಾಹಿತ್ಯದ ನಿಜ ಸೊಬಗು : ಹಿರಿಯ ಸಾಹಿತಿ ಸುಶೀಲಾ ದೇವಿ ಆರ್ ರಾವ್

Published

on

ಸುದ್ದಿದಿನ, ದಾವಣಗೆರೆ : ಸರಳ ಭಾಷೆ, ಸಹಜ ವಿಷಯ ವಸ್ತುವಿನಿಂದ ಕೂಡಿದ ಸಾಹಿತ್ಯ ಓದುಗರ ಮನವನ್ನು ಶೀಘ್ರ ತಲುಪಬಲ್ಲದು ಎಂದು ಹಿರಿಯ ಸಾಹಿತಿ, ದಾವಣಗೆರೆ ಜಿಲ್ಲಾ 11 ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯುಕ್ತ ಸರ್ವಾಧ್ಯಕ್ಷರಾದ ಶ್ರೀಮತಿ ಸುಶೀಲಾದೇವಿ ಆರ್ ರಾವ್ ಅವರು ಅಭಿಪ್ರಾಯಿಸಿದರು.

ತಿಂಗಳ ಅಂಗಳ ಸಾಹಿತ್ಯ ಸಾಂಸ್ಕೃತಿಕ ಬಳಗದ ವತಿಯಿಂದ ದಿನಾಂಕ : 20.03.2022 ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ಸೀತಮ್ಮ ಬಾಲಕಿಯರ ಸರ್ಕಾರಿ ಪ.ಪೂ ಕಾಲೇಜಿನ ಗ್ರಂಥಪಾಲಕಿ ಶ್ರೀಮತಿ ಅನ್ನಪೂರ್ಣ ಪಾಟೀಲ್, ವಕೀಲರಾದ ಜಗದೀಶ ಎಸ್ ಮರಕಳ್ಳಿ ದಂಪತಿಗಳ ಶ್ಯಾಮನೂರು ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿರುವ ಭಾವ ಸಂಗಮ ನಿವಾಸದಲ್ಲಿ ಆಯೋಜಿಸಲಾಗಿದ್ದ ಕವಿ ಕಾವ್ಯ ಭಾವ ಸಂಗಮ, ಹ್ಯಾಪಿನೆಸ್ ಡೇ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರಳತೆಯೇ ಸಾಹಿತ್ಯದ ನಿಜ ಸೊಬಗು ಎಂದು ಬಣ್ಣಿಸಿದರು.

ಕಲ್ಪನೆಗಿಂತ ಸಾಂದರ್ಭಿಕ ಮತ್ತು ಸಮಕಾಲೀನ ಚಿಂತನೆಗಳಿಗೆ ಬರವಣಿಗೆ ತೆರೆದುಕೊಳ್ಳಬೇಕು. ಆಂತಹ ಸಾಹಿತ್ಯ ಮರು ದೃಷ್ಟಿಗೆ – ಹೊಸ ಸೃಷ್ಟಿಗೆ ಕಾರಣವಾಗುತ್ತದೆ. ಅದೇ ನಿಜವಾದ ಸತ್ವಯುತ ಬರಹ ಎಂದು ವಿಶ್ಲೇಷಿಸಿದರು.

ವಿಶೇಷ ಗೌರವ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ರಾಣೇಬೆನ್ನೂರು ಭರಮಗಿರಿ ಸಮಾಜ ಸೇವಾ ಸಂಸ್ಥೆಯ ಅಧ್ಯಕ್ಷರು ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕರಾದ ಆದರ್ಶ ಸಾಧಕ ಮಹಿಳೆ ಶ್ರೀಮತಿ ಸರೋಜಿನಿ ಯರೇಶೀಮಿ ಸಮಾಜ ಸೇವೆಗೆ ಹಣ ಬೇಕಾಗಿಲ್ಲ. ಸೇವೆ ಮಾಡುವ ಮನಸ್ಸಿದ್ದರೆ ಸಾಕು, ಎಲ್ಲವೂ ನಿಶ್ಚಿಂತೆಯಿಂದ ಸುಗಮವಾಗಿ ಸಾಗುತ್ತದೆ ಎಂದು ನುಡಿದರು.

ಆಶಯ ನುಡಿಯಾಡಿದ ಬಳಗದ ಸಂಚಾಲಕ ಗಂಗಾಧರ ಬಿ ಎಲ್ ನಿಟ್ಟೂರ್ ಮನೋವೈಜ್ಞಾನಿಕ ನೆಲೆಗಟ್ಟಿನಲ್ಲಿ ಕನ್ನಡ ಸಾರಸ್ವತ ಲೋಕಕ್ಕೆ ಉತ್ಕೃಷ್ಟ ಸಾಹಿತ್ಯಿಕ ಕೊಡುಗೆ ನೀಡುವ ಜೊತೆ ಸರಳ ಸಜ್ಜನಿಕೆ ಮೈಗೂಡಿಸಿಕೊಂಡು ಆದರ್ಶಪ್ರಾಯರಾಗಿರುವ ಸುಶೀಲಾದೇವಿ ಅಮ್ಮನವರು ಹಾಗೂ ದೇಶ ವಿದೇಶಗಳಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿ ತಾಯ್ನೆಲದ ಒಲವಿನ ಧ್ಯೋತಕವಾಗಿ ತಮ್ಮ ಜ್ಞಾನಾನುಭವವನ್ನು ಸಮಾಜ ಸೇವೆಯ ಮೂಲಕ ಕನ್ನಡ ನಾಡಿಗೆ ಹಂಚುತ್ತಿರುವ ಮಾದರಿ ಸಾಧಕ ಮಹಿಳೆ ಶ್ರೀಮತಿ ಸರೋಜಿನಿ ಯರೇಶೀಮಿ ಅವರ ಉಪಸ್ಥಿತಿಯಿಂದಾಗಿ ತಿಂಗಳ ಅಂಗಳ ಬಳಗದ ಮಹಿಳಾ ದಿನಾಚರಣೆ ಸಾರ್ಥಕಗೊಂಡಿತು ಎಂದು ಧನ್ಯತಾ ಭಾವ ವ್ಯಕ್ತಪಡಿಸಿದರು.

ಸಮ್ಮೇಳನದ ಸರ್ವಾಧ್ಯಕ್ಷರರಾಗಿ ಆಯ್ಕೆ ಗೊಂಡಿರುವ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ಶ್ರೀಮತಿ ಸುಶೀಲಾದೇವಿ ಆರ್ ರಾವ್ ಅವರಿಗೆ ಬಳಗದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಹೂಕುಂಡಲಕ್ಕೆ ನೀರು ಎರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಾಹಿತಿ ಮಹಾಂತೇಶ್ ಬಿ ನಿಟ್ಟೂರು ನಿರೂಪಣೆಯೊಂದಿಗೆ ಕವನ ವಾಚಿಸಿದರು.

ಬಳಗದ ಆಹ್ವಾನಿತ ಕವಿ ಮಿತ್ರರಾದ ಶಿವಯೋಗಿ ಹಿರೇಮಠ, ಅರುಂಧತಿ ರಮೇಶ್, ಶಕುಂತಲ, ಮಲ್ಲಮ್ಮ ನಾಗರಾಜ್, ಶೈಲಜಾ, ಎನ್ ಕೆ ಕೊಟ್ರೇಶ್, ಜಗದೀಶ್ ಬೂದಿಹಾಳ, ತಾಜುದ್ದೀನ್ ಬೇತೂರು, ಪ್ರಿಯದರ್ಶಿನಿ, ಸೌಮ್ಯ, ಶಿವಾನಂದಯ್ಯ, ಕುಸುಮ ಲೋಕೇಶ್, ಶೋಭಾ, ವಿಶ್ವನಾಥ್ ಸೇರಿದಂತೆ ಇತರರು ಸಂತಸ, ಸಮೃದ್ಧಿ, ಮಹಿಳೆ ಹಾಗೂ ಮಾನವೀಯ ಮೌಲ್ಯ ಬಿಂಬಿಸುವ ಸ್ವರಚಿತ ಕವನ ವಾಚಿಸಿದರು.

ಪ್ರಾಯೋಜಕರಾದ ಶ್ರೀಮತಿ ಅನ್ನಪೂರ್ಣ ಪಾಟೀಲ್ , ಜಗದೀಶ್ ಮರಕಳ್ಳಿ, ಶಂಕರ್ ಗೌಡ ಪಾಟೀಲ್, ಸೌಜನ್ಯ, ಹಾಗೂ ಅವರ ಕುಟುಂಬ ವರ್ಗ ಮತ್ತು ಬಂಧುಮಿತ್ರರು ಹಾಜರಿದ್ದರು. ಉತ್ತರ ಕರ್ನಾಟಕದ ಸವಿ ಭೋಜನದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending