ದಿನದ ಸುದ್ದಿ
ಈಗಲಾದರೂ ಮೀನುಗಾರರ ಕುಟುಂಬಗಳು ನ್ಯಾಯ ಪಡೆದುಕೊಳ್ಳಲಿ
ಕಳೆದ ಡಿಸೆಂಬರ್ 15 ರಂದು ನಾಪತ್ತೆಯಾಗಿದ್ದ ಕರ್ನಾಟಕದ ಮೀನುಗಾರರಿದ್ದ ಸುವರ್ಣ ತ್ರಿಭುಜ ದೋಣಿ ಮೊನ್ನೆ ಪತ್ತೆಯಾಗಿದೆ ಎಂದು ನೌಕಾಪಡೆ ದೋಣಿಯ ಫೋಟೋ ಸಮೇತ ಬಹಿರಂಗಪಡಿಸಿದೆ.ಆದರೆ ಮೀನುಗಾರರು ಬದುಕಿ ಉಳಿದಿರುವ ಲಕ್ಷಣಗಳು ತೋರುತ್ತಿಲ್ಲ.
Missing Fishing Boat Wreck Found by #IndianNavy – After an intensive search by ships & aircraft since December 2018, #IndianNavy has located the wreck of fishing vessel Suvarna Tribhuja 33 km WSW of the coast of Malvan. The wreck was found by #INSNireekshak on 01 May 19. 1/2 pic.twitter.com/23ZVJ3XfxZ
— SpokespersonNavy (@indiannavy) May 2, 2019
ಇದೀಗ ಉಡುಪಿ ಶಾಸಕರು ಮತ್ತು ಮಾಜಿ ಸಚಿವರು ನೇರವಾಗಿ ಭಾರತೀಯ ನೌಕಾಪಡೆಯ ಐ ಎನ್ ಎಸ್ ಕೊಚ್ಚಿನ್ ನೌಕೆಯೇ ಮೀನುಗಾರರ ದೋಣಿಗೆ ಹೊಡೆದು ಮುಳಿಗಿಸಿರುವ ಆತಂಕ ವ್ಯಕ್ತಪಡಿಸಿದ್ದಾರೆ.
ಇದೆಲ್ಲ ಸುಳ್ಳಾಗಲಿ, ನಮ್ಮ ಮೀನುಗಾರರು ಬದುಕಿರಲಿ ಎಂದು ಆಶಿಸೋಣ. ಆದರೆ ಅಕಸ್ಮಾತ್ ಇವರು ವ್ಯಕ್ತಪಡಿಸಿರುವ ಅನುಮಾನ ನಿಜವೇ ಆಗಿದ್ದರೆ!? ಆಗ ಕೆಲವು ಗಂಭೀರ ಪ್ರಶ್ನೆಗಳನ್ನು ಕೇಂದ್ರ ಸರ್ಕಾರ ಉತ್ತರಿಸಬೇಕಾಗುತ್ತದೆ.
- ಮೀನುಗಾರರ ಬೋಟು ಪತ್ತೆಯಾಗಿರುವುದು ಮಹಾರಾಷ್ಟ್ರ ಕರಾವಳಿಯಿಂದ ಕೇವಲ 33 ಕಿಲೋಮೀಟರ್ ದೂರದಲ್ಲಿ. ಡಿಸೆಂಬರ್ 13 ರಿಂದ ಇದುವರೆಗೆ ದೇಶದ ಪಶ್ಚಿಮ ಕರಾವಳಿಯಲ್ಲಾಗಲೀ, ಅರಬ್ಬೀ ಸಮುದ್ರದಲ್ಲಾಗಲೀ ಯಾವುದೇ ಹವಾಮಾನ ವೈಪರೀತ್ಯ ಆದ ವರದಿ ಇಲ್ಲ. ಅಂದರೆ ಬೋಟು ಹಾಳಾಗಿಯೋ, ಹಿಡಿತ ತಪ್ಪಿಯೋ ಸಮುದ್ರದಲ್ಲಿ ಮುಳುಗಿದರೆ ಕನಿಷ್ಟ ಸಂದೇಶವನ್ನು ತಲುಪಿಸಲಾರದ ಸ್ಥಿತಿಯಂತೂ ಇರುವುದಿಲ್ಲ. ಹಾಗೆ ಮುಳುಗಿದರೆ ಲೈಫ್ ಜಾಕೆಟ್ ಧರಿಸಿ ಕೆಲವರಾದರೂ ಬದುಕಿ ಉಳಿಯುವ ಸಾಧ್ಯತೆ ಇರುತ್ತದೆ.
- ಬೋಟ್ ಮುಳುಗಿರುವುದು ಹೀಗಲ್ಲವಾದರೆ ಉಳಿಯುವ ಎರಡು ಸಾದ್ಯತೆಗಳೆಂದರೆ ಒಂದು ಶತ್ರುಪಡೆಯ ಯುದ್ಧ ನೌಕೆ ಹೊಡೆದು ಮುಳುಗಿಸಿರುವುದು ಮತ್ತೊಂದು ನಮ್ಮದೇ ನೌಕಾಪಡೆ ಶತ್ರುಗಳ ದೋಣಿ ಎಂದು ಭಾವಿಸಿಯೋ ಅಥವಾ ಬೇರಾವ ಕಾರಣದಿಂದಲೋ ಮೀನುಗಾರರ ದೋಣಿಯನ್ನು ಹೊಡೆದು ಮುಳುಗಿಸಿರುವುದು.
- ದೋಣಿ ಪತ್ತೆಯಾಗಿರುವುದು ಭಾರತದ ಸಾಗರ ಗಡಿಯೊಳಗೆ ಆಗಿರುವುದರಿಂದ ಇದು ಶತ್ರುಪಡೆಯ ಕೆಲಸ ಅಲ್ಲ ಎಂದು ಹೇಳಬಹುದು. ಕೊನೆಯ ಸಾಧ್ಯತೆ ನಮ್ಮದೇ ನೌಕಾಪಡೆ ದಿಡೀರ್ ದಾಳಿ ನಡೆಸಿ ಸುವರ್ಣ ತ್ರಿಭುಜ ದೋಣಿಯನ್ನು ಮುಳುಗಿಸಿರುವುದು.
- ಇದು ಹೀಗೇ ಆಗಿದ್ದ ಪಕ್ಷದಲ್ಲಿ ನಾಲ್ಕು ತಿಂಗಳ ಕಾಲ ಮಾಹಿತಿಯನ್ನು ಮುಚ್ಚಿಡಲಾಗಿದೆ. ಇದಕ್ಕೆ ಕಾರಣ ಲೋಕಸಭಾ ಚುನಾವಣೆ.
- ಕೇಂದ್ರ ಸರ್ಕಾರಕ್ಕೆ ಸರಿಯಾದ ಮಾಹಿತಿ ಇದ್ದ ಕಾರಣದಿಂದಲೇ ಈ ನಾಲ್ಕು ತಿಂಗಳ ಕಾಲ ತೋರಿಕೆಯ ಹುಡುಕಾಟ ನಡೆಸುತ್ತಿದ್ದುದನ್ನು ಗಮನಿಸಬಹುದು.
- ಇಲ್ಲಿ ನೌಕಾಪಡೆ ತಿಳಿದೋ ತಿಳಿದೆಯೋ ಮೀನುಗಾರರ ದೋಣಿಯನ್ನು ಮುಳುಗಿಸರಬಹುದು. ಆದರೆ ಕೇಂದ್ರ ಸರ್ಕಾರ ಮಾತ್ರ ಉದ್ದೇಶಪೂರ್ವಕವಾಗಿ ಸತ್ಯವನ್ನು ಮುಚ್ಚಿಟ್ಟಿದೆ ಎನಿಸುತ್ತದೆ. ಇದು ನಿಜವಾಗಿದ್ದರೆ ಮೀನುಗಾರರ ಕುಟುಂಬಗಳ ದೃಷ್ಟಿಯಿಂದ ಅಕ್ಷಮ್ಯ ಅಪರಾಧವೇ ಸರಿ.
- ಸಚಿವ ಪ್ರಮೋದ್ ಮಧ್ವರಾಜ್, ಮೀನುಗಾರ ಸಮುದಾಯದ ಮುಖಂಡ ಜಿ ಶಂಕರ್ ಮೊದಲಾದವರು ಆಗ್ರಹಿಸಿರುವ ರೀತಿ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವುದೇ ಸೂಕ್ತ.
- ಸತ್ಯವನ್ನು ಮುಳುಗಿಸಲು ಆಸ್ಪದ ನೀಡಲಾಗದು. ಮೀನುಗಾರರ ದೋಣಿ ಹೇಗೆ ಮುಳುಗಿತು, ಎಲ್ಲಿ ಮುಳಿಗಿತು? ಯಾರಿಂದ ಮುಳುಗಿತು, ಮೀನುಗಾರರು ಏನಾದರು? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಗಲೇಬೇಕು.
ಈ ಪ್ರಶ್ನೆಗಳಿಗೆ ಉತ್ತರ ಪಡೆಯಲು ಕೇಂದ್ರ ಸರ್ಕಾರ ಹಿಂದೆ ಮುಂದೆ ಯೋಚಿಸಿದರೆ ಅದು ಕರಾವಳಿಯ ಮೀನುಗಾರ ಸಮುದಾಯಕ್ಕೆ ದೊಡ್ಡ ದ್ರೋಹವಾಗಲಿದೆ. ಕನಿಷ್ಟ ಈಗಲಾದರೂ ಮೀನುಗಾರರ ಕುಟುಂಬಗಳು ನ್ಯಾಯ ಪಡೆದುಕೊಳ್ಳಲಿ.
The wreck was found through Side Scan Sonar operations and confirmed today by Naval Divers undertaking saturation diving at a depth of 60 metres.2/2 pic.twitter.com/SuVFNEpOnz
— SpokespersonNavy (@indiannavy) May 2, 2019
– ಹರ್ಷಕುಮಾರ್ ಕುಗ್ವೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


