ದಿನದ ಸುದ್ದಿ
ಸರಳ ಸಂತ ಸ್ವಾಮಿ ಅಗ್ನಿವೇಶ್ ಇನ್ನಿಲ್ಲ
ಸುದ್ದಿದಿನ,ದೆಹಲಿ: ಕಳೆದ ಹಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಂತ ಆರ್ಯ ಸಮಾಜದ ಮುಖಂಡ ಸ್ವಾಮಿ ಅಗ್ನಿವೇಶ್(80) ಚಿಕಿತ್ಸೆ ಫಲಕಾರಿಯಾಗದೇ ದೆಹಲಿಯ ಐ.ಎಲ್.ಬಿ.ಎಸ್ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.
ಆಂಧ್ರ ಪ್ರದೇಶದ ಶ್ರೀಕಾಕುಳಂ ಮೂಲದ ಸಾಮಾಜಿಕ ಕಾರ್ಯಕರ್ತರೂ ಆಗಿರುವ ಸ್ವಾಮಿ ಅಗ್ನಿವೇಶ್ ಅವರು 2011ರಲ್ಲಿ ಅಣ್ಣಾಹಜಾರೆ ನೇತೃತ್ವದ ಭ್ರಷ್ಟಾಚಾರ ವಿರೋಧಿ ಹೋರಾಟದಲ್ಲಿ ಗುರುತಿಸಿಕೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243