Connect with us

ಭಾವ ಭೈರಾಗಿ

ಕಾದಂಬರಿ ವಿಮರ್ಶೆ | ಸ್ವಪ್ನದಲ್ಲಿ ಸೊರಗಿದ ಪ್ರೀತಿ

Published

on

  • ಸಿಂಪಲ್ ಸಿಂಚು

ಇತ್ತೀಚಿಗಷ್ಟೇ ಕರುನಾಡ ಹಣತೆ ಕವಿ ಬಳಗದ ಮೂಲಕ ಪರಿಚಿತರಾದ ಕೆ.ಸಿರಿ (ಗ್ರಾಮ ಲೆಕ್ಕಿಗರು) ಚಾಮರಾಜನಗರ. ಇವರು ಪರಿಚಯವಾದ ಹತ್ತು ನಿಮಿಷದಲ್ಲಿಯೇ ಇವರ ಕಾದಂಬರಿ ನನ್ನ ಕೈಗೆ ತಲುಪಿತು. “ಸ್ವಪ್ನದಲ್ಲಿ ಸೊರಗಿದ ಪ್ರೀತಿ”. ಅತ್ಯದ್ಭುತವಾದ ಶೀರ್ಷಿಕೆ ಹೊಂದಿದೆ. ನಾನು ಒಬ್ಬಳು ಬರಹಗಾರ್ತಿಯಾಗಿ ಶೀರ್ಷಿಕೆ ನೋಡಿ ನನ್ನದೇ ಆದಂತಹ ಒಂದು ಕಲ್ಪನೆಯಲ್ಲಿ ನಾನು ಮುಳುಗಿದಾಗ.

ಪ್ರೀತಿಯೆಂದರೆ, ಪ್ರೇಮ ಅಷ್ಟೇ ಅಂದುಕೊಂಡಿದ್ದೆ ಆದರೆ ಕುತೂಹಲದಿಂದ ಕಾದಂಬರಿಯನ್ನು ಓದುತ್ತಿರುವಾಗ ಅರ್ಥವಾಯಿತು, ಪ್ರೀತಿಯೆಂದರೆ ಹೆಸರು ಹಾಗೆಯೇ ಪ್ರೇಮ ಅನ್ನೋದು ಕೂಡ ಹೆಸರು, ಅಂತ. ಸಮಾಜದಲ್ಲಿ ಪ್ರೇಮ ನಿವೇದನೆಯನ್ನು ಮೊದಲಿಗೆ ಹುಡುಗರು ಮಾಡಬೇಕು, ಅದಕ್ಕೂ ಮೊದಲು ಪ್ರೇಮ ನಿವೇದನೆಯನ್ನು ಹುಡುಗಿ ಮಾಡಿದರೆ ತಪ್ಪು.

ಎಂಬುದು ವಿಶ್ವವಿಖ್ಯಾತಿ ಅಭಿಪ್ರಾಯ. ಅದು ಇನ್ನು ಹಲವಾರು ಜನರ ಅಭಿಪ್ರಾಯವೂ ಹೌದು. ಹೆಣ್ಣಾದವಳು ತನ್ನೊಳಗಿನ ಭಾವನೆಗಳನ್ನು, ನನ್ನೊಳಗಿನ ತಲ್ಲಣಗಳನ್ನು ಹೊರಹಾಕಲು ಸಮಾಜದಲ್ಲಿ ಸರಿಯಾದ ರೀತಿಯ ಸ್ವತಂತ್ರ ಕೂಡ ಇಲ್ಲ ಅಂತಹ ಕಟ್ಟುಪಾಡುಗಳಿಗೆ ಸ್ವಪ್ನದಲ್ಲಿ ಸೊರಗಿದ ಪ್ರೀತಿಯು ಪರಿಹಾರವಾಗಿದೆ.

ಇದನ್ನೂ ಓದಿ | ಪುಸ್ತಕ ವಿಮರ್ಶೆ | ಮೋಹದ ಮೋಡಗಳು

ಈ ಕಾದಂಬರಿಯನ್ನೂ ಪೂರ್ತಿಯಾಗಿ ಇದರಲ್ಲಿ ಮುಳುಗಿ ಓದಿದಾಗ ಮಧ್ಯದಿಂದ ಹಿಡಿದು ಕೊನೆಯವರೆಗೂ ದುಃಖ ನನ್ನನ್ನು ಅವರಿಸುತ್ತದೆ. ಪ್ರೀತಿ ಪ್ರೇಮ್ ಎಂಬ ಹೆಸರಿನ ಹೊಂದಾಣಿಕೆ ತುಂಬಾ ಅದ್ಭುತವಾಗಿದೆ. ಪ್ರೀತಿ ಪ್ರೇಮ್ ನಾ ಹುಟ್ಟಿದ ದಿನ, ಕೆಂಪುಬಣ್ಣದ ಅಭಿರುಚಿ, ಪ್ರೀತಿ ಪ್ರೇಮಿಗಳ ದಿನವನ್ನು ಆಚರಿಸುತ್ತಿದಂತಹ ಪದ್ಧತಿ.

ಎಲ್ಲವೂ ಕೂಡ ತುಂಬಾ ಮನಸ್ಸಿಗೆ ಇಷ್ಟವಾಯಿತು. ಹಾಗೆಯೇ ಪ್ರೀತಿ ಎಷ್ಟು ವರ್ಷಗಳ ಕಾಲವಾದರೂ ತನ್ನ ಪ್ರೀತಿಯನ್ನು ಉಳಿಸಿಕೊಂಡು ಹೋಗುವ ರೀತಿ. ನಮ್ಮಂತಹ ಹೂಮನಸ್ಸಿಗರಿಗೆ ಸ್ಫೂರ್ತಿದಾಯಕವಾಗಿದೆ. ಈ ಕಾದಂಬರಿಯಲ್ಲಿ ಹುಚ್ಚುಕೋಡಿ ಮನಸ್ಸಿನ ಚಿತ್ರಣವನ್ನು ಮತ್ತು ನಿಯಂತ್ರಣವನ್ನು, ಪ್ರೇಮ್ನಾ ಮೂಲಕ ಬಣ್ಣಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಪ್ರೀತಿ-ಪ್ರೇಮವೆಂದು ಆವೇಶ ಪಟ್ಟು ಆತ್ಮಹತ್ಯೆ, ಸಾವಿನ ಕೃತ್ಯಗಳನ್ನು ಕೈಗೊಳ್ಳುವ ಯುವಜನರಿಗೆ ಜೀವನದ ಗುರಿ ಮುಖ್ಯ ಎಂಬುದನ್ನು ತಿಳಿಸುತ್ತದೆ. ಮುಂದುವರೆದು ಕನ್ನಡ ದೇಸಿ ಪದಗಳ ಸಂಭಾಷಣೆ, ನಿರ್ಗಳತೆಯಿಂದ ಕಾದಂಬರಿ ಓದುವವರಿಗೆ ಪ್ರಯಾಣದಲ್ಲಿ ನಿಲ್ದಾಣಗಳಂತೆ ಸರಳವಾಗಿ ಅರ್ಥವಾಗುವ ಕವನಗಳು ಕಾದಂಬರಿಯ ವಿಶೇಷತೆಯಾಗಿದೆ.

ಅಪ್ಪ-ಅಮ್ಮನ ಮಾತಿಗೆ ಬೆಲೆ ಕೊಡದಿರುವ ಯುವಜನಾಂಗಕ್ಕೆ ಮಾದರಿ ಪ್ರೇಮ್ ಒಂದೆಡೆ ಆದರೆ, ಇನ್ನೊಂದೆಡೆ ಅದೇ ಪ್ರೇಮ್ ಪ್ರೀತಿಯ ಪ್ರೀತಿಯನ್ನು ನಿಭಾಯಿಸಲು ಬರದೆ, ತನಗೆ ತಾನು ಮೋಸ ಮಾಡಿಕೊಂಡಿದ್ದು ತುಂಬಾ ದುಃಖಕರ ವಿಚಾರ. ಅತಿ ಹೆಚ್ಚು ಭಾವುಕರಾದ ಕ್ಷಣ ಪ್ರೇಮ್ ತನ್ನ ಅಪ್ಪನನ್ನು ಪ್ರೀತಿಯ ಗೋರಿಯ ಹತ್ತಿರ ಕರೆದುಕೊಂಡು ಹೋಗಿ.

ತನ್ನ ದುಃಖವನ್ನು ಹೇಳಿಕೊಂಡು ಅಪ್ಪ-ಮಗ ಇಬ್ಬರೂ ಪಶ್ಚತಾಪ ಪಡುವ ಕ್ಷಣ.ಪ್ರೀತಿಯ ಬದಲಿಗೆ ಪಾರ್ವತಿ ಬಂದಾಗ, ಪ್ರೀತಿಯನ್ನು ಪಾರ್ವತಿಯಲ್ಲಿ ಕಾಣುವುದು!! ಇಲ್ಲದಿರುವ ವ್ಯಕ್ತಿಗಳನ್ನು ಇರುವ ವ್ಯಕ್ತಿಗಳೊಂದಿಗೆ ಕಲ್ಪಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಅಂತಹ ಸಂದರ್ಭವನ್ನು ತುಂಬಾ ಸೂಕ್ಷ್ಮವಾಗಿ ವರ್ಣಿಸಿದ್ದಾರೆ.

ನಾನು ಪಿಯುಸಿ ನಲ್ಲಿರುವಾಗ ವಿನಿತ್ ಎಂಬ ಹುಡುಗ ದ್ವಿತೀಯ ಪಿಯುಸಿ ಪರೀಕ್ಷೆಯ ಸಮಯದಲ್ಲಿ ಪ್ರೇಮ ನಿವೇದನೆಯನ್ನು ತನ್ನ ಗೆಳೆಯರೊಂದಿಗೆ ಹೇಳಿಕಳಿಸಿದ್ದ ನಾನು ಮೊದಲು ಪರೀಕ್ಷೆ ಬರೆದು ಪಾಸ್ ಆಗಲಿಕ್ಕೆ ಹೇಳು ಎಂದು ಬೈದು ಕಳಿಸಿದ ಕ್ಷಣ ನೆನಪಾಗಿ ನಕ್ಕಿದೆ.

ಈ ಕಾದಂಬರಿಯನ್ನು ಓದಿದ ಕ್ಷಣಗಳು ನನ್ನನ್ನು ತುಂಬಾ ಯೋಚನೆ, ತುಂಬಾ ಭ್ರಮೆಗಳಿಗೆ, ತುಂಬಾ ಪ್ರಶ್ನೆಗಳಿಗೆ ಅನುವು ಮಾಡಿ ಎಲ್ಲದಕ್ಕೂ ಕೊನೆಯಲ್ಲಿ ಉತ್ತರ ಹುಡುಕುವಲ್ಲಿ ವಿಶಾಲವಾದ ಮನಸ್ಥಿತಿಯನ್ನು ತಂದುಕೊಟ್ಟಂತಹ “ಕೆ. ಸಿರಿಯವರ ಸ್ವಪ್ನದಲ್ಲಿ ಸೊರಗಿದ ಪ್ರೀತಿಗೆ ಸದಾಕಾಲ ಚಿರಋಣಿ”. ಶುಭವಾಗಲಿ ಶ್ರೀಧರ್ ಸರ್. ಇನ್ನು ಹಲವಾರು ವಿಶೇಷ ವಿಭಿನ್ನ ಕಾದಂಬರಿಗಾಳಿಗಾಗಿ ಕಾಯುತ್ತಿರುವ ಆಶಾ ಜೀವಿ ನಿಮ್ಮ ಅನುಯಾಯಿ. ಸಿಂಪಲ್ ಸಿಂಚು. ಧನ್ಯವಾದಗಳು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಅನ್ನಕ್ಕೆ ಯಾವ ಧರ್ಮ..? ಮತ್ತು ಇತರೆ ಕವಿತೆಗಳು

Published

on

~ವಿಜಯ್ ನವಿಲೇಹಾಳು

ನನ್ನ ಮನವ, ಹಸಿದ ತೋಳಗಳಂತೆ ಕಿತ್ತು ತಿಂದು ಅದೆಷ್ಟೋ ದಿನಗಳಿಂದ ಎದೆನಡುಗಿಸುತ್ತ ರಣಕೇಕೆ ಹಾಕುತ್ತಿರುವ ನೋವಿನ ಪದಗಳನು ಜೋಡಿಸುತ್ತಿರುವೆ ಅಷ್ಟೇ

ಮಾರಮ್ಮನ ಜಾತ್ರೆಯ ಪ್ರಸಾದ,
ಮೊಹರಮ್ ನ ಚೋಂಗಿ ಕೂಡಿ ಉಂಡು
ಅಡುಗೆ ರುಚಿಯೂ; ಮಾಯಾ ದೀವಿಗೆಯನು
ತಿಕ್ಕಿದಾಗ ಬರುವ ಜೀನಿಯಂತೆ ಅದ್ಭುತ ವಾಗಿತ್ತು

ಪಂಕ್ತಿಯಲ್ಲಿ ಹಿಂದುವೋ, ಮುಸಲ್ಮಾನನೋ, ಕ್ರಿಶ್ಚಿಯನ್ನನೋ, ಯಾರಾದರೇನು? ಅನ್ನಕ್ಕೆ ಯಾವ ಧರ್ಮ ?

ಈಗ ಅಲ್ಲೆಲ್ಲೊ ಯಾರೋ ಕೆಲವರು ಜಾತಿ ಧರ್ಮದ ವಿಷವನು ಹನಿ ಹನಿ ಉಣಬಡಿಸಿ ಊರಿಗೂರಿಗೆ ದ್ವೇಷದ ನಶೆಯೇರಿಸಿದ್ದಾರೆ

ಈಗೀಗ ಅವರ ಹಸಿವು ನೀಗುತ್ತಿರುವುದು ಕ್ರೌರ್ಯದ ಕತ್ತಿಯಿಂದ ಜಿನಿಗುತ್ತಿರುವ ರಕ್ತದಿಂದ

ನಾನೆಂದು ಕವಿತೆ ಬರೆದವನಲ್ಲ ಎದೆಯೊಳಗಿನ ನೋವಿನ ಪದಗಳನು ಜೋಡಿಸುತ್ತಿರುವೆ ಅಷ್ಟೇ.

ಇತರೆ ಕವಿತೆಗಳು

೧..
ಅವಳ ಮಾತುಗಳು ಅಲ್ಪ ಪ್ರಾಣಗಳಂತೆ
ಕಿವಿಗಳಿಗೆ ನಾಟುತ್ತವೆ
ಅವಳ ಮೌನ ಮಹಾ ಪ್ರಾಣಗಳಂತೆ
ಸೀದ ಹೃದಯಕ್ಕೆ ಅಪ್ಪಳಿಸುತ್ತವೆ
ಅವಳ ಮಾತು ಮತ್ತು ಮೌನದ ಕೊನೆಯಲಿ
ನಾನು ಅನುನಾಸಿಕದಂತೆ.
೨..
ಮಡಿವಂತಿಕೆಯೇ ಶ್ರೇಷ್ಟ ಮೈಲಿಗೆಯು ಅನಿಷ್ಟ ಅಂದುಕೊಂಡಿದ್ದರೆ ಊರಾಚೆಗಿನ ಕಲ್ಲು ಬಂಡೆ ವಿಗ್ರಹವಾಗುತ್ತಿರಲಿಲ್ಲ.
೩..
ಅವಳು ಅಣು ಅಣುವಾಗಿ ಹೃದಯದ
ಆಳವನು ಸೇರಿಕೊಂಡು ಬೇರು ಬಿಟ್ಟಳು
ಅವಳ ಒಲವಿನ ಆಕ್ರಮಣಕೆ
ನಾ ಮರುಮಾತುಗಳಾಡದೆ ಹೆಪ್ಪುಗಟ್ಟಿದೆ. (ಕವಿ:ವಿಜಯ್ ನವಿಲೇಹಾಳು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಹನಿಗವಿತೆಗಳು | ಬೆಳಕಿನ ಬೆನ್ನ ಹಿಂದೆ

Published

on

  • ಅನಿತ ಮಂಜುನಾಥ

ಪ್ರೀತಿ,
ಅಜ್ಞಾತ ಅನೂಹ್ಯ.
ಭಾವಯಾನದ
ಬಾನ ಕೆಳಗೆ.

…….

ಸುರಿಯುವ ಮಳೆಯಲ್ಲಿ
ಕೊಡೆ ಮರೆತೆ,
ಆಗ ನೀ ನೆನಪಾದೆ.

…….

ನನ್ನ
ವಿರಹಗಳಿಗೆ,
ಕಾವ್ಯವೇ ಮದ್ದು ನನಗೆ,
ಮನದೊಳಗೊಂದು
ಸುಖ ಸದ್ದು !

…….

ಮಾತು ವಚನಗಳು,
ಮನ ಕಲಹಗಳಾಗದಿರಲಿ,
ಆಗಲಿ ಬಾಳಿನ ಆಶಾಕಿರಣ.

(ಅನಿತ ಮಂಜುನಾಥ ಅವರ ‘ ಬೆಳಕಿನ ಬೆನ್ನ ಹಿಂದೆ – ಹನಿಗವಿತೆಗಳ ಕವನ ಸಂಕಲನದಿಂದ ಈ ಮೇಲಿನ ಹನಿಗಳನ್ನು ಆಯ್ದುಕೊಳ್ಳಲಾಗಿದೆ‌.)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ಯಾವ ಕಾಲದ ಶಾಸ್ತ್ರವೇನು ಹೇಳಿದರೇನು..?

Published

on

  • ಕುವೆಂಪು

ಯಾವ ಕಾಲದ ಶಾಸ್ತ್ರವೇನು ಹೇಳಿದರೇನು ?
ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು ?
ಎಂದೋ ಮನು ಬರೆದಿಟ್ಟುದಿಂದೆಮಗೆ ಕಟ್ಟೇನು ?
ನಿನ್ನೆದೆಯ ದನಿಯೆ ಋಷಿ ! ಮನು ನಿನಗೆ ನೀನು !

ನೀರಡಿಸಿ ಬಂದ ಸೋದರಗೆ ನೀರನು ಕೊಡಲು
ಮನುಧರ್ಮಶಾಸ್ತ್ರವೆನಗೊರೆಯಬೇಕೇನು ?
ನೊಂದವರ ಕಂಬನಿಯನೊರಸಿ ಸಂತೈಸುವೊಡೆ
ಶಾಸ್ತ್ರ ಪ್ರಮಾಣವದಕಿರಲೆ ಬೇಕೇನು ?

ಪಂಚಮರ ಶಿಶುವೊಂದು ಕೆರೆಯಲ್ಲಿ ಮುಳುಗುತಿರೆ
ದಡದಲ್ಲಿ ಮಿಯುತ್ತ ನಿಂತಿರುವ ನಾನು
ಮುಟ್ಟಿದರೆ ಬ್ರಹ್ಮತ್ವ ಕೆಟ್ಟುಹೋಗುವುದೆಂದು
ಸುಮ್ಮನಿದ್ದರೆ ಶಾಸ್ತ್ರಸಮ್ಮತವದೇನು?

ಅಂತು ಮನು ತಾನು ಹೆಲಿರಲಾರನಯ್ಯಯ್ಯೊ!
ಹೇಳಿದ್ದರವನನೂ ಶಾಸ್ತ್ರದೊಳೆ ಸುತ್ತಿ,
ಸ್ವರ್ಗ ಹೋಗಲಿ, ಮತ್ತೆ ನರಕ ಬಂದರು ಬರಲಿ,
ಎದೆಯ ಧೈರ್ಯವ ಮಾಡಿ ಬಿಸುಡಾಚೆಗೆತ್ತಿ!

ಸ್ವರ್ಗ ಹೋಗುವುದಿಲ್ಲ, ನರಕ ಬರುವುದು ಇಲ್ಲ;
ಸ್ವರ್ಗ ನರಕಗಳೇನು ಶಾಸ್ತ್ರಸ್ಥವಲ್ಲ .
ಎದೆಯ ದನಿ ಧರ್ಮನಿಧಿ ! ಕರ್ತವ್ಯವದುವೆ ವಿಧಿ !
ನಂಬದನು; ಅದನುಳಿದು ಋಷಿಯು ಬೇರಿಲ್ಲ!

ಹಿಂದಿನಾ ಋಷಿಗಳೂ ಮಾನವರೆ ನಮ್ಮಂತೆ,
ಅವರ ಶಾಸ್ತ್ರವು ಅವರ ಕಾಲಕ್ಕೆ ಮಾತ್ರ;
ಕಾಲಕ್ಕೆ ತಕ್ಕಂತೆ, ದೇಶಕ್ಕೆ ತಕ್ಕಂತೆ,
ನಮ್ಮ ಹೃದಯವೆ ನಮೆಗೆ ಶ್ರೀಧರ್ಮಸೂತ್ರ !(ರಾಷ್ಟ್ರಕವಿ ಕುವೆಂಪು ಅವರ ‘ಕೋಗಿಲೆ ಮತ್ತು ಸೋವಿಯಟ್ ರಷ್ಯ’ ಕವನಸಂಕಲನದಿಂದ )

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending