Connect with us

ಭಾವ ಭೈರಾಗಿ

ವಿಮರ್ಶೆ | ಸ್ವಪ್ನದಲ್ಲಿ ಸೊರಗಿದ ಪ್ರೀತಿ

Published

on

  • ನೇತ್ರಾವತಿ ಸಿ.ಎಂ (ನೆಲ್ಲಿಕಟ್ಟೆ)

ಕಾದಂಬರಿ :ಸ್ವಪ್ನದಲ್ಲಿ ಸೊರಗಿದ ಪ್ರೀತಿ
ಲೇಖಕ : ಶ್ರೀಧರ್(ಕೆ. ಸಿರಿ)


ಆತ್ಮೀಯ ಗೆಳೆಯರು ಅದ ಕೆ.ಶ್ರೀಧರ್(ಕೆ. ಸಿರಿ)ರಚಿಸಿದ “ಸ್ವಪ್ನದಲ್ಲಿ ಸೊರಗಿದ ಪ್ರೀತಿ” ಅದ್ಭುತ ಶೀರ್ಷಿಕೆಯಿಂದಲೇ ಎಲ್ಲರ ಕಣ್ಮನ ಸೆಳೆಯುವ, ತಲ್ಲಣಗೊಂಡ ಮನಸ್ಸೊಂದರ ಪ್ರಾಮಾಣಿಕ ಪ್ರೀತಿ ಅನಾವರಣಗೊಂಡಿದೆ.ಈ ಪುಸ್ತಕದಲ್ಲಿ ನಮ್ಮನ್ನು ಗಾಢವಾಗಿ ಆವರಿಸಿಕೊಳ್ಳುವ ಮತ್ತೊಂದು ವಸ್ತುವೆಂದರೆ ಪ್ರೇಮ !.

ಈ ಪ್ರೇಮವು ರಮ್ಯವಾಗಿಯೂ ಇರದೆ ವಿರಹವನ್ನು ಅಲ್ಪವಿರಾಮವನ್ನು ಕಾಣುತ್ತದೆ.ಗುರಿ ಮತ್ತು ಪ್ರೀತಿ ಎರಡರ ಪ್ರಾಮುಖ್ಯತೆಯನ್ನು ಸರಳವಾಗಿ ಅರ್ಥವಾಗುವ ರೀತಿಯಲ್ಲಿ ತನ್ನದೇ ಭಾಷೆಯನ್ನು ಇಲ್ಲಿ ಬಿಂಬಿಸಿದ್ದಾರೆ. ಹದಿಹರೆಯದಲ್ಲಿ ಹುಟ್ಟಿದ ಪ್ರೀತಿಯು ತನ್ನ ಜೀವನದ ಗುರಿಯನ್ನು ಬದಲಾಯಿಸಿ ಬಿಟ್ಟಿದೆ.

ಇಲ್ಲಿ ಪ್ರೀತಿ ಮತ್ತು ಪ್ರೇಮ ಎನ್ನುವ ಹೆಸರಿನಿಂದ ವ್ಯಕ್ತವಾದ ವ್ಯಕ್ತಿತ್ವಗಳು, ಪ್ರೀತಿ ಮತ್ತು ಪ್ರೇಮ್ ಎರಡು ಹೃದಯಗಳಲ್ಲಿ ಹುಟ್ಟಿದ ಪ್ರೀತಿಯು, ಪ್ರೀತಿ ತನ್ನ ಪ್ರೀತಿಯನ್ನು ಪ್ರೇಮದೊಂದಿಗೆ ವ್ಯಕ್ತಪಡಿಸುವ ಪರಿಯೂ ಇಲ್ಲಿ ಅವಳ ಹುಚ್ಚುಮನಸ್ಸಿನ ಸ್ವಚ್ಛ ಪ್ರೀತಿಯ ಹಿಂದೆ ಬಿದ್ದು ಅವಳ ಜೀವನವನ್ನೆಲ್ಲಾ ಏಳು ವರ್ಷಗಳ ಪ್ರೀತಿಯ ಕಾಯುವಲ್ಲಿ ಜೀವನ ಗುರಿಯನ್ನೇ ಮರೆತು ಪ್ರೀತಿಯ ಜೀವನದ ಮುಖ್ಯವೆಂದು ಪ್ರೇಮ ಪ್ರೀತಿಗೆ ಹಗಲು-ಇರುಳು ಮುಗ್ಧ ಮನಸ್ಸಿನ ಪೆದ್ದು ಹುಡುಗಿ ತನ್ನ ಆಸೆ ಆಕಾಂಕ್ಷೆ ಪ್ರೇಮ್ ಅವನ ಪ್ರೀತಿಗೆ ಅವನಿಗೆ ಪರಿಪರಿಯಾಗಿ ಹಂಬಲಿಸುವ ಪ್ರೀತಿ ಒಂದು ಕಡೆಯಾದರೆ.

ಪ್ರೇಮ ಕಷ್ಟದಾ ಕುಟುಂಬದಲ್ಲಿ ಬೆಳೆಯುತ್ತಿದ್ದ. ಹುಡುಗ ತನ್ನ ತಂದೆ-ತಾಯಿಯ ಜೀವನ ನಡೆಸುವ ಒಂದು ಹೊತ್ತಿನ ತುತ್ತಿಗೆ ಶ್ರಮಪಡುವ ತಂದೆತಾಯಿಯನ್ನು ಪ್ರತಿದಿನ ನೋಡುತ್ತಿದ್ದ. ಪ್ರೇಮ್ ತಾನು ಜೀವನದಲ್ಲಿ ಓದಿ ಕುಟುಂಬವನ್ನು ನಡೆಸುವ ದೊಡ್ಡ ಅಧಿಕಾರಿಯಾಗಬೇಕು ಎನ್ನುವ ಛಲ ಹೊಂದಿದ್ದ ಹುಡುಗ. ಪ್ರೀತಿ ತನ್ನ ಪ್ರೇಮ್ ಗೆ ಪ್ರೀತಿಯ ಬಗ್ಗೆ ವ್ಯಕ್ತಪಡಿಸಿದಾಗ, ಪ್ರೇಮ್ ನಲ್ಲಿದ್ದ ಭಾವನೆಗಳು, ಪ್ರೀತಿಯ ಮೇಲಿದ್ದ ಪ್ರೀತಿಯನ್ನು ವ್ಯಕ್ತಪಡಿಸಲಾಗುತ್ತದೆ.

ಪ್ರೀತಿಯನ್ನು ನಿಂದಿಸುತ್ತಾನೆ. ಅಪ್ಪ ಹೇಳಿದ ಮಾತು ಮನಸ್ಸಿನಲ್ಲಿ ಬೆಂಬಿಡದೆ ಕಾಡಿದಾಗ ತಾನು ಜೀವನದಲ್ಲಿ ಏನಾದರೂ ಸಾಧಿಸಬೇಕು, ಎನ್ನುವ ಯೋಚನೆಯಲ್ಲಿ ತೊಡಗಿಕೊಂಡವನು.
ಮನುಷ್ಯ ಭಾವನೆಗಳ ಜೀವಿ ಭಾವನೆಗಳು ಇಲ್ಲದೆ ಮನುಷ್ಯನು ಇರಲಾರ ಪ್ರೀತಿಯು ಜೀವನದ ಬಹು ಮುಖ್ಯವಾದ ಅಂಶವಾಗಿದೆ.

ಇದನ್ನೂ ಓದಿ | ಆನೆಗಳು ಓಡೋದನ್ನು, ನಡೆಯೋದನ್ನ ನೋಡಿದ್ದೇವೆ..! ಮಲಗೋದು ಹೇಗೆ? ಇಲ್ಲಿದೆ ಅಪರೂಪದ ಚಿತ್ರ..!

ಆನೆಗಳು ಓಡೋದನ್ನು, ನಡೆಯೋದನ್ನ ನೋಡಿದ್ದೇವೆ..! ಮಲಗೋದು ಹೇಗೆ? ಇಲ್ಲಿದೆ ಅಪರೂಪದ ಚಿತ್ರ..!

ಇಲ್ಲಿ ಪ್ರೇಮ್ ವಿದ್ಯಾಭ್ಯಾಸ ಮುಗಿಸಿ ಅಧಿಕಾರದೊಂದಿಗೆ ಪ್ರೀತಿಯನ್ನು, ಪ್ರೀತಿಗೆ ಹೇಳಿಕೊಳ್ಳಲು ಕುಟುಂಬದೊಂದಿಗೆ ಅವಳನ್ನು ಭೇಟಿ ಮಾಡಲು ಹೋದಾಗ ನಿಜಕ್ಕೂ ಕಾದಂಬರಿ ಓದುಗರ ಮನಸಲ್ಲಿ ಮೌನವು ಆವರಿಸುತ್ತದೆ. ತನ್ನದೇ ಪ್ರೀತಿಯನ್ನು ವ್ಯಕ್ತಪಡಿಸಲಾಗದೆ, ಗುರಿಯ ಕಡೆಗೆ ಹೊತ್ತು ನೀಡಿದ್ದ ಪ್ರೇಮ್ ಅಂದು ತನ್ನ ಪ್ರೀತಿಯನ್ನು ಕಳೆದುಕೊಳ್ಳುವ ಪರಿ. ವರ್ಷಗಳಿಂದ ಪ್ರೇಮ್ ಕಾಯುತ್ತಿದ್ದ ಪ್ರೀತಿಯು ಅವನ ನೆನಪಿನಲ್ಲಿ ಪ್ರಾಣತ್ಯಾಗ ಮಾಡುತ್ತಾಳೆ.

ಪ್ರೇಮ್ ತನ್ನ ಪ್ರೀತಿಯನ್ನು ಕಳೆದುಕೊಂಡ ಮೇಲೆ ಜೀವನದ ದಿಕ್ಕಿ ಬದಲಾದ ಹಾಗೆ ಪರಿಪರಿಸುತ್ತನೆ . ಈ ಜಗದ ನಿಯಮವೇ ಹಾಗೆ ಸತ್ತುಹೋದವರು ನೆನಪುಗಳು ಮಾತ್ರ ಜೀವನವನ್ನು ಕಟ್ಟಿಕೊಳ್ಳುವುದು ಹಾಗೆಯೇ ಪ್ರೇಮ್ ಪಾರ್ವತಿಯೊಂದಿಗೆ ವಿವಾಹವಾಗಿ ಹೊಸ ಜೀವನಕ್ಕೆ ಕಾಲುಇಡುವುದರ ಮೂಲಕ ಪ್ರೀತಿಯನ್ನು ಪಾರ್ವತಿಯ ರೂಪದಲ್ಲಿ ನೋಡುತ್ತಾ ಜೀವಿಸುತ್ತಾನೆ.

ಒಟ್ಟಾರೆ ಈ ಸ್ವಪ್ನದಲ್ಲಿ ಸೊರಗಿದ ಪ್ರೀತಿ ಇತ್ತೀಚಿನ ಹದಿಹರೆಯದ ಯುವಮನಸ್ಸುಗಳು ಗುರಿ ಆದರ್ಶವನ್ನು ಕೈಗೆತ್ತಿಕೊಂಡರೆ ಏನು ಬೇಕಾದರೂ ನಿಶ್ಚಲದಿಂದ ಸಾಧಿಸಬಹುದು ಎಂಬುದನ್ನು ಕೆ ಸಿರಿ ಅವರು ವ್ಯಕ್ತಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕವಿತೆ | ನೆನಪು

Published

on

ಕವಿ | ರುದ್ರಪ್ಪ ಹನಗವಾಡಿ
  • ರುದ್ರಪ್ಪ ಹನಗವಾಡಿ

ಅಪ್ಪನನ್ನು ಒಪ್ಪ ಮಾಡಿ
ವರ್ಷಗಳೇ ಕಳೆದವು ಮುವ್ವತ್ತೇಳು
ಇಂದಿರಾಗಾಂಧಿಯ ತುರ್ತು ಪರಿಸ್ಥಿತಿ
ಅರಸರ ಮೀಸಲಾತಿ
ಬಸವಲಿಂಗಪ್ಪನವರ ಬೂಸಾ ಖ್ಯಾತಿ
ಮಲ ಹೊತ್ತು
ಮಲಗಿದ್ದ ಕಾಲಕ್ಕೆ
ಚುರುಕು ಮುಟ್ಟಿಸಿದ ಕಾಲ

ಹರೆಯದ ನನಗೆ
ಕಾಲೇಜ ಮೇಷ್ಟರ ಕೆಲಸ
ಸೂಟು ಬೂಟಿನ ವೇಷ
ಆ ಮೇಲೆ ಅಮಲದಾರಿಕೆ
ಎಲ್ಲ ನಡೆದಾಗಲೇ ಅವ್ವನನ್ನು
ಆಸ್ಪತ್ರೆಗೆ ಸೇರಿಸಿದ್ದು
ಕಾಲ ಕಳೆದು ಕೊಂಡು
ಕೋಲ ಹಿಡಿದದ್ದು
ನಿನ್ನೆ ಮೊನ್ನೆಯಂತೆ
ಬಾಲ್ಯವಿನ್ನು ಉಂಟೆಂಬಂತೆ
ಭಾವಿಸುವಾಗಲೇ ಅವ್ವನ ಸಾವು

ಅದರೊಟ್ಟಿಗೆ ಕಾಯದಾಯಾಸ ತೀರಿಸಲು
ಬಂದರೆ ಬೆಂಗಳೂರಿಗೆ
ರೌಡಿಗಳ ಕಾಟ
ಅಂಬೇಡ್ಕರ್ ಪಟದ ಕೆಳಗೆ
ದೌರ್ಜನ್ಯದ ದಂಡು

ಅಮಾಯಕರಿಗೆ ಗುಂಡು
ಕಂಡುಂಡ ಹಾದಿಯ ಗುಡಿಸಲುಗಳಲ್ಲೀಗ
ಮುಗಿಲು ಮುಟ್ಟೋ ಮಹಲುಗಳು
ಅಂತಲ್ಲಿ
ದೇಶ ವಿದೇಶಗಳ
ಅಹವಾಲುಗಳು
ಅವಿವೇಕಗಳು
ನೋಡ ನೋಡುತ್ತಿದ್ದಂತೆ
ಉಸಿರು ಬಿಗಿಹಿಡಿದ ಜನರ ಒಳಗೆ
ಒಳಪದರಗಳೊಳಗೆ ಕನಸ ಬಿತ್ತಿ
ಹಸಿರ ಹೊನ್ನು ಬಾಚಲು ಹವಣಿಸಿದ
ಬಿಳಿ ಜನರ ಆಟ
ಅರ್ಥವಾಗುವುದೇ ಎಲ್ಲ
ಗೋಣ ನೀಡುವರೆ
ಹೂತಿಟ್ಟ ಗೂಟಕ್ಕೆ ?

( ಚಿಂತಕ ರುದ್ರಪ್ಪ ಹನಗವಾಡಿ ಅವರ ‘ಊರು – ಬಳಗ’ ಕವನ ಸಂಕಲನದಿಂದ ‘ ನೆನಪು ‘ ಕವಿತೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಕೃತಿಯನ್ನು ಫ್ರೊ.ಬಿ.ಕೃಷ್ಣಪ್ಪ ಟ್ರಸ್ಟ್ 2013 ರಲ್ಲಿ ಪ್ರಕಿಸಿದೆ.)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕವಿತೆ | ಮಣ್ಣ ಮಕ್ಕಳು

Published

on

ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ
  • ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ

ಮಣ್ಣ ಮಕ್ಕಳು ನಾವು
ಹಗಳಿರುಳೆನ್ನದೆ ಬೆವರು ಬಸಿದು
ಹಸಿದ ಹೊಟ್ಟೆಯಲಿ ಉಸಿರು ಹಿಡಿದವರು
ಕಸದಲಿ ರಸ ತೆಗದು ಬದುಕಿನುದ್ದಕ್ಕೂ ಉಳ್ಳವರ
ಕಸುಬಿಗೆ ಆಳಾದವರು ಸವಳು ನೀರಲಿ ಮೈತೊಳೆದು
ಚಿಂದಿ ಅಂಗಿಯಲಿ ಶಾಲೆಗೆ ದಾಖಲಾದವರು.

ಬರಿಗಾಲಲಿ ಕಾಡು ದಾರಿಯಲಿ ಮೈಲು ದೂರ ನಡೆದು
ನೆಗ್ಗಿಲ ಮುಳ್ಳು ತುಳಿದವರು ; ನಿಬ್ಬು ನೆಗ್ಗಿದ ಪೆನ್ನಿನಲಿ
ಹೆಸರು ಬರೆಯಲು ಕಲಿತವರು ಹರಿದ ಪಠ್ಯದಲಿ ಅಕ್ಷರ ಹುಡುಕಿ ಒಡೆದ ಪ್ಲೇಟಿನಲಿ ಬರೆದವರು.

ತೂತು ಬಿದ್ದ ಸೂರಿನಲಿ ಇಣುಕಿದ ಚುಕ್ಕಿ ಚಂದ್ರಮರ ನೋಡಿ
ವಿದ್ಯುತ್ ದೀಪದ ಕನಸು ಕಂಡವರು
ಮೋಸ ವಂಚನೆಗೆ ಬಗ್ಗದೆ ಶೋಷಣೆಗೆ ಸಿಡಿದವರು
ಮಣ್ಣ ಮಕ್ಕಳು ನಾವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಬಿ.ಶ್ರೀನಿವಾಸ ಅವರ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ ಕೃತಿಯ ಕುರಿತು

Published

on


ಸಂಡೂರಿನ ಜನರ ಮುದುಡಿದ ಅಂಗಿಯ ಮೇಲೆ,ಹೆಂಗಸರು ಮಾಸಿದ ಸೀರೆಯ ಸೆರಗಿನ ಮೇಲೆ ಬಿ.ಶ್ರೀನಿವಾಸ ಅಕ್ಷರ ಬಿಡಿಸುತ್ತಾರೆ.

ಅನ್ನದ ಅಗುಳು,ಧೂಳು,ಕಾಗದದ ಚೂರು,ಆಟಿಕೆ ಸಾಮಾನು,ಕಿಡ್ನಿ,ಈ ಸಣ್ಣವು ಗಳಲ್ಲಿ ಜೀವಸಾಕ್ಷಿ ಹುಡುಕುವ ಕಥೆಗಳಿವು.ವೃತ್ತಿ ಮತ್ತು ಪ್ರವೃತ್ತಿಯಲ್ಲಿ ಅನ್ನದ ಅಗಳು,ಕಾಗದದ ಚೂರನ್ನು ಎತ್ತಿಹಿಡಿಯುವ ಗೆಳೆಯ ಶ್ರೀನಿವಾಸ *ಧೂಳನ್ನೇ ಅಕ್ಷರಗಳನ್ನಾಗಿಸಿದ ಲೇಖಕ.

  • ಬಸವರಾಜ ಹೂಗಾರ

ಇಲ್ಲಿನ ಹುಚ್ಚರ ಕತೆಗಳನ್ನು ಓದುವಾಗ ಕುಂ.ವೀ.ಯವರ ಹಾಗೂ ಸಾದತ್ ಹಸನ್ ಮಾಂಟೋ ಅವರ ಹುಚ್ಚರ ಕತೆಗಳು ನೆನಪಾಗುತ್ತವೆ.ಇಲ್ಲಿನ ನತದೃಷ್ಟರ ಬದುಕನ್ನು ಹಿಡಿದಿಡಲು ಲೇಖಕರು ಕಂಡುಕೊಂಡಿರುವ ಅಭಿವ್ಯಕ್ತಿ ವಿನ್ಯಾಸ ವಿಶಿಷ್ಟವಾಗಿದೆ. ಬರಹಗಳು ದೀರ್ಘವಾಗಿಲ್ಲ. ಚುಟುಕಾಗಿವೆ. ಕವನಗಳೊ, ಗದ್ಯಗಳೊ ಎಂದು ಹೇಳಲಾಗದ ರೂಪದಲ್ಲಿವೆ.

ಗಾಢವಾದ ಅರ್ಥವನ್ನು ಕೆಲವೇ ಸಾಲುಗಳಲ್ಲಿ ವ್ಯಂಗ್ಯ ಮತ್ತು ವಿಡಂಬನೆಗಳಲ್ಲಿ ಹಿಡಿಯಲು ಯತ್ನಿಸುತ್ತವೆ.
ಇಲ್ಲಿರುವ ಲೋಕದ ನೋವಿಗೆ ಮಿಡಿವ ಸಂವೇದನೆ,ಓದುವ ಓದುಗರನ್ನೂ ಆವರಿಸಿಕೊಂಡು,ಚಿಂತನೆಗೆ ಹಚ್ಚುತ್ತದೆ.ಓದುತ್ತ,ಓದುತ್ತಾ ನಿಟ್ಟುಸಿರು ಹೊಮ್ಮುತ್ತದೆ.ಮನಸ್ಸು ಮಂಕಾಗುತ್ತದೆ.ಇಂತಹ ಬರಹಗಳನ್ನು ಕೊಟ್ಟಿರುವ ಶ್ರೀನಿವಾಸ ತಮ್ಮ ಅಂತಃಕರಣ ,ಚೂಪಾದ ಗ್ರಹಿಕೆ,ಆಳವಾದ ಸಂವೇದನೆಗಳನ್ನು ಇತರೆ ಪ್ರಕಾರಗಳಲ್ಲಿಯೂ ಪ್ರಕಟಿಸುವ ಜರೂರಿಯಿದೆ.

  • ಡಾ.ರಹಮತ್ ತರೀಕೆರೆ

ಒಬ್ಬ ಮನುಷ್ಯ ಮತ್ತೊಬ್ಬನನ್ನು ಕಿತ್ತು ತಿನ್ನಬಾರದು.ಹೊಟ್ಟೆಪಾಡಿಗಾಗಿ ನಿರ್ವಹಿಸುವ ಪ್ರತಿ ಕೆಲಸವೂ ಸೃಜನಶೀಲವಾಗಿರಬೇಕು-ಎಂಬ ಧಾವಂತದಲ್ಲಿ ಹುಟ್ಟಿದ ಮನದ ಪ್ರಕ್ರಿಯೆಗಳಿಗೆಲ್ಲ ಇಲ್ಲಿ ಹರಡಿಕೊಂಡಿವೆ.

  • ಬಿ.ಶ್ರೀನಿವಾಸ,ಕೃತಿ ಲೇಖಕ

ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು ನೊಂದವರ ಮನದಲ್ಲಿ ಅಲ್ಪಾವಧಿ ಗುರುತು ಮೂಡಿಸಬಹುದು ನಿಮ್ಮ ಈ ಪುಸ್ತಕ ಮತ್ತು ಅದರಲ್ಲಿರುವ ಎಷ್ಟೋ ವಿಚಾರಗಳು ನನ್ನನ್ನು ಡಿಸ್ಟರ್ಬ್ ಮಾಡಿವೆ. ಕೇವಲ ವಾಟ್ಸಾಪ್ ಲೈನ್ ಸಾಕಾಗಲ್ಲ ಎದುರುಗಡೆ ಕುಳಿತು ಇನ್ನು ಹೆಚ್ಚು ತಿಳಿದುಕೊಳ್ಳಬೇಕೇನಿಸುತ್ತದೆ. ಸಂಡೂರಿನ ದಾರುಣ ಚಿತ್ರಗಳನ್ನು,ಕೋರ್ಟಿನ ಚಿತ್ರಗಳನ್ನು,ಬದುಕಿನ ಚಿತ್ರಗಳನ್ನು ಕಣ್ಣಿಗೆ ರಾಚುವಂತೆ ಮೂಡಿಸಿದ್ದೀರಿ.

ಸಾವಿಗಿಂತ ಹಸಿವು ಬಹಳ ಕ್ರೂರಿ ಎನ್ನುವುದು: ನೋವಿನ ಬದಲು ಹಸಿವಿನ ಏಟುಗಳು ಬೀಳಬೇಕಿತ್ತು ಎನ್ನುವ ಸಾಲುಗಳಂತೂ Geographical Hungrey ಪುಸ್ತಕ ನೆನಪಿಸುತ್ತವೆ. ಸೊಂಡೂರಿನ ಚಿತ್ರಗಳ ಮೂಡಿಸಿದೆ ಗಾಢ ವಿಷಾದತೆ, ನನ್ನನ್ನು ಹೊರಬರಲು ಬಿಡುತ್ತಿಲ್ಲ.

“ಉಳ್ಳವರು ಹೊತ್ತ ಮೂಟೆಗಳಲ್ಲಿ ಬಡವರ ಹಸಿವಿನದ್ದೇ ಭಾರ”ಇವೆಲ್ಲ ಹಸಿವನ್ನು ಅನುಭವಿಸಿದವರಿಗೆ ಮಾತ್ರ ಸರಿಯಾಗಿ ಅರ್ಥವಾಗುವ ಸಾಲುಗಳು.

ಇನ್ನು ,ಕೋರ್ಟಿನ ಚಿತ್ರಗಳು, ಎಷ್ಟು ಜನ ಇರ್ತಾರೆ ಇವನ್ನೆಲ್ಲ ಸೂಕ್ಷ್ಮ ವಾಗಿ ತಿಳಿದುಕೊಳ್ಳುವವರು ?
ಶಾಲೆ ಹಿಂದೆ ತಿರುಗಬಾರದು ಕೋರ್ಟ್ ಕಚೇರಿ ಮುಂದೆ ತಿರುಗಬಾರದು ಎಂದು ನಮ್ಮ ಜನಪದರು ಹೇಳ್ವ ಮಾತು ಎಷ್ಟೋ ಸಲ ಸತ್ಯ ಎನಿಸುತ್ತದೆ.

ನೀವು ಹಿಡಿದಿಟ್ಟ ಬದುಕಿನ ಚಿತ್ರಗಳಲ್ಲಿನ “ಶವಪೆಟ್ಟಿಗೆ ಸಣ್ಣದಿದ್ದಷ್ಟು ಹೊರುವುದು ಬಹಳ ಕಷ್ಟ “ಎಂಬ ಮಾತಂತೂ ಚಿಕ್ಕಮಕ್ಕಳ ತಂದೆತಾಯಿಯರ ಕಣ್ಣಲ್ಲಿ ನೀರು ತರಿಸುವುದು.

ತಲೆ ಮ್ಯಾಲೆ ಮಲ ಸುರುವಿಕೊಂಡೆವಲ್ಲ ಸರ್ ಅವತ್ತೇ… ನಾವ್ ಹುಟ್ಟಿದ್ದು ಎನ್ನುವ ಸವಣೂರಿನ ಭಂಗಿಯ ಮಾತನ್ನು ಎಷ್ಟು ಅರ್ಥಗರ್ಭಿತವಾಗಿ ಸೋ ಕಾಲ್ಡ್ ಸೊಸೈಟಿಗೆ ಮುಟ್ಟಿ ನೋಡಿಕೊಳ್ಳುವಂತೆ ಬರೆದಿದ್ದೀರಿ. ಆಕೆ ಏನನ್ನೋ ಆಯ್ಕೆ ಮಾಡಿಕೊಂಡಿದ್ದಾಳೆ ಎಂಬ ವಿಚಾರಗಳು ಕೇವಲ ವಿಚಾರಗಳಲ್ಲ ,ಬದುಕಿನ ಸತ್ಯ ಚಿತ್ರಣಗಳು ದಿನ ನಿತ್ಯ ನಮ್ಮ ನಡುವೆ ನಡೆಯುವಂತವು.ಅವನ್ನು ಕಾಣುವಂತ ದೃಷ್ಟಿ ಇದ್ದವರಿಗೆ ಮಾತ್ರ ಇವು ಕಾಣುತ್ತವೆ ಸರ್ .
ನಿಮ್ಮ ನೈಜ ದೃಷ್ಟಿಗೆ ದನ್ಯವಾದಗಳು ಸರ್, ಉಳಿದದ್ದು ಎದುರು ಬದುರು ಕುಳಿತು ಮಾತಾಡೋಣ

  • ಡಾ.ರಾಮಚಂದ್ರ ಹಂಸನೂರು, ಬೆಟಗೇರಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending