ಕ್ರೀಡೆ

11 ವರ್ಷಗಳ ನಂತರ ಭಾರತ ತಂಡಕ್ಕೆ ಐಸಿಸಿ ಟಿ-20 ವಿಶ್ವಕಪ್ ಕಿರೀಟ ; ಗಣ್ಯರ ಮೆಚ್ಚುಗೆ

Published

on

ಸುದ್ದಿದಿನಡೆಸ್ಕ್:ಬಾರ್ಬಡೋಸ್ ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ 7 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ರೋಹಿತ್ ಶರ್ಮ ನೇತೃತ್ವದ ಭಾರತ ತಂಡ, 17 ವರ್ಷಗಳ ನಂತರ ಐಸಿಸಿ ಪುರುಷರ ಟಿ-20 ವಿಶ್ವಕಪ್ ಗೆದ್ದಸಾಧನೆ ಮಾಡಿದೆ.

ಭಾರತ ನೀಡಿದ 177 ರನ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಲಷ್ಟೇ ಶಕ್ತಗೊಂಡಿತು. ದಕ್ಷಿಣ ಆಫ್ರಿಕಾ ಪರ ಹೆನ್ರಿಚ್ ಕ್ಲಾಸೆನ್ 52 ರನ್ ಗಳಿಸಿದರೆ, ಭಾರತ ತಂಡದ ಪರ ಹಾರ್ದಿಕ್ ಪಾಂಡ್ಯ 3, ಜಸ್ ಪ್ರಿತ್ ಬುಮ್ರಾ ಮತ್ತು ಅರ್ಷ್ ದೀಪ್ ಸಿಂಗ್ ತಲಾ 2 ವಿಕೆಟ್ ಪಡೆದರು.

ಟೂರ್ನಿಯಲ್ಲಿ ಅತ್ಯುತ್ತಮ ಇನಿಂಗ್ಸ್ ಆಡಿದ ವಿರಾಟ್ ಕೊಹ್ಲಿ ಸಹಜವಾಗಿಪಂದ್ಯ ಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಹಾಗೆಯೇ 8 ಪಂದ್ಯಗಳಿಂದ 15 ವಿಕೆಟ್ ಉರುಳಿಸಿದ ವೇಗಿ ಜಸ್ ಪ್ರಿತ್ ಬುಮ್ರಾ ಟೂರ್ನಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರು. 2007ರ ನಂತರ ಭಾರತ ಟಿ20 ವಿಶ್ವಕಪ್ ಗೆದ್ದರೆ, 2013ರ ಚಾಂಪಿಯನ್ಸ್ ಟ್ರೋಫಿ ಬಳಿಕ ಐಸಿಸಿ ಟ್ರೋಫಿ ತನ್ನದಾಗಿಸಿಕೊಂಡಿದೆ.

ಈ ಮಧ್ಯೆ, ಭಾರತ ತಂಡ 2ನೇ ಬಾರಿ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಕ್ರಿಕೆಟ್ ನ ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ನಿವೃತ್ತಿ ಪ್ರಕಟಿಸಿದ್ದಾರೆ. 2024ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನಿ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version