Connect with us

ಸಿನಿ ಸುದ್ದಿ

ಚೀಟಿಂಗ್ ಕೇಸ್‍ನಲ್ಲಿ ಟಗರು ಬೇಬಿ ಕೃಷ್ಣ..!

Published

on

ಸುದ್ದಿದಿನ ಡೆಸ್ಕ್: ಗರು ಸಿನಿಮಾ ನೋಡಿದವರಿಗೆ ಬೇಬಿ ಕೃಷ್ಣ ಎಂಬ ಪಾತ್ರ ಗಮನ ಸೆಳೆಯದೆ ಇರಲಾರದು. ಸಿನಿಮಾದಲ್ಲಿ ವಿಲನ್ ಆಗಿ ಕಾಣಿಸಿಕೊಂಡಿರುವ ದೇವತ್ತ ಅಲಿಯಾಸ್ ಬೇಬಿಕೃಷ್ಣ ವಂಚನೆ ಪ್ರಕರಣದಲ್ಲಿ ಸಿಲುಕಿದ್ದು ಎರಡು ದಿನಗಳ ಕಾಲ ಪೊಲೀಸ್ ವಶದಲ್ಲಿದ್ದಾರೆ.

ಉತ್ತರಹಳ್ಳಿಯ ನಿವೇಶನವೊಂದರ ಮಾರಾಟದಲ್ಲಿ ಉದ್ಯಮಿಗೆ ಮೋಸ ಮಾಡಿದ ಪ್ರಕರಣ ಸಂಬಂಧ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೇವದತ್ತ ವಿರುದ್ಧ ಪ್ರಕರಣ ದಾಖಲಾಗಿದೆ.

ದೇವತ್ತ ಅವರು ಉದ್ಯಮಿಯನ್ನು ನಂಬಿಸುವ ಸಲುವಾಗಿ ಹೇಳಿರುವ ಸುಳ್ಳುಗಳು ಇಂಟರೆಸ್ಟಿಂಗ್ ಆಗಿದ್ದು, ಅದನ್ನು ನಂಬಿಯೇ ಉದ್ಯಮಿಯು ಹಣ ನೀಡಿದ್ದಾಗಿ ತಿಳಿದುಬಂದಿದೆ.

ದೇವತ್ತ ಅವರು ತಾನು ಮಾಜಿ ಎಂಎಲ್‍ಎ ವೆಂಕಟರಾಯಪ್ಪ ಅವರ ಮೊಮ್ಮಗ ಎಂದು ಪರಿಚಯಿಸಿಕೊಂಡಿದ್ದಾನೆ. ಅಲ್ಲದೇ ಟಗರು ಸಿನಿಮಾಕ್ಕೆ ತಾನೇ ಹಣ ಹೂಡಿರುವುದಾಗಿಯೂ ಹೇಳಿ ನಂಬಿಸಿದ್ದಾನೆ. ಈ ವಿಷಯ ತಿಳಿದ ಟಗರು ಸಿನಿಮಾದ ಅಸಲಿ ನಿರ್ಮಾಪಕ ಕೆ.ಪಿ. ಶ್ರೀಕಾಂತ್ ಅವರು ಬೆಚ್ಚಿಬಿದ್ದಿದ್ದಾರೆ.

ಉದ್ಯಮಿಯನ್ನು ನಂಬಿಸುವ ಸಲುವಾಗಿ ದೇವದತ್ತ ಅರು ಇನ್ನಷ್ಟು ಸುಳ್ಳು ಹೇಳಿದ್ದಾರೆ. ಎಸ್‍ಎಸ್ ರಾಜಮೌಳಿ ಅವರ ಮಹಾಭಾರತ ಸಿನಿಮಾದಲ್ಲಿ ತಾವು ಶಕುನಿ ಪಾತ್ರ ನಿರ್ವಹಿಸುತ್ತಿರುವುದಾಗಿಯೂ ಹೇಳಿ ವಂಚಿಸಿದ್ದಾರೆ. ತಾನು ಹೇಳಿದ ಸುಳ್ಳುಗಳನ್ನುಇನ್ನಷ್ಟು ಪುಷ್ಟೀಕರಿಸುವ ದೃಷ್ಟಿಯಿಂದ ದೇವತ್ತ ಅವರು ಮಾಜಿ ಉಪ ಮುಖ್ಯಮಂತಿ ಅಶೋಕ್, ನಟ ಶಿವರಾಜ್ ಕುಮಾರ್, ಬೆಂಗಳೂರು ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಅವರೊಂದಿಗೆ ತೆಗೆಸಿಕೊಂಡಿರುವ ಫೋಟೊಗಳನ್ನು ತೋರಿಸಿದ್ದಾರೆ. ಅಲ್ಲದೇ, ತನ್ನ ಹೆಂಡತಿ ಇನ್ಫೋಸಿಸ್ ಸಂಸ್ಥೆಯಲ್ಲಿ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದಾಳೆ ಎಂದೂ ಸುಳ್ಳು ಹೇಳಿದ್ದಾನೆ.

ದೇವದತ್ತ ಹೇಳಿದ ಸುಳ್ಳನ್ನು ನಂಬಿ ಉದ್ಯಮಿಯು 75 ಲಕ್ಷ ರೂ. ಬೆಲೆಯ ನಿವೇಶನಕ್ಕೆ 52 ಲಕ್ಷ ರೂ. ಮುಂಗಡ ಹಣ ನೀಡಿದ್ದರು. ಮರುದಿನ ಬೆಳಗ್ಗೆ ನೋಂದಣಿ ಕಚೇರಿಗೆ ಬಂದು ಸಹಿ ಹಾಕುವುದಾಗಿ ಹೇಳಿದ್ದರು. ಅದರಂತೆ ನೋಂದಣಿ ಕಚೇರಿಯಲ್ಲಿ ಕಾಯುವಾಗ ದೇವದತ್ತ ಬರಲಿಲ್ಲ. ಅನುಮಾನಗೊಂಡು ನಿವೇಶನದ ಬಳಿ ಹೋಗಿ ವಿಚಾರಿಸಿದಾಗ ಸೈಟ್ ದೇವದತ್ತ ಅವರ ಹೆಸರಿನಲ್ಲಿಲ್ಲ ಎಂಬುದು ಗೊತ್ತಾಗಿದೆ. ದತ್ತ ಅವರ ಮೇಲೆ ಪ್ರಕರಣ ದಾಖಲಾದ ಸಮಯದಲ್ಲಿ ಅವರು ಗಾಂಧಿ ನಗರದ ನಿವೇಶನವೊಂದರ ಖರೀದಿಯಲ್ಲಿ ತೊಡಗಿದ್ದರು ಎನ್ನಲಾಗಿದೆ.

ಇದೇ ಸಮಯದಲ್ಲಿ ಅವರನ್ನು ಪೊಲೀಸರು ವಶಕ್ಕೆ ಪಡೆದು ಎರಡು ದಿನ ವಿಚಾರಣೆ ನಡೆಸಿದ್ದು, ನಡೆದದ್ದು ಏನೆಂಬ ಸಂಪೂರ್ಣ ಚಿತ್ರಣ ಸಿಕ್ಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಗುರುಪ್ರಸಾದ್‌ ಮೇಲೆ ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್‌ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್‌ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್‌ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್‌ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್‌ ಗೌಡ.

ಹಣ ವಾಪಸ್‌ ಕೊಡಲಾಗದೇ ಕಿರಿಕ್‌ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್‌ ಅವರು. ಈ ಬಗ್ಗೆ ಕೋರ್ಟ್‌ ಮೆಟ್ಟಿಲೇರಿದ್ದ, ಗುರುಪ್ರಸಾದ್‌ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್‌ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್‌. ಮೆಡಿಕಲ್‌ ರಿಪೋರ್ಟ್‌ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.

ನಿನ್ನೆ ಅಂದರೆ ನವೆಂಬರ್‌ 2ಕ್ಕೆ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್‌ ರೀಚಬಲ್‌ ಬಂದಿತ್ತು ಮೊಬೈಲ್‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

52 ವರ್ಷದ ಕನಕಪುರ ಮೂಲದ ಗುರುಪ್ರಸಾದ್‌ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್‌ ಚಿತ್ರದ ಮೂಲಕ ಮನೆಮಾತಾಗಿದ್ದರು.

ನಿರ್ದೇಶಕ ʻಮಠʼ ಗುರುಪ್ರಸಾದ್‌ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್‌ ಡೇ ವಿಶ್‌ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್‌ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್‌ ಅವರ ಮೊಬೈಲ್‌ ನಾಟ್‌ ರೀಚಬಲ್‌ ಆಗಿತ್ತು, ಗುರುಪ್ರಸಾದ್‌ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending