ದಿನದ ಸುದ್ದಿ
ತಾಜ್ ಮಹಲ್ ಸಂರಕ್ಷಣೆ | ಕೇಂದ್ರವನ್ನು ತರಾಟೆಗೆ ತೆಗೆದು ಕೊಂಡ ಸುಪ್ರೀಂ
ಸುದ್ದಿದಿನ ಡೆಸ್ಕ್ | ಜಗತ್ಪ್ರಸಿದ್ಧ ಐತಿಹಾಸಿಕ ಸ್ಮಾರಕ ತಾಜ್ಮಹಲ್ ರಕ್ಷಣೆ ಮಾಡುವಲ್ಲಿ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರದ ನಿಷ್ಕ್ರಿಯತೆ ಗಮನಿಸಿದ ಸುಪ್ರೀಂ ಕೋರ್ಟ್ ಈ ಎರಡು ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿದೆ. ಮುಘಲ್ ಕಾಲದ ಸ್ಮಾರಕ ಸಂಕ್ಷರಣೆ ಬಗ್ಗೆ ಆದಿತ್ಯನಾಥ್ ಸರ್ಕಾರ ದೂರದೃಷ್ಟಿ ಯೋಜನೆ ಸಲ್ಲಿರುವಲ್ಲಿ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ಆಕ್ರೋಶ ಹೊರಹಾಕಿದೆ.
ತಾಜ್ ಮಹಲ್ ವೀಕ್ಷಣೆಗೆ ಪ್ರತಿ ವರ್ಷವೂ ಲಕ್ಷಾಂತರ ಪ್ರವಾಸಿಗಳು ಭೇಟಿ ನೀಡುತ್ಥಾರೆ. ಇಂತಹ ಸ್ಮಾರಕದ ನಿರ್ವಹಣೆ ಕುರಿತು ಸಲ್ಲಿಸಿದ್ದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಆಲಿಸುತ್ತಿದ್ದ ವೇಳೆ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿದೆ. ತಾಜ್ಮಹಲ್ ಸಂರಕ್ಷಣೆ ಕುರಿತು ಸಾಂವಿಧಾನಿಕ ಸ್ಥಾಯಿ ಸಮಿತಿ ನೀಡಿರುವ ವರದಿ ಕಠಿಣ ಕ್ರಮ ಕೈಗೊಂಡ ಬಗ್ಗೆ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್ ತಿಳಿಸಿದೆ. ಅಲ್ಲದೇ ತಾಜ್ ಮಹಲ್ ರಕ್ಷಣೆಗೆ ಅಗತ್ಯತೆಗಳ ಬಗ್ಗೆ ವರದಿ ಸಲ್ಲಿಸುವಂತೆ ತಾಕೀತು ಮಾಡಿದೆ.
ತಾಜ್ಮಹಲ್ ಸ್ಮಾರಕ ಆವರಣದ ಒಳಗೆ ಮತ್ತು ಅದರ ಸುತ್ತಲಿನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಾಲಿನ್ಯ ಬಗ್ಗೆ ಕಾನ್ಪುರದ ಐಐಟಿ ಸಂಶೋಧಕರು ಮಾಹಿತಿ ಕಲೆ ಹಾಕುತ್ತಿದ್ದಾರೆ, ಇದನ್ನು ಇನ್ನು ನಾಲ್ಕು ತಿಂಗಳಲ್ಲಿ ಸಲ್ಲಿಸಲಿದ್ದಾರೆ. ಇದಕ್ಕಾಗಿ ವಿಶೇಷ ಸಮಿತಿ ರಚನೆ ಮಾಡಲಾಗಿದೆ ಎಂದು ಹೇಳಿದೆ.
ಸ್ಮಾರಕ ಸಂರಕ್ಷಣಯಲ್ಲಿ ವಿಫಲವಾಗಿದೆ ಎಂದು ಪ್ರಸಕ್ತ ಸಾಲಿನ ಆರಂಭದಲ್ಲಿ ಸುಪ್ರೀ ಕೋರ್ಟ್ ಆರ್ಖೆಲಾಜಿಕಲ್ ಸರ್ವೇ ಆಫ್ ಇಂಡಿಯಾ (ಎಎಸ್ಐ)ವನ್ನು ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೇ ಶ್ವೇತ ವರ್ಣದ ಮಾರ್ಬಲ್ ಹಳದಿ ಬಣ್ಣಕ್ಕೆ ತಿರುಗುತ್ತಿರುವುದನ್ನು ಗಮನಿಸಿ ಇದೇ ವೇಳೆ ಉಲ್ಲೇಖ ಮಾಡಿದೆ. ತಾಜ್ಮಹಲ್ ಸಂರಕ್ಷಣೆ ಕುರಿತು ವಿಚಾರಣೆಯನ್ನು ಜುಲೈ 31ಕ್ಕೆ ಕಾಯ್ದಿರಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9985715401

ದಿನದ ಸುದ್ದಿ
ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
ಸುದ್ದಿದಿನ,ದಾವಣಗೆರೆ:ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್ ಸೇರಿದಂತೆ ವಿವಿಧ ಅಂಚೆ ಸೇವೆಗಳನ್ನು ಮನೆಯಿಂದಲೇ ಬುಕ್ ಮಾಡುವ ಅವಕಾಶವನ್ನು ಪಡೆಯಬಹುದು. ಇದರ ಮೂಲಕ ಅಂಚೆ ಕಚೇರಿಯಲ್ಲಿ ಸಾಲಿನಲ್ಲಿ ನಿಲುವ ಅನಿವಾರ್ಯತೆ ಕಡಿಮೆಯಾಗುತ್ತದೆ ಹಾಗೂ ಸಮಯದ ಉಳಿತಾಯವಾಗುತ್ತದೆ.
ಸೇವೆಯನ್ನು ಈ ಮೂಲಕ https://app.indiapost.gov.in/customer.selfservice/home ಪೂರ್ಣಗೊಳಿಸಿದ ನಂತರ ಸೃಷ್ಟಿಯಾಗುವ ಲೇಬಲ್, ಕ್ಯೂಆರ್ ಅನ್ನು ಮುದ್ರಿಸಿ ಹತ್ತಿರದ ಯಾವುದೇ ಅಂಚೆ ಕಚೇರಿಯಲ್ಲಿ ಸ್ಪೀಡ್ ಫೆÇೀಸ್ಟ್, ಪಾರ್ಸೆಲ್ ಅನ್ನು ಬುಕ್ಕಿಂಗ್ ಸಂಖ್ಯೆಯ ಮೂಲಕ ಹಸ್ತಾಂತರಿಸಬಹುದು. ಸಾರ್ವಜನಿಕರು ಈ ನವೀನ ಡಿಜಿಟಲ್ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಡಿಸೆಂಬರ್ 26 ಕೊನೆಯ ದಿನವಾಗಿದೆ.
ವಿಶೇಷ ಘಟಕ ಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಎಂದು ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸುವುದು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಪದವಿಯ ಎಲ್ಲ ವರ್ಷಗಳ ಅಂಕಪಟ್ಟಿಗಳು, ಸ್ನಾತ್ತಕೋತ್ತರ ಪದವಿಯ ಎಲ್ಲ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂಗಳ ಶಿಷ್ಯ ವೇತನ ನೀಡಲಾಗುವುದು. ತರಬೇತಿಯು 2026 ರ ಜನವರಿಯಿಂದ ಡಿಸೆಂಬರ್ವರೆಗೆ 12 ತಿಂಗಳ ಅವಧಿಯದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸಲು ಯಾವುದೇ ಅವಕಾಶ ಇರುವುದಿಲ್ಲ.
ತರಬೇತಿಯ ಅವಧಿಯಲ್ಲಿ ತರಬೇತಾರ್ಥಿಗಳು ಬೇರೆ ಉದ್ಯೋಗ ಮಾಡುವಂತಿಲ್ಲ. ತರಬೇತಿಯ ಅವಧಿಯ ಮಧ್ಯದಲ್ಲಿ ಬಿಟ್ಟು ಹೋದರೆ, ಮೂಲ ದಾಖಲಾತಿಗಳನ್ನು ಅವಧಿಗೆ ಮುನ್ನ ಹಿಂದಿರುಗಿಸುವುದಿಲ್ಲ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.
ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇಲ್ಲಿ, ಮೊ.9480841218 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕರಾದ ಧನಂಜಯ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಬುಧುವಾರದಿಂದ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೆಕ್ಕೆಜೋಳ ಖರೀದಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿ ರೈತರಿಂದ ಎಕರೆಗೆ 12 ಕ್ವಿಂಟಾಲ್ ಹಾಗೂ ಗರಿಷ್ಠ 50 ಕ್ವಿಂಟಾಲ್ನಂತೆ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್ಗೆ ರೂ.2400.00 ರಂತೆ ಖರೀದಿಸಲಾಗುವುದು. ಮೆಕ್ಕೆಜೋಳ ಖರೀದಿದಾರರು ಡಿಸ್ಟಿಲರಿ ಮಾಲೀಕರಿಂದ ಮಾರಾಟದ ಮೊತ್ತ ಪಡೆದ ದಿನಾಂಕದಿಂದ ಮೂರು ದಿನಗಳಲ್ಲಿ ಸಂಬಂಧಪಟ್ಟ ರೈತರಿಗೆ ಡಿಬಿಟಿ ಮೂಲಕ ಪಾವತಿಸಲಾಗುವುದು. ಖರೀದಿ ಪ್ರಕ್ರಿಯೆಗೆ ಎನ್ಇಎಂಎಲ್ (NEML) ಸಂಸ್ಥೆಯ ತಂತ್ರಾಂಶ ಅಳವಡಿಸಿಕೊಂಡು ಸರ್ಕಾರದ ಪ್ರೂಟ್ಸ್ ಪೊರ್ಟಲ್(FRUITS Portal) ಮತ್ತು ಡಿಬಿಟಿ ಸಂಯೋಜನೆಯೊಂದಿಗೆ ರೈತರ ನೊಂದಣಿ ಕಾರ್ಯ ನಿರ್ವಹಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ 730 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಗುರಿಯನ್ನು ಹೊಂದಲಾಗಿದೆ. ರೈತರು ಮೆಕ್ಕೆಜೋಳ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಇದರ ಪ್ರಯೋಜನೆ ಪಡೆದುಕೊಳ್ಳುವಂತೆ ತಿಳಿಸಿದರು. ಸಹಕಾರ ಇಲಾಖೆ ಮತ್ತು ಎಪಿಎಂಸಿ ಅಧಿಕಾರಿಗಳು ಮೆಕ್ಕೆಜೋಳ ಖರೀದಿ ಕುರಿತು ಮಾಹಿತಿಯುಳ್ಳ ಕರಪತ್ರಗಳನ್ನು ಮುದ್ರಿಸಿ ರೈತರಿಗೆ ನೀಡಬೇಕು. ಮೆಕ್ಕೆಜೋಳ ಖರೀದಿಯಲ್ಲಿ ಯಾವುದೇ ಗೊಂದಲ ಆಗದಂತೆ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಧುಸೂಧನ್, ಸಹಕಾರ ಇಲಾಖೆ ಉಪನಿಬಂಧಕ ಮಧು ಶ್ರೀನಿವಾಸ್, ಅಬಕಾರಿ ಇಲಾಖೆಯ ಉಪ ಆಯುಕ್ತ ಜುನೈದ್ , ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಿಯಾವುಲ್ಲಾ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ ಪ್ರಸಾದ್ ಹಾಗೂ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ6 days agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
-
ದಿನದ ಸುದ್ದಿ3 days agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ2 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ2 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ3 hours agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ

