Connect with us

ಭಾವ ಭೈರಾಗಿ

ಆ ಒಂಟಿತನವನ್ನ ‘ದಿವ್ಯ ಏಕಾಂತ’ ಅಂದುಕೊಂಡುಬಿಡಿ

Published

on

ಪರಿಸ್ಥಿತಿಯನ್ನ ಒಂದಲ್ಲಾ ಒಂದು ಕಾಲಘಟದಲ್ಲಿ ಎಲ್ಲರೂ ಅನುಭವಿಸಿರ್ತಾರೆ. ಏನುಬೇಕಾದ್ರೂ ಅನುಭವಿಸಬಹುದು ಆದರೆ ಈ ಒಂಟಿತನ ಇದೆಯಲ್ಲ ಅದರಷ್ಟು ಭಯಾನಕ ಹಾಗೂ ಅಪಾಯಕಾರಿ ಮತ್ತೊಂದಿಲ್ಲ. ಯಾಕಂದ್ರೆ ಈ ಒಂಟಿತನ ಬಹಳಷ್ಟು ಜನರ ಜೀವನವನ್ನ ಉದ್ದಾರ ಮಾಡಿದ್ರೆ ಅಷ್ಟೇ ಪ್ರಮಾಣದಲ್ಲಿ ಹಾಳಾಗುವ ದಾರಿಯನ್ನೂ ತೋರಿಸಿದೆ.

ಆರಂಭದಲ್ಲಿ ಒಂಟಿತನ ಅಂದರೇನು ಅಂತಾನೇ ಗೊತ್ತಿರಲ್ಲ. ಜೊತೆಲಿ ಯಾರಾದ್ರೂ ಇದ್ದು ಯಾವುದೋ ಒಂದು ಘಟ್ಟದಲ್ಲಿ ಅವರು ನಮ್ಮನ್ನ ಬಿಟ್ಟು ಹೋದಾಗಲೇ ಮೊದಲಬಾರಿಗೆ ಒಂಟಿತನದ ಅನುಭವವಾಗೋದು. ಅದು ನಮ್ಮೊಂದಿಗೆ ಬೆಳೆದ ಗೆಳೆಯನೊ, ಬೆಚ್ಚಗಿನ ಪ್ರೀತಿ ನೀಡಿದ್ದ ಗೆಳತಿಯೋ, ನಿನ್ನೆವರೆಗೂ ಜೊತೆಗೆ ಆಡಿ ಇಂದು ಮದುವೆಯಾಗಿ ಹೋದ ಅಕ್ಕನೋ, ಅಥವಾ ಮರೆತೂ ಮರೆಯಲಾರೆ ಎಂಬ ನಿಮ್ಮ ಜೀವನದ ಯಾವುದಾದರೂ ಒಂದು ಪಾತ್ರವೋ ನೀವು ನಿರೀಕ್ಷಿಸದ ಯಾವುದೋ ಒಂದು ದಿನ ನಿಮ್ಮಿಂದ ಇದ್ದಕ್ಕಿದ್ದಂತೆ ದೂರವಾಗಿಬಿಡ್ತಾರೆ. ನಿನ್ನೆವರೆಗೂ ಆ ಮಗುವಿನ ಭವಿಷ್ಯದ ಕುರಿತು ಸಾವಿರಾರು ಕನಸುಕಟ್ಟಿದ ತಾಯಿ ಇದ್ದಕ್ಕಿದ್ದಂತೆ ಮಗುವಿನ ಉಸಿರು ನಿಂತು ಮಡಿಲು ಬರಿದಾದಾಗ ಸಹಿಸುವುದಾದರೂ ಹೇಗೆ ಅಲ್ವಾ,,,

ಇವೆಲ್ಲ ಒಂದು ಥರಾ ಆದರೆ ಬಹುತೇಕ ಯುವ ಮನಸ್ಸುಗಳು ಅನುಭವಿಸೋದು ಅದೊಂದೇ ರೀತಿಯ ಒಂಟಿತನ . ಅದೇ ಎಲ್ಲೋ ಹುಟ್ಟಿ ಎಲ್ಲೋ ಬೆಳೆದು ಯಾವುದೋ ಊರಿಂದ ಬಂದ ಅವನನ್ನೋ ಅವಳನ್ನೋ ಜೀವ ಹೋಗುವಷ್ಟು ಇಷ್ಟಪಟ್ಟುಬಿಡ್ತೀವಿ, ಅವಳ ಅಥವಾ ಅವನ ಹಿನ್ನೆಲೆ ಏನು ಅವರ ಮನೋಧರ್ಮ ಹೇಗಿದೆ, ಆಲೋಚನೆಗಳಾದ್ರೂ ನಮಗೆ ಹೊಂದಿಕೊಳ್ಳುತ್ತಾ ಇದ್ಯಾವುದನ್ನೂ ಅಷ್ಟು ಸೀರಿಯಸ್ಸಾಗಿ ಯೋಚನೇನೆ ಮಾಡಿರಲ್ಲ, ಅದೆಲ್ಲದನ್ನೂ ಮೀರಿದ ಅದ್ಯಾವುದೋ ಒಂದು ಕಾರಣಕ್ಕೆ ಅವರನ್ನ ಹಚ್ಚಿಕೊಂಡಿರ್ತೀವಿ, ಎಷ್ಟರಮಟ್ಟಿಗೆ ಅಂದ್ರೆ ಜಗತ್ತಿನಲ್ಲಿ ಯಾರೂ ಇಲ್ಲದಿದ್ರೂ ಪರವಾಗಿಲ್ಲ ಅವರೊಬ್ಬರಿದ್ರೆ ನಾನು ಖುಷಿಯಾಗಿರಬಲ್ಲೆ ಅನ್ನುವಷ್ಟರಮಟ್ಟಿಗೆ. ಇದೆಲ್ಲದಕ್ಕೂ ರಾಯಭಾರಿಯಾಗೋದು ಅದೇ ಮೊಬೈಲ್ ಫೋನ್, ಅದು ಬಡಿದುಕೊಳ್ತು ಅಂದ್ರೆ ಅದು ಅವನೊಬ್ಬನದೇ ಕಾಲ್ ಆಗಿದ್ರೆ ಸಾಕು ಅನ್ನುವಷ್ಟರ ಮಟ್ಟಿಗೆ ಅವಳು ಅವನನ್ನ ಇಷ್ಟ ಪಟ್ಟಿರ್ತಾಳೆ. ಅವನೂ ಅಷ್ಟೆ ಮೊಬೈಲ್ ರಿಂಗಿಂಗ್ ಮೋಡ್ ನಲ್ಲಿದೆ ಅಂತ ಗೊತ್ತಿದ್ದರೂ ಅವಳ ಫೋನಿಗಾಗಿ ಕಾದು ಕಾದು ಐದುನಿಮಿಷಕ್ಕೊಮ್ಮೆ ತನ್ನ ಮೊಬೈಲ್ ನ ಜೇಬಿಂದ ತೆಗೆದು ಚೆಕ್ ಮಾಡ್ತಾನೆ. ಹೀಗಿದ್ದ ಅವರಿಬ್ಬರೂ ಪ್ರೇಮಿಗಳಾಗಿರಲೇಬೇಕು ಅಂತ ನಿಯಮವೇನಿಲ್ಲ, ಹೆಸರೇ ಇಡಲಾಗದ ಅದ್ಯಾವುದೋ ಬಂಧ ಅವರಿಬ್ಬರನ್ನ ಕಟ್ಟಿಹಾಕಿರುತ್ತೆ. ಹೀಗಿದ್ದವರು ಅದ್ಯಾವುದೋ ಒಂದು ಸಂಧರ್ಭದಲ್ಲಿ ಒಬ್ಬರು ಮಾಡಿದ ದುಡುಕಿಗೋ, ಸಣ್ಣ ತಪ್ಪಿಗೋ ಅಥವಾ ಕಾರಣವೇ ಅಲ್ಲದ ಯಾವುದೋ ಕಾರಣಕ್ಕೊ ತಮ್ಮ ತಮ್ಮ ಈಗೋಗಳಿಗಾಗಿ ದೂರ ಆಗ್ಬಿಡ್ತಾರೆ. ಆಗ ಶುರುವಾಗುತ್ತೆ ನೋಡಿ ಈ ಒಂಟಿತನ, ಬದುಕಿನಲ್ಲಿ ನನಗೂ ಇಂಥಾ ಒಂದು ಕ್ಷಣ ಬರಬಹುದು ಅಂತ ದೇವರಾಣೆ ಯಾರೂ ಊಹಿಸಿರಲ್ಲ. ಇದುವರೆಗೂ ಸಾವಿರಬಾರಿ ಕೇಳಿದರೂ ಏನೂ ಅನ್ನಿಸದ ಅದ್ಯಾವುದೋ ಫೀಲಿಂಗ್ ಸಾಂಗ್ ನ್ನ ಮತ್ತೆ ಮತ್ತೆ ಕೇಳಬೇಕು ಅನ್ನಿಸುತ್ತೆ ಅದೇ ಒಮಟಿತನ.

ಈ ಒಂಟಿತನವನ್ನ ಸರಿಯಾಗಿ ನಿಭಾಯಿಸಬಲ್ಲವರು ಏನು ಬೇಕಾದ್ರೂ ಸಾಧಿಸಬಹುದು. ನನಗೆ ಜೀವನವೇ ಬೇಡ ನನ್ನಪಾಡಿಗೆ ನನ್ನ ಬಿಟ್ಟುಬಿಡಿ ಅಮತ ಅಂದವನು ಯಾವ ಕೆಲಸವನ್ನೂ ಮಾಡದೇ ಜೀವನ ಹಾಳುಮಾಡಿಕೊಳ್ಳಬಹುದು ಅಥವಾ ಇದೇ ಒಂಟಿತನವನ್ನ ಏಕಾಂತ ಅಂತ ಅಂದುಕೊಮಡು ಕೈಗೆ ಸಿಕ್ಕ ಪುಸ್ತಕವನ್ನೆಲ್ಲಾ ಓದಿ ದೊಡ್ಡ ಜ್ಞಾನಿಯಾಗಬಹುದು. ಈ ಸಮಯದಲ್ಲಿ ಮನಸಲ್ಲಿ ಹುಟ್ಟೋ ಹಟ ಇದೆಯಲ್ಲ ಆ ಹಠ ಬೆಂಕಿಯಿದ್ದಂತೆ ಆ ಬೆಂಕಿಯನ್ನ ಸರಿಯಾಗಿ ಬಳಸಿಕೊಂಡು ಒಲೆ ಹಚ್ಚಿ ಅಡುಗೆ ಮಾಡಿ ಸಾವಿರಾರು ಜನರಿಗೆ ಊಟ ಹಾಕಬಹುದು ಅಥವಾ ಮತ್ತೊಂದು ರೀತಿಯಲ್ಲಿ ಬಳಸಿ ಯಾರದಾದರೂ ಮನೆಗೆ ಬೆಂಕಿಹಚ್ಚಿ ಮಸಣ ಮಾಡಿಬಿಡಬಹುದು. ಈ ಆಯ್ಕೆ ನಮ್ಮಕೈಯ್ಯಲ್ಲೇ ಇರುತ್ತೆ.

ಆ ಒಂಟಿತನದಲ್ಲಿ ಹುಚ್ಚುಹಿಡಿದವರಂತೆ ಯಾವುದಾದರೂ ಸಾಹಸಗಳನ್ನು ಮಾಡಬಹುದು. ನಮ್ಮಿಂದ ಕಲಿಯಲು ಅಸಾಧ್ಯ ಅನ್ನುವಂಥದ್ದೇನೋ ಒಂದನ್ನು ಕಲಿತು ಮುಗಿಸಿಬಿಡಬಹುದು ಯಾಕಂದ್ರೆ ಆಗ ನಮಗೆ ನಾವು ಬ್ಯುಸಿಯಾಗಿರಬೇಕು ಅಷ್ಟೇ. ಹೌದು ಇದೇ ಅದಕ್ಕಿರುವ ಏಕೈಕ ಮಾರ್ಗ. ಅಂತಹಾ ಒಂದು ಒಂಟಿತನ ನಿಮ್ಮಬಾಳಲ್ಲಿ ಬಂದಾಗ ನಿಮ್ಮನ್ನ ನೀವು ಎಷ್ಟು ಸಾಧ್ಯವೋ ಅಷ್ಟು ಬ್ಯುಸಿಯಾಗಿಟ್ಟುಕೊಳ್ಳುವುದು ಉತ್ತಮ.

ಕೈಗೆ ಸಿಕ್ಕ ಕೆಲಸ ಮಾಡಿ, ಯಾರೊಮದಿಗೆ ಮಾತಾಡಿದ್ರೆ ಮನಸಿಗೆ ನೆಮ್ಮದಿ ಅನ್ನಿಸುತ್ತೋ ಅವರೊಂದಿಗೆ ಮಾತಾಡಿ. ಮನಸಿಗೆ ಮುದ ಅನ್ನೋ ಪುಸ್ತಕ ಓದಿ, ಹೊಸದಾಗಿ ಏನಾದರೂ ಕಲಿಯಿರಿ. ಹೀಗೆ ಬ್ಯುಸಿಯಾಗಿರೋಕೆ ಪ್ರಯತ್ನಿಸಿದರೆ ನಿಮಗೆ ಗೊತ್ತಿಲ್ಲದೇ ಈ ಹಾಳು ಒಂಟಿತನ ದಿವ್ಯ ಏಕಾಂತವಾಗಿ ಪರಿಣಮಿಸಿರುತ್ತೆ. ಆ ದಿವ್ಯ ಏಕಾಂತ ನಮ್ಮಿಂದ ಯಾವುದಾದರೂ ಒಂದು ಸಾಧನೆ ಮಾಡಿಸಿಬಿಟ್ಟಿರುತ್ತೆ. ಇವನಿಮದ ಇದು ಹೇಗೆ ಸಾಧ್ಯ ಅನ್ನುವಷ್ಟರ ಮಟ್ಟಿಗೆ ನಾವು ಯಾವುದೋ ಒಂದು ಸಾಧನೆ ಮಾಡಿರ್ತೇವೆ, ಆಮೇಲೆ ಯಾರಾದರೂ ನಮ್ಮ ಏಕಾಂತಕ್ಕೆ ಭಂಗ ತಂದರೆ ಅವರಬಗ್ಗೆಯೇ ಕೋಪ ಬರುತ್ತೆ.

ದಿನೇ ದಿನೇ ನಾವು ನಮ್ಮನ್ನ ನೋಡಿಕೊಳ್ಳುವ ರೀತಿಯನ್ನ ಬದಲಿಸಿಕೊಳ್ತಾ ಅದ್ಯಾವತ್ತೋ ಒಂದು ದಿನ ನಮ್ಮಬಗ್ಗೆ ನಾವು ಹೆಮ್ಮೆ ಪಡ್ತಿರ್ತೀವಿ. ಒಬ್ಬರೇ ಇರೋ ಆ ಕ್ಷಣವನ್ನ ನಮ್ಮದೇ ರೀತಿಯಲ್ಲಿ ಎಂಜಾಯ್ ಮಾಡ್ತಿರ್ತೀವಿ. ಆ ನಂತರದಲ್ಲಿ ಎಷ್ಟೇ ಒತ್ತಡದ ಕೆಲಸವಿದ್ದರೂ ಸ್ವಲ್ಪಹೊತ್ತು ಈ ಏಕಾಂತ ಅನ್ನೋ ಥೆರಪಿ ತಗೊಂಡ್ರೆ ಎಲ್ಲಾ ಸುಲಭ ಅನ್ನಿಸಿಬಿಡುತ್ತೆ. ಯಾಕಂದ್ರೆ ನಾವು ನಮ್ಮ ಜೊತೆಗೂ ಸ್ವಲ್ಪಕಾಲ ಕಳೆಯಬೇಕಿರುತ್ತೆ. ಊರೆಲ್ಲರ ಜೊತೆಗು ಮಾತಾಡೋ ನಾವು ನಮ್ಮ ಆತ್ಮದ ಜೊತೆ ಮಾತಾಡಬೇಕಲ್ವಾ, ನಮ್ಮ ಬಗ್ಗೆಯೂ ನಾವು ಸ್ವಲ್ಪ ಚಿಂತಿಸಬೇಕಲ್ವಾ, ಯಾಕೆ ಹುಟ್ಟಿದ್ದೆ, ಏನು ಮಾಡಿದೆ, ಮುಂದೇನು ಮಾಡಬೇಕಿದೆ ಈ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಗಬಹುದಾದ ಏಕೈಕ ಸಮಯ ಆ ಏಕಾಂತ. ಅದನ್ನೊಮ್ಮೆ ಯೋಚಿಸಿನೊಡಿ ಅಲ್ವಾ,,,,,

ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ | 9986715401

ದಿನದ ಸುದ್ದಿ

ಕವಿತೆ | ಮುರುಕುಂಬಿ

Published

on

  • ಡಾ.ಗಿರೀಶ್ ಮೂಗ್ತಿಹಳ್ಳಿ

ನಮ್ಮ ಒಳಗೆ ಬಿಡಲೆ ಇಲ್ಲ
ಚೌರ ಚಹಾ ಮಾಡಲೆ ಇಲ್ಲ
ಎದೆಗೆ ಒದ್ದರು; ಬದಿ ಬದಿಗು ನಕ್ಕರು

ಜಾತಿಪಂಚೆ ಉಟ್ಟುಕೊಂಡು
ನೀತಿನಂಜು ಇಟ್ಟುಕೊಂಡು
ದ್ವೇಷ ಮೆರೆದರು; ಕಟುಸತ್ಯ ಮರೆತರು

ನೂರ ಒಂದು ಕೂಡಿಕೊಂಡು
ಹಟ್ಟಿತನಕ ಅಟ್ಟಿಬಂದು
ಬೆಂಕಿ ಇಟ್ಟರು ; ಕಣ್ಣೀರು ಕೊಟ್ಟರು

ಮುರುಕುಂಬಿ ಮುರುಕರೆಲ್ಲ
ಕಂಬಿ ಹಿಂದೆ ಬಿದ್ದರಲ್ಲ
ಕೆಟ್ಟ ಮನಗಳು; ಕಡುಕೆಟ್ಟ ಜನಗಳು

ಜಾತಿಗೀತಿ ಏನು ಇಲ್ಲ
ಪ್ರೀತಿ ಪ್ರೇಮ ಇರಲಿ ಎಲ್ಲ
ಬಾಳ್ಮೆ ಮಾಡಲು; ಸಹಬಾಳ್ಮೆ ಮಾಡಲು

ಶಾಂತಿಬೆಳಕು ಬುದ್ಧನಿರಲು
ಕ್ರಾಂತಿಕಹಳೆ ಬಸವನಿರಲು
ಅಳಲುಬಾರದು;’ವಿಧಿದಾತ’ನಿರಲು
ಅಳುಕುಬಾರದು. (ಕವಿತೆ-ಡಾ. ಗಿರೀಶ್ ಮೂಗ್ತಿಹಳ್ಳಿ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಯಾರು ಭೂಮಿಗೆ ಮೊದಲ ಬಾರಿಗೆ ಪ್ರೀತಿಯ ‘ಎಳೆ’ ತಂದರೋ..!

Published

on

  • ನವೀನ್ ಸಾಗರ್, ಬೆಂಗಳೂರು

ಸಿನಿಮಾ ಹಾಡುಗಳು ಕವನಗಳು ಎಲ್ಲ ಗದ್ಯಗಳಷ್ಟು ನೇರ ಸಲೀಸು ಅಲ್ಲ. ಹೇಳಬೇಕಿರೊದನ್ನು ಗದ್ಯಗಳ ಹಾಗೆ ಸೀದಾಸಾದಾವಾಗಿ ಕವನಗಳು, ಸಿನಿಗೀತೆಗಳು ಹೇಳುವುದಿಲ್ಲ. ಹಾಗೆ ಹೇಳಿಬಿಟ್ಟರೆ ಅವು ಕವನ/ಹಾಡು/ಪದ್ಯಗಳೇ ಅಲ್ಲ!!!

ಹಾಡು ಅಂದರೆ ಅಲ್ಲಿ ಉಪಮೆಗಳು ಗೂಢಾರ್ಥಗಳು ದ್ವಂದ್ವಾರ್ಥಗಳು(ದ್ವಂದ್ವಾರ್ಥ ಅಂದ್ರೆ ಅಶ್ಲೀಲ ಮಾತ್ರವೇ ಅಲ್ಲ), ಎರಡುಮೂರು ವಿಚಾರಗಳನ್ನು ಹೇಳಬಲ್ಲ ಒಂದೇ ಒಂದು ಸಾಲು, ಇನ್ಯಾವತ್ತೋ ರೆಲೆವೆಂಟ್ ಅನಿಸಬಲ್ಲ ಕಲ್ಪನೆಗಳು ಏನೇನೋ ತುಂಬಿಹೋಗಿರುತ್ತವೆ. ಅದಕ್ಕೊಂದು ಮೂಡ್ ಇರುತ್ತೆ.

ಒಬ್ಬೊಬ್ಬ ಓದುಗನಲ್ಲಿ ಒಂದೊಂದು ಭಾವ ಹುಟ್ಟಿಸಬಲ್ಲ ಶಕ್ತಿ ಕವಿತೆಗಳಿಗಿರುತ್ತದೆ. ನನಗೆ ರೊಮ್ಯಾಂಟಿಕ್ ಅನಿಸುವ ಗೀತೆಯೊಂದು ಇನ್ನೊಬ್ಬನಿಗೆ ವಿರಹಗೀತೆ ಅನಿಸಬಹುದು. ನನಗೆ ಲಾಲಿ ಹಾಡೆನಿಸುವ ಗೀತೆಯೊಂದು ಇನ್ಯಾರಿಗೋ ಜಾಲಿ ಗೀತೆ ಅನಿಸಬಹುದು. ಇನ್ನೊಬ್ರಿಗೆ ಶೋಕಗೀತೆ ಅನಿಸೋ ಗೀತೆಯಲ್ಲಿ ನನಗೇನೋ ತುಂಟತನ ಕಾಣಿಸಬಹುದು. ಸಭ್ಯಗೀತೆ ಅನಿಸುವ ಹಾಡೊಂದು ಸಾಲುಸಾಲಲ್ಲೂ ಡಬಲ್ ಮೀನಿಂಗ್ ತುಂಬ್ಕೊಂಡಿದೆಯಲ್ಲ ಅನಿಸಬಹುದು. ಗ್ರಹಿಕೆ ಮೂಡು ವಯಸ್ಸು ಸಂದರ್ಭ ಇವೆಲ್ಲದರ ಮೇಲೆ ಹಾಡೊಂದು ನಮ್ಮನ್ನು ತಲುಪೋ ಬಗೆ ಬದಲಾಗುತ್ತಾ ಹೋಗುತ್ತದೆ‌. ಅಷ್ಟಾಗಿಯೂ ಅಸಲಿಗೆ ಅದನ್ನು ಬರೆದ ಕವಿಯ ಯೋಚನೆ ನಾವು ಗ್ರಹಿಸಿದ್ದೆಲ್ಲಕ್ಕಿಂತ ಭಿನ್ನವಾಗಿದ್ದಿನ್ನೇನೋ ಇದ್ದರೂ ಇರಬಹುದು.

ಹಲವು ಬಾರಿ ಕವಿಗೆ ತನ್ನ ಗೀತೆ ತಾನಂದುಕೊಂಡ ಭಾವದಲ್ಲೇ ರೀಚ್ ಆಗಿದೆ ಅನ್ನೋ ಖುಷಿ ತೃಪ್ತಿ ಸಿಗುತ್ತದೆ. ಕೆಲವು ಬಾರಿ .. ಅರೆ ಬರೆಯುವಾಗ ನಾನೇ ಹೀಗೊಂದು ಗೂಡಾರ್ಥದ ಬಗ್ಗೆ ಯೋಚಿಸಿರಲಿಲ್ಲ. ಕೇಳುಗ ಇದಕ್ಕೆ ಇನ್ನೊಂದು ಆಯಾಮವನ್ನೇ ಕೊಟ್ಟುಬಿಟ್ಟನಲ್ಲ ಅಂತ ಅಚ್ಚರಿಯಾಗಬಹುದು. ಕೆಲವೊಮ್ಮೆ ತನಗೇ ಗೊತ್ತಿಲ್ಲದ ಅರ್ಥ ಹುಟ್ಟಿಸಿ ತನ್ನನ್ನು ಕೇಳುಗರು ಮೇಲೇರಿಸಿ ಕೂರಿಸಿದಾಗ, ಈ ಕ್ರೆಡಿಟ್ ಬಿಟ್ಟುಕೊಡಲಿಷ್ಟ ಪಡದ ಕರಪ್ಟ್ ಮನಸು.. ಹೌದೌದು ನಾನು ಹೀಗೆ ಎರಡರ್ಥ ಹುದುಗಿಸಿ‌ಈ ಸಾಲು ಬರೆದಿದ್ದೆ ಎಂದು ಧ್ವನಿಗೂಡಿಸುತ್ತದೆ. ಅದೇ ವಿವಾದಕ್ಕೋ ಅವಹೇಳನಕ್ಕೋ ಕಾರಣವಾದರೆ .. ಇಲ್ಲ ನಾನು ಬರೆದದ್ದು ಈ ಅರ್ಥದಲ್ಲಿ ಅಂತ ಸೇಫ್ಟಿ ಮೋಡ್ ಗೂ ಹೋಗುತ್ತದೆ. ಹಾಡು/ಕವಿತೆಗಳಿಗೆ ಈ ವ್ಯಾಖ್ಯಾನದ ಮೂಲಕ ಬಚಾವಾಗುವ ಇಮೇಜ್ ರೂಪಿಸಿಕೊಳ್ಳುವ ಅವಕಾಶವಿರುತ್ತದೆ‌. ಗದ್ಯಗಳಿಗೆ ಆ ಪ್ರಿವೆಲೇಜ್ ಇರೋದಿಲ್ಲ.

ಸಂಭ್ರಮ ಚಿತ್ರದಲ್ಲಿ ಹಂಸಲೇಖ … “ಯಾರು ಭೂಮಿಗೆ ಮೊದಲ ಬಾರಿಗೆ ಪ್ರೀತಿಯ ಎಳೆ ತಂದರೋ…” ಗೀತೆಯಲ್ಲಿ ” ಎಳೆ” ಪದವನ್ನು ಎರಡರ್ಥ ಬರುತ್ತದೆಂದೇ ಬಳಸಿದರೋ ಬರೆದ ಮೇಲೆ ಎರಡರ್ಥ ಕೇಳುಗರ ಗ್ರಹಿಕೆಗೆ ಬಂತೋ ಎಂಬ ಪ್ರಶ್ನೆಯಂತೆ ಇದು. ಹಂಸ ಲೇಖಾವ್ರು ಪ್ರೀತಿಯ ’ಎಳೆ’ಯ ಬಗ್ಗೆ ಬರೆದಿರಬಹುದು. ಅಥವಾ ಎಳೆದು ತಂದರೋ ಎಂದು ಕೇಳಿಯೂ ಬರೆದಿರಬಹುದು. ಅಥವಾ ಅವರಿಗಿರೋ ಪನ್ ಸೆನ್ಸ್ ಗೆ ಈ ಎರಡೂ ಅರ್ಥ ಬರಲಿ ಅಂತಲೇ ಎಳೆ ಎಂಬ ಪದ ಬಳಸಿರಬಹುದು. ಈ ಥರದ ಸಾಕಷ್ಟು ಉದಾಹರಣೆ ಸಿಗುತ್ತದೆ. ಸಾಹಿತ್ಯ ಗಮನಿಸಲು ಶುರು ಮಾಡಿದಾಗ ಇಂಥ ಖುಷಿ ಅನುಭೂತಿಗಳು ಸಿಗಲಾರಂಭಿಸುತ್ತವೆ. ರಿಸರ್ಚಿನಂಥ ಖುಷಿ

ಹಂಸಲೇಖರ … “ಈ ಹರಯದ ನರಕೊಳಲಲಿ ಇವೆ ಸರಿಗಮ ಹೊಳ್ಳೆಗಳು… ಈ ಮದನನ ಕಿರುಬೆರಳಲಿ ನವಿರೇಳದೆ ಗುಳ್ಳೆಗಳು..” ಈ ಸಾಲು ಕೇವಲ ಕಮರ್ಶಿಯಲ್ ಮ್ಯೂಸಿಕಲ್ ಸಾಂಗ್ ಆಗಿ ನಮ್ಮ ಕಿವಿ ತಲುಪಿದಾಗ ಗುನುಗುವ ಸಾಲಾಗುತ್ತದೆ ಅಷ್ಟೆ. ಅರೆ ಹರಯದ ನರಕೊಳಲು ಅಂದ್ರೆ ಏನು… ಮದನನ ಕಿರುಬೆರಳು ಅಂದ್ರೆ.. ? ಸಾಮಾನಿಗೆ ಇಷ್ಟು ಸಭ್ಯಶೃಂಗಾರರೂಪ ಕೊಟ್ಟು ಹೇಳಿರೋದಾ ಅನಿಸಿದಾಗ.. ಶೃಂಗಾರ ಅಡಗಿರೋ‌ ಸಾಲಾದರೂ ಜೋರಾಗಿ ಹೇಳೋಕೆ ಮನಸು ಹಿಂಜರಿಯುತ್ತದೆ.

ಸಾಹಿತ್ಯ ಅಷ್ಟಾಗಿ ಗಮನಿಸದ ವಯಸ್ಸಲ್ಲಿ… “ಮೈಯ್ಯಲ್ಲಿ ಏಳುತಿದೆ ಮನ್ಮಥ‌ನ ಅಂಬುಗಳು.. ಜುಮ್ ಜುಮ್ ಜುಮ್..” ಅನ್ನೋ ಸಾಲು ಸಂಕ್ರಾಂತಿ ಗೀತೆ ಎಂಬಂತೆ ಬಂದು ಹೋಗುತ್ತಿತ್ತು.

ಆದರೆ ಆನಂತರ ಸಾಹಿತ್ಯವಾಗಿ ಗಮನಿಸಿದಾಗ.‌ ಆಹಾ ರೋಮಾಂಚನವನ್ನು.. ಮೈರೋಮ ನಿಮಿರುವುದನ್ನು ಮನ್ಮಥನ ಬಾಣಕ್ಕೆ ಹೋಲಿಸಿದ್ದಾರಲ್ಲ ಅನಿಸಿ ನಿಜಕ್ಕೂ ಜುಮ್ ಅನಿಸಿತ್ತು. ಅದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ಯೋಚಿಸಿದರೆ.. ಮೈಯಲ್ಲಿ ಏಳುತಿದೆ ಮನ್ಮಥನ ಅಂಬು ಅಂದ್ರೆ.. ಒನ್ಸಗೇನ್ ಸಾಮಾನಿರಬಹುದಾ ಅನಿಸದಿರದು.

ಸದಾಶಿವಂಗೆ ಅದೇ ಗ್ಯಾನ ಅಂದ್ಕೋಬೇಡಿ..

ನೆನಪಿರಲಿ ಚಿತ್ರದ ಅಜಂತಾ ಎಲ್ಲೋರಾ ಗೀತೆಯಲ್ಲಿ ಬರುವ… “ಮಂದವಾಗಿ ಬಳುಕೋವಂಥ ನಾರಿ ಇವಳ
ಅಂದ ನೋಡಿ ನಿಂತಾಗ..ಚಂದ ನೋಡಿ ನಿಂತಾಗ..
ಯಾರೊ ನೀನು ಎಂದು ಕೇಳುತಾವೆ..
ಇವಳ ಪೊಗರಿನ ಹೃದಯಪಾಲಕಿಯರು..
ನಾಟ್ಯದಂತೆ ನಡೆಯುವಾಗ ಅತ್ತಲಾಡಿ ಇತ್ತಲಾಡಿ…”

ಈ ಸಾಲುಗಳು ತನ್ನ ರಿದಮಿಕ್ ಮ್ಯೂಸಿಕ್ ಹಾಗೂ ಸುಲಲಿತವಾಗಿ ಲಘುಗುರು ಇಟ್ಟು ಬರೆದಂಥ ಪದಗಳ‌ ಆಟದಿಂದ ಮಜವಾಗಿ ಹಾಡಿಸಿಕೊಂಡು ಬಿಡ್ತವೆ. ಆದರೆ ಯಾವತ್ತೋ ಆರಾಮಾಗಿ ಸಾಹಿತ್ಯ ಕೇಳ್ತಾ ಇದ್ದರೆ.. ಆಹಾ ..ಹಂಸಲೇಖರ ರಸಿಕಕಲ್ಪನೆಗಳಿಗೆ ಮಿತಿಯೇ ಇಲ್ಲವಾ ಅನಿಸಿಬಿಡುತ್ತದೆ.

ಯಾರೋ ನೀನು ಎಂದು ಕೇಳುತಾವೆ ಇವಳ “ಪೊಗರಿನ ಹೃದಯ ಪಾಲಕಿಯರು” ಎಂದು ಅವರು ರೆಫರ್ ಮಾಡ್ತಿರೋದು ಆ ಹೆಣ್ಣಿನ ಸ್ತನಗಳ ಬಗ್ಗೆ ಅಂತ ಅರ್ಥವಾದಾಗ ಮತ್ತೊಮ್ಮೆ ಈ ಸಾಂಗ್ ಕೊಡುವ ಅನುಭೂತಿಯೇ ವಿಭಿನ್ನ. “ನಾಟ್ಯದಂತೆ ನಡೆಯುವಾಗ ಅತ್ತಲಾಡಿ ಇತ್ತಲಾಡಿ” ಎಂದು ಮುಂದುವರಿಸಿ ಆ ಸಾಲಿಗೆ ಇನ್ನಷ್ಟು ರಸಿಕತೆ ತುಂಬುತ್ತಾರೆ ಹಂಸ್.

ಗಡಿಬಿಡಿಗಂಡ ಚಿತ್ರದ…. ಮುದ್ದಾಡೆಂದಿದೆ ಮಲ್ಲಿಗೆ ಹೂ ಗೀತೆಯಲ್ಲಿ……. ನಾಯಕಿ”ಎದೆಯ ಸೆರಗ ಮೋಡದಲ್ಲಿ ನೀನೇ ಚಂದ್ರನೀಗ….” ಅಂದರೆ…. ನಾಯಕ” ಹೃದಯ ಮೇರುಗಿರಿಗಳಲ್ಲಿ… ಕರಗಬಹುದೆ ಈಗ” ಅಂತಾನೆ. “ಮುಡಿಯಲಿ ಮಲ್ಲಿಗೆಯ ಮುಡಿದವಳ ಮೊದಲುಮುಡಿಯಬೇಕು.. ಮಡದಿಗೆ ಪ್ರತಿದಿನವೂ ಮೊದಲಿರುಳಿರಬೇಕು…” ಅಂತ ನಾಯಕಿ ತನ್ನನ್ನು ಮೊದಲು ರಮಿಸು ಅಂತ ಒತ್ತಾಯಿಸುತ್ತಿದ್ದರೆ………… ನಾಯಕ ..” ಮನಸಿನ ಮಧುವಿನ ಮಹಲೊಳಗೆ … ಮದನ ಮಣಿಯಬೇಕು… ಸುರತಿಯ ಪರಮಾನ್ನ ಹಿತಮಿತವಿರಬೇಕು” ಅಂತ ಆಕೆಯ ಮೇಲಿರೋ ಮೋಹದ ಜೊತೆಜೊತೆಗೆ ಪ್ರತಿದಿನ ಬೇಡ ಫ್ರೀಡಮ್ಮು ವೀಕ್ಲಿ ಒನ್ಸು ಜುಮ್ ಜುಮ್ಮು” ಅಂತ ದೂರ ಹೋಗೋ ಪ್ರಯತ್ನ ಕೂಡ ಮಾಡುತ್ತಾನೆ.

ಇದು ಕೂಡ ಹೆಣ್ಣು ತನ್ನ ಗಂಡನ್ನು ಸೆಕ್ಸಿಗಾಗಿ ಕರೆಯುವ ಗೀತೆಯೇ ಆದರೂ… ತನ್ನ ಕ್ಲಾಸಿಕಲ್ ಟ್ಯೂನ್ ನಿಂದ ಚೆಂದದ ಪದಜೋಡಣೆಯಿಂದ… ಈ ಹಾಡು ಕೊಂಚವೂ ಅಶ್ಲೀಲ ಅನಿಸೋದೇ ಇಲ್ಲ. ಅಶ್ಲೀಲ ಅನಿಸಿದರೂ ಓಕೆ ಎಂದು ಬರೆದಾಗ.. ರಾತ್ರಿ ಆಯ್ತು ಮಲಗೋಣ ಇಂದು ನಮ್ಮ ಸೋಭಾನ… ಅಥವಾ ಕಾಯಿ ಕಾಯಿ ನುಗ್ಗೇಕಾಯಿ ಮಹಿಮೆಗೆ ರಾತ್ರಿಯೆಲ್ಲ ನಿದ್ದೆಯಿಲ್ಲ ಕಣ್ಣಿಗೆ.. ನೆಲ್ಲಿಕಾಯಿ ಆಸೆಗೆ ಬಿಟ್ಟು ಬಂದೆ ಹಾಸಿಗೆ ಅಂತ ಸ್ವಲ್ಪ ನೇರವಾಗಿಬಿಡುತ್ತಾರೆ ಹಂಸಲೇಖ.

ಇವೆಲ್ಲ ಸಾಹಿತ್ಯವನ್ನು ಗಮನಿಸುವಾಗ ಅರ್ಥವಾಗುತ್ತಾ ಹೋಗುವ ಅಪಾರಾರ್ಥಗಳು. ತೂಗುಮಂಚದ “ಹಮ್ಮನುಸಿರಬಿಟ್ಟಳು ಎಂಬುದು ಅಮ್ಮನುಸಿರ ಬಿಟ್ಟಳು ಎಂದಾಗಿದ್ದು ಅದನ್ನು ಲಾಲಿಹಾಡೆಂದು ತಪ್ಪು ತಿಳಿದುದರ ಪರಿಣಾಮ ಎಂದು ಹಿಂದೊಮ್ಮೆ ಬರೆದಿದ್ದು ನಿಮಗೆ ನೆನಪಿರಬಹುದು.

ಇನ್ನು ಡಬಲ್ ಮೀನಿಂಗೇ ಹುಡುಕಬೇಕು ಅಂದರೆ ಪ್ರತಿ ಗೀತೆಯೂ ಬೇರೆಯೇ ಅರ್ಥ ಕೊಡಬಲ್ಲ ಕೆಪಾಸಿಟಿ ಹೊಂದಿರುತ್ತದೆ. ಅದು ನಾವು ಆ ಗೀತೆಯನ್ನು ಬಿಂಬಿಸೋಕೆ ಹೊರಟಿರುವ ರೀತಿಯ ಮೇಲೆ ಡಿಪೆಂಡು. ಎಂಥ ಸಭ್ಯಸಾಲನ್ನೂ.. ಕವಿಗೇ ಶಾಕ್ ಆಗುವ ಹಾಗೆ ಡಬಲ್ ಮೀನಿಂಗ್ ಆಗಿಸಬಹುದು. ಆ ಉದಾಹರಣೆ ಈ ಬರಹದಲ್ಲಿ ಬೇಡ. ಮುಂದೆಂದಾದರೂ ಬರೆಯೋಣ.

ಇದೆಲ್ಲ ಬರೆಯೋಕೆ ಹೊರಟಿದ್ದಕ್ಕೆ ಪ್ರೇರಣೆ ಅಣ್ಣಯ್ಯ ಚಿತ್ರದ ಒಂದು ಸಾಂಗ್. ಅಣ್ಣಯ್ಯ ಬಂದು ಹೋಗಿ ಇಪ್ಪತ್ತೈದು ವರ್ಷಕ್ಕೂ ಹೆಚ್ಚು ಟೈಮಾಯ್ತು. ರವಿಚಂದ್ರನ್ ಸಿನಿಮಾಗಳು ಸಾಫ್ಟ್ ಪೋರ್ನ್ ಸಿನಿಮಾಗಳಂತೆ ಭಾಸವಾಗುತ್ತಿದ್ದ ನಮ್ಮ ಏಜಿನ ದಿನಗಳವು. ರವಿಚಂದ್ರನ್ ಸಿನಿಮಾಗಳನ್ನು ನೋಡೋದು ಕಾಶೀನಾಥ್ ಸಿನಿಮಾ ನೋಡೋಷ್ಟೇ ಪಾಪ ಎಂಬಷ್ಟು ಮಡಿವಂತಿಕೆ ದಿನಗಳವು. ಆದರೆ ನಮ್ಮ ಪಾಲಿಗೆ ಆಗ ರವಿಮಾಮಾ ಲವ್ ರೊಮ್ಯಾನ್ಸ್ ಶೃಂಗಾರಗಳಿಗೆ ಗಾಡ್. ಆತ ಹೀರೋಯಿನ್ ಎದೆಯ ಮೇಲೆ ಮುಖವಿಟ್ಟು ಒರಗಿದರೆ ನಮಗೆ ರಸಸ್ಫೋಟ ಆಗುತ್ತಿತ್ತು. ಕುತ್ತಿಗೆಗೊಂದು ಮುತ್ತಿಟ್ಟು ತುದಿಬೆರಳುಗಳನ್ನು ಕತ್ತು ಮತ್ತು ಎದೆಯ ನಡುವೆ ಒಮ್ಮೆ ಆಡಿಸಿದ ಅಂದರೆ ಕೊಳಲು ಲಂಬಕೋನವಾಗುತ್ತಿತ್ತು.

ಆತ ಸೆರಗು ಸರಿಸಿ ಹೊಕ್ಕಳಿಗೊಮ್ಮೆ ಮುತ್ತಿಟ್ಟರೆ ಮುಗಿದೇಹೋಯ್ತು ಊರಸ್ನಾಯುಗಳು ಬಿಗಿಯಾಗಿ ಹೋಗುತ್ತಿದ್ದವು. ಅಂದು ಹಂಸಲೇಖ ಗೀತೆಗಳು ರವಿಚಂದ್ರನ್ ನ ಪಿಚ್ಚರೈಸೇಷನ್ನಲ್ಲಿ ಕಳೆದುಹೋಗಿಬಿಡುತ್ತಿದ್ದವು. ಅಥವಾ ಸಾಹಿತ್ಯ ಸಂಗೀತ ಎಲ್ಲದರಾಚೆಗೆ ನಮಗೆ ಆ ರೊಮ್ಯಾನ್ಸೇ ಹೆಚ್ಚು ಆಕರ್ಷಿಸಿಬಿಡುತ್ತಿತ್ತು. ಕ್ಯಾಸೆಟಲ್ಲಿ ಹಾಡುಗಳನ್ನು ಕೇಳಿ ಸಿನಿಮಾಗೆ ಹೋದಾಗ ಗೀತೆಗಳು ಆಡಿಯೋಗಿಂತ ವಿಡಿಯೋವಾಗಿ ತೃಪ್ತಿಕೊಟ್ಟು ಕಳಿಸುತ್ತಿದ್ದವು. ಆದರೆ ಆನಂತರ ಸಾಹಿತ್ಯ ಗಮನಿಸುವ ಮೆಚುರಿಟಿ, ಸಾಹಿತ್ಯದಲ್ಲಿರುವ ಇಮ್ಯಾಜಿನೇಷನ್ ಪವರ್ ಆಸ್ವಾಧಿಸುವ ಮನಸ್ಥಿತಿ ಎಲ್ಲ ಬಂದಾಗ.. ರವಿ ಚಂದ್ರನ್ ಹಂಸಲೇಖರ ಗೀತೆಗೆ ಹತ್ತು ಪರ್ಸೆಂಟಷ್ಟೂ ನ್ಯಾಯ ಸಲ್ಲಿಸಲು ಸಾಧ್ಯವಾಗಿಲ್ಲ ಅನಿಸಿಬಿಟ್ಟಿದೆ. ಹಾಗಂತ ಹಂಸಲೇಖರ ಸಾಹಿತ್ಯಕ್ಕೆ ನ್ಯಾಯ ಸಲ್ಲಿಸಲು ಸಾಧ್ಯವಿತ್ತಾ? ಖಂಡಿತ ಇಲ್ಲ. ಯಥಾವತ್ ನ್ಯಾಯ ಸಲ್ಲಿಸಲು ಹೋದದ್ದೇ ಆದರೆ ಆ ಸಾಂಗ್ ನ ಪಿಚ್ಚರೈಸೇಷನ್ ಕಾಮಸೂತ್ರವಾಗಿ ಹೋಗುವಷ್ಟು ಹಾಟ್ ಆಗಿಬಿಡುತ್ತಿತ್ತು.

ಆ ಗೀತೆಗಳು ಪಿಚ್ಚರೈಸ್ ಆಗದೆಯೇ ಇಮ್ಯಾಜಿನೇಷನ್ನಲ್ಲೇ ಉಳಿದುಬಿಟ್ಟಿದ್ದರೆ ಎಷ್ಟು ಚೆಂದವಿತ್ತು ಅನಿಸಿದ್ದೂ ಇದೆ. ಸತ್ಯ ಏನಂದರೆ ರವಿಚಂದ್ರನ್ ಸಲ್ಲಿಸಿದಷ್ಟು ನ್ಯಾಯವನ್ನು ಹಂಸಲೇಖರ ಗೀತೆಗೆ ಇನ್ಯಾರೂ ಸಲ್ಲಿಸಲು ಸಾಧ್ಯವಾಗಲಿಲ್ಲ. ರೊಮ್ಯಾಂಟಿಕ್ ಗೀತೆಗಳಲ್ಲಿ ಮಾತ್ರವಲ್ಲ… ಬೇರೆ ಗಂಭೀರ/ಸ್ಯಾಡ್/ಫಿಲಾಸಫಿಕಲ್/ಕ್ರಾಂತಿ ಯಾವ ಗೀತೆಗಳಿಗೂ ವಿಶ್ಯುಯಲಿ ನ್ಯಾಯ ಸಿಕ್ಕಿಲ್ಲ. ಇದು ಹಂಸಲೇಖ ಮಾತ್ರ ಅಲ್ಲ.. ಬಹುತೇಕ ಸಾಹಿತಿಗಳ ಮನಸಿನ ಮೂಲೆಯ ಅಸಮಾಧಾನ ಹಾಗೂ ನೋಡುಗರ ಅಸಂತೃಪ್ತಿ. ಮೊನ್ನೆ ನಾನು ಶೇರ್ ಮಾಡಿಕೊಂಡ ” ಸುಮ್ಮನೆ ಹೀಗೆ ನಿನ್ನನೇ …:” ಎಂಬ ಅಮರ್ ಚಿತ್ರದ ಗೀತೆಯಾದರೂ ಅಷ್ಟೆ. ಅಷ್ಟು ಗಾಢ ಸಾಲುಗಳ ಗೀತೆಗೆ ಅಂಬರೀಶ್ ಪುತ್ರನಿಂದ ಕಲ್ಲುಬಂಡೆಯಂಥ ಅಭಿನಯ. ಇಡೀ ಹಾಡನ್ನು ಲಾಂಗ್ ಶಾಟ್ ಗಳಲ್ಲಿ ತೆಗೆದು ಪ್ರಕೃತಿ ಸೌಂದರ್ಯ ತೋರಿಸಿ ಮುಗಿಸಿದ್ದಾರೆ ನಾಗಶೇಖರ್. ಸಾಹಿತ್ಯಕ್ಕೆ ಸಂಗೀತ ಸಲ್ಲಿಸುವಷ್ಟು ನ್ಯಾಯವನ್ನು ದೃಶ್ಯರೂಪ ಸಲ್ಲಿಸಲು ಸಾಧ್ಯವಿಲ್ಲ. ಬೆಟರ್ ನಾವು ಹಾಡುಗಳನ್ನು ನಮ್ಮ ಇಮ್ಯಾಜಿನೇಷನ್ ಗೆ ತಕ್ಕಂತೆ ಕಣ್ಮುಚ್ಚಿಕೊಂಡು ಮನಸ್ಸಿನೊಳಗೇ ಚಿತ್ರಿಸಿಕೊಂಡುಬಿಡುವುದು.

ಬ್ಯಾಕ್ ಟು ಅಣ್ಣಯ್ಯ ಚಿತ್ರದ ಆ ಸಾಂಗ್ : ಇಷ್ಟು ವರ್ಷದಲ್ಲಿ ಈ ಹಾಡನ್ನು ಕಮ್ಮಿ ಅಂದ್ರೂ ಒಂದು ಸಾವಿರ ಸಲ ಕೇಳಿರುತ್ತೇನೆ. ಹಿಟ್ ಆಲ್ಪಮ್ ಆಗಿರುವ ಅದರ ಕಡಿಮೆ ಪಾಪ್ಯುಲರ್ ಗೀತೆ ಅದು.

“ಅ ಹಾಗೆ ಪ್ರೇಮಿ ಓಹೋ.. ಒ ಹೋಗೆ ಪ್ರೇಮಿ ಆಹಾ…”
ಈ ಹಾಡಿನ ಚಿತ್ರಣ ನಿಮ್ಮನ್ನು ಸಾಹಿತ್ಯ ಗಮನಿಸದಷ್ಟು ಸೆಳೆದುಕೊಳ್ಳುತ್ತದೆ ಕಾರಣ. ರವಿಚಂದ್ರನ್ ಮಧುಬಾಲಾ ಕೆಮಿಸ್ಟ್ರಿ! ಆದರೆ ಅದ್ಯಾಕೋ ಗೀತೆ ತುಂಬ ಅಟ್ರಾಕ್ಟಿವ್ ಅನಿಸಿರಲಿಲ್ಲ. ಕಮಾನು ಡಾರ್ಲಿಂಗ್, ಅಣ್ಣಯ್ಯ ಅಣ್ಣಯ್ಯ ಬಾರೋ, ರಾಗಿ ಹೊಲದಾಗೆ ಖಾಲಿ ಗುಡಿಸಲು ಈ ಗೀತೆಗಳು ಕೊಟ್ಟ ಕಿಕ್ …. ಈ ಅ ಹಾಗೆ ಪ್ರೇಮಿ ಓಹೋ… ಒ ಹೋಗೆ ಪ್ರೇಮಿ ಆಹಾ ಗೀತೆ ನೀಡಿರಲಿಲ್ಲ.

ಹೌದು ನಾನು ಈ ಹಾಡನ್ನು ಕೇಳಿಸಿಕೊಳ್ತಾ ಇದ್ದದ್ದೇ ಹೀಗೆ. ಮೊನ್ನೆಯ ತನಕವೂ…ಆದರೆ ಮೊನ್ನೆ ಯಾಕೋ ಮತ್ತೊಮ್ಮೆ ಕೇಳಿಸಿಕೊಂಡಾಗ.. ಅರೆ ಇಪ್ಪತ್ತೈದು ವರ್ಷ ತಪ್ಪಾಗಿ ತಿಳಿದುಕೊಂಡು ತಪ್ಪಾಗೇ ಹಾಡಿಕೊಂಡೆನಲ್ಲ ಅಂತ ಮೈತುಂಬ ಗಿಲ್ಟು

ಆ ಸಾಂಗ್ ಇರೋದು ಹೀಗೆ…

”ಆಹಾ’ಗೆ ಪ್ರೇಮಿ “ಓಹೋ”
” ಓಹೋ”ಗೆ ಪ್ರೇಮಿ ” ಆಹಾ”

ನನ್ನ ಹಾಗೆ ಅದೆಷ್ಟು ಜನ ಯಾಮಾರಿದ್ದೀರೋ ಗೊತ್ತಿಲ್ಲ. ಅಥವಾ ನಾನೊಬ್ನೇ ಹೀಗೆ ತಪ್ಪಾಗಿ ಕೇಳಿಸಿಕೊಂಡವ್ನೋ ಗೊತ್ತಿಲ್ಲ

ಈ ಗೀತೆಯ ವಿಶೇಷ ಏನಂದ್ರೆ ಹಂಸಲೇಖ. ಆಹಾ ಮತ್ತು ಓಹೋ ಎಂಬ ಎರಡು ಪದಗಳನ್ನೇ ಪ್ರೇಮಿಗಳನ್ನಾಗಿಸಿದ್ದಾರೆ

ಆಹಾಗೆ ಓಹೋ ಪ್ರೇಮಿ… ಓಹೋಗೆ ಆಹಾ ಪ್ರೇಮಿ!
ಅದು ಇಬ್ಬರು ಪ್ರ‍ೇಮಿಗಳ ಹೆಸರು!

ಈಗ ಈ ಹಾಡೊಮ್ಮೆ ಕೇಳಿನೋಡಿ…
ಅದು ಸೌಂಡಾಗೋದೇ ಬೇರೆ ಥರ!

ಅದ್ಯಾಕೆ ಆಹಾ ಓಹೋ ಎಂಬ ಪದಗಳು ಇಲ್ಲಿ ಪಾತ್ರಗಳಾದವು ಅಂತ ಸಿನಿಮಾ ತೆರೆದು ನೋಡಿದೆ. ಈ ಹಾಡು ಆರಂಭವಾಗುವ ಮುನ್ನ ಅಣ್ಣಯ್ಯ ಯಾವುದೋ ಫೈಟಿಂಗಲ್ಲಿ ಒದೆ ತಿಂದು ಬೆನ್ನಿಗೆ ಕಾಶಿ ಕೈಲಿ ಬಿಸಿ ಮಸಾಜ್ ಮಾಡಿಸಿಕೊಳ್ತಾ ಇರ್ತಾನೆ. ಅವನ ಇಮ್ಯಾಜಿನೇಷನಲ್ಲಿ ನಾಯಕಿ ಬಂದು ಕಾಶಿಯ ಬದಲು ಮಸಾಜ್ ಮಾಡ್ತಿರೋ ಹಾಗೆ ಒಂದು ಟ್ವಿಸ್ಟು.. ಇಮ್ಯಾಜಿನೇಷನಲ್ಲೇ ಅವಳೊಂದಿಗೆ ಮಾತಾಡ್ತಾ.. ಆಕೆ ಬಿಸಿ ಶಾಖ ಕೊಟ್ಟಾಗ ಒಮ್ಮೆ ನಾಯಕ ಆಹಾ ಅಂತಾನೆ.. ಇನ್ನೊಮ್ಮೆ ಓಹೋ ಎಂದು ಬಿಗಿಯುಸಿರು ಬಿಡುತ್ತಾನೆ. ಆಗ ಹುಟ್ಟುವ ಹಾಡಿದು. ಡ್ರೀಮ್ ಸಾಂಗ್ ನಲ್ಲಿ ಟೆಕ್ಸ್ಟ್ ಕೂಡ ಬರುತ್ತದೆ ಆಹಾ ಓಹೋ ಅಂತ!

ಸ್ಕ್ರಿಪ್ಟ್ ಜೊತೆ ದೃಶ್ಯರಚನೆ ಜೊತೆ ಗೀತ ಸಾಹಿತಿ ಕನೆಕ್ಟ್ ಆದಾಗ ಇಂಥ ಅದ್ಭುತಗಳು, ಮಜಗಳು, ಕ್ರಿಯೇಟಿವ್ ಐಡಿಯಾಗಳು ಹುಟ್ಟುತ್ತವೆ. ಹಂಸಲೇಖ ಎಲ್ಲೋ ಕೂತು ಹಾಡುಬರೆದುಕೊಟ್ಟು ಸಂಗೀತ ಮಾಡಿಕೊಡ್ತಿರಲಿಲ್ಲ. ಸಿನಿಮಾದೊಂದಿಗೆ ಪ್ರೀ ಪ್ರೊಡಕ್ಷನ್ನಿಂದ ರೀರೆಕಾರ್ಡಿನ ತನಕ ಜರ್ನಿ ಮಾಡ್ತಿದ್ರು ಅನ್ನೋದಕ್ಕೆ ಇದೊಂದು ಸಾಕ್ಷಿ. ಅವರಿಬ್ಬರ ಕಾಂಬಿನೇಷನ್ ಯಾಕೆ ಆ ಪರಿ ಕ್ಲಿಕ್ ಆಗುತ್ತಿತ್ತು ಅನ್ನೋದಕ್ಕೂ ಇದೊಂದು ಪುರಾವೆ. ( ಬರಹ : ನವೀನ್ ಸಾಗರ್ ; ಫೇಸ್ ಬುಕ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕವಿತೆ | ಉಸಿರು

Published

on

ಮೂಲ : ಜಲಾಲುದ್ದೀನ್ ರೂಮಿ, ಕನ್ನಡಕ್ಕೆ : ಡಾ.ಎಚ್.ಎಸ್.ಅನುಪಮಾ

ನಾ ಕ್ರೈಸ್ತನಲ್ಲ, ಯಹೂದಿ, ಮುಸಲ್ಮಾನ, ಹಿಂದುವೂ ಅಲ್ಲ ಬೌದ್ಧ, ಸೂಫಿ, ಝೆನ್ ಧರ್ಮದವನೂ ಅಲ್ಲ

ಪಂಥ ಪರಂಪರೆಯವನಲ್ಲ, ಮೂಡಲದವನಲ್ಲ ಪಡುವಣದವನಲ್ಲ, ಕಡಲೊಳಗಿನಿಂದೆದ್ದು ಬಂದವನಲ್ಲ

ನೆಲದಿಂದುದ್ಭವಿಸಲಿಲ್ಲ, ಸಹಜ ಸೃಷ್ಟಿಯಲ್ಲ, ದೈವಿಕವಲ್ಲ ಪಂಚಭೂತಗಳಿಂದಾದವನಲ್ಲ, ನಾ ಎಂಬುದೇ ಇಲ್ಲ

ಇಹದಲೂ ಪರದಲ್ಲೂ ನನ್ನ ಕುರುಹಿಲ್ಲ ಆಡಂ ಈವರ ವಂಶದ ಕುಡಿಯಲ್ಲ

ಯಾವ ವಂಶಾವಳಿಯೂ ನನಗಿಲ್ಲ, ನೆಲೆಯಿರದವ ಕಾಯವಲ್ಲ, ಆತ್ಮವೂ ಅಲ್ಲ, ನಿಶ್ಲೇಷದ ಶೇಷ

ನಾ ಪ್ರೇಮಿಯವ, ಲೋಕವೆರೆಡನೊಂದೇ ಆಗಿ ಕಂಡವ ಕರೆವುದು ಪ್ರೇಮ ನನ್ನ, ಅರಿತುಕೊಳುವುದು ತನ್ನ ತಾ..

ಮೊದಲ, ಕೊನೆಯ, ಹೊರ, ಒಳ
ಎಲ್ಲವೂ ಪ್ರೇಮ, ಪ್ರೇಮ, ಬರೀ ಪ್ರೇಮ
ಅದು ಪ್ರಾಣ, ಅದೇ ಉಸಿರು.

ಉಸಿರಾಡು ಮನುಜ.

(ಈ ಕವಿತೆಯನ್ನು ಲಡಾಯಿ ಪ್ರಕಾಶನ ಗದಗ ಇವರು ಪ್ರಕಟಿಸಿರುವ ‘ಉರಿಯ ಕುಡಿಯ ನಟ್ಟ ನಡುವೆ‘ ಕೃತಿಯಿಂದ ಆಯ್ದುಕೊಳ್ಳಲಾಗಿದೆ. ಜಲಾಲುದ್ದೀನ್ ರೂಮಿಯ ಕವಿತೆಗಳನ್ನು ಕನ್ನಡಕ್ಕೆ ಡಾ.ಎಚ್.ಎಸ್. ಅನುಪಮ ಅವರು ಅನುವಾದಿಸಿರುವ ಕೃತಿ ಇದಾಗಿದೆ.)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ18 hours ago

ಹಳೆ ಪಿಂಚಣಿ ಪದ್ಧತಿ ಮರುಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯ

ಸುದ್ದಿದಿನಡೆಸ್ಕ್:ಹಳೆ ಪಿಂಚಣಿ ಪದ್ಧತಿ ಮರು ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ವಿವಿಧ ಹಂತಗಳಲ್ಲಿ ಹೋರಾಟ ಸೇರಿದಂತೆ ಇನ್ನಿತರೆ ನಿರ್ಣಯಗಳಿಗೆ ಬೆಂಬಲ ಸೂಚಿಸಲು ದಾವಣಗೆರೆಯಲ್ಲಿ ನಡೆದ ರಾಜ್ಯ...

ದಿನದ ಸುದ್ದಿ18 hours ago

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಬೈಲಹೊಂಗಲದಲ್ಲಿ ಚಾಲನೆ

ಸುದ್ದಿದಿನಡೆಸ್ಕ್:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2025ಕ್ಕೆ ಇಂದು ಮುಂಜಾನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಅದ್ದೂರಿ ಚಾಲನೆ ನೀಡಲಾಯಿತು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ...

ದಿನದ ಸುದ್ದಿ3 days ago

ನಾಳೆಯಿಂದ ಜಗಳೂರಿನಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನ

ಸುದ್ದಿದಿನ,ದಾವಣಗೆರೆ:ಜಗಳೂರು ಪಟ್ಟಣದಲ್ಲಿ ಜನವರಿ 11 ಮತ್ತು 12 ರಂದು ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಜನವರಿ 11...

ದಿನದ ಸುದ್ದಿ6 days ago

ಸಂತೇಬೆನ್ನೂರು | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ವಮಾನವ ದಿನಾಚರಣೆ’

ಸುದ್ದಿದಿನ,ಸಂತೇಬೆನ್ನೂರು:ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮತ್ತು ಐ.ಕ್ಯೂ.ಎ.ಸಿ. ಸಹಯೋಗದೊಂದಿಗೆ ಸೋಮವಾರ ‘ವಿಶ್ವಮಾನವ ದಿನಾಚರಣೆ’ಯನ್ನು ಆಯೋಜಿಸಲಾಗಿತ್ತು. ಜಗತ್ತಿಗೆ ವಿಶ್ವಮಾನವತೆಯ ಸಂದೇಶವನ್ನು ಸಾರಿದ ಜಗದ ಕವಿ...

ದಿನದ ಸುದ್ದಿ7 days ago

ವಿಜಯನಗರ | ನಿಲ್ಲದ ಅಕ್ರಮ ಕಲ್ಲು ಗಣಿಗಾರಿಕೆ ; ಕಣ್ಣುಮುಚ್ಚಿಕುಳಿತ ಅಧಿಕಾರಿಗಳು

ವಿಶೇಷ ವರದಿ | ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ವಿಜಯನಗರ:ತಾಲೂಕಿನ ಬುಕ್ಕಸಾಗರದಲ್ಲಿ ಅಕ್ರಮ ಗಣಿಗಾರಿಕೆ, ಹಲವು ವರ್ಷಗಳಿಂದ ನಿರಂತರವಾಗಿ ಬುಕ್ಕಸಾಗರ, ವೆಂಕಟಾಪುರ, ವೆಂಕಟಾಪುರ ಕ್ಯಾಂಪ್ , ರಾಮಸಾಗರದಲ್ಲಿ...

ದಿನದ ಸುದ್ದಿ1 week ago

ಹಂಪಿ ಮೃಗಾಲಯದಲ್ಲಿ ಸೂಕ್ತ ನಿರ್ವಹಣೆ ಮತ್ತು ಮೂಲಸೌಕರ್ಯಗಳದ್ದೇ ಕೊರತೆ : ಪ್ರವಾಸಿಗರ ಆರೋಪ

ವರದಿ : ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಹೊಸಪೇಟೆ: ಉತ್ತರ ಕರ್ನಾಟಕದ ಏಕೈಕ ಸಫಾರಿ ಮೃಗಾಲಯ ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್(ಹಂಪಿ ಜೂ) ಆಗಿದ್ದು, ಇಲ್ಲಿ...

ದಿನದ ಸುದ್ದಿ2 weeks ago

2017 ರಿಂದ 2023 ಅವಧಿಯ ಅಭಿವೃದ್ಧಿ ಹಾಗೂ ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳು ಪ್ರಕಟ ; ಇಲ್ಲಿದೆ ಸಂಪೂರ್ಣ ಮಾಹಿತಿ

ಸುದ್ದಿದಿನ,ಬೆಂಗಳೂರು:ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ದಿ ಮತ್ತು ಪರಿಸರ...

ದಿನದ ಸುದ್ದಿ2 weeks ago

ರೈತರಿಗೆ ಉಚಿತ ವಿದ್ಯುತ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳ ಸ್ಥಾಪನೆ : ಸಚಿವ ಕೆ.ಜೆ.ಜಾರ್ಜ್

ಸುದ್ದಿದಿನ,ಚಿತ್ರದುರ್ಗ:ರೈತರಿಗೆ ಹಗಲು ಹೊತ್ತು ಏಳು ಘಂಟೆ ಉಚಿತ ಕರೆಂಟ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳಿಗೆ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ...

ದಿನದ ಸುದ್ದಿ3 weeks ago

ವೃತ್ತಿ ನಾಟಕ ಶಿಬಿರಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ವೃತ್ತಿ ರಂಗಭೂಮಿ ರಂಗಾಯಣ ಕೇಂದ್ರ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಸಹಯೋಗದೊಂದಿಗೆ 5 ದಿನಗಳ ವೃತ್ತಿ ನಾಟಕ ರಚನಾ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಶಿಬಿರದ ನಂತರ...

ದಿನದ ಸುದ್ದಿ4 weeks ago

ವಿದ್ಯಾರ್ಥಿಗಳಿಗೆ ಡಿಜಿಟಲ್ ಕೌಶಲ್ಯ ಅಗತ್ಯ : ಡಾ. ವೆಂಕಟೇಶ್ ಬಾಬು

ಸುದ್ದಿದಿನ,ಚನ್ನಗಿರಿ:ವಿದ್ಯಾರ್ಥಿಗಳು ಇಂದಿನ ಯುಗಕ್ಕೆ ಅಗತ್ಯವಿರುವ ಎಲ್ಲಾ ಜೀವನ ಹಾಗೂ ತಂತ್ರಜ್ಞಾನ, ವಿಶೇಷವಾಗಿ ಡಿಜಿಟಲ್ ಕೌಶಲ್ಯಗಳನ್ನು ಅರಿತಿರಬೇಕು ಎಂದು ಪ್ರಾಧ್ಯಾಪಕ ಡಾ. ವೆಂಕಟೇಶ್ ಬಾಬು ಅವರು ತಿಳಿಸಿದರು. ಬುಧವಾರ...

Trending