Connect with us

ದಿನದ ಸುದ್ದಿ

ದಾವಣಗೆರೆ | ತರಳಬಾಳು ಶಿವಸೈನ್ಯ ಸಂಘ ರಾಜ್ಯ ಘಟಕದ ಪದಾಧಿಕಾರಿಗಳ ಪದಗ್ರಹಣ

Published

on

ಸುದ್ದಿದಿನ,ದಾವಣಗೆರೆ:900 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಸಾಧು ಸದ್ಧರ್ಮ ವೀರಶೈವ ಸಮಾಜಕ್ಕೆ ಕಷ್ಟ ಅಪರೇಷಗಳನ್ನು ನೀಡಿದಂತವರು ಹಾಗೂ ಭದ್ರವಾದ ನೆಲೆಯನ್ನು, ಸಂಸ್ಕಾರವನ್ನು,ಗಟ್ಟಿತನವನ್ನು ತಂದುಕೊಟ್ಟಂತವರು ಲಿಂ.ತರಳಬಾಳು ಜಗದ್ಗುರು ಶ್ರೀ ಗುರುಶಾಂತರಾಜ ಮಹಾಸ್ವಾಮಿಗಳವರು.

ಸಾಧು ಸದ್ಧರ್ಮ ಸಮಾಜ ಅಸಂಘಟಿತವಾದ ಸಂದರ್ಭದಲ್ಲಿ ಈ ಸಮಾಜವನ್ನು ಒಗ್ಗೂಡಿಸುವ, ಸಮಾಜಕ್ಕೆ ಪ್ರಜ್ಞೆ, ಪಸ್ಟ ರೂಪ ನೀಡಬೇಕು ಎನ್ನುವ ವಿಚಾರಧಾರೆಯಲ್ಲಿ ಸುಸಂಘಟಿತವಾದ ಸಮಾಜ ನಿರ್ಮಾಣ ಮಾಡಬೇಕು ಎಂಬ ನಿಟ್ಟಿನಲ್ಲಿ ಗುರುಶಾಂತರಾಜ ಮಹಾಸ್ವಾಮಿಗಳು ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದು ಸಮಾಜದ ಭಕ್ತರನ್ನು ಸುಶಿಕ್ಷತರನ್ನಾಗಿ ಮಾಡುವುದಲ್ಲದೆ ಸಮಾಜವನ್ನು ಭದ್ರಗೊಳಿಸಿದರು.

ಅದೇ ರೀತಿ ಲಿಂ.ಹಿರಿಯ ತರಳಬಾಳು ಜಗದ್ಗುರು ಶ್ರೀ ಶಿವಕುಮಾರ ಮಹಾಸ್ವಾಮಿಗಳವರು ಸಾಧು ಸಮಾಜವನ್ನು ಶೈಕ್ಷಣಿಕವಾಗಿ ಆರ್ಥಿಕವಾಗಿ ಸಾಮಾಜಿಕವಾಗಿ ರಾಜಕೀಯವಾಗಿ ಸದೃಢಗೊಳಿಸಿ ಸಮಾಜ ಬಾಂಧವರು ತಲೆಯೆತ್ತಿ ನಡೆಯುವಂತೆ ಮಾಡಿದ್ದಾರೆ. ಮುಂದುವರೆದು ಇಂದಿನ 21ನೇ ಜಗದ್ಗುರುಗಳವರು ಸಮಾಜವನ್ನು ಸಮರ್ಥವಾಗಿ ಮುನ್ನಡೆಸಿಕೊಂಡು ಬರುತ್ತಿದ್ದಾರೆ.

ಹಿಂದೆ ದುಗ್ಗಾಣೆ ಮಠವಾಗಿದ್ದ ನಮ್ಮ ಮಠ ಇಂದು 2000 ಕೋಟಿಯಷ್ಟು ಆಸ್ತಿ ಹೊಂದಿದೆ ಎಂಬುದು ನಮ್ಮ ಸಮಾಜದ ಸದ್ಭಕ್ತರ ಹೃದಯ ಶ್ರೀಮಂತಿಕೆಯನ್ನು ಸಂಸ್ಕಾರವನ್ನು ಉದಾರತೆಯನ್ನು ತೋರಿಸುತ್ತದೆ.

ಇಂತಹ ಶ್ರೀಮಂತ ಸಂಸ್ಕಾರಯುತ ಉದಾರವಾದ ದೊಡ್ಡ ಸಮಾಜಕ್ಕೆ ಪೂರಕವಾದ ಅಂತಹ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಇಂದು ತರಳಬಾಳು ಶಿವಸೈನ್ಯ ಸಂಘ ರಾಜ್ಯ ಘಟಕ ಅಸ್ತಿತ್ವಕ್ಕೆ ಬಂದಿದ್ದು ಅದರ ದೇವ ದೇಶಗಳು ತುಂಬಾ ಉತ್ತಮವಾಗಿವೆ. ಇದು ಸಮಾಜಮುಖಿಯಾಗಿ ಕೆಲಸ ಮಾಡಬೇಕು. ಅದರಲ್ಲಿ ನಾನು ಗೌರವಾಧ್ಯಕ್ಷನಾಗಿರುವುದಕ್ಕೆ ಹೆಮ್ಮೆ ಪಡುತ್ತೇನೆ ಎಂದು ವಿಜಯನಗರ ಜಿಲ್ಲೆಯ ಮಹಾಬಲೇಶ್ವರ ಗೌಡರು ತಿಳಿಸಿದರು.

ರೈತ ಮುಖಂಡರಾದ ಹೊನ್ನೂರು ಮುನಿಯಪ್ಪನವರು ಮಾತನಾಡುತ್ತಾ ತರಳಬಾಳು ಶಿವಸೇನೆ ಸಂಘವು ಸಮಾಜದಲ್ಲಿ ತಪ್ಪು ದಾರಿಯಲ್ಲಿ ಹೋಗುವವರನ್ನು ತಿದ್ದುವಂತಹ ಸರಿದಾರಿಗೆ ತರುಹಂತಹ ಕೆಲಸ ಮಾಡಬೇಕೆಂದು ತಿಳಿಸಿದರು.

ಸಮಾರಂಭದಲ್ಲಿ ಭಾಗವಹಿಸಿದ್ದ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ ವಾಮದೇವಪ್ಪನವರು ಮಾತನಾಡುತ್ತಾ ತರಳಬಾಳು ಶಿವಸೈನ್ಯ ಸಂಘವು ಯಾವುದೇ ಸಮಾಜದ ಪ್ರತಿಸ್ಪರ್ಧಿಯಾಗಿ ರೂಪಗೊಂಡಿಲ್ಲ. ಬದಲಾಗಿ ಇದು ನಮ್ಮ ಸಮಾಜವನ್ನು ಮತ್ತಷ್ಟು ಸದೃಢಗೊಳಿಸುವ, ಸಮಾಜಮುಖಿಯಾಗಿ ಕೆಲಸ ಮಾಡುವ, ಉತ್ತಮೋತ್ತಮ ಕೆಲಸ ಮಾಡುವ ನಿಟ್ಟಿನಲ್ಲಿ ರೂಪಗೊಂಡಿದೆ. ನಮ್ಮ ಸಮಾಜದಲ್ಲಿ ಯಾವುದೇ ವ್ಯತ್ಯಾಸಗಳು, ನಿಲುವುಗಳು, ಭಿನ್ನಾಭಿಪ್ರಾಯಗಳು ಇದ್ದರೂ ನಮ್ಮ ಸಮಾಜಕ್ಕೆ ಪಿತಾಮಹಾರೆಂದರೆ ತರಳಬಾಳು ಜಗದ್ಗುರುಗಳೇ ಹೊರತು ಬೇರೆಯವರಲ್ಲ ಎಂಬುದನ್ನು ನಾವೆಲ್ಲ ಮನಗಾಣ ಬೇಕಾಗಿದೆ ಎಂದು ತಿಳಿಸಿದರು.

ನಮ್ಮ ಸಮಾಜ ಹಾಗೂ ಸಂಘವು ತರಳಬಾಳು ಪರಂಪರೆಯ ಗುರುಪೀಠದ ಆದೇಶದಂತೆ ಅದನ್ನು ಚಾಚು ತಪ್ಪದೇ ಪಾಲಿಸಿ ಕೊಂಡು ಬರುವ ಸಂಪ್ರದಾಯವನ್ನು ಹೊಂದಿದೆ. ಅದೇ ರೀತಿ ತರಳಬಾಳು ಶಿವಸೇನೆ ಸಂಘವು ನಡೆದುಕೊಂಡು ಹೋಗಬೇಕೆಂಬುದು ನಮ್ಮ ಆಶಯವಾಗಿದೆ. ಈ ಸಂಘವು ಹೋಬಳಿ ಮಟ್ಟದಿಂದ ಹಿಡಿದು ತಾಲೂಕು,ಜಿಲ್ಲೆ ಗಳಲ್ಲಿ ತನ್ನ ಕಾರ್ಯಕ್ಷೇತ್ರ ಮತ್ತು ವ್ಯಾಪ್ತಿಯನ್ನು ವಿಸ್ತರಿಸಿಕೊಂಡು ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದಾವಣಗೆರೆ ಮಹಾನಗರ ಪಾಲಿಕೆಯ ಸದಸ್ಯರಾದ ಗಡಿಗುಡಾಳ್ ಮಂಜುನಾಥ್ ರವರು ಮಾತನಾಡುತ್ತ ತರಳಬಾಳು ಶಿವಸೈನ್ಯ ಸಂಘ ರಾಜ್ಯ ಘಟಕ ಇಂದು ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಇದರಿಂದ ಇದರ ಜವಾಬ್ದಾರಿಯು ಕೂಡ ಹೆಚ್ಚಾಗಿದೆ.ಈ ಸಂಘಕ್ಕೆ ಯಾವುದೇ ರೀತಿಯ ಸಹಕಾರ ಬೇಕಾದರೂ ನಾನು ಮಾಡಲು ಸಿದ್ಧ. ಸಂಘವು ನಮ್ಮ ಸಮಾಜದ ಯಾರೇ ಬಂದವರು ಉತ್ತಮ ಉತ್ತಮ ಸಾಧನೆಗಳನ್ನು ಕೆಲಸಗಳನ್ನು ಮಾಡಿದಾಗ ಅವರನ್ನು ಗುರುತಿಸಿ ಬೆಂಬಲಿಸುವ ಬೆನ್ನುತಟ್ಟುವ ಕೆಲಸ ಮಾಡಬೇಕು ಎಂಬ ಅಭಿಪ್ರಾಯ ಹಂಚಿಕೊಂಡರು.
ಸಮಾರಂಭದ ಆರಂಭದಲ್ಲಿ ಶಿವಸೈನ್ಯ ಸಂಘದಲ್ಲಿ ಇದುವರೆಗೂ ಕೆಲಸ ನಿರ್ವಹಿಸಿದಂತ ಪದಾಧಿಕಾರಿಗಳಿಗೆ ಗೌರವಿಸಿ ಸನ್ಮಾನಿಸಿದರು.

ನೂತನವಾಗಿ ಅಸ್ತಿತ್ವಕ್ಕೆ ಬಂದ ತರಳಬಾಳು ಶಿವಸೈನ್ಯ ಸಂಘ ರಾಜ್ಯ ಘಟಕದ ಅಧ್ಯಕ್ಷರಾಗಿ ಶಶಿಧರ ಹೆಮ್ಮನಬೇತೂರು ಗೌರವಾಧ್ಯಕ್ಷರಾಗಿ, ವಿಜಯನಗರ ಜಿಲ್ಲೆಯ ಮಹಾಬಲೇಶ್ವರ ಗೌಡರು ಹಾಗೂ ದಾವಣಗೆರೆಯ ಶ್ರೀನಿವಾಸ್ ಶಿವಗಂಗಾ, ಉಪಾಧ್ಯಕ್ಷರಾಗಿ ಕೆ ಬಿ ಮೋಹನ್ ಸಿರಿಗೆರೆ, ಅಶ್ವಿನ್ ಕೆ ಪಿ ನಿಂಬೆಗುಂದಿ ಶಿಕಾರಿಪುರ ವೀರಣ್ಣ ಮಾಕನೂರು, ಕೆಬಿ ಶ್ರೀಧರ್ ಪಾಟೀಲ್ ಭದ್ರಾವತಿ, ಲಿಂಗರಾಜ್ ಆಗಸನಕಟ್ಟೆ ಹಾಗೂ ಕಾರ್ಯದರ್ಶಿಯಾಗಿ ಬಸವನಗೌಡರು ವಕೀಲರು ವಿಜಯನಗರ, ಕೋಶಾಧ್ಯಕ್ಷರಾಗಿ ಶಿವಕುಮಾರ್ ಡಿಎಂ ಕೋರಟಿಕೆರೆ, ಹೀಗೆ ಒಟ್ಟು 39 ಪದಾಧಿಕಾರಿಗಳು ಪದಗ್ರಹಣವನ್ನು ಸ್ವೀಕರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕಕ್ಕರಗೊಳ್ಳದ ಕೆ ಜಿ ಬಸವನಗೌಡರು ವಹಿಸಿದ್ದರು. ಪಿ.ಮಹಾಬಲೇಶ್ವರ ಗೌಡ್ರು, ಬಿ.ವಾಮದೇವಪ್ಪ, ಹೊನ್ನೂರು ಮುನಿಯಪ್ಪ, ರಾಮಗೊಂಡನಹಳ್ಳಿ ಜಯಣ್ಣ, ಬೇತೂರು ಸಂಗನಗೌಡ್ರು, ಮಾಗನೂರು ಉಮೇಶಗೌಡ್ರು, ಯಶವಂತಗೌಡ್ರು, ಶ್ರೀನಿವಾಸ ಶಿವಗಂಗಾ, ಕೆ.ನಾಗಪ್ಪ ಮೇಷ್ಟ್ರು, ಕಂಸಾಗರ ಪಂಚಣ್ಣ, ಬೇತೂರು ರೇವಣಸಿದ್ದಪ್ಪ ಮರಡಿ, ಶಶಿಧರ ಹೆಮ್ಮನಬೇತೂರು, ಶಿವರಾಜ್ ಕಬ್ಬೂರು, ಕಾವಲಹಳ್ಳಿ ಪ್ರಭು, ಶಿವಕುಮಾರ್ ಗಡಿಗುಡಾಳ್ ಮಂಜುನಾಥ್ ಮತ್ತಿತರರು.ಕಾರ್ಯಕ್ರಮದಲ್ಲಿ ಪ್ರಭು ಕಾವಲಹಳ್ಳಿ,ಆರ್ ಜಿ ರುದ್ರೇಶ್, ಬಿಎಸ್ ಪ್ರಕಾಶ್, ಪ್ರಕಾಶ್ ಕಬ್ಬೂರು, ಕುಮಾರ್ ಮಳ್ಳಿಕಟ್ಟೆ, ಬಸವರಾಜ್ ಮುಡೇನಹಳ್ಳಿ, ನರೇಂದ್ರ ರಾಂಪುರ, ಸತೀಶ್ ಸಿರಿಗೆರೆ ಸೇರಿದಂತೆ ಸುಮಾರು 10 ಜಿಲ್ಲೆಗಳಿಂದ 250 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.

ಆರಂಭದಲ್ಲಿ ಸಿ ಜಿ ಜಗದೀಶ್ ಕೂಲಂಬಿ ಸ್ವಾಗತಿಸಿದರು. ಶಿವರಾಜ್ ಕಬ್ಬೂರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಸುದ್ದಿದಿನ. ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending