Connect with us

ದಿನದ ಸುದ್ದಿ

ದಾವಣಗೆರೆ | ತರಳಬಾಳು ಶಿವಸೈನ್ಯ ಸಂಘ ರಾಜ್ಯ ಘಟಕದ ಪದಾಧಿಕಾರಿಗಳ ಪದಗ್ರಹಣ

Published

on

ಸುದ್ದಿದಿನ,ದಾವಣಗೆರೆ:900 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಸಾಧು ಸದ್ಧರ್ಮ ವೀರಶೈವ ಸಮಾಜಕ್ಕೆ ಕಷ್ಟ ಅಪರೇಷಗಳನ್ನು ನೀಡಿದಂತವರು ಹಾಗೂ ಭದ್ರವಾದ ನೆಲೆಯನ್ನು, ಸಂಸ್ಕಾರವನ್ನು,ಗಟ್ಟಿತನವನ್ನು ತಂದುಕೊಟ್ಟಂತವರು ಲಿಂ.ತರಳಬಾಳು ಜಗದ್ಗುರು ಶ್ರೀ ಗುರುಶಾಂತರಾಜ ಮಹಾಸ್ವಾಮಿಗಳವರು.

ಸಾಧು ಸದ್ಧರ್ಮ ಸಮಾಜ ಅಸಂಘಟಿತವಾದ ಸಂದರ್ಭದಲ್ಲಿ ಈ ಸಮಾಜವನ್ನು ಒಗ್ಗೂಡಿಸುವ, ಸಮಾಜಕ್ಕೆ ಪ್ರಜ್ಞೆ, ಪಸ್ಟ ರೂಪ ನೀಡಬೇಕು ಎನ್ನುವ ವಿಚಾರಧಾರೆಯಲ್ಲಿ ಸುಸಂಘಟಿತವಾದ ಸಮಾಜ ನಿರ್ಮಾಣ ಮಾಡಬೇಕು ಎಂಬ ನಿಟ್ಟಿನಲ್ಲಿ ಗುರುಶಾಂತರಾಜ ಮಹಾಸ್ವಾಮಿಗಳು ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದು ಸಮಾಜದ ಭಕ್ತರನ್ನು ಸುಶಿಕ್ಷತರನ್ನಾಗಿ ಮಾಡುವುದಲ್ಲದೆ ಸಮಾಜವನ್ನು ಭದ್ರಗೊಳಿಸಿದರು.

ಅದೇ ರೀತಿ ಲಿಂ.ಹಿರಿಯ ತರಳಬಾಳು ಜಗದ್ಗುರು ಶ್ರೀ ಶಿವಕುಮಾರ ಮಹಾಸ್ವಾಮಿಗಳವರು ಸಾಧು ಸಮಾಜವನ್ನು ಶೈಕ್ಷಣಿಕವಾಗಿ ಆರ್ಥಿಕವಾಗಿ ಸಾಮಾಜಿಕವಾಗಿ ರಾಜಕೀಯವಾಗಿ ಸದೃಢಗೊಳಿಸಿ ಸಮಾಜ ಬಾಂಧವರು ತಲೆಯೆತ್ತಿ ನಡೆಯುವಂತೆ ಮಾಡಿದ್ದಾರೆ. ಮುಂದುವರೆದು ಇಂದಿನ 21ನೇ ಜಗದ್ಗುರುಗಳವರು ಸಮಾಜವನ್ನು ಸಮರ್ಥವಾಗಿ ಮುನ್ನಡೆಸಿಕೊಂಡು ಬರುತ್ತಿದ್ದಾರೆ.

ಹಿಂದೆ ದುಗ್ಗಾಣೆ ಮಠವಾಗಿದ್ದ ನಮ್ಮ ಮಠ ಇಂದು 2000 ಕೋಟಿಯಷ್ಟು ಆಸ್ತಿ ಹೊಂದಿದೆ ಎಂಬುದು ನಮ್ಮ ಸಮಾಜದ ಸದ್ಭಕ್ತರ ಹೃದಯ ಶ್ರೀಮಂತಿಕೆಯನ್ನು ಸಂಸ್ಕಾರವನ್ನು ಉದಾರತೆಯನ್ನು ತೋರಿಸುತ್ತದೆ.

ಇಂತಹ ಶ್ರೀಮಂತ ಸಂಸ್ಕಾರಯುತ ಉದಾರವಾದ ದೊಡ್ಡ ಸಮಾಜಕ್ಕೆ ಪೂರಕವಾದ ಅಂತಹ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಇಂದು ತರಳಬಾಳು ಶಿವಸೈನ್ಯ ಸಂಘ ರಾಜ್ಯ ಘಟಕ ಅಸ್ತಿತ್ವಕ್ಕೆ ಬಂದಿದ್ದು ಅದರ ದೇವ ದೇಶಗಳು ತುಂಬಾ ಉತ್ತಮವಾಗಿವೆ. ಇದು ಸಮಾಜಮುಖಿಯಾಗಿ ಕೆಲಸ ಮಾಡಬೇಕು. ಅದರಲ್ಲಿ ನಾನು ಗೌರವಾಧ್ಯಕ್ಷನಾಗಿರುವುದಕ್ಕೆ ಹೆಮ್ಮೆ ಪಡುತ್ತೇನೆ ಎಂದು ವಿಜಯನಗರ ಜಿಲ್ಲೆಯ ಮಹಾಬಲೇಶ್ವರ ಗೌಡರು ತಿಳಿಸಿದರು.

ರೈತ ಮುಖಂಡರಾದ ಹೊನ್ನೂರು ಮುನಿಯಪ್ಪನವರು ಮಾತನಾಡುತ್ತಾ ತರಳಬಾಳು ಶಿವಸೇನೆ ಸಂಘವು ಸಮಾಜದಲ್ಲಿ ತಪ್ಪು ದಾರಿಯಲ್ಲಿ ಹೋಗುವವರನ್ನು ತಿದ್ದುವಂತಹ ಸರಿದಾರಿಗೆ ತರುಹಂತಹ ಕೆಲಸ ಮಾಡಬೇಕೆಂದು ತಿಳಿಸಿದರು.

ಸಮಾರಂಭದಲ್ಲಿ ಭಾಗವಹಿಸಿದ್ದ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ ವಾಮದೇವಪ್ಪನವರು ಮಾತನಾಡುತ್ತಾ ತರಳಬಾಳು ಶಿವಸೈನ್ಯ ಸಂಘವು ಯಾವುದೇ ಸಮಾಜದ ಪ್ರತಿಸ್ಪರ್ಧಿಯಾಗಿ ರೂಪಗೊಂಡಿಲ್ಲ. ಬದಲಾಗಿ ಇದು ನಮ್ಮ ಸಮಾಜವನ್ನು ಮತ್ತಷ್ಟು ಸದೃಢಗೊಳಿಸುವ, ಸಮಾಜಮುಖಿಯಾಗಿ ಕೆಲಸ ಮಾಡುವ, ಉತ್ತಮೋತ್ತಮ ಕೆಲಸ ಮಾಡುವ ನಿಟ್ಟಿನಲ್ಲಿ ರೂಪಗೊಂಡಿದೆ. ನಮ್ಮ ಸಮಾಜದಲ್ಲಿ ಯಾವುದೇ ವ್ಯತ್ಯಾಸಗಳು, ನಿಲುವುಗಳು, ಭಿನ್ನಾಭಿಪ್ರಾಯಗಳು ಇದ್ದರೂ ನಮ್ಮ ಸಮಾಜಕ್ಕೆ ಪಿತಾಮಹಾರೆಂದರೆ ತರಳಬಾಳು ಜಗದ್ಗುರುಗಳೇ ಹೊರತು ಬೇರೆಯವರಲ್ಲ ಎಂಬುದನ್ನು ನಾವೆಲ್ಲ ಮನಗಾಣ ಬೇಕಾಗಿದೆ ಎಂದು ತಿಳಿಸಿದರು.

ನಮ್ಮ ಸಮಾಜ ಹಾಗೂ ಸಂಘವು ತರಳಬಾಳು ಪರಂಪರೆಯ ಗುರುಪೀಠದ ಆದೇಶದಂತೆ ಅದನ್ನು ಚಾಚು ತಪ್ಪದೇ ಪಾಲಿಸಿ ಕೊಂಡು ಬರುವ ಸಂಪ್ರದಾಯವನ್ನು ಹೊಂದಿದೆ. ಅದೇ ರೀತಿ ತರಳಬಾಳು ಶಿವಸೇನೆ ಸಂಘವು ನಡೆದುಕೊಂಡು ಹೋಗಬೇಕೆಂಬುದು ನಮ್ಮ ಆಶಯವಾಗಿದೆ. ಈ ಸಂಘವು ಹೋಬಳಿ ಮಟ್ಟದಿಂದ ಹಿಡಿದು ತಾಲೂಕು,ಜಿಲ್ಲೆ ಗಳಲ್ಲಿ ತನ್ನ ಕಾರ್ಯಕ್ಷೇತ್ರ ಮತ್ತು ವ್ಯಾಪ್ತಿಯನ್ನು ವಿಸ್ತರಿಸಿಕೊಂಡು ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದಾವಣಗೆರೆ ಮಹಾನಗರ ಪಾಲಿಕೆಯ ಸದಸ್ಯರಾದ ಗಡಿಗುಡಾಳ್ ಮಂಜುನಾಥ್ ರವರು ಮಾತನಾಡುತ್ತ ತರಳಬಾಳು ಶಿವಸೈನ್ಯ ಸಂಘ ರಾಜ್ಯ ಘಟಕ ಇಂದು ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಇದರಿಂದ ಇದರ ಜವಾಬ್ದಾರಿಯು ಕೂಡ ಹೆಚ್ಚಾಗಿದೆ.ಈ ಸಂಘಕ್ಕೆ ಯಾವುದೇ ರೀತಿಯ ಸಹಕಾರ ಬೇಕಾದರೂ ನಾನು ಮಾಡಲು ಸಿದ್ಧ. ಸಂಘವು ನಮ್ಮ ಸಮಾಜದ ಯಾರೇ ಬಂದವರು ಉತ್ತಮ ಉತ್ತಮ ಸಾಧನೆಗಳನ್ನು ಕೆಲಸಗಳನ್ನು ಮಾಡಿದಾಗ ಅವರನ್ನು ಗುರುತಿಸಿ ಬೆಂಬಲಿಸುವ ಬೆನ್ನುತಟ್ಟುವ ಕೆಲಸ ಮಾಡಬೇಕು ಎಂಬ ಅಭಿಪ್ರಾಯ ಹಂಚಿಕೊಂಡರು.
ಸಮಾರಂಭದ ಆರಂಭದಲ್ಲಿ ಶಿವಸೈನ್ಯ ಸಂಘದಲ್ಲಿ ಇದುವರೆಗೂ ಕೆಲಸ ನಿರ್ವಹಿಸಿದಂತ ಪದಾಧಿಕಾರಿಗಳಿಗೆ ಗೌರವಿಸಿ ಸನ್ಮಾನಿಸಿದರು.

ನೂತನವಾಗಿ ಅಸ್ತಿತ್ವಕ್ಕೆ ಬಂದ ತರಳಬಾಳು ಶಿವಸೈನ್ಯ ಸಂಘ ರಾಜ್ಯ ಘಟಕದ ಅಧ್ಯಕ್ಷರಾಗಿ ಶಶಿಧರ ಹೆಮ್ಮನಬೇತೂರು ಗೌರವಾಧ್ಯಕ್ಷರಾಗಿ, ವಿಜಯನಗರ ಜಿಲ್ಲೆಯ ಮಹಾಬಲೇಶ್ವರ ಗೌಡರು ಹಾಗೂ ದಾವಣಗೆರೆಯ ಶ್ರೀನಿವಾಸ್ ಶಿವಗಂಗಾ, ಉಪಾಧ್ಯಕ್ಷರಾಗಿ ಕೆ ಬಿ ಮೋಹನ್ ಸಿರಿಗೆರೆ, ಅಶ್ವಿನ್ ಕೆ ಪಿ ನಿಂಬೆಗುಂದಿ ಶಿಕಾರಿಪುರ ವೀರಣ್ಣ ಮಾಕನೂರು, ಕೆಬಿ ಶ್ರೀಧರ್ ಪಾಟೀಲ್ ಭದ್ರಾವತಿ, ಲಿಂಗರಾಜ್ ಆಗಸನಕಟ್ಟೆ ಹಾಗೂ ಕಾರ್ಯದರ್ಶಿಯಾಗಿ ಬಸವನಗೌಡರು ವಕೀಲರು ವಿಜಯನಗರ, ಕೋಶಾಧ್ಯಕ್ಷರಾಗಿ ಶಿವಕುಮಾರ್ ಡಿಎಂ ಕೋರಟಿಕೆರೆ, ಹೀಗೆ ಒಟ್ಟು 39 ಪದಾಧಿಕಾರಿಗಳು ಪದಗ್ರಹಣವನ್ನು ಸ್ವೀಕರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕಕ್ಕರಗೊಳ್ಳದ ಕೆ ಜಿ ಬಸವನಗೌಡರು ವಹಿಸಿದ್ದರು. ಪಿ.ಮಹಾಬಲೇಶ್ವರ ಗೌಡ್ರು, ಬಿ.ವಾಮದೇವಪ್ಪ, ಹೊನ್ನೂರು ಮುನಿಯಪ್ಪ, ರಾಮಗೊಂಡನಹಳ್ಳಿ ಜಯಣ್ಣ, ಬೇತೂರು ಸಂಗನಗೌಡ್ರು, ಮಾಗನೂರು ಉಮೇಶಗೌಡ್ರು, ಯಶವಂತಗೌಡ್ರು, ಶ್ರೀನಿವಾಸ ಶಿವಗಂಗಾ, ಕೆ.ನಾಗಪ್ಪ ಮೇಷ್ಟ್ರು, ಕಂಸಾಗರ ಪಂಚಣ್ಣ, ಬೇತೂರು ರೇವಣಸಿದ್ದಪ್ಪ ಮರಡಿ, ಶಶಿಧರ ಹೆಮ್ಮನಬೇತೂರು, ಶಿವರಾಜ್ ಕಬ್ಬೂರು, ಕಾವಲಹಳ್ಳಿ ಪ್ರಭು, ಶಿವಕುಮಾರ್ ಗಡಿಗುಡಾಳ್ ಮಂಜುನಾಥ್ ಮತ್ತಿತರರು.ಕಾರ್ಯಕ್ರಮದಲ್ಲಿ ಪ್ರಭು ಕಾವಲಹಳ್ಳಿ,ಆರ್ ಜಿ ರುದ್ರೇಶ್, ಬಿಎಸ್ ಪ್ರಕಾಶ್, ಪ್ರಕಾಶ್ ಕಬ್ಬೂರು, ಕುಮಾರ್ ಮಳ್ಳಿಕಟ್ಟೆ, ಬಸವರಾಜ್ ಮುಡೇನಹಳ್ಳಿ, ನರೇಂದ್ರ ರಾಂಪುರ, ಸತೀಶ್ ಸಿರಿಗೆರೆ ಸೇರಿದಂತೆ ಸುಮಾರು 10 ಜಿಲ್ಲೆಗಳಿಂದ 250 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.

ಆರಂಭದಲ್ಲಿ ಸಿ ಜಿ ಜಗದೀಶ್ ಕೂಲಂಬಿ ಸ್ವಾಗತಿಸಿದರು. ಶಿವರಾಜ್ ಕಬ್ಬೂರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಸುದ್ದಿದಿನ. ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

Published

on

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.

ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್‌ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.

ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.

ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

Continue Reading

ದಿನದ ಸುದ್ದಿ

ಬ್ಯಾಕ್‌ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್‌ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್‌ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್‌ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.

ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending