Connect with us

ದಿನದ ಸುದ್ದಿ

ದಾವಣಗೆರೆ | ತರಳಬಾಳು ಶಿವಸೈನ್ಯ ಸಂಘ ರಾಜ್ಯ ಘಟಕದ ಪದಾಧಿಕಾರಿಗಳ ಪದಗ್ರಹಣ

Published

on

ಸುದ್ದಿದಿನ,ದಾವಣಗೆರೆ:900 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಸಾಧು ಸದ್ಧರ್ಮ ವೀರಶೈವ ಸಮಾಜಕ್ಕೆ ಕಷ್ಟ ಅಪರೇಷಗಳನ್ನು ನೀಡಿದಂತವರು ಹಾಗೂ ಭದ್ರವಾದ ನೆಲೆಯನ್ನು, ಸಂಸ್ಕಾರವನ್ನು,ಗಟ್ಟಿತನವನ್ನು ತಂದುಕೊಟ್ಟಂತವರು ಲಿಂ.ತರಳಬಾಳು ಜಗದ್ಗುರು ಶ್ರೀ ಗುರುಶಾಂತರಾಜ ಮಹಾಸ್ವಾಮಿಗಳವರು.

ಸಾಧು ಸದ್ಧರ್ಮ ಸಮಾಜ ಅಸಂಘಟಿತವಾದ ಸಂದರ್ಭದಲ್ಲಿ ಈ ಸಮಾಜವನ್ನು ಒಗ್ಗೂಡಿಸುವ, ಸಮಾಜಕ್ಕೆ ಪ್ರಜ್ಞೆ, ಪಸ್ಟ ರೂಪ ನೀಡಬೇಕು ಎನ್ನುವ ವಿಚಾರಧಾರೆಯಲ್ಲಿ ಸುಸಂಘಟಿತವಾದ ಸಮಾಜ ನಿರ್ಮಾಣ ಮಾಡಬೇಕು ಎಂಬ ನಿಟ್ಟಿನಲ್ಲಿ ಗುರುಶಾಂತರಾಜ ಮಹಾಸ್ವಾಮಿಗಳು ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದು ಸಮಾಜದ ಭಕ್ತರನ್ನು ಸುಶಿಕ್ಷತರನ್ನಾಗಿ ಮಾಡುವುದಲ್ಲದೆ ಸಮಾಜವನ್ನು ಭದ್ರಗೊಳಿಸಿದರು.

ಅದೇ ರೀತಿ ಲಿಂ.ಹಿರಿಯ ತರಳಬಾಳು ಜಗದ್ಗುರು ಶ್ರೀ ಶಿವಕುಮಾರ ಮಹಾಸ್ವಾಮಿಗಳವರು ಸಾಧು ಸಮಾಜವನ್ನು ಶೈಕ್ಷಣಿಕವಾಗಿ ಆರ್ಥಿಕವಾಗಿ ಸಾಮಾಜಿಕವಾಗಿ ರಾಜಕೀಯವಾಗಿ ಸದೃಢಗೊಳಿಸಿ ಸಮಾಜ ಬಾಂಧವರು ತಲೆಯೆತ್ತಿ ನಡೆಯುವಂತೆ ಮಾಡಿದ್ದಾರೆ. ಮುಂದುವರೆದು ಇಂದಿನ 21ನೇ ಜಗದ್ಗುರುಗಳವರು ಸಮಾಜವನ್ನು ಸಮರ್ಥವಾಗಿ ಮುನ್ನಡೆಸಿಕೊಂಡು ಬರುತ್ತಿದ್ದಾರೆ.

ಹಿಂದೆ ದುಗ್ಗಾಣೆ ಮಠವಾಗಿದ್ದ ನಮ್ಮ ಮಠ ಇಂದು 2000 ಕೋಟಿಯಷ್ಟು ಆಸ್ತಿ ಹೊಂದಿದೆ ಎಂಬುದು ನಮ್ಮ ಸಮಾಜದ ಸದ್ಭಕ್ತರ ಹೃದಯ ಶ್ರೀಮಂತಿಕೆಯನ್ನು ಸಂಸ್ಕಾರವನ್ನು ಉದಾರತೆಯನ್ನು ತೋರಿಸುತ್ತದೆ.

ಇಂತಹ ಶ್ರೀಮಂತ ಸಂಸ್ಕಾರಯುತ ಉದಾರವಾದ ದೊಡ್ಡ ಸಮಾಜಕ್ಕೆ ಪೂರಕವಾದ ಅಂತಹ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಇಂದು ತರಳಬಾಳು ಶಿವಸೈನ್ಯ ಸಂಘ ರಾಜ್ಯ ಘಟಕ ಅಸ್ತಿತ್ವಕ್ಕೆ ಬಂದಿದ್ದು ಅದರ ದೇವ ದೇಶಗಳು ತುಂಬಾ ಉತ್ತಮವಾಗಿವೆ. ಇದು ಸಮಾಜಮುಖಿಯಾಗಿ ಕೆಲಸ ಮಾಡಬೇಕು. ಅದರಲ್ಲಿ ನಾನು ಗೌರವಾಧ್ಯಕ್ಷನಾಗಿರುವುದಕ್ಕೆ ಹೆಮ್ಮೆ ಪಡುತ್ತೇನೆ ಎಂದು ವಿಜಯನಗರ ಜಿಲ್ಲೆಯ ಮಹಾಬಲೇಶ್ವರ ಗೌಡರು ತಿಳಿಸಿದರು.

ರೈತ ಮುಖಂಡರಾದ ಹೊನ್ನೂರು ಮುನಿಯಪ್ಪನವರು ಮಾತನಾಡುತ್ತಾ ತರಳಬಾಳು ಶಿವಸೇನೆ ಸಂಘವು ಸಮಾಜದಲ್ಲಿ ತಪ್ಪು ದಾರಿಯಲ್ಲಿ ಹೋಗುವವರನ್ನು ತಿದ್ದುವಂತಹ ಸರಿದಾರಿಗೆ ತರುಹಂತಹ ಕೆಲಸ ಮಾಡಬೇಕೆಂದು ತಿಳಿಸಿದರು.

ಸಮಾರಂಭದಲ್ಲಿ ಭಾಗವಹಿಸಿದ್ದ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ ವಾಮದೇವಪ್ಪನವರು ಮಾತನಾಡುತ್ತಾ ತರಳಬಾಳು ಶಿವಸೈನ್ಯ ಸಂಘವು ಯಾವುದೇ ಸಮಾಜದ ಪ್ರತಿಸ್ಪರ್ಧಿಯಾಗಿ ರೂಪಗೊಂಡಿಲ್ಲ. ಬದಲಾಗಿ ಇದು ನಮ್ಮ ಸಮಾಜವನ್ನು ಮತ್ತಷ್ಟು ಸದೃಢಗೊಳಿಸುವ, ಸಮಾಜಮುಖಿಯಾಗಿ ಕೆಲಸ ಮಾಡುವ, ಉತ್ತಮೋತ್ತಮ ಕೆಲಸ ಮಾಡುವ ನಿಟ್ಟಿನಲ್ಲಿ ರೂಪಗೊಂಡಿದೆ. ನಮ್ಮ ಸಮಾಜದಲ್ಲಿ ಯಾವುದೇ ವ್ಯತ್ಯಾಸಗಳು, ನಿಲುವುಗಳು, ಭಿನ್ನಾಭಿಪ್ರಾಯಗಳು ಇದ್ದರೂ ನಮ್ಮ ಸಮಾಜಕ್ಕೆ ಪಿತಾಮಹಾರೆಂದರೆ ತರಳಬಾಳು ಜಗದ್ಗುರುಗಳೇ ಹೊರತು ಬೇರೆಯವರಲ್ಲ ಎಂಬುದನ್ನು ನಾವೆಲ್ಲ ಮನಗಾಣ ಬೇಕಾಗಿದೆ ಎಂದು ತಿಳಿಸಿದರು.

ನಮ್ಮ ಸಮಾಜ ಹಾಗೂ ಸಂಘವು ತರಳಬಾಳು ಪರಂಪರೆಯ ಗುರುಪೀಠದ ಆದೇಶದಂತೆ ಅದನ್ನು ಚಾಚು ತಪ್ಪದೇ ಪಾಲಿಸಿ ಕೊಂಡು ಬರುವ ಸಂಪ್ರದಾಯವನ್ನು ಹೊಂದಿದೆ. ಅದೇ ರೀತಿ ತರಳಬಾಳು ಶಿವಸೇನೆ ಸಂಘವು ನಡೆದುಕೊಂಡು ಹೋಗಬೇಕೆಂಬುದು ನಮ್ಮ ಆಶಯವಾಗಿದೆ. ಈ ಸಂಘವು ಹೋಬಳಿ ಮಟ್ಟದಿಂದ ಹಿಡಿದು ತಾಲೂಕು,ಜಿಲ್ಲೆ ಗಳಲ್ಲಿ ತನ್ನ ಕಾರ್ಯಕ್ಷೇತ್ರ ಮತ್ತು ವ್ಯಾಪ್ತಿಯನ್ನು ವಿಸ್ತರಿಸಿಕೊಂಡು ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದಾವಣಗೆರೆ ಮಹಾನಗರ ಪಾಲಿಕೆಯ ಸದಸ್ಯರಾದ ಗಡಿಗುಡಾಳ್ ಮಂಜುನಾಥ್ ರವರು ಮಾತನಾಡುತ್ತ ತರಳಬಾಳು ಶಿವಸೈನ್ಯ ಸಂಘ ರಾಜ್ಯ ಘಟಕ ಇಂದು ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಇದರಿಂದ ಇದರ ಜವಾಬ್ದಾರಿಯು ಕೂಡ ಹೆಚ್ಚಾಗಿದೆ.ಈ ಸಂಘಕ್ಕೆ ಯಾವುದೇ ರೀತಿಯ ಸಹಕಾರ ಬೇಕಾದರೂ ನಾನು ಮಾಡಲು ಸಿದ್ಧ. ಸಂಘವು ನಮ್ಮ ಸಮಾಜದ ಯಾರೇ ಬಂದವರು ಉತ್ತಮ ಉತ್ತಮ ಸಾಧನೆಗಳನ್ನು ಕೆಲಸಗಳನ್ನು ಮಾಡಿದಾಗ ಅವರನ್ನು ಗುರುತಿಸಿ ಬೆಂಬಲಿಸುವ ಬೆನ್ನುತಟ್ಟುವ ಕೆಲಸ ಮಾಡಬೇಕು ಎಂಬ ಅಭಿಪ್ರಾಯ ಹಂಚಿಕೊಂಡರು.
ಸಮಾರಂಭದ ಆರಂಭದಲ್ಲಿ ಶಿವಸೈನ್ಯ ಸಂಘದಲ್ಲಿ ಇದುವರೆಗೂ ಕೆಲಸ ನಿರ್ವಹಿಸಿದಂತ ಪದಾಧಿಕಾರಿಗಳಿಗೆ ಗೌರವಿಸಿ ಸನ್ಮಾನಿಸಿದರು.

ನೂತನವಾಗಿ ಅಸ್ತಿತ್ವಕ್ಕೆ ಬಂದ ತರಳಬಾಳು ಶಿವಸೈನ್ಯ ಸಂಘ ರಾಜ್ಯ ಘಟಕದ ಅಧ್ಯಕ್ಷರಾಗಿ ಶಶಿಧರ ಹೆಮ್ಮನಬೇತೂರು ಗೌರವಾಧ್ಯಕ್ಷರಾಗಿ, ವಿಜಯನಗರ ಜಿಲ್ಲೆಯ ಮಹಾಬಲೇಶ್ವರ ಗೌಡರು ಹಾಗೂ ದಾವಣಗೆರೆಯ ಶ್ರೀನಿವಾಸ್ ಶಿವಗಂಗಾ, ಉಪಾಧ್ಯಕ್ಷರಾಗಿ ಕೆ ಬಿ ಮೋಹನ್ ಸಿರಿಗೆರೆ, ಅಶ್ವಿನ್ ಕೆ ಪಿ ನಿಂಬೆಗುಂದಿ ಶಿಕಾರಿಪುರ ವೀರಣ್ಣ ಮಾಕನೂರು, ಕೆಬಿ ಶ್ರೀಧರ್ ಪಾಟೀಲ್ ಭದ್ರಾವತಿ, ಲಿಂಗರಾಜ್ ಆಗಸನಕಟ್ಟೆ ಹಾಗೂ ಕಾರ್ಯದರ್ಶಿಯಾಗಿ ಬಸವನಗೌಡರು ವಕೀಲರು ವಿಜಯನಗರ, ಕೋಶಾಧ್ಯಕ್ಷರಾಗಿ ಶಿವಕುಮಾರ್ ಡಿಎಂ ಕೋರಟಿಕೆರೆ, ಹೀಗೆ ಒಟ್ಟು 39 ಪದಾಧಿಕಾರಿಗಳು ಪದಗ್ರಹಣವನ್ನು ಸ್ವೀಕರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕಕ್ಕರಗೊಳ್ಳದ ಕೆ ಜಿ ಬಸವನಗೌಡರು ವಹಿಸಿದ್ದರು. ಪಿ.ಮಹಾಬಲೇಶ್ವರ ಗೌಡ್ರು, ಬಿ.ವಾಮದೇವಪ್ಪ, ಹೊನ್ನೂರು ಮುನಿಯಪ್ಪ, ರಾಮಗೊಂಡನಹಳ್ಳಿ ಜಯಣ್ಣ, ಬೇತೂರು ಸಂಗನಗೌಡ್ರು, ಮಾಗನೂರು ಉಮೇಶಗೌಡ್ರು, ಯಶವಂತಗೌಡ್ರು, ಶ್ರೀನಿವಾಸ ಶಿವಗಂಗಾ, ಕೆ.ನಾಗಪ್ಪ ಮೇಷ್ಟ್ರು, ಕಂಸಾಗರ ಪಂಚಣ್ಣ, ಬೇತೂರು ರೇವಣಸಿದ್ದಪ್ಪ ಮರಡಿ, ಶಶಿಧರ ಹೆಮ್ಮನಬೇತೂರು, ಶಿವರಾಜ್ ಕಬ್ಬೂರು, ಕಾವಲಹಳ್ಳಿ ಪ್ರಭು, ಶಿವಕುಮಾರ್ ಗಡಿಗುಡಾಳ್ ಮಂಜುನಾಥ್ ಮತ್ತಿತರರು.ಕಾರ್ಯಕ್ರಮದಲ್ಲಿ ಪ್ರಭು ಕಾವಲಹಳ್ಳಿ,ಆರ್ ಜಿ ರುದ್ರೇಶ್, ಬಿಎಸ್ ಪ್ರಕಾಶ್, ಪ್ರಕಾಶ್ ಕಬ್ಬೂರು, ಕುಮಾರ್ ಮಳ್ಳಿಕಟ್ಟೆ, ಬಸವರಾಜ್ ಮುಡೇನಹಳ್ಳಿ, ನರೇಂದ್ರ ರಾಂಪುರ, ಸತೀಶ್ ಸಿರಿಗೆರೆ ಸೇರಿದಂತೆ ಸುಮಾರು 10 ಜಿಲ್ಲೆಗಳಿಂದ 250 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.

ಆರಂಭದಲ್ಲಿ ಸಿ ಜಿ ಜಗದೀಶ್ ಕೂಲಂಬಿ ಸ್ವಾಗತಿಸಿದರು. ಶಿವರಾಜ್ ಕಬ್ಬೂರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಸುದ್ದಿದಿನ. ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending