Connect with us

ದಿನದ ಸುದ್ದಿ

ತರಳಬಾಳು ಹುಣ್ಣಿಮೆ ಮಹೋತ್ಸವದ ಅಂಗವಾಗಿ ಬೈಕ್ ರ್ಯಾಲಿ

Published

on

  • ವರದಿ : ಸಿ ಜಗದೀಶ್ ಕೂಲಂಬಿ

ಸುದ್ದಿದಿನ,ದಾವಣಗೆರೆ:ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ಇದೆ ಫೆಬ್ರವರಿ 04 ರಿಂದ 12 ರವರೆಗೆ ನಡೆಯಲಿರುವ 76 ನೇ ತರಳಬಾಳು ಹುಣ್ಣಿಮೆ ಮಹೋತ್ಸವದ ಅಂಗವಾಗಿ ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದಿಂದ ಭರಮಸಾಗರದವರೆಗೆ ಬೃಹತ್ ಬೈಕ್ ರ್ಯಾಲಿಯ ಮೂಲಕ ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾದೀಶ ಶ್ರೀ ತರಳಬಾಳು ಜಗದ್ಗುರು 1108 ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರನ್ನು ಕರೆತರಲಾಗುವುದು.

ಇಂದು ಭರಮಸಾಗರದ ನಿರಂಜನ ಮೂರ್ತಿ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀ ತರಳಬಾಳು ಶಿವಸೈನ್ಯ ರಾಜ್ಯ ಘಟಕದ ಪದಾಧಿಕಾರಿಗಳ ಸಭೆಯಲ್ಲಿ 76ನೇ ತರಳಬಾಳು ಹುಣ್ಣಿಮೆ ಮಹೋತ್ಸವದ ಅಂಗವಾಗಿ ಬೈಕ್ ರ್ಯಾಲಿಯನ್ನು ಶ್ರೀ ತರಳಬಾಳು ಶಿವಸೈನ್ಯ ರಾಜ್ಯ ಘಟಕದ ನೇತೃತ್ವದಲ್ಲಿ ಹಮ್ಮಿಕೊಂಡು ಆ ಮೂಲಕ ಹುಣ್ಣಿಮೆಗೆ ಶುಭ ಕೋರಬೇಕೆಂದು ತೀರ್ಮಾನಿಸಲಾಯಿತು.

ಬೈಕ್ ರ್ಯಾಲಿಯು ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ ಸಿರಿಗೆರೆಯಿಂದ ಫೆ 4 ರ ಬೆಳಗ್ಗೆ 10 ಗಂಟೆಗೆ ಪ್ರಾರಂಭಗೊಂಡು ಭರಮಸಾಗರ ಹೋಬಳಿಯ ಸುಮಾರು 30 ಹಳ್ಳಿಗಳ ಮೂಲಕ ಸಾಗಿ ಸುಮಾರು 5000 ಬೈಕ್ ರ್ಯಾಲಿಯ ಮೂಲಕ ಸಂಜೆ ನಾಲ್ಕು ಗಂಟೆಗೆ ಭರಮಸಾಗರದಲ್ಲಿ ನಡೆಯಲಿರುವ ಶ್ರೀ ತರಳಬಾಳು ಹುಣ್ಣಿಮೆ ಮಹೋತ್ಸವದ ಮಹಾ ಮಂಟಪಕ್ಕೆ ತಲುಪುವುದು.

ಭರಮಸಾಗರ ಹೋಬಳಿಯ ಭಕ್ತರ ಆಶಯದಂತೆ ಅಂದು ಸಂಜೆ ನಾಲ್ಕು ಗಂಟೆಗೆ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ತೆಪ್ಪೋತ್ಸವ ಕಾರ್ಯಕ್ರಮವನ್ನು ಭರಮಸಾಗರದ ಕೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಹಾಗೂ ಸರ್ವ ಸಮಾಜದ ಬಾಂಧವರು ಭಾಗವಹಿಸಿ ಬೈಕ್ ರ್ಯಾಲಿಯನ್ನು ಹಾಗೂ 76ನೇ ತರಳಬಾಳು ಹುಣ್ಣಿಮೆ ಮಹೋತ್ಸವವನ್ನು ಯಶಸ್ವಿಗೊಳಿಸಬೇಕೆಂದು ಶ್ರೀ ತರಳಬಾಳು ಶಿವಸೈನ್ಯ ರಾಜ್ಯ ಘಟಕ ದಾವಣಗೆರೆ ಇವರು ಪತ್ರಿಕಾ ಪ್ರಕಟಣೆಯ ಮೂಲಕ ಕೋರಿಕೊಂಡಿದ್ದಾರೆ.

ಸಭೆಯಲ್ಲಿ ಶಶಿಧರ ಹೆಮ್ಮನ ಬೇತೂರು, ಮೋಹನ್ ಸಿರಿಗೆರೆ, ಕುಮಾರ್ ಮೆಳ್ಳೆ ಕಟ್ಟೆ, ಬಸವರಾಜ್ ಸಿರಿಗೆರೆ, ಶೈಲೇಶ್ ಚೌಲಹಳ್ಳಿ, ಶ್ರೀನಿವಾಸ್ ರಾಮಘಟ್ಟ, ಸಿದ್ದೇಶ್ ನಂದಿ ಕಂಬ, ರಾಕೇಶ್ ಸಾತಿ, ಲಿಂಗರಾಜ್ ನಾಗನೂರು, ಅಶೋಕ್ ಹೊನ್ನ ನಾಯಕನಹಳ್ಳಿ, ಮಲ್ಲಿಕಾರ್ಜುನ್ ಮೆಳ್ಳೆಕಟ್ಟೆ, ಸಂತೋಷ್ ಗಂಗನಕಟ್ಟೆ, ಮತ್ತಿತರ ಪದಾಧಿಕಾರಿಗಳು ಹಾಗೂ ಗಣ್ಯರು ಹಾಜರಿದ್ದರು.

ವಿಶೇಷ ಸೂಚನೆ : ಫೆಬ್ರವರಿ 4 ರಿಂದ 12 ರವರೆಗೆ ನಡೆಯುವ ತರಳಬಾಳು ಹುಣ್ಣಿಮೆಗೆ ದಾವಣಗೆರೆಯಿಂದ ಭರಮಸಾಗರಕ್ಕೆ ತೆರಳುವ ಭಕ್ತಾದಿಗಳಿಗೆ ಹೆಬ್ಬಾಳು ಟೋಲ್ ನಲ್ಲಿ ಉಚಿತ ಪ್ರವೇಶ ಕಲ್ಪಿಸಲಾಗಿರುತ್ತದೆ. ಭಕ್ತರು ತಮ್ಮ ವಾಹನಗಳಿಗೆ ಶಿವ ಧ್ವಜ ಕಟ್ಟಿಕೊಂಡವರಿಗೆ ಉಚಿತ ಪ್ರವೇಶವಿರುತ್ತದೆ.

ದಾವಣಗೆರೆ ಜಿಲ್ಲಾ ಪತ್ರಿಕಾ ಹಾಗೂ ಮಾಧ್ಯಮದ ಎಲ್ಲಾ ವರದಿಗಾರ ಮಿತ್ರರು ಈ ಮೇಲಿನ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾರ್ಯಕ್ರಮದ ಸುದ್ದಿಯನ್ನು ಮಾಡುವುದರ ಮೂಲಕ ನಾಡಿನಾದ್ಯಂತ ಜನರಿಗೆ ತಲುಪಿಸಬೇಕೆಂದು ಕೋರಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸೌಜನ್ಯ ಸಾವು ; ನಾಡಿನಾದ್ಯಂತ ಜನಾಂದೋಲನ : ಹಿರಿಯ ಪತ್ರಕರ್ತ ಪುರಂದರ್ ಲೋಕಿಕೆರೆ

Published

on

ಸುದ್ದಿದಿನ,ದಾವಣಗೆರೆ:ಸೌಜನ್ಯ ಸಾವಿಗೆ ಕಾರಣರಾದ ಪಾಪಿಗಳನ್ನು ಕೂಡಲೇ ಬಂಧಿಸಬೇಕು. ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳ ಶ್ರೀ ಮಂಜುನಾಥ ದೇವಸ್ಥಾನದ ಸಂಪೂರ್ಣ ಆಡಳಿತವನ್ನು ‘ಹೆಗಡೆ’ ಕುಟುಂಬ ಆರೋಪ ಮುಕ್ತರಾಗುವವರೆಗೂ ಸರ್ಕಾರವೇ ವಹಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಪುರಂದರ್ ಲೋಕಿಕೆರೆ ಒತ್ತಾಯಿಸಿದರು.

ಸೌಜನ್ಯ ಮೇಲೆ ಅತ್ಯಾಚಾರ ಎಸಗಿ, ಕೊಲೆಗೈದ ಆರೋಪಿಗಳನ್ನು ಬಂಧಿಸುವಂತೆ, ಹಾಗೂ ಸಮೀರ್ ಎಂಬ ಯೂಟ್ಯೂಬರ್‌ಗೆ ರಕ್ಷಣೆ ನೀಡುವಂತೆ ಮತ್ತು ಸಂತೋಷ್‌ರಾವ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಕೋರಿ ವಿವಿಧ ಪ್ರಗತಿಪರ ಸಂಘಟನೆಗಳು ಮಂಗಳವಾರ ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿ ಅವರು ಮಾತನಾಡಿದರು.

ಸೌಜನ್ಯ ಸಾವಿನ ಮರುತನಿಖೆಯೊಂದಿಗೆ ಸುಮಾರು 20-30 ವರ್ಷಗಳಿಂದ ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಅಸಹಜ ಸಾವು, ಕೊಲೆ, ಅತ್ಯಾಚಾರಗಳನ್ನು ಮರುತನಿಖೆಗೆ ಒಳಪಡಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತಕ್ರಮ ಕೈಗೊಳ್ಳಬೇಕು. ಇಲ್ಲದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರದ ನಿರ್ಲಕ್ಷö್ಯತೆ ಹಾಗೂ ಸೌಜನ್ಯ ಸಾವಿಗೆ ಕಾರಣರಾದ ಪಾಪಿಗಳು ಮತ್ತು ಇವರಿಗೆ ಬೆಂಬಲವಾಗಿ ನಿಂತಿರುವ ಪ್ರತಿಷ್ಠಿತರ ಮುಖವಾಡಗಳನ್ನು ಕಳಚುವ ನಿಟ್ಟಿನಲ್ಲಿ ಕರ್ನಾಟಕದ ಹೃದಯ ಭಾಗವಾದ ದಾವಣಗೆರೆಯಿಂದಲೇ ನಾಡಿನಾದ್ಯಂತ ಜನಾಂದೋಲನ ರೂಪಿಸಲಾಗುವುದು.

ಸಮೀರ್ ಎಂಬ ಯುವಕ ಮುಸ್ಲಿಂ ಎಂಬ ಒಂದೇ ಕಾರಣಕ್ಕೆ ಅವನ ವಸ್ತುನಿಷ್ಠ ತನಿಖೆಯನ್ನು ದಾರಿ ತಪ್ಪಿಸುವ ಮತ್ತು ಕೋಮುವಾದಿ ಬಣ್ಣ ಬಳಿಯುವ ಪ್ರಯತ್ನಕ್ಕೆ ಕೆಲವು ಕೋಮುಕ್ರಿಮಿಗಳು ಹರಸಾಹಸ ಪಡುತ್ತಿವೆ. ಹಿಂದೂ ಸಮುದಾಯ ಎನ್ನುವುದಕ್ಕಿಂತ ಒಂದು ಹೆಣ್ಣು ಎಂಬ ಅಂತಃಕರಣದಿಂದ ತನ್ನ ಬದುಕನ್ನೆ ಲೆಕ್ಕಿಸದೆ ಇಂತಹ ಸಾಹಸಕ್ಕೆ ಮುಂದಾಗಿರುವ ಯುವಕನ ಬೆಂಬಲಕ್ಕೆ ನಾವು ಧರ್ಮತೀತವಾಗಿ ನಿಂತಾಗಲೇ ಮಾನವೀಯತೆಗೆ ಅರ್ಥ ಬರಲು ಸಾಧ್ಯ.

ಆದ್ದರಿಂದ ದಾವಣಗೆರೆಯ ಎಲ್ಲಾ ಪ್ರಗತಿಪರ ಸಂಘಟನೆಗಳು ಸಮೀರ್ ಜೊತೆಗಿದ್ದು, ಆ ಯುವಕನಿಗೆ ಯಾವುದೇ ರೀತಿಯ ಹಲ್ಲೆಯಾಗದಂತೆ, ಸಮೀರ್ ಹಾಗೂ ಆತನ ಕುಟುಂಬಕ್ಕೆ ಕರ್ನಾಟಕ ಸರ್ಕಾರ ರಕ್ಷಣೆ ನೀಡಬೇಕೆಂದು ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ಆಗ್ರಹಿಸುತ್ತೇವೆ. ಇದರ ಹೊರತಾಗಿ ಸಮೀರ್ ಹಾಗೂ ಅವನ ಕುಟುಂಬಕ್ಕೆ ಯಾವುದೇ ಅನ್ಯಾಯವಾದರೂ ಅದರ ನೇರ ಹೊಣೆಯನ್ನು ಸಿದ್ಧರಾಮಯ್ಯನ ಸರ್ಕಾರವೇ ಹೋರಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ಸೌಜನ್ಯ ಕೊಲೆ ಹಾಗೂ ಅತ್ಯಾಚಾರದಲ್ಲಿ ಪೊಲೀಸರ ಕುತಂತ್ರದಿಂದಾಗಿ ಸಂತೋಷ್‌ರಾವ್ ಸುಮಾರು 11 ವರ್ಷಗಳ ಕಾಲ ಜೈಲಿನಲ್ಲಿ ಮಾನಸಿಕ ಯಾತನೆ ಅನುಭವಿಸಿದ್ದಾರೆ. ಅವನ ಕುಟುಂಬ ಸಮಾಜದಲ್ಲಿ ತಲೆಎತ್ತಿ ನಡೆಯದಂತ ಅಪಮಾನಕ್ಕೆ ಗುರಿಯಾಗಿದೆ. ಹೀಗಾಗಿ ಪೋಲಿಸರ ಈ ನಿರ್ಲಕ್ಷö್ಯ ಅದು ಸರ್ಕಾರದ ನಿರ್ಲಕ್ಷö್ಯವೂ ಹೌದು. ಆದ್ದರಿಂದ ಸಂತೋಷ್‌ರಾವ್ ಕುಟುಂಬಕ್ಕೆ ಕೂಡಲೇ ಸರ್ಕಾರ ಸೂಕ್ತ ಪರಿಹಾರವನ್ನು ಘೋಷಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಬಿ.ರುದ್ರಗೌಡ ಗೋಪನಾಳ್, ಜಾಗೃತ ಭಾರತ ವಿಚಾರ ವೇದಿಕೆ ಸಂಚಾಲಕ ಡಾ.ಕೆ.ಎ.ಓಬಳೇಶ್ ಹಾಗೂ ಇತರ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್

Published

on

ಸುದ್ದಿದಿನಡೆಸ್ಕ್:ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಬೇಕು ಎಂದು ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪರಿಷತ್‌ನಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ವೈದ್ಯರು ಯಾವುದೇ ಕಾರಣಕ್ಕೂ ಬೇರೆ ಸ್ಥಳಗಳಲ್ಲಿ ಕಾರ್ಯ ನಿರ್ವಹಿಸುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.

ಈ ಮೊದಲು 2 ಗಂಟೆಗಳ ನಂತರ 1 ಗಂಟೆ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿತ್ತು. ಆದರೆ ವೈದ್ಯರು 1 ಗಂಟೆ ಮುಂಚಿತವಾಗಿ ಹೋಗುವುದು, ಇಲ್ಲವೇ 1 ಗಂಟೆ ತಡವಾಗಿ ಬರುತ್ತಾರೆಂಬ ಆರೋಪ ಕೇಳಿಬರುತ್ತಿದೆ. ಇದನ್ನು ತಡೆಗಟ್ಟಲು ಈ ಕ್ರಮ ತೆಗೆದುಕೊಂಡಿದ್ದಾಗಿ ಸಚಿವರು ಸಮರ್ಥಿಸಿಕೊಂಡಿದ್ದಾರೆ.

ಒAದು ವೇಳೆ ವೈದ್ಯರು, ಉಲ್ಲಂಘನೆ ಮಾಡಿರುವುದು ಕಂಡುಬಂದರೆ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಸಿದ್ದಾರೆ.
ವೈದ್ಯರು ಕರ್ತವ್ಯಕ್ಕೆ ಹಾಜರಾಗುವ ಸಂದರ್ಭದಲ್ಲಿ ನಾಲ್ಕು ಬಾರಿ ಬಯೋಮೆಟ್ರಿಕ್‌ಗೆ ತಮ ಹಸ್ತಮುದ್ರೆ ಹಾಕಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಸಬಲೀಕರಣ, ಸಾಮಾಜಿಕ. ನ್ಯಾಯಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆ ಪೂರಕ ಮತ್ತು ಅವರ ಸಾಧನೆಯ ಮಹತ್ವವನ್ನು ಬೆಳಕಿಗೆ ತರುವ ಉದ್ದೇಶವೇ ಮಹಿಳಾ ದಿನಾಚರಣೆಯ ಉದ್ದೇಶ ಎಂದು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ ವೆಂಕಟೇಶ್ ಬಾಬು ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಿಳಾ ಶಕ್ತಿ, ಸಬಲೀಕರಣ ಮತ್ತು ಸಮಾನ ಅವಕಾಶಗಳ ಅಗತ್ಯತೆಯ ಮಹತ್ವವನ್ನು ವಿವರಿಸಿದರು. ಮಹಿಳೆಯರು ಸಮಾಜದ ನಾಂದಿ ಕಲ್ಲು. ಅವರ ಶಿಕ್ಷಣ, ಆರ್ಥಿಕ ಸ್ವಾವಲಂಬನೆ ಮತ್ತು ನಾಯಕತ್ವಕ್ಕೆ ಪ್ರೋತ್ಸಾಹ ನೀಡಿದರೆ, ಸಮಗ್ರ ಅಭಿವೃದ್ಧಿ ಸಾಧ್ಯ. ಮಹಿಳಾ ಶಕ್ತಿಯನ್ನು ಗುರುತಿಸಿ, ಅವರಿಗೆ ಸಮಾನ ಅವಕಾಶಗಳನ್ನು ಒದಗಿಸುವುದು ನಿಜವಾದ ಸಬಲೀಕರಣ”, ಎಂದು ಅಭಿಪ್ರಾಯಪಟ್ಟರು.

“ಮಹಿಳೆಯರು ಕೇವಲ ಗೃಹ ಜೀವನಕ್ಕೆ ಸೀಮಿತವಾಗದೇ, ವೈಜ್ಞಾನಿಕ, ಆರ್ಥಿಕ, ರಾಜಕೀಯ ಹಾಗೂ ಆಡಳಿತಾತ್ಮಕ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದಾರೆ. ಆದರೆ ಇನ್ನೂ ಅವರು ಎದುರಿಸುತ್ತಿರುವ ಸಾಮಾಜಿಕ ಹಾಗೂ ವೃತ್ತಿಪರ ಸವಾಲುಗಳಿಗೆ ಪರಿಹಾರ ಕಾಣುವುದು ಅವಶ್ಯಕ” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಮಹಿಳಾ ಸಬಲೀಕರಣದ ಮಹತ್ವದ ಕುರಿತು ತಮ್ಮ ಚಿಂತನೆಗಳನ್ನು ಹಂಚಿಕೊಂಡರು.

ಸಮಾಜ ಶಾಸ್ತ್ರ ಪ್ರಾಧ್ಯಾಪಕ ಪ್ರೊ ಸುರೇಶ್ ಅವರು ಮಾತನಾಡಿ, “ಮಹಿಳೆಯರು ಸ್ವತಂತ್ರ ನಿರ್ಧಾರ ಮಾಡಿಕೊಳ್ಳುವಂತಾಗಬೇಕು. ಸಮಾನತೆ ಮಾತ್ರ ಸಬಲೀಕರಣವಲ್ಲ, ಮಹಿಳೆಯರು ಅವರ ಹಕ್ಕುಗಳನ್ನು ಅರಿತು, ಅವುಗಳನ್ನು ಅನುಷ್ಠಾನಗೊಳಿಸಬೇಕು” ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ವಿಭಾಗದ ಮಹಿಳಾ ಶಿಕ್ಷಕರಿಗೆ ಹಾಗೂ ಕಚೇರಿ ಸಿಬ್ಬಂದಿಗಳಿಗೆ ಸನ್ಮಾನ ಮಾಡಲಾಯಿತು.

ಪ್ರೊ ಬಿ ಸಿ ತಹಸಿಲ್ದಾರ್ ಅವರು ತಮ್ಮ ಅಧ್ಯಕ್ಷರ ಭಾಷಣದಲ್ಲಿ “ಈ ರೀತಿಯ ಕಾರ್ಯಕ್ರಮಗಳು ಮಹಿಳೆಯರ ಆತ್ಮವಿಶ್ವಾಸವನ್ನು ಹೆಚ್ಚಿಸುವುದರ ಜೊತೆಗೆ, ವಿದ್ಯಾರ್ಥಿಗಳು ಮಹಿಳಾ ಸಬಲೀಕರಣದ ಬಗ್ಗೆ ಅರಿವು ಹೊಂದಲು ಸಹಾಯ ಮಾಡುತ್ತದೆ” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ನಿರ್ವಹಣಾ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ತೀವ್ರ ಶ್ರಮ ವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending

Shares
FacebookWhatsAppXSMSRedditPinterestSumoMe