Connect with us

ದಿನದ ಸುದ್ದಿ

ಅನ್ನದಾತನ ಉನ್ನತಿಗಾಗಿ ಸಮಾಜಮುಖಿ ಶ್ರಾವಣಾನುಷ್ಟಾನ ಕೈಗೊಂಡಿರುವ ತರಳಬಾಳು ಶ್ರೀ ಜಗದ್ಗುರುವರ್ಯರು

Published

on

ನ್ನಡನಾಡಿನ ಹಬ್ಬ ಹರಿದಿನಗಳ ಸಂಖ್ಯೆಗೆ ಕಡಿವಾಣವ ಹಾಕುವ ಕಾರ್ಯ ಆ ವಿಧಾತನಿಂದಲೂ ಸಾಧ್ಯವಿಲ್ಲ.ಜನರ ಉದ್ದಾರಕ್ಕೂ ? ತಮ್ಮ ಅಸ್ತಿತ್ವದ ಕಡ್ಡಾಯ ಅಭಿವ್ಯಕ್ತಿಗೋ ? ಮುಗ್ಧ ಭಕ್ತರ ಭಾವನೆಯ ಬಂಡವಾಳದ ಸದುಪಯೋಗಕ್ಕೊ,? ಧಾರ್ಮಿಕ ದಬ್ಬಾಳಿಕೆಯ ಪ್ರತಿಷ್ಠೆಗೋ ? ಪ್ರಶ್ನೆ ಮಾಡಲು ಯಾವ ಬುದ್ಧಿವಂತನೂ ಇಲ್ಲ ಎನ್ನುವ ಪರಿಸ್ಥಿತಿಯ ಲಾಭ ಹಾಗೂ ಸ್ವಪ್ರಶಂಸೆಯಿಂದಲೊ ? ಈ ನೆಲದ ಕರ್ಮವೋ,ಎಂಬಂತೆ ನಿತ್ಯವೂ ಸರ್ವಅಲಂಕಾರ ಭೂಷಿತ ಸ್ವಘೋಷಿತ ದೇವಮಾನವ ಕಪಟ ಕಾವಿಧಾರಿಗಳಿಂದಅಡ್ಡ ಪಲ್ಲಕ್ಕಿ, ಉದ್ದಪಲ್ಲಕ್ಕಿ ,ಹೋಮ,ಹವನ,ಯಜ್ಞ ,ಲಕ್ಷ ಪೂಜೆ, ಕೋಟಿ ಪೂಜೆ ಹೀಗೆ ಹೊಸ ಹೆಸರಿಡಲು ಸಾಧ್ಯವಿರದಷ್ಟು ಅತೀರೇಖದ ಅವಿವೇಕಿಗಳ ನಾಟಕಕ್ಕೆ ಮುಗ್ದ ಸಮಾಜ ‘ಭಕ್ತರು ‘ ‘ ಶಿಷ್ಯರು’ ಎಂಬ ಹೆಸರಲ್ಲಿ ಕಣ್ಣಿದ್ದು ಕುರುಡರಾಗಿ,ಕಿವಿ ಇದ್ದು ಕಿವುಡರಾಗಿ ಅವರಾಡುವ,ಆಡಿಸುವ ಡೋಂಗಿ ನಾಟಕಕ್ಕೆ ಪ್ರೇಕ್ಷಕರಾಗಿ ಕೆಲವೊಮ್ಮೆ ದಿಢೀರ್ ಪಾತ್ರಧಾರಿಗಳಾಗಿ ಪ್ರಬುದ್ಧ ನಾಗರಿಕ ಸಮಾಜ ಹಂಗಿಸುವ ಗುಲಾಮರಂತೆ ಚಾಚು ತಪ್ಪದೆ ಕಾರ್ಯಪ್ರವೃತ್ತರಾಗಿರುವುದು ಸಮಾಜದ ದುರಂತವೇ ಸರಿ.

ಈ ಶ್ರಾವಣ ಮಾಸವೆಂದರೆ ಅದು ಪೂಜೆ ಅನುಷ್ಠಾನಗಳಿಗೆ ಒಳ್ಳೆಯ ಮಾರುಕಟ್ಟೆ. ಉತ್ಸವ ಹಾಗೂ ಪಲ್ಲಕ್ಕಿ ಪ್ರಿಯರಾದ ಕಾವಿಧಾರಿಗಳಿಗಂತೂ ಫುಲ್ ಕಲೆಕ್ಷನ್ ಹಾಗೂ ಸಂವಿಧಾನದಲ್ಲೇ ಉಲ್ಲೇಖ ಇಲ್ಲದ ಸ್ವಯಂ ಘೋಷಿತ ಕಾನೂನಿನ ನಿರ್ಮಾತೃಗಳಂತೆ
ತಮ್ಮ ಸರಹದ್ದಿನ ವ್ಯಾಪ್ತಿಯಲ್ಲಿ ಮತ್ತೋರ್ವ ಮಠಾಧೀಶರು ಬಂದರೆ ತಮ್ಮ ವ್ಯಾಪರಕ್ಕೆ ಎಲ್ಲಿ ಭಂಗ ಬರುತ್ತದೆಯೋ ಎಂಬ ಉದರ ಸಂಕಟದಿಂದ ತಮ್ಮ ಸುತ್ತಲಿನ ಅರೆಬೆಂದ ಮತಿಹೀನರನ್ನು ಧರ್ಮದ ಹೆಸರಿನಲ್ಲಿ ಎತ್ತಿಕಟ್ಟಿ ಧಮಕೀ ಹಾಕಿದ ಘಟನೆಗಳು ನಡೆಯುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ.ಇಂತಹ ವಿಷ ವರ್ತುಲದಲ್ಲಿ ಕಾಯಕವೇ ಕೈಲಾಸ ಅದುವೇ’ ಕರ್ತವ್ಯದ ಉದ್ದೇಶ’ ಎಂದು,ನಾಳೆ ಬಪ್ಪುದು ನಮಗಿಂದೇ ಬರಲಿ, ಇಂದು ಬಪ್ಪುದು ನಮಗೀಗಲೇ ಬರಲಿ ಎಂಬ ಶರಣರ ಸಂಕಲ್ಪದಂತೆ ರೈತರ ಬದುಕು ನಿತ್ಯವೂ ಶ್ರಾವಣವಾಗಲೆಂದು ತ್ರೀಕಾಲವೂ ಅನ್ನಧಾತನ ಅಭ್ಯುಧಯಕ್ಕೆ ಕೈಂಕರ್ಯ ಬದ್ದರಾಗಿರುವ ರೈತಮೆಚ್ಚಿದ ಗುರುವಾಗಿ ಪ್ರತ್ಯಕ್ಷ ದೇವರೆಂದೇ ನಾಮಾಂಕಿತರಾದ ಪರಮ ಪೂಜನೀಯ ಶ್ರೀ ಮದುಜ್ಠಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ೧೧೦೮ ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ಶ್ರಾವಣಾನುಷ್ಟಾನ ದೇಶವೇ ಮೆಚ್ಚುವಂತಹದ್ದು.

ಭರಪೂರ ಮಳೆಯ ಪರಿಣಾಮ ನಾಡಿನ ಎಲ್ಲಾ ಜಲಾಶಯಗಳು ಭರ್ತಿಯಾಗಿ ಪ್ರತಿದಿನವೂ 3 ರಿಂದ 4 ಲಕ್ಷ ಕ್ಯೂಸೆಕ್ಸ್ ನೀರು ವ್ಯರ್ಥವಾಗಿ ಸಮುದ್ರಕ್ಕೆ ಹರಿಯುತ್ತಿರುವ ದೃಶ್ಯವನ್ನು ಹಳ್ಳಿಯ ಜನ ತಮ್ಮ ಬಿರುಕುಬಿಟ್ಟ ಕೆರೆಯ ದಡಗಳಲ್ಲಿ ನಿಂತು ನೋಡುತ್ತಿದ್ದರೆ ಹೃದಯ ಕಲಕುತ್ತದೆ.ಆಳುವ ಸರ್ಕಾರಗಳ ದೂರದರ್ಶಿತ್ವದ ಶಾಶ್ವತ ರೈತ ಸ್ನೇಹಿ ಯೋಜನೆಗಳು ರೂಪುಗೊಳ್ಳದ ಫಲವಾಗಿ ಅನ್ನಧಾತ ಇಂದು ಆತ್ಮಹತ್ಯೆಯ ಜಾಡು ಹಿಡಿದಿದ್ದಾನೆ.

ತರಳಬಾಳು ಶ್ರೀ ಜಗದ್ಗುರುವರ್ಯರ ಮಾತಿನಲ್ಲಿಯೇ ಹೇಳುವುದಾದರೆ ರೈತರಿಗೆ ಯಾವ ಭಾಗ್ಯವೂ ಬೇಡ ಸಮರ್ಪಕವಾದ ನೀರು ಮತ್ತು ವಿದ್ಯುತ್ ನೀಡಿದರೆ ರೈತರೇ ಸರ್ಕಾರಕ್ಕೆ ಸಾಲ ನೀಡುವಂತಾಗುತ್ತಾರೆ ಎಂಬುದರಲ್ಲಿ ಎಷ್ಟೊಂದು ಅರ್ಥವಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳ ಮೇಲಿನ ನಂಬಿಕೆ ಅನ್ನಧಾತನ ಮನದಲ್ಲಿ ಅಳಿದು. ಧಾರ್ಮಿಕ ನೇತಾರರ ಸಾಮಿಪ್ಯದಿ ನಮ್ಮ ಕಾರ್ಪಣ್ಯಕ್ಕೆ ಉತ್ತರವಿದೆ ಎಂಬ ಆಶಾಭಾವನೆ ಉಳಿದಿದೆ. ಸಂಪ್ರದಾಯಸ್ಥ ಸತ್ಯ ತತ್ವಾದಾರ್ಶ ಧಾರ್ಮಿಕ ಪೀಠದ ಅಧಿಪತಿಗಳಿಗೆ ಶ್ರಾವಣ ಮಾಸವನ್ನು ಸಮಾಜದ ಶ್ರೇಯೋಭಿವೃದ್ದಿಯ ಪೂಜಾ ಕೈಂಕರ್ಯಗಳ ಅಣಿಯಾಗಿದ್ದರೆ ಕಪಟ ಕಾವಿಧಾರಿಗಳಿಗೆ ಶ್ರಾವಣ ಮಾಸ ಕೇವಲ ಅತ್ಯುತ್ತಮ ವಹಿವಾಟಿನ ತಿಂಗಳಾಗಿದೆ. ಇವೆರೆಡಕ್ಕಿಂಲೂ ಬಿನ್ನವಾಗಿ ಬಸವ ಮರುಳಸಿದ್ದರ ವೈಚಾರಿಕ ತತ್ವ ಪರಂಪರೆಯ ವಿದ್ವತ್ತಿನ ಸಂಗಮವಾದ ತರಳಬಾಳು ಶ್ರೀ ಗಳು ಬೆಂಗಳೂರಿನ ಆರ್ ಟಿ ನಗರದಲ್ಲಿರುವ ತರಳಬಾಳು ಕೇಂದ್ರದಲ್ಲಿ ಕರ್ನಾಟಕ ಸರ್ಕಾರದ ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಕಾರ್ಯದರ್ಶಿಗಳ, ಎಲ್ಲಾ ಪರಿಣಿತ ಎಂಜಿನಿಯರ್ ಗಳ ಸಭೆಯನ್ನು ತಮ್ಮ ಸಾನ್ನಿಧ್ಯದಲ್ಲಿ ಏರ್ಪಡಿಸಿ.ರಾಜಕೀಯ ರಂಗದ ಅಪರೂಪ ಜನಸ್ನೇಹಿ ಚಿಂತಕ ಬಿ.ಎಲ್.ಶಂಕರ್ ಅಧ್ಯಕ್ಷತೆಯಲ್ಲಿ ದಾವಣಗೆರೆಯಿಂದ ವ್ಯರ್ಥವಾಗಿ ಹರಿಯುತ್ತಿರುವ ಭದ್ರಾ ನದಿಯ ನೀರನ್ನು ಜಗಳೂರು ಹಾಗೂ ಭರಮಸಾಗರ ವ್ಯಾಪ್ತಿಯ ಕೆರೆಗಳಿಗೆ ಶೀಘ್ರವಾಗಿ ಮತ್ತು ಸಮರ್ಪಕವಾಗಿ ಹರಿಸುವ ವಿಸ್ತೃ ಯೋಜನೆಯ ಬಗ್ಗೆ ವಿಸ್ತೃತ ಚರ್ಚೆ ನಡೆಸುತ್ತಿರುವ ಮಾಹಿತಿಯನ್ನು ಸಮಾಜ ಭಾಂಧವರಿಗೆ ತಿಳಿಸಲೇಬೇಕಾಗುತ್ತದೆ .
ರಾಜನಹಳ್ಳಿ ಏತ ನೀರಾವರಿಯ ಯೋಜನೆಯ1 ನೇ ಹಂತದ ಯೋಜನೆಯಲ್ಲಿ ದಾವಣಗೆರೆ ಮತ್ತು ಜಗಳೂರು ತಾಲ್ಲೂಕಿನ 23ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಳೆದ ವರ್ಷದಿಂದಲೇ ಜಾರಿಯಲ್ಲಿದೆ.ಆದರೂ ಹಲವು ತಾಂತ್ರಿಕ ದೋಷಗಳಿಂದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಫಲಪ್ರದವಾಗಿರಲಿಲ್ಲ, ಮಲೆನಾಡಿನಲ್ಲಿ ವಿಪರೀತ ಮಳೆಯಾಗಿ ತುಂಗಾ ಮತ್ತು ಭದ್ರಾ ಜಲಾಶಯಗಳು ತುಂಬಿ ಹರಿದು,ಹೆಚ್ಚುವರಿ ನೀರನ್ನು ಜಲಾಶಯಗಳಿಂದ ಹೊರಬಿಡುತ್ತಿದ್ದರೂ ಸಹ ತಾಂತ್ರಿಕ ಕಾರಣಗಳಿಂದ ಸುತ್ತಲಿನ ಕೆರೆಗಳಿಗೆ ನೀರು ಬಾರದರಿರುವುದು ಶ್ರೀಗಳ ಬೇಸರಕ್ಕೆ ಕಾರಣವಾಗಿದೆ. ಹೆಚ್ಚುವರಿ ನೀರಿನಿಂದ ಆಡಳಿತ ಮತ್ತು ಅಧಿಕಾರಿಗಳ ಜಾಗೃತಿವಹಿಸಿದ್ದರೆ ಎಲ್ಲಾ ಕೆರೆಗಳಿನ್ನು ತುಂಬಿಸಬಹುದಿತ್ತೆಂಬುದು ಮನೋ ಇಂಗಿತ.

ಈ ನಿಟ್ಟಿನಲ್ಲಿ ಈ ಯೋಜನೆಯಲ್ಲಿ ಇರುವ ದೋಷಗಳನ್ನು ಸರಿಪಡಿಸಿ 1 ನೇ ಹಂತದ ಯೋಜನೆಯ ಎಲ್ಲಾ ಕೆರೆಗಳಿಗೆ ಶತಾಯಗತಾಯ ನೀರು ತುಂಬಿಸುವಂತೆ ಶ್ರೀಗಳು ತಾಕೀತು ಮಾಡಿದರು.ಜಗಳೂರು ತರಳಬಾಳು ಹುಣ್ಣಿಮೆಯ ರೈತಕೊಡುಗೆ ಎನ್ನುವಂತೆ 2 ನೇ ಹಂತದ 2
ಯೋಜನೆಗಳಿಗೆ 500 ಕೋಟಿ ರೂಪಾಯಿ ಅನುದಾನ ಬಜೆಟ್ನಲ್ಲಿ ದೊರೆತಿದ್ದು,ಮೊದಲ ಹಂತದಲ್ಲಿ ಕಂಡುಬಂದ ಎಲ್ಲಾ ನ್ಯೂನತೆಗಳು 2 ನೇ ಹಂತದ ಕಾರ್ಯಯೋಜನೆಯಲ್ಲಿ ಪುನರಾವರ್ತನೆಯಾಗದಂತೆ ಎಚ್ಚರವಹಿಸಲು ಕ್ರಮವಹಿಸಿವ ಪರಮರ್ಶೆಯನ್ನು ಶ್ರೀಗಳು ನಡೆಸಿದರು.

ಜೊತೆಗೆ ಚಿಕ್ಕಮಂಗಳೂರು ಜಿಲ್ಲೆಯ ಹಬ್ಬೆ ಫಾಲ್ಸ್ ,ಮದಗದಕೆರೆ,ಅಯ್ಯನಕೆರೆ,ಲಿಂಗದಹಳ್ಳಿ ವ್ಯಾಪ್ತಿಯ ಎಲ್ಲಾ ಕೆರೆಗಳಿಗೆ ನೀರು ಹರಿಸುವ ಕುರಿತು ಶ್ರೀಗಳು ಸಮಾಲೋಚನೆ ನಡೆಸಿದರು. ಅಧಿಕಾರಿಗಳ ಮೇಲೆ ನಿಯಮಿತ ಒತ್ತಡ ಹಾಕಿದರೆ ಸಾರ್ವಜನಿಕ ಕೆಲಸಗಳು ಆಗುವುದು ಕಷ್ಟ ಎಂದು ಅರಿತಿರುವ ಶ್ರೀಗಳು ,ಈ ಸಭೆಯ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕ್ರಮಕ್ಕೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮದ ಚೀಫ್ ಎಂಜಿನಿಯರ್ ಗಳು,ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ಅಧಿಕಾರಿಗಳು ಹಾಜರಿದ್ದರು.

ರೈತಾಭ್ಯುದಯದ ಕಲ್ಯಾಣದ ಕನಸೇ ಶ್ರೀ ಜಗದ್ಗುರುವರ್ಯರ ಅಂತರಾಳದ ಆಶಯ ತ್ರೀಕಾಲವೂ ಸಮಾಜದ ಉತ್ಕೃಷ್ಟ ಉನ್ನತಿಗೆ ಶ್ರಮದಋಷಿಯಂತೆ ಕೈಂಕರ್ಯಬದ್ದರಾಗಿರುವ ಪರಮಾರಾಧ್ಯ ಶ್ರೀಗಳ ಪವಿತ್ರ ಪಾದಗಳಲ್ಲಿ ಭಕ್ತಿ ಪೂರ್ವಕ ಪ್ರಣಾಮಗಳನ್ನು ಸಲ್ಲಿಸಲಷ್ಟೇ ನಮಗೆ ಸಾಧ್ಯ.

-ಬಸವರಾಜ ಸಿರಿಗೆರೆ

ದಿನದ ಸುದ್ದಿ

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.

ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.

ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.

ಇಂಗ್ಲೀಷ್ ಮೇಜರ್ ನಲ್ಲಿ ರ‌್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

Published

on

ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು

ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.

ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್‌ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.

ಯುವಕರು ಸ್ಕೂಲ್, ಕಾಲೇಜ್‌ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್‌ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.

ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.

ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.

ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್‌ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.

ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.

ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್...

ದಿನದ ಸುದ್ದಿ1 week ago

ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಸೋಮವಾರ(ಫೆ.23) ರಂದು ನಗರದ...

ದಿನದ ಸುದ್ದಿ1 week ago

ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ

ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ,...

ದಿನದ ಸುದ್ದಿ2 weeks ago

ಜನರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಒದಗಿಸುವುದು ಅಧಿಕಾರಿಗಳ ಕರ್ತವ್ಯ : ಡಾ.ಹೆಚ್.ಕೃಷ್ಣ

ಸುದ್ದಿದಿನ,ದಾವಣಗೆರೆ:ಆಹಾರ ಪಡೆಯುವುದು ಜನರ ಹಕ್ಕು, ಅದನ್ನು ಅನುಷ್ಠಾನಗೊಳಿಸುವುದು ನಮ್ಮ, ನಿಮ್ಮೆಲ್ಲರ ಕರ್ತವ್ಯ. ಅದಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ಸಹ ನಮ್ಮೆಲ್ಲರ ಜವಾಬ್ದಾರಿ. ಜನರಿಗೆ ಕೇವಲ ಆಹಾರ ಧಾನ್ಯಗಳನ್ನು...

ದಿನದ ಸುದ್ದಿ2 weeks ago

ದಾವಣಗೆರೆ | ಕಂದಾಯ ಹಕ್ಕು ಪತ್ರ ಮತ್ತು ಪಾವತಿ ಆಂದೋಲನ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 298 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದ್ದು, ಈಗಾಗಲೇ 12,000ಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, ಬಾಕಿ ಇರುವವರು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ...

ದಿನದ ಸುದ್ದಿ2 weeks ago

ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು. ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ...

ದಿನದ ಸುದ್ದಿ2 weeks ago

ಏ.1 ರಿಂದ 2026ರ ಡಿಜಿಟಲ್ ಜನಗಣತಿ

ಸುದ್ದಿದಿನ,ದಾವಣಗೆರೆ :2026ರ ಜನಗಣತಿ ಪ್ರಕ್ರಿಯೆ ಏಪ್ರಿಲ್ 1 ರಿಂದ ಆರಂಭವಾಗಲಿದ್ದು, ಈ ಬಾರಿ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದೆ. ಸಾರ್ವಜನಿಕರು ಆನ್‌ಲೈನ್ ಮೂಲಕ ಸ್ವಯಂ ದೃಢೀಕರಣ...

ದಿನದ ಸುದ್ದಿ2 weeks ago

ದುರ್ಗಾಂಬಿಕ ಜಾತ್ರೆ ; ಫ್ಲೆಕ್ಸ್ ಹಾವಳಿ ವಿರುದ್ಧ ಕಠಿಣ ಕ್ರಮ

ಸುದ್ದಿದಿನ,ದಾವಣಗೆರೆ:ದುರ್ಗಾಂಬಿಕಾ ಜಾತ್ರೆಯ ಸಂದರ್ಭದಲ್ಲಿ ನಗರದ ಪರಿಸರ ಮಾಲಿನ್ಯಕ್ಕೆ ಧಕ್ಕೆ ತರುವಂತೆ ಅನಧಿಕೃತ ಫ್ಲೆಕ್ಸ್ ಅಳವಡಿಸುವವರ ವಿರುದ್ಧ ‘ಡಿ ಫಿಗರ್‌ಮೆಂಟ್ ಆಕ್ಟ್’ ಅಡಿಯಲ್ಲಿ ನಿರ್ದಾಕ್ಷಿಣ್ಯವಾಗಿ ಎಫ್‌ಐಆರ್ ದಾಖಲಿಸಲಾಗುವುದು ಎಂದು...

ದಿನದ ಸುದ್ದಿ2 weeks ago

ಎಸ್.ಎಸ್.ಎಲ್.ಸಿ, ಪಿಯುಸಿ ಫಲಿತಾಂಶ ಸುಧಾರಣೆಗೆ ಕ್ರಮ: ಡಿಸಿ ಜಿ.ಎಂ.ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ ಮುಂಬರುವ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯವನ್ನು ನಿವಾರಿಸಿ ಫಲಿತಾಂಶ ಸುಧಾರಣೆ ಮಾಡುವ ನಿಟ್ಟಿನಲ್ಲಿ...

ದಿನದ ಸುದ್ದಿ2 weeks ago

ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ – ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ

ಸುದ್ದಿದಿನ,ದಾವಣಗೆರೆ:ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆಯು ಫೆ. 22 ರಿಂದ 25 ರವರೆಗೆ 3 ದಿನಗಳ ಕಾಲ ನಡೆಯಲಿದ್ದು, ಭಕ್ತಿಪೂರಕವಾಗಿ ವಿಜೃಂಭಣೆಯಿಂದ ನಡೆಯಲು ಕ್ರಮವಹಿಸಲಾಗಿದೆ, ಜಾತ್ರೆ ಸಮಯದಲ್ಲಿ...

Trending