Connect with us

ದಿನದ ಸುದ್ದಿ

ಚರಮೂರ್ತಿ ಕಾರಣೀಕ ಶ್ರೀ ಗುರು ಕಾಶೀಮಹಾಲಿಂಗ ಸ್ವಾಮೀಜಿಯವರ ಕರ್ತೃಗದ್ದುಗೆಗೆ ತರಳಬಾಳು ಶ್ರೀ ಜಗದ್ಗುರುವರ್ಯರ ಭಕ್ತಿ ಸಮರ್ಪಣೆ

Published

on

ತರಳಬಾಳು ಶ್ರೀಗುರು ಪರಂಪರೆಯ ತಪಸ್ವೀಶಕ್ತಿ ನಿರಂಜನಗುರುವರ್ಯರಾಗಿ ಭಕ್ತರ ಬಯಕೆಯನ್ನು ತಮ್ಮ ನುಡಿಕಾರಣೀಕದಿಂದಲೆ ಸಿದ್ಧಿಸುವ ಅಧಮ್ಯ ಶಕ್ತಿಯಚೇತನಮಯರಾದ ಶ್ರಿ ಕಾಶೀಮಹಾಲಿಂಗ ಸ್ವಾಮಿಜಿಯವರಿಗೆ ಪ್ರತಿ ವರ್ಷದ ಪರಂಪರೆಯಂತೆ ನಿನ್ನೆ ಪೂಜನೀಯ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಸಾಸ್ವಾಮೀಜಿಯವರ ಸಾನ್ನಿಧ್ಯದಿ ಶ್ರೀ ಗುರುವಿಗೆ ವಿಶೇಷ ಶ್ರದ್ಧಾ ಭಕ್ತಿಯಿಂದ ನಮನಗಳನ್ನು ಅರ್ಪಿಸಿ ಸಾವಿರರು ಶಿಷ್ಯ ಬಳಗಕ್ಕೆ ಅನ್ನಸಂತರ್ಪಣೆ ವಿನಿಯೋಗಿಸುವ ವಿಶೇಷ ಕಾರ್ಯಕ್ರಮ ಜರುಗಿತು.

ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ವಿರಕ್ತ ಗುರುವರ್ಯರಾಗಿ ಯಾವ ಸೌಲಭ್ಯಗಳಿಲ್ಲದ ಕಷ್ಟಕಾಲದಲ್ಲಿ ಸಮಾಜವನ್ನು ಸಂಘಟಿಸಿದ ಅವರ ಕರ್ತವ್ಯ ಶಕ್ತಿಗೆ ಬೆರಗಾಗಲೇಬೇಕು.
‘ಸಿರಿಗೆರೆಗೆ ಬರ ಎಂದವರ ಬಾಯಲ್ಲಿ ಕೆರ’
ಎಂಬ ದೈವವಾಣಿಯನ್ನು ಮೊಟ್ಟ ಮೊದಲು ಅರ್ಥೈಸಿ ಈ ಭಾಗದ ರೈತಾಪಿ ಜನರ ಮನದಲ್ಲಿ ಶಕ್ತಿ ಸಂಪನ್ನವಾದ ಗುರುವೆಂದೇ ಸ್ಥಾನಪಡೆದಿದ್ದಾರೆ.

ಕೃಷಿ ಚಟುವಟಿಕೆಗಳಿಗೆ ಜೀವನಾಡಿಯಾದ ಮಳೆಯು ಕೈ ಕೊಟ್ಟ ಸಂದರ್ಭದಲ್ಲಿ ಶ್ರೀ ಕಾಶೀಮಹಾಲಿಂಗ ಸ್ವಾಮೀಜಿಯವರಿಗೆ ಭಕ್ತಿ ಶ್ರದ್ಧೆಯ ದಾಸೋಹ ಕೈಂಕರ್ಯ ಸಲ್ಲಿಸಿದರೆ ತತ್ ಕ್ಷಣವೇ ವರುಣ ಕಣ್ಣು ತೆರೆಯುತ್ತಾನೆ ಎನ್ನುವ ಧಾರ್ಮಿಕ ನಂಬಿಕೆ ಅಚಲವಾಗಿದ್ದು ಅದು ಸತ್ಯ ಎನ್ನುವಂತೆ ಭರ್ಜರಿ ಮಳೆಯಾಗಿರುವ ಉದಾಹರಣೆ ಹಲವಾರು ಬಾರಿ ಸಾಬೀತಾಗಿದೆ.

ತರಳಬಾಳು ಗುರುಪರಂಪರೆಯ ನಾಲ್ಕು ಜಗದ್ಗುರುವರ್ಯರ ಪಟ್ಟವಲ್ಲರಿಯ ಸಾಮಿಪ್ಯದಿ ಸಮಾಜ ಕಟ್ಟಿದ ಧೀಮಂತ ಚೇತನ, ಮಕ್ಕಳ ಪಾಲಿನ ಪ್ರೀತಿಯ ತಾತನಾಗಿ, ಇಂದಿನ ಪ್ರಸ್ತುತ ಶ್ರೀ ತರಳಬಾಳು ಜಗದ್ಗುರುವರ್ಯರ ಪೂರ್ವಾಶ್ರಮದ ನಾಮಕರಣ ಸಮಾರಂಭದಲ್ಲಿ ಆಕಸ್ಮಿಕ ದರ್ಶನಗೈದು ‘ಶಿವಮೂರ್ತಿ’ ಎಂದು ನಾಮಕರಣಗೈದು ತರಳಬಾಳು ಗುರು ಪರಂಪರೆಯು ವಿಶ್ವ ಮಟ್ಟದಿ ಪ್ರಜ್ವಲಿಸುವ ಭವಿಷ್ಯವನ್ನು ಎಲ್ಲರಿಗಿಂತಲೂ ಮೊದಲೇ ಅರಿತಿದ್ದ ಪ್ರಾಜ್ಞ ಕಾಲಜ್ಞಾನಿಗಳು. ಸರಳತೆ ,ಆದರ್ಶ, ಕಾಯಕವೇ ಶ್ರೀ ಗಳ ಬದುಕಾಗಿತ್ತೆಂದು ಇಂದು ಸಹ ಹಿರಿಯರು ಶ್ರೀ ಗಳ ಕುರಿತು ಗೌರವದ ಮಾಹಿತಿ ನೀಡುತ್ತಾರೆ.

ಅಂತಹ ಶಿವಯೋಗಿ ಶಕ್ತಿ ಸಂಪನ್ನರಾದ ಶ್ರೀ ಮನ್ನಿರಂಜನ ಪ್ರಣವ ಸ್ವರೂಪಿ ಶ್ರೀ ಕಾಶೀಮಹಾಲಿಂಗ ಸ್ವಾಮೀಜಿಯವರ ಅಂತರಾತ್ಮಕ್ಕೆ ಭಕ್ತಿ ಪೂರ್ವಕ ಪ್ರಣಾಮಗಳನ್ನು ಅರ್ಪಿಸುತ್ತಾ.ಶ್ರೀಗಳ ಆಶೀರ್ವಾದದ ಶ್ರೀ ರಕ್ಷೆ ಸಮಸ್ತ ಸಮಾಜದ ಮೇಲಿರಲೆಂಬುದೇ ನಮ್ಮಯ ಆಶಯ.

(-ಬಸವರಾಜ ಸಿರಿಗೆರೆ)

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

Published

on

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.

ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!

ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ20 minutes ago

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು...

ದಿನದ ಸುದ್ದಿ1 hour ago

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ...

ದಿನದ ಸುದ್ದಿ1 hour ago

ಡಾಲಿಯ ಕನಸು ಒಂದೇ ಹೀರೋ ಆಗೋದು

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು! ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು...

ದಿನದ ಸುದ್ದಿ19 hours ago

ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ...

ದಿನದ ಸುದ್ದಿ19 hours ago

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ...

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
ದಿನದ ಸುದ್ದಿ19 hours ago

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್ 658 OMR ಕಾರ್ಬನ್...

ದಿನದ ಸುದ್ದಿ19 hours ago

ರಿಲೀಸ್‌ಗೂ ಮುನ್ನ ಧರ್ಮಸ್ಥಳದತ್ತ ರಾಕಿಂಗ್‌ ಸ್ಟಾರ್‌ ಯಶ್‌; ‘ಟಾಕ್ಸಿಕ್‌’ ಗೆಲುವಿಗಾಗಿ ವಿಶೇಷ ಪೂಜೆ

ಚೆನ್ನೈ ಪ್ರೀ-ರಿಲೀಸ್‌ ಕಾರ್ಯಕ್ರಮದ ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಯಶ್‌; ಕೆಜಿಎಫ್‌-2 ಬಳಿಕ ಮತ್ತೊಮ್ಮೆ ಹಳೆಯ ಸಂಪ್ರದಾಯ ಮುಂದುವರಿಕೆ ಟಾಕ್ಸಿಕ್‌ ರಿಲೀಸ್‌ಗೂ ಮುನ್ನ ಧರ್ಮಸ್ಥಳದಲ್ಲಿ ಯಶ್‌! ಮಂಜುನಾಥನ...

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ ₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ದಿನದ ಸುದ್ದಿ20 hours ago

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ

ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ ನಿವೇಶನ 13...

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ! ‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!
ದಿನದ ಸುದ್ದಿ20 hours ago

ಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ! ಗಡುವು ಮುಕ್ತಾಯ, ಇನ್ನು ಬಿ-ಖಾತೆಯಿಂದ ಎ-ಖಾತೆಗೆ...

ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ! ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ!
ದಿನದ ಸುದ್ದಿ21 hours ago

ಆನ್‌ಲೈನ್‌ನಲ್ಲಿ ಮಾರಾಟವಾಗ್ತಿತ್ತು ‘ವಿಷದ ಹಣ್ಣು’! ಇ-ಕಾಮರ್ಸ್‌ ದೈತ್ಯರಿಗೆ ನೋಟಿಸ್‌

ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ! ಆನ್‌ಲೈನ್‌ನಲ್ಲಿ ‘ವಿಷದ ಹಣ್ಣು’ ಮಾರಾಟ ಅಮೆಜಾನ್‌, ಫ್ಲಿಪ್‌ಕಾರ್ಟ್‌, ಮಿನಿಟ್ಸ್‌ಗೆ ಸರ್ಕಾರದೊಂದ ನೋಟಿಸ್‌ ಈ ಹಣ್ಣು ಖರೀದಿಸಿದ್ರೆ ಅಪಾಯ,...

Trending