ದಿನದ ಸುದ್ದಿ
ಅನ್ನದಾತನ ಉನ್ನತಿಗಾಗಿ ಸಮಾಜಮುಖಿ ಶ್ರಾವಣಾನುಷ್ಟಾನ ಕೈಗೊಂಡಿರುವ ತರಳಬಾಳು ಶ್ರೀ ಜಗದ್ಗುರುವರ್ಯರು
![](https://suddidina.com/wp-content/uploads/2018/08/Sirigere-suddidina.jpg)
ಕನ್ನಡನಾಡಿನ ಹಬ್ಬ ಹರಿದಿನಗಳ ಸಂಖ್ಯೆಗೆ ಕಡಿವಾಣವ ಹಾಕುವ ಕಾರ್ಯ ಆ ವಿಧಾತನಿಂದಲೂ ಸಾಧ್ಯವಿಲ್ಲ.ಜನರ ಉದ್ದಾರಕ್ಕೂ ? ತಮ್ಮ ಅಸ್ತಿತ್ವದ ಕಡ್ಡಾಯ ಅಭಿವ್ಯಕ್ತಿಗೋ ? ಮುಗ್ಧ ಭಕ್ತರ ಭಾವನೆಯ ಬಂಡವಾಳದ ಸದುಪಯೋಗಕ್ಕೊ,? ಧಾರ್ಮಿಕ ದಬ್ಬಾಳಿಕೆಯ ಪ್ರತಿಷ್ಠೆಗೋ ? ಪ್ರಶ್ನೆ ಮಾಡಲು ಯಾವ ಬುದ್ಧಿವಂತನೂ ಇಲ್ಲ ಎನ್ನುವ ಪರಿಸ್ಥಿತಿಯ ಲಾಭ ಹಾಗೂ ಸ್ವಪ್ರಶಂಸೆಯಿಂದಲೊ ? ಈ ನೆಲದ ಕರ್ಮವೋ,ಎಂಬಂತೆ ನಿತ್ಯವೂ ಸರ್ವಅಲಂಕಾರ ಭೂಷಿತ ಸ್ವಘೋಷಿತ ದೇವಮಾನವ ಕಪಟ ಕಾವಿಧಾರಿಗಳಿಂದಅಡ್ಡ ಪಲ್ಲಕ್ಕಿ, ಉದ್ದಪಲ್ಲಕ್ಕಿ ,ಹೋಮ,ಹವನ,ಯಜ್ಞ ,ಲಕ್ಷ ಪೂಜೆ, ಕೋಟಿ ಪೂಜೆ ಹೀಗೆ ಹೊಸ ಹೆಸರಿಡಲು ಸಾಧ್ಯವಿರದಷ್ಟು ಅತೀರೇಖದ ಅವಿವೇಕಿಗಳ ನಾಟಕಕ್ಕೆ ಮುಗ್ದ ಸಮಾಜ ‘ಭಕ್ತರು ‘ ‘ ಶಿಷ್ಯರು’ ಎಂಬ ಹೆಸರಲ್ಲಿ ಕಣ್ಣಿದ್ದು ಕುರುಡರಾಗಿ,ಕಿವಿ ಇದ್ದು ಕಿವುಡರಾಗಿ ಅವರಾಡುವ,ಆಡಿಸುವ ಡೋಂಗಿ ನಾಟಕಕ್ಕೆ ಪ್ರೇಕ್ಷಕರಾಗಿ ಕೆಲವೊಮ್ಮೆ ದಿಢೀರ್ ಪಾತ್ರಧಾರಿಗಳಾಗಿ ಪ್ರಬುದ್ಧ ನಾಗರಿಕ ಸಮಾಜ ಹಂಗಿಸುವ ಗುಲಾಮರಂತೆ ಚಾಚು ತಪ್ಪದೆ ಕಾರ್ಯಪ್ರವೃತ್ತರಾಗಿರುವುದು ಸಮಾಜದ ದುರಂತವೇ ಸರಿ.
ಈ ಶ್ರಾವಣ ಮಾಸವೆಂದರೆ ಅದು ಪೂಜೆ ಅನುಷ್ಠಾನಗಳಿಗೆ ಒಳ್ಳೆಯ ಮಾರುಕಟ್ಟೆ. ಉತ್ಸವ ಹಾಗೂ ಪಲ್ಲಕ್ಕಿ ಪ್ರಿಯರಾದ ಕಾವಿಧಾರಿಗಳಿಗಂತೂ ಫುಲ್ ಕಲೆಕ್ಷನ್ ಹಾಗೂ ಸಂವಿಧಾನದಲ್ಲೇ ಉಲ್ಲೇಖ ಇಲ್ಲದ ಸ್ವಯಂ ಘೋಷಿತ ಕಾನೂನಿನ ನಿರ್ಮಾತೃಗಳಂತೆ
ತಮ್ಮ ಸರಹದ್ದಿನ ವ್ಯಾಪ್ತಿಯಲ್ಲಿ ಮತ್ತೋರ್ವ ಮಠಾಧೀಶರು ಬಂದರೆ ತಮ್ಮ ವ್ಯಾಪರಕ್ಕೆ ಎಲ್ಲಿ ಭಂಗ ಬರುತ್ತದೆಯೋ ಎಂಬ ಉದರ ಸಂಕಟದಿಂದ ತಮ್ಮ ಸುತ್ತಲಿನ ಅರೆಬೆಂದ ಮತಿಹೀನರನ್ನು ಧರ್ಮದ ಹೆಸರಿನಲ್ಲಿ ಎತ್ತಿಕಟ್ಟಿ ಧಮಕೀ ಹಾಕಿದ ಘಟನೆಗಳು ನಡೆಯುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ.ಇಂತಹ ವಿಷ ವರ್ತುಲದಲ್ಲಿ ಕಾಯಕವೇ ಕೈಲಾಸ ಅದುವೇ’ ಕರ್ತವ್ಯದ ಉದ್ದೇಶ’ ಎಂದು,ನಾಳೆ ಬಪ್ಪುದು ನಮಗಿಂದೇ ಬರಲಿ, ಇಂದು ಬಪ್ಪುದು ನಮಗೀಗಲೇ ಬರಲಿ ಎಂಬ ಶರಣರ ಸಂಕಲ್ಪದಂತೆ ರೈತರ ಬದುಕು ನಿತ್ಯವೂ ಶ್ರಾವಣವಾಗಲೆಂದು ತ್ರೀಕಾಲವೂ ಅನ್ನಧಾತನ ಅಭ್ಯುಧಯಕ್ಕೆ ಕೈಂಕರ್ಯ ಬದ್ದರಾಗಿರುವ ರೈತಮೆಚ್ಚಿದ ಗುರುವಾಗಿ ಪ್ರತ್ಯಕ್ಷ ದೇವರೆಂದೇ ನಾಮಾಂಕಿತರಾದ ಪರಮ ಪೂಜನೀಯ ಶ್ರೀ ಮದುಜ್ಠಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ೧೧೦೮ ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ಶ್ರಾವಣಾನುಷ್ಟಾನ ದೇಶವೇ ಮೆಚ್ಚುವಂತಹದ್ದು.
ಭರಪೂರ ಮಳೆಯ ಪರಿಣಾಮ ನಾಡಿನ ಎಲ್ಲಾ ಜಲಾಶಯಗಳು ಭರ್ತಿಯಾಗಿ ಪ್ರತಿದಿನವೂ 3 ರಿಂದ 4 ಲಕ್ಷ ಕ್ಯೂಸೆಕ್ಸ್ ನೀರು ವ್ಯರ್ಥವಾಗಿ ಸಮುದ್ರಕ್ಕೆ ಹರಿಯುತ್ತಿರುವ ದೃಶ್ಯವನ್ನು ಹಳ್ಳಿಯ ಜನ ತಮ್ಮ ಬಿರುಕುಬಿಟ್ಟ ಕೆರೆಯ ದಡಗಳಲ್ಲಿ ನಿಂತು ನೋಡುತ್ತಿದ್ದರೆ ಹೃದಯ ಕಲಕುತ್ತದೆ.ಆಳುವ ಸರ್ಕಾರಗಳ ದೂರದರ್ಶಿತ್ವದ ಶಾಶ್ವತ ರೈತ ಸ್ನೇಹಿ ಯೋಜನೆಗಳು ರೂಪುಗೊಳ್ಳದ ಫಲವಾಗಿ ಅನ್ನಧಾತ ಇಂದು ಆತ್ಮಹತ್ಯೆಯ ಜಾಡು ಹಿಡಿದಿದ್ದಾನೆ.
ತರಳಬಾಳು ಶ್ರೀ ಜಗದ್ಗುರುವರ್ಯರ ಮಾತಿನಲ್ಲಿಯೇ ಹೇಳುವುದಾದರೆ ರೈತರಿಗೆ ಯಾವ ಭಾಗ್ಯವೂ ಬೇಡ ಸಮರ್ಪಕವಾದ ನೀರು ಮತ್ತು ವಿದ್ಯುತ್ ನೀಡಿದರೆ ರೈತರೇ ಸರ್ಕಾರಕ್ಕೆ ಸಾಲ ನೀಡುವಂತಾಗುತ್ತಾರೆ ಎಂಬುದರಲ್ಲಿ ಎಷ್ಟೊಂದು ಅರ್ಥವಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳ ಮೇಲಿನ ನಂಬಿಕೆ ಅನ್ನಧಾತನ ಮನದಲ್ಲಿ ಅಳಿದು. ಧಾರ್ಮಿಕ ನೇತಾರರ ಸಾಮಿಪ್ಯದಿ ನಮ್ಮ ಕಾರ್ಪಣ್ಯಕ್ಕೆ ಉತ್ತರವಿದೆ ಎಂಬ ಆಶಾಭಾವನೆ ಉಳಿದಿದೆ. ಸಂಪ್ರದಾಯಸ್ಥ ಸತ್ಯ ತತ್ವಾದಾರ್ಶ ಧಾರ್ಮಿಕ ಪೀಠದ ಅಧಿಪತಿಗಳಿಗೆ ಶ್ರಾವಣ ಮಾಸವನ್ನು ಸಮಾಜದ ಶ್ರೇಯೋಭಿವೃದ್ದಿಯ ಪೂಜಾ ಕೈಂಕರ್ಯಗಳ ಅಣಿಯಾಗಿದ್ದರೆ ಕಪಟ ಕಾವಿಧಾರಿಗಳಿಗೆ ಶ್ರಾವಣ ಮಾಸ ಕೇವಲ ಅತ್ಯುತ್ತಮ ವಹಿವಾಟಿನ ತಿಂಗಳಾಗಿದೆ. ಇವೆರೆಡಕ್ಕಿಂಲೂ ಬಿನ್ನವಾಗಿ ಬಸವ ಮರುಳಸಿದ್ದರ ವೈಚಾರಿಕ ತತ್ವ ಪರಂಪರೆಯ ವಿದ್ವತ್ತಿನ ಸಂಗಮವಾದ ತರಳಬಾಳು ಶ್ರೀ ಗಳು ಬೆಂಗಳೂರಿನ ಆರ್ ಟಿ ನಗರದಲ್ಲಿರುವ ತರಳಬಾಳು ಕೇಂದ್ರದಲ್ಲಿ ಕರ್ನಾಟಕ ಸರ್ಕಾರದ ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಕಾರ್ಯದರ್ಶಿಗಳ, ಎಲ್ಲಾ ಪರಿಣಿತ ಎಂಜಿನಿಯರ್ ಗಳ ಸಭೆಯನ್ನು ತಮ್ಮ ಸಾನ್ನಿಧ್ಯದಲ್ಲಿ ಏರ್ಪಡಿಸಿ.ರಾಜಕೀಯ ರಂಗದ ಅಪರೂಪ ಜನಸ್ನೇಹಿ ಚಿಂತಕ ಬಿ.ಎಲ್.ಶಂಕರ್ ಅಧ್ಯಕ್ಷತೆಯಲ್ಲಿ ದಾವಣಗೆರೆಯಿಂದ ವ್ಯರ್ಥವಾಗಿ ಹರಿಯುತ್ತಿರುವ ಭದ್ರಾ ನದಿಯ ನೀರನ್ನು ಜಗಳೂರು ಹಾಗೂ ಭರಮಸಾಗರ ವ್ಯಾಪ್ತಿಯ ಕೆರೆಗಳಿಗೆ ಶೀಘ್ರವಾಗಿ ಮತ್ತು ಸಮರ್ಪಕವಾಗಿ ಹರಿಸುವ ವಿಸ್ತೃ ಯೋಜನೆಯ ಬಗ್ಗೆ ವಿಸ್ತೃತ ಚರ್ಚೆ ನಡೆಸುತ್ತಿರುವ ಮಾಹಿತಿಯನ್ನು ಸಮಾಜ ಭಾಂಧವರಿಗೆ ತಿಳಿಸಲೇಬೇಕಾಗುತ್ತದೆ .
ರಾಜನಹಳ್ಳಿ ಏತ ನೀರಾವರಿಯ ಯೋಜನೆಯ1 ನೇ ಹಂತದ ಯೋಜನೆಯಲ್ಲಿ ದಾವಣಗೆರೆ ಮತ್ತು ಜಗಳೂರು ತಾಲ್ಲೂಕಿನ 23ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಳೆದ ವರ್ಷದಿಂದಲೇ ಜಾರಿಯಲ್ಲಿದೆ.ಆದರೂ ಹಲವು ತಾಂತ್ರಿಕ ದೋಷಗಳಿಂದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಫಲಪ್ರದವಾಗಿರಲಿಲ್ಲ, ಮಲೆನಾಡಿನಲ್ಲಿ ವಿಪರೀತ ಮಳೆಯಾಗಿ ತುಂಗಾ ಮತ್ತು ಭದ್ರಾ ಜಲಾಶಯಗಳು ತುಂಬಿ ಹರಿದು,ಹೆಚ್ಚುವರಿ ನೀರನ್ನು ಜಲಾಶಯಗಳಿಂದ ಹೊರಬಿಡುತ್ತಿದ್ದರೂ ಸಹ ತಾಂತ್ರಿಕ ಕಾರಣಗಳಿಂದ ಸುತ್ತಲಿನ ಕೆರೆಗಳಿಗೆ ನೀರು ಬಾರದರಿರುವುದು ಶ್ರೀಗಳ ಬೇಸರಕ್ಕೆ ಕಾರಣವಾಗಿದೆ. ಹೆಚ್ಚುವರಿ ನೀರಿನಿಂದ ಆಡಳಿತ ಮತ್ತು ಅಧಿಕಾರಿಗಳ ಜಾಗೃತಿವಹಿಸಿದ್ದರೆ ಎಲ್ಲಾ ಕೆರೆಗಳಿನ್ನು ತುಂಬಿಸಬಹುದಿತ್ತೆಂಬುದು ಮನೋ ಇಂಗಿತ.
ಈ ನಿಟ್ಟಿನಲ್ಲಿ ಈ ಯೋಜನೆಯಲ್ಲಿ ಇರುವ ದೋಷಗಳನ್ನು ಸರಿಪಡಿಸಿ 1 ನೇ ಹಂತದ ಯೋಜನೆಯ ಎಲ್ಲಾ ಕೆರೆಗಳಿಗೆ ಶತಾಯಗತಾಯ ನೀರು ತುಂಬಿಸುವಂತೆ ಶ್ರೀಗಳು ತಾಕೀತು ಮಾಡಿದರು.ಜಗಳೂರು ತರಳಬಾಳು ಹುಣ್ಣಿಮೆಯ ರೈತಕೊಡುಗೆ ಎನ್ನುವಂತೆ 2 ನೇ ಹಂತದ 2
ಯೋಜನೆಗಳಿಗೆ 500 ಕೋಟಿ ರೂಪಾಯಿ ಅನುದಾನ ಬಜೆಟ್ನಲ್ಲಿ ದೊರೆತಿದ್ದು,ಮೊದಲ ಹಂತದಲ್ಲಿ ಕಂಡುಬಂದ ಎಲ್ಲಾ ನ್ಯೂನತೆಗಳು 2 ನೇ ಹಂತದ ಕಾರ್ಯಯೋಜನೆಯಲ್ಲಿ ಪುನರಾವರ್ತನೆಯಾಗದಂತೆ ಎಚ್ಚರವಹಿಸಲು ಕ್ರಮವಹಿಸಿವ ಪರಮರ್ಶೆಯನ್ನು ಶ್ರೀಗಳು ನಡೆಸಿದರು.
ಜೊತೆಗೆ ಚಿಕ್ಕಮಂಗಳೂರು ಜಿಲ್ಲೆಯ ಹಬ್ಬೆ ಫಾಲ್ಸ್ ,ಮದಗದಕೆರೆ,ಅಯ್ಯನಕೆರೆ,ಲಿಂಗದಹಳ್ಳಿ ವ್ಯಾಪ್ತಿಯ ಎಲ್ಲಾ ಕೆರೆಗಳಿಗೆ ನೀರು ಹರಿಸುವ ಕುರಿತು ಶ್ರೀಗಳು ಸಮಾಲೋಚನೆ ನಡೆಸಿದರು. ಅಧಿಕಾರಿಗಳ ಮೇಲೆ ನಿಯಮಿತ ಒತ್ತಡ ಹಾಕಿದರೆ ಸಾರ್ವಜನಿಕ ಕೆಲಸಗಳು ಆಗುವುದು ಕಷ್ಟ ಎಂದು ಅರಿತಿರುವ ಶ್ರೀಗಳು ,ಈ ಸಭೆಯ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕ್ರಮಕ್ಕೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮದ ಚೀಫ್ ಎಂಜಿನಿಯರ್ ಗಳು,ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ಅಧಿಕಾರಿಗಳು ಹಾಜರಿದ್ದರು.
ರೈತಾಭ್ಯುದಯದ ಕಲ್ಯಾಣದ ಕನಸೇ ಶ್ರೀ ಜಗದ್ಗುರುವರ್ಯರ ಅಂತರಾಳದ ಆಶಯ ತ್ರೀಕಾಲವೂ ಸಮಾಜದ ಉತ್ಕೃಷ್ಟ ಉನ್ನತಿಗೆ ಶ್ರಮದಋಷಿಯಂತೆ ಕೈಂಕರ್ಯಬದ್ದರಾಗಿರುವ ಪರಮಾರಾಧ್ಯ ಶ್ರೀಗಳ ಪವಿತ್ರ ಪಾದಗಳಲ್ಲಿ ಭಕ್ತಿ ಪೂರ್ವಕ ಪ್ರಣಾಮಗಳನ್ನು ಸಲ್ಲಿಸಲಷ್ಟೇ ನಮಗೆ ಸಾಧ್ಯ.
-ಬಸವರಾಜ ಸಿರಿಗೆರೆ
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!