Connect with us

ದಿನದ ಸುದ್ದಿ

ಅನ್ನದಾತನ ಉನ್ನತಿಗಾಗಿ ಸಮಾಜಮುಖಿ ಶ್ರಾವಣಾನುಷ್ಟಾನ ಕೈಗೊಂಡಿರುವ ತರಳಬಾಳು ಶ್ರೀ ಜಗದ್ಗುರುವರ್ಯರು

Published

on

ನ್ನಡನಾಡಿನ ಹಬ್ಬ ಹರಿದಿನಗಳ ಸಂಖ್ಯೆಗೆ ಕಡಿವಾಣವ ಹಾಕುವ ಕಾರ್ಯ ಆ ವಿಧಾತನಿಂದಲೂ ಸಾಧ್ಯವಿಲ್ಲ.ಜನರ ಉದ್ದಾರಕ್ಕೂ ? ತಮ್ಮ ಅಸ್ತಿತ್ವದ ಕಡ್ಡಾಯ ಅಭಿವ್ಯಕ್ತಿಗೋ ? ಮುಗ್ಧ ಭಕ್ತರ ಭಾವನೆಯ ಬಂಡವಾಳದ ಸದುಪಯೋಗಕ್ಕೊ,? ಧಾರ್ಮಿಕ ದಬ್ಬಾಳಿಕೆಯ ಪ್ರತಿಷ್ಠೆಗೋ ? ಪ್ರಶ್ನೆ ಮಾಡಲು ಯಾವ ಬುದ್ಧಿವಂತನೂ ಇಲ್ಲ ಎನ್ನುವ ಪರಿಸ್ಥಿತಿಯ ಲಾಭ ಹಾಗೂ ಸ್ವಪ್ರಶಂಸೆಯಿಂದಲೊ ? ಈ ನೆಲದ ಕರ್ಮವೋ,ಎಂಬಂತೆ ನಿತ್ಯವೂ ಸರ್ವಅಲಂಕಾರ ಭೂಷಿತ ಸ್ವಘೋಷಿತ ದೇವಮಾನವ ಕಪಟ ಕಾವಿಧಾರಿಗಳಿಂದಅಡ್ಡ ಪಲ್ಲಕ್ಕಿ, ಉದ್ದಪಲ್ಲಕ್ಕಿ ,ಹೋಮ,ಹವನ,ಯಜ್ಞ ,ಲಕ್ಷ ಪೂಜೆ, ಕೋಟಿ ಪೂಜೆ ಹೀಗೆ ಹೊಸ ಹೆಸರಿಡಲು ಸಾಧ್ಯವಿರದಷ್ಟು ಅತೀರೇಖದ ಅವಿವೇಕಿಗಳ ನಾಟಕಕ್ಕೆ ಮುಗ್ದ ಸಮಾಜ ‘ಭಕ್ತರು ‘ ‘ ಶಿಷ್ಯರು’ ಎಂಬ ಹೆಸರಲ್ಲಿ ಕಣ್ಣಿದ್ದು ಕುರುಡರಾಗಿ,ಕಿವಿ ಇದ್ದು ಕಿವುಡರಾಗಿ ಅವರಾಡುವ,ಆಡಿಸುವ ಡೋಂಗಿ ನಾಟಕಕ್ಕೆ ಪ್ರೇಕ್ಷಕರಾಗಿ ಕೆಲವೊಮ್ಮೆ ದಿಢೀರ್ ಪಾತ್ರಧಾರಿಗಳಾಗಿ ಪ್ರಬುದ್ಧ ನಾಗರಿಕ ಸಮಾಜ ಹಂಗಿಸುವ ಗುಲಾಮರಂತೆ ಚಾಚು ತಪ್ಪದೆ ಕಾರ್ಯಪ್ರವೃತ್ತರಾಗಿರುವುದು ಸಮಾಜದ ದುರಂತವೇ ಸರಿ.

ಈ ಶ್ರಾವಣ ಮಾಸವೆಂದರೆ ಅದು ಪೂಜೆ ಅನುಷ್ಠಾನಗಳಿಗೆ ಒಳ್ಳೆಯ ಮಾರುಕಟ್ಟೆ. ಉತ್ಸವ ಹಾಗೂ ಪಲ್ಲಕ್ಕಿ ಪ್ರಿಯರಾದ ಕಾವಿಧಾರಿಗಳಿಗಂತೂ ಫುಲ್ ಕಲೆಕ್ಷನ್ ಹಾಗೂ ಸಂವಿಧಾನದಲ್ಲೇ ಉಲ್ಲೇಖ ಇಲ್ಲದ ಸ್ವಯಂ ಘೋಷಿತ ಕಾನೂನಿನ ನಿರ್ಮಾತೃಗಳಂತೆ
ತಮ್ಮ ಸರಹದ್ದಿನ ವ್ಯಾಪ್ತಿಯಲ್ಲಿ ಮತ್ತೋರ್ವ ಮಠಾಧೀಶರು ಬಂದರೆ ತಮ್ಮ ವ್ಯಾಪರಕ್ಕೆ ಎಲ್ಲಿ ಭಂಗ ಬರುತ್ತದೆಯೋ ಎಂಬ ಉದರ ಸಂಕಟದಿಂದ ತಮ್ಮ ಸುತ್ತಲಿನ ಅರೆಬೆಂದ ಮತಿಹೀನರನ್ನು ಧರ್ಮದ ಹೆಸರಿನಲ್ಲಿ ಎತ್ತಿಕಟ್ಟಿ ಧಮಕೀ ಹಾಕಿದ ಘಟನೆಗಳು ನಡೆಯುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ.ಇಂತಹ ವಿಷ ವರ್ತುಲದಲ್ಲಿ ಕಾಯಕವೇ ಕೈಲಾಸ ಅದುವೇ’ ಕರ್ತವ್ಯದ ಉದ್ದೇಶ’ ಎಂದು,ನಾಳೆ ಬಪ್ಪುದು ನಮಗಿಂದೇ ಬರಲಿ, ಇಂದು ಬಪ್ಪುದು ನಮಗೀಗಲೇ ಬರಲಿ ಎಂಬ ಶರಣರ ಸಂಕಲ್ಪದಂತೆ ರೈತರ ಬದುಕು ನಿತ್ಯವೂ ಶ್ರಾವಣವಾಗಲೆಂದು ತ್ರೀಕಾಲವೂ ಅನ್ನಧಾತನ ಅಭ್ಯುಧಯಕ್ಕೆ ಕೈಂಕರ್ಯ ಬದ್ದರಾಗಿರುವ ರೈತಮೆಚ್ಚಿದ ಗುರುವಾಗಿ ಪ್ರತ್ಯಕ್ಷ ದೇವರೆಂದೇ ನಾಮಾಂಕಿತರಾದ ಪರಮ ಪೂಜನೀಯ ಶ್ರೀ ಮದುಜ್ಠಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ೧೧೦೮ ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ಶ್ರಾವಣಾನುಷ್ಟಾನ ದೇಶವೇ ಮೆಚ್ಚುವಂತಹದ್ದು.

ಭರಪೂರ ಮಳೆಯ ಪರಿಣಾಮ ನಾಡಿನ ಎಲ್ಲಾ ಜಲಾಶಯಗಳು ಭರ್ತಿಯಾಗಿ ಪ್ರತಿದಿನವೂ 3 ರಿಂದ 4 ಲಕ್ಷ ಕ್ಯೂಸೆಕ್ಸ್ ನೀರು ವ್ಯರ್ಥವಾಗಿ ಸಮುದ್ರಕ್ಕೆ ಹರಿಯುತ್ತಿರುವ ದೃಶ್ಯವನ್ನು ಹಳ್ಳಿಯ ಜನ ತಮ್ಮ ಬಿರುಕುಬಿಟ್ಟ ಕೆರೆಯ ದಡಗಳಲ್ಲಿ ನಿಂತು ನೋಡುತ್ತಿದ್ದರೆ ಹೃದಯ ಕಲಕುತ್ತದೆ.ಆಳುವ ಸರ್ಕಾರಗಳ ದೂರದರ್ಶಿತ್ವದ ಶಾಶ್ವತ ರೈತ ಸ್ನೇಹಿ ಯೋಜನೆಗಳು ರೂಪುಗೊಳ್ಳದ ಫಲವಾಗಿ ಅನ್ನಧಾತ ಇಂದು ಆತ್ಮಹತ್ಯೆಯ ಜಾಡು ಹಿಡಿದಿದ್ದಾನೆ.

ತರಳಬಾಳು ಶ್ರೀ ಜಗದ್ಗುರುವರ್ಯರ ಮಾತಿನಲ್ಲಿಯೇ ಹೇಳುವುದಾದರೆ ರೈತರಿಗೆ ಯಾವ ಭಾಗ್ಯವೂ ಬೇಡ ಸಮರ್ಪಕವಾದ ನೀರು ಮತ್ತು ವಿದ್ಯುತ್ ನೀಡಿದರೆ ರೈತರೇ ಸರ್ಕಾರಕ್ಕೆ ಸಾಲ ನೀಡುವಂತಾಗುತ್ತಾರೆ ಎಂಬುದರಲ್ಲಿ ಎಷ್ಟೊಂದು ಅರ್ಥವಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳ ಮೇಲಿನ ನಂಬಿಕೆ ಅನ್ನಧಾತನ ಮನದಲ್ಲಿ ಅಳಿದು. ಧಾರ್ಮಿಕ ನೇತಾರರ ಸಾಮಿಪ್ಯದಿ ನಮ್ಮ ಕಾರ್ಪಣ್ಯಕ್ಕೆ ಉತ್ತರವಿದೆ ಎಂಬ ಆಶಾಭಾವನೆ ಉಳಿದಿದೆ. ಸಂಪ್ರದಾಯಸ್ಥ ಸತ್ಯ ತತ್ವಾದಾರ್ಶ ಧಾರ್ಮಿಕ ಪೀಠದ ಅಧಿಪತಿಗಳಿಗೆ ಶ್ರಾವಣ ಮಾಸವನ್ನು ಸಮಾಜದ ಶ್ರೇಯೋಭಿವೃದ್ದಿಯ ಪೂಜಾ ಕೈಂಕರ್ಯಗಳ ಅಣಿಯಾಗಿದ್ದರೆ ಕಪಟ ಕಾವಿಧಾರಿಗಳಿಗೆ ಶ್ರಾವಣ ಮಾಸ ಕೇವಲ ಅತ್ಯುತ್ತಮ ವಹಿವಾಟಿನ ತಿಂಗಳಾಗಿದೆ. ಇವೆರೆಡಕ್ಕಿಂಲೂ ಬಿನ್ನವಾಗಿ ಬಸವ ಮರುಳಸಿದ್ದರ ವೈಚಾರಿಕ ತತ್ವ ಪರಂಪರೆಯ ವಿದ್ವತ್ತಿನ ಸಂಗಮವಾದ ತರಳಬಾಳು ಶ್ರೀ ಗಳು ಬೆಂಗಳೂರಿನ ಆರ್ ಟಿ ನಗರದಲ್ಲಿರುವ ತರಳಬಾಳು ಕೇಂದ್ರದಲ್ಲಿ ಕರ್ನಾಟಕ ಸರ್ಕಾರದ ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಕಾರ್ಯದರ್ಶಿಗಳ, ಎಲ್ಲಾ ಪರಿಣಿತ ಎಂಜಿನಿಯರ್ ಗಳ ಸಭೆಯನ್ನು ತಮ್ಮ ಸಾನ್ನಿಧ್ಯದಲ್ಲಿ ಏರ್ಪಡಿಸಿ.ರಾಜಕೀಯ ರಂಗದ ಅಪರೂಪ ಜನಸ್ನೇಹಿ ಚಿಂತಕ ಬಿ.ಎಲ್.ಶಂಕರ್ ಅಧ್ಯಕ್ಷತೆಯಲ್ಲಿ ದಾವಣಗೆರೆಯಿಂದ ವ್ಯರ್ಥವಾಗಿ ಹರಿಯುತ್ತಿರುವ ಭದ್ರಾ ನದಿಯ ನೀರನ್ನು ಜಗಳೂರು ಹಾಗೂ ಭರಮಸಾಗರ ವ್ಯಾಪ್ತಿಯ ಕೆರೆಗಳಿಗೆ ಶೀಘ್ರವಾಗಿ ಮತ್ತು ಸಮರ್ಪಕವಾಗಿ ಹರಿಸುವ ವಿಸ್ತೃ ಯೋಜನೆಯ ಬಗ್ಗೆ ವಿಸ್ತೃತ ಚರ್ಚೆ ನಡೆಸುತ್ತಿರುವ ಮಾಹಿತಿಯನ್ನು ಸಮಾಜ ಭಾಂಧವರಿಗೆ ತಿಳಿಸಲೇಬೇಕಾಗುತ್ತದೆ .
ರಾಜನಹಳ್ಳಿ ಏತ ನೀರಾವರಿಯ ಯೋಜನೆಯ1 ನೇ ಹಂತದ ಯೋಜನೆಯಲ್ಲಿ ದಾವಣಗೆರೆ ಮತ್ತು ಜಗಳೂರು ತಾಲ್ಲೂಕಿನ 23ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಳೆದ ವರ್ಷದಿಂದಲೇ ಜಾರಿಯಲ್ಲಿದೆ.ಆದರೂ ಹಲವು ತಾಂತ್ರಿಕ ದೋಷಗಳಿಂದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಫಲಪ್ರದವಾಗಿರಲಿಲ್ಲ, ಮಲೆನಾಡಿನಲ್ಲಿ ವಿಪರೀತ ಮಳೆಯಾಗಿ ತುಂಗಾ ಮತ್ತು ಭದ್ರಾ ಜಲಾಶಯಗಳು ತುಂಬಿ ಹರಿದು,ಹೆಚ್ಚುವರಿ ನೀರನ್ನು ಜಲಾಶಯಗಳಿಂದ ಹೊರಬಿಡುತ್ತಿದ್ದರೂ ಸಹ ತಾಂತ್ರಿಕ ಕಾರಣಗಳಿಂದ ಸುತ್ತಲಿನ ಕೆರೆಗಳಿಗೆ ನೀರು ಬಾರದರಿರುವುದು ಶ್ರೀಗಳ ಬೇಸರಕ್ಕೆ ಕಾರಣವಾಗಿದೆ. ಹೆಚ್ಚುವರಿ ನೀರಿನಿಂದ ಆಡಳಿತ ಮತ್ತು ಅಧಿಕಾರಿಗಳ ಜಾಗೃತಿವಹಿಸಿದ್ದರೆ ಎಲ್ಲಾ ಕೆರೆಗಳಿನ್ನು ತುಂಬಿಸಬಹುದಿತ್ತೆಂಬುದು ಮನೋ ಇಂಗಿತ.

ಈ ನಿಟ್ಟಿನಲ್ಲಿ ಈ ಯೋಜನೆಯಲ್ಲಿ ಇರುವ ದೋಷಗಳನ್ನು ಸರಿಪಡಿಸಿ 1 ನೇ ಹಂತದ ಯೋಜನೆಯ ಎಲ್ಲಾ ಕೆರೆಗಳಿಗೆ ಶತಾಯಗತಾಯ ನೀರು ತುಂಬಿಸುವಂತೆ ಶ್ರೀಗಳು ತಾಕೀತು ಮಾಡಿದರು.ಜಗಳೂರು ತರಳಬಾಳು ಹುಣ್ಣಿಮೆಯ ರೈತಕೊಡುಗೆ ಎನ್ನುವಂತೆ 2 ನೇ ಹಂತದ 2
ಯೋಜನೆಗಳಿಗೆ 500 ಕೋಟಿ ರೂಪಾಯಿ ಅನುದಾನ ಬಜೆಟ್ನಲ್ಲಿ ದೊರೆತಿದ್ದು,ಮೊದಲ ಹಂತದಲ್ಲಿ ಕಂಡುಬಂದ ಎಲ್ಲಾ ನ್ಯೂನತೆಗಳು 2 ನೇ ಹಂತದ ಕಾರ್ಯಯೋಜನೆಯಲ್ಲಿ ಪುನರಾವರ್ತನೆಯಾಗದಂತೆ ಎಚ್ಚರವಹಿಸಲು ಕ್ರಮವಹಿಸಿವ ಪರಮರ್ಶೆಯನ್ನು ಶ್ರೀಗಳು ನಡೆಸಿದರು.

ಜೊತೆಗೆ ಚಿಕ್ಕಮಂಗಳೂರು ಜಿಲ್ಲೆಯ ಹಬ್ಬೆ ಫಾಲ್ಸ್ ,ಮದಗದಕೆರೆ,ಅಯ್ಯನಕೆರೆ,ಲಿಂಗದಹಳ್ಳಿ ವ್ಯಾಪ್ತಿಯ ಎಲ್ಲಾ ಕೆರೆಗಳಿಗೆ ನೀರು ಹರಿಸುವ ಕುರಿತು ಶ್ರೀಗಳು ಸಮಾಲೋಚನೆ ನಡೆಸಿದರು. ಅಧಿಕಾರಿಗಳ ಮೇಲೆ ನಿಯಮಿತ ಒತ್ತಡ ಹಾಕಿದರೆ ಸಾರ್ವಜನಿಕ ಕೆಲಸಗಳು ಆಗುವುದು ಕಷ್ಟ ಎಂದು ಅರಿತಿರುವ ಶ್ರೀಗಳು ,ಈ ಸಭೆಯ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕ್ರಮಕ್ಕೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮದ ಚೀಫ್ ಎಂಜಿನಿಯರ್ ಗಳು,ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ಅಧಿಕಾರಿಗಳು ಹಾಜರಿದ್ದರು.

ರೈತಾಭ್ಯುದಯದ ಕಲ್ಯಾಣದ ಕನಸೇ ಶ್ರೀ ಜಗದ್ಗುರುವರ್ಯರ ಅಂತರಾಳದ ಆಶಯ ತ್ರೀಕಾಲವೂ ಸಮಾಜದ ಉತ್ಕೃಷ್ಟ ಉನ್ನತಿಗೆ ಶ್ರಮದಋಷಿಯಂತೆ ಕೈಂಕರ್ಯಬದ್ದರಾಗಿರುವ ಪರಮಾರಾಧ್ಯ ಶ್ರೀಗಳ ಪವಿತ್ರ ಪಾದಗಳಲ್ಲಿ ಭಕ್ತಿ ಪೂರ್ವಕ ಪ್ರಣಾಮಗಳನ್ನು ಸಲ್ಲಿಸಲಷ್ಟೇ ನಮಗೆ ಸಾಧ್ಯ.

-ಬಸವರಾಜ ಸಿರಿಗೆರೆ

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.

ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.

ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ದಿನದ ಸುದ್ದಿ1 day ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

ದಿನದ ಸುದ್ದಿ2 days ago

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ...

ದಿನದ ಸುದ್ದಿ2 days ago

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ...

ದಿನದ ಸುದ್ದಿ2 days ago

ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ....

ದಿನದ ಸುದ್ದಿ2 days ago

ಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕೃಷಿ ಇಲಾಖೆ ಹಾಗೂ ಆತ್ಮ (ATMA) ಯೋಜನೆಯಡಿ 2026-27ನೇ ಸಾಲಿನ ವಿವಿಧ ಕೃಷಿ ಪ್ರಶಸ್ತಿಗಳಿಗಾಗಿ ದಾವಣಗೆರೆ ಜಿಲ್ಲೆಯ ಅರ್ಹ ಹಾಗೂ ಆಸಕ್ತ ರೈತ ಮತ್ತು ರೈತ...

ಅಂಕಣ4 days ago

ಕವಿತೆ | ದೇವರ ಹೂವು

~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು...

ದಿನದ ಸುದ್ದಿ4 days ago

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ...

ದಿನದ ಸುದ್ದಿ4 days ago

ಆಶ್ರಯ ಯೋಜನೆ – ಆವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30...

ದಿನದ ಸುದ್ದಿ6 days ago

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

ಗಿರೀಶ್ ಮುತ್ತು ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು...

ದಿನದ ಸುದ್ದಿ7 days ago

ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ

ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ...

Trending