ದಿನದ ಸುದ್ದಿ
ಪಾಂಡೋಮಟ್ಟಿಯಲ್ಲಿಂದು ಮೇಳೈಸಲಿದೆ ತರಳಬಾಳು ಜಾನಪದ ಸಿರಿ 2018ರ ಸಾಂಸ್ಕೃತಿಕ ಸ್ವರ್ಗ..!
ಸುದ್ದಿದಿನ, ಚನ್ನಗಿರಿ: ಬಹುನಿರೀಕ್ಷೆಯ ಹೊಸ ಆಯಾಮದೊಂದಿಗೆ, ಮತ್ತೊಷ್ಟು ಬದಲಾವಣೆಗಳನ್ನು ಮೈ ತುಂಬಿಕೊಂಡು,ಸಾಂಸ್ಕೃತಿಕ ಕನ್ನಿಕೆಯ ಕುವರಿಯಂತಿರುವ “ತರಳಬಾಳು ಜಾನಪದ ಸಿರಿಸಂಭ್ರಮ” 350 ಮಕ್ಕಳು ಸಂಭ್ರಮ ಮತ್ತು ಅಪರಿಮಿತ ಉತ್ಸಾಹದಿ ಜಾನಪದ ಲೋಕಕ್ಕೆ ಸರ್ವರನ್ನು ಕರೆದೊಯ್ಯಲು ಸಜ್ಜಾಗಿದ್ದಾರೆ.
ಕಳೆದ ವರ್ಷದ ಅಭೂತಪೂರ್ವಯಶಸ್ಸಿನ ಮಜಲು ಏರಿ ರಾಜ್ಯ, ಹೊರ ರಾಜ್ಯಗಳ ಎಲ್ಲಾ ಪ್ರತಿಷ್ಠಿತ ವೇದಿಕೆಗಳಲ್ಲಿ ಸಂಭ್ರಮದ ಸ್ಮರಣೀಯ ಸ್ವರ್ಗ ಸೃಷ್ಟಿಸಿ ಎಲ್ಲರ ಜನಮಾನಸದಿ ಮೆಚ್ಚುಗೆ ಗಳಿಸಿದ ಜಾನಪದ ಸಿರಿ ಸಂಭ್ರಮ ಈ ವರ್ಷದ ಪ್ರದರ್ಶನ ನೀಡಲು ಸನ್ನದ್ದವಾಗಿದೆ.
ಇತ್ತೀಚೆಗೆ ರಾಮಗಿರಿಯಲ್ಲಿ ಈ ವರ್ಷದ ಪ್ರಥಮ ಪ್ರದರ್ಶನದ ಲೋಕಾರ್ಪಣೆಯೊಂದಿಗೆ ಜನ ಮನ್ನಣೆಗಳಿಸಿರುವ ಸಿರಿ ಸಂಭ್ರಮದ ಮುಖ್ಯ ಉದ್ದೇಶವೇ ಆಧುನಿಕತೆಯ ಭರಾಟೆಯ ನಾಗಲೋಟದ ಈ ಕಾಲದಲ್ಲಿ ನಮ್ಮ ಪೂರ್ವಜರ ಸೃಷ್ಟಿ ಮತ್ತು ಸಂಸ್ಕೃತಿಯ ಸೃಜನಶೀಲ ಸಾಂಸ್ಕೃತಿಕ ಜಾನಪದೀಯ ಕಲಾ ಪ್ರಕಾರಗಳು ನಶಿಸಿ ಹೋಗುತ್ತಾ ಇತಿಹಾಸದ ಗರ್ಭಕ್ಕೆ ದಾಖಲಾಗುವ ಅಪಾಯಕಾರಿ ಬೆಳವಣಿಗೆಯನ್ನು ತಡೆಯುವ ಸಾಂಸ್ಕೃತಿಕ ಕೈಂಕರ್ಯವಾಗಿದೆ. ಜತನಿಂದ ಜೊತೆಗಿದ್ದ ಕಲಾ ಸೊಬಗನ್ನು ನಮ್ಮ ಯುವ ಜನಾಂಗಕ್ಕೆ ಪರಿಚಯಿಸುವ ಮೂಲಕ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ಹಂಚುವ ಆಶಯದಿ ಬೀಜಾಂಕುರವಾಗಿದ್ದೇ “ತರಳಬಾಳು ಜಾನಪದ ಸಿರಿ ಸಂಭ್ರಮ “.
ಕಳೆದ 6 ದಶಕಗಳಿಂದಲೂ ಶರಣ ಸಾಹಿತ್ಯ, ವಚನ ಪ್ರಸಾರ, ನಾಟಕಗಳ ರಚನೆ ಪ್ರದರ್ಶನ, ವೀರಗಾಸೆ ಸ್ಪರ್ಧೆ, ಭಜನೆ ಮೇಳಾ,ಸೋಬಾನೆ ಪದ ಸ್ಪರ್ಧೆ ಹೀಗೆ ಸಾವಿರಾರು ಕಾರ್ಯಕ್ರಮಗಳ ಮೂಲಕ ದೇಶದಾದ್ಯಂತ ಕನ್ನಡ ನಾಡಿನ ಸಾಂಸ್ಕೃತಿಕ ಸೊಬಗನ್ನು ದೇಶದಾದ್ಯಂತ ಪ್ರದರ್ಶಸಿ ಅರ್ಥಪೂರ್ಣ ಶರಣ ಸಂದೇಶ ಸಾರಿದ ಹಿರಿಮೆಯ ಹೆಗ್ಗಳಿಕೆ ತರಳಬಾಳು ಕಲಾಸಂಘಕ್ಕಿದೆ. ಪರಮ ಪೂಜನೀಯ ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ಸಾಂಸ್ಕೃತಿಕ ಸಂಕಲ್ಪದ ಆಶಯ ಮತ್ತು ದಿವ್ಯ ಮಾರ್ಗದರ್ಶನದಂತೆ ನವ ಮನ್ವಂತರದ ಹೊಸತನವೆಂಬಂತೆ ತರಳಬಾಳು ಕಲಾಸಂಘ ಕಳೆದ ವರ್ಷದಿಂದ ಜಾನಪದ ಸಿರಿ ಸಂಭ್ರಮದ ಹೆಸರಲ್ಲಿ ಸಂಸ್ಕೃತಿಯ ರಾಯಭಾರಿಯ ಸ್ಥಾನವನ್ನು ತುಂಬಲು ಯಶಸ್ವಿಯಾಗಿ ದಾಟಿ ಎರಡನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ.
ಈ ವರ್ಷದ ಮೂರನೇ ಪ್ರಯೋಗ ದಾವಣಗೆರೆ ಜಿಲ್ಲೆಯ, ಚನ್ನಗಿರಿ ತಾಲ್ಲೂಕಿನ ಪಾಂಡೋಮಟ್ಟಿ ಮತ್ತು ಗೊಪ್ಪೇನಹಳ್ಳಿ ಅವಳಿ ಗ್ರಾಮದ ಶ್ರೀ ರುದ್ರೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಇಂದು ಶನಿವಾರ ಸಂಜೆ 6:00 ಕ್ಕೆ ಸಾಂಸ್ಕೃತಿಕ ಲೋಕದ ದಿಗ್ದರ್ಶನದ ಅನಾವರಣವಾಗಲಿದೆ.
ಜಾನಪದ ಕಲಾ ಪ್ರಕಾರಗಳ ವೈವಿದ್ಯತೆಯ ಸಂತಸದ ಸ್ವರ್ಗ ಸೃಷ್ಟಿಸುವ ನಮ್ಮ 350 ಮಕ್ಕಳ ಶ್ರಮದ ಸಾಕ್ಷಾತ್ಕಾರವು 25 ನೃತ್ಯ ವೈವಿಧ್ಯಗಳಲ್ಲಿ ಅವಿರ್ಭವಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


