Connect with us

ದಿನದ ಸುದ್ದಿ

ಭದ್ರಾವತಿಯ ಅರೆಕೆರೆಯಲ್ಲಿ ಇಂದು ಸಂಜೆ ಮೇಳೈಸಲಿದೆ ತರಳಬಾಳು ಜಾನಪದ ಸಿರಿ 2018 ರ ಸಾಂಸ್ಕೃತಿಕ ಸಂಜೆ

Published

on

ಸುದ್ದಿದಿನ ಡೆಸ್ಕ್ : ಬಹು ನಿರೀಕ್ಷೆಯ ಹೊಸ ಆಯಾಮದೊಂದಿಗೆ, ಮತ್ತೊಷ್ಟು ಬದಲಾವಣೆಗಳನ್ನು ಮೈ ತುಂಬಿಕೊಂಡು,ಸಾಂಸ್ಕೃತಿಕ ಕನ್ನಿಕೆಯ ಕುವರಿಯಂತಿರುವ “ತರಳಬಾಳು ಜಾನಪದ ಸಿರಿಸಂಭ್ರಮ” 350 ಮಕ್ಕಳು ಸಂಭ್ರಮ ಮತ್ತು ಅಪರಿಮಿತ ಉತ್ಸಾಹದಿ ಜಾನಪದ ಲೋಕಕ್ಕೆ ಸರ್ವರನ್ನು ಕರೆದೊಯ್ಯಲು ಸಜ್ಜಾಗಿದ್ದಾರೆ. ಕಳೆದ ವರ್ಷದ ಅಭೂತಪೂರ್ವಯಶಸ್ಸಿನ ಮಜಲು ಏರಿ ರಾಜ್ಯ, ಹೊರ ರಾಜ್ಯಗಳ ಎಲ್ಲಾ ಪ್ರತಿಷ್ಠಿತ ವೇದಿಕೆಗಳಲ್ಲಿ ಸಂಭ್ರಮದ ಸ್ಮರಣೀಯ ಸ್ವರ್ಗ ಸೃಷ್ಟಿಸಿ ಎಲ್ಲರ ಜನಮಾನಸದಿ ಮೆಚ್ಚುಗೆ ಗಳಿಸಿದ ಜಾನಪದ ಸಿರಿ ಸಂಭ್ರಮ ಈ ವರ್ಷದ ಪ್ರದರ್ಶನ ನೀಡಲು ಸನ್ನದ್ದವಾಗಿದೆ.

ಹಲವಾರು ಪ್ರದರ್ಶನಗಳ ಸಾರ್ಥಕ ಅಭಿನಯದ ಮೂಲಕ ಜನ ಮನ್ನಣೆಗಳಿಸಿರುವ ಸಿರಿ ಸಂಭ್ರಮದ ಮುಖ್ಯ ಉದ್ದೇಶವೇ ಆಧುನಿಕತೆಯ ಭರಾಟೆಯ ನಾಗಲೋಟದ ಈ ಕಾಲದಲ್ಲಿ ನಮ್ಮ ಪೂರ್ವಜರ ಸೃಷ್ಟಿ ಮತ್ತು ಸಂಸ್ಕೃತಿಯ ಸೃಜನಶೀಲ ಸಾಂಸ್ಕೃತಿಕ ಜಾನಪದೀಯ ಕಲಾ ಪ್ರಕಾರಗಳು ನಶಿಸಿ ಹೋಗುತ್ತಾ ಇತಿಹಾಸದ ಗರ್ಭಕ್ಕೆ ದಾಖಲಾಗುವ ಅಪಾಯಕಾರಿ ಬೆಳವಣಿಗೆಯನ್ನು ತಡೆಯುವ ಸಾಂಸ್ಕೃತಿಕ ಕೈಂಕರ್ಯವಾಗಿದೆ.

ಜತನಿಂದ ಜೊತೆಗಿದ್ದ ಕಲಾ ಸೊಬಗನ್ನು ನಮ್ಮ ಯುವ ಜನಾಂಗಕ್ಕೆ ಪರಿಚಯಿಸುವ ಮೂಲಕ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ಹಂಚುವ ಆಶಯದಿ ಬೀಜಾಂಕುರವಾಗಿದ್ದೇ ” ತರಳಬಾಳು ಜಾನಪದ ಸಿರಿ ಸಂಭ್ರಮ “. ಕಳೆದ 6 ದಶಕಗಳಿಂದಲೂ ಶರಣ ಸಾಹಿತ್ಯ, ವಚನ ಪ್ರಸಾರ, ನಾಟಕಗಳ ರಚನೆ ಪ್ರದರ್ಶನ, ವೀರಗಾಸೆ ಸ್ಪರ್ಧೆ, ಭಜನೆ ಮೇಳಾ,ಸೋಬಾನೆ ಪದ ಸ್ಪರ್ಧೆ ಹೀಗೆ ಸಾವಿರಾರು ಕಾರ್ಯಕ್ರಮಗಳ ಮೂಲಕ ದೇಶದಾದ್ಯಂತ ಕನ್ನಡ ನಾಡಿನ ಸಾಂಸ್ಕೃತಿಕ ಸೊಬಗನ್ನು ದೇಶದಾದ್ಯಂತ ಪ್ರದರ್ಶಸಿ ಅರ್ಥಪೂರ್ಣ ಶರಣ ಸಂದೇಶ ಸಾರಿದ ಹಿರಿಮೆಯ ಹೆಗ್ಗಳಿಕೆ ತರಳಬಾಳು ಕಲಾಸಂಘಕ್ಕಿದೆ.

ಪರಮ ಪೂಜನೀಯ ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ಸಾಂಸ್ಕೃತಿಕ ಸಂಕಲ್ಪದ ಆಶಯ ಮತ್ತು ದಿವ್ಯ ಮಾರ್ಗದರ್ಶನದಂತೆ ನವ ಮನ್ವಂತರದ ಹೊಸತನವೆಂಬಂತೆ ತರಳಬಾಳು ಕಲಾಸಂಘ ಕಳೆದ ವರ್ಷದಿಂದ ಜಾನಪದ ಸಿರಿ ಸಂಭ್ರಮದ ಹೆಸರಲ್ಲಿ ಸಂಸ್ಕೃತಿಯ ರಾಯಭಾರಿಯ ಸ್ಥಾನವನ್ನು ತುಂಬಲು ಯಶಸ್ವಿಯಾಗಿ ದಾಟಿ ಎರಡನೇ ವರ್ಷದಲ್ಲೂ ಈಗಾಗಲೇ ಹತ್ತಾರು ಪ್ರದರ್ಶನ ನೀಡಿರುವ ತಂಡ ಇಂದು ದಿನಾಂಕ ಸಂಜೆ ಉಕ್ಕಿನ ನಗರಿ ಭದ್ರವಾತಿ ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿನ ಶ್ರೀ ಅರೆಕಲ್ಲಮ್ಮ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಂಜೆ 6.00ಗಂಟೆಗೆ ಜರುಗಲಿದೆ. ಜಾನಪದ ಕಲಾ ಪ್ರಕಾರಗಳ ಮೂಲಕ ಸ್ವರ್ಗ ಸೃಷ್ಟಿಸುವ ನಮ್ಮ 350 ಮಕ್ಕಳ ಶ್ರಮದ ಸಾಕ್ಷಾತ್ಕಾರವು 25 ನೃತ್ಯ ವೈವಿಧ್ಯಗಳಲ್ಲಿ ಅವಿರ್ಭವಿಸಲಿದೆ. ಅಪರೂಪದ ಈ ಸಾಂಸ್ಕೃತಿಕ ಸಂಜೆಗೆ ನಿವೆಲ್ಲಾ ಸಾಕ್ಷಿಯಾಗಬೇಕೆಂಬ ಅಪೇಕ್ಷೆ ನಮ್ಮದು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಕವಿತೆ | ಮತ್ತಿನ ಕುಣಿಕೆ

Published

on

  • ಗುರು ಸುಳ್ಯ

ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ

ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ

ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…

ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ

ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ

ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)

ಕವಿ : ಗುರು ಸುಳ್ಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

Published

on

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು.

ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

Published

on

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್‌ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಬಿ ಶೈಲಶ್ರೀರವರು, ಸಂಶೋಧನಾ, ಸ್ನಾತಕೋತ್ತರ ಪ್ರಥಮ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ38 minutes ago

ಕವಿತೆ | ಮತ್ತಿನ ಕುಣಿಕೆ

ಗುರು ಸುಳ್ಯ ನಿದೆರೆಗೆ ದೂಡದ ಮದಿರೆಯ ಅನುಭವ ಸದಾ ಸಂಕಟಗಳ ಹೆರುವ ಮತ್ತಿನ ಕುಣಿಕೆ ನನ್ನ ಮಡಿಲ ಮೇಲೆ ನನ್ನದೇ ಒಡಲು ಮಲಗಿರಲು ಮಲಗಲು ಹಂಬಲಿಸುವ ಮಗುವಿನ...

ದಿನದ ಸುದ್ದಿ1 day ago

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು. ಶಾಸಕ ನಿವಾಸದಲ್ಲಿ ಶನಿವಾರ...

ದಿನದ ಸುದ್ದಿ2 days ago

ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್‌ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು....

ದಿನದ ಸುದ್ದಿ3 days ago

2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ. ಅರ್ಹರನ್ನು...

ದಿನದ ಸುದ್ದಿ3 days ago

ಅನ್ನಭಾಗ್ಯ ಯೋಜನೆ | ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ...

ದಿನದ ಸುದ್ದಿ3 days ago

ದಾವಣಗೆರೆ | ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ ; ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ

ಸುದ್ದಿದಿನ,ದಾವಣಗೆರೆ: ಅಂತರ್ಜಲ ಪ್ರಾಧಿಕಾರದ ನಿರಾಪೇಕ್ಷಣಾ ಪತ್ರವನ್ನು ಪಡೆಯದೆ ಮನೆಯ ಬೋರ್ ವೆಲ್ಲಿನಿಂದ ವಾಣಿಜ್ಯ ಉದ್ದೇಶಕ್ಕಾಗಿ ಸರತಿ ಸಾಲಿನಲ್ಲಿ ಸತತ ನಾಲ್ಕೈದು ವರ್ಷಗಳಿಂದ ಟ್ಯಾಂಕರ್ ಗಳ ಮೂಲಕ ದಿನಕ್ಕೆ...

ದಿನದ ಸುದ್ದಿ4 days ago

ಖಾತ್ರಿ ಯೋಜನೆಯ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ :‌ ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಬೆಂಗಳೂರು:ಗ್ಯಾರಂಟಿ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ; ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಪಕ್ಷ ನಾಯಕರ ಆರೋಪಕ್ಕೆ, ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿವೇಶನ...

ದಿನದ ಸುದ್ದಿ4 days ago

ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರಡ್‍ಸೆಟ್ ಸಂಸ್ಥೆ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ...

ದಿನದ ಸುದ್ದಿ4 days ago

ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ

ಸುದ್ದಿದಿನ,ದಾವಣಗೆರೆ:ಹರಿಹರ ತಾಲ್ಲೂಕು ಕ್ರೀಡಾಂಗಣದಲ್ಲಿರುವ ವಾಣಿಜ್ಯ ಮಳಿಗೆಗಳನ್ನು ಮಾಸಿಕ ಬಾಡಿಗೆ ಆಧಾರದ ಮೇಲೆ ನೀಡಲು ಹರಾಜು ಕರೆಯಲಾಗಿದ್ದು, ಕಾರಣಾಂತರಗಳಿಂದ ಹರಾಜು ದಿನಾಂಕವನ್ನು ಮಾ.20 ರ ಬೆಳಿಗ್ಗೆ 11.00 ಗಂಟೆಗೆ...

ದಿನದ ಸುದ್ದಿ4 days ago

ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’

ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಚನ್ನಗಿರಿ ನ್ಯಾಯಾಯದಲ್ಲಿ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಧೀಶರಾಗಿರುವ ಕು.ಶಮಾ...

Trending