Connect with us

ದಿನದ ಸುದ್ದಿ

ಭದ್ರಾವತಿಯ ಅರೆಕೆರೆಯಲ್ಲಿ ಇಂದು ಸಂಜೆ ಮೇಳೈಸಲಿದೆ ತರಳಬಾಳು ಜಾನಪದ ಸಿರಿ 2018 ರ ಸಾಂಸ್ಕೃತಿಕ ಸಂಜೆ

Published

on

ಸುದ್ದಿದಿನ ಡೆಸ್ಕ್ : ಬಹು ನಿರೀಕ್ಷೆಯ ಹೊಸ ಆಯಾಮದೊಂದಿಗೆ, ಮತ್ತೊಷ್ಟು ಬದಲಾವಣೆಗಳನ್ನು ಮೈ ತುಂಬಿಕೊಂಡು,ಸಾಂಸ್ಕೃತಿಕ ಕನ್ನಿಕೆಯ ಕುವರಿಯಂತಿರುವ “ತರಳಬಾಳು ಜಾನಪದ ಸಿರಿಸಂಭ್ರಮ” 350 ಮಕ್ಕಳು ಸಂಭ್ರಮ ಮತ್ತು ಅಪರಿಮಿತ ಉತ್ಸಾಹದಿ ಜಾನಪದ ಲೋಕಕ್ಕೆ ಸರ್ವರನ್ನು ಕರೆದೊಯ್ಯಲು ಸಜ್ಜಾಗಿದ್ದಾರೆ. ಕಳೆದ ವರ್ಷದ ಅಭೂತಪೂರ್ವಯಶಸ್ಸಿನ ಮಜಲು ಏರಿ ರಾಜ್ಯ, ಹೊರ ರಾಜ್ಯಗಳ ಎಲ್ಲಾ ಪ್ರತಿಷ್ಠಿತ ವೇದಿಕೆಗಳಲ್ಲಿ ಸಂಭ್ರಮದ ಸ್ಮರಣೀಯ ಸ್ವರ್ಗ ಸೃಷ್ಟಿಸಿ ಎಲ್ಲರ ಜನಮಾನಸದಿ ಮೆಚ್ಚುಗೆ ಗಳಿಸಿದ ಜಾನಪದ ಸಿರಿ ಸಂಭ್ರಮ ಈ ವರ್ಷದ ಪ್ರದರ್ಶನ ನೀಡಲು ಸನ್ನದ್ದವಾಗಿದೆ.

ಹಲವಾರು ಪ್ರದರ್ಶನಗಳ ಸಾರ್ಥಕ ಅಭಿನಯದ ಮೂಲಕ ಜನ ಮನ್ನಣೆಗಳಿಸಿರುವ ಸಿರಿ ಸಂಭ್ರಮದ ಮುಖ್ಯ ಉದ್ದೇಶವೇ ಆಧುನಿಕತೆಯ ಭರಾಟೆಯ ನಾಗಲೋಟದ ಈ ಕಾಲದಲ್ಲಿ ನಮ್ಮ ಪೂರ್ವಜರ ಸೃಷ್ಟಿ ಮತ್ತು ಸಂಸ್ಕೃತಿಯ ಸೃಜನಶೀಲ ಸಾಂಸ್ಕೃತಿಕ ಜಾನಪದೀಯ ಕಲಾ ಪ್ರಕಾರಗಳು ನಶಿಸಿ ಹೋಗುತ್ತಾ ಇತಿಹಾಸದ ಗರ್ಭಕ್ಕೆ ದಾಖಲಾಗುವ ಅಪಾಯಕಾರಿ ಬೆಳವಣಿಗೆಯನ್ನು ತಡೆಯುವ ಸಾಂಸ್ಕೃತಿಕ ಕೈಂಕರ್ಯವಾಗಿದೆ.

ಜತನಿಂದ ಜೊತೆಗಿದ್ದ ಕಲಾ ಸೊಬಗನ್ನು ನಮ್ಮ ಯುವ ಜನಾಂಗಕ್ಕೆ ಪರಿಚಯಿಸುವ ಮೂಲಕ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ಹಂಚುವ ಆಶಯದಿ ಬೀಜಾಂಕುರವಾಗಿದ್ದೇ ” ತರಳಬಾಳು ಜಾನಪದ ಸಿರಿ ಸಂಭ್ರಮ “. ಕಳೆದ 6 ದಶಕಗಳಿಂದಲೂ ಶರಣ ಸಾಹಿತ್ಯ, ವಚನ ಪ್ರಸಾರ, ನಾಟಕಗಳ ರಚನೆ ಪ್ರದರ್ಶನ, ವೀರಗಾಸೆ ಸ್ಪರ್ಧೆ, ಭಜನೆ ಮೇಳಾ,ಸೋಬಾನೆ ಪದ ಸ್ಪರ್ಧೆ ಹೀಗೆ ಸಾವಿರಾರು ಕಾರ್ಯಕ್ರಮಗಳ ಮೂಲಕ ದೇಶದಾದ್ಯಂತ ಕನ್ನಡ ನಾಡಿನ ಸಾಂಸ್ಕೃತಿಕ ಸೊಬಗನ್ನು ದೇಶದಾದ್ಯಂತ ಪ್ರದರ್ಶಸಿ ಅರ್ಥಪೂರ್ಣ ಶರಣ ಸಂದೇಶ ಸಾರಿದ ಹಿರಿಮೆಯ ಹೆಗ್ಗಳಿಕೆ ತರಳಬಾಳು ಕಲಾಸಂಘಕ್ಕಿದೆ.

ಪರಮ ಪೂಜನೀಯ ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ಸಾಂಸ್ಕೃತಿಕ ಸಂಕಲ್ಪದ ಆಶಯ ಮತ್ತು ದಿವ್ಯ ಮಾರ್ಗದರ್ಶನದಂತೆ ನವ ಮನ್ವಂತರದ ಹೊಸತನವೆಂಬಂತೆ ತರಳಬಾಳು ಕಲಾಸಂಘ ಕಳೆದ ವರ್ಷದಿಂದ ಜಾನಪದ ಸಿರಿ ಸಂಭ್ರಮದ ಹೆಸರಲ್ಲಿ ಸಂಸ್ಕೃತಿಯ ರಾಯಭಾರಿಯ ಸ್ಥಾನವನ್ನು ತುಂಬಲು ಯಶಸ್ವಿಯಾಗಿ ದಾಟಿ ಎರಡನೇ ವರ್ಷದಲ್ಲೂ ಈಗಾಗಲೇ ಹತ್ತಾರು ಪ್ರದರ್ಶನ ನೀಡಿರುವ ತಂಡ ಇಂದು ದಿನಾಂಕ ಸಂಜೆ ಉಕ್ಕಿನ ನಗರಿ ಭದ್ರವಾತಿ ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿನ ಶ್ರೀ ಅರೆಕಲ್ಲಮ್ಮ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಂಜೆ 6.00ಗಂಟೆಗೆ ಜರುಗಲಿದೆ. ಜಾನಪದ ಕಲಾ ಪ್ರಕಾರಗಳ ಮೂಲಕ ಸ್ವರ್ಗ ಸೃಷ್ಟಿಸುವ ನಮ್ಮ 350 ಮಕ್ಕಳ ಶ್ರಮದ ಸಾಕ್ಷಾತ್ಕಾರವು 25 ನೃತ್ಯ ವೈವಿಧ್ಯಗಳಲ್ಲಿ ಅವಿರ್ಭವಿಸಲಿದೆ. ಅಪರೂಪದ ಈ ಸಾಂಸ್ಕೃತಿಕ ಸಂಜೆಗೆ ನಿವೆಲ್ಲಾ ಸಾಕ್ಷಿಯಾಗಬೇಕೆಂಬ ಅಪೇಕ್ಷೆ ನಮ್ಮದು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : 2023-24 ನೇ ಸಾಲಿನ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‍ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5 ನೇ ತರಗತಿಯಿಂದ 10 ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಎಸ್.ಎಸ್.ಪಿ ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.in ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ನಾಗರಾಜ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಗಳೂರು | ಸಿಡಿಲು ಬಡಿದು ಇಬ್ಬರು ರೈತರು ಸಾವು

Published

on

ಸುದ್ದಿದಿನ, ದಾವಣಗೆರೆ : ಸಿಡಿಲು ಬಡಿದು, ಇಬ್ಬರು ರೈತರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅಣಬೂರು ಗೊಲ್ಲರಹಟ್ಟಿಯಲ್ಲಿ ನಿನ್ನೆ ಸಂಜೆ ನಡೆದಿದೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಮಳೆಬಂದ ಕಾರಣ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಿದ್ದಾಗ ಈ ದುರಂತ ಸಂಭವಿಸಿದೆ. ಮೃತರ ಕುಟುಂಬಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಜಿಲ್ಲಾಡಳಿತ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ; ನಾಡಿದ್ದು ವಿಧ್ಯುಕ್ತ ಚಾಲನೆ

Published

on

ಸುದ್ದಿದಿನ, ಬೆಂಗಳೂರು : ಸರ್ಕಾರದ ಗ್ಯಾರಂಟಿ ಘೋಷಣೆಗಳಲ್ಲೊಂದಾದ ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿದ್ದು ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.

ಕೆಎಸ್‌ಆರ್‌ಟಿಸಿ ಸೇರಿದಂತೆ ಎಲ್ಲಾ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಇದೇ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ದೊರೆಯಲಿದೆ.

ಈ ಯೋಜನೆಗೆ ರಾಜ್ಯಾದ್ಯಂತ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಸಂಬಂಧಪಟ್ಟ ಜಿಲ್ಲೆಗಳಲ್ಲಿ ಯೋಜನೆಗೆ ಏಕಕಾಲಕ್ಕೆ ಚಾಲನೆ ನೀಡಲಿದ್ದು, ವಿದ್ಯಾರ್ಥಿನಿಯರೂ ಸೇರಿದಂತೆ ಎಲ್ಲಾ ವರ್ಗಗಳ ಮಹಿಳೆಯರಿಗೆ ಎಸಿ ಹಾಗೂ ಲಕ್ಷುರಿ ಬಸ್‌ಗಳನ್ನು ಹೊರತುಪಡಿಸಿ ಇತರ ಎಲ್ಲಾ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗುವುದು. ಇದರಿಂದ ಶೇಕಡ 94 ರಷ್ಟು ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಬಸ್‌ಗಳಲ್ಲಿ ಶೇ. 50 ರಷ್ಟು ಆಸನಗಳನ್ನು ಪುರುಷರಿಗೆ ಮೀಸಲಿರಿಸಲಾಗುವುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ20 hours ago

ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2023-24 ನೇ ಸಾಲಿನ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‍ಲೈನ್ (ರಾಜ್ಯ...

ದಿನದ ಸುದ್ದಿ20 hours ago

ಜಗಳೂರು | ಸಿಡಿಲು ಬಡಿದು ಇಬ್ಬರು ರೈತರು ಸಾವು

ಸುದ್ದಿದಿನ, ದಾವಣಗೆರೆ : ಸಿಡಿಲು ಬಡಿದು, ಇಬ್ಬರು ರೈತರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅಣಬೂರು ಗೊಲ್ಲರಹಟ್ಟಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಜಮೀನಿನಲ್ಲಿ ಕೆಲಸ...

ದಿನದ ಸುದ್ದಿ1 day ago

ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ; ನಾಡಿದ್ದು ವಿಧ್ಯುಕ್ತ ಚಾಲನೆ

ಸುದ್ದಿದಿನ, ಬೆಂಗಳೂರು : ಸರ್ಕಾರದ ಗ್ಯಾರಂಟಿ ಘೋಷಣೆಗಳಲ್ಲೊಂದಾದ ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿದ್ದು ವಿಧ್ಯುಕ್ತ...

ದಿನದ ಸುದ್ದಿ1 day ago

ಗೃಹಲಕ್ಷ್ಮಿ ಯೋಜನೆಗೆ 1 ಕೋಟಿಗೂ ಹೆಚ್ಚು ಅರ್ಜಿಗಳ ನಿರೀಕ್ಷೆ : ಸಚಿವ ಕೃಷ್ಣ ಬೈರೇಗೌಡ

ಸುದ್ದಿದಿನ, ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯಡಿ 1 ಕೋಟಿ 30 ಲಕ್ಷ ಅರ್ಜಿಗಳು ಬರುವ ನಿರೀಕ್ಷೆ ಇದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ...

ದಿನದ ಸುದ್ದಿ2 days ago

ಶಿಷ್ಯವೇತನಕ್ಕೆ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ...

ದಿನದ ಸುದ್ದಿ2 days ago

ಗೃಹಜ್ಯೋತಿ ಆಗಸ್ಟ್ 1 ರಂದು ಜಾರಿಗೆ ಸಿದ್ಧತೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ’ಗೃಹಜ್ಯೋತಿ’ ಯೋಜನೆ ಆಗಸ್ಟ್ 1 ರಂದು ಹಾಗೂ ಮನೆ ಯಜಮಾನಿಗೆ 2ಸಾವಿರ ರೂಪಾಯಿ ಅವರ ಖಾತೆಗೆ...

ದಿನದ ಸುದ್ದಿ3 days ago

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ...

ದಿನದ ಸುದ್ದಿ3 days ago

ಕನ್ನಡ ಸಾಹಿತ್ಯ ಪರಿಷತ್ | ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟ

ಸುದ್ದಿದಿನ, ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟವಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ...

ದಿನದ ಸುದ್ದಿ3 days ago

ಮುಂಗಾರು ಹಂಗಾಮಿನ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತ ಸಚಿವ...

ದಿನದ ಸುದ್ದಿ3 days ago

ವಿದ್ಯುತ್ ಬಳಕೆ ಶುಲ್ಕ ಹೆಚ್ಚಳವನ್ನು ಮುಂದೂಡಲು ಒತ್ತಾಯ

ಸುದ್ದಿದಿನ ಡೆಸ್ಕ್ : ಆರ್ಥಿಕತೆಯಲ್ಲಿ ಸಾಮಾನ್ಯ ಸ್ಥಿತಿ ಮರಳುವವರೆಗೆ ವಿದ್ಯುತ್ ಬಳಕೆ ಶುಲ್ಕ ಹೆಚ್ಚಳವನ್ನು ಮುಂದೂಡುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಸರ್ಕಾರವನ್ನು ಒತ್ತಾಯಿಸಿದೆ. ಪ್ರಸ್ತುತ...

Trending