ದಿನದ ಸುದ್ದಿ
ಭದ್ರಾವತಿಯ ಅರೆಕೆರೆಯಲ್ಲಿ ಇಂದು ಸಂಜೆ ಮೇಳೈಸಲಿದೆ ತರಳಬಾಳು ಜಾನಪದ ಸಿರಿ 2018 ರ ಸಾಂಸ್ಕೃತಿಕ ಸಂಜೆ
ಸುದ್ದಿದಿನ ಡೆಸ್ಕ್ : ಬಹು ನಿರೀಕ್ಷೆಯ ಹೊಸ ಆಯಾಮದೊಂದಿಗೆ, ಮತ್ತೊಷ್ಟು ಬದಲಾವಣೆಗಳನ್ನು ಮೈ ತುಂಬಿಕೊಂಡು,ಸಾಂಸ್ಕೃತಿಕ ಕನ್ನಿಕೆಯ ಕುವರಿಯಂತಿರುವ “ತರಳಬಾಳು ಜಾನಪದ ಸಿರಿಸಂಭ್ರಮ” 350 ಮಕ್ಕಳು ಸಂಭ್ರಮ ಮತ್ತು ಅಪರಿಮಿತ ಉತ್ಸಾಹದಿ ಜಾನಪದ ಲೋಕಕ್ಕೆ ಸರ್ವರನ್ನು ಕರೆದೊಯ್ಯಲು ಸಜ್ಜಾಗಿದ್ದಾರೆ. ಕಳೆದ ವರ್ಷದ ಅಭೂತಪೂರ್ವಯಶಸ್ಸಿನ ಮಜಲು ಏರಿ ರಾಜ್ಯ, ಹೊರ ರಾಜ್ಯಗಳ ಎಲ್ಲಾ ಪ್ರತಿಷ್ಠಿತ ವೇದಿಕೆಗಳಲ್ಲಿ ಸಂಭ್ರಮದ ಸ್ಮರಣೀಯ ಸ್ವರ್ಗ ಸೃಷ್ಟಿಸಿ ಎಲ್ಲರ ಜನಮಾನಸದಿ ಮೆಚ್ಚುಗೆ ಗಳಿಸಿದ ಜಾನಪದ ಸಿರಿ ಸಂಭ್ರಮ ಈ ವರ್ಷದ ಪ್ರದರ್ಶನ ನೀಡಲು ಸನ್ನದ್ದವಾಗಿದೆ.
ಹಲವಾರು ಪ್ರದರ್ಶನಗಳ ಸಾರ್ಥಕ ಅಭಿನಯದ ಮೂಲಕ ಜನ ಮನ್ನಣೆಗಳಿಸಿರುವ ಸಿರಿ ಸಂಭ್ರಮದ ಮುಖ್ಯ ಉದ್ದೇಶವೇ ಆಧುನಿಕತೆಯ ಭರಾಟೆಯ ನಾಗಲೋಟದ ಈ ಕಾಲದಲ್ಲಿ ನಮ್ಮ ಪೂರ್ವಜರ ಸೃಷ್ಟಿ ಮತ್ತು ಸಂಸ್ಕೃತಿಯ ಸೃಜನಶೀಲ ಸಾಂಸ್ಕೃತಿಕ ಜಾನಪದೀಯ ಕಲಾ ಪ್ರಕಾರಗಳು ನಶಿಸಿ ಹೋಗುತ್ತಾ ಇತಿಹಾಸದ ಗರ್ಭಕ್ಕೆ ದಾಖಲಾಗುವ ಅಪಾಯಕಾರಿ ಬೆಳವಣಿಗೆಯನ್ನು ತಡೆಯುವ ಸಾಂಸ್ಕೃತಿಕ ಕೈಂಕರ್ಯವಾಗಿದೆ.
ಜತನಿಂದ ಜೊತೆಗಿದ್ದ ಕಲಾ ಸೊಬಗನ್ನು ನಮ್ಮ ಯುವ ಜನಾಂಗಕ್ಕೆ ಪರಿಚಯಿಸುವ ಮೂಲಕ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ಹಂಚುವ ಆಶಯದಿ ಬೀಜಾಂಕುರವಾಗಿದ್ದೇ ” ತರಳಬಾಳು ಜಾನಪದ ಸಿರಿ ಸಂಭ್ರಮ “. ಕಳೆದ 6 ದಶಕಗಳಿಂದಲೂ ಶರಣ ಸಾಹಿತ್ಯ, ವಚನ ಪ್ರಸಾರ, ನಾಟಕಗಳ ರಚನೆ ಪ್ರದರ್ಶನ, ವೀರಗಾಸೆ ಸ್ಪರ್ಧೆ, ಭಜನೆ ಮೇಳಾ,ಸೋಬಾನೆ ಪದ ಸ್ಪರ್ಧೆ ಹೀಗೆ ಸಾವಿರಾರು ಕಾರ್ಯಕ್ರಮಗಳ ಮೂಲಕ ದೇಶದಾದ್ಯಂತ ಕನ್ನಡ ನಾಡಿನ ಸಾಂಸ್ಕೃತಿಕ ಸೊಬಗನ್ನು ದೇಶದಾದ್ಯಂತ ಪ್ರದರ್ಶಸಿ ಅರ್ಥಪೂರ್ಣ ಶರಣ ಸಂದೇಶ ಸಾರಿದ ಹಿರಿಮೆಯ ಹೆಗ್ಗಳಿಕೆ ತರಳಬಾಳು ಕಲಾಸಂಘಕ್ಕಿದೆ.
ಪರಮ ಪೂಜನೀಯ ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ಸಾಂಸ್ಕೃತಿಕ ಸಂಕಲ್ಪದ ಆಶಯ ಮತ್ತು ದಿವ್ಯ ಮಾರ್ಗದರ್ಶನದಂತೆ ನವ ಮನ್ವಂತರದ ಹೊಸತನವೆಂಬಂತೆ ತರಳಬಾಳು ಕಲಾಸಂಘ ಕಳೆದ ವರ್ಷದಿಂದ ಜಾನಪದ ಸಿರಿ ಸಂಭ್ರಮದ ಹೆಸರಲ್ಲಿ ಸಂಸ್ಕೃತಿಯ ರಾಯಭಾರಿಯ ಸ್ಥಾನವನ್ನು ತುಂಬಲು ಯಶಸ್ವಿಯಾಗಿ ದಾಟಿ ಎರಡನೇ ವರ್ಷದಲ್ಲೂ ಈಗಾಗಲೇ ಹತ್ತಾರು ಪ್ರದರ್ಶನ ನೀಡಿರುವ ತಂಡ ಇಂದು ದಿನಾಂಕ ಸಂಜೆ ಉಕ್ಕಿನ ನಗರಿ ಭದ್ರವಾತಿ ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿನ ಶ್ರೀ ಅರೆಕಲ್ಲಮ್ಮ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಂಜೆ 6.00ಗಂಟೆಗೆ ಜರುಗಲಿದೆ. ಜಾನಪದ ಕಲಾ ಪ್ರಕಾರಗಳ ಮೂಲಕ ಸ್ವರ್ಗ ಸೃಷ್ಟಿಸುವ ನಮ್ಮ 350 ಮಕ್ಕಳ ಶ್ರಮದ ಸಾಕ್ಷಾತ್ಕಾರವು 25 ನೃತ್ಯ ವೈವಿಧ್ಯಗಳಲ್ಲಿ ಅವಿರ್ಭವಿಸಲಿದೆ. ಅಪರೂಪದ ಈ ಸಾಂಸ್ಕೃತಿಕ ಸಂಜೆಗೆ ನಿವೆಲ್ಲಾ ಸಾಕ್ಷಿಯಾಗಬೇಕೆಂಬ ಅಪೇಕ್ಷೆ ನಮ್ಮದು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಉತ್ತಮ ಕೈಗಾರಿಕಾ ನೀತಿ ಜಾರಿ ; ರಾಜ್ಯದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿ : ಬಿ.ಎಸ್.ಯಡಿಯೂರಪ್ಪ

ಸುದ್ದಿದಿನ,ಬಾಗಲಕೋಟೆ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಾತನಾಡಿ, ಕರ್ನಾಟಕ ಉದ್ಯಮ ಸ್ನೇಹಿ ರಾಜ್ಯವಾಗಿದ್ದು, ಉತ್ತಮ ಕೈಗಾರಿಕಾ ನೀತಿ ಜಾರಿ ಮಾಡುವ ಮೂಲಕ ದೊಡ್ಡ ದೊಡ್ಡ ಪ್ರಮಾಣದ ಉದ್ಯಮಗಳನ್ನು ರಾಜ್ಯಕ್ಕೆ ತಂದು ಉದ್ಯೋಗ ಸೃಷ್ಟಿ ಮಾಡಲಾಗುತ್ತಿದೆ.
ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮ ಬಳಿಯ ಸಾಯಿಪ್ರಿಯ ಶುಗರ್ಸ್ ಲಿ. ಯೂನಿಟ್ ಆವರಣದಲ್ಲಿ ಎಂ.ಆರ್.ಎನ್. (ನಿರಾಣಿ) ಉದ್ಯಮ ಸಮೂಹ ಸಂಸ್ಥೆ ವತಿಯಿಂದ ಭಾನುವಾರದಂದು ಏರ್ಪಡಿಸಿದ ಸಮಾರಂಭದಲ್ಲಿ ನೂತನ ಕಾರ್ಖಾನೆ ಗಳ ಉದ್ಘಾಟನೆ, ನಿರಾಣಿ ಸಮೂಹ ದಿಂದ 75 ಸಾವಿರ ಟಿಸಿಡಿ ಕಬ್ಬು ನುರಿಸುವ, 260 ಮೆ.ವ್ಯಾ. ಸಹ ವಿದ್ಯುತ್, 26 ಲಕ್ಷ ಲೀ. ಇಥೆನಾಲ್ ಪ್ರತಿದಿನ ಬಯೋ ಸಿ.ಎನ್.ಜಿ. ಮತ್ತು ಸಿಒ2 ಉತ್ಪಾದನೆ ಗಳ ವಿಸ್ತರಣೆ ಯೋಜನೆಗಳಿಗೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ವರುಣ ದೇವರ ಕೃಪೆಯಿಂದ ಉತ್ತಮ ಮಳೆಯಾಗಿ ಹಳ್ಳ ಕೊಳ್ಳಗಳು ಭರ್ತಿಯಾಗಿವೆ. ಮುಂಬರುವ 2 ವರ್ಷ ಕಬ್ಬು ಬೆಳೆಗಾರರರಿಗೆ ನೀರಿನ ತೊಂದರೆ ಆಗಲಿಕ್ಕಿಲ್ಲ ಎಂದರು. ಮುಂಬರುವ ದಿನಗಳಲ್ಲಿ ರಾಜ್ಯದಾದ್ಯಂತ ರೈತರು ನೆಮ್ಮದಿಯ ಜೀವನ ನಡೆಸಲು ಶ್ರಮಿಸುವೆ. ಕೊರೊನಾ ಸಂದರ್ಭದಲ್ಲಿ ರಾಜ್ಯ ಸಾಕಷ್ಟು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿತ್ತು, ಆದರೂ ರಾಜ್ಯದ ಅಭಿವೃದ್ಧಿಗಾಗಿ ಶಕ್ತಿ ಮೀರಿ ಪ್ರಯತ್ನ ಮಾಡಿದ್ದೇವೆ ಎಂದರು.
ಮುರುಗೇಶ್ ನಿರಾಣಿಯವರು ಸಕ್ಕರೆ ಕಾರ್ಖಾನೆ ಆರಂಭಿಸಿ, 10 ಸಾವಿರಕ್ಕೂ ಅಧಿಕ ಜನರಿಗೆ ಉದ್ಯೋಗ ಸೃಷ್ಟಿ ಮಾಡಿದ್ದಾರೆ. ಕಬ್ಬಿನ ರಸದಿಂದ ಇಥೆನಾಲ್ ತಯಾರಿಸಿ ಪರಿಸರ ಸಂರಕ್ಷಣೆ ಮಾಡುತ್ತಿದ್ದಾರೆ. ದೇವರು ಅವರಿಗೆ ಇನ್ನಷ್ಟು ಉದ್ಯೋಗ ಸೃಷ್ಟಿಸುವ ಶಕ್ತಿ ನೀಡಲಿ.
ದೇಶಕ್ಕೆ ವಲ್ಲಬಾಯಿ ಪಟೇಲ್ ನಂತರ ಅಮಿತ ಶಾ ಅವರು ಉತ್ತಮ ಗೃಹ ಸಚಿವರಾಗಿ ಅನೇಕ ಕಾರ್ಯಗಳನ್ನು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಳಪಡಿಸಲಾಗುವುದು ಎಂದು ಅವರಿಗೆ ಈ ವೇದಿಕೆಯ ಮೂಲಕ ಭರವಸೆ ನೀಡುವೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕಿಸಾನ್ ಸಮ್ಮಾನ್ನಡಿ 9 ಕೋಟಿ ರೈತರಿಗೆ 1.34 ಲಕ್ಷ ಕೋಟಿ ರೂ. ಸಹಾಯಧನ : ಅಮಿತ್ ಶಾ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ಸಮರ್ಪಿತಗೊಂಡ ಸರ್ಕಾರ
ಸುದ್ದಿದಿನ,ಬಾಗಲಕೋಟೆ: ಹಿಂದಿನ ಸರ್ಕಾರಗಳು ಕೇವಲ 21 ಸಾವಿರ ಕೋಟಿ ರೂ. ನೀಡಲಾಗುತ್ತಿದ್ದ ಕೃಷಿ ಬಜೆಟ್ ಅನ್ನು ನಮ್ಮ ಸರ್ಕಾರ 2020 ರಲ್ಲಿ 1.34 ಲಕ್ಷ ಕೋಟಿ ರೂ. ಗಳಿಗೆ ಹೆಚ್ಚಿಸಿದ್ದಲ್ಲದೆ, ಕಿಸಾನ್ ಸಮ್ಮಾನ್ ಯೋಜನೆ ಮೂಲಕ 9 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 1.13 ಲಕ್ಷ ಕೋಟಿ ರೂ. ಗಳನ್ನು ಜಮಾ ಮಾಡುವ ಮೂಲಕ ರೈತರಿಗೆ ಪ್ರಥಮ ಆದ್ಯತೆ ನೀಡುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ಸಮರ್ಪಿತಗೊಂಡಿರುವ ಸರ್ಕಾರವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಹ ಅವರು ಹೇಳಿದರು.
ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮ ಬಳಿಯ ಸಾಯಿಪ್ರಿಯ ಶುಗರ್ಸ್ ಲಿ. ಯೂನಿಟ್ ಆವರಣದಲ್ಲಿ ಎಂ.ಆರ್.ಎನ್. (ನಿರಾಣಿ) ಉದ್ಯಮ ಸಮೂಹ ಸಂಸ್ಥೆ ವತಿಯಿಂದ ಭಾನುವಾರದಂದು ಏರ್ಪಡಿಸಿದ ಸಮಾರಂಭದಲ್ಲಿ ನೂತನ ಕಾರ್ಖಾನೆ ಗಳ ಉದ್ಘಾಟನೆ, ನಿರಾಣಿ ಸಮೂಹ ದಿಂದ 75 ಸಾವಿರ ಟಿಸಿಡಿ ಕಬ್ಬು ನುರಿಸುವ, 260 ಮೆ.ವ್ಯಾ. ಸಹ ವಿದ್ಯುತ್, 26 ಲಕ್ಷ ಲೀ. ಇಥೆನಾಲ್ ಪ್ರತಿದಿನ ಬಯೋ ಸಿ.ಎನ್.ಜಿ. & ಸಿಒ2 ಉತ್ಪಾದನೆ ಗಳ ವಿಸ್ತರಣೆ ಯೋಜನೆಗಳಿಗೆ ಭೂಮಿಪೂಜೆ ಹಾಗೂ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿರುವುದು ಮಾತ್ರವಲ್ಲ, ಇಡೀ ವಿಶ್ವದ ನೇತೃತ್ವ ವಹಿಸುವ ದಿಸೆಯತ್ತ ಸಾಗುತ್ತಿದ್ದಾರೆ. ಇದರಲ್ಲಿ ಕರ್ನಾಟಕ ರಾಜ್ಯದ ಕೊಡುಗೆ ಮಹತ್ವದ್ದಾಗಿದೆ. ದೇಶದಲ್ಲಿ ಜರುಗುತ್ತಿರುವ ಎಲ್ಲ ಹಂತಗಳ ಚುನಾವಣೆಗಳಲ್ಲಿ ದೇಶದ ಜನತೆ ನಮಗೆ ಬೆಂಬಲ ವ್ಯಕ್ತಪಡಿಸುತ್ತ ನಮ್ಮ ಸರ್ಕಾರವನ್ನು ಬಲಪಡಿಸುತ್ತಿದ್ದಾರೆ.
ದೇಶವನ್ನು ನಮ್ಮ ಸರ್ಕಾರ ಆತ್ಮನಿರ್ಭರಗೊಳಿಸುವತ್ತ ಸಾಗಿದೆ. ದೇಶದಲ್ಲಿ ಪೆಟ್ರೋಲ್ ಆಮದಿಗಾಗಿ ಸರ್ಕಾರದ ಬಹಳಷ್ಟು ಆದಾಯ ವಿದೇಶಿ ವಿನಿಮಯಕ್ಕೆ ಖರ್ಚಾಗುತ್ತಿದೆ. ಕಬ್ಬು ಬೆಳೆಯ ಸಹ ಉತ್ಪನ್ನವಾಗಿರುವ ಇಥೆನಾಲ್ ಇದೀಗ ದೇಶದ ಇಂಧನ ಕ್ಷೇತ್ರದಲ್ಲಿ ಪೆಟ್ರೋಲ್ಗೆ ಪರ್ಯಾಯ ಇಂಧನವಾಗಿ ಬಳಸಲಾಗುತ್ತಿದ್ದು, ದೇಶದ ಅಗತ್ಯತೆಯನ್ನು ಪೂರೈಸಲು ಸಹಕಾರಿಯಾಗಿದೆ ಎಂದರು.
ಇಥೆನಾಲ್ ಉತ್ಪಾದನೆ ಹಾಗೂ ಬಳಕೆ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿಗಳು ಉತ್ತೇಜನ ನೀಡುತ್ತಿದ್ದಾರೆ. ಸಕ್ಕರೆ ಉತ್ಪಾದನೆಯ ಜೊತೆ ಜೊತೆಗೆ ಇಥೆನಾಲ್ ಉತ್ಪಾದನೆಗೆ ಅವಕಾಶವಿದ್ದು, ಇದರಿಂದ ರೈತರಿಗೂ ಅನುಕೂಲವಾಗಲಿದೆ ಅಲ್ಲದೆ ಸಕ್ಕರೆ ಕಾರ್ಖಾನೆಗಳಿಗೂ ಲಾಭದಾಯಕವಾಗಲಿದೆ. ಇಥೆನಾಲ್ ಹೆಚ್ಚಿನ ಉತ್ಪಾದನೆ ಹಾಗೂ ಬಳಕೆಯಿಂದ ಇಂಧನ ಕ್ಷೇತ್ರದಲ್ಲಿ ವಿದೇಶಗಳ ಮೇಲಿನ ಅವಲಂಬನೆ ಕಡಿಮೆಯಾಗಲಿದ್ದು, ಆರ್ಥಿಕವಾಗಿಯೂ ದೇಶಕ್ಕೆ ವಿದೇಶಿ ವಿನಿಮಯದಲ್ಲಿ ಉಳಿಕೆಯಾಗಲಿದೆ.
ನಿರಾಣಿ ಸಮೂಹದ ಉದ್ಯಮವು ಇದೀಗ ತನ್ನ ಕಾರ್ಖಾನೆ ಘಟಕವನ್ನು ವಿಸ್ತರಿಸುತ್ತಿರುವುದರಿಂದ ಸುಮಾರು 10 ಸಾವಿರ ಉದ್ಯೋಗ ಸೃಷ್ಟಿಸಿದಂತಾಗಿದೆ. 2015 ರಲ್ಲಿ ಇಥೆನಾಲ್ ಉತ್ಪಾದನೆಗೆ ಸುಂಕ ಕಡಿತಗೊಳಿಸಲಾಗಿದೆ. ಇಥೆನಾಲ್ಗೆ ಶೇ. 18 ರಷ್ಟು ಇದ್ದ ಜಿಎಸ್ಟಿ ಯನ್ನು ಇದೀಗ ಶೇ. 5 ಕ್ಕೆ ಇಳಿಸಲಾಗಿದೆ ಎಂದು ತಿಳಿಸಿದರು.
ಪೆಟ್ರೋಲ್ ಹಾಗೂ ಡೀಸೆಲ್ ಬಳಕೆಯನ್ನು 2022 ರೊಳಗೆ ಶೇ. 10 ರಷ್ಟು ಹಾಗೂ 2025 ರ ವೇಳೆಗೆ ಶೇ. 25 ರಷ್ಟು ಕಡಿತಗೊಳಿಸಲಾಗುವುದು. ಇಂಧನಕ್ಕಾಗಿ ಗಲ್ಫ್ ರಾಷ್ಟ್ರಗಳಿಗೆ ನಮ್ಮ ದೇಶದಿಂದ ಹೆಚ್ಚಿನ ಹಣ ಬಳಕೆಯಾಗುತ್ತಿದ್ದು, ಇದೀಗ ಪ್ರಮಾಣ ಕಡಿತದಿಂದ ಉಳಿಯುವ ಹಣವನ್ನು ನಾವು ರೈತರ ಅಭಿವೃದ್ಧಿಗಾಗಿ ಬಳಸಿಕೊಳ್ಳಲು ಸಹಾಯಕವಾಗಿದೆ.
ಭಾರತೀಯ ಆಹಾರ ನಿಗಮದದಲ್ಲಿ ಲಭ್ಯವಾಗುವ ಮೆಕ್ಕೆಜೋಳ, ಅಕ್ಕಿ ಧಾನ್ಯವನ್ನು ಇಥೆನಾಲ್ ಉತ್ಪಾದನೆಗೆ ಬಳಸಿಕೊಳ್ಳಲು ನೀತಿಯೊಳಗೆ ಸೇರಿಸಿಕೊಳ್ಳಲಾಗಿದೆ. ಈ ನೂತನ ನೀತಿಯಿಂದಾಗಿ ರೈತರಿಗೂ ಅನುಕೂಲವಾಗಲಿದೆ. ರೈತರಿಗೆ ಆರ್ಥಿಕ ಲಾಭದ ಜೊತೆಗೆ ಉದ್ಯೋಗ ಸೃಷ್ಟಿಗೂ ಅನುಕೂಲವಾಗಲಿದೆ. ಇಥೆನಾಲ್ ಪರಿಸರ ಸ್ನೇಹಿಯಾಗಿದೆ.
ನಮ್ಮ ಸರ್ಕಾರ ಪ್ರಾಥಮಿಕ ಆದ್ಯತೆಯನ್ನು ರೈತರಿಗೆ ನೀಡುತ್ತಿದ್ದು, ಆದಾಯ ದ್ವಿಗುಣಗೊಳಿಸುವತ್ತ ಕ್ರಮ ಕೈಗೊಂಡಿದೆ. 2013-14 ರಲ್ಲಿ 21 ಸಾವಿರ ಕೋಟಿ ರೂ. ಇದ್ದ ಕೃಷಿ ಬಜೆಟ್ ಅನ್ನು ನಮ್ಮ ಸರ್ಕಾರ 2020 ರ ಬಜೆಟ್ನಲ್ಲಿ 1.34 ಲಕ್ಷ ಕೋಟಿ ರೂ. ಗಳನ್ನು ಕೃಷಿ ಕ್ಷೇತ್ರಕ್ಕಾಗಿ ಮೀಸಲಿಡುವ ಮೂಲಕ ರೈತ ಪರ ಸರ್ಕಾರ ಎಂಬುದನ್ನು ನಿರೂಪಿಸಿದೆ ಎಂದರು.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನಮ್ಮ ಸರ್ಕಾರ ರೈತರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 6 ಸಾವಿರ ರೂ. ಗಳನ್ನು ಜಮಾ ಮಾಡುತ್ತಿದೆ. ಡಿಸೆಂಬರ್ ವರೆಗೆ ಸುಮಾರು 9 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗೆ 1.13 ಲಕ್ಷ ಕೋಟಿ ರೂ.ಗಳನ್ನು ಜಮಾ ಮಾಡಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ 50 ಲಕ್ಷ ಹೆ. ಭೂಮಿಗೆ ಸೂಕ್ಷ್ಮ ನೀರಾವರಿ ಸೌಲಭ್ಯ ಕಲ್ಪಿಸಿದೆ.
ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ 5 ವರ್ಷ ಪೂರ್ಣಗೊಳಿಸಿದ್ದು, 90 ಸಾವಿರ ಕೋಟಿ ರೂ. ಈ ವಿಮೆ ಯೋಜನೆಯಡಿ ರೈತರಿಗೆ ಪಾವತಿಯಾಗಿದೆ. ಎಪಿಎಂಸಿ ಗಳಲ್ಲಿ ಆನ್ಲೈನ್ ವ್ಯವಹಾರ ಒದಗಿಸುವ ಮೂಲಕ ರೈತರಿಗೆ ಲಾಭದಾಯಕವಾಗುವಂತೆ ಮಾಡಲಾಗಿದೆ. ಹಿಂದಿನ ಸರ್ಕಾರ 6 ಲಕ್ಷ ಕೋಟಿ ರೂ. ರೈತರಿಗೆ ಸಾಲ ನೀಡುತ್ತಿತ್ತು. ನಮ್ಮ ಸರ್ಕಾರ 13.22 ಲಕ್ಷ ಕೋಟಿ ರೂ. ಗಳನ್ನು ರೈತರಿಗೆ ಸಾಲ ನೀಡುವ ಮೂಲಕ ನೆರವಾಗಿದೆ. 10 ಸಾವಿರಕ್ಕೂ ಹೆಚ್ಚು ರೈತ ಉತ್ಪಾದಕ ಸಂಘಗಳನ್ನು ಸ್ಥಾಪಿಸಲಾಗಿದ್ದು, 7 ಸಾವಿರ ಕೋಟಿ ರೂ. ಗಳನ್ನು ಸರ್ಕಾರ ಇದಕ್ಕಾಗಿ ನೀಡಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ 1.6 ಕೋಟಿ ರೈತರಿಗೆ ನೀಡಲಾಗಿದೆ ಎಂದರು.
ಕರ್ನಾಟಕ ರಾಜ್ಯ ಸರ್ಕಾರ ರೈತರ ಪರವಾಗಿದ್ದು, ರೈತ ಪರವಾದ ಕೇಂದ್ರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ಸಮರ್ಪಿತವಾಗಿರುವ ಸರ್ಕಾರ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಕರ್ನಾಟಕ ಸರ್ಕಾರ ರೈತರ ಆದಾಯ ದ್ವಿಗುಣಗೊಳಿಸುವ ಕಾರ್ಯಕ್ಕೆ ಮುಂದಾಗಿದೆ. ರೈತರು ಇದೀಗ ತಮ್ಮ ಬೆಳೆಯನ್ನು ಹೆಚ್ಚು ಲಾಭದಾಯಕವಾಗುವ ರೀತಿಯಲ್ಲಿ ಯಾವುದೇ ಅಡ್ಡಿಯಿಲ್ಲದೆ ಮಾರಾಟ ಮಾಡುವಂತಾಗಿದೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಆತ್ಮನಿರ್ಭರ ಭಾರತ ನಿರ್ಮಾಣ ಮಾಡುವಲ್ಲಿ ದಿಟ್ಟ ಹೆಜ್ಜೆಯನ್ನಿಟ್ಟಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಹ ಅವರು ಹೇಳಿದರು.
ನೂತನ ಸಚಿವರು ಹಾಗೂ ಎಂ.ಆರ್.ಎನ್. (ನಿರಾಣಿ) ಉದ್ಯಮ ಸಮೂಹ ಸಂಸ್ಥೆಯ ಮುಖ್ಯಸ್ಥರಾದ ಮುರುಗೇಶ್ ನಿರಾಣಿಯವರು ಸ್ವಾಗತಿಸಿ, ನಮ್ಮದು ಕೃಷಿ ಪ್ರಧಾನ ದೇಶವಾಗಿದ್ದು, ನಮ್ಮ ಸಮೂಹ ಸಂಸ್ಥೆಗಳು ಕೃಷಿ ಹಾಗೂ ಉದ್ಯಮ ಕ್ಷೇತ್ರದಲ್ಲಿ ಸುಮಾರು 75 ಸಾವಿರ ಕುಟುಂಬಗಳಿಗೆ ಉದ್ಯೋಗ ನೀಡಿದೆ. ಇಥೆನಾಲ್ ಉತ್ಪಾದಿಸುವ ಮೂಲಕ ನಮ್ಮ ಸಂಸ್ಥೆ ಪ್ರಧಾನಮಂತ್ರಿಗಳು ಜಾರಿಗೊಳಿಸಿದ ಆತ್ಮನಿರ್ಭರ್ ಯೋಜನೆಯನ್ನು ಸಾಕಾರಗೊಳಿಸುವತ್ತ ಹೆಜ್ಜೆಯಿರಿಸಿದೆ ಎಂದರು.
ಉಪಮುಖ್ಯಮಂತ್ರಿಗಳು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ ಕಾರಜೋಳ, ನೂತನ ಸಚಿವರಾದ ಮುರುಗೇಶ್ ನಿರಾಣಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ,ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಚಿವರಾದ ಆರ್. ಶಂಕರ್, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ್, ವಿಜಯಪುರ ಸಂಸದ ಪರಮೇಶ ಜಿಗಜಿಣಗಿ.
ಕೊಪ್ಪಳ ಸಂಸದ ಸಂಗಣ್ಣ ಕರಡಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಶಶಿಕಲಾ ಜೊಲ್ಲೆ, ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ, ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಮುದ್ದೇಬಿಹಾಳ ಶಾಸಕ ಎ.ಎಸ್. ಪಾಟೀಲ್, ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಸಂಸದ ಸಂಜಯ್ ಪಾಟೀಲ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕೆಎಸ್ಓಯು ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾದೊಂದಿಗೆ ಒಪ್ಪಂದ

ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮತ್ತು ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ ಇವರ ನಡುವೆ ಪರಸ್ಪರ ತಿಳುವಳಿಕೆ ಪತ್ರಕ್ಕೆ ಒಪ್ಪಂದ ಇಂದು ಮಾಡಿಕೊಳ್ಳಲಾಯಿತು.
ಕ.ರಾ,ಮು.ವಿ. ದಾವಣಗೆರೆ ಪ್ರಾದೇಶಿಕ ಕೇಂದ್ರದಲ್ಲಿನ ಕಟ್ಟಡದಲ್ಲಿ 10,000 ಚದರಡಿ ವಿಸ್ತೀರ್ಣವನ್ನು ಈ ಉದ್ದೇಶಕ್ಕೆ ನೀಡಲಾಗಿದೆ. ಭಾರತ ಸರ್ಕಾರದ ಯೋಜನೆಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪಡೆದುಕೊಂಡಿದ್ದು, ಈ ಯೋಜನೆಯಡಿ ಐ.ಟಿ. ಉದ್ಯಮ, ಎಲೆಕ್ಟ್ರಾನಿಕ್ ಉದ್ಯಮಕ್ಕೆ ಪೂರಕವಾದ ಚಟುವಟಿಕೆಗಳನ್ನು ನಡೆಸುತ್ತಿದೆ.
ಭವಿಷ್ಯದಲ್ಲಿ ಕ.ರಾ.ಮು.ವಿ.ಯ ವಿದ್ಯಾರ್ಥಿ ಸಮೂಹಕ್ಕೆ ಮಾಹಿತಿ ತಂತ್ರಜ್ಞಾನ ವಿಷಯದಲ್ಲಿ ಹೆಚ್ಚಿನ ಬೆಂಬಲ ಹಾಗೂ ಸೇವೆ ದೊರೆಯಲಿದೆ. ದಾವಣಗೆರೆ ಪ್ರಾದೇಶಿಕ ಕೇಂದ್ರವನ್ನು ಈ ಉದ್ದೇಶಕ್ಕಾಗಿ ವಿಶ್ವವಿದ್ಯಾನಿಲಯವು ಒದಗಿಸಿದೆ. ವಿಶ್ವವಿದ್ಯಾನಿಲಯದ ಕೋರ್ಸ್ಗಳು, ಕೈಗಾರಿಕಾ ಅಗತ್ಯತೆಗಳು ಹಾಗೂ ಉದ್ಯಮದ ಅವಶ್ಯಕತೆಗಳಿಗೆ ಅನುಕೂಲವಾಗುವಂತೆ ಪಠ್ಯಕ್ರಮ ರಚನೆಗೆ, ಸೌಲಭ್ಯಗಳು ಸೃಷ್ಟಿಯಾದಾಗ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಒಟ್ಟಾರೆಯಾಗಿ ನೆರವಾಗಲಿದೆ.
ರಾಷ್ಟ್ರೀಯ ಶಿಕ್ಷಣ ನೀತಿ 2020ರ ಆಶಯದಂತೆ ವಿಶ್ವವಿದ್ಯಾನಿಲಯವು ತನ್ನ ಕೋರ್ಸ್ಗಳ ಮುಖಾಂತರ ಕೈಗಾರಿಕೆ ಮತ್ತು ಉದ್ಯಮಗಳ ಜೊತೆ ಸಮೀಕರಿಸಿಕೊಳ್ಳಲು ಹಾಗೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ, ಅಧ್ಯಾಪಕವರ್ಗದವರಿಗೆ ಮತ್ತು ಸಿಬ್ಬಂದಿವರ್ಗದವರಿಗೆ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ, ಒಟ್ಟಾರೆ ಮಾಹಿತಿ ತಂತ್ರಜ್ಞಾನದ ಒತ್ತಾಸೆ ಪಡೆಯುವಲ್ಲಿ ಈ ಒಪ್ಪಂದ ನೆರವಾಗಲಿದೆ.
ವಿಶ್ವವಿದ್ಯಾನಿಲಯವು ತನ್ನ ಎಲ್ಲಾ ವಿದ್ಯಾರ್ಥಿಗಳ ಒಳಿತಿಗಾಗಿ ಹಾಗೂ ಭವಿಷ್ಯದ ದೃಷ್ಟಿಯಿಂದ ಈ ಒಪ್ಪಂದವನ್ನು ಮಾಡಿಕೊಂಡಿದೆ. ದಾವಣಗೆರೆ ಸಂಸದರಾದ ಜಿ.ಎಂ. ಸಿದ್ದೇಶ್ವರ್ರವರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಸ್. ವಿದ್ಯಾಶಂಕರ್ ಹಾಗೂ ಎಸ್.ಟಿ.ಪಿ.ಐ. ನಿರ್ದೇಶಕರಾದ ಶೈಲೇಂದ್ರಕುಮಾರ್ ತ್ಯಾಗಿ ಇವರುಗಳ ಒತ್ತಾಸೆಯೊಂದಿಗೆ ಕಾರ್ಯಕ್ರಮ ಜಾರಿಯಾಗುತ್ತಿದೆ. ಎಸ್.ಟಿ.ಪಿ.ಐ. ಸ್ಥಾಪಿಸುತ್ತಿರುವ ಈ ಕೇಂದ್ರ ಕರ್ನಾಟಕದ 5ನೇ ಕೇಂದ್ರವಾಗಿದೆ.
ಇಂದು ನಡೆದ ಈ ಒಡಬಂಡಿಕೆ ಕಾರ್ಯಕ್ರಮದಲ್ಲಿ ಕುಲಪತಿಗಳಾದ ಡಾ. ಎಸ್. ವಿದ್ಯಾಶಂಕರ್, ಹಣಕಾಸು ಅಧಿಕಾರಿ ಡಾ. ಖಾದರ್ಪಾಷ, ಡೀನ್ರಾದ (ಶೈಕ್ಷಣಿಕ) ಡಾ. ಕಾಂಬ್ಳೆ ಅಶೋಕ್ , ಪರೀಕ್ಷಾಂಗ ಕುಲಸಚಿವರಾದ ಡಾ. ಕವಿತಾ ರೈ, ಡೀನ್ (ಅಧ್ಯಯನ ಕೇಂದ್ರ) ರಾದ ಡಾ. ಷಣ್ಮುಖ, ಐ,ಟಿ. ಹಾಗೂ ಕಂಪ್ಯೂಟರ್ ವಿಭಾಗಗಳ ಮುಖ್ಯಸ್ಥರಾದ ಡಾ. ಬಿ.ಎಸ್. ರಶ್ಮಿ, ಡಾ. ಸುನಿತ, ಎಸ್.ಟಿ.ಪಿ.ಐ. ಅಧಿಕಾರಿಗಳಾದ ಜಯಪ್ರಕಾಶ್, ಕರಾಮುವಿಯ ಅಭಿಯಂತರ ಭಾಸ್ಕರ್ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ5 days ago
ಆಂದೋಲನ-ಈ ಜೀವ ಈ ಜೀವನ | ಅಂಗನವಾಡಿ ಕಾರ್ಯಕರ್ತೆಯ ಅಸಾಮಾನ್ಯ ಕರ್ತವ್ಯಪ್ರಜ್ಞೆ..!
-
ಲೈಫ್ ಸ್ಟೈಲ್5 days ago
ಏಳಿ ಎದ್ದೇಳಿ ಗುರಿಮುಟ್ಟುವ ತನಕ ನಿಲ್ಲದಿರಿ : ವಿವೇಕಾನಂದ
-
ದಿನದ ಸುದ್ದಿ4 days ago
“ನೀನು ಅಪ್ಪನಿಗೆ ಹುಟ್ಟಿದಿಯಾ ಅನ್ನೋದಕ್ಕೆ ಸಾಕ್ಷಿ ಏನು..?” : ಸಚಿವ ಈಶ್ವರಪ್ಪ
-
ದಿನದ ಸುದ್ದಿ4 days ago
ಸಚಿವ ಸಂಪುಟ ವಿಸ್ತರಣೆ : ಏಳು ಹೊಸ ಸಚಿವರ ಹೆಸರು ಫೈನಲ್ ಗೊಳಿಸಿದ ಯಡಿಯೂರಪ್ಪ
-
ಸಿನಿ ಸುದ್ದಿ5 days ago
ಬಾಂಬೆ ಹೀರೋಹಿನ್ ಗಳು ಕಡಿಮೆ ಸಂಭಾವನೆಗೆ ಕೆಲಸ ಮಾಡ್ತಾರೆ ಅಂದವರಿಗೆ ಹೀಗಂದ್ರು ನಟಿ ಕೃತ್ತಿಕಾ ರವೀಂದ್ರ..!
-
ದಿನದ ಸುದ್ದಿ5 days ago
ಹೊಸ ಚರಿತ್ರೆ ಬರೆಯಲಿರುವ ಜನವರಿ-26
-
ದಿನದ ಸುದ್ದಿ5 days ago
ಮೂರೂ ಕೃಷಿ ಕಾಯ್ದೆಗಳ ಜಾರಿಯನ್ನು ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್..!
-
ದಿನದ ಸುದ್ದಿ4 days ago
ರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್ ಮಷಿನ್ಗಳು..!