ದಿನದ ಸುದ್ದಿ
ಯಶಸ್ವಿಯಾಗದ 22 ಕೆರೆಗಳ ಏತ ನೀರಾವರಿಯ ಯೋಜನೆ : ತರಳಬಾಳು ಶ್ರೀ ಬೇಸರ
ಸುದ್ದಿದಿನ,ಹರಿಹರ : 22 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯು ಹಲವು ಲೋಪದೋಷಗಳಿಂದಾಗಿ ಪರಿಣಾಮಕಾರಿಯಾಗಿ ಯಶಸ್ವಿಯಾಗದೇ ಇರುವುದು ಅತ್ಯಂತ ಬೇಸರ ತಂದಿದೆ ಎಂದು ತರಳಬಾಳು ಜಗದ್ಗುರು ಡಾ .ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ವಿಷಾದ ವ್ಯಕ್ತ ಪಡಿಸಿದರು.
ಹರಿಹರ ನಗರದ ಹೊರವಲಯದಲ್ಲಿರುವ ಜಾಕ್ ವೆಲ್ ಬಳಿ ಯೋಜನೆಯ ಕಾಮಗಾರಿ ಪರಿಶೀಲಿಸಿ ಶ್ರೀಗಳು ಮಾತನಾಡಿದರು.ಪ್ರಾಕೃತಿಕ, ತಾಂತ್ರಿಕ ಹಾಗೂ ಮನುಷ್ಯರ ಸಮಸ್ಯೆಗಳು ಒಟ್ಟಾಗಿ ಸೇರಿಕೊಂಡು 22 ಕೆರೆಗಳ ಏತ ನೀರಾವರಿಯ ಯೋಜನೆ ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ ಎಂದು ಬೇಸರ ಹೊರಹಾಕಿದರು.
ನದಿಯಲ್ಲಿ ನೀರಿದ್ದರು ಜಾಕ್ ವೆಲ್ ಮೂಲಕ ನೀರು ಬರುತ್ತಿಲ್ಲ. ಕಳೆದ ಬಾರಿ ಮೂರು ಮೋಟರ್ ಅಳವಡಿಸಿದ್ದರಿಂದ ನೀರು ತಕ್ಕಮಟ್ಟಿಗೆ ನೀರು ಕೆರೆಗಳಿಗೆ ಹರಿದಿದೆ. ಆದರೆ ಇದು ಶಾಶ್ವತ ಪರಿಹಾರದ ಕೆಲಸ ಅಲ್ಲ.
ಶಾಶ್ವತ ಪರಿಹಾರ ದೊರಕಬೇಕಾದರೆ ಬೆಂಗಳೂರಿನ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳನ್ನು ಕರೆಸಿ ಪರಿಶೀಲನೆ ನಡೆಸುವ ಅಗತ್ಯವಿದೆ ಎಂದರು.
ತಾಂತ್ರಿಕ ತೊಂದರೆ ಸರಿಯಾದಗ ನದಿಯಲ್ಲಿ ನೀರಿನ ಕೊರತೆ ಕಂಡು ಬರುತ್ತದೆ.ಆದ್ದರಿಂದ ಈ ಸ್ಥಳದಲ್ಲಿ ಕೆರೆ ನಿರ್ಮಾಣ ಮಾಡಿದರೆ ಸ್ವತಂತ್ರವಾಗಿ ನೀರು ಎರಡನೇ ಜಾಕ್ ವೆಲ್ ನಲ್ಲಿ ಇರುವಂತಹ ಮೋಟರ್ ಸರಿಯಾಗಿ ಕೆಲಸ ಮಾಡುತ್ತದೆಯೋ , ಇಲ್ಲವೋ ಎಂದು ತಿಳಿಯುತ್ತದೆ. ಈ ಬಗ್ಗೆ ಅಧಿಕಾರಿಗಳ ಬಳಿ ಚರ್ಚಿಸಿದಾಗ ತಾಂತ್ರಿಕ ತೊಂದರೆ ಇದೆ ಎಂಬುದು ಗೊತ್ತಾಗಿದೆ ಎಂದರು. ಈ ಯೋಜನೆಗೆ ಮಾಯಕೊಂಡ ಶಾಸಕರಾದ ಪ್ರೋ.ಲಿಂಗಣ್ಣನವರು 1 ಕೋಟಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ್ ಗುಂಗೆಯವರು ಸುಮಾರು 4 ರಿಂದ 5 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡಬಹುದು. ಅದನ್ನು ಅವರೇ ಮಾಡಿಸಿಕೊಡುವುದಾಗಿ ತಿಳಿಸಿದ್ದಾರೆ ಎಂದು ಶ್ರೀಗಳು ಮಾಹಿತಿ ನೀಡಿದರು .
ಜಗಳೂರು ತಾಲ್ಲೂಕಿನ 53 ಹಾಗೂ ಭರಮಸಾಗರ ಸುತ್ತಮುತ್ತಲಿನ 41 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅಂದಿನ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು 500 ಕೋಟಿ ರೂಗಳನ್ನು ಬಿಡುಗಡೆ ಮಾಡಿದ್ದು, ತದ ನಂತರ ಈಗಿನ ಮುಖ್ಯಮಂತ್ರಿಗಳಾದ ಕುಮಾರ ಸ್ವಾಮಿಯವರು
ಸ್ಪಂದಿಸುವುದಾಗಿ ಹೇಳಿದ್ದಾರೆಂದರು.ಸಂಸದರಾದ ಜಿ.ಎಂ ಸಿದ್ದೇಶ್ವರ್ ಮಾತನಾಡಿ ಮಳೆಗಾಲದಲ್ಲಿ 120 ಟಿ ಎಂ ಸಿ ನೀರು
ತುಂಗಭದ್ರಾ ನದಿಯ ಮೂಲಕ ಸಮುದ್ರ ಪಾಲಾಗಿದೆ. ನಮ್ಮ ಈ ಏತ ನೀರಾವರಿ ಯೋಜನೆಗೆ ಬೇಕಾಗಿರುವುದು 1 ಟಿ ಎಂ ಸಿ ನೀರು ಮಾತ್ರ. ಸಾಕಷ್ಟು ನೀರು ಪೋಲಾಗಿರುವುದು ನೋವು ತಂದಿದೆ ಎಂದರು. ಶ್ರೀಗಳು ಏತ ನೀರಾವರಿ ಯೋಜನೆಯ ಅನುಷ್ಠಾನ ವಿಚಾರದಲ್ಲಿ ಅತ್ಯಂತ ಕಾಳಜಿ ಹೊಂದಿದ್ದಾರೆ. ಶ್ರೀಗಳ ಆಶಯದಂತೆ ಜಗಳೂರು ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 330 ಕೋಟಿ ಹಾಗೂ ಭರಮಸಾಗರ ಮತ್ತು ಚಿತ್ರದುರ್ಗ ಎಲ್ಲಾ ತಾಲೂಕುಗಳ ಕೆರೆ ತುಂಬಿಸುವ ಯೋಜನೆಗೆ 600 ಕೋಟಿ ರೂ ಅನುದಾನಕ್ಕೆ ಸರ್ಕಾರ ಅವಕಾಶ ಕಲ್ಪಿಸಿದೆ. ಇದಕ್ಕಾಗಿ ಸಮಗ್ರ ವರದಿ ತಯಾರಾಗಿದ್ದು ,ಶ್ರೀಗಳ ಸೂಚನೆಯ ಮೇರೆಗೆ ಈ ಯೋಜನೆಯಡಿ ಕೆಲವು ಸಣ್ಣ ಪುಟ್ಟ ಮಾರ್ಪಾಡುಗಳು ಆಗಬೇಕಿದೆ ಎಂದು ಹೇಳಿದರು.
ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ.ಜೆ ಮಲ್ಲಿಕಾರ್ಜುನ್ ಗುಂಗೆ ಮಾತನಾಡಿ ಈ ಯೋಜನೆಯಲ್ಲಿ ವೆಲ್ಡಿಂಗ್ ಮತ್ತು ವಿದ್ಯುತ್ ವ್ಯತ್ಯಯದಿಂದ
ಲೋಪದೋಷಗಳು ಹುಟ್ಟಿಕೊಂಡಿವೆ.ಇದಕ್ಕೆ ಸ್ಥಳದಲ್ಲಿ ಚೆಕ್ ಡ್ಯಾಮ್ ನಿರ್ಮಾಣ ಮಾಡಿ,ನೀರು ಸರಾಗವಾಗಿ ಜಾಕ್ ವೆಲ್ ಗೆ ಬಂದು ಸೇರುವಂತೆ ವ್ಯವಸ್ಥೆ ಮಾಡಲಾಗುವುದು ಎಂದರು.
ಇದಕ್ಕೆ ಬೇಕಾಗುವ 4 ರಿಂದ 5 ಕೋಟಿ ಹಣವನ್ನು ಬಳಕೆ ಮಾಡಲು ಯಾವುದೇ ತೊಂದರೆ ಬರುವುದಿಲ್ಲ.ಆದರೆ ಟೆಂಡರ್ ಹಂತ ಮಾತ್ರ ನಮ್ಮ ವ್ಯಾಪ್ತಿಗೆ ವ್ಯಾಪ್ತಿಗೆ ಬರುತ್ತದೆ.ಆದರೆ ಹಣ ಬಿಡುಗಡೆ ಮಾಡಲಿಕ್ಕೆ ಸಿ ಎಂ ಬಳಿ ಚರ್ಚೆ ಮಾಡಿ ಶೀಘ್ರವೇ ಕೆಲಸ ಮಾಡಿಸಿಕೊಡುವುದಾಗಾ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಎಸ್.ವಿ.ರಾಮಚಂದ್ರ ,ಪ್ರೊ.ಲಿಂಗಣ್ಣ, ಮುಖ್ಯ ಎಂಜಿನಿಯರ್ ಯತೀಶ್ ಚಂದ್ರನ್, ಅಧೀಕ್ಷಕ ಎಂಜಿನಿಯರ್ ದಿವಾಕರ್ ನಾಯಕ್,ಕಾರ್ಯಪಾಲಕ ಎಂಜಿನಿಯರ್ ಜಿ.ಆರ್ ಕೊಟ್ರೇಶ್ ,ಗಂಗಪ್ಪ,ವಿಕಾಸ್ ನಿಂಬಣ್ಣ,ನಾಗರಾಜಪ್ಪ ಕರೆ ನೀರಾವರಿ ಯೋಜನೆಯ ಅಧ್ಯಕ್ಷರಾದ ಡಾ.ಮಂಜುನಾಥ್ ಗೌಡ,ಸುಭಾಷ್ ಚಂದ್ರ ಮುಂತಾದವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.
ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ!! 1/2#ಜನರಿಗಿಲ್ಲ_ನೆಮ್ಮದಿಯ_ಗ್ಯಾರಂಟಿ pic.twitter.com/iu3tqqEYZ3
— Janata Dal Secular (@JanataDal_S) May 18, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್
ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.
ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಆತ್ಮಕತೆ | ಕೋರಿನ ತೋಟ ಮತ್ತು ನಮ್ಮೂರ ದೇವರ ಗುಡಿಯಲ್ಲಿ ಪಂಚಾಯ್ತಿ
-
ದಿನದ ಸುದ್ದಿ3 days ago
ವಿಧಾನಪರಿಷತ್ ಚುನಾವಣೆ ; ಇಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನ
-
ದಿನದ ಸುದ್ದಿ3 days ago
ಪೌರತ್ವ ಪ್ರಮಾಣಪತ್ರ ಹಸ್ತಾಂತರ
-
ದಿನದ ಸುದ್ದಿ1 day ago
ಸಂಗೀತಗಾರರ ಹುದ್ದೆಗಳಿಗೆ ನೇಮಕಾತಿ
-
ದಿನದ ಸುದ್ದಿ3 days ago
ದಾವಣಗೆರೆ | ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ
-
ದಿನದ ಸುದ್ದಿ2 days ago
ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ | ಎಸ್ಐಟಿ ಸೂಕ್ತ ತನಿಖೆ ನಡೆಸುತ್ತಿಲ್ಲ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ
-
ದಿನದ ಸುದ್ದಿ2 days ago
ಮೊರಾರ್ಜಿ ದೇಸಾಯಿ ವಿಜ್ಞಾನ ಕಾಲೇಜು ; ಪಿಯುಸಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿ ಪ್ರಾರಂಭ