ದಿನದ ಸುದ್ದಿ
ಯಶಸ್ವಿಯಾಗದ 22 ಕೆರೆಗಳ ಏತ ನೀರಾವರಿಯ ಯೋಜನೆ : ತರಳಬಾಳು ಶ್ರೀ ಬೇಸರ
ಸುದ್ದಿದಿನ,ಹರಿಹರ : 22 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯು ಹಲವು ಲೋಪದೋಷಗಳಿಂದಾಗಿ ಪರಿಣಾಮಕಾರಿಯಾಗಿ ಯಶಸ್ವಿಯಾಗದೇ ಇರುವುದು ಅತ್ಯಂತ ಬೇಸರ ತಂದಿದೆ ಎಂದು ತರಳಬಾಳು ಜಗದ್ಗುರು ಡಾ .ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ವಿಷಾದ ವ್ಯಕ್ತ ಪಡಿಸಿದರು.
ಹರಿಹರ ನಗರದ ಹೊರವಲಯದಲ್ಲಿರುವ ಜಾಕ್ ವೆಲ್ ಬಳಿ ಯೋಜನೆಯ ಕಾಮಗಾರಿ ಪರಿಶೀಲಿಸಿ ಶ್ರೀಗಳು ಮಾತನಾಡಿದರು.ಪ್ರಾಕೃತಿಕ, ತಾಂತ್ರಿಕ ಹಾಗೂ ಮನುಷ್ಯರ ಸಮಸ್ಯೆಗಳು ಒಟ್ಟಾಗಿ ಸೇರಿಕೊಂಡು 22 ಕೆರೆಗಳ ಏತ ನೀರಾವರಿಯ ಯೋಜನೆ ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ ಎಂದು ಬೇಸರ ಹೊರಹಾಕಿದರು.
ನದಿಯಲ್ಲಿ ನೀರಿದ್ದರು ಜಾಕ್ ವೆಲ್ ಮೂಲಕ ನೀರು ಬರುತ್ತಿಲ್ಲ. ಕಳೆದ ಬಾರಿ ಮೂರು ಮೋಟರ್ ಅಳವಡಿಸಿದ್ದರಿಂದ ನೀರು ತಕ್ಕಮಟ್ಟಿಗೆ ನೀರು ಕೆರೆಗಳಿಗೆ ಹರಿದಿದೆ. ಆದರೆ ಇದು ಶಾಶ್ವತ ಪರಿಹಾರದ ಕೆಲಸ ಅಲ್ಲ.
ಶಾಶ್ವತ ಪರಿಹಾರ ದೊರಕಬೇಕಾದರೆ ಬೆಂಗಳೂರಿನ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳನ್ನು ಕರೆಸಿ ಪರಿಶೀಲನೆ ನಡೆಸುವ ಅಗತ್ಯವಿದೆ ಎಂದರು.
ತಾಂತ್ರಿಕ ತೊಂದರೆ ಸರಿಯಾದಗ ನದಿಯಲ್ಲಿ ನೀರಿನ ಕೊರತೆ ಕಂಡು ಬರುತ್ತದೆ.ಆದ್ದರಿಂದ ಈ ಸ್ಥಳದಲ್ಲಿ ಕೆರೆ ನಿರ್ಮಾಣ ಮಾಡಿದರೆ ಸ್ವತಂತ್ರವಾಗಿ ನೀರು ಎರಡನೇ ಜಾಕ್ ವೆಲ್ ನಲ್ಲಿ ಇರುವಂತಹ ಮೋಟರ್ ಸರಿಯಾಗಿ ಕೆಲಸ ಮಾಡುತ್ತದೆಯೋ , ಇಲ್ಲವೋ ಎಂದು ತಿಳಿಯುತ್ತದೆ. ಈ ಬಗ್ಗೆ ಅಧಿಕಾರಿಗಳ ಬಳಿ ಚರ್ಚಿಸಿದಾಗ ತಾಂತ್ರಿಕ ತೊಂದರೆ ಇದೆ ಎಂಬುದು ಗೊತ್ತಾಗಿದೆ ಎಂದರು. ಈ ಯೋಜನೆಗೆ ಮಾಯಕೊಂಡ ಶಾಸಕರಾದ ಪ್ರೋ.ಲಿಂಗಣ್ಣನವರು 1 ಕೋಟಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ್ ಗುಂಗೆಯವರು ಸುಮಾರು 4 ರಿಂದ 5 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡಬಹುದು. ಅದನ್ನು ಅವರೇ ಮಾಡಿಸಿಕೊಡುವುದಾಗಿ ತಿಳಿಸಿದ್ದಾರೆ ಎಂದು ಶ್ರೀಗಳು ಮಾಹಿತಿ ನೀಡಿದರು .
ಜಗಳೂರು ತಾಲ್ಲೂಕಿನ 53 ಹಾಗೂ ಭರಮಸಾಗರ ಸುತ್ತಮುತ್ತಲಿನ 41 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅಂದಿನ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು 500 ಕೋಟಿ ರೂಗಳನ್ನು ಬಿಡುಗಡೆ ಮಾಡಿದ್ದು, ತದ ನಂತರ ಈಗಿನ ಮುಖ್ಯಮಂತ್ರಿಗಳಾದ ಕುಮಾರ ಸ್ವಾಮಿಯವರು
ಸ್ಪಂದಿಸುವುದಾಗಿ ಹೇಳಿದ್ದಾರೆಂದರು.ಸಂಸದರಾದ ಜಿ.ಎಂ ಸಿದ್ದೇಶ್ವರ್ ಮಾತನಾಡಿ ಮಳೆಗಾಲದಲ್ಲಿ 120 ಟಿ ಎಂ ಸಿ ನೀರು
ತುಂಗಭದ್ರಾ ನದಿಯ ಮೂಲಕ ಸಮುದ್ರ ಪಾಲಾಗಿದೆ. ನಮ್ಮ ಈ ಏತ ನೀರಾವರಿ ಯೋಜನೆಗೆ ಬೇಕಾಗಿರುವುದು 1 ಟಿ ಎಂ ಸಿ ನೀರು ಮಾತ್ರ. ಸಾಕಷ್ಟು ನೀರು ಪೋಲಾಗಿರುವುದು ನೋವು ತಂದಿದೆ ಎಂದರು. ಶ್ರೀಗಳು ಏತ ನೀರಾವರಿ ಯೋಜನೆಯ ಅನುಷ್ಠಾನ ವಿಚಾರದಲ್ಲಿ ಅತ್ಯಂತ ಕಾಳಜಿ ಹೊಂದಿದ್ದಾರೆ. ಶ್ರೀಗಳ ಆಶಯದಂತೆ ಜಗಳೂರು ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 330 ಕೋಟಿ ಹಾಗೂ ಭರಮಸಾಗರ ಮತ್ತು ಚಿತ್ರದುರ್ಗ ಎಲ್ಲಾ ತಾಲೂಕುಗಳ ಕೆರೆ ತುಂಬಿಸುವ ಯೋಜನೆಗೆ 600 ಕೋಟಿ ರೂ ಅನುದಾನಕ್ಕೆ ಸರ್ಕಾರ ಅವಕಾಶ ಕಲ್ಪಿಸಿದೆ. ಇದಕ್ಕಾಗಿ ಸಮಗ್ರ ವರದಿ ತಯಾರಾಗಿದ್ದು ,ಶ್ರೀಗಳ ಸೂಚನೆಯ ಮೇರೆಗೆ ಈ ಯೋಜನೆಯಡಿ ಕೆಲವು ಸಣ್ಣ ಪುಟ್ಟ ಮಾರ್ಪಾಡುಗಳು ಆಗಬೇಕಿದೆ ಎಂದು ಹೇಳಿದರು.
ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ.ಜೆ ಮಲ್ಲಿಕಾರ್ಜುನ್ ಗುಂಗೆ ಮಾತನಾಡಿ ಈ ಯೋಜನೆಯಲ್ಲಿ ವೆಲ್ಡಿಂಗ್ ಮತ್ತು ವಿದ್ಯುತ್ ವ್ಯತ್ಯಯದಿಂದ
ಲೋಪದೋಷಗಳು ಹುಟ್ಟಿಕೊಂಡಿವೆ.ಇದಕ್ಕೆ ಸ್ಥಳದಲ್ಲಿ ಚೆಕ್ ಡ್ಯಾಮ್ ನಿರ್ಮಾಣ ಮಾಡಿ,ನೀರು ಸರಾಗವಾಗಿ ಜಾಕ್ ವೆಲ್ ಗೆ ಬಂದು ಸೇರುವಂತೆ ವ್ಯವಸ್ಥೆ ಮಾಡಲಾಗುವುದು ಎಂದರು.
ಇದಕ್ಕೆ ಬೇಕಾಗುವ 4 ರಿಂದ 5 ಕೋಟಿ ಹಣವನ್ನು ಬಳಕೆ ಮಾಡಲು ಯಾವುದೇ ತೊಂದರೆ ಬರುವುದಿಲ್ಲ.ಆದರೆ ಟೆಂಡರ್ ಹಂತ ಮಾತ್ರ ನಮ್ಮ ವ್ಯಾಪ್ತಿಗೆ ವ್ಯಾಪ್ತಿಗೆ ಬರುತ್ತದೆ.ಆದರೆ ಹಣ ಬಿಡುಗಡೆ ಮಾಡಲಿಕ್ಕೆ ಸಿ ಎಂ ಬಳಿ ಚರ್ಚೆ ಮಾಡಿ ಶೀಘ್ರವೇ ಕೆಲಸ ಮಾಡಿಸಿಕೊಡುವುದಾಗಾ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಎಸ್.ವಿ.ರಾಮಚಂದ್ರ ,ಪ್ರೊ.ಲಿಂಗಣ್ಣ, ಮುಖ್ಯ ಎಂಜಿನಿಯರ್ ಯತೀಶ್ ಚಂದ್ರನ್, ಅಧೀಕ್ಷಕ ಎಂಜಿನಿಯರ್ ದಿವಾಕರ್ ನಾಯಕ್,ಕಾರ್ಯಪಾಲಕ ಎಂಜಿನಿಯರ್ ಜಿ.ಆರ್ ಕೊಟ್ರೇಶ್ ,ಗಂಗಪ್ಪ,ವಿಕಾಸ್ ನಿಂಬಣ್ಣ,ನಾಗರಾಜಪ್ಪ ಕರೆ ನೀರಾವರಿ ಯೋಜನೆಯ ಅಧ್ಯಕ್ಷರಾದ ಡಾ.ಮಂಜುನಾಥ್ ಗೌಡ,ಸುಭಾಷ್ ಚಂದ್ರ ಮುಂತಾದವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!