ದಿನದ ಸುದ್ದಿ
ಯಶಸ್ವಿಯಾಗದ 22 ಕೆರೆಗಳ ಏತ ನೀರಾವರಿಯ ಯೋಜನೆ : ತರಳಬಾಳು ಶ್ರೀ ಬೇಸರ
ಸುದ್ದಿದಿನ,ಹರಿಹರ : 22 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯು ಹಲವು ಲೋಪದೋಷಗಳಿಂದಾಗಿ ಪರಿಣಾಮಕಾರಿಯಾಗಿ ಯಶಸ್ವಿಯಾಗದೇ ಇರುವುದು ಅತ್ಯಂತ ಬೇಸರ ತಂದಿದೆ ಎಂದು ತರಳಬಾಳು ಜಗದ್ಗುರು ಡಾ .ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ವಿಷಾದ ವ್ಯಕ್ತ ಪಡಿಸಿದರು.
ಹರಿಹರ ನಗರದ ಹೊರವಲಯದಲ್ಲಿರುವ ಜಾಕ್ ವೆಲ್ ಬಳಿ ಯೋಜನೆಯ ಕಾಮಗಾರಿ ಪರಿಶೀಲಿಸಿ ಶ್ರೀಗಳು ಮಾತನಾಡಿದರು.ಪ್ರಾಕೃತಿಕ, ತಾಂತ್ರಿಕ ಹಾಗೂ ಮನುಷ್ಯರ ಸಮಸ್ಯೆಗಳು ಒಟ್ಟಾಗಿ ಸೇರಿಕೊಂಡು 22 ಕೆರೆಗಳ ಏತ ನೀರಾವರಿಯ ಯೋಜನೆ ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ ಎಂದು ಬೇಸರ ಹೊರಹಾಕಿದರು.
ನದಿಯಲ್ಲಿ ನೀರಿದ್ದರು ಜಾಕ್ ವೆಲ್ ಮೂಲಕ ನೀರು ಬರುತ್ತಿಲ್ಲ. ಕಳೆದ ಬಾರಿ ಮೂರು ಮೋಟರ್ ಅಳವಡಿಸಿದ್ದರಿಂದ ನೀರು ತಕ್ಕಮಟ್ಟಿಗೆ ನೀರು ಕೆರೆಗಳಿಗೆ ಹರಿದಿದೆ. ಆದರೆ ಇದು ಶಾಶ್ವತ ಪರಿಹಾರದ ಕೆಲಸ ಅಲ್ಲ.
ಶಾಶ್ವತ ಪರಿಹಾರ ದೊರಕಬೇಕಾದರೆ ಬೆಂಗಳೂರಿನ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳನ್ನು ಕರೆಸಿ ಪರಿಶೀಲನೆ ನಡೆಸುವ ಅಗತ್ಯವಿದೆ ಎಂದರು.
ತಾಂತ್ರಿಕ ತೊಂದರೆ ಸರಿಯಾದಗ ನದಿಯಲ್ಲಿ ನೀರಿನ ಕೊರತೆ ಕಂಡು ಬರುತ್ತದೆ.ಆದ್ದರಿಂದ ಈ ಸ್ಥಳದಲ್ಲಿ ಕೆರೆ ನಿರ್ಮಾಣ ಮಾಡಿದರೆ ಸ್ವತಂತ್ರವಾಗಿ ನೀರು ಎರಡನೇ ಜಾಕ್ ವೆಲ್ ನಲ್ಲಿ ಇರುವಂತಹ ಮೋಟರ್ ಸರಿಯಾಗಿ ಕೆಲಸ ಮಾಡುತ್ತದೆಯೋ , ಇಲ್ಲವೋ ಎಂದು ತಿಳಿಯುತ್ತದೆ. ಈ ಬಗ್ಗೆ ಅಧಿಕಾರಿಗಳ ಬಳಿ ಚರ್ಚಿಸಿದಾಗ ತಾಂತ್ರಿಕ ತೊಂದರೆ ಇದೆ ಎಂಬುದು ಗೊತ್ತಾಗಿದೆ ಎಂದರು. ಈ ಯೋಜನೆಗೆ ಮಾಯಕೊಂಡ ಶಾಸಕರಾದ ಪ್ರೋ.ಲಿಂಗಣ್ಣನವರು 1 ಕೋಟಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ್ ಗುಂಗೆಯವರು ಸುಮಾರು 4 ರಿಂದ 5 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡಬಹುದು. ಅದನ್ನು ಅವರೇ ಮಾಡಿಸಿಕೊಡುವುದಾಗಿ ತಿಳಿಸಿದ್ದಾರೆ ಎಂದು ಶ್ರೀಗಳು ಮಾಹಿತಿ ನೀಡಿದರು .
ಜಗಳೂರು ತಾಲ್ಲೂಕಿನ 53 ಹಾಗೂ ಭರಮಸಾಗರ ಸುತ್ತಮುತ್ತಲಿನ 41 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅಂದಿನ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು 500 ಕೋಟಿ ರೂಗಳನ್ನು ಬಿಡುಗಡೆ ಮಾಡಿದ್ದು, ತದ ನಂತರ ಈಗಿನ ಮುಖ್ಯಮಂತ್ರಿಗಳಾದ ಕುಮಾರ ಸ್ವಾಮಿಯವರು
ಸ್ಪಂದಿಸುವುದಾಗಿ ಹೇಳಿದ್ದಾರೆಂದರು.ಸಂಸದರಾದ ಜಿ.ಎಂ ಸಿದ್ದೇಶ್ವರ್ ಮಾತನಾಡಿ ಮಳೆಗಾಲದಲ್ಲಿ 120 ಟಿ ಎಂ ಸಿ ನೀರು
ತುಂಗಭದ್ರಾ ನದಿಯ ಮೂಲಕ ಸಮುದ್ರ ಪಾಲಾಗಿದೆ. ನಮ್ಮ ಈ ಏತ ನೀರಾವರಿ ಯೋಜನೆಗೆ ಬೇಕಾಗಿರುವುದು 1 ಟಿ ಎಂ ಸಿ ನೀರು ಮಾತ್ರ. ಸಾಕಷ್ಟು ನೀರು ಪೋಲಾಗಿರುವುದು ನೋವು ತಂದಿದೆ ಎಂದರು. ಶ್ರೀಗಳು ಏತ ನೀರಾವರಿ ಯೋಜನೆಯ ಅನುಷ್ಠಾನ ವಿಚಾರದಲ್ಲಿ ಅತ್ಯಂತ ಕಾಳಜಿ ಹೊಂದಿದ್ದಾರೆ. ಶ್ರೀಗಳ ಆಶಯದಂತೆ ಜಗಳೂರು ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 330 ಕೋಟಿ ಹಾಗೂ ಭರಮಸಾಗರ ಮತ್ತು ಚಿತ್ರದುರ್ಗ ಎಲ್ಲಾ ತಾಲೂಕುಗಳ ಕೆರೆ ತುಂಬಿಸುವ ಯೋಜನೆಗೆ 600 ಕೋಟಿ ರೂ ಅನುದಾನಕ್ಕೆ ಸರ್ಕಾರ ಅವಕಾಶ ಕಲ್ಪಿಸಿದೆ. ಇದಕ್ಕಾಗಿ ಸಮಗ್ರ ವರದಿ ತಯಾರಾಗಿದ್ದು ,ಶ್ರೀಗಳ ಸೂಚನೆಯ ಮೇರೆಗೆ ಈ ಯೋಜನೆಯಡಿ ಕೆಲವು ಸಣ್ಣ ಪುಟ್ಟ ಮಾರ್ಪಾಡುಗಳು ಆಗಬೇಕಿದೆ ಎಂದು ಹೇಳಿದರು.
ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ.ಜೆ ಮಲ್ಲಿಕಾರ್ಜುನ್ ಗುಂಗೆ ಮಾತನಾಡಿ ಈ ಯೋಜನೆಯಲ್ಲಿ ವೆಲ್ಡಿಂಗ್ ಮತ್ತು ವಿದ್ಯುತ್ ವ್ಯತ್ಯಯದಿಂದ
ಲೋಪದೋಷಗಳು ಹುಟ್ಟಿಕೊಂಡಿವೆ.ಇದಕ್ಕೆ ಸ್ಥಳದಲ್ಲಿ ಚೆಕ್ ಡ್ಯಾಮ್ ನಿರ್ಮಾಣ ಮಾಡಿ,ನೀರು ಸರಾಗವಾಗಿ ಜಾಕ್ ವೆಲ್ ಗೆ ಬಂದು ಸೇರುವಂತೆ ವ್ಯವಸ್ಥೆ ಮಾಡಲಾಗುವುದು ಎಂದರು.
ಇದಕ್ಕೆ ಬೇಕಾಗುವ 4 ರಿಂದ 5 ಕೋಟಿ ಹಣವನ್ನು ಬಳಕೆ ಮಾಡಲು ಯಾವುದೇ ತೊಂದರೆ ಬರುವುದಿಲ್ಲ.ಆದರೆ ಟೆಂಡರ್ ಹಂತ ಮಾತ್ರ ನಮ್ಮ ವ್ಯಾಪ್ತಿಗೆ ವ್ಯಾಪ್ತಿಗೆ ಬರುತ್ತದೆ.ಆದರೆ ಹಣ ಬಿಡುಗಡೆ ಮಾಡಲಿಕ್ಕೆ ಸಿ ಎಂ ಬಳಿ ಚರ್ಚೆ ಮಾಡಿ ಶೀಘ್ರವೇ ಕೆಲಸ ಮಾಡಿಸಿಕೊಡುವುದಾಗಾ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಎಸ್.ವಿ.ರಾಮಚಂದ್ರ ,ಪ್ರೊ.ಲಿಂಗಣ್ಣ, ಮುಖ್ಯ ಎಂಜಿನಿಯರ್ ಯತೀಶ್ ಚಂದ್ರನ್, ಅಧೀಕ್ಷಕ ಎಂಜಿನಿಯರ್ ದಿವಾಕರ್ ನಾಯಕ್,ಕಾರ್ಯಪಾಲಕ ಎಂಜಿನಿಯರ್ ಜಿ.ಆರ್ ಕೊಟ್ರೇಶ್ ,ಗಂಗಪ್ಪ,ವಿಕಾಸ್ ನಿಂಬಣ್ಣ,ನಾಗರಾಜಪ್ಪ ಕರೆ ನೀರಾವರಿ ಯೋಜನೆಯ ಅಧ್ಯಕ್ಷರಾದ ಡಾ.ಮಂಜುನಾಥ್ ಗೌಡ,ಸುಭಾಷ್ ಚಂದ್ರ ಮುಂತಾದವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ರಾಜ್ಯಪಾಲರಿಗೆ ತಪ್ಪು ಮಾಹಿತಿ; ತನ್ನ ವೈಫಲ್ಯ ಮುಚ್ಚಲು ಬಿಜೆಪಿ ಸುಳ್ಳು ಹೇಳಿಸಿದೆ : ಸಿದ್ದರಾಮಯ್ಯ

ಸುದ್ದಿದಿನ, ಬೆಂಗಳೂರು : ಒಂದಷ್ಟು ಸುಳ್ಳು, ಇನ್ನೊಂದಿಷ್ಟು ತಪ್ಪು ಮಾಹಿತಿ ಮತ್ತು ಹಿಂದಿನ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ರಾಜ್ಯಪಾಲರ ಭಾಷಣದಲ್ಲಿ ಹೇಳಿಸುವ ಮೂಲಕ ರಾಜ್ಯದ ಬಿಜೆಪಿ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹತಾಶ ಪ್ರಯತ್ನ ನಡೆಸಿದೆ ಎಂದು ಸಿದ್ದರಾಮಯ್ಯ ಗುಡುಗಿದರು.
ವಿಧಾನ ಮಂಡಲ ಅಧಿವೇಶನ ಗುರುವಾರ ಆರಂಭವಾಗಿದ್ದು, ಅಧಿವೇಶನದಲ್ಲಿ ಮಾತನಾಡಿದ ಅವರು, ಕೊರೊನಾದಂತಹ ಮಾರಕ ರೋಗವನ್ನು ಬ್ರಹ್ಮಾಂಡ ಭ್ರಷ್ಟಚಾರವೆಸಗಲು ದುರುಪಯೋಗ ಪಡಿಸಿಕೊಂಡ ಯಡಿಯೂರಪ್ಪ ಸರ್ಕಾರ, ರೋಗ ನಿಯಂತ್ರಣದಲ್ಲಿನ ವೈಫಲ್ಯಗಳನ್ನು ಸುಳ್ಳು ಅಂಕಿ ಅಂಶಗಳ ಮೂಲಕ ಮರೆಮಾಚಲು ಪ್ರಯತ್ನಿಸಿದೆ ಎಂದರು.
ತೆರಿಗೆಯಲ್ಲಿ ಪಾಲು, 15ನೇ ಹಣಕಾಸು ಆಯೋಗದ ಅನುದಾನ ಮತ್ತು ಜಿಎಸ್ ಟಿ ಪರಿಹಾರದಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ವಿವರವನ್ನು ರಾಜ್ಯಪಾಲರ ಭಾಷಣದಲ್ಲಿ ನೀಡಿದ್ದರೆ ಯಡಿಯೂರಪ್ಪನವರ ಸರ್ಕಾರದ ಬಣ್ಣ ಸಂಪೂರ್ಣ ಬಯಲಾಗುತ್ತಿತ್ತು ಎಂದು ಕಿಡಿಕಾರಿದರು.
ಕಳೆದ ವರ್ಷ ಅತಿವೃಷ್ಟಿಯಿಂದ 9,94,556 ಹೆಕ್ಟೇರ್ ಬೆಳೆ ನಾಶವೂ ಸೇರಿದಂತೆ ಒಟ್ಟು ನಷ್ಟಕ್ಕೆ ರೂ.25,518 ಕೋಟಿ ಪರಿಹಾರ ಕೇಳಿದ್ದ ರಾಜ್ಯ ಸರ್ಕಾರ, ಈ ಬಾರಿ 20,86,703 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ರೂ.24,941 ಕೋಟಿ ಪರಿಹಾರವನ್ನಷ್ಟೇ ಕೇಳಿ ರಾಜ್ಯಕ್ಕೆ ದ್ರೋಹ ಬಗೆದಿದೆ.
ಕಳೆದ ವರ್ಷ 25,518 ಕೋಟಿ ಪರಿಹಾರ ಕೇಳಿದರೂ ಕೇಂದ್ರದಿಂದ ಕೇಳಿದರೂ ಸಿಕ್ಕಿರುವುದು ಮಾತ್ರ 1,634 ಕೋಟಿ ರೂಪಾಯಿ ಮಾತ್ರ. ರಾಜ್ಯ ಸರ್ಕಾರ ಸಮರ್ಪಕ ಸಮೀಕ್ಷಾ ವರದಿ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರಿದರೆ ಮಾತ್ರ ಹೆಚ್ಚಿನ ಪರಿಹಾರ ಸಿಗಲು ಸಾಧ್ಯ.
ಮಳೆ ಮತ್ತು ಪ್ರವಾಹದ ನಷ್ಟಕ್ಕೆ ರಾಜ್ಯ ಸರ್ಕಾರ ಇಲ್ಲಿಯ ವರೆಗೆ ನೀಡಿರುವ ಪರಿಹಾರ ಕೇವಲ ರೂ.36.57 ಕೋಟಿ ಮಾತ್ರ. ಎರಡನೇ ಹಂತದಲ್ಲಿ ಗುರುತಿಸಲಾದ ಸಂತ್ರಸ್ತರಲ್ಲಿ ಯಾರೊಬ್ಬರಿಗೂ ಸೂಕ್ತ ಪರಿಹಾರಧನ ಈ ವರೆಗೆ ತಲುಪಿಲ್ಲ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
https://twitter.com/siddaramaiah/status/1354723493061955592?s=19
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇವರ ವಿವೇಕವಿಲ್ಲದ ವಿದ್ಯೆಗೆ ಬೆಂಕಿ ಬಿತ್ತು….ಛೇ !

- ಹಿರಿಯೂರು ಪ್ರಕಾಶ್
ವಿದ್ಯೆಗೂ ವಿವೇಕಕ್ಕೂ ಸಂಬಂಧವಿಲ್ಲವೆನ್ನುವುದು ಆಗಾಗ್ಗೆ ಸಾಬೀತಾಗುತ್ತಲೇ ಬಂದಿದೆ. ಅತ್ಯುನ್ನತ ಶ್ರೇಣಿಯಲ್ಲಿ ಡಿಗ್ರಿಗಳನ್ನು ಪಡೆದು ವಿದ್ಯಾವಂತರಾದರಷ್ಟೇ ಸಾಲದು , ಅದಕ್ಕೆ ಪೂರಕವಾದ ಕಾಮನ್ ಸೆನ್ಸ್ ಹಾಗೂ ಸ್ವಲ್ಪಮಟ್ಟಿಗೆ ವಿವೇಕವನ್ನೂ ಬೆಳೆಸಿಕೊಳ್ಳಬೇಕಾಗುತ್ತದೆ. ಇಲ್ಲವಾದಲ್ಲಿ ನಿಮ್ಮ ಡಿಗ್ರಿ ಸರ್ಟಿಫಿಕೇಟ್ ಒಂಥರಾ ವೇಸ್ಟ್ ಪೇಪರ್ ಇದ್ದಂತೆ ಕಸದ ಬುಟ್ಟಿಗೂ ಅನ್ ಫ಼ಿಟ್ !
ಈ ವಿಷಯ ಈಗ್ಯಾಕೆ ಬಂತು ಅಂತೀರಾ..??
ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಇಬ್ಬರು ಸುಶಿಕ್ಷಿತ ಭೋಧಕ ದಂಪತಿಗಳು ಪರಾಕಾಷ್ಠೆಯ ಮೂಢನಂಬಿಕೆಗೆ ಮರುಳಾಗಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನವೇ ವಯಸ್ಸಿಗೆ ಬಂದ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭೀಭತ್ಸ ಘಟನೆಯನ್ನು ನೋಡಿದಾಗ ನಾನು ಮೇಲೆ ಉಲ್ಲೇಖಿಸಿರುವ ಮಾತುಗಳ ಸತ್ಯಾಸತ್ಯತೆ ತಿಳಿಯುತ್ತದೆ.
ಎಂತಹಾ ಪರಮ ನೀಚರು ಈ ಜನ ! ತಂದೆಯಾದ ಪುರುಷೋತ್ತಮ್ ನಾಯ್ಡು ಮದನಪಲ್ಲಿಯ ಮಹಿಳಾ ಪದವಿ ಕಾಲೇಜಿನಲ್ಲಿ ಪ್ರೊಫೆಸರ್ ಹಾಗೆಯೇ ತಾಯಿಯಾದ ಪದ್ಮಜಾ ಸಹಾ ಗಣಿತದಲ್ಲಿ ಗೋಲ್ಡ್ ಮೆಡಲ್ ಪಡೆದ ಶಿಕ್ಷಕಿ ಹಾಗೂ ವೈಸ್ ಪ್ರಿನ್ಸಿಪಾಲ್ ಅಂತೆ. ಈ ನರಾಧಮರ ನೀಚ ಕೃತ್ಯಕ್ಕೆ ಕಾರಣವೆಂದರೆ, ಮೊನ್ನೆ ಭಾನುವಾರದಂದು ಕಲಿಯುಗ ಅಂತ್ಯವಾಗಿ ಮಾರನೆಯ ದಿನವೇ ಸತ್ಯಯುಗ ಆರಂಭವಾಗಿ ಆ ದಿನವೇ ತಮ್ಮ ಮಕ್ಕಳು ಮರುಹುಟ್ಟು ಪಡೆಯಲಿದ್ದಾರೆಂದು ಯಾವನೋ ನಫ಼್ತಟಾಲ್ ನಾಲಾಯಕ್ ನನ್ಮಗ ಹೇಳಿದ್ದ ಮೂಢನಂಬಿಕೆಯ ಭವಿಷ್ಯವನ್ನು ನಂಬಿದ ಈ ಅಯೋಗ್ಯ ಪೇರೆಂಟ್ಸ್ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಮನೆಯ ದೇವರಕೋಣೆಯಲ್ಲಿ ವಿವಸ್ತ್ರಗೊಳಿಸಿ ತ್ರಿಶೂಲದಿಂದ ಹಾಗೂ ಡಂಬಲ್ಸ್ನಿಂದ ಕೊಚ್ಚಿ ಕೊಂದಿದ್ದಾರೆಂದು ಆನಂತರ ಶವಗಳ ಮುಂದೆ ಅವರ ತಾಯಿ ನರ್ತಿಸಿದ್ದಾರೆಂದೂ ವರದಿಯಾಗಿದೆ. ಇಷ್ಟಾದ ಮೇಲೂ ಕಿಂಚಿತ್ತೂ ಪಾಪ ಪ್ರಜ್ಞೆ ಯಿರದ ಈ ಪಾಪಿಗಳು ಪೋಲೀಸರ ಮುಂದೆಯೂ ತಮ್ಮ ಮಕ್ಕಳಿಬ್ಬರೂ ಮರುಹುಟ್ಟು ಪಡೆದು ಬರುತ್ತಾರೆಂದು ಹೇಳಬೇಕಾದರೆ ಹಾಗೂ ಪೋಲೀಸರು ಇನ್ನರ್ಧ ಘಂಟೆ ತಡವಾಗಿ ಬಂದಿದ್ದರೆ ಮಕ್ಕಳು ಬದುಕಿಬರುತ್ತಿದ್ದರೆಂದೂ ತಾನು ಶಿವನ ಅವತಾರವೆಂದೂ ಬಡಬಡಿಸಬೇಕಾದಲ್ಲಿ ಇವರು ಇನ್ನೆಂತಹಾ ಮೂಢನಂಬಿಕೆಯ ಜಗ ಭಂಡರಿರಬಹುದು ?? ಎಲ್ಲಕ್ಕಿಂತ ವಿಪರ್ಯಾಸವೆಂದರೆ ತಂದೆಯಾದವನು ವಿಜ್ಞಾನದ ವಿಷಯ ಭೋದಿಸುವವನಾದರೆ ತಾಯಿ ಗಣಿತದ ಶಿಕ್ಷಕಿ !ಈ ದಂಪತಿಗಳು ಅಲ್ಲಿನ ಆಧ್ಯಾತ್ಮಿಕ ಗುರು ಮೆಹರ್ ಬಾಬಾನ ‘ಅನುನಾಯಿ”ಗಳಂತೆ !
ಈ ಘೋರ ಕೃತ್ಯಕ್ಕೆ ಬಲಿಯಾದ ಅಮಾಯಕ ಹೆಣ್ಣುಮಕ್ಕಳಾದ ಅಲೆಖ್ಯಾ ಹಾಗೂ ಸಾಯಿ ದಿವ್ಯಾ ಉದ್ಯೋಗ ನಿಮಿತ್ತ ಬೇರೆ ಊರುಗಳಲ್ಲಿದ್ದರೂ ಲಾಕ್ ಡೌನ್ ಕಾರಣದಿಂದ ತಂದೆ ತಾಯಿ ಜೊತೆಯಲ್ಲಿ ಇರಬೇಕಾಗಿದ್ದೇ ಮುಂದೆ ಅವರ ಹೀನಾಯ ಸಾವಿಗೆ ಕಾರಣವಾಗಬಹುದೆಂಬ ಅರಿವು ಅವರಿಗೆ ಇರಲಿಲ್ಲ ! ಈ ಜನ್ಮದಲ್ಲೇ ಅವರನ್ನು ಸುಖವಾಗಿರಿಸುವಂತಹಾ ಹೊಟ್ಟೆಗೆ ಅನ್ನ ತಿನ್ನುವವರು ಮಾಡುವ ಸಹಜ ಯೋಚನೆ ಬಿಟ್ಟು, ಇಲ್ಲದ ಸತ್ಯಯುಗದ ಹಿಂದೆ ಬಿದ್ದು ಇಂತಹಾ ಬರ್ಬರ ಕೃತ್ಯವೆಸಗಿರುವ ಈ ನರರಕ್ಕಸರ ತಲೆಯೊಳಗೆ ಅವನ್ಯಾವನೋ ಬೇಕೂಫ಼ಾ ಇನ್ನೆಂತಹಾ ನಂಬಿಕೆಯ ವಿಷ ತುಂಬಿದ್ದಿರಬಹುದು..??
ಈಗ ಹೇಳಿ ! ಕಲಿಯುಗದಲ್ಲಿ ಇಂತಹಾ ಘನಕಾರ್ಯ ಮಾಡಿದ ವಿದ್ಯಾವಂತ ದಂಪತಿಗಳನ್ನು ಯಾವ ವರ್ಗಕ್ಕೆ ಸೇರಿಸುತ್ತೀರಿ ?? ಇವರಂತಹಾ ಅವಿವೇಕಿಗಳು, ಮೂಢರು, ದುಷ್ಟರು, ಅಯೋಗ್ಯರು, ಕ್ರೂರಿಗಳು, ನಿಷ್ಕರುಣಿಗಳು, ಪಾಪಿಗಳು, ಸ್ವಾರ್ಥಿಗಳು, ಎಜುಕೇಟೆಡ್ ಫ಼ೂಲ್ ಗಳು, ಪರಮ ಪಾಪಿಷ್ಠರು…. ಮತ್ತಾರಾದರೂ ಇದ್ದಾರೆಯೇ ?? ತಾವೇ ಜನ್ಮಕೊಟ್ಟು ಸಾಕಿ ಬೆಳೆಸಿದ ಮಕ್ಕಳನ್ನು, ಅದರಲ್ಲೂ ವಯಸ್ಸಿಗೆ ಬಂದ ಹೆಣ್ಣುಮಕ್ಕಳನ್ನು ಈ ರೀತಿ ಮೂಢನಂಬಿಕೆಗೆ ಬಲಿಯಾಗಿ ಅಮಾನವೀಯವಾಗಿ ಬಲಿ ತೆಗೆದುಕೊಂಡಿರುವ ಘಟನೆಯನ್ನು ಹಿಂದೆ ಎಂದಾದರೂ ಕೇಳಿದ್ದೀರಾ… ನೋಡಿದ್ದಿರಾ..! ಇದು ನನಗೆ ತಿಳಿದಂತೆ ಇಡೀ ನಾಡಿನಲ್ಲೇ ಅಪರೂಪದಲ್ಲಿ ಅಪರೂಪದ್ದು !
ಇವರ ಮನೆ ಕಾಯ್ ಹೋಗ ! ಕಲಿಯುಗ ಮುಗಿದು ಮತ್ತೇ ಸತ್ಯಯುಗದಲ್ಲಿ ಅದೇ ಮಕ್ಕಳು ಹುಟ್ಟುತ್ತಾರೆಂಬ ಇವರ ಕ್ಷುದ್ರ ನಂಬಿಕೆಯೇ ಅತ್ಯಂತ ಡೆಂಜರಸ್ ! ಹೇಳುವ ಮುಂಡೆಗಂಡರಿಗಂತೂ ಮೂರುಕಾಸಿನ ಬುದ್ದಿ ಇಲ್ಲ. ಕಾಸಿಗಾಗಿ ಏನೆಲ್ಲಾ ಕಥೆ ಹೇಳುತ್ತಾರೆ. ಆದರೆ ಕಾಲೇಜಿನಲ್ಲಿ ಪಾಠ ಮಾಡುವ, ಅದರಲ್ಲೂ ವಿಜ್ಞಾನ ಭೋಧಿಸುವ , ಅತ್ಯಂತ ಸುಶಿಕ್ಷಿತ ವರ್ಗಕ್ಕೆ ಸೇರಿದ ದಂಪತಿಗಳು ಇಂತಹವರ ಮಾತುಗಳನ್ನು ಕೇಳಿ ಈ ರೀತಿಯ ಭೀಭತ್ಸ ಕೃತ್ಯಕ್ಕೆ ಕೈ ಹಾಕುತ್ತಾರೆಂದರೆ ಅದಕ್ಕಿಂತ ದುರಂತ ಮತ್ತೊಂದಿದೆಯೇ ? ಅಲ್ಲಿಗೆ ಕಲಿತ ವಿದ್ಯೆಗೂ ತಲೆಯೊಳಗಿರಬೇಕಾದ ಕನಿಷ್ಠ ವಿವೇಕಕ್ಕೂ ಸಂಬಂಧವೇ ಇಲ್ಲದಂತಾಯಿತು !
ಮರೆಯುವ ಮುನ್ನ
ಮನುಷ್ಯ ಏನೆಲ್ಲಾ ಓದಿರಬಹುದು, ಎಷ್ಟೆಷ್ಟು ಡಿಗ್ರಿಗಳನ್ನು ಮೈಗೆಲ್ಲಾ ಮೆತ್ತಿಕೊಂಡಿರಬಹುದು, ಆಕಾಶದಲ್ಲೇ ಸದಾ ಹಾರಾಡುತ್ತಿರಬಹುದು, ಕರಗದಷ್ಟು ಆಸ್ತಿಯನ್ನೇ ಸಂಪಾದಿಸಿರಬಹುದು ಆದರೆ ಮನುಷ್ಯ ಅಂದಮೇಲೆ ಇರಲೇಬೇಕಾದ ಕಾಮನ್ ಮಿನಿಮಮ್ ಕಾಮನ್ ಸೆನ್ಸ್ ಅವನಲ್ಲಿ ಇಲ್ಲವೆಂದಮೇಲೆ ಅವನ ಓದಿಗೆ ವಿದ್ಯೆಗೆ ಬೆಂಕಿಬಿತ್ತು ! ಹೆತ್ತಮಕ್ಕಳನ್ನೇ ಈ ಲೆವೆಲ್ ನಲ್ಲಿ ಭಯಂಕರವಾಗಿ ಕೊಲೆ ಮಾಡುವ ಮನಸ್ಥಿತಿಯಿರುವವರು ತಮ್ಮ ವಿಧ್ಯಾರ್ಥಿಗಳಿಗೆ ಯಾವ ನೈತಿಕತೆಯ ಪಾಠವನ್ನು ಹೇಳಿಕೊಡಬಲ್ಲರು.? ಓದಿದ ಓದಿಗೂ, ಕಲಿತ ವಿದ್ಯೆಗೂ, ಮಾಡುವ ವೃತ್ತಿಗೂ ಈಗ ಅವರು ಎಸಗಿರುವ ಹೀನ ಕೃತ್ಯಕ್ಕೂ ಏನಾದರೂ ತಾಳೆ ಇದೆಯೇ ? ಇಂತಹಾ ಘಟನೆಗಳನ್ನೆಲ್ಲಾ ನೋಡಿದಾಗ ಮನುಷ್ಯನಷ್ಟು ವಿಷಕಾರಿ ಅಪಾಯಕಾರಿ ಜಂತು ಈ ಭೂಮಿಯಲ್ಲೇ ಇಲ್ಲವೇನೋ ಅನಿಸುತ್ತದೆ.
ಇಂತಹಾ ವಿಕ್ಷಿಪ್ತ ಮನಸ್ಥಿತಿಗೆ ಏನು ಕಾರಣವೋ ಗೊತ್ತಿಲ್ಲ. ಆದರೆ ಯಾವ್ಯಾವುದೋ ಹೆಸರಿನಲ್ಲಿ ಹುದುಗಿರುವ ಅತಿಯಾದ ಮೂಢನಂಬಿಕೆ , ಭ್ರಮಾತ್ಮಕ ಲೋಕ, ಮಾನವೀಯ ಮೌಲ್ಯಗಳ ಬೆಲೆಯರಿಯದ ಬದುಕು,
ಸ್ವಯಂಘೋಷಿತ ದೇವಮಾನವರು, ಬಾಬಾಗಳು , ಮಾಟ ಮಂತ್ರ ಮಾಡುವವರ ಮೇಲಿನ ಕುರುಡು ನಂಬಿಕೆ ಹಾಗೂ ಅಂತಹವರು ಹೇಳಿದ್ದೇ ವೇದವಾಕ್ಯವೆಂದು ನಂಬುವ ಅಜ್ಞಾನ…. ಈ ಎಲ್ಲವೂ ಕೆಲಮಟ್ಟಿಗೆ ಕಾರಣವಿರಲೂಬಹುದು..!
ಏನಾದರೂ ಇರಲಿ ! ಹೆತ್ತವರಿಂದಲೇ ಬರ್ಬರವಾಗಿ ಹತ್ಯೆಗೊಳಗಾಗಿ ನೆತ್ತರ ಮಡುವಲ್ಲಿ ಕೊನೆಯುಸಿರೆಳೆದ ಆ ಅಮಾಯಕ ಹೆಣ್ಣುಮಕ್ಕಳ ಆತ್ಮಕ್ಕೆ ಶಾಂತಿ ಕೋರುವುದು ಹಾಗೂ ಇಂತಹಾ ದುರ್ಘಟನೆಗಳು ಮತ್ತೇ ನೆಡೆಯದಿರಲಿ ಎಂದು ಪ್ರಾರ್ಥಿಸುವುದೊಂದೇ ಉಳಿದಿರುವ ದಾರಿ..!
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಹರಿಹರ – ಹೊನ್ನಾಳಿ ತಾಲೂಕಿನ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗದಿ ಪಟ್ಟಿ

ಸುದ್ದಿದಿನ,ದಾವಣಗೆರೆ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯ್ತಿಯ ಮೊದಲನೇ 30 ತಿಂಗಳ ಅವಧಿಗೆ ಹರಿಹರ ಹಾಗೂ ಹೊನ್ನಾಳಿ ತಾಲ್ಲೂಕಿನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ತಂತ್ರಾಂಶದ ಮೂಲಕ ಕೆಳಕಂಡ ಪಟ್ಟಿಯನ್ವಯ ವರ್ಗವಾರು ಮೀಸಲಾತಿ ನಿಗದಿಪಡಿಸಲಾಗಯಿತು.
ಹರಿಹರ ತಾಲ್ಲೂಕು
ಒಟ್ಟು ಸ್ಥಾನಗಳು ಅನುಸೂಚಿತ ಜಾತಿ ಅನುಸೂಚಿತ ಪಂಗಡ ಹಿಂದುಳಿದ ವರ್ಗ ‘ಅ’ ಹಿಂದುಳಿದ ವರ್ಗ ‘ಬ’ ಸಾಮಾನ್ಯ ವರ್ಗ24(12) 4(2) 3(2) 4(2) 1(1) 12(5)
ಸಂಖ್ಯೆ | ಗ್ರಾಮ ಪಂಚಾಯಿತಿ ಹೆಸರು | ಅಧ್ಯಕ್ಷ |ಉಪಾಧ್ಯಕ್ಷ
- ಸಾರಥಿ : ಸಾಮಾನ್ಯ(ಮಹಿಳೆ), ಅನುಸೂಚಿತ ಪಂಗಡ
- ಕೊಂಡಜ್ಜಿ : ಸಾಮಾನ್ಯ ಸಾಮಾನ್ಯ(ಮಹಿಳೆ)
- ಗುತ್ತೂರು : ಅನುಸೂಚಿತ ಜಾತಿ(ಮಹಿಳೆ) ಸಾಮಾನ್ಯ
- ಹನಗವಾಡಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ರಾಜನಹಳ್ಳಿ : ಅನುಸೂಚಿತ ಪಂಗಡ, ಸಾಮಾನ್ಯ(ಮಹಿಳೆ)
- ನಂದಿಗಾವಿ : ಹಿಂದುಳಿದ ‘ಅ’ ವರ್ಗ, ಅನುಸೂಚಿತ ಪಂಗಡ(ಮಹಿಳೆ)
- ಬೆಳ್ಳೂಡಿ: ಸಾಮಾನ್ಯ(ಮಹಿಳೆ), ಸಾಮಾನ್ಯ
- ಬನ್ನಿಕೋಡು: ಅನುಸೂಚಿತ ಪಂಗಡ(ಮಹಿಳೆ), ಹಿಂದುಳಿದ ಅ ವರ್ಗ
- ಸಾಲಕಟ್ಟೆ: ಸಾಮಾನ್ಯ , ಸಾಮಾನ್ಯ
- ದೇವರಬೆಳೆಕೆರೆ : ಅನುಸೂಚಿತ ಜಾತಿ , ಸಾಮಾನ್ಯ(ಮಹಿಳೆ)
- ಕುಣಿಬೆಳಕೆರೆ : ಹಿಂದುಳಿದ ಅ ವರ್ಗ(ಮಹಿಳೆ), ಅನುಸೂಚಿತ ಜಾತಿ(ಮಹಿಳೆ)
- ಭಾನುವಳ್ಳಿ: ಹಿಂದುಳಿದ ಬ ವರ್ಗ(ಮಹಿಳೆ), ಸಾಮಾನ್ಯ
- ಸಿರಿಗೆರೆ : ಅನುಸೂಚಿತ ಪಂಗಡ(ಮಹಿಳೆ) , ಹಿಂದುಳಿದ ಬ ವರ್ಗ(ಮಹಿಳೆ)
- ಕಡರನಾಯ್ಕನಹಳ್ಳಿ : ಸಾಮಾನ್ಯ , ಹಿದುಳಿದ ಅ ವರ್ಗ(ಮಹಿಳೆ)
- ಉಕ್ಕಡಗಾತ್ರಿ : ಅನುಸೂಚಿತ ಜಾತಿ, ಹಿಂದುಳಿದ ಅ ವರ್ಗ(ಮಹಿಳೆ)
- ಯಲವಟ್ಟಿ : ಸಾಮಾನ್ಯ, ಅನುಸೂಚಿತ ಜಾತಿ
- ಕುಂಬಳೂರು : ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
- ಜಿಗಳಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಕೊಕ್ಕನೂರು : ಸಾಮಾನ್ಯ , ಅನುಸೂಚಿತ ಜಾತಿ(ಮಹಿಳೆ)
- ವಾಸನ : ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
- ಹರಳಹಳ್ಳಿ : ಹಿಂದುಳಿದ ಅ ವರ್ಗ(ಮಹಿಳೆ), ಸಾಮಾನ್ಯ(ಮಹಿಳೆ)
- ಹಾಲಿವಾಣ : ಹಿಂದುಳಿದ ‘ಅ ವರ್ಗ, ಅನುಸೂಚಿತ ಪಂಗಡ(ಮಹಿಳೆ)
- ಎಳೆಹೊಳೆ : ಸಾಮಾನ್ಯ ,ಸಾಮಾನ್ಯ(ಮಹಿಳೆ)
- ಕೆ.ಬೇವಿನಹಳ್ಳಿ : ಸಾಮಾನ್ಯ, ಹಿಂದುಳಿದ ಅ ವರ್ಗ
ಹೊನ್ನಾಳಿ ತಾಲ್ಲೂಕು
ಒಟ್ಟು ಸ್ಥಾನಗಳು ಅನುಸೂಚಿತ ಜಾತಿ ಅನುಸೂಚಿತ ಪಂಗಡ ಹಿಂದುಳಿದ ವರ್ಗ ‘ಅ’ ಹಿಂದುಳಿದ ವರ್ಗ ‘ಬ’ ಸಾಮಾನ್ಯ ವರ್ಗ29(15) 5(3) 2(1) 6(3) 1(1) 15(7)
ಸಂಖ್ಯೆ | ಗ್ರಾಮ ಪಂಚಾಯಿತಿ ಹೆಸರು | ಅಧ್ಯಕ್ಷ | ಉಪಾಧ್ಯಕ್ಷ
- ಕತ್ತಿಗೆ : ಸಾಮಾನ್ಯ, ಅನುಸೂಚಿ ಪಂಗಡ(ಮಹಿಳೆ)
- ಹತ್ತೂರು : ಸಾಮಾನ್ಯ, ಅನುಸೂಚಿ ಪಂಗಡ
- ಹೆಚ್ ಗೋಪಗೊಂಡನಹಳ್ಳಿ: ಹಿಂದುಳಿದ ‘ಅ’ ವರ್ಗ, ಸಾಮಾನ್ಯ
- ಹನುಮಸಾಗರ: ಅನುಸೂಚಿ ಪಂಗಡ, ಸಾಮಾನ್ಯ(ಮಹಿಳೆ)
- ಸೊರಟೂರು : ಹಿಂದುಳಿದ ‘ಅ’ ವರ್ಗ (ಮಹಿಳೆ), ಹಿಂದುಳಿದ ‘ಬ’ ವರ್ಗ(ಮಹಿಳೆ)
- ಹೆಚ್ ಕಡದಕಟ್ಟೆ : ಅನುಸೂಚಿತ ಜಾತಿ , ಸಾಮಾನ್ಯ(ಮಹಿಳೆ)
- ಅರಬಗಟ್ಟ ಸಾಮಾನ್ಯ(ಮಹಿಳೆ) ಹಿಂದುಳಿದ ‘ಅ’ ವರ್ಗ (ಮಹಿಳೆ)
- ಹರಳಹಳ್ಳಿ : ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
- ಹಿರೇಗೋಣಿಗೆರೆ : ಸಾಮಾನ್ಯ(ಮಹಿಳೆ) , ಸಾಮಾನ್ಯ
- ಬೇಲಿಮಲ್ಲೂರು : ಹಿಂದುಳಿದ ‘ಅ’ ವರ್ಗ (ಮಹಿಳೆ) ಅನುಸೂಚಿತ ಜಾತಿ
- ಅರಕೆರೆ : ಸಾಮಾನ್ಯ ಹಿಂದುಳಿದ, ‘ಅ’ ವರ್ಗ (ಮಹಿಳೆ)
- ಮಾಸಡಿ : ಸಾಮಾನ್ಯ ಹಿಂದುಳಿದ, ‘ಅ’ ವರ್ಗ (ಮಹಿಳೆ)
- ಕಮ್ಮಾರಗಟ್ಟೆ : ಸಾಮಾನ್ಯ, ಸಾಮಾನ್ಯ(ಮಹಿಳೆ)
- ತಿಮ್ಲಾಪುರ : ಸಾಮಾನ್ಯ(ಮಹಿಳೆ) , ಅನುಸೂಚಿ ಜಾತಿ(ಮಹಿಳೆ)
- ಕುಂಬಳೂರು : ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
- ಕುಂದೂರು ಹಿಂದುಳಿದ ‘ಅ’ ವರ್ಗ ಸಾಮಾನ್ಯ(ಮಹಿಳೆ)
- ಯಕ್ಕನಹಳ್ಳಿ , ಸಾಮಾನ್ಯ, ಸಾಮಾನ್ಯ(ಮಹಿಳೆ)
- ಕೂಲಂಬಿ : ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
- ಮುಕ್ತೇನಹಳ್ಳಿ : ಹಿಂದುಳಿದ ‘ಅ’ ವರ್ಗ (ಮಹಿಳೆ), ಸಾಮಾನ್ಯ
- ಬನ್ನಿಕೋಡು : ಸಾಮಾನ್ಯ(ಮಹಿಳೆ), ಹಿಂದುಳಿದ ‘ಅ’ ವರ್ಗ
- ಬೆನಕನಹಳ್ಳಿ : ಅನುಸೂಚಿತ ಪಂಗಡ(ಮಹಿಳೆ) , ಸಾಮಾನ್ಯ
- ಬೀರಗೊಂಡನಹಳ್ಳಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ರಾಂಪುರ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಸಾಸ್ವೇಹಳ್ಳಿ : ಹಿಂದುಳಿದ ‘ಬ’ ವರ್ಗ (ಮಹಿಳೆ), ಅನುಸೂಚಿತ ಜಾತಿ(ಮಹಿಳೆ)
- ಕುಳಗಟ್ಟೆ: ಹಿಂದುಳಿದ ‘ಅ’ ವರ್ಗ , ಸಾಮಾನ್ಯ(ಮಹಿಳೆ)
- ಕ್ಯಾಸನಕೆರೆ : ಸಾಮಾನ್ಯ, ಸಾಮಾನ್ಯ((ಮಹಿಳೆ)
- ಹೊಸಹಳ್ಳಿ : ಅನುಸೂಚಿತ ಜಾತಿ(ಮಹಿಳೆ), ಹಿಂದುಳಿದ ‘ಅ’ ವರ್ಗ
- ಲಿಂಗಾಪುರ : ಅನುಸೂಚಿತ ಜಾತಿ, ಸಾಮಾನ್ಯ
- ಹುಣಸಘಟ್ಟೆ : ಅನುಸೂಚಿತ ಜಾತಿ(ಮಹಿಳೆ), ಹಿಂದುಳಿದ ‘ಅ’ ವರ್ಗ
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ5 days ago
ಸಿನಿಮಾ ಪಯಣಕ್ಕೆ ರೀ ಎಂಟ್ರಿ ಕೊಟ್ಟ ಮಂದಹಾಸ ಬೆಡಗಿ : ಬಿಂದುಶ್ರೀ
-
ದಿನದ ಸುದ್ದಿ2 days ago
ದಾವಣಗೆರೆ | ಅತ್ಯಾಚಾರ ಅಪರಾಧಿಗೆ 15 ವರ್ಷ ಸಜೆ, 26 ಸಾವಿರ ದಂಡ
-
ಬಹಿರಂಗ2 days ago
ಸಂವಿಧಾನ ದಿನಾಚರಣೆ ಹೇಗೆ ಗಣರಾಜ್ಯೋತ್ಸವವಾಯಿತು..?
-
ಬಹಿರಂಗ4 days ago
ನುಡಿದ ಸತ್ಯವನ್ನು ಬಂಧಿಸಲಾಗದು
-
ದಿನದ ಸುದ್ದಿ3 days ago
ಬಿಗ್ ಬಾಸ್ ಖ್ಯಾತಿಯ ಜಯಶ್ರೀ ಆತ್ಮಹತ್ಯೆ ; ಕಾರಣ ಏನು ಗೊತ್ತಾ..!?
-
ಅಂತರಂಗ2 days ago
ಭಾರತದ ಸಂವಿಧಾನ : ಪ್ರಜೆಗಳ ಓದು
-
ದಿನದ ಸುದ್ದಿ2 days ago
ರೈತ ಹೋರಾಟವೆಂಬ ಸಾಗರ ; ಇದು ಬರೀ ಪಂಜಾಬಿನದ್ದಲ್ಲ, ಇಡೀ ದೇಶದ ಹೋರಾಟ
-
ದಿನದ ಸುದ್ದಿ2 days ago
ಹೊಲಿಗೆ ಯಂತ್ರ ಸೌಲಭ್ಯ ನೀಡುವ ಅರ್ಜಿ ಅವಧಿ ವಿಸ್ತರಣೆ