ದಿನದ ಸುದ್ದಿ
ಕೆರೆಯ ನೀರನ್ನು ಎಲ್ಲಾ ರೈತರು ಸಮನಾಗಿ ಹಂಚಿಕೊಳ್ಳಿ : ತರಳಬಾಳು ಶ್ರೀಗಳ ಕರೆ
ಸುದ್ದಿದಿನ,ದಾವಣಗೆರೆ : ಇಲ್ಲಿಗೆ ಸಮೀಪದ ಬೋರಗುಂಡನಹಳ್ಳಿಯಲ್ಲಿರುವ ಕೆರೆಯಲ್ಲಿ ಒಂದು ಹನಿನೀರು ಇಲ್ಲದಿರುವ ಬಗ್ಗೆ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರು ಆತಂಕ ವ್ಯಕ್ತ ಪಡಿಸಿದರು.
ಅವರು ಇಂದು ಬೋರಗೋಂಡನಹಳ್ಳಿಯಲ್ಲಿ ಶ್ರೀ ಹಾಲಸ್ವಾಮಿ,ಶ್ರೀ ಮರುಳಸಿದ್ದೇಶ್ವರ,ಶ್ರೀ ಚೌಡೇಶ್ವರಿ ದೇವಿಯ ಗೋಪುರಗಳ ಕಳಸಾರೋಹಣ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಬಸವನಾಳ್ ಸಮೀಪದ ರಾಂಪುರ ಕೆರೆಯು ಕೋಡಿ ಹರಿದ ನೀರು ವ್ಯರ್ಥವಾಗಿ ಹರಿಯುತ್ತಿರುವುದನ್ನು ತಡೆಗಟ್ಟಲು ,ಇಲ್ಲಿ ಸಂಗ್ರಹಗೊಂಡ ನೀರಿನಿಂದ ಪೈಪ್ ಲೈನ್ ಮೂಲಕ ಬೋರಗುಂಡನಹಳ್ಳಿಯಲ್ಲಿ ಕೆರೆಯನ್ನು ತುಂಬಿಸುವ ಯೋಜನೆ ಕೈಗೊಳ್ಳಲಾಗಿತ್ತು.ಆದರೆ ರಾಂಪುರ ಕೆರೆಯಿಂದ ಸಂಗ್ರಹವಾದ ನೀರು
ಪೈಪ್ ಲೈನ್ ಮೂಲಕ ಹರಿಸಲು ಸಾಧ್ಯವಾಗುವಂತೆ.ಪಂಪ್ ಹೌಸ್ ನಿರ್ಮಾಣ ಮಾಡುವ ಉದ್ದೇಶವಿದ್ದು,ಈ ಕಾರ್ಯಕ್ಕೆ ರೈತರೊಬ್ಬರು ಅಡ್ಡಿಪಡಿಸುತ್ತಿರುವ ಬಗ್ಗೆ ಗ್ರಾಮಸ್ಥರು ದೂರು ನೀಡಿದ್ದಾರೆ.ಈ ಬಗ್ಗೆ ಪರಿಶೀಲಿಸಿದ್ದು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸುವುದಾಗಿ ಶ್ರೀಗಳು
ತಿಳಿಸಿದರು.
22 ಕೆರೆಗಳ ಏತ ನೀರಾವರಿ ಸಮಿತಿ ಅಧ್ಯಕ್ಷ ಡಾ.ಮಂಜುನಾಥ್ ಗೌಡ್ರು,ಜಿ.ಪಂ ಸದಸ್ಯ ಬಸವಂತಪ್ಪ ಮತ್ತಿತರ ಮುಖಂಡರೊಡನೆ ತಾವು ಸ್ಥಳ ಪರಿಶೀಲನೆ ನಡೆಸಿದ್ದು ಎಲ್ಲರ ಸಲಹೆಗಳನ್ನು ಪಡೆಯುವುದಾಗಿ ಶ್ರೀಗಳು ತಿಳಿಸಿದರು.
ಭದ್ರಾ ಜಲಾಶಯದಿಂದ 127 ಟಿಎಂಸಿ ನೀರು ವ್ಯರ್ಥವಾಗಿ ಹರಿದುಹೋಗುತ್ತಿದೆ.ಆದರೆ ಕೆರೆಗಳಿಗೆ ತುಂಬಿಸಲು ಬೇಕಾಗಿರುವ 1 ಟಿಎಂಸಿ ನೀರನ್ನು ಪಡೆಯಲಾಗುತ್ತಿಲ್ಲ ಇದಕ್ಕೆ ತಾಂತ್ರಿಕ ದೋಷ ಹಾಗೂ ಪೈಪ್ಲೈನ್ ಹೋಗಿರುವ ಜಾಗದಲ್ಲಿನ ರೈತರ ಅಸಹಕಾರವೇ ಕಾರಣ ಎಂದು ವಿಷಾದಿಸಿದರು.
ನೀರನ್ನು ಎಲ್ಲಾ ರೈತರು ಸಮನಾಗಿ ಹಂಚಿಕೊಂಡರೆ ಯಾವುದೇ ಸಮಸ್ಯೆಯು ಇರುವುದಿಲ್ಲ.ಆದರೆ ರೈತರು ಪರಸ್ಪರ ನಮಗೆ ಹೆಚ್ಚು ನೀರು ಎಂದು ಜಗಳವಾಡುತ್ತಿದ್ದರೆ,ಕೆರೆಗಳಿಗೆ ನೀರು ಬರುವುದು ಯಾವಾಗ ? ಕರೆಗಳಿಗೆ ನೀರು ಹೇಗೆ ತುಂಬುತ್ತದೆ ? ಎಂದು ಪ್ರಶ್ನಿಸಿದರು.
22 ಕೆರೆಗಳ ಯೋಜನೆಯ 2 ನೇ ಜಾಕ್ ವೆಲ್ ಇರುವ ಮಲ್ಲಶೆಟ್ಟಿಹಳ್ಳಿ ಬಳಿ ದೇವಸ್ಥಾನಕ್ಕೆ ಸೇರಿದ 16 ಎಕರೆ ಜಮೀನಿನ್ನು ಕೆರೆ ನಿರ್ಮಾಣ ಮಾಡಲು ಸಮ್ಮತಿಸಿದ್ದು,ಇದಕ್ಕಾಗಿ 5 ಕೋಟಿ ರೂಗಳನ್ನು ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು
ಬಿಡುಗಡೆ ಮಾಡುವ ಭರವಸೆಯನ್ನು ನೀಡಿದ್ದಾರೆ. ಮೊದಲನೇ ಜಾಕ್ ವೆಲ್ ಬಳಿ
ತಡೆಗೋಡೆಯನ್ನು ನಿರ್ಮಿಸಲು 5 ಕೋಟಿ ರೂಗಳನ್ನು ಸರ್ಕಾರದಿಂದ ಮಂಜೂರು ಮಾಡಿಸುವುದಾಗಿಯೂ ಹೇಳಿದ್ದಾರೆ.22 ಕೆರೆಗಳ ತಾಂತ್ರಿಕ ದೋಷ ಸರಿಪಡಿಸಲು ನಾವು ಶಿಫಾರಸ್ಸು ಮಾಡಿದ ಇಂಜಿನಿಯರ್ ನೇಮಕಕ್ಕೆ ಒಪ್ಪಿಗೆಯೂ ದೊರೆತಿರುವುದಾಗಿ ಶ್ರೀಗಳು ತಿಳಿಸಿದರು.
22 ಕೆರೆಗಳ ನ್ಯೂನತೆಯನ್ನು ಸರಿಪಡಿಸಲು ಜನಪ್ರತಿನಿದಿಗಳು ಒತ್ತಡ ತರಬೇಕು ಕೇವಲ ಹಾರ – ತುರಾಯಿ ಹಾಕಿಸಿಕೊಳ್ಳಲು ಸೀಮಿತರಾಗದೇ ಜನರ ಋಣದಲ್ಲಿ ನಾವಿದ್ದೇವೆ ಎಂಬ ಭಾವನೆ ಇರಬೇಕು ಎಂದು ಎಚ್ಚರಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮದ ಹಿರಿಯ ಮುಖಂಡ ಬೇತೂರು ಬಸಪ್ಪ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಜಿ.ಪಂ ಸದಸ್ಯ ಕೆ ಎಸ್. ಬಸವಂತಪ್ಪ, ಜಿ.ಪಂ ಮಾಜಿ ಅಧ್ಯಕ್ಷ ಮೆಳ್ಳೇಕಟ್ಟೆ ಚಿದಾನಂದ ಐಗೂರು,22ಕೆರೆ ನೀರಾವರಿ ಸಮಿತಿಯ ಅಧ್ಯಕ್ಷ ಡಾ.ಮಂಜುನಾಥ ಗೌಡ್ರು,ತಾ.ಪಂ ಸದಸ್ಯ ಶ್ರೀಮತಿ ಲಲಿತಮ್ಮ ಆನಂಪ್ಪ ಸೇರಿದಂತೆ ಇತರ ಮುಖಂಡರು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ1 day ago
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ2 days ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ