ದಿನದ ಸುದ್ದಿ
ಕೆರೆಯ ನೀರನ್ನು ಎಲ್ಲಾ ರೈತರು ಸಮನಾಗಿ ಹಂಚಿಕೊಳ್ಳಿ : ತರಳಬಾಳು ಶ್ರೀಗಳ ಕರೆ
ಸುದ್ದಿದಿನ,ದಾವಣಗೆರೆ : ಇಲ್ಲಿಗೆ ಸಮೀಪದ ಬೋರಗುಂಡನಹಳ್ಳಿಯಲ್ಲಿರುವ ಕೆರೆಯಲ್ಲಿ ಒಂದು ಹನಿನೀರು ಇಲ್ಲದಿರುವ ಬಗ್ಗೆ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರು ಆತಂಕ ವ್ಯಕ್ತ ಪಡಿಸಿದರು.
ಅವರು ಇಂದು ಬೋರಗೋಂಡನಹಳ್ಳಿಯಲ್ಲಿ ಶ್ರೀ ಹಾಲಸ್ವಾಮಿ,ಶ್ರೀ ಮರುಳಸಿದ್ದೇಶ್ವರ,ಶ್ರೀ ಚೌಡೇಶ್ವರಿ ದೇವಿಯ ಗೋಪುರಗಳ ಕಳಸಾರೋಹಣ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಬಸವನಾಳ್ ಸಮೀಪದ ರಾಂಪುರ ಕೆರೆಯು ಕೋಡಿ ಹರಿದ ನೀರು ವ್ಯರ್ಥವಾಗಿ ಹರಿಯುತ್ತಿರುವುದನ್ನು ತಡೆಗಟ್ಟಲು ,ಇಲ್ಲಿ ಸಂಗ್ರಹಗೊಂಡ ನೀರಿನಿಂದ ಪೈಪ್ ಲೈನ್ ಮೂಲಕ ಬೋರಗುಂಡನಹಳ್ಳಿಯಲ್ಲಿ ಕೆರೆಯನ್ನು ತುಂಬಿಸುವ ಯೋಜನೆ ಕೈಗೊಳ್ಳಲಾಗಿತ್ತು.ಆದರೆ ರಾಂಪುರ ಕೆರೆಯಿಂದ ಸಂಗ್ರಹವಾದ ನೀರು
ಪೈಪ್ ಲೈನ್ ಮೂಲಕ ಹರಿಸಲು ಸಾಧ್ಯವಾಗುವಂತೆ.ಪಂಪ್ ಹೌಸ್ ನಿರ್ಮಾಣ ಮಾಡುವ ಉದ್ದೇಶವಿದ್ದು,ಈ ಕಾರ್ಯಕ್ಕೆ ರೈತರೊಬ್ಬರು ಅಡ್ಡಿಪಡಿಸುತ್ತಿರುವ ಬಗ್ಗೆ ಗ್ರಾಮಸ್ಥರು ದೂರು ನೀಡಿದ್ದಾರೆ.ಈ ಬಗ್ಗೆ ಪರಿಶೀಲಿಸಿದ್ದು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸುವುದಾಗಿ ಶ್ರೀಗಳು
ತಿಳಿಸಿದರು.
22 ಕೆರೆಗಳ ಏತ ನೀರಾವರಿ ಸಮಿತಿ ಅಧ್ಯಕ್ಷ ಡಾ.ಮಂಜುನಾಥ್ ಗೌಡ್ರು,ಜಿ.ಪಂ ಸದಸ್ಯ ಬಸವಂತಪ್ಪ ಮತ್ತಿತರ ಮುಖಂಡರೊಡನೆ ತಾವು ಸ್ಥಳ ಪರಿಶೀಲನೆ ನಡೆಸಿದ್ದು ಎಲ್ಲರ ಸಲಹೆಗಳನ್ನು ಪಡೆಯುವುದಾಗಿ ಶ್ರೀಗಳು ತಿಳಿಸಿದರು.
ಭದ್ರಾ ಜಲಾಶಯದಿಂದ 127 ಟಿಎಂಸಿ ನೀರು ವ್ಯರ್ಥವಾಗಿ ಹರಿದುಹೋಗುತ್ತಿದೆ.ಆದರೆ ಕೆರೆಗಳಿಗೆ ತುಂಬಿಸಲು ಬೇಕಾಗಿರುವ 1 ಟಿಎಂಸಿ ನೀರನ್ನು ಪಡೆಯಲಾಗುತ್ತಿಲ್ಲ ಇದಕ್ಕೆ ತಾಂತ್ರಿಕ ದೋಷ ಹಾಗೂ ಪೈಪ್ಲೈನ್ ಹೋಗಿರುವ ಜಾಗದಲ್ಲಿನ ರೈತರ ಅಸಹಕಾರವೇ ಕಾರಣ ಎಂದು ವಿಷಾದಿಸಿದರು.
ನೀರನ್ನು ಎಲ್ಲಾ ರೈತರು ಸಮನಾಗಿ ಹಂಚಿಕೊಂಡರೆ ಯಾವುದೇ ಸಮಸ್ಯೆಯು ಇರುವುದಿಲ್ಲ.ಆದರೆ ರೈತರು ಪರಸ್ಪರ ನಮಗೆ ಹೆಚ್ಚು ನೀರು ಎಂದು ಜಗಳವಾಡುತ್ತಿದ್ದರೆ,ಕೆರೆಗಳಿಗೆ ನೀರು ಬರುವುದು ಯಾವಾಗ ? ಕರೆಗಳಿಗೆ ನೀರು ಹೇಗೆ ತುಂಬುತ್ತದೆ ? ಎಂದು ಪ್ರಶ್ನಿಸಿದರು.
22 ಕೆರೆಗಳ ಯೋಜನೆಯ 2 ನೇ ಜಾಕ್ ವೆಲ್ ಇರುವ ಮಲ್ಲಶೆಟ್ಟಿಹಳ್ಳಿ ಬಳಿ ದೇವಸ್ಥಾನಕ್ಕೆ ಸೇರಿದ 16 ಎಕರೆ ಜಮೀನಿನ್ನು ಕೆರೆ ನಿರ್ಮಾಣ ಮಾಡಲು ಸಮ್ಮತಿಸಿದ್ದು,ಇದಕ್ಕಾಗಿ 5 ಕೋಟಿ ರೂಗಳನ್ನು ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು
ಬಿಡುಗಡೆ ಮಾಡುವ ಭರವಸೆಯನ್ನು ನೀಡಿದ್ದಾರೆ. ಮೊದಲನೇ ಜಾಕ್ ವೆಲ್ ಬಳಿ
ತಡೆಗೋಡೆಯನ್ನು ನಿರ್ಮಿಸಲು 5 ಕೋಟಿ ರೂಗಳನ್ನು ಸರ್ಕಾರದಿಂದ ಮಂಜೂರು ಮಾಡಿಸುವುದಾಗಿಯೂ ಹೇಳಿದ್ದಾರೆ.22 ಕೆರೆಗಳ ತಾಂತ್ರಿಕ ದೋಷ ಸರಿಪಡಿಸಲು ನಾವು ಶಿಫಾರಸ್ಸು ಮಾಡಿದ ಇಂಜಿನಿಯರ್ ನೇಮಕಕ್ಕೆ ಒಪ್ಪಿಗೆಯೂ ದೊರೆತಿರುವುದಾಗಿ ಶ್ರೀಗಳು ತಿಳಿಸಿದರು.
22 ಕೆರೆಗಳ ನ್ಯೂನತೆಯನ್ನು ಸರಿಪಡಿಸಲು ಜನಪ್ರತಿನಿದಿಗಳು ಒತ್ತಡ ತರಬೇಕು ಕೇವಲ ಹಾರ – ತುರಾಯಿ ಹಾಕಿಸಿಕೊಳ್ಳಲು ಸೀಮಿತರಾಗದೇ ಜನರ ಋಣದಲ್ಲಿ ನಾವಿದ್ದೇವೆ ಎಂಬ ಭಾವನೆ ಇರಬೇಕು ಎಂದು ಎಚ್ಚರಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮದ ಹಿರಿಯ ಮುಖಂಡ ಬೇತೂರು ಬಸಪ್ಪ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಜಿ.ಪಂ ಸದಸ್ಯ ಕೆ ಎಸ್. ಬಸವಂತಪ್ಪ, ಜಿ.ಪಂ ಮಾಜಿ ಅಧ್ಯಕ್ಷ ಮೆಳ್ಳೇಕಟ್ಟೆ ಚಿದಾನಂದ ಐಗೂರು,22ಕೆರೆ ನೀರಾವರಿ ಸಮಿತಿಯ ಅಧ್ಯಕ್ಷ ಡಾ.ಮಂಜುನಾಥ ಗೌಡ್ರು,ತಾ.ಪಂ ಸದಸ್ಯ ಶ್ರೀಮತಿ ಲಲಿತಮ್ಮ ಆನಂಪ್ಪ ಸೇರಿದಂತೆ ಇತರ ಮುಖಂಡರು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ5 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!