Connect with us

ದಿನದ ಸುದ್ದಿ

ಬೆಳೆ ವಿಮೆ: ಬಿಹಾರಕ್ಕೆ ತರಳಬಾಳು ಶ್ರೀಗಳ ಆಶಯದಂತೆ ಅಧ್ಯಯನ ತಂಡ ಕಳುಹಿಸಲು ಸರ್ಕಾರದ ಒಪ್ಪಿಗೆ

Published

on

ಸುದ್ದಿದಿನ,ಬೆಂಗಳೂರು: ಬೆಳೆ ವಿಮೆಗೆ ಸಂಬಂಧಿಸಿದಂತೆ ರೈತಾಪಿ ವರ್ಗಕ್ಕೆ ಅನ್ಯಾಯವಾಗಿದೆ ಎಂಬ ಕೂಗಿಗೆ ಸ್ಪಂದಿಸಿರುವ ಕೃಷಿ ಸಚಿವ ಶಿವಶಂಕರ ರೆಡ್ಡಿ, ಬಿಹಾರದಲ್ಲಿ ಅನುಷ್ಠಾನದಲ್ಲಿರುವ ರೈತಸ್ನೇಹಿ ವಿಮೆ ಯೋಜನೆ ಅಧ್ಯಯನಕ್ಕೆ ಅಧಿಕಾರಿಗಳ ತಂಡವನ್ನು ಅಲ್ಲಿಗೆ ಕಳುಹಿಸುವ ಭರವಸೆ ನೀಡಿದರು.

ಆರ್‌.ಟಿ.ನಗರದ ತರಳಬಾಳು ಕೇಂದ್ರದಲ್ಲಿ ಸಿರಿಗೆರೆ ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಬುಧವಾರ ನಡೆದ ವಿಶೇಷ ಸಭೆಯಲ್ಲಿ ಶಾಸಕರು, ಅಧಿಕಾರಿಗಳು, ರೈತ ಮುಖಂಡರ ಜತೆ ಚರ್ಚಿಸಿದ ಬಳಿಕ ಸಚಿವರು ಈ ನಿರ್ಧಾರ ಪ್ರಕಟಿಸಿದರು. ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆಯನ್ನು ರೈತರ ಅನುಕೂಲಕ್ಕಾಗಿ ಜಾರಿಗೆ ತರಲಾಗಿದೆ. ಆದರೆ, ಮಾರ್ಗದರ್ಶಿ ಸೂತ್ರಗಳ ಗೊಂದಲದಿಂದ ರೈತರಿಗೆ ಸರಿಯಾಗಿ ಪರಿಹಾರ ಸಿಗುತ್ತಿಲ್ಲ. ವಿಮಾ ಕಂಪನಿಗಳು ಕಠಿಣ ನಿಯಮ ರೂಪಿಸಿ ಪರಿಹಾರ ನೀಡಲು ಅಡ್ಡಿಪಡಿಸುತ್ತಿದೆ ಎಂಬ ಭಾವನೆ ರೈತರಲ್ಲಿ ಮನೆ ಮಾಡಿದೆ ಎಂದು ಶಾಸಕರು ತಮ್ಮ ಆಕ್ಷೇಪ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಬೆಳೆ ನಷ್ಟ ಆಗಿರುವ ಕಡೆ ರೈತರಿಗೆ ಪರಿಹಾರ ಸಿಕ್ಕಿದೆ. ಕೆಲವೆಡೆ ತಾಂತ್ರಿಕ ಕಾರಣದಿಂದ ಪರಿಹಾರ ಪ್ರಕಟಿಸಿಲ್ಲ. ಇಲಾಖೆ ಅಥವಾ ವಿಮಾ ಕಂಪನಿಗಳಿಂದ ತಪ್ಪಾಗಿದ್ದಲ್ಲಿ ಅದನ್ನು ಸರಿಪಡಿಸಿ ನ್ಯಾಯ ದೊರಕಿಸಿಕೊಡಲಾಗುವುದೆಂದು ಭರವಸೆ ನೀಡಿದರು.

ರೈತರ ಕಷ್ಟಕ್ಕೆ ಸ್ಪಂದನೆ ನೀಡಿ: ತರಳಬಾಳು ಶ್ರೀ

ಬೆಳೆ ವಿಮೆ ಬಗ್ಗೆ ರೈತರು ಆತಂಕ ವ್ಯಕ್ತಪಡಿಸಿರುವ ಜತೆಗೆ ಯೋಜನೆಯಲ್ಲಿನ ಲೋಪ-ದೋಷಗಳನ್ನು ಸ್ವಾಮೀಜಿ ಗಮನಕ್ಕೆ ತರಲಾಯಿತು. ಇದಕ್ಕೆ ಪ್ರತಿಕ್ರಿಯಿಸಿ ”ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆ ಆಗದಂತೆ ಸರಕಾರ ಎಚ್ಚರ ವಹಿಸಬೇಕು. ಕಠಿಣ ನಿಯಮಗಳಿದ್ದಲ್ಲಿ ಅವುಗಳನ್ನು ಸರಳೀಕರಿಸಬೇಕು,” ಎಂದು ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರು ಕಿವಿಮಾತು ಹೇಳಿದರು.

ಸಚಿವರಿಗೆ ನಷ್ಟದ ವಿವರಣೆ ಹಸ್ತಾಂತರ

ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಶೇ.75ರಷ್ಟು ಬೆಳೆ ನಷ್ಟವಾಗಿದೆ. ಇದಕ್ಕೆ ಪ್ರತಿಯಾಗಿ ರೈತರಿಗೆ ಸಮರ್ಪಕವಾದ ಪರಿಹಾರ ದೊರೆತಿಲ್ಲ. ಚಿತ್ರದುರ್ಗ ಜಿಲ್ಲೆಯಲ್ಲಿ 111 ಕೋಟಿ ರೂ. ಹಾಗೂ ದಾವಣಗೆರೆಯಲ್ಲಿ 70 ಕೋಟಿ ರೂ. ಕಂತಿನ ಮೊತ್ತ ಪಾವತಿಯಾಗಿದೆ. ಆದರೆ, ಪರಿಹಾರ ಕ್ರಮವಾಗಿ 22 ಕೋಟಿ ರೂ. ಹಾಗೂ 11 ಕೋಟಿ ರೂ. ಮಾತ್ರ ದೊರೆತಿದೆ. ಈ ತಪ್ಪು ಸರಿಪಡಿಸಲು ಎರಡೂ ಜಿಲ್ಲೆಗಳಿಗೆ ಅಧ್ಯಯನ ತಂಡ ಕಳುಹಿಸಿ ವರದಿ ತರಿಸಿಕೊಳ್ಳುವುದಾಗಿ ಸಚಿವರು ಪ್ರತಿಕ್ರಿಯಿಸಿದರು.

ಸಂಸದರಾದ ಜಿ.ಎಂ.ಸಿದ್ದೇಶ್ವರ್‌, ಎನ್‌.ಚಂದ್ರಪ್ಪ, ಶಿವಕುಮಾರ ಉದಾಸಿ, ಶಾಸಕರಾದ ಶ್ರೀರಾಮುಲು, ಸಿ.ಟಿ.ರವಿ, ಗೂಳಿಹಟ್ಟಿ ಶೇಖರ್‌, ರಘುಮೂರ್ತಿ, ವಿರೂಪಾಕ್ಷಪ್ಪ, ರಾಮಚಂದ್ರ, ಎಂ.ಚಂದ್ರಪ್ಪ, ಪೂರ್ಣಿಮಾ ಶ್ರೀನಿವಾಸ್‌, ಲಿಂಗಪ್ಪ, ಬೆಳ್ಳಿ ಪ್ರಕಾಶ್‌, ಮಾಜಿ ಸಂಸದ ಜನಾರ್ದನಸ್ವಾಮಿ, ರೈತ ಮುಖಂಡ ಎಚ್‌.ಆರ್‌.ಬಸವರಾಜಪ್ಪ, ಕೃಷಿ ಕಾರ್ಯದರ್ಶಿ ಎಂ.ಮಹೇಶ್ವರರಾವ್‌, ನಿರ್ದೇಶಕ ಬಿ.ವೈ.ಶ್ರೀನಿವಾಸ್‌ ಮತ್ತಿತರರಿದ್ದರು.

ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರ

  • ಬೆಳೆ ವಿಮೆ ಅಧ್ಯಯನಕ್ಕಾಗಿ ಬಿಹಾರಕ್ಕೆ ಅಧಿಕಾರಿಗಳ ತಂಡ ಕಳುಹಿಸಲು ಒಪ್ಪಿಗೆ.
  • ಹಾವೇರಿ, ಗದಗ ಜಿಲ್ಲೆಯಲ್ಲಿ ಭತ್ತ ಹಾಗೂ ಅಕ್ಕಿ ಎಂಬ ಮಾಹಿತಿ ಪರಿಹಾರದ ಕಾಲಂನಲ್ಲಿ ತಪ್ಪಾಗಿ ನಮೂದಾಗಿದ್ದು, ಸರಿಪಡಿಸಲು ಒತ್ತಾಯ.
  • ಪಡಿತರ ಮೂಲಕ ಮೆಕ್ಕೆಜೋಳ ವಿತರಣೆಗೆ ಕ್ರಮಕ್ಕೆ ಮನವಿ.
  • ಪಡಿತರದಡಿ ಮೆಕ್ಕೆಜೋಳ ವಿತರಿಸದಿದ್ದಲ್ಲಿ ಪ್ರತಿ ರೈತನ 10 ಕ್ವಿಂಟಾಲ್‌ ಉತ್ಪನ್ನದ ಮೊತ್ತ ಬ್ಯಾಂಕ್‌ ಖಾತೆಗೆ ಜಮೆ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending