ದಿನದ ಸುದ್ದಿ
ಹುಬ್ಬಳ್ಳಿ : 10 ಕೋಟಿ ವೆಚ್ಚದಲ್ಲಿ ತರಳಬಾಳು ಸಾಂಸ್ಕೃತಿಕ ಕೇಂದ್ರ ನಿರ್ಮಾಣದ ಸಂಕಲ್ಪ
ಹುಬ್ಬಳ್ಳಿ, ಉಣಕಲ್ : ಹಿರಿಯ ಶ್ರೀ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಗಳವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಶಿಕ್ಷಣ ಸಂಸ್ಥೆಗಳು ಮುನ್ನಡೆಯುತ್ತಿದ್ದು , ಗ್ರಾಮೀಣ ಭಾಗದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳವರು ಹೇಳಿದರು.
ಇಲ್ಲಿನ ಉಣಕಲ್ ನ ಟೀಚರ್ಸ್ ಕಾಲೋನಿಯ
ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ದೆಯ ಆಶ್ರಯದ ಆವರಣದಲ್ಲಿ ಶಾಲಾ -ಕಾಲೇಜಿನ ಕಟ್ಟಡದ ಲೋಕಾರ್ಪಣೆ ಮತ್ತು ವಾರ್ಷಿಕೋತ್ಸವದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಹಿರಿಯ ಶ್ರೀಗಳು ಹುಬ್ಬಳ್ಳಿಯಲ್ಲಿ ಈ ಹಿಂದೆ ಜರುಗಿದ್ದ ತರಳಬಾಳು ಹುಣ್ಣಿಮೆ ಮಹೋತ್ಸವದ ಸವಿನೆನಪಿಗೆ ಈ ಶಾಲೆ ಮತ್ತು ಕಾಲೇಜಿನ ಕಟ್ಟಡ ನಿರ್ಮಾಣ ಮಾಡಲಾಗಿದೆ. ಈ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕೇಂಬುದೇ ಮೂಲ ಉದ್ದೇಶವಾಗಿದೆ.
ಖಾಲಿ ಇರುವ ಜಾಗದಲ್ಲಿ ಉನ್ನತ ಶಿಕ್ಷಣಕ್ಕೆ ಬೇಕಾದ ಕಟ್ಟಡ ನಿರ್ಮಾಣ ಮಾಡಲಾಗುಲುದು.
ಇಲ್ಲಿನ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದ ಪಕ್ಕದಲ್ಲಿ ಸುಮಾರು 10 ಕೋಟಿ ರೂಗಳ ವೆಚ್ಚದಲ್ಲಿ ಅತ್ಯಾಧುನಿಕ ತರಳಬಾಳು ಸಾಂಸ್ಕೃತಿಕ ಕೇಂದ್ರ ನಿರ್ಮಾಣ ಮಾಡುವ ಆಶಯ ನಮ್ಮದಾಗಿದೆ ಎಂದರು.
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಐತಿಹಾಸಿಕ ಹಳೇಬೀಡಿನಲ್ಲಿ 2019 ರ ಫೆಬ್ರುವರಿಯಲ್ಲಿ ನಡೆಯಬೇಕಾಗಿದ್ದ ತರಳಬಾಳು ಹುಣ್ಣಿಮೆ ಮಹೋತ್ಸವವನ್ನು ಮೂಂದೂಡಲಾಗಿದ್ದು ,ಆ ಭಾಗದ ಕೆರೆಗಳಗೆ ನೀರು ತುಂಬಿಸುವ ಯೋಜನೆ ರೂಪಿಸಿದ್ದು ಕೆರೆಗಳಿಗೆ ನೀರು ಹರಿದ ನಂತರ ತರಳಬಾಳು ಹುಣ್ಣಿಮೆ ಮಹೋತ್ಸವವನ್ನು ಆಚರಿಸಲಾಗುವುದು ಸಾಂಕೇತಿಕವಾಗಿ ಸಿರಿಗೆರೆಯಲ್ಲಿ ಸರಳವಾಗಿ ತರಳಬಾಳು ಹುಣ್ಣಿಮೆ ಮಹೋತ್ಸವ ಆಚರಿಸಲಾಗುವುದು ಎಂದರು.
ಮಾಜಿ ಸಚಿವ ಎಸ್. ಎಸ್. ಪಾಟೀಲ ಮಾತನಾಡಿ ರಾಜ್ಯ ಸರ್ಕಾರ ರೂಪಿಸಿರುವ ಕೆಲ ಶಿಕ್ಷಣ ನೀತಿಗಳು ಅವೈಜ್ಞಾನಿಕವಾಗಿದ್ದು ಇದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಸಂಕಷ್ಟಕ್ಕೀಡುಮಾಡಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡುತ್ತಿಲ್ಲ, ಶಿಕ್ಷಕರ ಕೊರತೆಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತಿಲ್ಲ ಈ ವಿಚಾರವನ್ನು ಮುಖ್ಯ ಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಹಾಗೂ ಹಿಂದಿನ ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ನವರ ಗಮನಕ್ಕೆ ತಂದರೂ ಯಾವುದೇ ರೀತಿಯ ಪ್ರಯೋಜನ ಆಗಿಲ್ಲ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ ಬಲವರ್ಧನೆಗೆ ಬೆಳಗಾವಿ ಅಧಿವೇಶನದಲ್ಲಿ ನಿರ್ಧಾರ ಕೈಗೊಳ್ಳದಿದ್ದರೆ ಹೋರಾಟ ಅನಿವಾರ್ಯವಾಗಲಿದೆ ಎಂದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಗ್ರಾಮೀಣ ಭಾಗದ ಶಿಕ್ಷಣಕ್ಕೆ ಒತ್ತು ನೀಡಿ ಶ್ರಮಿಸುತ್ತಿರುವ ತರಳಬಾಳು ಶಿಕ್ಷಣ ಸಂಸ್ಥೆಯ ಕಾಳಜಿ ಶ್ಲಾಘನೀಯವಾಗಿದೆ.ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆದರೆ ಮಾತ್ರ ಉದ್ಯೋಗ ಎನ್ನುವ ಮನಸ್ಥಿತಿ ಜನರಲ್ಲಿ ಮೂಡಿದ್ದು,ಇದರಿಂದ ಹೊರ ಬರಬೇಕಾಗಿದೆ. ನಮ್ಮ ನಾಡು ನುಡಿಗೆ ಮೊದಲ ಆದ್ಯತೆ ನೀಡಬೇಕು ಎಂದರು. ಮೂರು ಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ದೇಶದ ಅಭಿವೃದ್ಧಿಗೆ ಉತ್ತಮ ಶಿಕ್ಷಣ ಪ್ರಮುಖವಾಗಿದೆ . ಉತ್ತಮ ಜ್ಞಾನ ಮತ್ತು ಶಿಕ್ಷಣ ವ್ಯವಸ್ಥೆ ಹೊಂದಿದ ದೇಶ ಜಗತ್ತಿನ ಗಮನ ಸೆಳೆಯುವಲ್ಲಿ ಯಶಸ್ವಿಯಾಗುತ್ತದೆ ,
ತರಳಬಾಳು ಶಿಕ್ಷಣ ಸಂಸ್ಥೆ ಉತ್ತರ ಕರ್ನಾಟಕ ಭಾಗದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಬೇಕು ಎಂದು ಹೇಳಿದರು.ತರಳಬಾಳು ಶಿಕ್ಷಣ ಸಂಸ್ಥೆಗೆ ಹೋಗುವ ಮಾರ್ಗವನ್ನು ತರಳಬಾಳು ಮಾರ್ಗ ಹಾಗೂ ಹಳೆಯ ವಿದ್ಯಾರ್ಥಿ ಸಂಘಕ್ಕೆ ಶ್ರೀಗಳು ಚಾಲನೆ ನೀಡಿದರು.
ಸ್ಥಳೀಯ ಸಲಹಾ ಸಂಸ್ಥೆಯ ಅಧ್ಯಕ್ಷ ಎಸ್.ಪಿ.ಸಂಶಿ ಅಧ್ಯಕ್ಷತೆ ವಹಿಸಿದ್ದರು. ಮಣಕವಾಡ ಶ್ರೀ ಸಿದ್ದರಾಮ ದೇವರು, ಶಾಸಕರಾದ ಶ್ರೀ ಬಸವರಾಜ ಬೊಮ್ಮಾಯಿ, ಅಮೃತ ದೇಸಾಯಿ, ಪಾಲಿಕೆ ಸದಸ್ಯ ಅಶ್ವಿನಿ ಮಜ್ಜಿಗೆ ಮಾತನಾಡಿದರು.
ಬಿ ಇ ಒ ಎಸ್. ಎಂ ಹುಡೇದಮನಿ,ಬಿ.ಎಲ್ ಶಿವಳ್ಳಿ,ರಮೇಶ್ ಕೊಪ್ಪದ,ಎಸ್.ಎಂ ಸೋಮನಗೌಡರು,ಎಂ.ಎ ಬಡ್ನಿ,ಐ.ಬಿ ಅಂಚಟಗೇರಿ,ಐ.ಬಿ ಪಾಟೀಲ, ಕಲ್ಲನಗೌಡ ಪಾಟೀಲ, ಬಿ.ಜಿ ಶಿವಕುಮಾರ ಗೌಡ, ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ,ಆರ್.ಕೆ. ಕೋಕಾಟೆ,ಪ್ರೌಢಶಾಲೆ ಐ ಜಿ ಹಿರೇಗೌಡರ ಪ ಪೂ ಕಾಲೇಜಿನ ಪದಾಧಿಕಾರಿಗಳು ಇನ್ನಿತರರು ಇದ್ದರು. ಓಂ ನಗರ ಯೋಗಬಂಧುಗಳು ಪ್ರಾರ್ಥನೆ ಸಲ್ಲಿಸಿದರು. ಉಪನ್ಯಾಸಕ ವಿರೇಶ್ ಪಾಟೀಲ ನಿರೂಪಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401