ದಿನದ ಸುದ್ದಿ
ತರಳಬಾಳು ಶ್ರೀ ಶಿವಕುಮಾರ ಶಿವಾಚಾರ್ಯ ಶ್ರೀಗಳ ಶ್ರದ್ಧಾಂಜಲಿ : ದಾಸೋಹಕ್ಕೆ ಮಲ್ಲನಾಯಕನಹಳ್ಳಿಯಲ್ಲಿ ನಾಳೆ ಅಕ್ಕಿ ಸಮರ್ಪಣೆ
![](https://suddidina.com/wp-content/uploads/2018/09/Taralabalu-suddidina-1.jpg)
ಸುದ್ದಿದಿನ ಡೆಸ್ಕ್ : ನಾಡಿನ ಸಾಮಾಜಿಕ , ಶೈಕ್ಷಣಿಕ,ಧಾರ್ಮಿಕ ಕ್ಷೇತ್ರದ ದಿವ್ಯಚೇತನ , ಲೋಕದ ತರಳರಬಾಳಿನ ಮಹಾಬೆಳಗು, ಶ್ರೀ ಮದ್ದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 26 ನೆಯ ಶ್ರದ್ಧಾಂಜಲಿ ಸಮಾರಂಭವು ದಿನಾಂಕ 20-09-2018 ರಿಂದ 24-09-2018 ರವರೆಗೆ ಜರುಗಲಿದೆ.
ಲಕ್ಷಾಂತರ ಶಿಷ್ಯ ಸಮುದಾಯ ಪಾಲ್ಗೊಂಡು ಶ್ರೀ ಗುರು ಕೃಪೆ ಪಡೆಯುವ ಈ ದಿನದ ದಾಸೋಹ ಕೈಂಕರ್ಯಕ್ಕೆ ಹರಿಹರ ತಾಲ್ಲೂಕಿನ ಮಲ್ಲನಾಯಕನಹಳ್ಳಿ ವ್ಯಾಪ್ತಿಯ ಶಿಷ್ಯಸಮಾಜ ನೂರಾರು ಕ್ವಿಂಟಲ್ ಅಕ್ಕಿಯನ್ನು ನಾಳೆಯ 14 ರ ಶುಕ್ರವಾರ ಸಮರ್ಪಿಸಲಿದ್ದಾರೆ.
ನಾಡಿಗೆ ಬರ ಬಂದರೂ ತರಳಬಾಳು ಮಠದ ಭಕ್ತರ ಭಕ್ತಿಗೆ ಎಂದೂ ಬರ ಬರುವುದಿಲ್ಲ ಎನ್ನುವ ಶ್ರೀ ಗಳ ಆಶೀರ್ವಾಣಿಗೆ ಸಾಕ್ಷಿ ಎಂಬಂತೆ 2013 ರಿಂದಲೂ ಹರಿಹರ ತಾಲ್ಲೂಕಿನಲ್ಲಿ ಶ್ರದ್ಧಾಂಜಲಿ ಸಮಾರಂಭದ ಪೂರ್ವದಿ ಅಕ್ಕಿ ಸಮರ್ಪಿಸುವ ಸಂಪ್ರದಾಯ ಆರಂಭವಾಗಿದ್ದು, ಹೊಳೆ ಸಿರಿಗೆರೆ, ಕುಂಬಳೂರು,ಮಲೇಬೆನ್ನೂರು,ಹನಗವಾಡಿಯಲ್ಲಿ ಈ ಕಾರ್ಯಕ್ರಮಗಳು ಈ ಹಿಂದಿನ ವರ್ಷಗಳಲ್ಲಿ ನಡೆದಿದ್ದು ಇತಿಹಾಸ. ಬೇಡಬಾರದು ಜಂಗಮ, ಬೇಡಿಸಿಕೊಳ್ಳಬಾರದು ಭಕ್ತ ಎಂಬ ಅಣ್ಣನವರ ವಾಣಿಗನುಗುಣವಾಗಿ ಮಲ್ಲನಾಯಕನಹಳ್ಳಿ ಹಾಲುಮತದ ಸಮಾಜದವರು ಸೇರಿದಂತೆ ಇನ್ನಿತರ ಸಮಾಜದವರ ಸಹಕಾರದಿಂದ ಅಕ್ಕಿ ಸಂಗ್ರಹಿಸಿ ಮಹಾಗುರುವಿನ ದಾಸೋಹ ಸೇವೆಗೆ ಎಲ್ಲರೂ ಒಟ್ಟಾಗಿ ಕಾರ್ಯಮಗ್ನರಾಗಿ ಈ ಬಾರಿ ಮಲ್ಲನಾಯಕನಹಳ್ಳಿಯಲ್ಲಿ ಆಯೋಜಿಸಿರುವ ಅಕ್ಕಿಯ ಭಕ್ತಿ ಸಮರ್ಪಣೆ ಕಾರ್ಯಕ್ರಮ ಅರ್ಥಪೂರ್ಣವಾಗಿದೆ.
ಇದೇ ಪ್ರಥಮ ಬಾರಿಗೆ ಈ ಗ್ರಾಮಕ್ಕೆ ಪುರ ಪ್ರವೇಶ ಮಾಡುತ್ತಿರುವ ಪರಮಪೂಜನೀಯ ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ೧೧೦೮ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ಸಾನ್ನಿಧ್ಯ ಮುಖೇನ ತನು ಮನ ಧನದ ಭಕ್ತಿಯನ್ನು ಅರ್ಪಿಸಲಿದ್ದಾರೆ.
ಈ ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜನೀಯ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಶ್ರೀಗಳವರು ,ಕನಕ ಗುರುಪೀಠದ ಶ್ರೀ ಗುರುವರ್ಯರಾದ ಶ್ರೀ ನಿರಂಜಾನಂದಪುರಿ ಸ್ವಾಮೀಜಿಯವರು ವಹಿಸಲಿದ್ದಾರೆ. ಪೂಜ್ಯ ತ್ರಯರನ್ನು ಒಂದೇ ಸಾರೋಟಿನಲ್ಲಿ ಮೆರವಣಿಗೆಯ ಮೂಲಕ ವೇದಿಕೆಗೆ ಕರೆತರುವದರ ಜೊತೆ ಜಾತ್ಯಾತೀತ ಸಹಬಾಳ್ವೆ ಯಡಿ ಸಮಾನತೆಯಿಂದ ಬದುಕುವ ಸಂದೇಶ ಸಾರುವದಕ್ಕೆ ಮಲ್ಲನಾಯಕನಹಳ್ಳಿ ಸಾಕ್ಷಿಯಾಗಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರಿಹರ ತಾಲ್ಲೂಕು ಸಾಧು ಸಮಾಜದ ಅಧ್ಯಕ್ಷ ಬಣಕಾರ ವಿರೂಪಾಕ್ಷಪ್ಪ ವಹಿಸಲಿದ್ದು, ಶ್ರೀ ಮದ್ ಸಾಧು ಸದ್ದರ್ಮ ಸಮಾಜದ ಅಧ್ಯಕ್ಷರಾದ ಶರಣ ಕೆ.ಆರ್ ಜಯದೇವಪ್ಪನವರು ಅಕ್ಕಿ ಸಮರ್ಪಣಾ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ
ಸಾಹಿತಿ ಶರಣ ಶಾಂತಗಂಗಾಧರ್ ಉಪನ್ಯಾಸ ನೀಡಲಿದ್ದು,ಸಂಸದರಾದ ಶರಣ ಜಿ.ಎಂ ಸಿದ್ದೇಶ್ವರ, ಶಾಸಕರು ಹಾಗೂ ಮಾಜಿ ಸಚಿವರಾದ ಡಾ.ಶಾಮನೂರು ಶಿವಶಂಕರಪ್ಪ ,ಹರಿಹರ ಶಾಸಕ ಶರಣ ರಾಮಪ್ಪ ,ಮಾಜಿ ಶಾಸಕರಾದ ಬಿ.ಪಿ.ಹರಿಶ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಸಾವಿರಾರು ಶರಣ ಬಂಧುಗಳು ಸಾಕ್ಷಿಯಾಗಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್ |9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ5 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ3 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!
-
ದಿನದ ಸುದ್ದಿ3 days ago
ದಾವಣಗೆರೆ | ರೈತ ಮುಖಂಡರೊಂದಿಗೆ ಸಭೆ ; ಕಾಡಾ ಸಭೆ ಶೀಘ್ರ, ಕಾಲುವೆಗೆ ನೀರು ಬಿಡಲು ದಿನಾಂಕ ನಿಗದಿ : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್