ದಿನದ ಸುದ್ದಿ
ತರಳಬಾಳು ಶ್ರೀ ಶಿವಕುಮಾರಶ್ರೀಗಳ ಶ್ರದ್ಧಾಂಜಲಿ : ಮಲ್ಲನಾಯಕನಹಳ್ಳಿಯಲ್ಲಿ ಜರುಗಿದ ಅಕ್ಕಿ ಸಮರ್ಪಣೆಯ ಸಮಾರಂಭ

ಸುದ್ದಿದಿನ ಡೆಸ್ಕ್ : ಲೋಕದ ತರಳರ ಬಾಳಿನ ಆರಾಧ್ಯ ದೈವವಾದ ತರಳಬಾಳು ಗುರು ಪರಂಪರೆಯ 20 ನೇ ಪೀಠದ ಅಧಿಪತಿಗಳಾಗಿ ಪೀಠವು ಸೇವೆಯ ಸಾಧನ ಎಂಬಂತೆ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ನಾಲ್ಕು ದಶಕಗಳ ಅಹರ್ನಿಶಿ ತಪೋನಿಷ್ಟರಂತೆ ಕಾರ್ಯಮಗ್ನರಾಗಿ ಬಿದ್ದ ಸಮಾಜವನ್ನೇ ಎದ್ದು ನಿಲ್ಲಿಸಿದ ಮಹಾಬೆಳಗಾಗಿ ಅಸಂಖ್ಯಾತ ಶಿಷ್ಯರ ಹೃದಯದ ನಿತ್ಯ ಪೂಜನೀಯಸಿಂಹಸಾನಾಧೀಶರಾಗಿವಿರಾಜಮಾನರಾಗಿರುವ ಸ್ಮರಣೀಯ ಪರಮಪೂಜನೀಯ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯಮಹಾಸ್ವಾಮೀಜಿಯವರ 26 ನೇ ಶ್ರದ್ಧಾಂಜಲಿಯ ಸಮಾರಂಭ ಇದೇ 20 ರಿಂದ 24 ರವರೆಗೆ ಸಿರಿಗೆರೆಯಲ್ಲಿ ಜರುಗಲಿದೆ.
ಈ ಕಾರ್ಯಕ್ರಮದಿ ಆಗಮಿಸುವ ಲಕ್ಷಾಂತರ ಶಿಷ್ಯರ ದಾಸೋಹ ಪ್ರಸಾದ ಸೇವೆಗೆ ಶ್ರೀ ಮಠದ ಅಭಿಮಾನಿ ಶಿಷ್ಯ ಸಮಾಜ ತನು-ಮನ-ಧನ-ದವಸ-ಧಾನ್ಯ ಅರ್ಪಿಸುವ ಪ್ರತೀತಿ, ಸಂಪ್ರದಾಯವೆಂಬಂತೆ ಕಳೆದ ಇಪ್ಪತ್ತೈದು ವರ್ಷಗಳಿಂದಲೂ ನಡೆಯುತ್ತಿದೆ. ಈ ವರ್ಷದ ಶ್ರದ್ಧಾಂಜಲಿಯ ಸಮಾರಂಭಕ್ಕೆ ಈಗಾಗಲೇ ಹಲವಾರು ತಾಲ್ಲೂಕಿನ ಶ್ರದ್ದಾಳು ಶಿಷ್ಯರು ಭಕ್ತಿಯನ್ನು ಸೇವೆಯನ್ನು ಶ್ರೀಮಠಕ್ಕೆ ಅರ್ಪಿಸಿದ್ದಾರೆ.ಇದಕ್ಕೆ ಮತ್ತೊಂದು ಸೇರ್ಪಡೆ ಎನ್ನುವಂತೆ ಹರಿಹರ ತಾಲ್ಲೂಕಿನ ಮಲ್ಲನಾಯಕನಹಳ್ಳಿಯ ಸಮಸ್ತ ಸಮಾಜ ಬಾಂಧವರು ಮಹಾಗುರುವಿನ ಪುಣ್ಯ ಸ್ಮರಣೆಗೆ ನೂರಾರು ಕ್ವಿಂಟಲ್ ಅಕ್ಕಿಯನ್ನು ಸಮರ್ಪಿಸುವ ಮೂಲಕ ನಾಡಿಗೆ ಬರ ಬಂದಿರಬಹುದು ಆದರೆ ತರಳಬಾಳು ಮಠದ ಶಿಷ್ಯರ ಭಕ್ತಿಗೆ ಎಂದೂ ಬರ ಬರುವುದಿಲ್ಲ ಎಂಬ ಶ್ರೀ ಗುರುವಾಣಿಯನ್ನು ಮತ್ತೊಮ್ಮೆ ಉನ್ನತೀಕರಿಸಿದ್ದಾರೆ.
ಪರಮ ಪೂಜನೀಯ ಶ್ರೀ ತರಳಬಾಳು ಜಗದ್ಗುರು ೧೧೦೮ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರನ್ನು ಅತ್ಯಂತ ಶ್ರದ್ದಾಭಕ್ತಿಯ ಮೂಲಕ ಪ್ರವೇಶ ಮಾಡಿಕೊಂಡು, ಗ್ರಾಮೀಣ ಕಲೆಗಳಾದ ವೀರಗಾಸೆಯ ಶಿವಸ್ತುತಿಯಲ್ಲಿ, ಭಜನೆಯ ಭಕ್ತಿಯ ಪರಾಕಾಷ್ಠೆಯಲ್ಲಿ ,ಸುಮಂಗಲಿಯರ ಪೂರ್ಣ ಕುಂಭದ ಸ್ವಾಗತದಿ ಶ್ರೀ ಗಳವರನ್ನು ಸ್ವಾಗತಿಸಿದ ದೃಶ್ಯ ಶ್ರೀ ಗುರು ಭಕ್ತಿಯನ್ನು ಸಾಕ್ಷೀಕರಿಸಿತು. ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಶ್ರೀಗಳವರು ಪೂಜ್ಯ ತರಳಬಾಳು ಶ್ರೀಗಳವರ ಜೊತೆ ಪಾದಯಾತ್ರೆಗೈಯುವುದರ ಮೂಲಕ ಸಮಾಜದಲ್ಲಿ ಒಗ್ಗಟ್ಟಿನ ಸಂದೇಶವನ್ನು ರವಾನಿಸಿದ್ದು ಪೂಜ್ಯರ ಮೇಲಿನ ಭಕ್ತಿ ಗೌರವ ಇಮ್ಮಡಿಯಾಗಿಸತು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಪೂಜ್ಯದ್ವಯರ ಶಿವ ಹರ ಸಾನ್ನಿಧ್ಯದಿ ಅರ್ಥಪೂರ್ಣ ವಿಷಯಗಳು ಮಂಡನೆಯಾದವು.ಮಾಜಿ ಶಾಸಕರಾದ ಬಿ.ಪಿ.ಹರೀಶ್ ಸೇರಿದಂತೆ ಎಲ್ಲಾ ಸಮಾಜಗಳ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಮಾರಂಭ ಸ್ನೇಹ ಪ್ರೀತಿಯ ಸಹೋದರತೆಯ ಸಂದೇಶವನ್ನು ಸಾರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

ಸುದ್ದಿದಿನ,ದಾವಣಗೆರೆ: ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ ಬಿಡುಗಡೆ ಮಾಡಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.
ವಿಧಾನಸಭೆಯಲ್ಲಿ ಬುಧವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿವಮೊಗ್ಗ ಹಾಲು ಒಕ್ಕೂಟದಿಂದ ಬೇರ್ಪಡಿಸಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಒಳಗೊಂಡ ಮೆಗಾ ಡೈರಿ ಆರಂಭಿಸಲು ನನ್ನ ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿಯಲ್ಲಿ ಭೂಮಿ ಖರೀದಿಸಿದ್ದೇವೆ. ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡಿ ಡೈರಿ ಆರಂಭಿಸಿದರೆ ಈ ಭಾಗದ ರೈತರು ಆರ್ಥಿಕವಾಗಿ ಸಬಲರಾಗಲಿದ್ದಾರೆ ಎಂದು ಸದನದ ಗಮನ ಸೆಳೆದರು.
ಹೈನುಗಾರಿಕೆಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಸಬ್ಸಿಡಿ ಕೊಡುವುದನ್ನು ಶೇ.75ರಷ್ಟು ಹೆಚ್ಚಳ ಮಾಡಿದರೆ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಿ ಉತ್ತಮ ಬದುಕು ಕಟ್ಟಿಕೊಳ್ಳುತ್ತಾರೆ. ಈ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದರು.
ಮಧ್ಯ ಕರ್ನಾಟಕದ ಕೇಂದ್ರ ಬಿಂದು, ಹಿಂದುಳಿದ ಜಿಲ್ಲೆ ದಾವಣಗೆರೆ. ಅದರಲ್ಲೂ ಅತೀ ಹಿಂದುಳಿದ ಮೀಸಲು ಕ್ಷೇತ್ರ ಮಾಯಕೊಂಡ. ಸಿರಿಗೆರೆ ತರಳಬಾಳು ಜಗದ್ಗುರುಗಳ ಹೋರಾಟದ ಫಲವಾಗಿ ನನ್ನ ಕ್ಷೇತ್ರದಲ್ಲಿ 22 ಕೆರೆಗಳ ಯೋಜನೆ ಜಾರಿಗೊಂಡು ಎಲ್ ಅಂಡ್ ಟಿ ಕಂಪನಿ ಕಾಮಗಾರಿ ನಡೆಸಿತ್ತು. ಕಳಪೆ ಕಾಮಗಾರಿಯಿಂದ 100 ಹಳ್ಳಿಗಳಿಗೆ ಕುಡಿಯುವ ನೀರು, ನೀರಾವರಿ ಕಲ್ಪಿಸಬೇಕೆಂಬ ಉದ್ದೇಶ ಈಡೇರಿಲ್ಲ. ಪುನಃ ಹೊಸ ಪೈಪ್ಲೈನ್ ಕಾಮಗಾರಿಗೆ ಹಣ ನೀಡಿ ಕಾಮಗಾರಿ ಆರಂಭಿಸುವAತೆ ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಕೂಡಲೇ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ನನ್ನ ಕ್ಷೇತ್ರದಲ್ಲಿ ಹೆಚ್ಚು ಗುಡ್ಡಗಾಡು ಪ್ರದೇಶ ಹೊಂದಿದ್ದು, ಈ ಪ್ರದೇಶಗಳಲ್ಲಿ ಅತೀ ಹೆಚ್ಚು ಕೆರೆಗಳನ್ನು ನಿರ್ಮಾಣ ಮಾಡಿದರೆ ಜನಜಾನುವಾರುಗಳಿಗೆ ಕುಡಿಯುವ ನೀರು, ಅಂತರ್ಜಲ ಮಟ್ಟ ವೃದ್ಧಿಗೆ ಅನುಕೂಲವಾಗುತ್ತದೆ. ಅಲ್ಲದೇ ಬ್ರಿಟಿಷರು ನಿರ್ಮಿಸಿದ ಕೆರೆ ಇದೆ. ಅದನ್ನು ಜೀರ್ಣೋದ್ಧಾರ ಮಾಡಿದರೆ ಇಡೀ ಪಕ್ಷಿ ಸಂಕುಲ, ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಬಹುದು ಎಂದು ಸದನ ಗಮನ ಸೆಳೆದರು.
ಎಸ್ಸಿ-ಎಸ್ಟಿ ಅಭಿವೃದ್ಧಿ ನಿಗಮಗಳಿಗೆ ಅನೇಕ ಸೌಲಭ್ಯ ಒದಗಿಸಲು ಅನುದಾನದ ಕೊರತೆ ಇದೆ. ಹೆಚ್ಚಿನ ಅನುದಾನ ನೀಡಬೇಕು. ಎಸ್ಸಿ-ಎಸ್ಟಿ ಸಮುದಾಯ ಆರ್ಥಿಕವಾಗಿ ಸಬಲರಾಗಲು ಭೂಒಡೆತನ ಯೋಜನೆ ಜಾರಿಗೊಳಿಸಿದ್ದು, ಕ್ಷೇತ್ರಕ್ಕೆ ಕೇವಲ ಒಂದೇ ಕೊಟ್ಟರೆ ಸಾಧ್ಯವಾಗುವುದಿಲ್ಲ. ಇದಕ್ಕೆ ಹೆಚ್ಚು ಒತ್ತು ಕೊಡಬೇಕು. ಖಾಸಗಿ ಕಾಲೇಜುಗಳಲ್ಲಿ ಡಿಪ್ಲೊಮಾ, ನರ್ಸಿಂಗ್, ಪ್ಯಾರಾ ಮೆಡಿಕಲ್ ಸೇರಿದಂತೆ ವೃತ್ತಿಪರ ಕೋರ್ಸ್ನಲ್ಲಿ ಅಭ್ಯಾಸ ಮಾಡುವ ಎಸ್ಸಿ-ಎಸ್ಟಿ ಮಕ್ಕಳಿಗೆ 2013-18ರಲ್ಲಿ ಹಾಸ್ಟೆಲ್ ಸೌಲಭ್ಯ ಇತ್ತು, ಈಗ ಇಲ್ಲ. ಕೂಡಲೇ ಈ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿದರು.
ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಹಗಲು ದರೋಡೆ ಮಾಡಲಾಗುತ್ತಿದೆ. ಹೊರ ಗುತ್ತಿಗೆ ತೆಗೆದು ನೇರವಾಗಿ ನೇಮಕಾತಿ ಮಾಡಿಕೊಂಡರೆ ಅವರ ಬದುಕು ಉಜ್ವಲವಾಗುತ್ತದೆ. ಶೋಷಿತ ಸಮುದಾಯಗಳಿಗೆ ತ್ವರಿತ ನ್ಯಾಯ ಒದಗಿಸಲು ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆಯಡಿ ರಾಜ್ಯದಲ್ಲಿ 33 ವಿಶೇಷ ಪೊಲೀಸ್ ಠಾಣೆ ತೆರೆಯಲು ಕ್ರಮ, ಅಲ್ಲದೇ ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ 2 ಕೋಟಿ ಮೀಸಲು, ಅದರಂತೆ ಒಬಿಸಿ, ಅಲ್ಪಸಂಖ್ಯಾತರಿಗೂ 2 ಕೋಟಿ ಮೀಸಲಿಡುವ ಮೂಲಕ ರೈತರು, ಕಾಯಕ ಜೀವಿಗಳು, ವಿಶೇಷವಾಗಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಎಸ್ಸಿಪಿ-ಎಸ್ಟಿಪಿ ಯೋಜನೆಯಡಿ 48,018 ಕೋಟಿ ರೂ. ಬಜೆಟ್ನಲ್ಲಿ ಮೀಸಲಿಟ್ಟಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು.
- ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ
ಮಳೆಗಾಲದಲ್ಲಿ ತುಂಗಾ ಜಲಾಯಶದಿಂದ ಭದ್ರಾ ಜಲಾಶಯಕ್ಕೆ ನೀರು ತುಂಬಿಸಿ ಅಪರ್ ಭದ್ರಾ ಯೋಜನೆ ನೀರು ನೀಡುವ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದರೆ ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತರಿಗೆ ಅನುಕೂಲವಾಗಲಿದೆ. ಇಲ್ಲದಿದ್ದರೆ, ನಮ್ಮ ಭಾಗದ ರೈತರಿಗೆ ಅನಾನುಕೂಲವಾಗಲಿದೆ. ಕೂಡಲೇ ಸರ್ಕಾರ ಈ ಯೋಜನೆಯ ಕಾಮಗಾರಿ ಪೂರ್ಣಗೊಳಿಸಬೇಕು. ರಾಗಿ, ಭತ್ತ, ತೊಗರಿ ಬೆಂಬಲ ಬೆಲೆಯಡಿ ಖರೀದಿಸಿದಂತೆ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಡಿ ಖರೀದಿಸಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆರೆಬಿಳಚಿಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ ,ಕ್ರಿಶ್ಚಿಯನ್, ಜೈನ್ ,ಬೌದ್ಧ ಸಿಖ್ ಪಾರ್ಸಿ ಧರ್ಮದವರಿಗೆ 75% ಸ್ಥಾನ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ 25% ಸ್ಥಾನಗಳು ಮೀಸಲಾಗಿವೆ.ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಆಧಾರದ ಮೇಲೆ ಮತ್ತು ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://sevasindhuservices.karnataka.gov.in/
ಪ್ರವೇಶ ಪಡೆಯಲು ಅರ್ಹತೆಗಳು
- 05 ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಪೋಷಕರ ಆದಾಯದ ಮಿತಿ ಎಸ್.ಸಿ/ಎಸ್.ಟಿ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ
- 1 ಲಕ್ಷ ರೂ.ಗಳು ಮತ್ತು ಅಲ್ಪಸಂಖ್ಯಾತರಿಗೆ 2.5ಲಕ್ಷ ರೂ.ಗಳು ಮತ್ತು ಹಿಂದುಳಿದ ವರ್ಗದವರಿಗೆ 44500/- ರೂ.ಗಳಿಗೆ ಮೀರಿರಬಾರದು.
ವಸತಿ ಶಾಲೆಯಲ್ಲಿ ದೊರೆಯುವ ಸೌಲಭ್ಯಗಳು
- ಆಯ್ಕೆಯಾದ ವಿದ್ಯಾರ್ಥಿಗಳಿಗೆ 6ನೇ ತರಗತಿಯಿಂದ 12 ತರಗತಿಯವರೆಗೆ ಉಚಿತ ಶಿಕ್ಷಣ.
- ಉಚಿತ ಪಠ್ಯ ಪುಸ್ತಕ, ಲೇಖನ ಸಾಮಗ್ರಿಗಳು, ಸಮವಸ್ತ್ರ, ಶೂ ಮತ್ತು ಸಾಕ್ಸ್, ಹಾಸಿಗೆ ಹೊದಿಕೆ ಜೊತೆಗೆ ಉತ್ತಮ ಮೂಲ ಸೌಲಭ್ಯ ಒದಗಿಸಲಾಗುವುದು.
- ಸುಸಜ್ಜಿತ ಕೊಠಡಿ ಹಾಗೂ ವಸತಿ ನಿಲಯಗಳು, ವಿದ್ಯುತ್ ವ್ಯವಸ್ಥೆ, 24×7 ಬಿಸಿ ನೀರಿನ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇದೆ.
- ನುರಿತ ಶಿಕ್ಷಕರು ಮತ್ತು ಉಪನ್ಯಾಸಕರಿಂದ ಭೋದನೆ, ಪ್ರತಿ ವಿಷಯಕ್ಕೆ ಸುಸಜ್ಜಿತ ಪ್ರಯೋಗಾಲಯ ಸೌಲಭ್ಯ ಹಾಗೂ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ ಇದೆ.
- ಉಚಿತ ವಸತಿ ಮತ್ತು ಭೋಜನ ವ್ಯವಸ್ಥೆ ಇದೆ. ಜೊತೆಗೆ 24×7 CCTV ನಿರೀಕ್ಷಣೆಯಲ್ಲಿ ಇರುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ : ಹೊಸ ಸದಸ್ಯರ ನೊಂದಣಿ, ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಸೂಚನೆ

ಸುದ್ದಿದಿನ,ದಾವಣಗೆರೆ:ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಹಾಗೂ ಸಹಕಾರ ಸಂಘಗಳ ನಿಯಮ 1960ರಡಿ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಎಲ್ಲಾ ವಿಧದ ಸಹಕಾರ ಸಂಘಗಳ ಸದಸ್ಯರು ಮಾರ್ಚ್ 31ರೊಳಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೊಂದಾಯಿಸುವ ಮತ್ತು ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಮತ್ತು ಯಾವುದೇ ಒಂದು ಸಹಕಾರ ಸಂಘದ ಸದಸ್ಯರಾಗಿದ್ದರೆ, ಈ ಯೋಜನೆಯ ಫಲಾನಭವಿಗಳಾಗಬಹುದು ಎಂದು ಸಹಕಾರ ಸಂಘಗಳ ಉಪನಿಬಂಧಕ ಮಧು ಶ್ರೀನಿವಾಸ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ7 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ7 days ago
ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಖಾತ್ರಿ ಯೋಜನೆಯ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ7 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ6 days ago
ದಾವಣಗೆರೆ | ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ ; ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ
-
ದಿನದ ಸುದ್ದಿ6 days ago
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ
-
ದಿನದ ಸುದ್ದಿ7 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ