Connect with us

ದಿನದ ಸುದ್ದಿ

ವರಗುರು ಶ್ರೀ ಶಿವಕುಮಾರರ ಸ್ಮರಣಾಂಜಲಿಗೆ ಇಂದಿನಿಂದ ಚಾಲನೆ

Published

on

ಸುದ್ದಿದಿನ ಡೆಸ್ಕ್ : ಜಗದೊಳಿತಿಗಾಗಿ ಜನಿಸಿದ ಜಗದ್ಗುರು ನಾಡಿನ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ರಂಗದ ಅದಮ್ಯ ಚೇತನ , ಭಕ್ತರ ಹೃದಯ ಸಿಂಹಾಸನಾಧೀಶ ಲಿಂಗೈಕ್ಯ ಶ್ರೀ ತರಳಬಾಳು ಜಗದ್ಗುರು 1108 ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 26 ನೇ ಶ್ರದ್ದಾಂಜಲಿ ಸಮಾರಂಭಕ್ಕೆ ಇಂದಿನಿಂದ ಚಾಲನೆ ಸಿಗಲಿದ್ದು ಸೆಪ್ಟಂಬರ್ 24ರವರೆಗೆ ವೈಚಾರಿಕ ವಿಷಯಮಂಡನೆಗಳ ಜೊತೆ ನಾಡಿನ ಅನ್ನದಾತರ ಕಾರ್ಪಣ್ಯಗಳಿಗೆ ಆಸರೆಯಾಗುವ ನಿಟ್ಟಿನಲ್ಲಿ ಹೊಸ ಯೋಜನೆಗಳಿಗೆ ಆಶಯವನ್ನು ತರಳಬಾಳು ಶ್ರೀ ಜಗದ್ಗುರುವರ್ಯರು ವ್ಯಕ್ತಪಡಿಸಲಿದ್ದಾರೆ.

ಕನ್ನಡ ನಾಡಿನ ಸಾಂಸ್ಕೃತಿಕ ಸೊಬಗಿನ ದರ್ಶನವನ್ನು ಯಥಾವತ್ತಾಗಿ ತೆರೆಯ ಮೇಲೆ ಸೃಷ್ಟಿಸುವ ತರಳಬಾಳು ಜಾನಪದ ಸಿರಿಸಂಭ್ರಮದ 350 ಪ್ರತಿಭಾನ್ವಿತ ಮಕ್ಕಳ ಜಾನಪದ ನೃತ್ಯ ಪ್ರಕಾರಗಳ ಪ್ರದರ್ಶನ ಎಲ್ಲರ ಮನ ಸೆಳೆಯುವುದಂತೂ ನಿಶ್ಚಿತ. ಕಾರ್ಯಕ್ರಮದ ನಿಮಿತ್ತ ಶ್ರೀ ಜಗದ್ಗುರುವರ್ಯರ ಲೇಖನಿಯಿಂದ ಹೊರಹೊಮ್ಮಿದ ಅಪರಿಮಿತ ಓದುಗರನ್ನು ಸೃಷ್ಟಿಸಿದ ಜನಪ್ರಿಯ ಮತ್ತು ಸಾಂಧರ್ಭಿಕ ಸಮಸ್ಯೆಗಳಿಗೆ ಉತ್ತರದಂತಿರುವ ಬಿಸಿಲು ಬೆಳದಿಂಗಳು ಅಂಕಣಮಾಲೆಯ ನೂತನ ಪುಸ್ತಕಗಳು ಲೋಕಾರ್ಪಣೆಯಾಗಲಿವೆ.

ಪರಮಪೂಜನೀಯ ಶ್ರೀ ತರಳಬಾಳು ಜಗದ್ಗುರು ಡಾ. ಶ್ರೀ ಶಿವಮೂರ್ತಿಶಿವಾಚಾರ್ಯ ಮಹಾಸ್ವಾಮಿಗಳವರ ಪವಿತ್ರ ದಿವ್ಯ ನೇತೃತ್ವದಿ ಎಲ್ಲಾ ಕಾರ್ಯಕ್ರಮಗಳು ಜರುಗಲಿದ್ದು. ತರಳಬಾಳು ಜಗದ್ಗುರು ಶಾಖಾ.ಶ್ರೀ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಸಾನ್ನಿಧ್ಯ ವಹಿಸಲಿದ್ದಾರೆ.

ಆಗಮಿಸುವ ಲಕ್ಷಾಂತರ ಶರಣ ಬಂಧುಗಳು ಆತಿಥ್ಯಕ್ಕೆ ಸಿರಿಗೆರೆ ಸಜ್ಜಾಗಿದೆ. ಹತ್ತು ಸಾವಿರಕ್ಕೂ ಹೆಚ್ಚು ಭಕ್ತರು ಸಭಾಂಗಣದ ಒಳಗೆ ಕೂತು ಕಾರ್ಯಕ್ರಮ ವೀಕ್ಷಿಸಲು ಆಕರ್ಷಕ ಸಭಾಂಗಣ ನಿರ್ಮಾಣ ಮಾಡಲಾಗಿದೆ. ಊರಿನಲ್ಲಿರುವ ಶ್ರೀ ಸಂಸ್ಥೆಯ ನೂರಾರು ಕಟ್ಟಡಗಳಿಗೆ ಎಲ್ಲಾ ರಸ್ತೆಗಳಿಗೆ ಜಗಮಗಿಸುವ ವಿದ್ಯುತ್ ದೀಪಗಳ ಅಲಂಕಾರ,ಅತ್ಯಾಕರ್ಷಕ ಸ್ವಾಗತ ಕಮಾನುಗಳ ನಿರ್ಮಾಣ, ತಳಿರು ತೋರಣದಿಂದ ಸಿಂಗರಿಸುವ ಕಾರ್ಯಗಳು ಭರದಿಂದ ಸಾಗಿವೆ.ಪ್ರತಿ ದಿನ ಮುಂಜಾನೆ ಶಿವಮಂತ್ರಲೇಖನ,ಸಾಮೂಹಿಕ ಪ್ರಾರ್ಥನೆ ಐಕ್ಯ ಮಂಟಪದ ಆವರಣದಲ್ಲಿ ಜರುಗಲಿವೆ.

ಪ್ರತಿ ದಿನ ಬೆಳಿಗ್ಗೆ 10 ಗಂಟೆಗೆ ಪ್ರಧಾನ ವೇದಿಕೆಯಲ್ಲಿ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥಯೆಯ 14 ಜಿಲ್ಲೆಯಲ್ಲಿರುವ ಶಾಲಾ ಕಾಲೇಜಿನ ಮಕ್ಕಳಿಂದ ವಚನ,ಜಾನಪದ ನೃತ್ಯ, ಚಿತ್ರಕಲೆ, ನಾಟಕ ಸೇರಿದಂತೆ ಹತ್ತಾರು ಸಾಂಸ್ಕೃತಿಕ ಸ್ಪರ್ಧೆಗಳುನಡೆಯಲಿವೆ.

ನಾಡಿನ ಮುಖ್ಯ ಮಂತ್ರಿಗಳು,ಮಾಜಿ ಮುಖ್ಯ ಮಂತ್ರಿಗಳು, ಹಾಲಿ ಮತ್ತು ಮಾಜಿ ಸಚಿವರು,ಸಂಸದರು,ಶಾಸಕರು,ಜನಪ್ರತಿನಿಧಿಗಳು,ಸಾಹಿತಿಗಳು,ಚಿಂತಕರು ಸೇರಿದಂತೆ ಅನೇಕ ಗಣ್ಯರು ಸಮಾರಂಭದಿ ಭಾಗವಹಿಸಿ ಮಹಾಗುರುವಿಗೆ ಶ್ರದ್ಧಾಭಕ್ತಿಗಳನ್ನು ಸಮರ್ಪಿಸಲಿದ್ದಾರೆ. ಅಪರೂಪದ ಧಾರ್ಮಿಕ ,ಸಾಮಾಜಿಕ, ಸಾಂಸ್ಕೃತಿಕ ಸಂಗಮದ ಈ ಸಮಾರಂಭಕ್ಕೆ ತಾವೂ ಸಾಕ್ಷಿಯಾಗಬೇಕೆಂಬ ಪ್ರೀತಿಯ ಆಶಯ ನಮ್ಮದಾಗಿದೆ.

ದಿನಾಂಕ : 20-09-2018 ರ ಗುರುವಾರ ಇಂದಿನ ಸಂಜೆಯ ಕಾರ್ಯಕ್ರಮದಲ್ಲಿ

ದಿವ್ಯ ನೇತೃತ್ವ: ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು 1108 ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು.

ಸಮ್ಮುಖ ಸಾನ್ನಿಧ್ಯ : ಡಾ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು
ಪಟ್ಟಾಧ್ಯಕ್ಷರು ಶ್ರೀ ತರಳಬಾಳು ಶಾಖಾ ಮಠ ಸಾಣೇಹಳ್ಳಿ.

ಮುಖ್ಯ ಅತಿಥಿಗಳು : ಶರಣ ವೆಂಕಟರಮಣಪ್ಪ
ಕಾರ್ಮಿಕ ಮತ್ತು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು. ಕರ್ನಾಟಕ ಸರ್ಕಾರ ಬೆಂಗಳೂರು, ಶರಣ ಎಸ್ ರವೀಂದ್ರನಾಥ ಮಾಜಿ ಸಚಿವರು. ಶಾಸಕರು ದಾವಣಗೆರೆ, ಶರಣ ಮಾಡಾಳು ವಿರೂಪಾಕ್ಷಪ್ಪ ಶಾಸಕರು ಚನ್ನಗಿರಿ, ಶರಣ ಶ್ರೀನಾಥ್ ಎಂ ಜೋಶಿ
ಜಿಲ್ಲಾ ರಕ್ಷಣಾಧಿಕಾರಿಗಳು ಚಿತ್ರದುರ್ಗ,ಶರಣೆ ಜಯಶೀಲ ಕೆ .ಆರ್ ಅಧ್ಯಕ್ಷರು ಜಿಲ್ಲಾ ಪಂಚಾಯಿತಿ ದಾವಣಗೆರೆ. ಶರಣ ಶಶಾಂಕ್ ಚಲನಚಿತ್ರ ನಿರ್ದೇಶಕರು ಬೆಂಗಳೂರು.

ದಿನಾಂಕ : 21-09-2018 ರ ಶುಕ್ರವಾರ ಸಂಜೆಯ ಕಾರ್ಯಕ್ರಮದಲ್ಲಿ

ಶರಣ ಬಸವರಾಜ ಹೊರಟ್ಟಿ ಸಭಾಪತಿಗಳು ವಿಧಾನ ಪರಿಷತ್ ಬೆಂಗಳೂರು, ಶರಣ ಎಸ್. ಎಸ್ ಮಲ್ಲಿಕಾರ್ಜುನ್ ಮಾಜಿ ಸಚಿವರು ದಾವಣಗೆರೆ,ಶರಣೆ ಸೌಭಾಗ್ಯ ಬಸವರಾಜನ್ ಅಧ್ಯಕ್ಷರು ಜಿಲ್ಲಾ ಪಂಚಾಯಿತಿ ಚಿತ್ರದುರ್ಗ, ಶರಣ ತಿಪ್ಪಾರೆಡ್ಡಿ ಜೆ.ಹೆಚ್.ಶಾಸಕರು ಚಿತ್ರದುರ್ಗ, ಶರಣ ರಾಮಚಂದ್ರ ಎಸ್.ವಿ. ಶಾಸಕರು ಜಗಳೂರು,ಶರಣ ಬೆಳ್ಳಿ ಪ್ರಕಾಶ್ ಶಾಸಕರು ಕಡೂರು.

ದಿನಾಂಕ : 22-09-2018 ರ ಶನಿವಾರ ಸಂಜೆಯ ಕಾರ್ಯಕ್ರಮದಲ್ಲಿ

ಶರಣ ಶಂಕರ್ ಆರ್ ಅರಣ್ಯ ಸಚಿವರು ಕರ್ನಾಟಕ ಸರ್ಕಾರ ಬೆಂಗಳೂರು,ಶರಣ ಆಂಜನೇಯ ಹೆಚ್ ಮಾಜಿ ಸಚಿವರು,ಶರಣ ರುದ್ರೇಗೌಡರು ವಿಧಾನ ಪರಿಷತ್ ಸದಸ್ಯರು ಶಿವಮೊಗ್ಗ, ಶರಣ ಸುರೇಶ್ ಡಿ.ಎಸ್. ಶಾಸಕರು ತರೀಕೆರೆ, ಶರಣ ಶ್ರೀ ರಂಗಯ್ಯ ಎಂ.ಕೆ. ಜಿಲ್ಲಾಧಿಕಾರಿಗಳು ಚಿಕ್ಕಮಗಳೂರು, ಶರಣ ರಮೇಶ್ ಡಿ.ಎಸ್. ಜಿಲ್ಲಾಧಿಕಾರಿಗಳು ದಾವಣಗೆರೆ, ಶರಣ ಚೇತನ ಆರ್ ಜಿಲ್ಲಾ ರಕ್ಷಣಾಧಿಕಾರಿಗಳು ದಾವಣಗೆರೆ.

ದಿನಾಂಕ : 23-09-2018 ರ ಭಾನುವಾರ ಬೆಳಗ್ಗೆ 11ಗಂಟೆಗೆ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥಯೆ ಹಿರಿಯ ವಿದ್ಯಾರ್ಥಿಗಳ ಸಮಾವೇಶ.

ದಿವ್ಯ ನೇತೃತ್ವ : ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು 1108 ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು.

ಸಮ್ಮುಖ ಸಾನ್ನಿಧ್ಯ : ಡಾ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು
ಪಟ್ಟಾಧ್ಯಕ್ಷರು ಶ್ರೀ ತರಳಬಾಳು ಶಾಖಾ ಮಠ ಸಾಣೇಹಳ್ಳಿ

ಮುಖ್ಯಅತಿಥಿಗಳು : ಶರಣ ರವಿಕುಮಾರ.ವಿ. ಸಿವಿಲ್ ನ್ಯಾಯಾಧೀಶರು ಹೊಳಲ್ಕೆರೆ, ಡಾ.ವಿನೋದ್ ಕುಮಾರ್.ವಿ. ಐ ಎ ಎಸ್ ಆಂಧ್ರ ಪ್ರದೇಶ, ಶರಣ ಜಿ .ಎ.ಜಗದೀಶ್ ಎ ಎಸ್ ಪಿ ಹಾವೇರಿ, ಶರಣ ಡಾ.ಶರತ್ ಕುಮಾರ್ ಎನ್.ಎಂ,ವೆಲ್ಲೂರು ಆಂಧ್ರ ಪ್ರದೇಶ. ಶರಣ.ಡಾ.ಭಾಸ್ಕರ್. ಡಿ,ಮದುರೈ ತಮಿಳುನಾಡು.ಶರಣ ಡಾ.ಜಯವರ್ದನ ನರರೋಗ ತಜ್ಞರು ಮೈಸೂರು.ಶರಣ ಡಾ.ನಿರಂಜನ ಮೂರ್ತಿ ಕೆ.ಎಂ ವೈದ್ಯರು ಬೆಂಗಳೂರು. ಶರಣ ಡಾ.ರವಿಕುಮಾರ್ ಜಿ.ವಿ ವೈದ್ಯರು ಬೆಂಗಳೂರು.
ಶರಣ ಡಾ.ಉಮೇಶ್ ಡಿ.ವೈದ್ಯರು ದಾವಣಗೆರೆ.
ಶರಣ ಡಾ.ಅವಿನಾಶ್ ಸಿ.ಬಿ.ವೈದ್ಯರು ಬೆಂಗಳೂರು. ಶರಣ ಲಿಂಗರಾಜ್ ಹೆಚ್.ಕೆ. ಪ್ರಾಚಾರ್ಯರು, ಡಯಟ್, ದಾವಣಗೆರೆ.ಶರಣ ಶೇಖರಪ್ಪ ಹೆಚ್.ಕೆ. ಉಪ ನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ದಾವಣಗೆರೆ. ಶರಣ ಪ್ರಸನ್ನ ಕುಮಾರ್. ಸಿ. ಉಪ ನಿರ್ದೇಶಕರು,ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕಮಗಳೂರು. ಶರಣ ವೀರಣ್ಣ ಜತ್ತಿ ಪ್ರಾಚಾರ್ಯರು ಸಿಟಿಇ ಜಮಖಂಡಿ. ಶರಣ ಮಲ್ಲಿಕಾರ್ಜುನ ಕಬ್ಬೂರು ಪತ್ರಕರ್ತರು ಚಿಕ್ಕಮಗಳೂರು.

ಸಾಂಸ್ಕೃತಿಕ ಕಾರ್ಯಕ್ರಮ

ಮಲ್ಲಿ ಹಗ್ಗ ಮತ್ತು ಮಲ್ಲಗಂಬ ಪ್ರದರ್ಶನ
ತರಳಬಾಳು ಜಾನಪದ ಸಿರಿ ಸಂಭ್ರಮ -2018

ದಿನಾಂಕ : 23-09-2018 ರ ಭಾನುವಾರ ಸಂಜೆ 6 ಗಂಟೆಗೆ.

ಮುಖ್ಯ ಅತಿಥಿಗಳು : ಶರಣ ಬಿ.ಎಸ್ ಯಡಿಯೂರಪ್ಪ ಮಾಜಿ ಮುಖ್ಯ ಮಂತ್ರಿಗಳು ಮತ್ತು ವಿರೋಧಪಕ್ಷದ ನಾಯಕರು ಬೆಂಗಳೂರು. ಶರಣ ಚಂದ್ರಪ್ಪ ಬಿ.ಎನ್
ಲೋಕಸಭಾ ಸದಸ್ಯರು ಚಿತ್ರದುರ್ಗ.ಶರಣ ಎಂ ಚಂದ್ರಪ್ಪ ಶಾಸಕರು ಹೊಳಲ್ಕೆರೆ.ಶರಣ ಎಂ ಲಿಂಗಪ್ಪ ಶಾಸಕರು ಮಾಯಕೊಂಡ. ಶರಣ ಪಾಟೀಲ ಬಿ.ಸಿ ಶಾಸಕರು ಹಿರೇಕೆರೂರ. ಶರಣ ಮೋಹನ್ ಕೊಂಡಜ್ಜಿ
ವಿಧಾನ ಪರಿಷತ್ ಸದಸ್ಯರು ಬೆಂಗಳೂರು. ಶರಣ ಶ್ರೀನಿವಾಸ್ ಜಿ ಕಪ್ಪಣ್ಣ ಸಾಂಸ್ಕೃತಿಕ ಸಂಘಟಕರು ಬೆಂಗಳೂರು. ಶರಣ ಡಾ.ವೇದಮೂರ್ತಿ ಸಿ.ಜಿ
ರಕ್ಷಣಾಧಿಕಾರಿಗಳು( ಡಿ ಸಿ ಆರ್ ಇ ) ಮಂಗಳೂರು.ಶರಣ ಅಣ್ಣಾಮಲೈ.ಕೆ ಜಿಲ್ಲಾ ರಕ್ಷಣಾಧಿಕಾರಿಗಳು ಚಿಕ್ಕಮಗಳೂರು.

ಸಾಂಸ್ಕೃತಿಕ ಸಂಭ್ರಮ

ತರಳಬಾಳು ಜಾನಪದ ಸಿರಿ ಸಂಭ್ರಮ 2018
ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ 350 ಮಕ್ಕಳಿಂದ

24-09-2018 ಸೋಮವಾರ ಬೆಳಿಗ್ಗೆ 11 ಗಂಟೆಗೆ ಶ್ರದ್ದಾಂಜಲಿ ಸಮಾರಂಭ

ದಿವ್ಯ ಸಾನಿಧ್ಯ : ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು.

ಮುಖ್ಯ ಅತಿಥಿಗಳು : ಶರಣ ಹೆಚ್.ಡಿ ಕುಮಾರಸ್ವಾಮಿ ಮುಖ್ಯ ಮಂತ್ರಿಗಳುಕರ್ನಾಟಕ ಸರ್ಕಾರ. ಶರಣ ಶಾಮನೂರು ಶಿವಶಂಕರಪ್ಪ ಶಾಸಕರು ಮಾಜಿ ಸಚಿವರು ದಾವಣಗೆರೆ. ಶರಣ ಈಶ್ವರ ಖಂಡ್ರೆ ಮಾಜಿ ಸಚಿವರು ಕಾರ್ಯಾಧ್ಯಕ್ಷರು.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ. ಶರಣ ಜಿ.ಎಂ ಸಿದ್ಧೇಶ್ವರ ಮಾಜಿ ಕೇಂದ್ರ ಸಚಿವರು ಮತ್ತು
ಲೋಕಸಭಾ ಸದಸ್ಯರು ದಾವಣಗೆರೆ. ಶರಣ ಬಸವರಾಜ ಬೊಮ್ಮಾಯಿ ಮಾಜಿ ಸಚಿವರು ಶಾಸಕರು ಶಿಗ್ಗಾಂವಿ. ಶರಣ ಆಯನೂರು ಮಂಜುನಾಥ್ ವಿಧಾನ ಪರಿಷತ್ ಸದಸ್ಯರು ಶಿವಮೊಗ್ಗ. ಶರಣ ಕೆ ಆರ್ ಜಯದೇವಪ್ಪ ಅಧ್ಯಕ್ಷರು ಸಾಧು ಸದ್ದರ್ಮ ಸಮಾಜ ದಾವಣಗೆರೆ. ಶರಣ ಹೆಚ್ .ವಿಶ್ವನಾಥ್ ಶಾಸಕರು ರಾಜ್ಯ ಅಧ್ಯಕ್ಷರು ಜಾತ್ಯಾತೀತ ಜನತಾದಳ ಬೆಂಗಳೂರು. ಶರಣ ಡಾ.ಶಂಕರ್ ಬಿ.ಎಲ್ ಮಾಜಿ ಸಭಾಪತಿ ವಿಧಾನ ಪರಿಷತ್ ಬೆಂಗಳೂರು. ಶರಣ ಭೋಜೇಗೌಡ ಎಸ್ . ಎಲ್. ವಿಧಾನ ಪರಿಷತ್ ಸದಸ್ಯರು
ಚಿಕ್ಕಮಗಳೂರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ20 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ20 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ20 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ20 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ21 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ22 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ22 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ1 day ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ1 day ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ1 day ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending