ದಿನದ ಸುದ್ದಿ
ವರಗುರು ಶ್ರೀ ಶಿವಕುಮಾರರ ಸ್ಮರಣಾಂಜಲಿಗೆ ಇಂದಿನಿಂದ ಚಾಲನೆ
ಸುದ್ದಿದಿನ ಡೆಸ್ಕ್ : ಜಗದೊಳಿತಿಗಾಗಿ ಜನಿಸಿದ ಜಗದ್ಗುರು ನಾಡಿನ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ರಂಗದ ಅದಮ್ಯ ಚೇತನ , ಭಕ್ತರ ಹೃದಯ ಸಿಂಹಾಸನಾಧೀಶ ಲಿಂಗೈಕ್ಯ ಶ್ರೀ ತರಳಬಾಳು ಜಗದ್ಗುರು 1108 ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 26 ನೇ ಶ್ರದ್ದಾಂಜಲಿ ಸಮಾರಂಭಕ್ಕೆ ಇಂದಿನಿಂದ ಚಾಲನೆ ಸಿಗಲಿದ್ದು ಸೆಪ್ಟಂಬರ್ 24ರವರೆಗೆ ವೈಚಾರಿಕ ವಿಷಯಮಂಡನೆಗಳ ಜೊತೆ ನಾಡಿನ ಅನ್ನದಾತರ ಕಾರ್ಪಣ್ಯಗಳಿಗೆ ಆಸರೆಯಾಗುವ ನಿಟ್ಟಿನಲ್ಲಿ ಹೊಸ ಯೋಜನೆಗಳಿಗೆ ಆಶಯವನ್ನು ತರಳಬಾಳು ಶ್ರೀ ಜಗದ್ಗುರುವರ್ಯರು ವ್ಯಕ್ತಪಡಿಸಲಿದ್ದಾರೆ.
ಕನ್ನಡ ನಾಡಿನ ಸಾಂಸ್ಕೃತಿಕ ಸೊಬಗಿನ ದರ್ಶನವನ್ನು ಯಥಾವತ್ತಾಗಿ ತೆರೆಯ ಮೇಲೆ ಸೃಷ್ಟಿಸುವ ತರಳಬಾಳು ಜಾನಪದ ಸಿರಿಸಂಭ್ರಮದ 350 ಪ್ರತಿಭಾನ್ವಿತ ಮಕ್ಕಳ ಜಾನಪದ ನೃತ್ಯ ಪ್ರಕಾರಗಳ ಪ್ರದರ್ಶನ ಎಲ್ಲರ ಮನ ಸೆಳೆಯುವುದಂತೂ ನಿಶ್ಚಿತ. ಕಾರ್ಯಕ್ರಮದ ನಿಮಿತ್ತ ಶ್ರೀ ಜಗದ್ಗುರುವರ್ಯರ ಲೇಖನಿಯಿಂದ ಹೊರಹೊಮ್ಮಿದ ಅಪರಿಮಿತ ಓದುಗರನ್ನು ಸೃಷ್ಟಿಸಿದ ಜನಪ್ರಿಯ ಮತ್ತು ಸಾಂಧರ್ಭಿಕ ಸಮಸ್ಯೆಗಳಿಗೆ ಉತ್ತರದಂತಿರುವ ಬಿಸಿಲು ಬೆಳದಿಂಗಳು ಅಂಕಣಮಾಲೆಯ ನೂತನ ಪುಸ್ತಕಗಳು ಲೋಕಾರ್ಪಣೆಯಾಗಲಿವೆ.
ಪರಮಪೂಜನೀಯ ಶ್ರೀ ತರಳಬಾಳು ಜಗದ್ಗುರು ಡಾ. ಶ್ರೀ ಶಿವಮೂರ್ತಿಶಿವಾಚಾರ್ಯ ಮಹಾಸ್ವಾಮಿಗಳವರ ಪವಿತ್ರ ದಿವ್ಯ ನೇತೃತ್ವದಿ ಎಲ್ಲಾ ಕಾರ್ಯಕ್ರಮಗಳು ಜರುಗಲಿದ್ದು. ತರಳಬಾಳು ಜಗದ್ಗುರು ಶಾಖಾ.ಶ್ರೀ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಸಾನ್ನಿಧ್ಯ ವಹಿಸಲಿದ್ದಾರೆ.
ಆಗಮಿಸುವ ಲಕ್ಷಾಂತರ ಶರಣ ಬಂಧುಗಳು ಆತಿಥ್ಯಕ್ಕೆ ಸಿರಿಗೆರೆ ಸಜ್ಜಾಗಿದೆ. ಹತ್ತು ಸಾವಿರಕ್ಕೂ ಹೆಚ್ಚು ಭಕ್ತರು ಸಭಾಂಗಣದ ಒಳಗೆ ಕೂತು ಕಾರ್ಯಕ್ರಮ ವೀಕ್ಷಿಸಲು ಆಕರ್ಷಕ ಸಭಾಂಗಣ ನಿರ್ಮಾಣ ಮಾಡಲಾಗಿದೆ. ಊರಿನಲ್ಲಿರುವ ಶ್ರೀ ಸಂಸ್ಥೆಯ ನೂರಾರು ಕಟ್ಟಡಗಳಿಗೆ ಎಲ್ಲಾ ರಸ್ತೆಗಳಿಗೆ ಜಗಮಗಿಸುವ ವಿದ್ಯುತ್ ದೀಪಗಳ ಅಲಂಕಾರ,ಅತ್ಯಾಕರ್ಷಕ ಸ್ವಾಗತ ಕಮಾನುಗಳ ನಿರ್ಮಾಣ, ತಳಿರು ತೋರಣದಿಂದ ಸಿಂಗರಿಸುವ ಕಾರ್ಯಗಳು ಭರದಿಂದ ಸಾಗಿವೆ.ಪ್ರತಿ ದಿನ ಮುಂಜಾನೆ ಶಿವಮಂತ್ರಲೇಖನ,ಸಾಮೂಹಿಕ ಪ್ರಾರ್ಥನೆ ಐಕ್ಯ ಮಂಟಪದ ಆವರಣದಲ್ಲಿ ಜರುಗಲಿವೆ.
ಪ್ರತಿ ದಿನ ಬೆಳಿಗ್ಗೆ 10 ಗಂಟೆಗೆ ಪ್ರಧಾನ ವೇದಿಕೆಯಲ್ಲಿ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥಯೆಯ 14 ಜಿಲ್ಲೆಯಲ್ಲಿರುವ ಶಾಲಾ ಕಾಲೇಜಿನ ಮಕ್ಕಳಿಂದ ವಚನ,ಜಾನಪದ ನೃತ್ಯ, ಚಿತ್ರಕಲೆ, ನಾಟಕ ಸೇರಿದಂತೆ ಹತ್ತಾರು ಸಾಂಸ್ಕೃತಿಕ ಸ್ಪರ್ಧೆಗಳುನಡೆಯಲಿವೆ.
ನಾಡಿನ ಮುಖ್ಯ ಮಂತ್ರಿಗಳು,ಮಾಜಿ ಮುಖ್ಯ ಮಂತ್ರಿಗಳು, ಹಾಲಿ ಮತ್ತು ಮಾಜಿ ಸಚಿವರು,ಸಂಸದರು,ಶಾಸಕರು,ಜನಪ್ರತಿನಿಧಿಗಳು,ಸಾಹಿತಿಗಳು,ಚಿಂತಕರು ಸೇರಿದಂತೆ ಅನೇಕ ಗಣ್ಯರು ಸಮಾರಂಭದಿ ಭಾಗವಹಿಸಿ ಮಹಾಗುರುವಿಗೆ ಶ್ರದ್ಧಾಭಕ್ತಿಗಳನ್ನು ಸಮರ್ಪಿಸಲಿದ್ದಾರೆ. ಅಪರೂಪದ ಧಾರ್ಮಿಕ ,ಸಾಮಾಜಿಕ, ಸಾಂಸ್ಕೃತಿಕ ಸಂಗಮದ ಈ ಸಮಾರಂಭಕ್ಕೆ ತಾವೂ ಸಾಕ್ಷಿಯಾಗಬೇಕೆಂಬ ಪ್ರೀತಿಯ ಆಶಯ ನಮ್ಮದಾಗಿದೆ.
ದಿನಾಂಕ : 20-09-2018 ರ ಗುರುವಾರ ಇಂದಿನ ಸಂಜೆಯ ಕಾರ್ಯಕ್ರಮದಲ್ಲಿ
ದಿವ್ಯ ನೇತೃತ್ವ: ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು 1108 ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು.
ಸಮ್ಮುಖ ಸಾನ್ನಿಧ್ಯ : ಡಾ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು
ಪಟ್ಟಾಧ್ಯಕ್ಷರು ಶ್ರೀ ತರಳಬಾಳು ಶಾಖಾ ಮಠ ಸಾಣೇಹಳ್ಳಿ.
ಮುಖ್ಯ ಅತಿಥಿಗಳು : ಶರಣ ವೆಂಕಟರಮಣಪ್ಪ
ಕಾರ್ಮಿಕ ಮತ್ತು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು. ಕರ್ನಾಟಕ ಸರ್ಕಾರ ಬೆಂಗಳೂರು, ಶರಣ ಎಸ್ ರವೀಂದ್ರನಾಥ ಮಾಜಿ ಸಚಿವರು. ಶಾಸಕರು ದಾವಣಗೆರೆ, ಶರಣ ಮಾಡಾಳು ವಿರೂಪಾಕ್ಷಪ್ಪ ಶಾಸಕರು ಚನ್ನಗಿರಿ, ಶರಣ ಶ್ರೀನಾಥ್ ಎಂ ಜೋಶಿ
ಜಿಲ್ಲಾ ರಕ್ಷಣಾಧಿಕಾರಿಗಳು ಚಿತ್ರದುರ್ಗ,ಶರಣೆ ಜಯಶೀಲ ಕೆ .ಆರ್ ಅಧ್ಯಕ್ಷರು ಜಿಲ್ಲಾ ಪಂಚಾಯಿತಿ ದಾವಣಗೆರೆ. ಶರಣ ಶಶಾಂಕ್ ಚಲನಚಿತ್ರ ನಿರ್ದೇಶಕರು ಬೆಂಗಳೂರು.
ದಿನಾಂಕ : 21-09-2018 ರ ಶುಕ್ರವಾರ ಸಂಜೆಯ ಕಾರ್ಯಕ್ರಮದಲ್ಲಿ
ಶರಣ ಬಸವರಾಜ ಹೊರಟ್ಟಿ ಸಭಾಪತಿಗಳು ವಿಧಾನ ಪರಿಷತ್ ಬೆಂಗಳೂರು, ಶರಣ ಎಸ್. ಎಸ್ ಮಲ್ಲಿಕಾರ್ಜುನ್ ಮಾಜಿ ಸಚಿವರು ದಾವಣಗೆರೆ,ಶರಣೆ ಸೌಭಾಗ್ಯ ಬಸವರಾಜನ್ ಅಧ್ಯಕ್ಷರು ಜಿಲ್ಲಾ ಪಂಚಾಯಿತಿ ಚಿತ್ರದುರ್ಗ, ಶರಣ ತಿಪ್ಪಾರೆಡ್ಡಿ ಜೆ.ಹೆಚ್.ಶಾಸಕರು ಚಿತ್ರದುರ್ಗ, ಶರಣ ರಾಮಚಂದ್ರ ಎಸ್.ವಿ. ಶಾಸಕರು ಜಗಳೂರು,ಶರಣ ಬೆಳ್ಳಿ ಪ್ರಕಾಶ್ ಶಾಸಕರು ಕಡೂರು.
ದಿನಾಂಕ : 22-09-2018 ರ ಶನಿವಾರ ಸಂಜೆಯ ಕಾರ್ಯಕ್ರಮದಲ್ಲಿ
ಶರಣ ಶಂಕರ್ ಆರ್ ಅರಣ್ಯ ಸಚಿವರು ಕರ್ನಾಟಕ ಸರ್ಕಾರ ಬೆಂಗಳೂರು,ಶರಣ ಆಂಜನೇಯ ಹೆಚ್ ಮಾಜಿ ಸಚಿವರು,ಶರಣ ರುದ್ರೇಗೌಡರು ವಿಧಾನ ಪರಿಷತ್ ಸದಸ್ಯರು ಶಿವಮೊಗ್ಗ, ಶರಣ ಸುರೇಶ್ ಡಿ.ಎಸ್. ಶಾಸಕರು ತರೀಕೆರೆ, ಶರಣ ಶ್ರೀ ರಂಗಯ್ಯ ಎಂ.ಕೆ. ಜಿಲ್ಲಾಧಿಕಾರಿಗಳು ಚಿಕ್ಕಮಗಳೂರು, ಶರಣ ರಮೇಶ್ ಡಿ.ಎಸ್. ಜಿಲ್ಲಾಧಿಕಾರಿಗಳು ದಾವಣಗೆರೆ, ಶರಣ ಚೇತನ ಆರ್ ಜಿಲ್ಲಾ ರಕ್ಷಣಾಧಿಕಾರಿಗಳು ದಾವಣಗೆರೆ.
ದಿನಾಂಕ : 23-09-2018 ರ ಭಾನುವಾರ ಬೆಳಗ್ಗೆ 11ಗಂಟೆಗೆ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥಯೆ ಹಿರಿಯ ವಿದ್ಯಾರ್ಥಿಗಳ ಸಮಾವೇಶ.
ದಿವ್ಯ ನೇತೃತ್ವ : ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು 1108 ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು.
ಸಮ್ಮುಖ ಸಾನ್ನಿಧ್ಯ : ಡಾ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು
ಪಟ್ಟಾಧ್ಯಕ್ಷರು ಶ್ರೀ ತರಳಬಾಳು ಶಾಖಾ ಮಠ ಸಾಣೇಹಳ್ಳಿ
ಮುಖ್ಯಅತಿಥಿಗಳು : ಶರಣ ರವಿಕುಮಾರ.ವಿ. ಸಿವಿಲ್ ನ್ಯಾಯಾಧೀಶರು ಹೊಳಲ್ಕೆರೆ, ಡಾ.ವಿನೋದ್ ಕುಮಾರ್.ವಿ. ಐ ಎ ಎಸ್ ಆಂಧ್ರ ಪ್ರದೇಶ, ಶರಣ ಜಿ .ಎ.ಜಗದೀಶ್ ಎ ಎಸ್ ಪಿ ಹಾವೇರಿ, ಶರಣ ಡಾ.ಶರತ್ ಕುಮಾರ್ ಎನ್.ಎಂ,ವೆಲ್ಲೂರು ಆಂಧ್ರ ಪ್ರದೇಶ. ಶರಣ.ಡಾ.ಭಾಸ್ಕರ್. ಡಿ,ಮದುರೈ ತಮಿಳುನಾಡು.ಶರಣ ಡಾ.ಜಯವರ್ದನ ನರರೋಗ ತಜ್ಞರು ಮೈಸೂರು.ಶರಣ ಡಾ.ನಿರಂಜನ ಮೂರ್ತಿ ಕೆ.ಎಂ ವೈದ್ಯರು ಬೆಂಗಳೂರು. ಶರಣ ಡಾ.ರವಿಕುಮಾರ್ ಜಿ.ವಿ ವೈದ್ಯರು ಬೆಂಗಳೂರು.
ಶರಣ ಡಾ.ಉಮೇಶ್ ಡಿ.ವೈದ್ಯರು ದಾವಣಗೆರೆ.
ಶರಣ ಡಾ.ಅವಿನಾಶ್ ಸಿ.ಬಿ.ವೈದ್ಯರು ಬೆಂಗಳೂರು. ಶರಣ ಲಿಂಗರಾಜ್ ಹೆಚ್.ಕೆ. ಪ್ರಾಚಾರ್ಯರು, ಡಯಟ್, ದಾವಣಗೆರೆ.ಶರಣ ಶೇಖರಪ್ಪ ಹೆಚ್.ಕೆ. ಉಪ ನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ದಾವಣಗೆರೆ. ಶರಣ ಪ್ರಸನ್ನ ಕುಮಾರ್. ಸಿ. ಉಪ ನಿರ್ದೇಶಕರು,ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕಮಗಳೂರು. ಶರಣ ವೀರಣ್ಣ ಜತ್ತಿ ಪ್ರಾಚಾರ್ಯರು ಸಿಟಿಇ ಜಮಖಂಡಿ. ಶರಣ ಮಲ್ಲಿಕಾರ್ಜುನ ಕಬ್ಬೂರು ಪತ್ರಕರ್ತರು ಚಿಕ್ಕಮಗಳೂರು.
ಸಾಂಸ್ಕೃತಿಕ ಕಾರ್ಯಕ್ರಮ
ಮಲ್ಲಿ ಹಗ್ಗ ಮತ್ತು ಮಲ್ಲಗಂಬ ಪ್ರದರ್ಶನ
ತರಳಬಾಳು ಜಾನಪದ ಸಿರಿ ಸಂಭ್ರಮ -2018
ದಿನಾಂಕ : 23-09-2018 ರ ಭಾನುವಾರ ಸಂಜೆ 6 ಗಂಟೆಗೆ.
ಮುಖ್ಯ ಅತಿಥಿಗಳು : ಶರಣ ಬಿ.ಎಸ್ ಯಡಿಯೂರಪ್ಪ ಮಾಜಿ ಮುಖ್ಯ ಮಂತ್ರಿಗಳು ಮತ್ತು ವಿರೋಧಪಕ್ಷದ ನಾಯಕರು ಬೆಂಗಳೂರು. ಶರಣ ಚಂದ್ರಪ್ಪ ಬಿ.ಎನ್
ಲೋಕಸಭಾ ಸದಸ್ಯರು ಚಿತ್ರದುರ್ಗ.ಶರಣ ಎಂ ಚಂದ್ರಪ್ಪ ಶಾಸಕರು ಹೊಳಲ್ಕೆರೆ.ಶರಣ ಎಂ ಲಿಂಗಪ್ಪ ಶಾಸಕರು ಮಾಯಕೊಂಡ. ಶರಣ ಪಾಟೀಲ ಬಿ.ಸಿ ಶಾಸಕರು ಹಿರೇಕೆರೂರ. ಶರಣ ಮೋಹನ್ ಕೊಂಡಜ್ಜಿ
ವಿಧಾನ ಪರಿಷತ್ ಸದಸ್ಯರು ಬೆಂಗಳೂರು. ಶರಣ ಶ್ರೀನಿವಾಸ್ ಜಿ ಕಪ್ಪಣ್ಣ ಸಾಂಸ್ಕೃತಿಕ ಸಂಘಟಕರು ಬೆಂಗಳೂರು. ಶರಣ ಡಾ.ವೇದಮೂರ್ತಿ ಸಿ.ಜಿ
ರಕ್ಷಣಾಧಿಕಾರಿಗಳು( ಡಿ ಸಿ ಆರ್ ಇ ) ಮಂಗಳೂರು.ಶರಣ ಅಣ್ಣಾಮಲೈ.ಕೆ ಜಿಲ್ಲಾ ರಕ್ಷಣಾಧಿಕಾರಿಗಳು ಚಿಕ್ಕಮಗಳೂರು.
ಸಾಂಸ್ಕೃತಿಕ ಸಂಭ್ರಮ
ತರಳಬಾಳು ಜಾನಪದ ಸಿರಿ ಸಂಭ್ರಮ 2018
ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ 350 ಮಕ್ಕಳಿಂದ
24-09-2018 ಸೋಮವಾರ ಬೆಳಿಗ್ಗೆ 11 ಗಂಟೆಗೆ ಶ್ರದ್ದಾಂಜಲಿ ಸಮಾರಂಭ
ದಿವ್ಯ ಸಾನಿಧ್ಯ : ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು.
ಮುಖ್ಯ ಅತಿಥಿಗಳು : ಶರಣ ಹೆಚ್.ಡಿ ಕುಮಾರಸ್ವಾಮಿ ಮುಖ್ಯ ಮಂತ್ರಿಗಳುಕರ್ನಾಟಕ ಸರ್ಕಾರ. ಶರಣ ಶಾಮನೂರು ಶಿವಶಂಕರಪ್ಪ ಶಾಸಕರು ಮಾಜಿ ಸಚಿವರು ದಾವಣಗೆರೆ. ಶರಣ ಈಶ್ವರ ಖಂಡ್ರೆ ಮಾಜಿ ಸಚಿವರು ಕಾರ್ಯಾಧ್ಯಕ್ಷರು.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ. ಶರಣ ಜಿ.ಎಂ ಸಿದ್ಧೇಶ್ವರ ಮಾಜಿ ಕೇಂದ್ರ ಸಚಿವರು ಮತ್ತು
ಲೋಕಸಭಾ ಸದಸ್ಯರು ದಾವಣಗೆರೆ. ಶರಣ ಬಸವರಾಜ ಬೊಮ್ಮಾಯಿ ಮಾಜಿ ಸಚಿವರು ಶಾಸಕರು ಶಿಗ್ಗಾಂವಿ. ಶರಣ ಆಯನೂರು ಮಂಜುನಾಥ್ ವಿಧಾನ ಪರಿಷತ್ ಸದಸ್ಯರು ಶಿವಮೊಗ್ಗ. ಶರಣ ಕೆ ಆರ್ ಜಯದೇವಪ್ಪ ಅಧ್ಯಕ್ಷರು ಸಾಧು ಸದ್ದರ್ಮ ಸಮಾಜ ದಾವಣಗೆರೆ. ಶರಣ ಹೆಚ್ .ವಿಶ್ವನಾಥ್ ಶಾಸಕರು ರಾಜ್ಯ ಅಧ್ಯಕ್ಷರು ಜಾತ್ಯಾತೀತ ಜನತಾದಳ ಬೆಂಗಳೂರು. ಶರಣ ಡಾ.ಶಂಕರ್ ಬಿ.ಎಲ್ ಮಾಜಿ ಸಭಾಪತಿ ವಿಧಾನ ಪರಿಷತ್ ಬೆಂಗಳೂರು. ಶರಣ ಭೋಜೇಗೌಡ ಎಸ್ . ಎಲ್. ವಿಧಾನ ಪರಿಷತ್ ಸದಸ್ಯರು
ಚಿಕ್ಕಮಗಳೂರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್ಕಿಟ್ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.
ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.
ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.
ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.
ಇಂಗ್ಲೀಷ್ ಮೇಜರ್ ನಲ್ಲಿ ರ್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


