ದಿನದ ಸುದ್ದಿ
ಬಿದರಗಡ್ಡೆಯಲಿಂದು ತರಳಬಾಳು ಜಗದ್ಗುರುಗಳ ಸಾನ್ನಿಧ್ಯದಿ ಅಕ್ಕಿ ಸಮರ್ಪಣೆ ; ದೇವಸ್ಥಾನಗಳ ಉದ್ಘಾಟನೆ, ಜಾನಪದ ಸಿರಿ ಸಂಭ್ರಮ
ಸುದ್ದಿದಿನ ಡೆಸ್ಕ್ : ಲೋಕದ ತರಳರ ಬಾಳಿನ ಆರಾಧ್ಯ ದೈವವಾದ ತರಳಬಾಳು ಗುರು ಪರಂಪರೆಯ 20 ನೇ ಪೀಠದ ಅಧಿಪತಿಗಳಾಗಿ ಪೀಠವು ಸೇವೆಯ ಸಾಧನ ಎಂಬಂತೆ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ನಾಲ್ಕು ದಶಕಗಳ ಅಹರ್ನಿಶಿ ತಪೋನಿಷ್ಟರಂತೆ ಕಾರ್ಯಮಗ್ನರಾಗಿ ಬಿದ್ದ ಸಮಾಜವನ್ನೇ ಎದ್ದು ನಿಲ್ಲಿಸಿದ ಮಹಾಬೆಳಗಾಗಿ ಅಸಂಖ್ಯಾತ ಶಿಷ್ಯರ ಹೃದಯದ ನಿತ್ಯ ಪೂಜನೀಯಸಿಂಹಸಾನಾಧೀಶರಾಗಿವಿರಾಜಮಾನರಾಗಿರುವ ಸ್ಮರಣೀಯ ಪರಮಪೂಜನೀಯ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರ 26 ನೇ ಶ್ರದ್ಧಾಂಜಲಿಯ ಸಮಾರಂಭ ಇದೇ 20 ರಿಂದ 24 ರವರೆಗೆ ಸಿರಿಗೆರೆಯಲ್ಲಿ ಜರುಗಲಿದೆ.
ಈ ಕಾರ್ಯಕ್ರಮಕ್ಕೆ ಆಗಮಿಸುವ ಲಕ್ಷಾಂತರ ಶಿಷ್ಯರ ದಾಸೋಹ ಪ್ರಸಾದ ಸೇವೆಗೆ ಶ್ರೀ ಮಠದ ಅಭಿಮಾನಿ ಶಿಷ್ಯ ಸಮಾಜ ತನು-ಮನ-ಧನ-ದವಸ-ಧಾನ್ಯ ಅರ್ಪಿಸುವ ಪ್ರತೀತಿ,ಸಂಪ್ರದಾಯವೆಂಬಂತೆ ಕಳೆದ ಇಪ್ಪತ್ತೈದು ವರ್ಷಗಳಿಂದಲೂ ನಡೆಯುತ್ತಿದೆ. ಈ ವರ್ಷದ ಶ್ರದ್ಧಾಂಜಲಿಯ ಸಮಾರಂಭಕ್ಕೆ ಈಗಾಗಲೇ ಹಲವಾರು ತಾಲ್ಲೂಕಿನ ಶ್ರದ್ದಾಳು ಶಿಷ್ಯರು ಭಕ್ತಿಯನ್ನು ಸೇವೆಯನ್ನು ಶ್ರೀಮಠಕ್ಕೆ ಅರ್ಪಿಸಿದ್ದಾರೆ.ಕಳೆದ 25 ವರ್ಷಗಳಿಂದಲೂ ಹೊನ್ನಾಳಿ ತಾಲ್ಲೂಕಿನ ಭಕ್ತ ಸಮುದಾಯ ಪುಣ್ಯ ಸ್ಮರಣೆಯ ತನ್ನಿಮಿತ್ತ ತನು, ಮನ, ಧನ, ಧವಸ, ಧಾನ್ಯವನ್ನು ಶ್ರೀ ಪೀಠಕ್ಕೆ ಅರ್ಪಿಸುವ ಪರಿಪಾಠದ ಸಂಪ್ರದಾಯ ಇದೆ.
ಅದರ ಮುಂದುವರಿದ ಭಾಗವಾಗಿ ಈ ವರ್ಷವೂ ಸಹ ಹೊನ್ನಾಳಿ ತಾಲ್ಲೂಕಿನ ಬಿದರಗಡ್ಡೆಯಲ್ಲಿ ಇಂದು ಲಿಂ.ಶ್ರೀ ಶಿವಕುಮಾರ ಶಿವಾಚಾರ್ಯ ಶ್ರೀಗಳ ಶ್ರದ್ದಾಂಜಲಿ ಸಮಾರಂಭದ ದಾಸೋಹ ಸೇವೆಗೆ ಅಕ್ಕಿ ಸಮರ್ಪಣೆ,ಶ್ರೀ ಶೈಲ ಮಲ್ಲಿಕಾರ್ಜುನ ಕಲ್ಯಾಣ ಮಂಟಪದ ಲೋಕಾರ್ಪಣೆಯೊಂದಿಗೆ ಗ್ರಾಮದ ನೂತನ ದೇವಸ್ಥಾನಗಳಾದ ಶ್ರೀ ಮಲ್ಲಿಕಾರ್ಜುನ,ಶ್ರೀ ಬಸವೇಶ್ವರ, ಶ್ರೀ ಚೌಡೇಶ್ವರಿ, ಶ್ರೀ ಮಾತಂಗಮ್ಮ ದೇವಸ್ಥಾನಗಳು ಹಾಗೂ ಮಹಾದ್ವಾರ ಉದ್ಘಾಟಿನೆಗೊಳ್ಳಲಿವೆ.
ಕಾರ್ಯಕ್ರಮದಲ್ಲಿ
ಇಂದಿನ ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಪರಮಪೂಜನೀಯ ಶ್ರೀ ತರಳಬಾಳು ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ವಹಿಸಲಿದ್ದು, ಉದ್ಘಾಟನೆಯನ್ನು ನಾಡೋಜ ಶರಣ ಪಾಟೀಲ ಪುಟ್ಟಪ್ಪನವರು ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದರಾದ ಶರಣ ಜಿ.ಎಂ.ಸಿದ್ದೇಶ್ವರ, ಮಾಜಿ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್,ಶಾಸಕರಾದ ಎಂ.ಪಿ ರೇಣುಕಾಚಾರ್ಯ,ವಿಧಾನ ಪರಿಷತ್ ಸದಸ್ಯರಾದ ಶರಣ ಎಸ್ ರುದ್ರೇಗೌಡ್ರು,ಮಾಜಿ ಶಾಸಕರಾದ ಡಿ ಜೆ ಶಾಂತನಗೌಡ್ರು ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ.
ಸಾಂಸ್ಕೃತಿಕ ಸಂಜೆ
ಸಾವಿರಾರು ಶರಣ ಬಂಧುಗಳ ಸಾಕ್ಷಿಯಲ್ಲಿ ಇಂದು ಸಂಜೆ ತರಳಬಾಳು ಜಾನಪದ ಸಂಭ್ರಮದ 350 ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401