ದಿನದ ಸುದ್ದಿ
ಮಾನವೀಯ ಮೌಲ್ಯ ಕಣ್ಮರೆ ; ಪ್ರಸಾದ ನೀಡುವ ಕೈಯಲ್ಲಿ ವಿಷ ಪ್ರಾಶನ ನೋವಿನ ಸಂಗತಿ : ತರಳಬಾಳು ಶ್ರೀ
ಸುದ್ದಿದಿನ,ಅರಸೀಕೆರೆ: ಆಧುನಿಕತೆಯ ನಾಗರಿಕ ಸಮಾಜದಲ್ಲಿ ಮಾನವೀಯ ಮೌಲ್ಯಗಳು ಕಣ್ಮರೆಯಾಗುತ್ತಿವೆ ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಿಷಾದಿಸಿದರು.
ತಾಲೂಕು ಮಾಡಾಳು ಗ್ರಾಮದ ನಿರಂಜನ ಪೀಠದಲ್ಲಿ ಆಯೋಜಿಸಿದ್ದ ಲಿಂ. ಚಂದ್ರಶೇಖರ ಸ್ವಾಮೀಜಿಯವರ 12ನೇ ವರ್ಷದ ಪುಣ್ಯಸ್ಮರಣೆ ಹಾಗೂ 19ನೇ ವರ್ಷದ ಅರಿವಿನ ಜಾಗೃತಿ ಧಾರ್ಮಿಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸಬೇಕಾದ ಕೆಲವು ಮಠಾಧಿಪತಿಗಳು ಐಶ್ವರ್ಯ ಹಾಗೂ ಅಧಿಕಾರದ ವ್ಯಾಮೋಹಕ್ಕೆ ಒಳಗಾಗಿ ಪ್ರಸಾದ ನೀಡುವ ಕೈಯಲ್ಲಿ ವಿಷ ಪ್ರಾಷನ ಮಾಡಿ 19 ಮಂದಿ ಬಲಿ ತೆಗೆದುಕೊಂಡಿರುವುದು ತುಂಬಾ ನೋವಿನ ಸಂಗತಿ ಎಂದರು.
ಇಂದಿನ ಆಧುನಿಕ ಯುಗದಲ್ಲಿ ಮನುಷ್ಯ ವೈಜ್ಞಾನಿಕವಾಗಿ ಬೆಳೆದಂತೆ ಆತನಲ್ಲಿ ಮಾನವೀಯ ಮೌಲ್ಯಗಳು ದೂರವಾಗು ತ್ತಿರುವ ಪರಿಣಾಮ ಸಮಾಜದ ನಡುವೆ ಕಂದಕ ಸೃಷ್ಟಿಯಾಗು ತ್ತಿದೆ. ಪರಸ್ಪರ ಪ್ರೀತಿ, ವಿಶ್ವಾಸ, ನಂಬಿಕೆಗಳು ಮಾಯವಾಗುತ್ತಿವೆ ಎಂದು ಹೇಳಿದರು.
ಅಶಾಂತಿಯ ವಾತಾವರಣ: ಮನುಷ್ಯ ಮಾನಸಿಕವಾಗಿ ಪ್ರಬುದ್ಧನಾಗಿ ಬೆಳೆದರೂ ಭೌತಿಕವಾಗಿ ಪ್ರಬುದ್ಧನಾಗಿ ಬೆಳೆಯದ ಕಾರಣ ಸಮಾಜದ ಎಲ್ಲೆಡೆಯಲ್ಲೂ ಅ ಶಾಂತಿಯ ಹೊಗೆಯಾಡುತ್ತಿದೆ ಎಂದು ವಿಷಾದಿಸಿದರು.
ಈ ಹಿಂದೆ ಧರ್ಮಪೀಠದಲ್ಲಿನ ಮಠಾಧೀಶರ ಬಗ್ಗೆ ಭಕ್ತಿ ಭಾವದಿಂದ ಭಕ್ತರ ಸಮೂಹ ನಡೆದುಕೊಳ್ಳುತ್ತಿತ್ತು. ಭಕ್ತ ಸಮೂಹದ ನಂಬಿಕೆಗೆ ಚ್ಯುತಿ ಬಾರದಂತೆ ಮಠಾಧೀಶರು ನಡೆಯುತ್ತಿದ್ದರು. ಆದರೆ ಪ್ರಸ್ತುತ ಬದಲಾದ ಕಾಲದಲ್ಲಿ ಅಂಜುವುದಿರಲಿ ಅನುಮಾನದಿಂದ ನೋಡುವಂತಹ ದುಸ್ಥಿತಿ ಯನ್ನು ನಾವುಗಳು ಕಾಣುತ್ತಿದ್ದೇವೆ ಎಂದರು.
ಇತ್ತೀಚೆಗೆ ಸುಳ್ವಾಡಿ ದೇವಾಲಯದಲ್ಲಿ ನಡೆದ ವಿಷ ಪ್ರಾಷನ ಕಹಿ ಘಟನೆ ಮಠಾಧೀಶರು ಹಾಗೂ ಸಾಧುಸಂತರನ್ನು ಅನು ಮಾನದಿಂದ ನೋಡುವಂತಾಗಿದ್ದು ಭಕ್ತ ಸಮೂಹವನ್ನು ಸನ್ಮಾರ್ಗದತ್ತ ಕರೆದೊಯ್ಯವ ಮಠಾಧೀಶರೇ ದೇವರ ಪ್ರಸಾದ ದಲ್ಲಿ ವಿಷ ಪ್ರಾಷನ ಮಾಡಿಸಿರುವುದು ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಅವಿಭಕ್ತ ಕುಟುಂಬಗಳು ಕಣ್ಮರೆ: ಇತ್ತೀಚಿನ ದಿನಗಳಲ್ಲಿ ನಾನು, ನನ್ನದು ಎಂಬ ಅಹಂಕಾರದಿಂದ ಕುಟುಂಬಗಳು ಒಡೆಯು ತ್ತಿದ್ದು, ಅವಿಭಕ್ತ ಕುಟುಂಬಗಳು ಕಣ್ಮರೆಯಾಗುತ್ತಿವೆ. ಪ್ರಸ್ತುತ ಕೌಟುಂಬಿಕ ಜೀವನ ಸಹ ವ್ಯಾವಹಾರಿಕವಾಗಿದೆ. ಇಂತಹಾ ಆಧ್ಯಾತ್ಮಿಕತೆಯ ಅರಿವಿನ ಜಾಗೃತಿ ಸಮಾರಂಭಗಳು ಉತ್ತಮ ಸಂಸ್ಕೃತಿ ಹಾಗೂ ಗುರು ಪರಂಪರೆಯನ್ನು ಉಳಿಸಿ ಬೆಳೆಸಲು ಸಾಧ್ಯವಾಗುತ್ತದೆ ಎಂದು ಸ್ವಾಮೀಜಿ ಪ್ರತಿಪಾದಿಸಿದರು.
ಸಂಸ್ಕೃತಿಯ ಅರಿವು ಮೂಡಿಸಿ: ಸಾನ್ನಿಧ್ಯ ವಹಿಸಿದ್ದ ಕೆರೆಗೋಡಿ ರಂಗಾಪುರ ಮಠದ ಗುರುಪರದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಭಾರತೀಯ ಸಂಸ್ಕೃತಿಯ ಆಚಾರ, ವಿಚಾರಗಳನ್ನು ಯುವ ಜನತೆಯಲ್ಲಿ ಬಿತ್ತುವ ಕಾರ್ಯವನ್ನು ಮಠಗಳು ಹಾಗೂ ಮಠಾಧೀಶರು ಪ್ರಸ್ತುತ ದಿನಗಳಲ್ಲಿ ಅತ್ಯಂತ ಅವಶ್ಯಕವಾಗಿ ಮಾಡಬೇಕಿದೆ ಎಂದರು.
ಸಮಾರಂಭದಲ್ಲಿ ಕೃಷಿಕರಾದ ಟಿ.ಜಿ ರುದ್ರಪ್ಪ,ಉದ್ಯಮಿ ಅರುಣ್ಕುಮಾರ್, ಡಾ.ಪೂರ್ಣಿಮಾ, ವೈದ್ಯ ಸಂಗಣ್ಣ ಶ್ಯಾಮಸುಂದರ್ ಅವರನ್ನು ಸನ್ಮಾನಿಸಲಾಯಿತು. ಸಮಾ ರಂಭದ ಅಧ್ಯಕ್ಷತೆಯನ್ನು ನಿರಂಜನ ಪೀಠದ ರುದ್ರಮುನಿ ಸ್ವಾಮೀಜಿ ವಹಿಸಿದ್ದರು. ಪಾಂಡೋಮಟ್ಟಿ ವಿರಕ್ತ ಮಠದ ಗುರು ಬಸವ ಸ್ವಾಮೀಜಿ, ಕಿರಿಕೊಡ್ಲಿಪೇಟೆಯ ಸದಾಶಿವ ಸ್ವಾಮೀಜಿ, ಸುಜಾತ ಮೇಲೇಗೌಡ ಮೊದಲಾದವರು ಮಾತನಾಡಿದರು.
ಕೊಳಗುಂದ ಕೇದಿಗೆ ಮಠದ ಜಯಚಂದ್ರಶೇಖರ ಸ್ವಾಮೀಜಿ, ಕರಡಿಗವಿ ಮಠದ ಶಂಕರಾನಂದ ಸ್ವಾಮೀಜಿ, ಶಿವಬಸವ ಕುಮಾರಾಶ್ರಮದ ಅಭಿನವ ಶಿವಲಿಂಗ ಸ್ವಾಮೀಜಿ, ಡಿ.ಎಂ.ಕುರ್ಕೆ ವಿರಕ್ತ ಮಠದ ಶಶಿಶೇಖರ ಸಿದ್ದಬಸವಸ್ವಾಮೀಜಿ, ಜಿಪಂ ಸದಸ್ಯ ಮಾಡಾಳು ಎಂ.ಎಸ್.ವಿ. ಸ್ವಾಮಿ, ತಾಲೂಕು ಸಾಧು ವೀರಶೈವ ಸಮಾಜದ ಅಧ್ಯಕ್ಷ ಎಚ್.ಜಿ.ರೇವಣ್ಣ, ಎನ್. ಜಿ. ಮಧು, ಯುವ ಕಾಂಗ್ರೆಸ್ಮಾಜಿ ಅಧ್ಯಕ್ಷ ಅಣ್ಣಾಯಕನಹಳ್ಳಿ ವಿಜಯ್ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ1 day agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ1 day agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ14 hours agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ1 day agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ1 day agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ

