ದಿನದ ಸುದ್ದಿ
ಸಮಾಜ ಮುಖಿ ಕಲ್ಯಾಣ ಸೇವೆಯಲ್ಲಿ ತರಳಬಾಳು ಮಠಕ್ಕೆ ಅಗ್ರಸ್ಥಾನ : ಸಭಾಪತಿ ಬಸವರಾಜ ಹೊರಟ್ಟಿ

ಸುದ್ದಿದಿನ, ಸಿರಿಗೆರೆ: ಸಮಾಜದಲ್ಲಿ ನೆಮ್ಮದಿಯಿಂದ ಬದುಕಲು ಸಾಧ್ಯವಾಗದೆ ಒಂದಿಲ್ಲೊಂದು ಒತ್ತಡದ ನಡುವೆ ಜೀವಿಸುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ನಮ್ಮಲ್ಲಿ ಸಾಂಸ್ಕೃತಿಕ ಬದುಕನ್ನು ಜೀವಂತವಾಗಿರಿಸಲು ಹಲವು ಮಠಮಾನ್ಯಗಳು ನಾಡಿನಲ್ಲಿ ಶ್ರಮಿಸುತ್ತಿವೆ. ಅಂಥದ್ದರಲ್ಲಿ ತರಳಬಾಳು ಗುರು ಪರಂಪರೆ ಅಗ್ರಗಣ್ಯ ಸ್ಥಾನದಲ್ಲಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಣ್ಣಿಸಿದರು.
ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀಗಳಾದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯವರ ಶ್ರದ್ಧಾಂಜಲಿ ಸಮಾರಂಭದ ಎರಡನೇ ದಿನವಾದ ಶುಕ್ರವಾರ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕೋಟಿ ಹಣ ಕೊಟ್ಟರೂ ನೆಮ್ಮದಿಯ ಬದುಕು ಲಭ್ಯವಾಗುತ್ತಿಲ್ಲ. ಆದರೆ ಮಠಗಳು ಇಂದಿಗೂ ನೆಮ್ಮದಿಯ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿವೆ ಎಂದರು. ಮಠಗಳು ಉತ್ತಮವಾಗಿದ್ದರೆ ಸಮಾಜವೂ ಉತ್ತಮವಾಗಿರುತ್ತದೆ. 26 ವರ್ಷಗಳ ಹಿಂದೆ ಲಿಂಗೈಕ್ಯರಾದ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯವರು ಇಂದಿಗೂ ಜೀವಂತವಾಗಿದ್ದಾರೆಂಬ ಭಾವ ಎಲ್ಲರಲ್ಲೂ ಮೂಡಿದೆ. ಸತ್ತರೂ ಬದುಕಿರುವಂತಹ ಹಾಗೂ ಬದುಕಿದ್ದರೂ ಸತ್ತಂತೆ ಇರುವ ಎರಡು ಬಗೆಯ ಜನರನ್ನು ನಾವು ಸಮಾಜದಲ್ಲಿ ಕಾಣುತ್ತೇವೆ. ಶಿವಕುಮಾರ ಮಹಾಸ್ವಾಮಿಗಳು ಶ್ರೇಷ್ಠ ಪರಂಪರೆಯನ್ನು ಹುಟ್ಟು ಹಾಕಿ ಭಕ್ತರು ಹಸನಾದ ಬದುಕನ್ನು ಸಾಗಿಸುವಂತೆ ಜೀವನ ಭದ್ರತೆ ನೀಡಿದರು ಎಂದು ಸ್ಮರಿಸಿದರು.
ತರಳಬಾಳು ಸ್ವಾಮಿಗಳೆಂದರೆ ನೇರ ನಡೆ ಮತ್ತು ನೇರ ನುಡಿಯ ಗುರುಗಳು. ಅವರು ಸಮಾಜದ ಆಸ್ತಿಯಂತಿದ್ದಾರೆ. ನಾನು ವೈಯಕ್ತಿಕವಾಗಿ ಮುಖ್ಯಮಂತ್ರಿಯೂ ಸೇರಿದಂತೆ ಯಾರಿಗೂ ಹೆದರುವುದಿಲ್ಲ. ಆದರೆ ಕಾಲಪ್ರಜ್ಞೆಯ ವಿಚಾರ
ಬಂದ ಕೂಡಲೇ ತರಳಬಾಳು ಸ್ವಾಮಿಗಳಿಗೆ ನಾನು ಹೆದರುತ್ತೇನೆ. ಅಂತಹ ಕಾಲಪ್ರಜ್ಞೆಯ ಶಕ್ತಿ ಅವರಿಗಿದೆ ಎಂದರು. ಸಿರಿಗೆರೆಯ ವೇದಿಕೆಯಲ್ಲಿ ಹಲವು ಮಕ್ಕಳು ನೀಡಿದಂತಹ ಸಾಂಸ್ಕೃತಿಕ ಚಟುವಟಿಕೆಗಳಿಂದ ನನ್ನ ಮನಸ್ಸು ಮುದಗೊಂಡಿದೆ. ಇಂತಹ ಅಪರೂಪದ ಕಾರ್ಯಕ್ರಮಗಳನ್ನು ನಾನು ಎಲ್ಲಿಯೂ ನೋಡಿರಲಿಲ್ಲ.
ಬಸವಣ್ಣನವರ ವಚನಗಳನ್ನು ಆಧರಿಸಿ ಪ್ರದರ್ಶನಗೊಂಡ ನೃತ್ಯಗಳು ಆಕರ್ಷಕವಾಗಿದ್ದವು. ಅದನ್ನು ನೋಡುತ್ತಾ ಕುಳಿತರೆ ಮನಸ್ಸಿನಲ್ಲಿನ ಎಲ್ಲ ಒತ್ತಡಗಳು ನಿವಾರಣೆಯಾಗುತ್ತವೆ ಎಂದು ಅಭಿಪ್ರಾಯಪಟ್ಟರು. ಮಾಧ್ಯಮಗಳು ಮತ್ತು ಮೊಬೈಲ್ಗಳಿಂದ ಮಕ್ಕಳು ಹಾಳಾಗುತ್ತಿದ್ದಾರೆ. ಮಕ್ಕಳನ್ನು ವೈದ್ಯರು ಮತ್ತು ಇಂಜಿನಿಯರ್ಗಳನ್ನು ಮಾಡುವ ತವಕ ಬಿಟ್ಟು ಅವರಲ್ಲಿ ಮಾನವೀಯ ಅಂಶಗಳನ್ನು ಬೆಳೆಸುವತ್ತ ಪೋಷಕರು ಗಮನ ನೀಡಬೇಕು. ವಿದ್ಯಾವಂತ ಮಕ್ಕಳು ತಮ್ಮ ತಂದೆ-ತಾಯಿಗಳನ್ನು ವೃದ್ಧಾಶ್ರಮದಲ್ಲಿ ಇರಿಸಿರುವ ಹಲವಾರು ಮನಕಲಕುವ ಸನ್ನಿವೇಶಗಳನ್ನು ಗಮನಿಸಿದ್ದೇವೆ. ಈ ರೀತಿ ಆಗದಂತೆ ನೋಡಿಕೊಳ್ಳಬೇಕಾಗಿರುವುದು ಪೋಷಕರ ಹೊಣೆ ಎಂದು ತಿಳಿಸಿದರು.
ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಡೂರು ಶಾಸಕ ಬೆಳ್ಳಿ ಪ್ರಕಾಶ್, ದಾವಣಗೆರೆ ಮೇಯರ್ ಪಲ್ಲಾಗಟ್ಟೆ ಶೋಭಾ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಮಾತನಾಡಿದರು. ದಾವಣಗೆರೆ ಎಪಿಎಂಸಿ ಅಧ್ಯಕ್ಷ ಪರಮೇಶ್ವರಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2023-24 ನೇ ಸಾಲಿನ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5 ನೇ ತರಗತಿಯಿಂದ 10 ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಎಸ್.ಎಸ್.ಪಿ ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.in ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜಗಳೂರು | ಸಿಡಿಲು ಬಡಿದು ಇಬ್ಬರು ರೈತರು ಸಾವು

ಸುದ್ದಿದಿನ, ದಾವಣಗೆರೆ : ಸಿಡಿಲು ಬಡಿದು, ಇಬ್ಬರು ರೈತರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅಣಬೂರು ಗೊಲ್ಲರಹಟ್ಟಿಯಲ್ಲಿ ನಿನ್ನೆ ಸಂಜೆ ನಡೆದಿದೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಮಳೆಬಂದ ಕಾರಣ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಿದ್ದಾಗ ಈ ದುರಂತ ಸಂಭವಿಸಿದೆ. ಮೃತರ ಕುಟುಂಬಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಜಿಲ್ಲಾಡಳಿತ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ; ನಾಡಿದ್ದು ವಿಧ್ಯುಕ್ತ ಚಾಲನೆ

ಸುದ್ದಿದಿನ, ಬೆಂಗಳೂರು : ಸರ್ಕಾರದ ಗ್ಯಾರಂಟಿ ಘೋಷಣೆಗಳಲ್ಲೊಂದಾದ ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿದ್ದು ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.
ಕೆಎಸ್ಆರ್ಟಿಸಿ ಸೇರಿದಂತೆ ಎಲ್ಲಾ ರಸ್ತೆ ಸಾರಿಗೆ ನಿಗಮಗಳ ಬಸ್ಗಳಲ್ಲಿ ಇದೇ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ದೊರೆಯಲಿದೆ.
ಈ ಯೋಜನೆಗೆ ರಾಜ್ಯಾದ್ಯಂತ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಸಂಬಂಧಪಟ್ಟ ಜಿಲ್ಲೆಗಳಲ್ಲಿ ಯೋಜನೆಗೆ ಏಕಕಾಲಕ್ಕೆ ಚಾಲನೆ ನೀಡಲಿದ್ದು, ವಿದ್ಯಾರ್ಥಿನಿಯರೂ ಸೇರಿದಂತೆ ಎಲ್ಲಾ ವರ್ಗಗಳ ಮಹಿಳೆಯರಿಗೆ ಎಸಿ ಹಾಗೂ ಲಕ್ಷುರಿ ಬಸ್ಗಳನ್ನು ಹೊರತುಪಡಿಸಿ ಇತರ ಎಲ್ಲಾ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗುವುದು. ಇದರಿಂದ ಶೇಕಡ 94 ರಷ್ಟು ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಬಸ್ಗಳಲ್ಲಿ ಶೇ. 50 ರಷ್ಟು ಆಸನಗಳನ್ನು ಪುರುಷರಿಗೆ ಮೀಸಲಿರಿಸಲಾಗುವುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಲೈಫ್ ಸ್ಟೈಲ್7 days ago
ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!
-
ದಿನದ ಸುದ್ದಿ7 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ
-
ದಿನದ ಸುದ್ದಿ7 days ago
ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ7 days ago
ಜೂನ್ 8 ರಿಂದ ಕೋಳಿ ಸಾಕಾಣಿಕೆ ತರಬೇತಿ ಶಿಬಿರ
-
ದಿನದ ಸುದ್ದಿ7 days ago
ಒಡಿಶಾದಲ್ಲಿ ಸಿಲುಕಿರುವ ಕನ್ನಡಿಗರು ಇಂದು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮನ
-
ದಿನದ ಸುದ್ದಿ5 days ago
ಗೋ ಹತ್ಯೆ ನಿಷೇಧ ಕಾಯ್ದೆ ; ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ4 days ago
ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿ
-
ದಿನದ ಸುದ್ದಿ7 days ago
ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ಕ್ರೀಡಾಪಟುಗಳ ಆಯ್ಕೆ