Connect with us

ನೆಲದನಿ

ತತ್ವಪದಕಾರ ಡಿ.ಬಿ.ಓಬಯ್ಯ ಅವರ ದಾರ್ಶನಿಕ ನೆಲೆಯಲ್ಲಿ ಕನ್ನಡ ನೆಲದ ಸೊಗಡು

Published

on

ತ್ವಪದ ಸಾಹಿತ್ಯ ಪ್ರಕಾರವು ಜಾನಪದದ ಒಂದು ಸ್ವತಂತ್ರ ಭಾಗವಾಗಿ ಬೆಳೆದುಬಂದಿದೆ. ತತ್ವಪದಕಾರರು ತಾವು ಕಂಡುಂಡ ನೋವು, ನಲಿವು ಹಾಗೂ ಬದುಕಿನ ಹತಾಶೆಗಳನ್ನು ತಮ್ಮ ಅನುಭಾವಿಕ ದರ್ಶನದ ಮೂಲಕ ಪದಕಟ್ಟಿ ಹಾಡುತ್ತ ಬಂದಿದ್ದಾರೆ. ಕರ್ನಾಟಕದಲ್ಲಿ ತತ್ವಪದ ಪರಂಪರೆಯು ಉಲುಸಾಗಿ ಬೆಳೆದು ಬಂದಿರುವುದು ಉತ್ತರ ಕರ್ನಾಟಕದಲ್ಲಿ.

ಈ ಭಾಗದಲ್ಲಿ ಇದು ತನ್ನ ನೆಲೆಯನ್ನು ಕಂಡುಕೊಳ್ಳುವುದಕ್ಕೆ ಹಲವಾರು ಕಾರಣಗಳಿವೆ. ಇದನ್ನು ಸಂಕ್ಷಿಪ್ತವಾಗಿ ಹೇಳುವುದಾದರೆ, ಈ ಪ್ರಾಂತ್ಯವು ಅತ್ಯಂತ ಹಿಂದುಳಿದ ಭಾಗವಾಗಿದ್ದು ಸಾಮಾನ್ಯ ಜನತೆ ಹಾಗೂ ದೀನ ದಲಿತರ ಬದುಕು ತುಂಬ ದುಸ್ತರದಲ್ಲಿತ್ತು. ಹಾಗೆಯೇ “14ನೇ ಶತಮಾನದಿಂದ ಕರ್ನಾಟಕದ ಉತ್ತರ ಭಾಗದಲ್ಲಿ ಇಸ್ಲಾಮ್ ಮೂಲದ ಬಹಮನಿ ರಾಜ್ಯವು ಹುಟ್ಟಿಕೊಂಡು ನೆಲೆಯೂರಲು ಸ್ಥಳೀಯ ಜನಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡವು. ಉತ್ತರದಿಂದ ಬಂದ ಸೂಫಿ ಪಂಥದ ಸಂತರು ಜನಸಾಮಾನ್ಯರ ಸಮುದಾಯಗಳಲ್ಲಿ ಬೆರೆತರು. ತಮ್ಮ ಸರಳ ಜೀವನ ಕ್ರಮದಿಂದ ಅನುಭಾವದಿಂದ ಜನರಿಗೆ ಹತ್ತಿರವಾದರು.

ಧರ್ಮ ಹೊರತಾಗಿ ಧಾರ್ಮಿಕ ನೆಲೆಯಿಂದ ತಮ್ಮ ಸರಳ ತತ್ವಗಳನ್ನು ಪ್ರಸಾರ ಮಾಡಿದರು. ಸ್ಥಳೀಯ ಜನಸಮುದಾಯಗಳಲ್ಲಿ ಯೋಗ, ಧ್ಯಾನ ಅನುಭಾವದ ಜೀವನ ಇತ್ತು. ಅವುಗಳ ಜೊತೆಗೆ ಸೂಫಿ ಪಂಥವು ಸೇರಿಕೊಂಡಿತು.” (ಅಮರೇಶ ನುಗಡೋಣ , ತತ್ವಪದ ಸಾಹಿತ್ಯ, ಪು-20) ಹಾಗೆಯೇ ಶರಣ ಚಳವಳಿಯು ರೂಪ ತಳೆದದ್ದು ಕೂಡ ಉತ್ತರ ಕರ್ನಾಟಕದ ಭೌಗೋಳಿಕ ಪರಿಸರದಲ್ಲಿ. ಹೀಗಾಗಿ ಈ ಭಾಗದ ಜನತೆಯ ಸಂವೇದನೆಯನ್ನು ಜಾನಪದ ನೆಲೆಗಟ್ಟಿನಲ್ಲಿ ತತ್ವಪದಕಾರರು ಪದಕಟ್ಟಿ ಹಾಡುತ್ತ ಬಂದಿದ್ದಾರೆ. ಈ ತತ್ವಪದಕಾರರು ತಮ್ಮ ಆರಾಧ್ಯ ದೈವ ಅಥವಾ ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿನ ಸ್ಥಳೀಯ ಗುರುವಿನ ಮುಖಾಂತರ ದೀಕ್ಷೆ ಪಡೆದು ಇಲ್ಲವೇ ಅವರ ಶಿಷ್ಯನಾಗಿ ತತ್ವಪದ ಪರಂಪರೆಯನ್ನು ಬೆಳೆಸಿಕೊಂಡು ಬಂದಿದ್ದಾರೆ. ಈ ತತ್ವಪದಕಾರರು ಜನ ಬದುಕಿನ ಒಂದು ಭಾಗವಾಗಿಯೂ ಸ್ವತಂತ್ರ ನೆಲೆಯಲ್ಲಿ ತತ್ವಪದಗಳನ್ನು ರಚಿಸಿಕೊಂಡು ಹಾಡು ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ.

ಇಂತಹ ತತ್ವಪದಕಾರರಲ್ಲಿ ಡಿ.ಬಿ.ಓಬಯ್ಯನವರು ಒಬ್ಬರಾಗಿದ್ದಾರೆ. ಶ್ರೀಯುತರು ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ಚಿನ್ನೋಬನಹಳ್ಳಿ ಗ್ರಾಮದ ದಲಿತ ಸಮುದಾಯಕ್ಕೆ ಸೇರಿದ ಇವರು ‘ಕುಡತಿನಿ ಶಂಕ್ರಪ್ಪತಾತ’ನವರ ಅನುಯಾಯಿ ಪಂಥದಿಂದ ದೀಕ್ಷೆಯನ್ನು ಪಡೆದುಕೊಂಡು ತತ್ವಪದ ಪರಂಪರೆಯಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ.
ನಮ್ಮ ಸಮಾಜದಲ್ಲಿ ದಲಿತ ತತ್ವಪದಕಾರರನ್ನು ತೃತಿಯ ಜಗತ್ತನ ತತ್ವಪದಕಾರರು ಎಂಬುದಾಗಿ ಗುರುತಿಸಲಾಗಿದೆ. ಇವರು ಸಮಾಜದಲ್ಲಿ ಅತ್ಯಂತ ತಿರಸ್ಕಾರಕ್ಕೆ ಗುರಿಯಾಗಿರುವ ಕಾರಣದಿಂದ ಇವರನ್ನು ತೃತಿಯ ಜಗತ್ತಿನ ತತ್ವಪದಕಾರರೆಂದು ಕರೆಯಲಾಗಿದೆ. ಈ ವರ್ಗದ ಅನುಭಾವಿಗಳು ಜಾತಿ, ಮತ, ಪಂಥಗಳನ್ನು ಮೆಟ್ಟಿನಿಂತು ಸಮಾಜದ ಎಲ್ಲ ವಲಯಗಳನ್ನು ಕುರಿತು ಪದಕಟ್ಟಿ ಹಾಡಿದ್ದಾರೆ. “ತೃತಿಯ ಜಗತ್ತಿನ ತತ್ವಪದಕಾರರು ಇತರೆ ತತ್ವಪದಕಾರರಿಗಿಂತ ಕಡಿಮೆ ಇಲ್ಲವೆಂಬ ಸತ್ವವನ್ನು ಮನನ ಮಾಡಿಕೊಟ್ಟಿದ್ದಾರೆ. ಈ ಹೊತ್ತಿನ ದಲಿತ ಬಂಡಾಯದ ಸ್ಮøತಿ ಪಟಲಗಳಿರಲಿಲ್ಲ. ಆಕ್ರೋಶದ ಅಲೆಗ ಇರಲಿಲ್ಲ. ಕಠೋರತೆಯ ವ್ಯಾಕುಲತೆ ಇಲ್ಲ. ಇವರು ‘ದೇಶಿ’ಯಲ್ಲಿ ಪ್ರಾದೇಶಿಕತೆಯೊಳಗೆ ತಿರಸ್ಕøತ ಜನರ ಜೀವಂತ ಪರದೆಯಲ್ಲಿ ಹೊಸತನ್ನು ಆ ಕಾಲಘಟ್ಟದಲ್ಲಿ ಕಟ್ಟಿ ಹಾಡಿದ್ದಾರೆ. ಇವರ ತತ್ವಪದಗಳ ಒಳಸುಳಿಯೊಳಗೆ ಮುಟ್ಟಿಸಿಕೊಳ್ಳಲಾರದ ಅಳಲು, ದಾಸ್ಯತ್ವ ದಿನನಿತ್ಯದ ಜ್ವಲಂತ ಅಸ್ಪøಶ್ಯತೆ, ಬದುಕಿನ ಜಂಜಾಟ, ಕಂಡುಂಡ ನೋವು, ಅನುಭವಿಸಿದ ಭಯಂಕರವಾದ ಗುಲಾಮತ್ವ, ಶತಶತಮಾನ ಗಳಿಂದಲೂ ಶೋಷಣೆಗೆ ಬಲಿಯಾಗಿ ಬೆಳಕನ್ನು ಕಾಣದ ಪರಿಸರದಲ್ಲಿ ಜೀವಿಸುವ ಜೀವಂತ ಬದುಕಿನ ಬವಣೆಗಳ ಚಿತ್ರಣವನ್ನು ಕೊಟ್ಟಿದ್ದಾರೆ. ಇವರ ವೈಚಾರಿಕ ತಾತ್ವಿಕತೆಯು ತತ್ವಪದಗಳಲ್ಲಿ ಅಡಗಿಕೊಂಡಿದೆ. ಅಲ್ಲಿ ಭ್ರಷ್ಟತೆ, ಮೋಸ, ದಗ, ವಂಚನೆ, ತಲೆಹಿಡುಕತನ, ಅನ್ಯಾಯದ ವಿರುದ್ಧ ಕಿಡಿಕಾರುವುದು ಕಂಡುಬರುತ್ತದೆ.” (ಹೆಬ್ಬಾಲೆ. ಕೆ. ನಾಗೇಶ್, ಬಿಂಬದೊಳಗಣ ಪ್ರಾಣ, ಪು-65) ಇಂತಹ ದಲಿತ ತತ್ವಪದಕಾರರ ಪರಂಪರೆಯ ಮುಂದುವರೆದ ರೂಪವಾಗಿ ಕಾಣುವ ಡಿ.ಬಿ.ಓಬಯ್ಯನವರು ಸಮಾಜಿಕ ತಲ್ಲಣಗಳನ್ನು ಕುರಿತ ತತ್ವಪದಗಳನ್ನು ಹಾಡುತ್ತ ಹಾಗೂ ಸ್ವತಃ ತತ್ವಪದಗಳನ್ನು ರಚಿಸುವ ಮೂಲಕ ಈ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ.

ಇವರು ಹಲವು ಕಡೆಗಳಲ್ಲಿ ನಡೆಸುವ ಯುವಜನೋತ್ಸವ, ಧಾರ್ಮಿಕ ಕಾರ್ಯಗಳು ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕವಾಗಿ ತತ್ವಪದ ಪ್ರಕಾರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಜಾನಪದದ ಶ್ರೀಮಂತ ಸೆಲೆಯಾಗಿರುವ ಚಿನ್ನೋಬನಹಳ್ಳಿ ಗ್ರಾಮಕ್ಕೆ ಇವರ ಈ ಕೊಡುಗೆಯು ಕೂಡ ಮಹತ್ತರವಾದ ಮೈಲಿಗಲ್ಲನ್ನು ನಿರ್ಮಿಸಿದೆ. ಜಾನಪದ ಕ್ಷೇತ್ರದ ಬಗೆಗಿನ ನನ್ನ ವೈಯಕ್ತಿಕ ಆಸಕ್ತಿ ಹಾಗೂ ಕುತುಹಲದಿಂದಾಗಿ ಈ ಗ್ರಾಮದ ದಲಿತ ಸಮುದಾಯದ ಆರಾಧ್ಯ ದೈವವಾದ ಕಂಚೋಬಳೇಶ್ವರ ದೇವರ ಮೇಲೆ ಜಾನಪದ ಹಾಡುಗಾರ್ತಿಯರು ಸೋಬಾನೆ ಪದಗಳನ್ನು ಹಾಡುತ್ತಾರೆಂಬ ಜಾಡುಹಿಡಿದು ಹೋದಾಗ ಈ ಕ್ಷೇತ್ರದಲ್ಲಿ ಪರಿಣ ತಿ ಇರುವ ಡಿ.ಬಿ.ಓಬಯ್ಯನವರ ಹೆಂಡತಿಯಾದ ಮಾರಕ್ಕನವರ ಹೆಸರು ಸೂಚಿಸಿದರು. ಸಂಜೆಯ ವೇಳೆ ಬಿಡುವಿನ ವೇಳೆಯನ್ನು ಗುರುತಿಸಿಕೊಂಡು ಅವರ ಒಂದು ಸಂಚಿಕೆಯ ಧಾರವಾಯಿ ದಿನಕ್ಕೆ ಕನ್ನಹಾಕಿ, ದೇವರ ಮೇಲಿನ ಸೋಬಾನೆ ಹಾಡುಗಳನ್ನು ಹಾಡುವಂತೆ ಕೇಳಿಕೊಂಡೆವು. ಕ್ಷಣಾರ್ಧದಲ್ಲಿ ನಾವು ಮಾರಕ್ಕ ಓಬಯ್ಯ ದಂಪತಿಗಳ ಕುಟುಂಬದ ಸದಸ್ಯರಾಗಿ ಮಾರಕ್ಕನವರ ತಂಡದಿಂದ ದೇವರ ಮೇಲಿನ ಸೋಬಾನೆ ಹಾಡುಗಳನ್ನು ಹಾಡಿಸಿ ಅವುಗಳನ್ನು ದಾಖಲಿಕರಿಸಿಕೊಂಡೆವು.

ಈ ಸಂದರ್ಭಕ್ಕಾಗಲೇ ಮಾರಕ್ಕನ ಗಂಡನಾದ ಡಿ.ಬಿ.ಓಬಯ್ಯನವರು ತತ್ವಪದಕಾರರೆಂಬ ವಿಚಾರ ತಿಳಿದು ಅವರಿಂದ ಕೆಲವು ತತ್ವಪದ ಹಾಡುಗಳನ್ನು ಕೇಳಬೇಕೆಂಬ ಕುತುಹಲ ಉಂಟಾಯಿತು. ಆ ವೇಳೆಗಾಗಲೇ ರಾತ್ರಿ ತುಂಬ ಸಮಯವಾದ ಕಾರಣ ಅಳುಕಿನಿಂದಲೇ ಒಂದಿಷ್ಟು ತತ್ವಪದಗಳನ್ನು ಹಾಡುವಂತೆ ಕೇಳಿಕೊಂಡೆವು. ಆ ವೇಳೆಗಾಗಲೇ ನಮ್ಮನ್ನು ಕುಟುಂಬದ ಸದಸ್ಯರಂತೆ ನೋಡಿಕೊಂಡಿದ್ದ ಅವರು ತುಂಬು ಮನಸ್ಸಿನಿಂದ ಹಾಡುವುದಕ್ಕೆ ಮುಂದಾದರು. ಅಂದು ಓಬಯ್ಯನವರು ಹಾಡಿದ ತತ್ವಪದ ಹಾಡುಗಳಲ್ಲಿ ಕನ್ನಡ ನಾಡಿನ ಸಾಂಸ್ಕøತಿಕ ಹಿರಿಮೆಯನ್ನು ಸಾರುವ ‘ಚೆಲುವ ಕನ್ನಡ’ ನಾಡು ಎಂಬ ತತ್ವಪದವು ಪ್ರಾದೇಶಿಕ ಹಿರಿಮೆಯನ್ನು ಸಾರುವ ಬಗೆಯನ್ನು ಕುರಿತು ಪ್ರಸ್ತುತ ಲೇಖನದ ಅಡಿಯಲ್ಲಿ ಸಂಕ್ಷಿಪ್ತವಾಗಿ ವಿಶ್ಲೇಷಣೆಗೆ ಒಳಪಡಿಸಲಾಗುವುದು. ಈ ಕನ್ನಡ ನಾಡಿನ ಹಿರಿಮೆಯನ್ನು ಸಾರುವ ತತ್ವಪದವು ಈ ಮುಂದಿನಂತಿದೆ.

ಇದೇ ನಮ್ಮ ನಾಡು | ಚೆಲುವ ಕನ್ನಡನಾಡು
ಶಿವಶರಣರಾಳಿದಂತ ನಾಡು ದೇವಾ…s | ಶಿವಶರಣರಾಳಿದಂತ ನಾಡು ||ಪ||
ನಾಯಕನಟ್ಟಿ ತಿಪ್ಪೇಸ್ವಾಮಿ | ಕಾನಮಡುಗು ಶಿವಶರಣೇಶ ||
ಉಜ್ಜನಿ ಮರುಳಸಿದ್ಧೇಶ ಅವತರಿಸಿದ ಕನ್ನಡನಾಡು ||
ಇದೇ ನಮ್ಮ ನಾಡು | ಚೆಲುವ ಕನ್ನಡನಾಡು
ಶಿವಶರಣರಾಳಿದಂತ ನಾಡು ದೇವಾ…s | ಶಿವಶರಣರಾಳಿದಂತ ನಾಡು ||ಪ||
ಕುಡತಿನಿ ಶಂಕ್ರಪ್ಪ ತಾತ | ಕೊಟ್ಟೂರು ಗುರುಬಸವೇಶ ||
ತಿಪ್ಪಗಿರಿ ಬೊಂ ಬೊಂ ತಾತ ಅವತರಿಸಿದ ಕನ್ನಡನಾಡು ||2||
ಇದೇ ನಮ್ಮ ನಾಡು | ಚೆಲುವ ಕನ್ನಡನಾಡು
ಶಿವಶರಣರಾಳಿದಂತ ನಾಡು ದೇವಾ…s | ಶಿವಶರಣರಾಳಿದಂತ ನಾಡು ||ಪ||
ತಿರುಪತಿ ವೆಂಕಟೇಶ | ರಾಯದುರ್ಗ ಶೇಕಬ್ದುಲ್ಲ ತಾತ ||
ಪಾವಗಡದ ಶನಿಮಾತ್ಮ ಅವತರಿಸಿದ ಕನ್ನಡನಾಡು ||2||
ಇದೇ ನಮ್ಮ ನಾಡು | ಚೆಲುವ ಕನ್ನಡನಾಡು
ಶಿವಶರಣರಾಳಿದಂತ ನಾಡು ದೇವಾ…s | ಶಿವಶರಣರಾಳಿದಂತ ನಾಡು ||ಪ||
ಶೃಗೇರಿ ಶಾರದಾಂಬ | ಕೊಲ್ಲೂರು ಮೂಕಾಂಭಿಕೆ ||
ಬೆಟ್ಟದ ಚಾಮುಂಡೇಶ್ವರಿ ಅವತರಿಸಿದ ಕನ್ನಡನಾಡು ||2||
ಇದೇ ನಮ್ಮ ನಾಡು | ಚೆಲುವ ಕನ್ನಡನಾಡು
ಶಿವಶರಣರಾಳಿದಂತ ನಾಡು ದೇವಾ…s | ಶಿವಶರಣರಾಳಿದಂತ ನಾಡು ||ಪ||
ಓಂ ಶಿವಾಯಃ ಓಂ ನಮಃ ಶಿವಾಯಃ ||
ಓಂ ಶಿವಾಯಃ ಓಂ ನಮಃ ಶಿವಾಯಃ || (ಡಿ.ಬಿ.ಓಬಯ್ಯ, ವಯಸ್ಸು 70, ಚಿಕ್ಕೋಬನಹಳ್ಳಿ, ಮೊಳಕಾಲ್ಮೂರು).

ತತ್ವಪದಕಾರರು ಸ್ಥಾಪಿತ ನೆಲೆಯಲ್ಲಿ ನಿಂತು ಕನಿಷ್ಟ ಭಾವನೆಗಳನ್ನು ಸೃಷ್ಟಿಮಾಡುವುದಿಲ್ಲ. ಸರ್ವರನ್ನು ಸಮಾನ ನೆಲೆಯಲ್ಲಿಯೇ ಗ್ರಹಿಸುವ ಅನುಭಾವಿಕ ಮಾರ್ಗವನ್ನು ಅನುಸರಿಸಿಕೊಂಡು ಬಂದಿದ್ದಾರೆ. “ಈ ತತ್ವಪದಕಾರರಿಗೆ ಸಮಾಜದಲ್ಲಿರುವ ವಿವಿಧ ವರ್ಗಗಳ ದೈವಗಳ ಮೇಲೆ ದ್ವೇಷವಾಗಲಿ, ವಿರೋಧವಾಗಲಿ ಕಂಡುಬರುವುದಿಲ್ಲ. ಎಲ್ಲ ದೇವಕ್ಕೂ ವಿಧೇಯರಾಗಿ ಅವುಗಳನ್ನು ಸಮೀಕರಿಸಿಕೊಂಡು ಬಂದಿದ್ದಾರೆ. ತತ್ವಪದಕಾರರು ತಮ್ಮ ಅನುಭಾವಿಕತೆಯಿಂದ ‘ಮೇಲು-ಕೀಳು’ಗಳ ನಡುವೆ ಬೆಳೆದಿರುವ ಮೌಢ್ಯತೆಯನ್ನು ಬಯಲಿಗೆ ಹಾಕುವ ನೆಲೆಯಲ್ಲಿ ತಮ್ಮ ವಿಚಾರಗಳನ್ನು ವ್ಯಕ್ತಪಡಿಸುತ್ತ ಬಂದಿದ್ದಾರೆ. ಈ ತತ್ವಪದಕಾರರು ವಸಾಹತುಶಾಹಿ ಸೃಷ್ಟಿಸಿರುವ ಮತ್ತು ಸೃಷ್ಟಿಸುತ್ತಿರುವ ತಲ್ಲಣಗಳಿಗೆ ಪ್ರತಿಕ್ರಿಯೆ ನೀಡುವಂತೆ, ಸಮಾಜದಲ್ಲಿ ಪುರೋಹಿತಶಾಹಿಯು ಸೃಷ್ಟಿಸಿರುವ ಜಾತಿಯತೆಯ ಕಟ್ಟಳೆಗಳಿಗೂ ತಮ್ಮ ಪ್ರತಿಕ್ರಿಯೆ ನೀಡಿರುವುದನ್ನು ದಲಿತ ತತ್ವಪದಕಾರರಲ್ಲಿ ಗುರುತಿಸಬಹುದಾಗಿದೆ.” (ಕೆ. ಎ ಓಬಳೇಶ್, ಅಸ್ಮಿತೆ ಮತ್ತು ಆತ್ಮವಿಮರ್ಶೆ, ಪು-112, 113) ಅದೇ ರೀತಿ ಇಲ್ಲಿ ಓಬಯ್ಯನವರು ಹಾಡಿರುವ ಕನ್ನಡ ನಾಡು ನುಡಿಯೊಂದಿಗೆ ಜನಮನದಲ್ಲಿ ಬೆರೆತುಹೋಗಿರುವ ವಿವಿಧ ವರ್ಗವನ್ನು ಪ್ರತಿನಿಧಿಸುವ ದೈವಗಳು ಹಾಗೂ ಅವಧೂತರನ್ನು ಅಖಂಡ ಕರ್ನಾಟಕದ ಭಾಗವಾಗಿ ಬೆಸೆಯುವ ವಿಶಿಷ್ಟ ಬಗೆಯೊಂದು ಇಲ್ಲಿ ಕಂಡುಬರುತ್ತದೆ.

ಭಾರತದಲ್ಲಿ ಅಸಮಾನತೆಯನ್ನು ಧಾರ್ಮಿಕ ನೆಲೆಯಲ್ಲಿ ಕಾಪಾಡಿಕೊಂಡು ಬಂದಿರುವ ಪುರೋಹಿತಶಾಹಿಗೆ ಲೋಕವನ್ನು ಒಡೆದು ನೋಡುವ ಗುಣ ಪರಂಪರಾಗತವಾಗಿ ಬೆಳೆದುಬಂದಿದೆ. ಇಲ್ಲಿ ಸಮಾನತೆ, ಸಹಕಾರ, ಸಹಭಾಳ್ವೆಯಂತಹ ಉದಾರವಾದಿ ಮಾನವೀಯ ತತ್ವಗಳಿಗೆ ಅವಕಾಶವಿಲ್ಲ. ಈ ಶಿಷ್ಟ ಪರಂಪರೆಯವರಿಗೆ ಮಡಿ ಮೈಲಿಗೆಯನ್ನು ಕಾಪಾಡಿಕೊಳ್ಳುವುದೆ ಸಾಮಾಜಿಕ ಮೌಲ್ಯ ಹಾಗೂ ಘನತೆಯ ಪ್ರಶ್ನೆಯಾಗಿದೆ. ಆದರೆ ಲೋಕದ ಪ್ರತಿಯೊಂದು ಜೀವ ಸಂಕುಲವನ್ನು ಕಾರುಣ್ಯದ ನೆಲೆಯಲ್ಲಿ ನೋಡುವ ಗುಣವು ಮೌಖಿಕ ಪರಂಪರೆಯ ಜಾನಪದರಲ್ಲಿ ಕಂಡುಬರುತ್ತದೆ. ಇಲ್ಲಿ ತತ್ವಪದಕಾರರು ಚೆಲುವ ಕನ್ನಡನಾಡಿನ ಅಡಿಯಲ್ಲಿ ಆರಾಧನ ನೆಲೆಯಲ್ಲಿ ಪದಕಟ್ಟಿ ಹಾಡಿರುವ ದೈವಗಳು ಹಾಗೂ ಸಾಂಸ್ಕøತಿಕ ನಾಯಕರುಗಳು ವಿವಿಧ ಸಮುದಾಯಗಳಿಂದ ಬಂದವರಾದರು ಸಹ ಇವರನ್ನು ತಮ್ಮ ಬದುಕಿನ ಬಂದು ಭಾಗವಾಗಿ ಸ್ವೀಕರಿಸಿಕೊಂಡು ಬಂದಿದ್ದಾರೆ. ಇಲ್ಲಿ ಚಿತ್ರತವಾಗಿರುವ ಸ್ಥಳೀಯ ಆರಾಧ್ಯ ದೈವಗಳಾದ ನಾಯಕನಹಟ್ಟಿ ತಿಪ್ಪೇಸ್ವಾಮಿ, ಕಾನಮಡುಗು ಶಿವಶರಣ, ಉಜ್ಜನಿ ಮರುಳಸಿದ್ಧ, ಕುಡತಿನಿ ಶಂಕ್ರಪ್ಪ ತಾತ, ಕೊಟ್ಟೂರು ಗುರುಬಸವೇಶ, ತಿಪ್ಪಗಿರಿ ಬೊಂ ಬೊಂ ತಾತ, ರಾಯದುರ್ಗ ಶೇಕಬ್ದುಲ್ಲ ತಾತ ಇವರುಗಳು ಸಮಾಜ ಸುಧಾರಣೆಗಾಗಿ ಜನ್ಮವೆತ್ತ ಬಂದ ಅವಧೂತರಾಗಿದ್ದಾರೆ. ಇವರೆಲ್ಲರೂ ಸಮಸಮಾಜದ ಕನಸೊತ್ತು ತಮ್ಮ ಹೋರಾಟವನ್ನು ಮುಂದುವರೆಸಿಕೊಂಡು ಬಂದಿದ್ದಾರೆ.

ಇವರಿಗೆ ‘ಮೇಲು-ಕೀಳು’ ಎಂಬ ಎಂಬ ಯಾವುದೇ ತರತಮ ಭಾವವಿಲ್ಲ. ಶರಣ ಚಳವಳಿಯ ಆಶಯಗಳನ್ನು ಪುನರ್ ಸ್ಥಾಪಿಸುವ ನೆಲೆಗಟ್ಟಿನಲ್ಲಿ ಇವರೆಲ್ಲ ತಮ್ಮ ಹೋರಾಟವನ್ನು ಕೈಗೊಂಡವರು. ಈ ಮೇಲೆ ಉಲ್ಲೇಖಿಸಿರುವ ಕ್ರಾಂತಿಪುರುಷರು ವಿವಿಧ ಜಾತಿ, ಸಮುದಾಯದಿಂದ ಬಂದವರಾದರು ಸಹ ಇವರ ಹೋರಾಟದ ಗುರಿ ಮಾತ್ರ ಜಾತಿ, ಮತ, ಪಂಥವನ್ನು ಮೀರಿದ ಸಮಾನತೆಯನ್ನು ಪ್ರತಿಪಾದಿಸುವುದಾಗಿತ್ತು. ಆದರೆ ತಳವರ್ಗಗಳ ಪ್ರಗತಿಗಾಗಿ ವಿವಿಧ ವರ್ಗಗಳಲ್ಲಿ ಜನ್ಮವೆತ್ತಿ ಬಂದ ಇವರನ್ನು ಮೂಲಭೂತವಾದಿಗಳು ಆಯಾ ಜಾತಿ, ಮತ, ಪಂಥಗಳ ಪ್ರತಿಮೆಗಳಾಗಿಸಿ ಮೂಲಭೂತವಾದವನ್ನು ಪ್ರತಿಪಾದಿಸುತ್ತ ಬಂದಿದ್ದಾರೆ. ಆದರೆ ತಳವರ್ಗಗಳ ಪರವಾಗಿ ತುಡಿದ ಈ ಶಕ್ತಿಗಳನ್ನು ದಲಿತ ಹಾಗೂ ತಳ ವರ್ಗಗಳ ತತ್ವಪದಕಾರರು ಮಾತ್ರ ಅವರ ಮೂಲ ಆಶಯಗಳ ಅಡಿಯಲ್ಲಿ ಇವರನ್ನು ಆಶ್ರಯಿಸಿ ಮುನ್ನಡೆಯುತ್ತಿದ್ದಾರೆ. ಹಾಗೆಯೇ ವೈದಿಕರ ಪಿತ್ರಾರ್ಜಿತ ಆಸ್ತಿಯೆಂಬಂತೆ ಕಂಡುಬರುವ ತಿರುಪತಿ ವೆಂಕಟೇಶ, ಶೃಂಗೇರಿ ಶಾರದೆ, ಕೊಲ್ಲೂರು ಮೂಕಾಂಬಿಕೆ ಹಾಗೂ ಮೈಸೂರು ಬೆಟ್ಟದ ಚಾಮುಂಡಿಯನ್ನು ದೈವಿಕ ನೆಲೆಯಲ್ಲಿ ಆರಾಧಿಸುತ್ತ ಬಂದ ನಮ್ಮ ತತ್ವಪದಕಾರರು ಇವರನ್ನು ಕನ್ನಡ ನಾಡಿನ ಹಿರಿಮೆ ಗರಿಮೆಯ ಪ್ರತೀಕವಾಗಿಸುತ್ತಾರೆ. ಜಾತಿ, ಮತ, ಭೇದವನ್ನು ಮರೆತು ಇವರು ಅಖಂಡ ನೆಲೆಯಲ್ಲಿ ಸಮಾಜವನ್ನು ಗ್ರಹಿಸುವ ವಿಶ್ವಮಾನವರಾಗಿ ಕಂಡುಬರುತ್ತಾರೆ. ಜೀವಸಂಕುಲಕ್ಕೆ ಪ್ರಧಾನತೆಯನ್ನು ಕೊಡುವ ತತ್ವಪದಕಾರರು ಜೀವ ಕಾರಣ್ಯದ ಸೆಲೆಯನ್ನು ತಮ್ಮಲ್ಲಿ ಗರ್ಭಿಕರಿಸಿಕೊಂಡು ಬಂದಿದ್ದಾರೆ.

ಮಾನವ ಸಮಾಜದಲ್ಲಿ ‘ಮೇಲು-ಕೀಳು’ ಎಂಬ ತರತಮ ಭಾವನೆಗಳನ್ನು ಸೃಷ್ಟಿಸಿಕೊಂಡು ಬಂದಿರುವ ವೈದಿಕತೆಯ ಸ್ಥಾಪಿತ ಮೌಲ್ಯಗಳಿಗೆ ಪ್ರತಿರೋಧದ ನೆಲೆಯಲ್ಲಿ ಪರ್ಯಾಯವಾದ ಜೀವಪರ ಮಾರ್ಗವನ್ನು ರೂಪಿಸಿಕೊಂಡು ಬಂದ ಕೀರ್ತಿಯು ನಮ್ಮ ತಳವರ್ಗದ ತತ್ವಪದಕಾರರಿಗೆ ಸಲ್ಲುತ್ತದೆ. ಇವರು ಸಮಾಜದ ತರತಮ ಭಾವಗಳಿಂದ ನೊಂದವರು. ಈ ನೋವಿಗೆ ಪ್ರತಿಯಾಗಿ ಅವರ ಆಂತರ್ಯದಲ್ಲಿ ಒಡಮೂಡಿದ ಜೀವಕಾರುಣ್ಯದ ಸೆಲೆಗಳೆ ತತ್ವಪದದ ನೆಲೆಯಲ್ಲಿ ಪದಗಳಾಗಿ ಹೊರಹೊಮ್ಮಿವೆ. ವೈದಿಕತೆಯು ಯಾವುದನ್ನು ತುಚ್ಚಿಕರಿಸುತ್ತ ಬಂದಿತೊ ಅದರಲ್ಲಿಯೇ ಸತ್ವ ಹಾಗೂ ಮೌಲ್ಯಗಳನ್ನು ಗುರುತಿಸಿದವರು ಈ ತತ್ವಪದಕಾರರು. ಹೀಗಾಗಿಯೇ ವೈದಿಕತೆಯು ಒಡೆದು ನೋಡುವ ದೇವಾನುದೇವತೆಗಳನ್ನು ಅಖಂಡ ನಾಡಿನ ಭಾಗವಾಗಿ ಗುರುತಿಸುವ ಕೀರ್ತಿಯು ನಮ್ಮ ತತ್ವಪದಕಾರರಿಗೆ ಸಲ್ಲುತ್ತದೆ. ತಮ್ಮ ಸ್ಥಳೀಯ ಪರಿಸರದಲ್ಲಿ ಕಂಡುಬರುವ ಅವಧೂತರಿಂದ ದೀಕ್ಷೆ ಪಡೆದು ಗುರುವಿನ ಮಾರ್ಗದಲ್ಲಿ ಮುನ್ನಡೆಯುತ್ತ ಬಂದಿರುವ ಈ ತತ್ವಪದಕಾರರು ಸಮಕಾಲೀನ ಸಮಾಜದ ಡಂಭಾಚಾರಗಳನ್ನು ವಿಮರ್ಶೆಗೊಳಪಡಿಸುತ್ತ ಮುನ್ನಡೆಯುತ್ತಿದ್ದಾರೆ.

ಇಂತಹ ಅವಧೂತ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿರುವ ಡಿ.ಬಿ.ಓಬಯ್ಯ ನವರ ತತ್ವಪದ ಹಾಡಿನಲ್ಲಿ ಕನ್ನಡನಾಡಿನ ನಾಡು ನುಡಿಯ ಬಗೆಗೆ ಪ್ರಶಂಸೆಯಿದೆ. ಇದರೊಂದಿಗೆ ಕನ್ನಡನಾಡಿನಲ್ಲಿ ನೆಲೆಸಿರುವ ದೇವತೆಗಳೆಲ್ಲ ಒಂದೆ ಎಂಬ ನೀತಿ ತತ್ವವಿದೆ. ಹೀಗಾಗಿ ಜನಪದರ ಬದುಕಲ್ಲಿ ಬೆರೆತು ಹೋಗಿರುವ ತತ್ವಪದ ಸಾಹಿತ್ಯದಲ್ಲಿ ಅಡಗಿರುವ ವಿಶ್ವದೃಷ್ಟಿಯನ್ನು ಎತ್ತಿಹಿಡಿಯುವುದು ಪ್ರಸ್ತುತ ಲೇಖನದ ಉದ್ದೇಶವಾಗಿದೆ. ರಾಷ್ಟ್ರೀಯತೆಯನ್ನು ರಾಜಕೀಯ ಅಜೆಂಡವಾಗಿ ಬಳಸಿಕೊಂಡು ತಮ್ಮ ಸ್ವಾರ್ಥ ಸಾಧನೆಯನ್ನು ಪೂರೈಸಿಕೊಳ್ಳವವರು ಒಂದು ಕಡೆಯಲ್ಲಿ ಸಮಾಜದ ಶಾಂತಿಯನ್ನು ಕದಡುತ್ತಿದ್ದಾರೆ. ಆದರೆ ನಿಜವಾದ ರಾಷ್ಟ್ರೀಯತೆ, ನಾಡು ನುಡಿಯ ಬಗೆಗಿನ ಅಭಿಮಾನವನ್ನು ಹೊಂದಿರುವ ವರ್ಗವೊಂದು ಎಲೆ ಮರೆಯ ಕಾಯಿಯಂತಿದ್ದು, ಮಾನವತ್ವದ ನೆಲೆಯಲ್ಲಿ ಸಮಾಜವನ್ನು ನಿರ್ಮಿಸುವ ಆಶಯವೊತ್ತು ಮುನ್ನಡೆಯುತ್ತಿದೆ. ನಮ್ಮ ಮುಂದಿರುವ ಈ ಎರಡು ವರ್ಗಗಳಲ್ಲಿ ಯಾವುದು ಮಹತ್ವದ ಪಾತ್ರವನ್ನು ನಿರ್ವಹಿಸಿಕೊಂಡು ಬಂದಿದೆ ಎಂಬುದನ್ನು ನಾವು ಆಲೋಚಿಸಬೇಕಿದೆ, ಅದನ್ನು ಅಳವಡಿಸಿಕೊಳ್ಳಬೇಕಿದೆ. ಆ ಮೂಲಕ ಶಾಂತಿಯುತ ಸಮಾನತೆಯ ಸಮಾಜವನ್ನು ಕಟ್ಟಬೇಕಾದ ಅನಿವಾರ್ಯತೆ ಇದೆ.

ದಿನದ ಸುದ್ದಿ

ಆತ್ಮಕತೆ | ಅನಾಗರಿಕ ಆಚರಣೆಯ ವಿರುದ್ಧ

Published

on

  • ರುದ್ರಪ್ಪ ಹನಗವಾಡಿ

ಸೊರಬ ತಾಲ್ಲೂಕಿನಲ್ಲಿ ಇನ್ನೊಂದು ಮುಖ್ಯ ಘಟನೆಯನ್ನು ಹೇಳಿ ಮುಂದೆ ಹೋಗುತ್ತೇನೆ. ಸೊರಬ ತಾಲ್ಲೂಕಿನಲ್ಲಿ ತಹಸೀಲ್ದಾರರಾಗಿ ರಾಮನಾಥ್ ಎಂಬ ಹಿರಿಯರಿದ್ದರು. ಅವರು ತಾಲ್ಲೂಕಿನಲ್ಲಿ ಎಲ್ಲಾ ಆಡಳಿತ ನೋಡಿಕೊಳ್ಳುತ್ತಿದ್ದರು.

ವಿಶೇಷ ತಹಸೀಲ್ದಾರರು ಸಾಮಾನ್ಯವಾಗಿ ಯಾವ ಉದ್ದೇಶಕ್ಕೆ ನಿಯೋಜಿಸಿದ್ದರೋ ಅದನ್ನು ಬಿಟ್ಟು ಇತರೆ ಸಾಮಾನ್ಯ ವಿಷಯಗಳಲ್ಲಿ ಅವರಿಗೆ ಸಂಬಂಧಿಸಿರುವುದಿಲ್ಲ. ಹಾಗಾಗಿ ನಾನು ನನ್ನ ಕೆಲಸಗಳನ್ನು ಬಿಟ್ಟು ತಾಲ್ಲೂಕು ಕಛೇರಿ ಕೆಲಸಗಳಲ್ಲಿ ತೊಡಗಿಕೊಂಡಿರಲಿಲ್ಲ. ಆದರೆ ಇದೇ ಸಮಯದಲ್ಲಿ ಸೊರಬ ತಾಲ್ಲೂಕಿನ ಚಂದ್ರಗುತ್ತಿ ಜಾತ್ರೆಯ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತದಿಂದ ವಿಶೇಷ ಸಭೆ ನಡೆಸಿ ಅಲ್ಲಿ ನಡೆಯುತ್ತಿದ್ದ ಬೆತ್ತಲೆ ಸೇವೆಯ ಆಚರಣೆಯನ್ನು ತಡೆಯಲು ಸೂಚನೆ ನೀಡಿತ್ತು.

ಬೆತ್ತಲೆಸೇವೆಯ ಈ ಅನಾಗರಿಕ ಆಚರಣೆಯ ಬಗ್ಗೆ ಪ್ರೊ. ಬಿ. ಕೃಷ್ಣಪ್ಪನವರು, ನಾನು ಸೊರಬಕ್ಕೆ ಬರುವ ಒಂದು ವರ್ಷ ಮುಂಚಿನಿAದ ಬೆತ್ತಲೆ ಸೇವೆಯ ಆಚರಣೆ ಒಂದು ಅನಾಗರಿಕ ಆಚರಣೆ ಎನ್ನುವ ಬಗ್ಗೆ ಅನೇಕ ಲೇಖನಗಳನ್ನು ಬರೆದು ಇದನ್ನು ತಡೆಗಟ್ಟಬೇಕೆಂದು ಅಂದಿನ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವ ಪತ್ರ ಬರೆದು ಈ ವಿಷಯಗಳೆಲ್ಲಾ ದಿನಪತ್ರಿಕೆ ಮತ್ತು ಆಗ ಜಾಣಜಾಣೆಯರ ಪತ್ರಿಕೆ ಎಂದು ಹೇಳಿ ತರುತ್ತಿದ್ದ ಲಂಕೇಶ್ ಪತ್ರಿಕೆಯಲ್ಲೂ ಪ್ರಕಟಗೊಂಡಿತ್ತು.

1986ರ ಜಾತ್ರೆ ಸಮಯದಲ್ಲಿ ಜಿಲ್ಲಾಧಿಕಾರಿಗಳಾಗಿದ್ದ ತಂಗರಾಜ್ ಅವರು ಕಂದಾಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಸಭೆ ನಡೆಸಿ ಬೆತ್ತಲೆ ಹೋಗುವ ಜನರನ್ನು ಜಾಗೃತಗೊಳಿಸಿ ತಡೆಯಬೇಕೆಂದು ಜಿಲ್ಲಾಡಳಿತ ತೀರ್ಮಾನಿಸಿತ್ತು. ಕೃಷ್ಣಪ್ಪನವರ ಡಿಎಸ್‌ಎಸ್ ಸಂಘಟನೆಯ ಹೋರಾಟದ ಜೊತೆಗೆ ಶಿವಮೊಗ್ಗ-ಸಾಗರ-ಸೊರಬದಲ್ಲಿನ ಎಲ್ಲ ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘ, ಪ್ರಗತಿಪರ ಮಹಿಳಾ ಲೇಖಕಿಯರ ಸಂಘಟನೆಗಳು ಕೈಜೋಡಿಸಿದ್ದವು. ಭದ್ರಾವತಿಯಿಂದ ಪ್ರೊ. ಚಂದ್ರಶೇಖರಯ್ಯ, ಡಿಎಸ್‌ಎಸ್ ಚಂದ್ರು, ತೋರಣಗಟ್ಟಿ ಚಂದ್ರಶೇಖರ್, ಬಿದರಳ್ಳಿ ನರಸಿಂಹಮೂರ್ತಿ, ಇನ್ನೂ ಅನೇಕ ಪ್ರಗತಿಪರ ಹೋರಾಟಗಾರರು ಭಾಗವಹಿಸಿದ್ದರು.

ನಾನು ಸರ್ಕಾರದ ಭಾಗವಾಗಿ ಸಂಜೆ ಹಳ್ಳಿಗಳಿಗೆ ಕರಪತ್ರಗಳನ್ನು ಹಂಚಿ, ‘ಯಾವ ದೇವರಿಗೂ ಬೆತ್ತಲೆ ಪೂಜೆ ಸಲ್ಲಿಸುವುದು ಇಷ್ಟವಾಗದು. ಇದೆಲ್ಲ ಹಿಂದುಳಿದವರನ್ನೂ, ದಲಿತರನ್ನೂ ಶೋಷಣೆ ಮಾಡುವ ಕ್ರೂರ ಪದ್ಧತಿ, ಇವನ್ನು ನಿವಾರಣೆಮಾಡಬೇಕೆಂದು ಭಾಷಣ ಮಾಡುತ್ತಾ ತಾಲ್ಲೂಕು ಕಛೇರಿಯ ಸಿಬ್ಬಂದಿಯನ್ನು ಹಲವು ತಂಡಗಳಾಗಿ ಮಾಡಿಕೊಂಡು ಹಳ್ಳಿಗಳಲ್ಲಿ ಪ್ರಚಾರ ಮಾಡುತ್ತಿದ್ದೆವು. ಸರ್ಕಾರದ ನಿರ್ದೇಶನವಿದ್ದುದರ ಜೊತೆಗೆ ಈ ವಿಷಯಗಳು ನನಗೆ ಇಷ್ಟವಾದ ಕೆಲಸವಾಗಿದ್ದರಿಂದ ಹೆಚ್ಚಿನ ಆಸಕ್ತಿಯಿಂದ ಬೆತ್ತಲೆ ಸೇವೆ ವಿರುದ್ಧ ಪ್ರಚಾರ ಮಾಡುತ್ತಿದ್ದೆವು. ಹೀಗೆ ಎಲ್ಲಾ ಕಡೆ ಪ್ರಚಾರ ಮಾಡಿದ ಮೇಲೆ ಪ್ರೊ.ಬಿ.ಕೆ ಮತ್ತು ಶಿವಪ್ಪ ಮಾಸ್ತರು ಇನ್ನು ಕೆಲವು ಗೆಳೆಯರು ನಮ್ಮಲ್ಲಿ ಊಟ ಉಪಚಾರ ಮಾಡಿ ಹೋಗುತ್ತಿದ್ದರು. ಇದರ ಸಂಪೂರ್ಣ ಘಟನೆಯ ವಿವರವನ್ನು ಈಗಾಗಲೇ ಪ್ರೊ. ಬಿ. ಕೃಷ್ಣಪ್ಪ ಟ್ರಸ್ಟ್ 2010ರಲ್ಲಿ ಪ್ರಕಟಿಸಿರುವ ‘ಬಯಲು.. ಬೆತ್ತಲೆ..ಚಂದ್ರಗುತ್ತಿ’ ಎಂಬ ಪುಸ್ತಕದಲ್ಲಿನ ಮಾಹಿತಿಯನ್ನು ಇಲ್ಲಿ ಮುಂದುವರೆಸಲಾಗಿದೆ.

ಬೆತ್ತಲೆ ಸೇವೆ ನಡೆಯುವ ಒಂದು ವಾರ ಮುಂಚಿತವಾಗಿಯೇ ಕೃಷ್ಣಪ್ಪನವರ ನೇತೃತ್ವದಲ್ಲಿ ಡಿ.ಎಸ್.ಎಸ್. ಕಾರ್ಯಕರ್ತರು ಮತ್ತು ಪ್ರಗತಿಪರ ಸಂಘಟನೆಗಳೊಡನೆ ಸಂಜೆ ಹಳ್ಳಿಗಳಿಗೆ ಹೋಗಿ ಭಾಷಣಗಳ ಮುಖಾಂತರ ಬೆತ್ತಲೆ ಸೇವೆಯನ್ನು ವಿರೋಧಿಸುವ ಪ್ರಚಾರದಲ್ಲಿ ನಾನೂ ತೊಡಗಿಸಿಕೊಂಡಿದ್ದೆ. ಚಂದ್ರಗುತ್ತಿ ದೇವಸ್ಥಾನ ಸಮಿತಿಯ ಸಂಚಾಲಕರಾಗಿದ್ದ ಈಡೂರು ಪರಶುರಾಮಪ್ಪ ಮತ್ತು ಅವರ ಸ್ನೇಹಿತರು ವೈಯಕ್ತಿಕವಾಗಿ ಬೆತ್ತಲೆ ಸೇವೆಯನ್ನು ವಿರೋಧಿಸುವ ಹೋರಾಟಕ್ಕೆ ನಮ್ಮ ಬಳಿ ಸಮ್ಮತಿಸಿದ್ದರೂ ಇದನ್ನು ವಿರೋಧಿಸುವುದು ಹೇಗೆ ಎಂಬುದರ ಬಗ್ಗೆ ಅವರಲ್ಲಿ ದುಗುಡ ತುಂಬಿತ್ತು. ಆಗಿನ ಜನಪ್ರತಿನಿಧಿಗಳು ಯಾರೂ ಈ ಬಗ್ಗೆ ಚಕಾರವೆತ್ತುತ್ತಿರಲಿಲ್ಲ. ಇದೊಂದು ಅತಿ ಸೂಕ್ಷ್ಮ ವಿಚಾರವೆಂದೂ- ಏನಾದರೂ ಮಾತನಾಡಿದರೆ ಜನರಿಂದ ದೂರ ಆಗುವ ಆತಂಕ ರಾಜಕಾರಣಿಗಳ ಒಳ ಇಂಗಿತವಾಗಿತ್ತು. ಚುನಾವಣಾ ರಾಜಕೀಯದ ದೃಷ್ಟಿಯಿಂದ ಅವರಿಗೆ ಇದೆಲ್ಲ ಬೇಡದ ವಿಚಾರವಾಗಿತ್ತು.

ಈ ಹಿನ್ನೆಲೆಯಲ್ಲಿ ಬೆತ್ತಲೆಸೇವೆ ನಡೆಸುವ ಮೊದಲ ದಿನ ಸರ್ಕಾರವು ಸೂಚಿಸಿದಂತೆ ಡಿ.ಎಸ್.ಎಸ್. ಮತ್ತು ಇತರೆ ಸಂಘಟನೆಯ ಕಾರ್ಯಕರ್ತರು- ಬೆತ್ತಲೆ ಹೋಗುತ್ತಿದ್ದವರನ್ನು ತಡೆದು ಅವರಿಗಾಗಿ ಹೊಸ ಬಟ್ಟೆ ತಂದಿದ್ದ ಮಹಿಳಾ ಕಾರ್ಯಕರ್ತರು ಅವರಿಗೆ ಸುತ್ತಿ- ಕಳುಹಿಸುತ್ತಿದ್ದರು. ಅವರು ಸುತ್ತಿಕೊಂಡು ಮುಂದೆ ಹೋಗುತ್ತಿದ್ದಾಗ ಮತ್ತೆ ಬಿಚ್ಚಿಕೊಂಡು ಓಡುತ್ತಿದ್ದುದು ನಡೆಯುತ್ತಲೂ ಇತ್ತು. ಮೊದಲ ದಿನದ ಈ ಕರ‍್ಯ ಸಂಪೂರ್ಣವಾಗಿ ಶಾಂತಿಯುತವಾಗಿ ನಡೆಯಿತು. ಸರ್ಕಾರ ಮತ್ತು ಡಿಎಸ್‌ಎಸ್ ಕರ‍್ಯಕರ್ತರು ಕೂಡ ಇದು ಸಂಪೂರ್ಣ ಯಶಸ್ವಿಯಾಯಿತೆಂದೇ ಭಾವಿಸಿದೆವು.

ಆದರೆ ಎರಡನೇ ದಿನ ಅಂದರೆ, 20-3-1986ರಂದು ಬೆಳಿಗ್ಗೆಯಿಂದಲೇ ಜನಸಾಗರ ವಿವಿಧ ಕಡೆಗಳಿಂದ ಹರಿದು ಬರುತ್ತಿತ್ತು. ನಾನು ನನ್ನ ಸಿಬ್ಬಂದಿಯೊಡನೆ ಮಾಮೂಲಿನಂತೆ ಜಾತ್ರೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಬೆತ್ತಲೆ ಸೇವೆ ಮಾಡೋ ಹೆಂಗಸಿನ ಫೋಟೋ ತೆಗೆಯುತ್ತಿದ್ದ ಇನ್ನೊಬ್ಬ ಮಹಿಳಾ ಫೋಟೋಗ್ರಾಫರ್‌ನನ್ನು ನಮ್ಮ ಎದುರಿಗೆ ಅಡ್ಡಹಾಕಿ ಅವಳು ತೆಗೆದಿದ್ದ ಫೋಟೋ ರೀಲುಗಳನ್ನು ಹೊರತೆಗೆದು ಅವಳನ್ನು ನಮ್ಮ ಎದುರಿಗೆ ಥಳಿಸಲು ಮುಂದಾಗಿ, ಅವಳನ್ನು ನಗ್ನಗೊಳಿಸಿದರು. ಆಗ ಜೋಗಿತಿಯರನ್ನು ನಾನು ತಡೆಯಲು ಹೋದಾಗ ವಾಗ್ವಾದ-ತಳ್ಳಾಟ ಪ್ರಾರಂಭವಾಯಿತು.

ಸರ್ಕಾರ ಮತ್ತು ವಿವಿಧ ಸಂಘಟನೆಗಳನ್ನು ಜೋಗತಿಯರು ಎದುರು ಹಾಕಿಕೊಳ್ಳುವುದನ್ನು ಊಹಿಸದಿದ್ದ ನಮಗೆ ಇದೆಲ್ಲ ಅನಿರೀಕ್ಷಿತ ಬೆಳವಣಿಗೆಯಾಗಿತ್ತು. ಜನರು ಅಲ್ಲಿ ಡಿ.ಎಸ್.ಎಸ್. ಕಾರ್ಯಕರ್ತರನ್ನ ಹೊಡೆದರಂತೆ. ಇಲ್ಲಿ ಬಟ್ಟೆ ಬಿಚ್ಚಿದರಂತೆ, ಎಂಬ ವದಂತಿಗಳನ್ನ ಹಬ್ಬಿಸಿ ಸರ್ಕಾರದ ವ್ಯವಸ್ಥೆಯಲ್ಲಾಗಲೀ, ಡಿಎಸ್ ಎಸ್ ಮತ್ತಿತರ ಹೋರಾಟಗಾರರಾಗಲೀ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಏನೂ ತಿಳಿಯದಂತಾಗಿದ್ದರು. ನನ್ನೊಡನೆ ಇದ್ದ ಸಿಬ್ಬಂದಿ ಚದುರಿ ಹೋಗಿ ನಾನು ರಕ್ಷಣೆಗಾಗಿ ಪೋಲೀಸ್ ವ್ಯಾನಿಗೆ ಹತ್ತಿಕೊಂಡಿದ್ದೆ. ನಾವು ತಂದಿದ್ದ ಜೀಪಿಗೆ ಬೆಂಕಿ ಹಚ್ಚಿಟ್ಟು ಜೋಗತಿಯರು ಅಟ್ಟಹಾಸ ಮೆರೆದಿದ್ದರು. ನಾವು ವ್ಯಾನಿನ ಒಳಗೆ ಇದ್ದು, ಇನ್ನು ಮುಂದೆ ಏನಾಗುವುದೋ ಅನ್ನೋ ಆತಂಕದಲ್ಲಿದ್ದಾಗ ನನಗೆ ಪರಿಚಿತ ವ್ಯಕ್ತಿಯೊಬ್ಬ ಓಡಿಬಂದು ನನ್ನ ಪರಿಚಯ ಗುರುತು ಸಿಗದಂತೆ ಭಂಡಾರ ಹಾಕಿ ಅಲ್ಲಿಂದ ತನ್ನ ಮನೆಗೆ ಕರೆದುಕೊಂಡು ಹೋಗಿ ತನ್ನ ಪಂಚೆ ನೀಡಿ ಪ್ಯಾಂಟ್ ಷರಟು ತೆಗೆಸಿ ನಾನು ಯಾರೋ ಅನ್ನೋ ರೀತಿ ಮಾಡಿಕೊಂಡು ತನ್ನ ರಾಜದೂತ್ ಮೋಟಾರ್‌ಬೈಕ್‌ನಲ್ಲಿ ಸೊರಬಕ್ಕೆ ತಂದುಬಿಟ್ಟರು.

ಅಲ್ಲಿಂದ ಎಲ್ಲರಿಗೂ ಫೋನ್ ಮಾಡಿ ಆಗಿದ್ದ ಅನಾಹುತವನ್ನು ತಿಳಿಸಿದೆ. ಇದು ಸುಮಾರು ಮಧ್ಯಾಹ್ನ 3.00 ಘಂಟೆಯ ತನಕ ಜೋಗತಿಯರ ಅಟ್ಟಹಾಸಕ್ಕೆ ಗುರಿಯಾದ ಡಿ.ಎಸ್.ಎಸ್. ಮತ್ತು ಇತರೆ ಕರ‍್ಯಕರ್ತರು ತಮಗೆ ಸಿಕ್ಕ ಸಿಕ್ಕ ಕಡೆ ಚದುರಿ ಪ್ರಾಣ ಉಳಿಸಿಕೊಳ್ಳಲು ತಪ್ಪಿಸಿಕೊಂಡು ಪರಾರಿಯಾದರು. ಈ ಸಂದರ್ಭದಲ್ಲಿ ಕೃಷ್ಣಪ್ಪನವರೇನಾದರೂ ಈ ಜೋಗತಿಯರ ಕೈಗೆ ಸಿಕ್ಕಿದ್ದರೆ ಬಹುಶಃ ಅಂದೇ ಅವರ ಕೊಲೆ ಮಾಡಲು ಹೇಸುತ್ತಿರಲಿಲ್ಲ.

ಸುಮಾರು 4.00 ಘಂಟೆಯ ಸುಮಾರಿಗೆ ಹೆಚ್ಚಿನ ಪೋಲೀಸ್ ಬಂದು ಇಡೀ ಜೋಗತಿಯರ ಸಮೂಹವನ್ನು ಬೆತ್ತಲೆಯಾಗಿಯೇ ಅರೆಸ್ಟ್ ಮಾಡಿ ಸೊರಬ ಪೋಲೀಸ್ ಠಾಣೆಯಲ್ಲಿ ಕೂಡಿ ಹಾಕಿದ್ದರು. ಸುಮಾರು 5-6 ಘಂಟೆಯ ಸುಮಾರಿಗೆ ಪೋಲೀಸ್ ಬಂದು ಇವರಲ್ಲಿ ಯಾರು ನಿಮ್ಮ ಮೇಲೆ ಹಲ್ಲೆ ಮಾಡಿದರು ಗುರ್ತಿಸಿ ಎಂದು ಹೇಳಿದರು.

ಪೊಲೀಸರೊಡನೆ ಹೋಗಿ ನೋಡುತ್ತೇನೆ, ಅದೊಂದು ಭಯಂಕರ ದೃಶ್ಯ. ಪೀಚಲು ದೇಹಗಳ ಅನಾರೋಗ್ಯವೇ ಮೂರ್ತಿವೆತ್ತ- ಕುಡಿತದ ಅಮಲಿನಲ್ಲಿದ್ದ ಅವರಿಗೆ ತಾವೇನು ಮಾಡಿದ್ದೆವು ಅನ್ನುವುದೇ ಅವರಿಗೆ ಗೊತ್ತಿರಲಿಲ್ಲ. ಯಾವುದೋ ಕಾಡಿನ ಪ್ರಾಣಿಗಳಂತೆ ಪಿಳಿಪಿಳಿ ಕಣ್ಣು ಬಿಡುತ್ತಾ ಆ ರೂಮಿಗೆ ಬಂದವರನ್ನು ನೋಡುತ್ತಿದ್ದರು. ನನಗೆ `ಯಾರು ಏನು ಮಾಡಿದರು ಎನ್ನುವುದನ್ನ ಯಾರ ಮೇಲೆ ಹೇಳಲಿ’ ಎನ್ನುತ್ತಾ ಈಚೆಗೆ ಬಂದೆ. ಆದರೆ ಈ ಜೋಗತಿಯರು ಅಂತಹ ಸ್ಥಿತಿಯಲ್ಲೂ ತಮ್ಮ ಬಳಿ ಬೆಳಗಿನಿಂದ ದೋಚಿದ ಒಡವೆಗಳು ಮತ್ತು ಹಣ ಇರುವುದು ಸಣ್ಣ ಸಣ್ಣ ಚೀಲಗಳಲ್ಲಿರುವುದು ಪರಿಶೀಲಿಸಿದಾಗ ಕಂಡು ಬಂತು.

ಈ ಘಟನೆಯ ನಂತರ ಆದ ಮಾರನೇ ದಿನ ರಾಜ್ಯದ ವಿವಿಧ ಪತ್ರಿಕೆಗಳಲ್ಲಿ ಪ್ರಮುಖ ಸುದ್ದಿಯಾಗಿ ವರದಿಗಳು ಪ್ರಕಟಗೊಂಡವು. ನಾನು ಆತಂಕದಿAದ ನನ್ನ ಹೆಂಡತಿಗೆ ‘I ಚಿm Sಚಿಜಿe’ ಎಂದು ತಂತಿ ನೀಡಿದಾಗ ಅವಳು ಗಲಿಬಿಲಿಗೊಂಡು ಫೋನ್ ಮಾಡಿದಳು. ಇತ್ತ ನನ್ನ ಹಳ್ಳಿ ಹನಗವಾಡಿಯಿಂದ ಬಂದಿದ್ದ ಜೋಗತಿಯರಿಂದಲೇ ರೋಚಕವಾಗಿ ತಲುಪಿದ್ದ ಸುದ್ದಿಯಿಂದ, ವರದಿಗಳನ್ನು ಕೇಳಿಕೊಂಡ ನಮ್ಮ ಊರಿನ ಜನರು ಮತ್ತು ನಮ್ಮ ಅವ್ವ, ಅಣ್ಣ-ತಮ್ಮಂದಿರು ಮತ್ತು ಮಿತ್ರರ ದಂಡು ಸೊರಬಕ್ಕೆ ನನ್ನನ್ನು ನೋಡಲು ಬಂದಿದ್ದರು. ಅವರು ನಾನು ಮಾಮೂಲಿನಂತೆ ಇದ್ದುದನ್ನು ನೋಡಿ ನೆಮ್ಮದಿಗೊಂಡರು. ನನ್ನ ತಮ್ಮನೊಬ್ಬ ನಿನ್ನನ್ನು ಆಸ್ಪತ್ರೆಯಲ್ಲಿ ಬ್ಯಾಂಡೇಜ್ ಸಮೇತ ನೋಡುವ ಕಲ್ಪನೆಯಲ್ಲಿಯೆ ಓಡಿ ಬಂದೆವು ಎಂದಾಗ ನಾನು ಕೂದಲೆಳೆಯಲ್ಲಿ ಸಾವು ತಪ್ಪಿದ್ದನ್ನು ವಿವರಿಸಲಿಲ್ಲ.

ನಾನು ತಹಶೀಲ್ದಾರನಾಗಿ ಹೊಸದರಲ್ಲಿ ಆಗಿದ್ದ ಈ ಘಟನೆ ಇಂದಿಗೂ ನನಗೆ ಎಚ್ಚರಿಕೆಯ ಮಾರ್ಗ ಸೂಚಿಯಾಗಿದೆ. ಒಂದು ವಿಷಾದದ ಸಂಗತಿಯೆAದರೆ ನಮ್ಮ ಪೋಲೀಸರು ಇಂದಿಗೂ ಯಥಾಸ್ಥಿತಿಯ ರಕ್ಷಕರಾಗಿಯೇ ಉಳಿದಿದ್ದಾರೆ. ಅವರನ್ನು ಬದಲಾಗುತ್ತಿರುವ ಕಾಲಮಾನದ ಜೊತೆಗೆ ಬದಲಾವಣೆಯ ರೂವಾರಿಗಳಾಗುವಂತೆ ತರಬೇತಿ ನೀಡುವಲ್ಲಿ ಸರ್ಕಾರವು ಒತ್ತು ನೀಡುವುದು ಇಂದಿನ ಅಗತ್ಯವಾಗಿದೆ.

ಈ ಘಟನೆಯ ನಂತರದ ಆದ ಬೆಳವಣಿಗೆಯ ಹಿನ್ನೆಲೆಯಲ್ಲಿ ಒಂದು ಮಹತ್ತರ ಬದಲಾವಣೆ ಆ ಪ್ರದೇಶದಲ್ಲಿ ಆಗಿದೆ. ಬೆತ್ತಲೆ ಸೇವೆಯನ್ನು ಸರ್ಕಾರ ನಿಷೇಧಿಸಿದೆ. ಅದರೊಟ್ಟಿಗೆ ಅನೇಕ ಸಾಮಾಜಿಕ ಅನಿಷ್ಟಗಳ ಬಗ್ಗೆ ಸಾಮಾನ್ಯ ಜನರ ಮಧ್ಯದಲ್ಲಿ ಚರ್ಚೆಗಳಾಗಿವೆ. ಕೃಷ್ಣಪ್ಪನವರ ಹೋರಾಟ ಹೊಸ ದಿಕ್ಕಿನೆಡೆಗೆ ಸಮಾಜವನ್ನು ಮುಖ ಮಾಡಿಸಿದೆ. ಇದು ಅವರ ಆತ್ಮಕ್ಕೆ ನೆಮ್ಮದಿಯನ್ನು ನೀಡಿದೆ ಎಂದರೆ ತಪ್ಪಾಗಲಾರದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆತ್ಮಕತೆ | ಕೇಂದ್ರದಲ್ಲಿ ಮೂಡಿ ಮಡಿದವರು

Published

on

  • ರುದ್ರಪ್ಪ ಹನಗವಾಡಿ

ಮನಸ್ಸಿನಲ್ಲಿ ಉಳಿದು ಹೋದ ಆರೋಗ್ಯವಂತ ವಿದ್ಯಾರ್ಥಿಗಳ ಕಿರುಚಿತ್ರಣ

ಯಶೋದ

ಈಗ್ಗೆ ಸುಮಾರು 8 ವರ್ಷಗಳಿಂದ ಅಧ್ಯಾಪಕ ವೃತ್ತಿಯನ್ನು ಮಾಡಿಕೊಂಡು ಬರುತ್ತಿದ್ದೇನೆ. ಈ ಅವಧಿಯಲ್ಲಿ ನಾವು ಸಂಪರ್ಕಿಸಿದ ವಿದ್ಯಾರ್ಥಿಗಳು ಹಲವು ನೂರು ಸಂಖ್ಯೆಗಳಿಗೆ ಮೀರಬಹುದು. ಹಲ ಕೆಲವರು ನಮ್ಮಿಂದ ಕಲಿತವರಿದ್ದರೆ, ಮತ್ತೆ ಕೆಲವರು ಇವರದೇನು ಎಂಬ ಮಾತಿರಬಹುದು. ಹೀಗೆ ಪ್ರತಿವರ್ಷವೂ ಬಂದು ಹೋಗುವ, ಹಲವು ಹತ್ತಾರು ವಿದ್ಯಾರ್ಥಿಗಳಲ್ಲಿ ಕೆಲವು ವಿದ್ಯಾರ್ಥಿಗಳು ಅವರ ವಿಶೇಷ ಗುಣಗಳಿಗೆ, ಸಾಮರ್ಥ್ಯಕ್ಕೆ ಹೆಸರಾಗಿ ಹಲವರು ಮನಸ್ಸಲ್ಲಿ ಚಿರಸ್ಥಾಯಿಯಾಗಿ ಉಳಿಯುತ್ತಾರೆ. ಹಾಗೆ ಉಳಿದು ನಿಜ ಬದುಕಿನಲ್ಲಿ ಅಳಿದು ಹೋದ ಕೆಲವು ವಿದ್ಯಾರ್ಥಿಗಳ ನೆನಪು ಮಾಡಿಕೊಳ್ಳುವುದೇ ಈ ಲೇಖನದ ಉದ್ದೇಶ.

1981ನೇ ವರ್ಷ ನನ್ನ ಬದುಕಿನಲ್ಲಿ ಅನೇಕ ಘಟನಾವಳಿಗಳಿಂದ ಕೂಡಿದ ವರ್ಷ. ಮೇ ತಿಂಗಳಲ್ಲೊಂದು ದಿನ ನಮ್ಮ ಊರಿಗೆ ಹೋಗಿ, ಅಲ್ಲಿನ ತರಲೆಗಳನ್ನೆಲ್ಲ ತಲೆಯಲ್ಲಿ ತುಂಬಿಕೊAಡು ಅವ್ವ ಕೊಟ್ಟ ಸಣ್ಣಪುಟ್ಟ ಸಾಮಾನುಗಳನ್ನು ಕಟ್ಟಿಕೊಂಡು ಮೂರು ಮೈಲು ನಡೆದು. ಶಿವಮೊಗ್ಗದ ಬಸ್ಸು ಹಿಡಿದು ಪ್ರಾಜೆಕ್ಟ್ ತಲುಪುವ ವೇಳೆಗೆ ನನಗೆ ಸಾಕೋ ಸಾಕಾಗಿ ಹೋಗಿತ್ತು. ಹಲವು ಆತಂಕಗಳನ್ನು ಪಾರುಮಾಡಿಕೊಂಡು ನಮಗಾಗಿದ್ದ ಮಗ, ಹೆಂಡತಿಯನ್ನು ನೋಡೋ ಕಾತರದಲ್ಲಿ ದಣಿವು ಕರಗುತ್ತಿತ್ತು. ಮನೆಯೊಳಗೆ ಕಾಲಿಡುತ್ತಿದ್ದಂತೆ ಮಗನ ಆಟ-ಪಾಟ, ತನ್ನ ನೌಕರಿ ವಿಷಯ ಹೇಳುತ್ತಿದ್ದೆ.

ನನ್ನಾಕೆ `ಶಿವಮೊಗ್ಗದಲ್ಲೇನಾದರು ಕಾಫಿ ಕುಡಿದಿದ್ದೀರಾ?’ ಎಂದು ಕೇಳಿದಳು. ನನಗೆ ಅದ್ಯಾವ ದೊಡ್ಡ ಪ್ರಶ್ನೆ ಎಂದು ಉತ್ತರಿಸುವ ಗೋಜಿಗೆ ಹೋಗದೆ ಆರಾಮವಾಗಿ ಕೂರುವ ಹಂಚಿಕೆಯಲ್ಲಿದ್ದೆ. ಇಪ್ಪತ್ನಾಲ್ಕು ಗಂಟೆಗಳೂ ತಾನೊಬ್ಬಳೇ ಸಹಿಸಿಕೊಂಡು ಹಿಂಸೆಪಟ್ಟುದನ್ನು ಒಮ್ಮೆಲೆ ಕಣ್ಣೀರ ಕೋಡಿಯಲ್ಲಿ ಉಸುರಿದಳು. `ಯಶೋದÀ ಬೆಂಗಳೂರಲ್ಲಿ ತೀರಿ ಹೋದಳಂತೆ, ನಿಮಗೆ ಫೋನ್ ಮಾಡಿದ್ದರು’ ಎಂದಾಗ ನನಗೆ ಅಸಾಧ್ಯ ಸಂಕಟದೊಡನೆ ದಿಗ್ಭçಮೆಯಾಯಿತು. ಹತ್ತಿರದ ಮನೆಯವರಿಂದ ಸೈಕಲ್ ಪಡೆದು ಅವಳ ಶವ ತಂದ ಹಳ್ಳಿಯ ಕಡೆಗೆ ವೇಗವಾಗಿ ಹೊರಟೆ.

1977-78ರ ಈ ಕೇಂದ್ರದ ಪ್ರಾರಂಭದ ದಿನಗಳಲ್ಲಿ ಅಭಿನಯಿಸಲಾದ ಅನೇಕ ನಾಟಕಗಳಲ್ಲಿ ಸ್ಫೂರ್ತಿಯನ್ನು ವೈವಿಧ್ಯತೆಯನ್ನು ತಂದು ಕೊಟ್ಟ ಇವಳು ಅಭಿನಯ ಕಲೆಯಲ್ಲಿ ನಿಷ್ಣಾತಳಾಗಿದ್ದಳು. ಅರ್ಥಶಾಸ್ತçದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣಳಾಗಿ ಕರ್ನಾಟಕದ ಮುಖ್ಯ ಸಂಶೋಧನ ಕೇಂದ್ರದಲ್ಲಿ ಸಂಶೋಧನೆ ಮಾಡುತ್ತಿದ್ದ ಇವಳ ಸಾವು, ನಮ್ಮ ಕೇಂದ್ರದಿAದ ಹಾರಿಬಿಟ್ಟ ಹಕ್ಕಿಯ ರೆಕ್ಕೆ ಮುರಿದು ಬೆಂಕಿಗೆ ಬಿದ್ದಷ್ಟು ನೋವು ತಂದಿತ್ತು.

ವಿದ್ಯಾರ್ಥಿ ದೆಸೆಯಿಂದಲೂ ಉದಾತ್ತ ಗುಣಗಳನ್ನು ಬೆಳೆಸಿಕೊಂಡಿದ್ದ ಯಶೋದ ನ್ಯಾಯಕ್ಕಾಗಿ ಯಾರ ನಿಷ್ಠುರವನ್ನೂ ಲೆಕ್ಕಿಸದ, ನೇರ ಮನಸ್ಸಿನ ಸರಳ ಸುಂದರ ಹುಡುಗಿ. ನಮ್ಮ ಅನೇಕ ಹುಡುಗ-ಹುಡುಗಿಯರಲ್ಲಿ ಕಾಣಸಿಗದ, ಆರೋಗ್ಯಕರ ಮನಸ್ಸಿನ ಈ ಹುಡುಗಿಗೆ ಅನಾರೋಗ್ಯವು ಇಷ್ಟು ಬೇಗ ಸಾವು ತರುವುದೆಂದು ಯಾರು ತಾನೆ ಊಹಿಸಿದ್ದರು? ನನ್ನ ಮಗನನ್ನು ನೋಡಲು ಬರುವೆ ಎಂದು ಕಾಗದ ಬರೆದಿದ್ದು, ಇವಳು ಕೊನೆಗೆ ಮಾಂಸದ ಮುದ್ದೆಯಾಗಿ ಅವಳ ಊರಲ್ಲಿ ನೋಡಿ, ನನ್ನ ವಿದ್ಯಾರ್ಥಿನಿಯಾಗಿ ಓಡಾಡುತ್ತಿದ್ದವಳು ಇವಳೇ ಎಂದು ಯೋಚನೆಯಲ್ಲಿ ಮುಳುಗುವಂತೆ ಮಾಡಿ ಮರೆಯಾದಳು.

ಬಷೀರ್ ಅಹಮದ್

ಬಷೀರ್ ಅಹಮದ್ ಎಂಬ ವಿದ್ಯಾರ್ಥಿ ಓದು ಮುಗಿಸಿ ಹೋದ ನಂತರ, ಆತನ ಶಿಸ್ತನ್ನು ಹೋಲುವ ವಿದ್ಯಾರ್ಥಿಗಳು ನಮ್ಮ ಕೇಂದ್ರಕ್ಕೆ ಬಂದಿಲ್ಲವೆಂದೇ ಹೇಳಬೇಕು. ವಿನಯ ವಿದ್ಯಾಭ್ಯಾಸದ ಲಕ್ಷಣ ಎನ್ನುವ ರೀತಿಯಂತೆ ಈತನ ನಡವಳಿಕೆ.

ಕನ್ನಡವನ್ನು ಸರಾಗವಾಗಿ ಮಾತನಾಡಲಾರದವನಾಗಿದ್ದ ಈತ ನನ್ನನ್ನು ಹಲವು ಬಾರಿ ಕಾಡಿ ಕನ್ನಡವನ್ನು ಕಲಿತದ್ದುಂಟು. ಅವನ ಮಧುರವಾದ ಕಂಠದಿಂದ ಕನ್ನಡ ಹಾಡುಗಳನ್ನು ಹಾಡಿಸಲು ನಾನು ಕನ್ನಡ ಪದ್ಯಗಳನ್ನು ವಿವರಿಸಿ ಬರೆದುಕೊಡುತ್ತಿದ್ದೆ. ಅವನಿಗೆ ಇದ್ದ ಅಪಾರ ಶ್ರದ್ಧೆಯಿಂದಾಗಿ ಸುಲಲಿತವಾಗಿ ಕನ್ನಡ ಮಾತಾಡುವುದರ ಜೊತೆಗೆ, ಕನ್ನಡ ಹಾಡುಗಳನ್ನು ಹಾಡಿ ನಮ್ಮ ಕೇಂದ್ರದ ಮತ್ತು ನಮ್ಮ ಈ ಪರಿಸರದ ಜನರ ಹೃದಯದಲ್ಲಿ ಈಗಲೂ ಗುಂಯ್‌ಗುಡುತ್ತಿದ್ದಾನೆ.

ಕೇಂದ್ರದಿಂದ ಎಂ.ಎ., ಪಾಸು ಮಾಡಿಕೊಂಡು ಹೋದ ಮೇಲೆ ಬೆಂಗಳೂರಿನಲ್ಲಿ ಉಪಾಧ್ಯಾಯನಾಗಿ ಕೆಲಸ ಮಾಡುತ್ತಿರುವಾಗ ಮತ್ತೆ ಪ್ರಾಜೆಕ್ಟ್ಗೆ ಬಂದಿದ್ದನು. ಆತನ ಕಂಠ ಮಾಧರ‍್ಯವನ್ನು ಸವಿಯಲು, ಮನೆಗೆ ತಿಂಡಿ ತಿನ್ನಲು ಬನ್ನಿ ಎಂದು ಆಹ್ವಾನಿಸಿದೆ. ಆತ, ತಿಂಡಿ ತಿನ್ನಲು ಬೇರೊಬ್ಬ ಅಧ್ಯಾಪಕರು ಕರೆದಿದ್ದಾರೆ, ನಿಮ್ಮ ಮನೆಗೆ ಊಟಕ್ಕೇನೆ ಬರುವೆ ಸಾರ್, ಅಂದಾಗ ಸಂತೋಷದಿAದ ಕರೆದೊಯ್ದೆ. ಜೊತೆಗೆ ಮಾತುಕತೆ ಹೀಗೆ ನಡೆದಿತ್ತು. ಪುಳಿಚಾರು ಊಟ ಕಣಯ್ಯಾ ಎಂದಾಗ, ಮುಂದಿನ ಸಾರಿ ನಾನೆ ಬಂದು ಬಿರಿಯಾನಿ ಮಾಡುವೆ ಎಂದು ಹೇಳಿದ. ಬಿರಿಯಾನಿ ಮಾಡಿ ಉಣ್ಣುವ ದಿನ ಬರುವ ಮುನ್ನವೇ ಜಾಂಡೀಸ್ ಬಂದು ಬಷೀರ್ ಇನ್ನಿಲ್ಲವಾದ. ಸತ್ತ ಹಲವು ದಿನಗಳ ನಂತರ ಬಂದ ಪತ್ರದಿಂದ ಸಂಕಟವಾಯಿತು.

ಈಗ ಯಾವ ಸಭೆ ಸಮಾರಂಭಗಳಲ್ಲಿ ಯಾರು ಹಾಡು ಹೇಳಿದರೂ ಬಷೀರ್‌ನ ನೆನಪು ಬಂದು ಕಣ್ಣು ತೇವವಾಗುತ್ತದೆ. ಕಡುಬಡತನದಿಂದ ಬಂದು ಅಪಾರ ಸ್ವಾಭಿಮಾನಿಯಾಗಿ ಬೆಳೆದು ಅಧ್ಯಾಪಕರೆಲ್ಲರ ವಿಶ್ವಾಸ ಗಳಿಸಿ ನಿಗರ್ವಿಯಾಗಿದ್ದ ಬಷೀರ್ ಅಹಮದ್ ಹಲವು ಆಸೆಗಳನ್ನಿಟ್ಟುಕೊಂಡು ಹಗಲಿರುಳು ದುಡಿಯುತ್ತಿದ್ದ. ಸಾಮಾನ್ಯ ರೋಗವೊಂದು ಅವನ ಆಸೆಗಳಿಗೆ, ಅವನ ಸಾಮರ್ಥ್ಯಗಳಿಗೆ ಇತಿಶ್ರೀ ಹಾಡುವುದೆಂದು ಯಾರು ತಾನೆ ನಂಬಿದ್ದರು?

ಗೋಪಾಲಸ್ವಾಮಿ

ಈತ ನಮ್ಮ ಕೇಂದ್ರಕ್ಕೆ ಬಂದಾಗಲೇ ನನಗೆ, ಹೊಸ ಶಕ್ತಿಯುಳ್ಳ ಯುವಕನೊಬ್ಬ ಬಂದಿದ್ದಾನೆ ಎಂಬ ಆಸೆ ಹುಟ್ಟಿತ್ತು, ಗೋಪಾಲಸ್ವಾಮಿ ನೋಡಲು ಪೀಚಲು. ಇವನೆಂತಹ ಹುಡುಗ ಎಂದು ಯಾರಾದರೂ ಕಡೆಗಣಿಸಬಹುದಾಗಿದ್ದ ಈತ ಮನದೊಳಗೆ ಅಗಾಧ ಬಾಂಬನ್ನೇ ಇಟ್ಟುಕೊಂಡಿದ್ದು ಸಿಡಿಸಲಾಗುವ ಮುನ್ನವೇ ನೆನಪಾಗಿ ಹೋದನು.

ಕನ್ನಡ ಎಂ.ಎ., ಗೆ ಬಂದು ಸೇರಿದಾಗ ಸಂಘಟನೆ, ಬಂಡಾಯ ಎಂದು ಹಲವು ಹತ್ತು ರೀತಿಯ ಹೋರಾಟದಲ್ಲಿ ಹಲವು ಬಾರಿ ಪೋಲೀಸ್ ಏಟು ತಿಂದು ಈ ದೇಶದ ಜಡ್ಡುಗಟ್ಟಿದ ಸಮಾಜದ ನಿರ್ಲಜ್ಜ ಅಸಮಾನತೆಯನ್ನು ಧಿಕ್ಕರಿಸಿದ ಈತನಿಗೆ ಸ್ವಂತ ಆಸೆಗಳು ದೂರ. ಈತ ನಮ್ಮ ಕೇಂದ್ರಕ್ಕೆ ಬಂದಾಗಲೇ ನನಗೆ, ಹೊಸ ಶಕ್ತಿಯುಳ್ಳ ಯುವಕನೊಬ್ಬ ಬಂದಿದ್ದಾನೆ ಎಂಬ ಆಸೆ ಹುಟ್ಟಿತ್ತು. ಆದರೆ ಅದು ಬಹಳ ದಿನ ಉಳಿಯಲಿಲ್ಲ.

ಸಾಮಾನ್ಯ ಖಾಯಿಲೆಯೆಂದು ಮೆಗ್ಗಾನ್ ಆಸ್ಪತ್ರೆ ಸೇರಿದ. ಈತನ ಹಣಕಾಸಿನ ಸಮಸ್ಯೆಗೆ ವಿದ್ಯಾರ್ಥಿಗಳು ಅಧ್ಯಾಪಕರು ಹಣ ಸೇರಿಸಿಕೊಟ್ಟರು. ವಿದ್ಯಾರ್ಥಿ ಜೀವನದುದ್ದಕ್ಕೂ ಹೋರಾಟದ ಬದುಕಿನಲ್ಲಿ ಏಟು ತಿಂದು ಅಪರೂಪದ ವ್ಯಕ್ತಿಯ ಬದುಕು ಬೆಳಗುವ ಮುನ್ನವೇ ನಂದಿಹೋಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆತ್ಮಕತೆ | ಮಗು : ಆತಂಕದ ಕ್ಷಣಗಳು

Published

on

ಪತ್ನಿ ಗಾಯತ್ರಿ ಹಾಗೂ ಮಗ ಶಿಶಿರನೊಂದಿಗೆ ಲೇಖಕ ರುದ್ರಪ್ಪ ಹನಗವಾಡಿ
  • ರುದ್ರಪ್ಪ ಹನಗವಾಡಿ

ದುವೆಯಾಗಿ 1-2 ವರ‍್ಷ ಮಕ್ಕಳ ಕನಸು ಬೇಡ ಎಂದು ಯೋಚಿಸಿದ್ದರೂ ಅದೇನು ಸಫಲವಾಗದೆ ನನ್ನ ಮಗ ಶಿಶಿರ ಆಗಮಿಸಿದ್ದ.

ಭದ್ರಾವತಿಯಲ್ಲಿ ಇಂದಿರಾ ಅವರ ಮನೆಗೆ ಹೋಗಿ ಅಲ್ಲಿಂದ ಲೇಡಿ ಡಾಕ್ಟರ್ ಬಳಿ ಹೋಗಿ ತಪಾಸಣೆ ಮಾಡಿಸಿದೆವು. ನಮ್ಮಿಬ್ಬರ ರಕ್ತದ ಗುಂಪು ಆರ್‌ಹೆಚ್ ಪಾಸಿಟಿವ್ ನೆಗೆಟಿವ್‌ಗಳಾಗಿದ್ದು ನೀವು ರ‍್ಭಿಣಿ ಆಗಲು ಸಾಧ್ಯವಿಲ್ಲ. ಇದೆಲ್ಲ ಹೇಗಾಯಿತೆಂಬ ಅಭಿಪ್ರಾಯ ತಿಳಿಸಿ, ನಮಗೆ ದಿಗಿಲು ಬೀಳುವಂತೆ ವಿವರಿಸಿದ್ದಳು. ನಮಗಾರಿಗೂ ಬೇರೆ ಡಾಕ್ಟರ್ ಪರಿಚಯವಿಲ್ಲದೆ ಇರುವಾಗ ಡಾ. ಹೆಚ್. ಶಿವರಾಂ ಅವರು ಮೆಗ್ಗಾನ್ ಹಾಸ್ಪಿಟಲ್‌ನಲ್ಲಿ ಜನರಲ್ ಫಿಜಿಸಿಯನ್ ಆಗಿ ಇರುವುದು ತಿಳಿಯಿತು.

ಶಿವರಾಂ ಡಾಕ್ಟರ್ ನಮಗೆ ಮೈಸೂರಿನಲ್ಲಿರುವಾಗ ಎಸ್‌ವೈಎಸ್ ರ‍್ಯಕ್ರಮಗಳ ಹುಡುಗರ ಆರೋಗ್ಯ ಸಮಸ್ಯೆ ಬಂದಾಗ ಉಪಚರಿಸುತ್ತಿದ್ದರು. ಡಾ. ಶಿವರಾಂ ಅವರು ಹಾಸನ ಜಿಲ್ಲೆಯ ಸಕಲೇಶಪುರದ ಹಾನಬಾಳ್ ಗ್ರಾಮದವರು. ಶಿವರಾಂ ಅವರಿಗೆ ರ‍್ಣಚಂದ್ರ ತೇಜಸ್ವಿ, ಕಡಿದಾಳ್ ಶಾಮಣ್ಣ, ಸುಂದರೇಶ್, ರವರ‍್ಮಕುಮಾರ್ ಇವರೆಲ್ಲ ಪರಿಚಯವಿದ್ದವರು. ಮತ್ತು ನನಗೆ ಮೈಸೂರಿನಲ್ಲಿ ಓದುವಾಗಲೇ ಪರಿಚಯವಾಗಿದ್ದರು. ನಾನು ಮೈಸೂರು ಮಹಾರಾಜಾ ಕಾಲೇಜಿನಿಂದ ಬಿಆರ್‌ಪಿಗೆ ಬಂದದ್ದು, ನಂತರ ಮದುವೆಯಾದದ್ದು ಈಗ ನನ್ನ ಹೆಂಡತಿ ಗರ‍್ಭಿಣಿ ಆಗಿರುವ ಸುದ್ದಿ ತಿಳಿದು ಸಂತೋಷಗೊಂಡರು. ನಂತರ ಗಾಯತ್ರಿ ಭದ್ರಾವತಿಯ ಲೇಡಿ ಡಾಕ್ಟರ್ ಹೇಳಿದ ವಿಚಾರ ತಿಳಿಸಿದೆ.

ಅವರು ತಪಾಸಣೆ ನಡೆಸಿ ಇದೆಲ್ಲ ಏನೂ ಇಲ್ಲ ಇಡೀ ಏಶಿಯಾ ಖಂಡದಲ್ಲಿ ಶೇ 15ರಷ್ಟು ಜನರು ಆರ್‌ಹೆಚ್ ಪಾಸಿಟಿವ್ ನೆಗಟಿವ್ ಸಮಸ್ಯೆ ಇರುವವರು, ಅದಕ್ಕಾಗಿ ನೀವು ಚಿಂತಿಸಬೇಕಾಗಿಲ್ಲ ಎಂದು ಹೇಳಿ ಆಗ ಗೈನಾಕಾಲಜಿಸ್ಟ್ ಆಗಿದ್ದ ಡಾ. ಮುರುಗೇಂದ್ರಪ್ಪ ಅವರಿಗೆ ರೆಫರ್ ಮಾಡಿ ತಪಾಸಣೆ ನಡೆಸಿದ ನಂತರ ಕೆಲವು ಸಲಹೆ ನೀಡಿದರು. ಕೆಲವು ದಿನ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ ಮೇರೆಗೆ ನಾವಿಬ್ಬರೂ ಮೆಗ್ಗಾನ್ ಆಸ್ಪತ್ರೆಯಲ್ಲಿ ಇರಬೇಕಾಗಿ ಬಂತು. ಈ ಸಮಯದಲ್ಲಿ ಗಾಯತ್ರಿಗೆ ಹಾಲು ಮೆತ್ತನೆ ಅನ್ನ ಬಿಟ್ಟರೆ ಬೇರೇನೂ ಪಥ್ಯ ಹೇಳಿರಲಿಲ್ಲ. ನಾವು ಅದಕ್ಕಾಗಿ ಒಂದು ಸ್ಟವ್ ತಂದು ಅನ್ನ ಮತ್ತು ಹಾಲನ್ನು ನಮಗೆ ನೀಡಿದ ರೂಂನಲ್ಲಿಯೇ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೆವು. ನನಗೆ ಇಂದಿರಾ ಮತ್ತವರ ಸ್ನೇಹಿತರಾದ ಸಾಕಮ್ಮ ಹಾಗೂ ಎಂ.ಬಿ. ನಟರಾಜ್ ಅವರ ಪತ್ನಿ ಲಕ್ಷ್ಮಿ ಇವರುಗಳ ಮನೆಯಿಂದ ಚೆನ್ನಾಗಿರುವ ಊಟ ಬರುತ್ತಿತ್ತು. ಜೊತೆಗೆ ಶಿವರಾಂ ಅವರ ನಿವಾಸ ಕೂಡ ಆಸ್ಪತ್ರೆ ಹತ್ತಿರವಿತ್ತು. ನನಗೆ ಅವರ ಮನೆಗೆ ಹೋಗಿ ಊಟ ಮಾಡಿಕೊಂಡು ಬರಲು ಶಿವರಾಂ ಡಾಕ್ಟರ್ ಹೇಳುತ್ತಿದ್ದರು.

ಶಿವರಾಂ ಅವರ ಶ್ರೀಮತಿ ಆಶಾ, ಅತ್ತೆ ಶಾರದಮ್ಮ ಮತ್ತವರ ತಾಯಿ ತಂದೆ ಕೂಡ ಮನೆಯಲ್ಲೇ ಇದ್ದರು. ಅವರಿಗೆ ಇಬ್ಬರು ಮುದ್ದಾದ ಹೆಣ್ಣು ಮಕ್ಕಳು ಇದ್ದರು. ಶಿವರಾಂ ಅವರ ಮಾವ ಸ್ವಾತಂತ್ರ್ಯ ಹೋರಾಟಗಾರರು. ರೈತ ಸಂಘದಲ್ಲಿ ಸಕ್ರಿಯ ನಾಯಕರಾಗಿದ್ದರು. ಈ ಎಲ್ಲರ ಪರಿಚಯದಿಂದಾಗಿ ನನಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಗಾಯತ್ರಿಯ ಆರೋಗ್ಯ ತಪಾಸಣೆ ಸಮಯದಲ್ಲಿ ಇದ್ದ ಆತಂಕ ದೂರವಾಗಿತ್ತು. ಪ್ರಭು ಜೊತೆಗೆ, ದಿವಾಕರ ಹೆಗ್ಗಡೆ ಆಗ ತಾನೆ ತನ್ನ ಪುಸ್ತಕದ ಅಂಗಡಿ ತೆರೆದುಕೊಂಡಿದ್ದರು. ಜೊತೆಗೆ ಲಂಕೇಶ್ ಪತ್ರಿಕೆಯ ವರದಿಗಾರನೂ ಆಗಿ ಶಿವಮೊಗ್ಗದಲ್ಲಿದ್ದರು. ನಾನು ಬಿಆರ್‌ಪಿಯಿಂದ ಊರಿಗೆ ಬರುವಾಗಲೆಲ್ಲ ನನ್ನ ಲಗ್ಗೇಜನ್ನು ಹೆಗ್ಗಡೆ ಬುಕ್ ಸ್ಟಾಲ್‌ನಲ್ಲಿಟ್ಟು ಪ್ರಭು ಜೊತೆ ಮಾತಾಡಿಕೊಂಡು ರಾತ್ರಿ ಬಿಆರ್‌ಪಿಗೆ ಹೋಗುತ್ತಿದ್ದೆ. ಹಾಗಾಗಿ ಶಿವಮೊಗ್ಗದಲ್ಲಿದ್ದ ಪ್ರಭು, ಮಂಜಪ್ಪ, ದಿವಾಕರ, ಹೆಗ್ಗಡೆ, ಡಾ. ಶಿವರಾಂ, ಎಂ.ಬಿ. ನಟರಾಜ್ ಇವರೆಲ್ಲರ ಒಡನಾಟದಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಗಾಯತ್ರಿ ವಿಶ್ರಾಂತಿಯಲ್ಲಿದ್ದಾಗ, ನನಗಿದ್ದ ಗೆಳೆಯರ ಸಹಾಯದಿಂದ ನಾವು ನಾವೇ ನಿಭಾಯಿಸಿಕೊಂಡೆವು. ಇಂತಹ ಸರ‍್ಭಗಳಲ್ಲಿ ಹೆಣ್ಣು ಮಕ್ಕಳಿಗೆ ಏಕಾಂಗಿತನ ಮತ್ತು ತೌರ ಮನೆ ಕಾಡುತ್ತದೆ. ಆದರೆ ಎರಡೂ ಕಡೆಯಿಂದ ನಮಗೆ ಸಾನ್ನಿಧ್ಯದ ಅನುಕೂಲ ಪಡೆಯುವ ಅವಕಾಶವಾಗಲಿಲ್ಲ. ಇದ್ದ ಸ್ನೇಹ ಬಳಗವೇ ಈ ಎಲ್ಲ ಕೊರತೆಯನ್ನು ನಮಗೆ ಪೂರೈಸಿತ್ತು.

ಆ ನಂತರ ಪ್ರತಿ ತಿಂಗಳೂ ತಪಾಸಣೆ ಮತ್ತು ಶುಶ್ರೂಷೆಯ ನಂತರ 3-4 ದಿನ ಮುಂಚಿತವಾಗಿ ಹೆರಿಗೆಗೆ ಬರಬೇಕೆಂದು ಸೂಚಿಸಿದ್ದರು. ಅದರಂತೆ ಹೋಗಿ ಆಸ್ಪತ್ರೆ ಸೇರಿದ್ದೆವು. ನಾವು ಆಸ್ಪತ್ರೆಯಲ್ಲಿ ಇದ್ದಾಗ ಡಾ. ಶಿವರಾಂ ಅವರು ನಮ್ಮಿಬ್ಬರನ್ನು ಸಂಜೆ ಊಟಕ್ಕೆ ಮನೆಗೆ ಆಹ್ವಾನಿಸಿದ್ದರು. ಅವರದು ತುಂಬಿದ ಮನೆಯಾಗಿತ್ತು. ಬಸುರಿ ಹೆಂಗಸೆAದು ಡಾ. ಶಿವರಾಂ ಅವರ ಹೆಂಡತಿ ಆಶಾ ಮತ್ತು ಅವರ ತಾಯಿ ಶಾರದಮ್ಮನವರು ವಿಶೇಷ ಅಡುಗೆ ಮಾಡಿ ಅಕ್ಕರೆಯಿಂದ ಆದರಿಸುತ್ತಿದ್ದರು. ಅಂದು ಸಂಜೆ ಅವಳಿನ್ನೂ ರ‍್ತಿ ಊಟ ಮುಗಿಸುವ ಮುಂಚೆಯೇ ಹೆರಿಗೆ ನೋವು ಕಾಣಸಿಕೊಂಡಿತು. ತಕ್ಷಣ ಆಸ್ಪತ್ರೆಗೆ ಡಾ. ಶಿವರಾಂ ಅವರು ದಾಖಲು ಮಾಡಿಸಿದರು. ಇಡೀ ರಾತ್ರಿ ಹೆರಿಗೆ ರ‍್ಡ್ ಒಳಗೆ ಇದ್ದ ಗಾಯತ್ರಿಗೆ ಮಾರನೆ ದಿನ ಮಧ್ಯಾಹ್ನವಾದರೂ ಹೆರಿಗೆ ಆಗಿರಲಿಲ್ಲ. ನಾನು ಹೊರಗಡೆ ಇದ್ದ ಬೆಂಚ್ ಮೇಲೆ ಕೂತು ಕಾಯುತ್ತಿದ್ದೆ. ಪ್ರಭು ಫ್ರೆಂಡ್ ಶಶಿ ಮೂಲಕ ಭದ್ರಾವತಿಗೆ ಹೋಗಿ ಇಂದಿರಾ ಅವರನ್ನು ಕರೆದುಕೊಂಡು ಬರಲು ಕಳಿಸಿದ್ದೆ. ಅವರು ಆಫೀಸಿಗೆ ರಜೆ ಹಾಕಿ ಬರುವ ಸಮಯಕ್ಕಾಗಲೇ ಗಾಯತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ದಿನಾಂಕ 11-03-81ಸಂಜೆ 4ಗಂಟೆ ಸುಮಾರಿಗೆ ಗಂಡು ಮಗು ಜನನವಾಗಿತ್ತು. ಡಾ. ಶಿವರಾಂ ಮನೆಯ ಇಬ್ಬರು ಮಕ್ಕಳು ಸೇರಿದಂತೆ ಎಲ್ಲರೂ ಬಂದು ನೋಡಿ ಸಂತಸಪಟ್ಟರು. ಮಗುವಿನ ಬೆಳವಣಿಗೆ ಹೆಚ್ಚಾಗಿದ್ದ ಕಾರಣ ಈoಡಿಛಿeಠಿs ಮುಖಾಂತರ ಮಗುವನ್ನು ಹೊರತೆಗೆಯಬೇಕಾಯಿತು ಎಂದು ಡಾಕ್ಟರ್ ಹೇಳಿದರು. ಭದ್ರಾವತಿಯಿಂದ ಬಂದ ಇಂದಿರಾ ಕೂಡಲೆ ರ‍್ಣ ಜವಾಬ್ದಾರಿ ತೆಗೆದುಕೊಂಡು, ಅಲ್ಲಿಂದ ಅವರ ಮನೆಗೆ ಕರೆದುಕೊಂಡು ಹೋಗಿ ಒಂದು ತಿಂಗಳ ಕಾಲ ಬಾಣಂತನ ಮಾಡಿ ಬಿ.ಆರ್.ಪಿಗೆ ನಾವು ಬರುವವರೆಗೆ ಮಗು ಬಾಣಂತಿಯನ್ನು ನೋಡಿಕೊಂಡದ್ದು ಮರೆಯಲಾಗದ ಘಟನೆಯಾಗಿ ಉಳಿದಿದೆ.

ಭದ್ರಾವತಿಗೆ ಮಗು ಬಾಣಂತಿ ಕೃಷ್ಣಪ್ಪನವರ ಮನೆಗೆ ಹೋಗಿ ಉಳಿದಿದ್ದೆವು. ಮಗುವಿನ ಬಾಣಂತನ ಆರೈಕೆಯನ್ನು ಮಾಡಲು ಶಿವಮೊಗ್ಗ ಮುನೀರ್ ಅವರ ತಾಯಿ ಬಚ್ಚಿಮ್ಮ ಅವರು ರ‍್ಕಾರಿ ಆಸ್ಟತ್ರೆಯಲ್ಲಿ ರ‍್ಸ ಆಗಿದ್ದವರು. ಅವರು ಬೆಳಿಗ್ಗೆ ಮತ್ತು ಸಂಜೆ ಬಂದು ಸಹಾಯ ಮಾಡುತ್ತಿದ್ದರು. ಇಂದಿರಾ ಬೆಳಿಗ್ಗೆ ಬಾಣಂತಿಗೆ ಮತ್ತು ಮತ್ತೆಲ್ಲರಿಗೂ ಅಡುಗೆ ಮಾಡಿಟ್ಟು ಆಫೀಸಿಗೆ ಹೋಗುತ್ತಿದ್ದರು. ಗಾಯತ್ರಿ ಮೌಖಿಕವಾಗಿ ಅವಳೇನು ಹೇಳದಿದ್ದರೂ ಭಾವನಾತ್ಮಕವಾಗಿ ಅವಳಿಗೆ ಬಹಳ ಕಷ್ಟದ ದಿನಗಳಾಗಿದ್ದವು. ಅವನ್ನೆಲ್ಲ ಮಗುವಿನ ಮುಖ ನೋಡಿಕೊಂಡು ಬಚ್ಚಿಮ್ಮನ ಶುಶ್ರೂಷೆಯಲ್ಲಿ ಕಾಲ ಹಾಕುತ್ತಿದ್ದಳು. ನಾನು ಕೂಡ ಮಗುವಿಗೆ ಎಣ್ಣೆ ಹಚ್ಚಿ ಬಿಸಿನೀರ ಸ್ನಾನ ಮಾಡಿಸುವುದನ್ನು ಬಚ್ಚಿಮ್ಮನಿಂದ ವಿಶೇಷವಾಗಿ ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದೆ. ಒಂದು ತಿಂಗಳ ನಂತರ ಬಿಆರ್‌ಪಿಯ ಮನೆಗೆ ಬಂದಿದ್ದೆವು. ಈ ನಡುವೆ ಮಾಧ್ಯಮಿಕ ತರಗತಿಯಲ್ಲಿ ಓದುತ್ತಿದ್ದ ನನ್ನ ತಂಗಿಯನ್ನು ಕರೆತಂದು ಬಿಆರ್‌ಪಿಯಲ್ಲಿ ಶಾಲೆಗೆ ಸೇರಿಸಿದ್ದೆ. ನಾವು ಬಿಆರ್‌ಪಿಗೆ ಬಂದ ಮೇಲೆ ಊರಿನಿಂದ ಅವ್ವ ಕೂಡ ಬಂದು ಸ್ವಲ್ಪ ದಿನ ಬಾಣಂತನ ಮಾಡುವ ಶಾಸ್ತ್ರ ಮಾಡಿದ್ದಳು.

ಆ ನಂತರ ಮೂರು ತಿಂಗಳಲ್ಲಿ ಮಗುವಿಗೆ ನಾಮಕರಣ ಮಾಡುವ ಸಣ್ಣ ಸಮಾರಂಭವನ್ನು ರ‍್ಪಡಿಸಿದ್ದೆವು. ಆಗ ಇಂದಿರಾ – ಕೃಷ್ಣಪ್ಪನವರು ಸೇರಿದಂತೆ ಬಿಆರ್‌ಪಿಯಲ್ಲಿನ ಕೇಶವರ‍್ತಿ, ಪ್ರಭು, ಗ್ರಂಥಪಾಲಕರಾಗಿದ್ದ ರಾಮಕೃಷ್ಣಗೌಡ ಇನ್ನೂ ಅನೇಕರು ಭಾಗವಹಿಸಿ ಶಿಶಿರ ಎಂದು ಹೆಸರಿಟ್ಟು ಸಂಭ್ರಮ ಪಟ್ಟೆವು. ಮಗುವಿಗೆ 3 ತಿಂಗಳು ಮುಗಿದ ನಂತರ ನಮ್ಮ ಮನೆ ಹತ್ತಿರದಲ್ಲೇ ಇದ್ದ ಅರವಿಂದ ಆಶ್ರಮದವರು ನಡೆಸುತ್ತಿದ್ದ ಪ್ರಾಥಮಿಕ ಶಾಲೆಗೆ ಗಾಯತ್ರಿ ಟೀಚರ್ ಆಗಿ ಸೇರಿಕೊಂಡಳು. ಶಿಶಿರನನ್ನು ಬೆಳಿಗ್ಗೆ ಸ್ನಾನ ಮಾಡಿಸಿ ತಿಂಡಿ ತಿನಿಸಿದ್ದು ಬಿಟ್ಟರೆ ಅವನನ್ನು ನಮ್ಮ ಇಡೀ ಬೀದಿಯಲ್ಲಿರುವವರು ಎತ್ತಿಕೊಂಡು ಹೋಗಿ ಊಟ ನಿದ್ದೆ ಮಾಡಿಸಿಕೊಂಡು ಸಂಜೆಗೆ ಮನೆಗೆ ತಂದು ಬಿಡುತ್ತಿದ್ದರು. ಅವನ ಆಗಮನದಿಂದ ನಮಗಿದ್ದ ಪ್ರತ್ಯೇಕತೆ ಕಳೆದು ಎಲ್ಲರೂ ನಮ್ಮನ್ನು `ಬುಡ್ಲ್ಲಿ’ ಅಪ್ಪ ಅಮ್ಮ ಎಂದು ಮಕ್ಕಳು, ದೊಡ್ಡವರು ಹೊರಗಡೆ ಹೋದಾಗ ಗುರುತಿಸಿ ಮಾತಾಡುವಂತಾಗಿತ್ತು. ನಮಗಿಂತಲೂ `ಬುಡ್ಲಿ’ಗೆ ಹೆಚ್ಚು ಪರಿಚಯದ ಹುಡುಗರ ದಂಡು ಸೃಷ್ಟಿಯಾಗಿತ್ತು. ಇನ್ನು ಇವಳು ಟೀಚರ್ ಕೆಲಸದಿಂದ ನನ್ನ ರ‍್ಥಿಕ ಸಂಕಷ್ಟಗಳು ಸ್ವಲ್ಪ ಮಟ್ಟಿಗೆ ಕಡಿಮೆಯಾದವು. ನಾನು ಮಾಡಿಕೊಂಡಿದ್ದ 15 ಸಾವಿರ ಸಾಲಕ್ಕೂ ನನಗೆ ವಿಶ್ವವಿದ್ಯಾಲಯದಿಂದ ಬರಬೇಕಾಗಿದ್ದ ಅರರ‍್ಸ್ ಬಂದು ನನ್ನ ಎಲ್ಲ ಸಾಲವನ್ನು ತೀರಿಸಿ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿತ್ತು.

ನಾನು ಕೆಪಿಎಸ್‌ಸಿ ಪರೀಕ್ಷೆ ತೆಗೆದುಕೊಂಡದ್ದು ಮೊದಲೇ ಹೇಳಿದ್ದೇನೆ. ಅದರ ಪರೀಕ್ಷೆ ಬರೆಯಲು ಮೈಸೂರನ್ನು ಕೇಂದ್ರವಾಗಿ ಆಯ್ಕೆ ಮಾಡಿಕೊಂಡಿದ್ದ ಕಾರಣ 1981ರಲ್ಲೇ ಮೈಸೂರಿಗೆ ಹೋಗಿ ಸುಮಾರು 15 ದಿನಗಳ ರಜೆ ಹಾಕಿ ಪರೀಕ್ಷೆ ಬರೆದೆ. ಆ ಸಮಯದಲ್ಲಿ ರೊಟ್ಟಿ, ಚಟ್ನಿ ಪುಡಿ, ಪುಳಿಯೋಗರೆ ವಾರಕ್ಕೂ ಹೆಚ್ಚು ಆಗುವಷ್ಟನ್ನು ಮಾಡಿಕೊಂಡು ಗಂಗೋತ್ರಿಯಲ್ಲಿರುವ ವಿಶ್ವವಿದ್ಯಾಲಯದ ಅತಿಥಿ ಗೃಹದಲ್ಲಿ ನಾವು ಮೂವರೂ ಉಳಿಯುತ್ತಿದ್ದೆವು. ನಾನು ಪರೀಕ್ಷೆಗೆ ಹೋದಾಗ ಗಾಯತ್ರಿ ಶಿಶಿರ ಇಬ್ಬರೇ ಅಲ್ಲಿರುವ ಗಿಡಮರಗಳನ್ನು ನೋಡುತ್ತಾ ಇರುತ್ತಿದ್ದರು.

ಈ ಸಮಯದಲ್ಲಿ ದೇವಯ್ಯ ಹರವೆ ಮೈಸೂರಿನಲ್ಲಿ ಮಾನಸ ಗಂಗೋತ್ರಿಯಲ್ಲಿ ಕನ್ನಡ ಅಧ್ಯಾಪಕನಾಗಿದ್ದು, ಡಿ.ಎಸ್.ಎಸ್. ಸ್ಥಾಪಕ ಸದಸ್ಯರುಗಳ ಜೊತೆ ಗಟ್ಟಿ ದನಿಯಾಗಿದ್ದರು. ನಾನು ಇರುವ ಸುದ್ದಿ ತಿಳಿದು ನಮ್ಮ ಗೆಸ್ಟ್ಹೌಸ್‌ಗೆ ಬಂದು ಪುಳಿಯೋಗರೆ ತಿಂದು `ಗಾಯತ್ರಮ್ಮ, ಎಲ್ಲಾ ಪುಳಿಯೋಗರೆ ನನಗೆ ಕೊಡಿ ರುದ್ರಣ್ಣನಿಗೆ ನಾನು ಬಿಸಿ ಮಾಂಸದೂಟ ಮಾಡಿಸುವೆ’ ಎಂದು ಹೇಳಿ ನಮ್ಮೆಲ್ಲರನ್ನು ತನ್ನ ಮನೆಗೂ ಕರೆದುಕೊಂಡು ಹೋಗಿದ್ದ. ದೇವಯ್ಯ ಹರವೆ ಮತ್ತು ಪುಷ್ಪ ನಮಗೆ ಆಗ ಪರಿಚಯವಾಗಿ ನಂತರದ ದಿನಗಳಲ್ಲಿ ಅವರ ಮನೆಗೆ ಪುಳಿಯೋಗರೆಯೊಡನೆ ಆಗಾಗ ಹೋಗಿ ಬರುತ್ತಿದ್ದೆವು.
ಬುಡ್ಲಿಯನ್ನು ನೋಡುವ ನೆಪದಲ್ಲಿ ವಿಶಾಖಪಟ್ಟಣದಲ್ಲಿದ್ದ ಗಾಯತ್ರಿಯ ದೊಡ್ಡ ಅಕ್ಕ ಶಕುಂತಲಾರ‍್ತಿ ಮತ್ತು ಅವರ ಹಿರಿಯ ಮಗಳಾದ ಮೀನಾ ಬಿಆರ್‌ಪಿಗೆ ಬಂದು ಒಂದು ದಿನ ಉಳಿದು ನಂತರ ನರಸಿಂಹರಾಜಪುರಕ್ಕೆ ಹೋಗಿದ್ದರು. ಆಗ ಅವರಿಂದ ಗಾಯತ್ರಿ ತಂದೆ ತಾಯಿ ಇಬ್ಬರಿಗೂ ನಾವಿಬ್ಬರು ಮತ್ತು `ಬುಡ್ಲಿ’ ಆರಾಮವಾಗಿ ಇರುವುದಾಗಿಯೂ ಮತ್ತು ಅವರಿವರು ತೇಲಿ ಬಿಡುತ್ತಿದ್ದ ಸುಳ್ಳಿನ ಸುದ್ದಿಗಳಲ್ಲಿ ಸತ್ಯಾಂಶವಿಲ್ಲವೆAದು ತಿಳಿಸಿ, ಅವರಿಗೆ ನಮ್ಮ ಮದುವೆಯ ಘಟನೆಯ ನಂತರ ಸ್ವಲ್ಪಮಟ್ಟಿನ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿತ್ತು.

ಕೃಷ್ಣಪ್ಪನವರು ಎಸ್‌ವೈಎಸ್ ಸಂಘಟನೆಯಲ್ಲಿ 1970ರ ದಶಕದ ಪ್ರಾರಂಭದಿAದ ಇದ್ದರೂ, ಕ್ರಮೇಣ ದಲಿತರ ಸಮಸ್ಯೆಗಳಿಗೆ ಪ್ರತ್ಯೇಕ ಸಂಘಟನೆಯ ಅವಶ್ಯಕತೆ ಕಂಡುಕೊAಡು ಭದ್ರಾವತಿಯಲ್ಲಿ ರಾಜ್ಯ ಮಟ್ಟದ ಜಾತಿ ವಿನಾಶ ಸಮ್ಮೇಳನ ಆಯೋಜಿಸಿದ್ದರು. ಭದ್ರಾವತಿಯಲ್ಲಿ ಆಗಿನ ಕೃಷ್ಣಪ್ಪನವರ ತಂಡದಲ್ಲಿ, ಎನ್. ಗಿರಿಯಪ್ಪ, ಟಿ. ರಾಜಣ್ಣ, ಹಾಲಯ್ಯ, ನರಸಿಂಹಯ್ಯ, ಚನ್ನಕೇಶವ, ಗಂಗಣ್ಣ, ಶಿವಲಿಂಗ, ಚಂದ್ರನ್, ಅತ್ತಿಗುಂದ ಕರಿಯಪ್ಪ, ಮಹಾಲಿಂಗರ‍್ತಿ ಜಿ., ಎಂಪಿಎಂನ ಕೃಷ್ಣರ‍್ತಿ ಇವರೆಲ್ಲ ಆಪ್ತ ವಲಯದಲ್ಲಿದ್ದು ಏನೇ ಹೋರಾಟದ ಕರೆ ಕೊಟ್ಟಾಗ ಬಂದು ಸೇರುತ್ತಿದ್ದರು.

ಇತರ ಮಿತ್ರ ಪಡೆ ಭದ್ರಾವತಿಯಲ್ಲಿ ದೊಡ್ಡದಿತ್ತು. ವಕೀಲ ನಾಗೇಂದ್ರರಾವ್, ಪ್ರೊ. ಚಂದ್ರಶೇಖರಯ್ಯ, ಬಿ. ರಾಜಣ್ಣ, ಶಿವಮೊಗ್ಗದ ಮುನೀರ್, ಸಾಸ್ವೆಹಳ್ಳಿ ಹಾಲಪ್ಪ, ಎಂ.ಎಲ್. ನಾಗಭೂಷಣ, ವೈ.ಎನ್. ಆಚಾರ್, ಶಿವಪ್ರಸಾದ್ (ವಿಐಎಸ್‌ಎಲ್), ಚಂದ್ರಪ್ರಸಾದ್ ತ್ಯಾಗಿ, ನಿಸಾರ್ ಅಹಮದ್, ರಾಚಪ್ಪ ಹೆಚ್, ವಾಗೀಶ್, ರಾಘವೇಂದ್ರ ರಾವ್ (ದಲಿತರ ಪರ ವಕೀಲರಾಗಿ ಮೊಕದ್ದಮೆಗಳನ್ನು ನಡೆಸುತ್ತಿದ್ದರು) ಇದ್ದರು. ಮಾದೇವ, ಸಿದ್ದಲಿಂಗಯ್ಯ, ವೆಂಕಟಸ್ವಾಮಿ, ಮುನಿವೆಂಕಟಪ್ಪ, ನಾರಾಯಣಸ್ವಾಮಿ, ದಿವಾಕರ ಹೆಗ್ಗಡೆ, ಎಂ.ಬಿ. ನಟರಾಜ್, ಸತ್ಯನಾರಾಯಣರಾವ್ ಅಣತಿ, ಚನ್ನಣ್ಣ ವಾಲೀಕಾರ, ದೇವಯ್ಯ ಹರವೆ ಇನ್ನು ಅನೇಕರು ರಾಜ್ಯದಾದ್ಯಂತ ಚೆದುರಿದ್ದ ಕೃಷ್ಣಪ್ಪನವರ ಹೋರಾಟದ ಸಂಗಾತಿಗಳಾಗಿದ್ದರು.

ಇವರೆಲ್ಲರ ಸಮಾಗಮವೆಂಬಂತೆ ಬಿಆರ್‌ಪಿಯಲ್ಲಿರುವ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಎರಡು ದಿನಗಳ ದಲಿತ ಸರ‍್ಷ ಸಮಿತಿಯ ತರಬೇತಿ ಶಿಬಿರವನ್ನು ಆಯೋಜಿಸಿದ್ದರು. ಆಗ ಬಂದ ಸಂಘಟಕರಿಗೆ ಊಟ ವಸತಿ ಮತ್ತು ಬಸ್ ರ‍್ಜ್ ಹೊಂದಿಸುವಲ್ಲಿ ಕೃಷ್ಣಪ್ಪನವರು ಪಡುತ್ತಿದ್ದ ಪಾಡನ್ನು ಬೇರೆ ಯಾವ ದಲಿತ ಸಂಘಟಕರು ಅನುಭವಿಸಿಲ್ಲ. ನಾನು ಮತ್ತು ನಮ್ಮಲ್ಲಿನ ಪ್ರಗತಿಪರ ಅಧ್ಯಾಪಕರು, ಸಹೋದ್ಯೋಗಿಗಳು ಸೇರಿ ಸ್ವಲ್ಪ ಹಣ ಸಂಗ್ರಹಿಸಿಕೊಟ್ಟಿದ್ದೆವು. ಅಲ್ಲಲ್ಲೆ ಪ್ರಗತಿಪರವಾಗಿ ಬರೆದುಕೊಂಡು ಹೋರಾಟಗಳನ್ನು ಮಾಡುತ್ತಿದ್ದ ದಲಿತರು ಅಂಬೇಡ್ಕರ್ ಸಿದ್ಧಾಂತದ ಗಟ್ಟಿ ನೆಲೆಯಲ್ಲಿ ಆತ್ಮೀಯ ಸಂಬಂಧಿಕರಂತೆ ಕೃಷ್ಣಪ್ಪನವರ ಸುತ್ತ ಒಟ್ಟುಗೂಡಿ ಇಂತಹ ಸಮಾವೇಶಗಳಲ್ಲಿ ಭಾಗವಹಿಸಿ ರ‍್ಚಿಸುತ್ತಿದ್ದರು.

ಬುಡ್ಲಿ ಬಂದ ನಂತರ, ಟೀಚರ್ ಕೆಲಸ ಸೇರಿದ ಗಾಯತ್ರಿ ಮನೆಯ ಹಿಂದೆ ಮುಂದೆ ಇದ್ದ ಜಾಗದಲ್ಲಿ ತರಕಾರಿ ಜೊತೆಗೆ ಇದ್ದ ಮಾವಿನ ಮರ ಮತ್ತು ದೊಡ್ಡ ನುಗ್ಗೆಮರ, ಸೀತಾಫಲದ ಮರಗಳನ್ನು ಸಂರಕ್ಷಿಸಿಕೊಂಡು ಸಾಕಷ್ಟು ಫಲ ಪಡೆಯುತ್ತಿದ್ದೆವು. ಬಂದ ಸಂಬಳದಲ್ಲಿ ಹತ್ತಿರದಲ್ಲಿದ್ದ ಲಕ್ಕವಳ್ಳಿಯಲ್ಲಿ ನಡೆಯುವ ಸಂತೆಗೆ ಹೋಗಿ ಅಗತ್ಯ ವಸ್ತುಗಳನ್ನು ವಾರಕ್ಕೊಮ್ಮೆ ಕೊಂಡು ಬರುತ್ತಿದ್ದೆವು. ಬಂದ ಎಲ್ಲ ಸಂಬಳದಲ್ಲಿ ದುಂದಾಗಿ ರ‍್ಚು ಮಾಡುತ್ತಾ ಉಳಿತಾಯ ಮತ್ತು ಅಚ್ಚುಕಟ್ಟುತನವಿಲ್ಲದೆ ಸ್ವಚ್ಛಂದವಾಗಿದ್ದ ನನಗೆ ಮದುವೆ ನಂತರ ಮಗು ಶಿಶಿರ ಬಂದು ಸಂಸಾರ ಜೀವನದ ಹೊಸ ಜೀವನಾನುಭವವನ್ನು ನೀಡಿತೆಂದೇ ಹೇಳಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ16 hours ago

ದಾವಣಗೆರೆ |ಅ.23ರಂದು ಜಿಲ್ಲಾ ಮಾದಿಗ ಛಲವಾದಿ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

ಸುದ್ದಿದಿನ,ದಾವಣಗೆರೆ: ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಆದೇಶದಂತೆ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅ. 23 ರಂದು ಬೃಹತ್ ಪ್ರತಿಭಟನೆಯನ್ನು ನಗರದಲ್ಲಿ ಹಮ್ಮಿಕೊಳ್ಳ ಲಾಗಿದೆ ಎಂದು ಜಿಲ್ಲಾ...

ದಿನದ ಸುದ್ದಿ17 hours ago

ದಾವಣಗೆರೆ | ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ ನೀಡಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ...

ದಿನದ ಸುದ್ದಿ18 hours ago

ಬೆಂಚ್ ಪ್ರೆಸ್ ಸ್ಪರ್ಧೆ|ಕರ್ನಾಟಕ ತಂಡ ಪ್ರಥಮ ತರಬೇತುದಾರರಾದ ಎಚ್.ದಾದಾಪೀರ್ ಗೆ ಅಭಿನಂದನೆ

ಸುದ್ದಿದಿನ,ದಾವಣಗೆರೆ: ಗೋವಾ ರಾಜ್ಯದ ವಾಸ್ಕೋಡಿಗಾಮದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಪುರುಷರ ಹಾಗೂ ಮಹಿಳೆಯರ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಕರ್ನಾಟಕ ತಂಡವು ಪ್ರಥಮ ಸ್ಥಾನ ಪಡೆದಿದೆ. ದಾವಣಗೆರೆಯ ಪೊಲೀಸ್...

ದಿನದ ಸುದ್ದಿ2 days ago

ಆತ್ಮಕತೆ | ಅನಾಗರಿಕ ಆಚರಣೆಯ ವಿರುದ್ಧ

ರುದ್ರಪ್ಪ ಹನಗವಾಡಿ ಸೊರಬ ತಾಲ್ಲೂಕಿನಲ್ಲಿ ಇನ್ನೊಂದು ಮುಖ್ಯ ಘಟನೆಯನ್ನು ಹೇಳಿ ಮುಂದೆ ಹೋಗುತ್ತೇನೆ. ಸೊರಬ ತಾಲ್ಲೂಕಿನಲ್ಲಿ ತಹಸೀಲ್ದಾರರಾಗಿ ರಾಮನಾಥ್ ಎಂಬ ಹಿರಿಯರಿದ್ದರು. ಅವರು ತಾಲ್ಲೂಕಿನಲ್ಲಿ ಎಲ್ಲಾ ಆಡಳಿತ...

ದಿನದ ಸುದ್ದಿ2 days ago

ಕಿಚ್ಚ ಸುದೀಪ್ ತಾಯಿ ನಿಧನ

ಸುದ್ದಿದಿನ,ಡೆಸ್ಕ್:ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ...

ದಿನದ ಸುದ್ದಿ3 days ago

ಅ.21 ರಂದು ಪೊಲೀಸ್ ಹುತಾತ್ಮರ ದಿನಾಚರಣೆ

ಸುದ್ದಿದಿನ,ದಾವಣಗೆರೆ:ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಅಕ್ಟೋಬರ್ 21 ರಂದು ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಯೋಜಿಸಲಾಗಿದೆ. ಪೂರ್ವವಲಯ...

ದಿನದ ಸುದ್ದಿ3 days ago

ವಾಮಾಚಾರಕ್ಕೆ ಬೆಚ್ಚಿಬಿದ್ದ ಕಾಫಿನಾಡು..!

ಸುದ್ದಿದಿನ,ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ಭಯಂಕರ ವಾಮಾಚಾರಕ್ಕೆ ಕಾಫಿನಾಡಿನ ಮಲೆನಾಡು ಭಾಗ ಅಕ್ಷರಶಃ ಬೆಚ್ಚಿಬಿದ್ದಿದೆ. ಮೂರು ದಾರಿ ಕೂಡಿರುವ ಕಡೆ ಕಿಡಿಗೇಡಿಗಳು ಮಡಿಕೆಗೆ ಮೂರ್ತಿ ರೂಪ ಕೊಟ್ಟು ವಾಮಾಚಾರ ಮಾಡಿದ್ದಾರೆ....

ದಿನದ ಸುದ್ದಿ3 days ago

ಟೊಮ್ಯಾಟೊ ಬೆಳೆಗೆ ಅಂಗಮಾರಿ ರೋಗ

ಸುದ್ದಿದಿನಡೆಸ್ಕ್:ಸತತ ಮಳೆಯಿಂದ, ತೇವಾಂಶ ಹೆಚ್ಚಿ ಹಾವೇರಿ ಜಿಲ್ಲೆಯಾದ್ಯಂತ, ಟೊಮ್ಯಾಟೊ ಬೆಳೆಗೆ ಅಂಗಮಾರಿ ರೋಗ ಬಾಧೆ ಕಾಣಿಸಿಕೊಂಡಿದೆ. ತೋಟಗಾರಿಕೆ ಇಲಾಖೆಯ ಹಾವೇರಿ ಜಿಲ್ಲೆ ಹಿರಿಯ ಸಹಾಯಕ ನಿರ್ದೇಶಕ ನೂರ್...

ದಿನದ ಸುದ್ದಿ4 days ago

ಸಾಲ ಸೌಲಭ್ಯ ಯೋಜನೆ ; ಅ.23 ರಂದು ಆಯ್ಕೆ ಸಮಿತಿ ಸಭೆ

ಸುದ್ದಿದಿನ,ದಾವಣಗೆರೆ:ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 23 ರಂದು ಮಧ್ಯಾಹ್ನ 3.30 ಕ್ಕೆ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಸಾಲ ಸೌಲಭ್ಯ...

ದಿನದ ಸುದ್ದಿ4 days ago

ಎಸ್ ಬಿ ಐ ಬ್ಯಾಂಕ್ ನಿರ್ಲಕ್ಷ್ಯ; ಗ್ರಾಹಕರಿಗೆ ಬಡ್ಡಿ ಸಮೇತ ಪರಿಹಾರ ನೀಡಲು ನ್ಯಾಯಾಲಯ ಆದೇಶ

ಸುದ್ದಿದಿನ,ದಾವಣಗೆರೆ:ನಗರದ ಎ.ವಿ.ಕೆ. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ನಿಲ್ಯಕ್ಷದಿಂದ ಗ್ರಾಹಕರೊಬ್ಬರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೂಲಕ ಗ್ರಾಹಕರಿಗೆ ಬಡ್ಡಿ ಸಮೇತ...

Trending