ದಿನದ ಸುದ್ದಿ
ಬಿಜೆಪಿ ನಾಯಕರಿಗೆ ಗಂಡಸ್ತನ ಇದ್ರೆ ನ್ಯಾಯಾಲಯಕ್ಕೆ ಬರಲಿ; ಟಿ.ಬಿ ಜಯಚಂದ್ರ ಬಹಿರಂಗ ಸವಾಲು

ಚಿಕ್ಕಬಳ್ಳಾಪುರ: ಬಿಜೆಪಿ ನಾಯಕರಿಗೆ ಗಂಡಸ್ತನ ಇದ್ದರೆ ನ್ಯಾಯಾಲಯಕ್ಕೆ ಬರಲಿ ಎಂದು ಮಾಜಿ ಸಚಿವ ಟಿ.ಬಿ ಜಯಚಂದ್ರ ಬಹಿರಂಗ ಸವಾಲು ಹಾಕಿದ್ದಾರೆ.
ಕೊರೋನಾ ನಿಯಂತ್ರಣ ಸಂಬಂಧ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಸಚಿವರು ಬಿಜೆಪಿ ನಾಯಕರ ಧೈರ್ಯದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಕೋವಿಡ್ ವಿಚಾರದಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ. ಈ ಕುರಿತು ಪ್ರಶ್ನೆ ಮಾಡಿದರೆ ನಮಗೆ ನೋಟೀಸ್ ಕಳುಹಿಸಲಾಗುತ್ತಿದೆ ಎಂದು ಖಡಕ್ ಆಗಿ ಹೇಳಿದರು.
ಕೋವಿಡ್ ವಿಚಾರವಾಗಿ ಸರ್ಕಾರ 4200 ಕೋಟಿ ರೂ. ಖರ್ಚು ಮಾಡಿದ್ದು, ಅದರಲ್ಲಿ ಸರಿ ಸುಮಾರು ಅರ್ಧದಷ್ಟು ಹಣಕ್ಕೆ ಲೆಕ್ಕವೇ ಇಲ್ಲ. ಈ ಬಗ್ಗೆ ಮಾತನಾಡಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿದರೆ ಅವರಿಗೆ ಲೀಗಲ್ ನೋಟಿಸ್ ನೀಡಲಾಗಿದೆ ಎಂದು ಚಿಕ್ಕಬಳ್ಳಾಪುರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
“ರೈತರ ಹಿತ ಕಾಯಲು ಸರ್ಕಾರ ಮಧ್ಯ ಪ್ರವೇಶಿಸುವ ಅತ್ಯಗತ್ಯ” ಕಾರ್ಯಗಾರ

ಸುದ್ದಿದಿನ,ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸರ್ಕಾರದ ಸಮರ್ಥ ಮಧ್ಯ ಪ್ರವೇಶವೂ ಅಗತ್ಯ. ಇದನ್ನು ರಾಜ್ಯದ ವಿವಿಧ ಭಾಗಗಳ ರೈತರಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಇಂದು ನಗರದ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಒಂದು ದಿನದ ತಾಂತ್ರಿಕ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.
ಪೃತ್ವಿ ಪ್ರತಿಷ್ಠಾನ, ಮಳೆ ಆಶ್ರಿತ ಕೃಷಿ ಪುನರುಜ್ಜೀವನ ಜಾಲ ಹಾಗೂ ಪರ್ಯಾಯ ಕಾನೂನು ವೇದಿಕೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ “ರೈತರ ಹಿತ ರಕ್ಷಣೆಗೆ ಸರ್ಕಾರದ ಮಧ್ಯ ಪ್ರವೇಶ ಅತ್ಯಗತ್ಯ” ಕಾರ್ಯಗಾರದಲ್ಲಿ ಕೃಷಿ ಆರ್ಥಿಕ ತಜ್ಞರಾದ ಡಾ. ಪ್ರಕಾಶ್ ಕಮ್ಮರಡಿ, ಕಾನೂನು ತಜ್ಞ ವಿನಯ್ ಶ್ರೀನಿವಾಸ್, ಕೃಷಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕಿ ಡಾ. ಗ್ರೇಸಿ ಸಿ.ಪಿ ಹಾಗೂ ರೈತ ಮುಖಂಡರಾದ ಕುರಬೂರು ಶಾಂತಕುಮಾರ್ ಮುಂತಾದವರು ಕಳೆದ ದಶಕಗಳಲ್ಲಿ ಕೃಷಿ ಕ್ಷೇತ್ರದಲ್ಲಾದ ಏರಿಳಿತಗಳು ಹಾಗೂ ರೈತರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ ರೈತರೊಂದಿಗೆ ಚರ್ಚೆ ನಡೆಸಿದರು.
ಇದನ್ನೂ ಓದಿ | ಫೆ.28ಕ್ಕೆ ಎಫ್ ಡಿ ಎ ಪರೀಕ್ಷೆ | ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ
ಮೊದಲಿಗೆ ಕಾರ್ಯಗಾರದ ಪ್ರಸ್ತಾವನೆಯನ್ನು ಉದ್ದೇಶಿಸಿ ಮಾತನಾಡಿದ ಡಾ. ಟಿ. ಎನ್ ಪ್ರಕಾಶ್ ಕಮ್ಮರಡಿ. ಬೆಳೆಗೆ ಬೆಂಬಲ ಬೆಲೆಯನ್ನು ಕಾನೂನಿನ ಮೂಲಕ ಖಾತ್ರಿಗೊಳಿಸಬೇಕು. ಅವತ್ತಿನ ಕಾಲಕ್ಕೆ ಬೆಳೆ ಬೆಳಡಯುವುದು ಮಾತ್ರ ರೈತನ ಕೆಲಸವಾಗಿತ್ತು. ಮಾರುಕಟ್ಟೆಯ ಜವಾಬ್ದಾರಿಯನ್ನು ಸರ್ಕಾರ ನೋಡಿಕೊಳ್ಳುತ್ತಿತ್ತು. ಆಗ ಕಾಫಿ ಬೋರ್ಡ್, ಟೀ ಬೋರ್ಡ್ ಗಳು ಸಮೃದ್ಧವಾಗಿ, ಸಮರ್ಥವಾಗಿದ್ದವು. ಆದರೆ ಈಗ ಕೃಷಿಯಲ್ಲಿ ಸರ್ಕಾರದ ಮಧ್ಯ ಪ್ರವೇಶವಿಲ್ಲದೆ ಈ ಎಲ್ಲ ನಿಗಮಗಳು ದುರ್ಬಲವಾಗಿವೆ. ರೈತರ ವಿಚಾರದಲ್ಲಿ ತನ್ನ ಜವಾಬ್ದಾರಿಗಳಿಂದ ಜಾರಿಕೊಳ್ಳುವ ಸಲುವಾಗಿ ಸರ್ಕಾರ ಈ ಕಾಯ್ದೆಗಳನ್ನು ತರಲು ಹೊರಟಿದೆ ಎಂದರು.
ಇನ್ನು ತೋಟಗಾರಿಕಾ ಬೆಳೆಗಳು ಸೇರಿದಂತೆ ಇತರ ಪ್ರಮುಖ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು ಎಂಬುದರ ಬಗ್ಗೆ ಮಾತನಾಡಿದ ತಜ್ಞರು. ಕನಿಷ್ಟ ಬೆಂಬಲ ಬೆಲೆಗೆ ಕಾನೂನಿನ ರಕ್ಷಣೆ ನೀಡಿ ಲಾಭದಾಯಕ ಧಾರಣೆ ಖಾತರಿಗೊಳಿಸುವುದು ಕೂಡ ಅಗತ್ಯ ಎಂದು ಅಭಿಪ್ರಾಯ ಪಟ್ಟರು.
ಬೆಂಬಲ ಬೆಲೆಯನ್ನು ಕಾನೂನಿನ ವ್ಯಾಪ್ತಿಗೆ ತರುವಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಮನ್ವಯತೆ ಏರ್ಪಡಬೇಕು ಎಂಬ ಬಗ್ಗೆಯೂ ಚರ್ಚಿಸಲಾಯಿತು.
Courtesy : Mass Media Foundation, New Delhi
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆ.28ಕ್ಕೆ ಎಫ್ ಡಿ ಎ ಪರೀಕ್ಷೆ | ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ

ಸುದ್ದಿದಿನ,ಶಿವಮೊಗ್ಗ : ಕರ್ನಾಟಕ ಲೋಕಸೇವಾ ಆಯೋಗವು 2019ನೇ ಸಲಿನ ಸಹಾಯಕರು, ಪ್ರಥಮ ದರ್ಜೆ ಸಹಾಯಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಫೆಬ್ರವರಿ 28ರಂದು ಜಿಲ್ಲೆ 27ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಿದೆ.
ಸದರಿ ಪರೀಕ್ಷೆಗಳನ್ನು ಪಾರದರ್ಶಕವಾಗಿ, ಯಾವುದೇ ಅವ್ಯವಹಾರಗಳಿಗೆ, ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದಂತೆ, ಮುಂಜಾಗ್ರತಾ ಕ್ರಮಗಳನ್ನು ವಹಿಸಲು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಫೆಬ್ರವರಿ 28ರಂದು ಬೆಳಿಗ್ಗೆ 7.30ರಿಂದ ಸಂಜೆ 5.30ರವರೆಗೆ ಭಾರತೀಯ ದಂಡಸಂಹಿತೆ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200ಮೀ. ಪ್ರದೇಶದ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ನಿಷೇಧಿತ ಪ್ರದೇಶದಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತಲ ಪ್ರದೇಶದಲ್ಲಿ ಐದು ಮತ್ತು ಐದಕ್ಕಿಂತ ಹೆಚ್ಚಿನ ಜನ ಸೇರುವುದನ್ನು ನಿಷೇಧಿಸಲಾಗಿದೆ.
ಕೇಂದ್ರಗಳ ಸುತ್ತಮುತ್ತಲ ಟೈಪಿಂಗ್, ಝೆರಾಕ್ಸ್ ಹಾಗೂ ಫ್ಯಾಕ್ಸ್ ಅಂಗಡಿಗಳು ತೆರೆದಿರುವುದನ್ನು ಪ್ರತಿಬಂಧಿಸಲಾಗಿದೆ. ಅಲ್ಲದೆ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಸ್ಸಾಂ | ಅಥ್ಲೀಟ್ ಹಿಮಾ ದಾಸ್ ಡಿಎಸ್ಪಿಯಾಗಿ ನೇಮಕ ; ನನ್ನ ಮತ್ತು ತಾಯಿಯ ಕನಸು ನನಸಾದ ದಿನವಿದು : ಹಿಮಾ ಭಾವುಕ ನುಡಿ

ಸುದ್ದಿದಿನ, ಗುವಾಹಟಿ: ಸ್ಟಾರ್ ಸ್ಪ್ರಿಂಟರ್ ಹಿಮಾ ದಾಸ್ ಅವರನ್ನು ಶುಕ್ರವಾರ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರ ಸಮ್ಮುಖದಲ್ಲಿ ಅಸ್ಸಾಂ ಪೊಲೀಸ್ ಉಪ ಅಧೀಕ್ಷಕರನ್ನಾಗಿ ನೇಮಕಮಾಡಲಾಯಿತು.
ಗುವಾಹಟಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ, ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರು ನೇಮಕಾತಿ ಪತ್ರವನ್ನು ನೀಡಿದರು ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯ ಪೊಲೀಸ್ ಮಹಾನಿರ್ದೇಶಕರು ಭಾಗವಹಿಸಿದ್ದರು.
ಡಿ ಎಸ್ ಪಿ ಆಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಹಿಮಾದಾಸ್ ಅವರು , ತಾನು ಚಿಕ್ಕವಳಿದ್ದಾಗ ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸು ಕಂಡಿದ್ದೆ ಈಗ ಆ ಕನಸು ನನಸಾಗಿದೆ. ಈಕ್ಷಣ ನನಗೆ ಬಹಳ ವಿಶೇಷವಾದ ಕ್ಷಣವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
Welcome Aboard!
Heartiest Congratulations to @HimaDas8 and all 597 newly selected Sub Inspectors of Assam Police.
Together, we'll write a new saga of people friendly policing in the State, to serve the citizens of Assam.@CMOfficeAssam @DGPAssamPolice#SIsRecruitment pic.twitter.com/KBeFUGHLuW
— Assam Police (@assampolice) February 26, 2021
ನನ್ನ ಆರಂಭಿಕ ಶಾಲಾ ದಿನಗಳಿಂದ, ನಾನು ಒಂದು ದಿನ ಪೊಲೀಸ್ ಅಧಿಕಾರಿಯಾಗಬೇಕೆಂಬ ಆಸೆಯಿತ್ತು, ನನ್ನ ತಾಯಿಯೂ ಕೂಡ ನಾನು ಪೊಲೀಸ್ ಆಗ ಬೇಕೆಂದು ಕನಸು ಕಂಡಿದ್ದರು ಎಂದರು.
ನನ್ನ ತಾಯಿ “ಅವಳು ದುರ್ಗಾ ಪೂಜೆಯ ಸಮಯದಲ್ಲಿ (ಆಟಿಕೆ) ಗನ್ ಖರೀದಿಸಿ ನನಗೆ ಆಟವಾಡಲು ಕೊಟ್ಟಾಗ ಅದು ನನ್ನಲ್ಲಿ ಪೊಲೀಸ್ ಆಗುವ ಭಾವನೆಗಳನ್ನು ಮೂಡಿಸಿತ್ತು. ನನ್ನ ತಾಯಿ ಅಸ್ಸಾಂ ಪೊಲೀಸ್ ಆಗಿ ಜನರಿಗೆ ಸೇವೆ ಸಲ್ಲಿಸ ಬೇಕು ಒಳ್ಳೆಯ ವ್ಯಕ್ತಿಯಾಗ ಬೇಕು ಎಂದು ಹೇಳುತ್ತಿದ್ದರು” ಎಂದು ದಾಸ್ ಬಾಲ್ಯದ ನೆನಪುಗಳನ್ನು ಹಂಚಿಕೊಂಡರು.
A proud day for Assam.
Glad to ceremonially appoint ace athlete @HimaDas8 as Dy SP in @assampolice. An honour for her achievements under the Sports Policy, the appointment will further motivate youths to pursue excellence in sports.#SIsRecruitment pic.twitter.com/9tPOt667Eh
— Sarbananda Sonowal (@sarbanandsonwal) February 26, 2021
ಕ್ರೀಡೆ ನನಗೆ ಎಲ್ಲವನ್ನೂ ನೀಡಿದೆ
ಹಿಮಾ ಅವರು ಅಸ್ಸಾಂನ ಒಳಿತಿಗಾಗಿ ನಾನು ಕೆಲಸ ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತೇನೆ, ಹಾಗೂ ತಮ್ಮ ಕ್ರೀಡಾ ವೃತ್ತಿಜೀವನವನ್ನು ಮುಂದುವರೆಸುವುದಾಗಿ ಪ್ರತಿಜ್ಞೆ ಮಾಡಿದರು.
“ನಾನು ಕ್ರೀಡೆಯಿಂದಾಗಿ ಎಲ್ಲವನ್ನೂ ಪಡೆದುಕೊಂಡಿದ್ದೇನೆ, ನಾನು ರಾಜ್ಯದ ಕ್ರೀಡೆಗಳ ಸುಧಾರಣೆಗಾಗಿ ಕೆಲಸ ಮಾಡಲು ಪ್ರಯತ್ನಿಸುತ್ತೇನೆ ಮತ್ತು ಹರಿಯಾಣದಂತೆಯೇ ಅಸ್ಸಾಂ ಅನ್ನು ದೇಶದ ಅತ್ಯುತ್ತಮ ಪ್ರದರ್ಶನ ನೀಡುವ ರಾಜ್ಯಗಳಲ್ಲಿ ಒಂದನ್ನಾಗಿ ಮಾಡಲು ಪ್ರಯತ್ನಿಸುತ್ತೇನೆ ಎಂದರು.
ಹಿಮಾ ಟ್ವೀಟ್
Jai Hind pic.twitter.com/JsdUO4Gw8b
— Hima (mon jai) (@HimaDas8) February 26, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ದಿಶಾ ಕೇಸ್ | ನನ್ನ ಆತ್ಮಸಾಕ್ಷಿಯನ್ನು ದಾಖಲೆ ಸಹಿತ ಒಪ್ಪಿಸಿ..! ಮೂರು ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದ ನ್ಯಾಯಾಧೀಶರು..!
-
ಲೈಫ್ ಸ್ಟೈಲ್6 days ago
ಮೂತ್ರದಲ್ಲಿನ ಸಕ್ಕರೆ ಅಂಶ ನಿಯಂತ್ರಣದಲ್ಲಿಡುತ್ತೆ ಈ ಸೀಮೆ ಬದನೆಕಾಯಿ..!
-
ಕ್ರೀಡೆ6 days ago
ಭಾರತ ಟಿ20ಐ ಪಂದ್ಯಾವಳಿಗೆ ತಂಡ ಪ್ರಕಟಿಸಿದ ಬಿಸಿಸಿಐ
-
ಲೈಫ್ ಸ್ಟೈಲ್6 days ago
ರೆಸಿಪಿ | ಮನೇಲೇ ಮಾಡಿ ಜಿಲೇಬಿ
-
ಲೈಫ್ ಸ್ಟೈಲ್5 days ago
ವೀರ್ಯಾಣು ಬಲವೃದ್ಧಿಗೆ ಇಲ್ಲಿವೆ ಉಪಾಯಗಳು..!
-
ಭಾವ ಭೈರಾಗಿ6 days ago
ಕವಿತೆ | ಅವಳು
-
ಅಂತರಂಗ5 days ago
ಅನಾಥರನ್ನಾಗಿಸದ ಅಂತಿಮ ಸಂಗಾತಿ
-
ದಿನದ ಸುದ್ದಿ5 days ago
ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ : ಸಿದ್ದರಾಮಯ್ಯ