Connect with us

ದಿನದ ಸುದ್ದಿ

ದಾವಣಗೆರೆ |ಕರ್ನಾಟಕ ರಾಜ್ಯ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರ ಸಂಘದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ

Published

on

ಸಾಂದರ್ಭಿಕ ಚಿತ್ರ

ರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರ ಈ ಕೆಳಕಂಡ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ದಿನಾಂಕ : 26-08-2019 ಸೋಮವಾರದಿಂದ ದಾವಣಗೆರೆ ನಗರದ ಉಪವಿಭಾಗಾಧಿಕಾರಿ (ಎ.ಸಿ) ಕಛೇರಿ ಮುಂದೆ ಅನಿರ್ಧಿಷ್ಟಾವಧಿಯ ಕಾಲ ಬೇಡಿಕೆ ಈಡೇರುವವರೆಗೂ ಮುಷ್ಕರ ಹಮ್ಮಿಕೊಳ್ಳಲಾಗಿದೆ.

1) ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, (ಪ.ಜಾ)-836, ಅಣಜಿ, ದಾವಣಗೆರೆ ತಾ., ಜಿಲ್ಲೆ. ಇಲ್ಲಿ 10-06-2017ರಿಂದ ಸದರಿ ದಿನಾಂಕದವರೆಗೆ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಕನ್ನಡ ಅತಿಥಿ ಶಿಕ್ಷಕರಾದ ನಿಂಗಪ್ಪ ಬಿ., ಆಂಗ್ಲ ಭಾಷಾ ಶಿಕ್ಷಕರಾದ ದೊಡ್ಡಪ್ಪ ಆರ್., ಹಿಂದಿ ಭಾಷಾ ಶಿಕ್ಷಕರಾದ ಗಂಗಾಧರ ಬಿ.ಎಲ್. ಹಾಗೂ ಗಣಿತ ಶಿಕ್ಷಕರಾದ ವೀರೇಂದ್ರ ಪಟೇಲ್ ಜಿ. ಇವರು ತಮ್ಮನ್ನು ಖಾಯಂಗೊಳಿಸಲು ಕರ್ನಾಟಕ ರಾಜ್ಯ ಉಚ್ಚನ್ಯಾಯಾಲಯ ಬೆಂಗಳೂರು ಇವರ ಮೊರೆ ಹೋಗಿದ್ದು, ಇವರ ಉಚ್ಛ ನ್ಯಾಯಾಲಯದ ಆದೇಶ ಸಂಖ್ಯೆ : ಅಪೀಲು ಸಂಖ್ಯೆ I : wp/12562-12564/2018,(S-DIS) II : wp/45714-45716/2018, (S-RES) ಆಗಿದೆ. ಇವರಿಗೆ ಕರ್ನಾಟಕ ರಾಜ್ಯ ಉಚ್ಚನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿರುತ್ತದೆ. ಈ ತಡೆಯಾಜ್ಞೆಯು ಪ್ರಸ್ತುತ ಜಾರಿಯಲ್ಲಿರುತ್ತದೆ.

ಇದರ ಅನ್ವಯ ಅಂತಿಮ ತೀರ್ಪು ಹೊರ ಬೀಳುವವರೆಗೂ ಸದರಿ ಶಿಕ್ಷಕರುಗಳು ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ, (ಪ.ಜಾ)-836, ಅಣಜಿ, ದಾವಣಗೆರೆ ತಾ., ಜಿಲ್ಲೆ. ಇಲ್ಲಿ ಸೇವೆಯಲ್ಲಿ ಮುಂದುವರೆಯುವ ಹಕ್ಕನ್ನು ಹೊಂದಿದ್ದಾರೆ. ಆದರೆ ಸದರಿ ವಸತಿ ಶಾಲೆಯ ಪ್ರಬಾರಿ ಪ್ರಾಂಶುಪಾಲರಾದ ಶ್ರೀ ವಿ.ಸಿ. ಅಂಜಿನಪ್ಪ ಹಾಗೂ ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಶಿವಾನಂದ ಕುಂಬಾರ ಇವರು ಯಾವುದೇ ನೋಟಿಸ್ ಅಥವಾ ಕರ್ತವ್ಯದಿಂದ ಬಿಡುಗಡೆಗೊಳಿಸುವ ಪತ್ರವನ್ನು ನೀಡದೆ ಏಕಾಏಕಿ ಮೇಲ್ಕಂಡ ವಿಷಯಗಳ ಅತಿಥಿ ಶಿಕ್ಷಕರ ಜಾಗಕ್ಕೆ ವರ್ಗಾವಣೆಗೊಂಡ ಖಾಯಂ ಶಿಕ್ಷಕರನ್ನು ಕರ್ತವ್ಯಕ್ಕೆ ಹಾಜರುಪಡಿಸಿಕೊಂಡು ಮೌಖಿಕವಾಗಿ ಹೊರಹೋಗುವಂತೆ ಸೂಚಿಸಿದ್ದಾರೆ. ಯಾವುದೇ ಕಾರಣಕ್ಕೂ ಕರ್ತವ್ಯಕ್ಕೆ ಹಾಜರಾಗದಂತೆ ಒತ್ತಡ ಹೇರಿ ಮಾನಸಿಕ ಹಿಂಸೆ ನೀಡಿರುತ್ತಾರೆ. ಅಲ್ಲದೆ ಕರ್ನಾಟಕ ರಾಜ್ಯ ಉಚ್ಚನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಸದರಿ ಅತಿಥಿ ಶಿಕ್ಷಕರುಗಳಿಗೆ ಅನ್ಯಾಯವೆಸಗಿದ್ದಾರೆ.

ಇದರಿಂದಾಗಿ ಇದೇ ವೃತ್ತಿಯನ್ನು ಅವಲಂಬಿಸಿರುವ ಅತಿಥಿ ಶಿಕ್ಷಕರುಗಳ ಮಾನವ ಸಂಪನ್ಮೂಲವನ್ನುದುರುಪಯೋಗಪಡಿಸಿಕೊಂಡಂತಾಗಿದೆ. ಆದ್ದರಿಂದ ಘನ ಉಚ್ಚನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆಯನ್ನು ಗೌರವಿಸಿ ಈ ಕೂಡಲೇ ರಾಜ್ಯ ಉಚ್ಚನ್ಯಾಯಾಲಯದ ಅಂತಿಮ ತೀರ್ಪು ಹೊರ ಬೀಳುವವರೆಗೂ ಸದರಿ ವಸತಿ ಶಾಲೆಯಲ್ಲಿಯೇ ಮುಂದುವರೆಸಬೇಕು.
ಈ ಸಂಬಂಧ ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಉಪಾಧ್ಯಕ್ಷರು ಮತ್ತು ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿಯವರು, ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ರಿ.) ಬೆಂಗಳೂರು ಇದರ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಅತಿಥಿ ಶಿಕ್ಷಕರುಗಳ ಹೆಸರಿನಲ್ಲಿ ಆದೇಶ ನೀಡಬೇಕಾಗಿ ಆಗ್ರಹ.

2) ಅದೇ ರೀತಿ wp/45714-45716/2018,(S-RES))ರ ಅನ್ವಯ ರಾಜ್ಯ ಉಚ್ಚನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆಯಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, (ಪ.ಜಾ)-836, ಅಣಜಿ, ದಾವಣಗೆರೆ ತಾ., ಜಿಲ್ಲೆ. ಇಲ್ಲಿ ಅತಿಥಿ ಶಿಕ್ಷಕರುಗಳಾಗಿ ಸೇವೆ ಸಲ್ಲಿಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರಾದ ತಿಮ್ಮಪ್ಪ ಕೆ.ಜೆ., ವಿಜ್ಞಾನ ಶಿಕ್ಷಕಿಯಾದ ಮಧುಮತಿ ಎಂ., ಹಾಗೂ ಹರಪನಹಳ್ಳಿ ತಾ. ಬಳ್ಳಾರಿ ಜಿಲ್ಲೆ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, (ಪ.ಜಾ)-509, ಇಲ್ಲಿ ಆಂಗ್ಲಭಾಷಾ ಅತಿಥಿ ಶಿಕ್ಷಕರಾದ ಕೃಷ್ಣಮೂರ್ತಿ ಬಿ. ಇವರ ಜಾಗಕ್ಕೂ ಸಹ ಖಾಯಂ ಶಿಕ್ಷಕರ ವರ್ಗಾವಣೆ ಆಗಲಿದೆ ಎಂದು ಆಯಾ ಶಾಲೆಗಳ ಪ್ರಾಂಶುಪಾಲರುಗಳು ಹೇಳಿರುವುದಾಗಿ ತಿಳಿದುಬಂದಿದೆ. ಆದ್ದರಿಂದ ಇವರಿಗೆ ಯಾವುದೇ ತೊಂದರೆ ಮಾಡದಂತೆ ಸದರಿ ಸ್ಥಳದಲ್ಲಿಯೇ ಮುಂದುವರೆಸಬೇಕಾಗಿ ಕೋರಿಕೆ.

3) ಇದೇ ರೀತಿ ರಾಜ್ಯಾದ್ಯಂತ ಉಚ್ಚನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರುಗಳಿಗೆ ಆಯಾ ಸ್ಥಳದಲ್ಲಿಯೇ ಮುಂದುವರೆಸಬೇಕಾಗಿ ವಿನಂತಿ.

4) ಈಗಾಗಲೇ ಸಂದರ್ಶನ ಪ್ರಕ್ರಿಯೆಯಲ್ಲಿ ಅರ್ಹತೆ ಹಾಗೂ ಪ್ರತಿಭೆಯ ಮಾನದಂಡದ ಆಧಾರದ ಮೇಲೆಯೇ ಆಯ್ಕೆಯಾಗಿ ಅತ್ಯಂತ ಕಡಿಮೆ ವೇತನದಲ್ಲಿ ಸೇವೆ ಸಲ್ಲಿಸುತ್ತಾ ಸರ್ಕಾರದ ಆರ್ಥಿಕ ಉಳಿತಾಯಕ್ಕೂ ಕಾರಣರಾಗಿರುವ ಮತ್ತು ಸೇವಾ ನಿಷ್ಠೆಯಿಂದ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ತಮ್ಮ ಮಾನವ ಸಂಪನ್ಮೂಲದ ಸದ್ಬಳಕೆ ಮಾಡುತ್ತಿರುವ ರಾಜ್ಯದ ಎಲ್ಲಾ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರನ್ನು ನೇರವಾಗಿ ಖಾಯಂಗೊಳಿಸಬೇಕಾಗಿ ಆಗ್ರಹ. ಇದರಲ್ಲಿ ವಯೋಮಿತಿ ಮೀರಿರುವ ಅನೇಕ ಅತಿಥಿ ಶಿಕ್ಷಕರಿದ್ದಾರೆ. ಅಲ್ಲದೆ ಬಹುಪಾಲು ಶಿಕ್ಷಕರು ಆರ್ಥಿಕವಾಗಿ ಹಿಂದುಳಿದವರಾಗಿದ್ದಾರೆ. ಆದ್ದರಿಂದ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯದ ಎಲ್ಲಾ ಅತಿಥಿ ಶಿಕ್ಷಕರುಗಳ ಸೇವೆಯನ್ನು ಪರಿಗಣಿಸಿ ಖಾಯಂಗೊಳಿಸಬೇಕಾಗಿ ಸಂಘದ ವತಿಯಿಂದ ಕಳಕಳಿಯ ಮನವಿ.

5) ದಸರಾ ರಜೆ ಮತ್ತು ಬೇಸಿಗೆಯ ರಜೆ ಅವಧಿಯಲ್ಲಿಯೂ ಅತಿಥಿ ಶಿಕ್ಷಕರುಗಳಿಗೆ ಪೂರ್ಣವೇತನ ನೀಡಬೇಕು.

6) ಅತಿಥಿ ಶಿಕ್ಷಕರನ್ನು ಖಾಯಂಗೊಳಿಸುವವರೆಗೂ ಕೇಂದ್ರ ಸರ್ಕಾರದ ಆದೇಶದಂತೆ ಕನಿಷ್ಠ ಮೂಲ ವೇತನ ಸೌಲಭ್ಯ, ಪಿ.ಎಫ್, ಇ.ಎಸ್.ಐ., ಇನ್ನಿತರೆ ಸೌಲಭ್ಯಗಳನ್ನು ನೀಡಬೇಕು.

ಈ ಮೇಲ್ಕಂಡ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನಮ್ಮ ಸದರಿ ಸಂಘದ ವತಿಯಿಂದ ಬೇಡಿಕೆ ಈಡೇರುವವರೆಗೂ ಅನಿರ್ಧಿಷ್ಟಾವಧಿ ಕಾಲ ಹಮ್ಮಿಕೊಂಡಿರುವ ಈ ಮುಷ್ಕರಕ್ಕೆ ದಾವಣಗೆರೆ ಜಿಲ್ಲೆಯ ಹಾಗೂ ಒಟ್ಟಾರೆ ರಾಜ್ಯದ ಯಾವುದೇ ಸಂಘ ಸಂಸ್ಥೆಗಳು ಬೆಂಬಲ ನೀಡಿ ನೊಂದ ಅತಿಥಿ ಶಿಕ್ಷಕರುಗಳಿಗೆ ನ್ಯಾಯ ಸಿಗಲು ಸಹಕರಿಸಬೇಕಾಗಿಯೂ ಕೋರುತ್ತೇವೆ.

ವಂದನೆಗಳೊಂದಿಗೆ
ತಮ್ಮ ವಿಶ್ವಾಸಿಗಳು
ಕರ್ನಾಟಕ ರಾಜ್ಯ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರ ಸಂಘ (ರಿ.) ರಾಜ್ಯ ಘಟಕ,

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

Published

on

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.

ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.

ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending