Connect with us

ದಿನದ ಸುದ್ದಿ

ದಾವಣಗೆರೆ |ಕರ್ನಾಟಕ ರಾಜ್ಯ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರ ಸಂಘದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ

Published

on

ಸಾಂದರ್ಭಿಕ ಚಿತ್ರ

ರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರ ಈ ಕೆಳಕಂಡ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ದಿನಾಂಕ : 26-08-2019 ಸೋಮವಾರದಿಂದ ದಾವಣಗೆರೆ ನಗರದ ಉಪವಿಭಾಗಾಧಿಕಾರಿ (ಎ.ಸಿ) ಕಛೇರಿ ಮುಂದೆ ಅನಿರ್ಧಿಷ್ಟಾವಧಿಯ ಕಾಲ ಬೇಡಿಕೆ ಈಡೇರುವವರೆಗೂ ಮುಷ್ಕರ ಹಮ್ಮಿಕೊಳ್ಳಲಾಗಿದೆ.

1) ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, (ಪ.ಜಾ)-836, ಅಣಜಿ, ದಾವಣಗೆರೆ ತಾ., ಜಿಲ್ಲೆ. ಇಲ್ಲಿ 10-06-2017ರಿಂದ ಸದರಿ ದಿನಾಂಕದವರೆಗೆ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಕನ್ನಡ ಅತಿಥಿ ಶಿಕ್ಷಕರಾದ ನಿಂಗಪ್ಪ ಬಿ., ಆಂಗ್ಲ ಭಾಷಾ ಶಿಕ್ಷಕರಾದ ದೊಡ್ಡಪ್ಪ ಆರ್., ಹಿಂದಿ ಭಾಷಾ ಶಿಕ್ಷಕರಾದ ಗಂಗಾಧರ ಬಿ.ಎಲ್. ಹಾಗೂ ಗಣಿತ ಶಿಕ್ಷಕರಾದ ವೀರೇಂದ್ರ ಪಟೇಲ್ ಜಿ. ಇವರು ತಮ್ಮನ್ನು ಖಾಯಂಗೊಳಿಸಲು ಕರ್ನಾಟಕ ರಾಜ್ಯ ಉಚ್ಚನ್ಯಾಯಾಲಯ ಬೆಂಗಳೂರು ಇವರ ಮೊರೆ ಹೋಗಿದ್ದು, ಇವರ ಉಚ್ಛ ನ್ಯಾಯಾಲಯದ ಆದೇಶ ಸಂಖ್ಯೆ : ಅಪೀಲು ಸಂಖ್ಯೆ I : wp/12562-12564/2018,(S-DIS) II : wp/45714-45716/2018, (S-RES) ಆಗಿದೆ. ಇವರಿಗೆ ಕರ್ನಾಟಕ ರಾಜ್ಯ ಉಚ್ಚನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿರುತ್ತದೆ. ಈ ತಡೆಯಾಜ್ಞೆಯು ಪ್ರಸ್ತುತ ಜಾರಿಯಲ್ಲಿರುತ್ತದೆ.

ಇದರ ಅನ್ವಯ ಅಂತಿಮ ತೀರ್ಪು ಹೊರ ಬೀಳುವವರೆಗೂ ಸದರಿ ಶಿಕ್ಷಕರುಗಳು ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ, (ಪ.ಜಾ)-836, ಅಣಜಿ, ದಾವಣಗೆರೆ ತಾ., ಜಿಲ್ಲೆ. ಇಲ್ಲಿ ಸೇವೆಯಲ್ಲಿ ಮುಂದುವರೆಯುವ ಹಕ್ಕನ್ನು ಹೊಂದಿದ್ದಾರೆ. ಆದರೆ ಸದರಿ ವಸತಿ ಶಾಲೆಯ ಪ್ರಬಾರಿ ಪ್ರಾಂಶುಪಾಲರಾದ ಶ್ರೀ ವಿ.ಸಿ. ಅಂಜಿನಪ್ಪ ಹಾಗೂ ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಶಿವಾನಂದ ಕುಂಬಾರ ಇವರು ಯಾವುದೇ ನೋಟಿಸ್ ಅಥವಾ ಕರ್ತವ್ಯದಿಂದ ಬಿಡುಗಡೆಗೊಳಿಸುವ ಪತ್ರವನ್ನು ನೀಡದೆ ಏಕಾಏಕಿ ಮೇಲ್ಕಂಡ ವಿಷಯಗಳ ಅತಿಥಿ ಶಿಕ್ಷಕರ ಜಾಗಕ್ಕೆ ವರ್ಗಾವಣೆಗೊಂಡ ಖಾಯಂ ಶಿಕ್ಷಕರನ್ನು ಕರ್ತವ್ಯಕ್ಕೆ ಹಾಜರುಪಡಿಸಿಕೊಂಡು ಮೌಖಿಕವಾಗಿ ಹೊರಹೋಗುವಂತೆ ಸೂಚಿಸಿದ್ದಾರೆ. ಯಾವುದೇ ಕಾರಣಕ್ಕೂ ಕರ್ತವ್ಯಕ್ಕೆ ಹಾಜರಾಗದಂತೆ ಒತ್ತಡ ಹೇರಿ ಮಾನಸಿಕ ಹಿಂಸೆ ನೀಡಿರುತ್ತಾರೆ. ಅಲ್ಲದೆ ಕರ್ನಾಟಕ ರಾಜ್ಯ ಉಚ್ಚನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಸದರಿ ಅತಿಥಿ ಶಿಕ್ಷಕರುಗಳಿಗೆ ಅನ್ಯಾಯವೆಸಗಿದ್ದಾರೆ.

ಇದರಿಂದಾಗಿ ಇದೇ ವೃತ್ತಿಯನ್ನು ಅವಲಂಬಿಸಿರುವ ಅತಿಥಿ ಶಿಕ್ಷಕರುಗಳ ಮಾನವ ಸಂಪನ್ಮೂಲವನ್ನುದುರುಪಯೋಗಪಡಿಸಿಕೊಂಡಂತಾಗಿದೆ. ಆದ್ದರಿಂದ ಘನ ಉಚ್ಚನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆಯನ್ನು ಗೌರವಿಸಿ ಈ ಕೂಡಲೇ ರಾಜ್ಯ ಉಚ್ಚನ್ಯಾಯಾಲಯದ ಅಂತಿಮ ತೀರ್ಪು ಹೊರ ಬೀಳುವವರೆಗೂ ಸದರಿ ವಸತಿ ಶಾಲೆಯಲ್ಲಿಯೇ ಮುಂದುವರೆಸಬೇಕು.
ಈ ಸಂಬಂಧ ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಉಪಾಧ್ಯಕ್ಷರು ಮತ್ತು ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿಯವರು, ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ರಿ.) ಬೆಂಗಳೂರು ಇದರ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಅತಿಥಿ ಶಿಕ್ಷಕರುಗಳ ಹೆಸರಿನಲ್ಲಿ ಆದೇಶ ನೀಡಬೇಕಾಗಿ ಆಗ್ರಹ.

2) ಅದೇ ರೀತಿ wp/45714-45716/2018,(S-RES))ರ ಅನ್ವಯ ರಾಜ್ಯ ಉಚ್ಚನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆಯಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, (ಪ.ಜಾ)-836, ಅಣಜಿ, ದಾವಣಗೆರೆ ತಾ., ಜಿಲ್ಲೆ. ಇಲ್ಲಿ ಅತಿಥಿ ಶಿಕ್ಷಕರುಗಳಾಗಿ ಸೇವೆ ಸಲ್ಲಿಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರಾದ ತಿಮ್ಮಪ್ಪ ಕೆ.ಜೆ., ವಿಜ್ಞಾನ ಶಿಕ್ಷಕಿಯಾದ ಮಧುಮತಿ ಎಂ., ಹಾಗೂ ಹರಪನಹಳ್ಳಿ ತಾ. ಬಳ್ಳಾರಿ ಜಿಲ್ಲೆ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, (ಪ.ಜಾ)-509, ಇಲ್ಲಿ ಆಂಗ್ಲಭಾಷಾ ಅತಿಥಿ ಶಿಕ್ಷಕರಾದ ಕೃಷ್ಣಮೂರ್ತಿ ಬಿ. ಇವರ ಜಾಗಕ್ಕೂ ಸಹ ಖಾಯಂ ಶಿಕ್ಷಕರ ವರ್ಗಾವಣೆ ಆಗಲಿದೆ ಎಂದು ಆಯಾ ಶಾಲೆಗಳ ಪ್ರಾಂಶುಪಾಲರುಗಳು ಹೇಳಿರುವುದಾಗಿ ತಿಳಿದುಬಂದಿದೆ. ಆದ್ದರಿಂದ ಇವರಿಗೆ ಯಾವುದೇ ತೊಂದರೆ ಮಾಡದಂತೆ ಸದರಿ ಸ್ಥಳದಲ್ಲಿಯೇ ಮುಂದುವರೆಸಬೇಕಾಗಿ ಕೋರಿಕೆ.

3) ಇದೇ ರೀತಿ ರಾಜ್ಯಾದ್ಯಂತ ಉಚ್ಚನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರುಗಳಿಗೆ ಆಯಾ ಸ್ಥಳದಲ್ಲಿಯೇ ಮುಂದುವರೆಸಬೇಕಾಗಿ ವಿನಂತಿ.

4) ಈಗಾಗಲೇ ಸಂದರ್ಶನ ಪ್ರಕ್ರಿಯೆಯಲ್ಲಿ ಅರ್ಹತೆ ಹಾಗೂ ಪ್ರತಿಭೆಯ ಮಾನದಂಡದ ಆಧಾರದ ಮೇಲೆಯೇ ಆಯ್ಕೆಯಾಗಿ ಅತ್ಯಂತ ಕಡಿಮೆ ವೇತನದಲ್ಲಿ ಸೇವೆ ಸಲ್ಲಿಸುತ್ತಾ ಸರ್ಕಾರದ ಆರ್ಥಿಕ ಉಳಿತಾಯಕ್ಕೂ ಕಾರಣರಾಗಿರುವ ಮತ್ತು ಸೇವಾ ನಿಷ್ಠೆಯಿಂದ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ತಮ್ಮ ಮಾನವ ಸಂಪನ್ಮೂಲದ ಸದ್ಬಳಕೆ ಮಾಡುತ್ತಿರುವ ರಾಜ್ಯದ ಎಲ್ಲಾ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರನ್ನು ನೇರವಾಗಿ ಖಾಯಂಗೊಳಿಸಬೇಕಾಗಿ ಆಗ್ರಹ. ಇದರಲ್ಲಿ ವಯೋಮಿತಿ ಮೀರಿರುವ ಅನೇಕ ಅತಿಥಿ ಶಿಕ್ಷಕರಿದ್ದಾರೆ. ಅಲ್ಲದೆ ಬಹುಪಾಲು ಶಿಕ್ಷಕರು ಆರ್ಥಿಕವಾಗಿ ಹಿಂದುಳಿದವರಾಗಿದ್ದಾರೆ. ಆದ್ದರಿಂದ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯದ ಎಲ್ಲಾ ಅತಿಥಿ ಶಿಕ್ಷಕರುಗಳ ಸೇವೆಯನ್ನು ಪರಿಗಣಿಸಿ ಖಾಯಂಗೊಳಿಸಬೇಕಾಗಿ ಸಂಘದ ವತಿಯಿಂದ ಕಳಕಳಿಯ ಮನವಿ.

5) ದಸರಾ ರಜೆ ಮತ್ತು ಬೇಸಿಗೆಯ ರಜೆ ಅವಧಿಯಲ್ಲಿಯೂ ಅತಿಥಿ ಶಿಕ್ಷಕರುಗಳಿಗೆ ಪೂರ್ಣವೇತನ ನೀಡಬೇಕು.

6) ಅತಿಥಿ ಶಿಕ್ಷಕರನ್ನು ಖಾಯಂಗೊಳಿಸುವವರೆಗೂ ಕೇಂದ್ರ ಸರ್ಕಾರದ ಆದೇಶದಂತೆ ಕನಿಷ್ಠ ಮೂಲ ವೇತನ ಸೌಲಭ್ಯ, ಪಿ.ಎಫ್, ಇ.ಎಸ್.ಐ., ಇನ್ನಿತರೆ ಸೌಲಭ್ಯಗಳನ್ನು ನೀಡಬೇಕು.

ಈ ಮೇಲ್ಕಂಡ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನಮ್ಮ ಸದರಿ ಸಂಘದ ವತಿಯಿಂದ ಬೇಡಿಕೆ ಈಡೇರುವವರೆಗೂ ಅನಿರ್ಧಿಷ್ಟಾವಧಿ ಕಾಲ ಹಮ್ಮಿಕೊಂಡಿರುವ ಈ ಮುಷ್ಕರಕ್ಕೆ ದಾವಣಗೆರೆ ಜಿಲ್ಲೆಯ ಹಾಗೂ ಒಟ್ಟಾರೆ ರಾಜ್ಯದ ಯಾವುದೇ ಸಂಘ ಸಂಸ್ಥೆಗಳು ಬೆಂಬಲ ನೀಡಿ ನೊಂದ ಅತಿಥಿ ಶಿಕ್ಷಕರುಗಳಿಗೆ ನ್ಯಾಯ ಸಿಗಲು ಸಹಕರಿಸಬೇಕಾಗಿಯೂ ಕೋರುತ್ತೇವೆ.

ವಂದನೆಗಳೊಂದಿಗೆ
ತಮ್ಮ ವಿಶ್ವಾಸಿಗಳು
ಕರ್ನಾಟಕ ರಾಜ್ಯ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರ ಸಂಘ (ರಿ.) ರಾಜ್ಯ ಘಟಕ,

ದಿನದ ಸುದ್ದಿ

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

Published

on

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.

ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ‌ಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.

ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.

ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

Published

on

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.

ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾ‌ನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾ‌ನ‌ ಪೀಠಿಕೆಯನ್ನು ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾ‌ನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.

ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

Published

on

  • ಪುರಂದರ್ ಲೋಕಿಕೆರೆ

ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ ಮಾಡಿ ಯಶಸ್ವಿಯಾಗಿ ಕಾಲುವೆ ನೀರು ಬಳಸಿಕೊಂಡು ಭತ್ತ ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ ದಾವಣಗೆರೆ ಭಾಗದ ರೈತರು.

ಬೇಸಿಗೆ ಕಾಲದಲ್ಲಿ ನಮಗೆ ತೋಟಗಳಿಗೆ ನೀರು ಹರಿಸಲು ಆನ್ ಆಪ್ ಪದ್ದತಿ ಮಾಡಿ ಎಂದು ಒತ್ತಡ ಹಾಕಿದ ಶಿವಮೊಗ್ಗ ಜಿಲ್ಲೆಯ ಅಡಿಕೆ ದಣಿಗಳಿಗೇ ಮುಖಕ್ಕೆ ಹೊಡೆದಂತೆ ಭತ್ತ ಬೆಳೆದು ತೋರಿಸಿರುವುದು ಶ್ಲಾಘನೀಯ.

100 ದಿನಗಳು ನೀರು ಹರಿಸಲು ಆದೇಶ ಹೊರಡಿಸಿ ರೈತರೆಲ್ಲ ನಾಟಿ ಮಾಡಿದ ಮೇಲೆ ಎಂದೂ ಗದ್ದೆ ನೀರು ಕಟ್ಟದ ಐಷಾರಾಮೀ ರಾಜಕಾರಣಿ ಪುತ್ರ ರತ್ನ ಸಚಿವ ಮಧು ಬಂಗಾರಪ್ಪ ಅಡಿಕೆ ತೋಟದ ರೈತರಿಗೆ ಮನ ಸೋತವರು.

ಕಲ್ಲು ಬಂಡೆ ಹೊಡೆದು ಭರ್ಜರಿ ಜೀವನ ಸಾಗಿಸುವ ಸಂಪನ್ಮೂಲ ಸಚಿವ, ಉಸ್ತುವಾರಿ ಸಚಿವರ ನಿರ್ಲಕ್ಷ್ಯ ಬೇಸತ್ತ ರೈತ ರಸ್ತೆ ತಡೆದು ನೀರು ಕೊಡಿ ಎಂದು ಹೋರಾಟ ಮಾಡಿದರೂ ಕಿವಿ ಕೇಳೋಲ್ಲ ಎಂಬಂತೆ ವರ್ತಿಸಿದೆ ಆಡಳಿತ ಯಂತ್ರ.

ಆದರೆ ಈ ನಡುವೆ ಎರಡು ಭಾರಿ ಪ್ರಕೃತಿ ವರದಾನ ದಿಂದ ಭತ್ತ ಬೆಳೆಯುವ ಮೂಲಕ ಅನ್ನನೀಡುವ ರೈತ ಭತ್ತ ಬೆಳೆದು ಬಿಟ್ಟ. ಈ ಮೂರು ತಿಂಗಳ ಭತ್ತಕ್ಕೆ ನೀರು ಬಿಡುವುದು ಎಷ್ಟು ತ್ರಾಸದಾಯಕ. ಸರ್ಕಾರಗಳು ಯಾರು ಪರ ಎಂದು ಬೆತ್ತಲೆ ತೋರಿಸಿಕೊಂಡಿವೆ.

ಈಗಲಾದರೂ ಕಾಲ ಮಿಂಚಿಲ್ಲ ಕಟಾವು ಮಾಡಿದ ಭತ್ತ ಒಳ್ಳೆಯ ಗುಣಮಟ್ಟದ್ದು ಆಗಿದೆ.3000-3500 ರೂಂ ದರ ನಿಗದಿ ಮಾಡಿದರೆ ರೈತ ಸಾಲಶೂಲದಿಂದಮುಕ್ತಿ ಆಗಬಹುದು. ಭದ್ರಾ ನೀರು ಬೇಸಿಗೆ ಕಾಲದಲ್ಲಿ ಕೊಡುವುದೇ ಇಲ್ಲ ಎಂದು ಹೇಳಿರುವುದು ರೈತ ವಿರೋಧಿ ನೀತಿ.

ಗುಂಡುರಾವ್ ಕಾಲಾವಧಿಯಲ್ಲಿ 158ಅಡಿ ನೀರಿದ್ದರೂ ಭದ್ರಾ ನೀರು ಹರಿಸಲಾಗಿರುವ ದಾಖಲೆ ಇದೆ. ಕಡೆ ಪಕ್ಷ ಈ ಭಾರಿಯ ಭತ್ಖಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ, ಇಲ್ಲವೇ ಯಾವ ರೈತರ ಬಳಿ ಭತ್ತ ಖರೀದಿ ನಿಲ್ಲಿಸಿ. ರೈತರೇ ಸ್ವಂತ ಮಾರುಕಟ್ಟೆ ಹುಡುಕಿಕೊಳ್ಳುವ ಪ್ರಯತ್ನ ಮಾಡಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending