Connect with us

ದಿನದ ಸುದ್ದಿ

ದಾವಣಗೆರೆ |ಕರ್ನಾಟಕ ರಾಜ್ಯ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರ ಸಂಘದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ

Published

on

ಸಾಂದರ್ಭಿಕ ಚಿತ್ರ

ರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರ ಈ ಕೆಳಕಂಡ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ದಿನಾಂಕ : 26-08-2019 ಸೋಮವಾರದಿಂದ ದಾವಣಗೆರೆ ನಗರದ ಉಪವಿಭಾಗಾಧಿಕಾರಿ (ಎ.ಸಿ) ಕಛೇರಿ ಮುಂದೆ ಅನಿರ್ಧಿಷ್ಟಾವಧಿಯ ಕಾಲ ಬೇಡಿಕೆ ಈಡೇರುವವರೆಗೂ ಮುಷ್ಕರ ಹಮ್ಮಿಕೊಳ್ಳಲಾಗಿದೆ.

1) ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, (ಪ.ಜಾ)-836, ಅಣಜಿ, ದಾವಣಗೆರೆ ತಾ., ಜಿಲ್ಲೆ. ಇಲ್ಲಿ 10-06-2017ರಿಂದ ಸದರಿ ದಿನಾಂಕದವರೆಗೆ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಕನ್ನಡ ಅತಿಥಿ ಶಿಕ್ಷಕರಾದ ನಿಂಗಪ್ಪ ಬಿ., ಆಂಗ್ಲ ಭಾಷಾ ಶಿಕ್ಷಕರಾದ ದೊಡ್ಡಪ್ಪ ಆರ್., ಹಿಂದಿ ಭಾಷಾ ಶಿಕ್ಷಕರಾದ ಗಂಗಾಧರ ಬಿ.ಎಲ್. ಹಾಗೂ ಗಣಿತ ಶಿಕ್ಷಕರಾದ ವೀರೇಂದ್ರ ಪಟೇಲ್ ಜಿ. ಇವರು ತಮ್ಮನ್ನು ಖಾಯಂಗೊಳಿಸಲು ಕರ್ನಾಟಕ ರಾಜ್ಯ ಉಚ್ಚನ್ಯಾಯಾಲಯ ಬೆಂಗಳೂರು ಇವರ ಮೊರೆ ಹೋಗಿದ್ದು, ಇವರ ಉಚ್ಛ ನ್ಯಾಯಾಲಯದ ಆದೇಶ ಸಂಖ್ಯೆ : ಅಪೀಲು ಸಂಖ್ಯೆ I : wp/12562-12564/2018,(S-DIS) II : wp/45714-45716/2018, (S-RES) ಆಗಿದೆ. ಇವರಿಗೆ ಕರ್ನಾಟಕ ರಾಜ್ಯ ಉಚ್ಚನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿರುತ್ತದೆ. ಈ ತಡೆಯಾಜ್ಞೆಯು ಪ್ರಸ್ತುತ ಜಾರಿಯಲ್ಲಿರುತ್ತದೆ.

ಇದರ ಅನ್ವಯ ಅಂತಿಮ ತೀರ್ಪು ಹೊರ ಬೀಳುವವರೆಗೂ ಸದರಿ ಶಿಕ್ಷಕರುಗಳು ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ, (ಪ.ಜಾ)-836, ಅಣಜಿ, ದಾವಣಗೆರೆ ತಾ., ಜಿಲ್ಲೆ. ಇಲ್ಲಿ ಸೇವೆಯಲ್ಲಿ ಮುಂದುವರೆಯುವ ಹಕ್ಕನ್ನು ಹೊಂದಿದ್ದಾರೆ. ಆದರೆ ಸದರಿ ವಸತಿ ಶಾಲೆಯ ಪ್ರಬಾರಿ ಪ್ರಾಂಶುಪಾಲರಾದ ಶ್ರೀ ವಿ.ಸಿ. ಅಂಜಿನಪ್ಪ ಹಾಗೂ ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಶಿವಾನಂದ ಕುಂಬಾರ ಇವರು ಯಾವುದೇ ನೋಟಿಸ್ ಅಥವಾ ಕರ್ತವ್ಯದಿಂದ ಬಿಡುಗಡೆಗೊಳಿಸುವ ಪತ್ರವನ್ನು ನೀಡದೆ ಏಕಾಏಕಿ ಮೇಲ್ಕಂಡ ವಿಷಯಗಳ ಅತಿಥಿ ಶಿಕ್ಷಕರ ಜಾಗಕ್ಕೆ ವರ್ಗಾವಣೆಗೊಂಡ ಖಾಯಂ ಶಿಕ್ಷಕರನ್ನು ಕರ್ತವ್ಯಕ್ಕೆ ಹಾಜರುಪಡಿಸಿಕೊಂಡು ಮೌಖಿಕವಾಗಿ ಹೊರಹೋಗುವಂತೆ ಸೂಚಿಸಿದ್ದಾರೆ. ಯಾವುದೇ ಕಾರಣಕ್ಕೂ ಕರ್ತವ್ಯಕ್ಕೆ ಹಾಜರಾಗದಂತೆ ಒತ್ತಡ ಹೇರಿ ಮಾನಸಿಕ ಹಿಂಸೆ ನೀಡಿರುತ್ತಾರೆ. ಅಲ್ಲದೆ ಕರ್ನಾಟಕ ರಾಜ್ಯ ಉಚ್ಚನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಸದರಿ ಅತಿಥಿ ಶಿಕ್ಷಕರುಗಳಿಗೆ ಅನ್ಯಾಯವೆಸಗಿದ್ದಾರೆ.

ಇದರಿಂದಾಗಿ ಇದೇ ವೃತ್ತಿಯನ್ನು ಅವಲಂಬಿಸಿರುವ ಅತಿಥಿ ಶಿಕ್ಷಕರುಗಳ ಮಾನವ ಸಂಪನ್ಮೂಲವನ್ನುದುರುಪಯೋಗಪಡಿಸಿಕೊಂಡಂತಾಗಿದೆ. ಆದ್ದರಿಂದ ಘನ ಉಚ್ಚನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆಯನ್ನು ಗೌರವಿಸಿ ಈ ಕೂಡಲೇ ರಾಜ್ಯ ಉಚ್ಚನ್ಯಾಯಾಲಯದ ಅಂತಿಮ ತೀರ್ಪು ಹೊರ ಬೀಳುವವರೆಗೂ ಸದರಿ ವಸತಿ ಶಾಲೆಯಲ್ಲಿಯೇ ಮುಂದುವರೆಸಬೇಕು.
ಈ ಸಂಬಂಧ ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಉಪಾಧ್ಯಕ್ಷರು ಮತ್ತು ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿಯವರು, ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ರಿ.) ಬೆಂಗಳೂರು ಇದರ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಅತಿಥಿ ಶಿಕ್ಷಕರುಗಳ ಹೆಸರಿನಲ್ಲಿ ಆದೇಶ ನೀಡಬೇಕಾಗಿ ಆಗ್ರಹ.

2) ಅದೇ ರೀತಿ wp/45714-45716/2018,(S-RES))ರ ಅನ್ವಯ ರಾಜ್ಯ ಉಚ್ಚನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆಯಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, (ಪ.ಜಾ)-836, ಅಣಜಿ, ದಾವಣಗೆರೆ ತಾ., ಜಿಲ್ಲೆ. ಇಲ್ಲಿ ಅತಿಥಿ ಶಿಕ್ಷಕರುಗಳಾಗಿ ಸೇವೆ ಸಲ್ಲಿಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರಾದ ತಿಮ್ಮಪ್ಪ ಕೆ.ಜೆ., ವಿಜ್ಞಾನ ಶಿಕ್ಷಕಿಯಾದ ಮಧುಮತಿ ಎಂ., ಹಾಗೂ ಹರಪನಹಳ್ಳಿ ತಾ. ಬಳ್ಳಾರಿ ಜಿಲ್ಲೆ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, (ಪ.ಜಾ)-509, ಇಲ್ಲಿ ಆಂಗ್ಲಭಾಷಾ ಅತಿಥಿ ಶಿಕ್ಷಕರಾದ ಕೃಷ್ಣಮೂರ್ತಿ ಬಿ. ಇವರ ಜಾಗಕ್ಕೂ ಸಹ ಖಾಯಂ ಶಿಕ್ಷಕರ ವರ್ಗಾವಣೆ ಆಗಲಿದೆ ಎಂದು ಆಯಾ ಶಾಲೆಗಳ ಪ್ರಾಂಶುಪಾಲರುಗಳು ಹೇಳಿರುವುದಾಗಿ ತಿಳಿದುಬಂದಿದೆ. ಆದ್ದರಿಂದ ಇವರಿಗೆ ಯಾವುದೇ ತೊಂದರೆ ಮಾಡದಂತೆ ಸದರಿ ಸ್ಥಳದಲ್ಲಿಯೇ ಮುಂದುವರೆಸಬೇಕಾಗಿ ಕೋರಿಕೆ.

3) ಇದೇ ರೀತಿ ರಾಜ್ಯಾದ್ಯಂತ ಉಚ್ಚನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರುಗಳಿಗೆ ಆಯಾ ಸ್ಥಳದಲ್ಲಿಯೇ ಮುಂದುವರೆಸಬೇಕಾಗಿ ವಿನಂತಿ.

4) ಈಗಾಗಲೇ ಸಂದರ್ಶನ ಪ್ರಕ್ರಿಯೆಯಲ್ಲಿ ಅರ್ಹತೆ ಹಾಗೂ ಪ್ರತಿಭೆಯ ಮಾನದಂಡದ ಆಧಾರದ ಮೇಲೆಯೇ ಆಯ್ಕೆಯಾಗಿ ಅತ್ಯಂತ ಕಡಿಮೆ ವೇತನದಲ್ಲಿ ಸೇವೆ ಸಲ್ಲಿಸುತ್ತಾ ಸರ್ಕಾರದ ಆರ್ಥಿಕ ಉಳಿತಾಯಕ್ಕೂ ಕಾರಣರಾಗಿರುವ ಮತ್ತು ಸೇವಾ ನಿಷ್ಠೆಯಿಂದ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ತಮ್ಮ ಮಾನವ ಸಂಪನ್ಮೂಲದ ಸದ್ಬಳಕೆ ಮಾಡುತ್ತಿರುವ ರಾಜ್ಯದ ಎಲ್ಲಾ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರನ್ನು ನೇರವಾಗಿ ಖಾಯಂಗೊಳಿಸಬೇಕಾಗಿ ಆಗ್ರಹ. ಇದರಲ್ಲಿ ವಯೋಮಿತಿ ಮೀರಿರುವ ಅನೇಕ ಅತಿಥಿ ಶಿಕ್ಷಕರಿದ್ದಾರೆ. ಅಲ್ಲದೆ ಬಹುಪಾಲು ಶಿಕ್ಷಕರು ಆರ್ಥಿಕವಾಗಿ ಹಿಂದುಳಿದವರಾಗಿದ್ದಾರೆ. ಆದ್ದರಿಂದ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯದ ಎಲ್ಲಾ ಅತಿಥಿ ಶಿಕ್ಷಕರುಗಳ ಸೇವೆಯನ್ನು ಪರಿಗಣಿಸಿ ಖಾಯಂಗೊಳಿಸಬೇಕಾಗಿ ಸಂಘದ ವತಿಯಿಂದ ಕಳಕಳಿಯ ಮನವಿ.

5) ದಸರಾ ರಜೆ ಮತ್ತು ಬೇಸಿಗೆಯ ರಜೆ ಅವಧಿಯಲ್ಲಿಯೂ ಅತಿಥಿ ಶಿಕ್ಷಕರುಗಳಿಗೆ ಪೂರ್ಣವೇತನ ನೀಡಬೇಕು.

6) ಅತಿಥಿ ಶಿಕ್ಷಕರನ್ನು ಖಾಯಂಗೊಳಿಸುವವರೆಗೂ ಕೇಂದ್ರ ಸರ್ಕಾರದ ಆದೇಶದಂತೆ ಕನಿಷ್ಠ ಮೂಲ ವೇತನ ಸೌಲಭ್ಯ, ಪಿ.ಎಫ್, ಇ.ಎಸ್.ಐ., ಇನ್ನಿತರೆ ಸೌಲಭ್ಯಗಳನ್ನು ನೀಡಬೇಕು.

ಈ ಮೇಲ್ಕಂಡ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನಮ್ಮ ಸದರಿ ಸಂಘದ ವತಿಯಿಂದ ಬೇಡಿಕೆ ಈಡೇರುವವರೆಗೂ ಅನಿರ್ಧಿಷ್ಟಾವಧಿ ಕಾಲ ಹಮ್ಮಿಕೊಂಡಿರುವ ಈ ಮುಷ್ಕರಕ್ಕೆ ದಾವಣಗೆರೆ ಜಿಲ್ಲೆಯ ಹಾಗೂ ಒಟ್ಟಾರೆ ರಾಜ್ಯದ ಯಾವುದೇ ಸಂಘ ಸಂಸ್ಥೆಗಳು ಬೆಂಬಲ ನೀಡಿ ನೊಂದ ಅತಿಥಿ ಶಿಕ್ಷಕರುಗಳಿಗೆ ನ್ಯಾಯ ಸಿಗಲು ಸಹಕರಿಸಬೇಕಾಗಿಯೂ ಕೋರುತ್ತೇವೆ.

ವಂದನೆಗಳೊಂದಿಗೆ
ತಮ್ಮ ವಿಶ್ವಾಸಿಗಳು
ಕರ್ನಾಟಕ ರಾಜ್ಯ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರ ಸಂಘ (ರಿ.) ರಾಜ್ಯ ಘಟಕ,

ದಿನದ ಸುದ್ದಿ

ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

Published

on

ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ . ಸಿ. ಹೆಚ್ ಅವರು ಉದ್ಘಾಟಿಸಿದರು.

ಸನಾವುಲ್ಲಾ ನವಿಲೇಹಾಳು ಅವರು ಉಪನ್ಯಾಸ ಮಾಡಿ ಹೊಸ ತಲೆಮಾರಿನವರು ಸಮಾಜಿಕ ಜಾಲತಾಣಗಳಲ್ಲಿ ಗೇಮ್ , ರೀಲ್ಸ್ ಇತರೆ ವಿಷಯಗಳಲ್ಲಿ ಮುಳುಗಿ ಬಿಕ್ಕಟ್ಟಿಗೆ ಸಿಲುಕಿದ್ದಾರೆ. ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ ಕಟ್ಟಿಕೊಳ್ಳಬೇಕು. ತ್ಯಾಗ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆಕೊಟ್ಟರು.

ಉಪಸ್ಥಿತರಿದ್ದ ಕಾಲೇಜಿನ ಕುಲಸಚಿವರಾದ ಶ್ರೀ ಜಗದೀಶ್ ಹೆಚ್ ಅವರು ಮಾತನಾಡಿ ವಿದ್ಯಾರ್ಥಿಗಳು ತಮಗೆ ಎದುರಾಗುವ ಸಮಸ್ಯೆಗಳನ್ನು ಮೆಟ್ಟಿನಿಂತು ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡಬೇಕು ಎಂದರು. ಸಿಸಿಟೆಕ್ ಮ್ಯಾನೇಜರ್ ಆದ ಶ್ರೀ ಶಿವಕುಮಾರ ಸ್ವಾಮಿ ಎಸ್.ಹೆಚ್. ಸಂಯೋಜಕರಾದ ಶ್ರೀ ಮತಿ ಆಸೀಯಾ ಬಾನು ಬಿ. ಪ್ರಾಸ್ಥಾವಿಕವಾಗಿ ಮಾತನಾಡಿದರು ಹಾಗೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಬೃಂದ ಕಾರ್ಯಕ್ರಮ ನಿರೂಪಿಸಿದರು,
ವೈಷ್ಣವಿ, ಲಾವಣ್ಯ, ಭಾವನ ಪ್ರಾರ್ಥಿಸಿದರು, ಉಪನ್ಯಾಸಕಿ ಪ್ರಿಯಾಂಕ ಟಿ ಎಸ್ ವಂದಿಸಿದರು‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending