ಕ್ರೀಡೆ
ಹಲವು ನಾಯಕರ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ..!
ಸುದ್ದಿದಿನ,ಅಹಮದಾಬಾದ್: ಭಾರತ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯವನ್ನು 3-1 ಅಂತರದಲ್ಲಿ ಗೆದ್ದ ಸಂಭ್ರಮದಲ್ಲಿರುವಂತೆಯೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಯಕನಾಗಿ ದಿಗ್ಗಜ ನಾಯಕರ ದಾಖಲೆಯನ್ನು ಮುರಿದಿದ್ದಾರೆ.
ಭಾರತ ತಂಡವು ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ಇನ್ನಿಂಗ್ಸ್ ಮತ್ತು 25 ರನ್ ಗಳ ಜಯ ಸಾಧಿಸುತ್ತಿದ್ದಂತೆ. ನಾಯಕನಾಗಿ ಕೊಹ್ಲಿ ತವರಿನಲ್ಲಿ 23 ನೇ ಗೆಲುವಿನ ನಗೆಯನ್ನು ಬೀರಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದ ದಿಗ್ಗಜ ನಾಯಕರಾದ ಸ್ಟೀವ್ ವ್ಹಾ ಮತ್ತು ವೆಸ್ಟ್ ಇಂಡೀಸ್ ನ ಕ್ಲೈವ್ ಲಾಯ್ಡ್ ದಾಖಲೆಯ ಮುರಿದು ಮುಂದಿದ್ದಾರೆ.
ವಿರಾಟ್ ಕೊಹ್ಲಿ ತವರಿನಲ್ಲಿ ನಡೆದ ಟೆಸ್ಟ್ ಕ್ರಿಕೆಟ್ ನಲ್ಲಿ 23ನೇ ಗೆಲುವು ದಾಖಲಿಸುವುದರ ಮೂಲಕ ಸ್ಟೀವ್ ವ್ಹಾ ದಾಖಲೆ ಮುರಿದು ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡರೆ ಮೊದಲ ಸ್ಥಾನದಲ್ಲಿ 30 ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ನಾಯಕ ಗ್ರೇಮ್ ಸ್ಮಿತ್ ರಾರಾಜಿಸುತ್ತಿದ್ದಾರೆ. 29 ಗೆಲುವಿನೊಂದಿಗೆ ರಿಕಿ ಪಾಟಿಂಗ್ ಎರಡನೇ ಸ್ಥಾನದಲ್ಲಿದ್ದಾರೆ. ತವರಿನಲ್ಲಿ 10 ಟೆಸ್ಟ್ ಸರಣಿ ಗೆಲುವಿನೊಂದಿಗೆ ಕೊಹ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಟಿಂಗ್ ಹೆಸರಿನಲ್ಲಿದ್ದ ದಾಖಲೆಯನ್ನ ಸರಿದೂಗಿಸಿದ್ದಾರೆ.
We worked really hard for this, happy to be in the finals. Looking forward. 🏆#TeamIndia pic.twitter.com/cTzFkVheRl
— Virat Kohli (@imVkohli) March 6, 2021
ನಾಯಕನಾಗಿ ವೆಸ್ಟ್ ಇಂಡೀಸ್ ನಾಯಕ ಕೈವ್ ಲಾಯ್ಡ್ 74 ಟೆಸ್ಟ್ ಪಂದ್ಯಗಳಲ್ಲಿ 36 ಗೆಲುವನ್ನು ದಾಖಲಿಸಿದ್ದರು. ಆದರೆ ಈಗ ವಿರಾಟ್ ಕೊಹ್ಲಿ ಕೇವಲ 60 ಪಂದ್ಯಗಳಲ್ಲಿ 36 ಟೆಸ್ಟ್ ಗೆಲುವು ದಾಖಲಿಸುವ ಮೂಲಕ ಲಾಯ್ಡ್ ಅವರ ದಾಖಲೆಯನ್ನು ಪುಡಿಗುಟ್ಟಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಮಧ್ಯಾಹ್ನದ ಪ್ರಮುಖ ಸುದ್ದಿಗಳು
ಸುದ್ದಿದಿನ ಕನ್ನಡ ನ್ಯೂಸ್ ಮಧ್ಯಾಹ್ನದ ಪ್ರಮುಖ ಸುದ್ದಿಗಳು
- ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ಮತದಾನ ಪ್ರಗತಿಯಲ್ಲಿದೆ. 11 ಗಂಟೆಯ ವೇಳೆಗೆ ಬಂದ ವರದಿಯ ಪ್ರಕಾರ ಒಟ್ಟಾರೆ 6ನೇ ಹಂತದ 58 ಕ್ಷೇತ್ರಗಳಲ್ಲಿ ಶೇಕಡ 25.76ರಷ್ಟು ಮತದಾನವಾಗಿದೆ. ಬಿಹಾರದಲ್ಲಿ ಶೇಕಡ 23.67, ಹರಿಯಾಣದ ಶೇಕಡ 22.09, ಜಾರ್ಖಂಡ್ನಲ್ಲಿ ಶೇಕಡ 27.80, ಒಡಿಶಾದ ಶೇಕಡ 21.30, ಉತ್ತರಪ್ರದೇಶದ 27.06, ಪಶ್ಚಿಮಬಂಗಾಳದಲ್ಲಿ 36.88, ದೆಹಲಿಯಲ್ಲಿ 21.69 ಹಾಗೂ ಜಮ್ಮು-ಕಾಶ್ಮೀರದಲ್ಲಿ ಶೇಕಡ 23.11ರಷ್ಟು ಮತದಾನವಾಗಿದೆ.
- ದೆಹಲಿಯಲ್ಲಿಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಕೇಂದ್ರ ಸಚಿವರಾದ ಡಾ. ಎಸ್. ಜೈಶಂಕರ್, ಹರ್ದೀಪ್ ಸಿಂಗ್ ಪುರಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಆಪ್ ನಾಯಕಿ ಅತೀಶಿ ಸಿಂಗ್ ಸೇರಿದಂತೆ ಹಲವು ಪ್ರಮುಖರು ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ಸಾರ್ವಜನಿಕರನ್ನು ಮತದಾನದಲ್ಲಿ ಭಾಗವಹಿಸಲು ಪ್ರೇರೇಪಿಸಿದ್ದಾರೆ.
- ಮಳೆಗಾಲ ಆರಂಭವಾಗಿದ್ದು, ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹಾವೇರಿ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
- ಎರಡು ದಿನಗಳ ಹಿಂದೆ ಬಾಗಲಕೋಟೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಾಗೂ ಗಾಳಿಯಿಂದ ಉಂಟಾದ ಹಾನಿಗೆ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆಯೂ ಆಗಿರುವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದ್ದಾರೆ.
- ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ – ಎನ್ಐಎ ಬಂಧಿಸಿದೆ. ಹುಬ್ಬಳ್ಳಿಯ 35 ವರ್ಷದ ಶೋಯಬ್ ಅಹಮದ್ ಮಿರ್ಜಾ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯಾಗಿದ್ದು, ಲಷ್ಕರ್ ಎ ತೊಯ್ಬಾದ ಭಯೋತ್ಪಾದನಾ ಸಂಚು ಪ್ರಕರಣದಲ್ಲಿ ಮಾಜಿ ಆರೋಪಿಯಾಗಿದ್ದಾನೆ ಎಂದು ಎನ್ಐಎ ತಿಳಿಸಿದೆ.
- ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆಯುತ್ತಿರುವ ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮಹಿಳೆಯರ ಸಿಂಗಲ್ಸ್ ವಿಭಾಗದ ಸೆಮಿಫೈನಲ್ಸ್ ಪಂದ್ಯದಲ್ಲಿ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು, ವಿಶ್ವದ 20ನೇ ಶ್ರೇಯಾಂಕಿತ ಥೈಲ್ಯಾಂಡ್ನ ಬುಸಾನನ್ ಆಂಗ್ಬಾಮ್ರುಂಗ್ಫಾನ್ ವಿರುದ್ಧ ಫೈನಲ್ಸ್ ಪ್ರವೇಶಿಸಲು ಸೆಣಸಲಿದ್ದಾರೆ.
- ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 36 ರನ್ಗಳ ಗೆಲುವು ದಾಖಲಿಸಿದ್ದು, ಫೈನಲ್ ಪಂದ್ಯಕ್ಕೆ ಪ್ರವೇಶ ಪಡೆದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಮಧ್ಯಾಹ್ನದ ಪ್ರಮುಖ ಸುದ್ದಿಗಳು
ಮದ್ಯಾಹ್ನದ ಪ್ರಮುಖ ಸುದ್ದಿಗಳು
- ದೇಶಾದ್ಯಂತ 5 ಹಂತಗಳ ಚುನಾವಣೆ ಪೂರ್ಣಗೊಂಡಿದ್ದು, ಇನ್ನು ಎರಡು ಹಂತಗಳ ಚುನಾವಣೆ ಬಾಕಿ ಉಳಿದಿದೆ. 6ನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಒಟ್ಟು 58 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ.
- ಹರಿಯಾಣದಲ್ಲಿಂದು ವಿವಿಧ ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಬಿಜೆಪಿ ಹಿರಿಯ ನಾಯಕ ಮತ್ತು ಪ್ರಧಾನಿ ನರೇಂದ್ರ ಮೋದಿ, ಮಹೇಂದ್ರಗರ್ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ಹರಿಯಾಣದ ಸಿರ್ಸಾದಲ್ಲಿ ರೋಡ್ ಶೋ ನಡೆಸಿದರು.
- ಸಂತಾಲಿ ಲೇಖಕ ಪಂಡಿತ್ ರಘುನಾಥ್ ಮುರ್ಮು ಅವರ ಜನ್ಮದಿನದಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗೌರವ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್ ಮಾಡಿರುವ ಅವರು, ಓಲ್ ಚಿಕಿ ಲಿಪಿಯನ್ನು ಅಭಿವೃದ್ಧಿಪಡಿಸುವ ಮೂಲಕ ಸಂತಾಲಿ ಭಾಷೆಗೆ ಪಂಡಿತ್ ರಘುನಾಥ್ ಮುರ್ಮು ಹೊಸ ಗುರುತು ನೀಡಿದ್ದಾರೆ ಎಂದು ಹೇಳಿದರು.
- ಭಗವಾನ್ ಬುದ್ಧನ ಜನ್ಮದಿನದ ಅಂಗವಾಗಿ ಬುದ್ಧ ಪೂರ್ಣಿಮೆಯನ್ನು ಪ್ರಪಂಚದಾದ್ಯಂತ ವಿವಿಧ ಭಾಗಗಳಲ್ಲಿ ಇಂದು ಆಚರಿಸಲಾಗುತ್ತಿದೆ. ಭಾರತ, ನೇಪಾಳ, ಭೂತಾನ್, ಬರ್ಮಾ, ಥೈಲ್ಯಾಂಡ್, ಟಿಬೆಟ್, ಕೊರಿಯಾ, ಲಾವೋಸ್, ವಿಯೆಟ್ನಾಂ, ಮಂಗೋಲಿಯಾ, ಕಾಂಬೋಡಿಯಾ, ಸಿಂಗಾಪುರ್, ಇಂಡೋನೇಷ್ಯಾ ಮತ್ತು ಶ್ರೀಲಂಕಾದಂತಹ ದೇಶಗಳಲ್ಲಿ ಇದು ಪ್ರಮುಖ ಹಬ್ಬವಾಗಿದೆ.
- ಜುಲೈ 4 ರಂದು ಬ್ರಿಟನ್ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಘೋಷಿಸಿದ್ದಾರೆ. ಚುನಾವಣೆ ಘೋಷಣೆಯಾಗುವ ಕುರಿತ ಊಹಾಪೋಹಗಳಿಗೆ ತೆರೆ ಎಳೆದಿರುವ ಅವರು, ನಿರೀಕ್ಷೆಗಿಂತ ಹಲವಾರು ತಿಂಗಳುಗಳ ಮುಂಚಿತವಾಗಿಯೇ ರಾಷ್ಟ್ರೀಯ ಚುನಾವಣೆಯನ್ನು ಕರೆದಿದ್ದಾರೆ.
- ಬೆಲ್ಜಿಯಂನ ಆಂಟ್ವರ್ಪ್ನಲ್ಲಿ ನಡೆದ ಎಫ್ಐಎಚ್ ಪ್ರೊ ಲೀಗ್ ಪಂದ್ಯದಲ್ಲಿ ಭಾರತೀಯ ಪುರುಷರ ಹಾಕಿ ತಂಡ ಅರ್ಜೆಂಟೀನಾ ತಂಡವನ್ನು ಶೂಟೌಟ್ನಲ್ಲಿ 5-4ಗೋಲುಗಳಿಂದ ಸೋಲಿಸಿತು. ಶೂಟೌಟ್ನಲ್ಲಿ, ನಾಯಕ ಹರ್ಮನ್ಪ್ರೀತ್ ಸಿಂಗ್ ಮತ್ತು ಸುಖಜೀತ್ ಸಿಂಗ್ ತಲಾ ಎರಡು ಗೋಲು ಗಳಿಸಿದರು.
- ಚೆನ್ನೈನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿರುವ ಐಪಿಎಲ್ ಟಿ-20 ಟೂರ್ನಿಯ 2ನೇ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ತಂಡ ಮೊದಲನೇ ಕ್ವಾಲಿಫೈಯರ್ ಪಂದ್ಯ ಸೋತ ಹೈದರಾಬಾದ್ ತಂಡದೊಂದಿಗೆ ಫೈನಲ್ ಪ್ರವೇಶಿಸಲು ಸೆಣಸಾಟ ನಡೆಸಲಿದೆ.
- ಇಂದು ಬುದ್ಧ ಪೌರ್ಣಿಮೆಯನ್ನು, ರಾಜ್ಯಾದ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಜಗತ್ತಿಗೆ ಜ್ಞಾನದ ಬೆಳಕನ್ನು ನೀಡಿ, ಕರುಣೆ ಮತ್ತು ಶಾಂತಿಯ ಮಂತ್ರವನ್ನು ಸಾರಿದ ಮಹಾಪುರುಷ ಗೌತಮ ಬುದ್ಧನನ್ನು ನೆನೆಯುತ್ತಾ, ಎಲ್ಲರಿಗೂ ಬುದ್ಧ ಪೂರ್ಣಿಮೆಯ ಶುಭಾಶಯಗಳು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.
- ರಾಜ್ಯದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ. ಮುಂಗಾರು ಹಂಗಾಮಿಗೆ 5 ಲಕ್ಷ 35 ಸಾವಿರ ಕ್ವಿಂಟಾಲ್ ಬಿತ್ತನೆ ಬೀಜದ ಬೇಡಿಕೆ ಇದೆ. ಒಟ್ಟು 8 ಲಕ್ಷದ 98 ಸಾವಿರ ಕ್ವಿಂಟಾಲ್ ಬೀಜಗಳ ಪೂರೈಕೆಗೆ, ವ್ಯವಸ್ಥೆ ಮಾಡಲಾಗಿದೆ ಎಂದು, ಸಾಮಾಜಿಕ ಜಾಲತಾಣದಲ್ಲಿ, ಕೃಷಿ ಖಾತೆ ಸಚಿವ ಎನ್.ಚಲುವರಾಯ ಸ್ವಾಮಿ ತಿಳಿಸಿದ್ದಾರೆ.
- ಗದಗ ಹಾಗೂ ಹಾವೇರಿ ಜಿಲ್ಲೆಗಳ ವ್ಯಾಪ್ತಿಯ, ವಿವಿಧ ಗ್ರಾಮಗಳಿಗೆ, ಕುಡಿಯುವ ನೀರು ಪೂರೈಸಲು, ಭದ್ರಾ ಜಲಾಶಯದಿಂದ, ತುಂಗಭದ್ರಾ ನದಿಗೆ, ಇದೇ 28ರ ವರೆಗೆ ಪ್ರತಿ ದಿನ, 2 ಸಾವಿರ ಕ್ಯುಸೆಕ್ಗಳಂತೆ ಒಟ್ಟು, 11 ಸಾವಿರದ 574 ಕ್ಯೂಸೆಕ್ ನೀರು ಹರಿಸಲಾಗುವುದು ಎಂದು, ಭದ್ರಾ ಯೋಜನಾ ವೃತ್ತದ, ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
- ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡ ಬಳ್ಳಾಪುರದ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ, ದ್ರೌಪದಿದೇವಿ ಕರಗ ಮಹೋತ್ಸವ, ಇಂದು ರಾತ್ರಿ ಜರುಗಲಿದೆ.
- ಮುಂಬೈ ಷೇರು ಮಾರುಕಟ್ಟೆಯಲ್ಲಿಂದು ಆರಂಭಿಕ ವಹಿವಾಟಿನಲ್ಲಿ ಷೇರು ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 42 ಅಂಕ ಏರಿಕೆಯೊಂದಿಗೆ 74 ಸಾವಿರದ 263 ರಲ್ಲಿ ವಹಿವಾಟು ನಡೆಸಿದೆ. ಅಂತೆಯೇ ನಿಫ್ಟಿ ಕೂಡ 20 ಅಂಕ ಏರಿಕೆಯ ನಂತರ 22 ಸಾವಿರದ 618 ರಲ್ಲಿ ವಹಿವಾಟು ನಡೆಸಿದೆ.
- ಬೆಲ್ಜಿಯಂನ ಆಂಟ್ವರ್ಪ್ನಲ್ಲಿ ನಡೆದ ಎಫ್ಐಎಚ್ ಪ್ರೊ ಲೀಗ್ ಪಂದ್ಯದಲ್ಲಿ ಭಾರತೀಯ ಪುರುಷರ ಹಾಕಿ ತಂಡ ಅರ್ಜೆಂಟೀನಾ ತಂಡವನ್ನು ಶೂಟೌಟ್ನಲ್ಲಿ 5-4 ಗೋಲುಗಳಿಂದ ಸೋಲಿಸಿತು. ಶೂಟೌಟ್ನಲ್ಲಿ, ನಾಯಕ ಹರ್ಮನ್ಪ್ರೀತ್ ಸಿಂಗ್ ಮತ್ತು ಸುಖಜೀತ್ ಸಿಂಗ್ ತಲಾ ಎರಡು ಗೋಲು ಗಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಬೆಳಗಿನ ಸುದ್ದಿ ಮುಖ್ಯಾಂಶಗಳು
ಬೆಳಗಿನ ಸುದ್ದಿ ಮುಖ್ಯಾಂಶಗಳು
- ರಾಜ್ಯ ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮುಂದಿನ ತಿಂಗಳ 3 ರಂದು ಚುನಾವಣೆ ನಡೆಯಲಿದೆ. ದ್ವೈವಾರ್ಷಿಕ ಚುನಾವಣೆಗೆ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದು, ಒಟ್ಟು 91ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆಯ ದಿನವಾಗಿದೆ.
- ದೇಶದ ಉತ್ತರದ ರಾಜ್ಯಗಳಲ್ಲಿ ನಿನ್ನೆ ತೀವ್ರ ಬಿಸಿಗಾಳಿ ವಾತಾವರಣ ಉಂಟಾಗಿತ್ತು. ಮುಂದಿನ 4 ದಿನಗಳಲ್ಲಿ ವಾಯವ್ಯ ಪೂರ್ವ ಹಾಗೂ ಮಧ್ಯಭಾರತದ ಬಯಲು ಪ್ರದೇಶಗಳಲ್ಲಿ ತೀವ್ರ ಬಿಸಿಗಾಳಿ ವಾತಾವರಣವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚಿಸಿದೆ.
- ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಪ್ರದೇಶಾದ್ಯಂತ 40 ರಿಂದ 55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಸಮುದ್ರ ಉಕ್ಕೇರಲಿದ್ದು, ಮುಂಜಾಗ್ರತಾ ಕ್ರಮವಾಗಿ ಬುಧವಾರದವರೆಗೆ ಸಮುದ್ರಕ್ಕೆ ಇಳಿಯಬಾರದು ಎಂದು ಮೀನುಗಾರರಿಗೆ ಉತ್ತರಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ.
- ತೈವಾನ್ನ ಅಧ್ಯಕ್ಷ ಹುದ್ದೆ ಆಯ್ಕೆಯಾಗಿರುವ ಲೈ ಛಿಂಗ್-ತೆ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರು ಜನವರಿಯಲ್ಲಿ ನಡೆದ ಚುನಾವಣೆಯಲ್ಲಿ ಜಯ ಸಾಧಿಸಿದ್ದಾರೆ. ಕಳೆದ 4 ವರ್ಷಗಳಿಂದ ದೇಶದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ 64 ವರ್ಷದ ಲೈ ಅವರು, ತೈವಾನ್ನ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಹೇಳಿದ್ದಾರೆ.
- ಶ್ರೀಲಂಕಾದ ಸೀತಾಮಾತೆ ಮಂದಿರ-ಸೀತಾ ಇಳಿಯಾದಲ್ಲಿ ನಿನ್ನೆ ಕುಂಬಾಭಿಷೇಕ ಶ್ರದ್ಧಾ-ಭಕ್ತಿ ಸಡಗರ ಸಂಭ್ರಮಗಳಿಂದ ಜರುಗಿತು. ಅಯೋಧ್ಯೆಯ ಸರಯೂ ನದಿಯಿಂದ ತರಲಾಗಿದ್ದ ಸುಮಾರು 25ಲೀಟರ್ ಪವಿತ್ರ ಜಲದಿಂದ ಮಂದಿರದ ಗೋಪುರಕ್ಕೆ ಅಭಿಷೇಕ ನೆರವೇರಿಸಲಾಯಿತು. ಭಾರತ-ನೇಪಾಳ, ಶ್ರೀಲಂಕಾ ಸೇರಿದಂತೆ ವಿವಿಧ ಕಡೆಗಳಿಂದ ಆಗಮಿಸಿದ್ದ ಭಕ್ತಾದಿಗಳು ಈ ದೃಶ್ಯವನ್ನು ಕಣ್ಮನಗಳಲ್ಲಿ ತುಂಬಿಕೊಂಡರು.
- ಭಾರತದ ಗ್ರಾಂಡ್ ಮಾಸ್ಟರ್ ಅರವಿಂದ್ ಚಿದಂಬರಂ ಶಾರ್ಜಾ ಮಾಸ್ಟರ್ಸ್ ಚೆಸ್ ಪಂದ್ಯಾವಳಿಯಲ್ಲಿ ಅತಿಥೇಯ ಶಾರ್ಜಾದ ಎ.ಆರ್. ಸುಲೆಹ್ ಸಲೀಂ ಅವರನ್ನು ಪರಾಭವಗೊಳಿಸಿ 4.5ಅಂಕಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ.
- ಗುವಾಹಾಟಿಯಲ್ಲಿ ನಿನ್ನೆ ರಾತ್ರಿ ನಡೆಯಬೇಕಿದ್ದ ರಾಜಸ್ಥಾನ ರಾಯಲ್ಸ್ ಹಾಗೂ ಕೊಲ್ಕೊತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತು. ಕೆಲಕಾಲ ಮಳೆ ಬಂದು ನಿಂತ ನಂತರ ನಡೆದ ಟಾಸ್ ಗೆದ್ದ ಕೊಲ್ಕತ್ತಾ ತಂಡ ಫೀಲ್ಡಿಂಗ್ ಆಯ್ದುಕೊಂಡಿತ್ತು. ಆದರೆ ಪುನಃ ಮಳೆ ಬಂದ ಹಿನ್ನೆಲೆ ಪಂದ್ಯ ರದ್ದುಗೊಳಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಕವಿ ಆನಂದ ಲಕ್ಕೂರು ನಿಧನ ; ಉದಯ ಇಟಗಿ ನುಡಿನಮನ
-
ದಿನದ ಸುದ್ದಿ6 days ago
ಇರಾನ್ ಅಧ್ಯಕ್ಷ ಹೆಲಿಕಾಪ್ಟರ್ ದುರಂತದಲ್ಲಿ ಸಾವು | ಅಘಾತಕಾರಿ ಸುದ್ದಿ ಕೇಳಿ ದುಃಖವಾಗಿದೆ : ಪ್ರಧಾನಿ ಮೋದಿ
-
ದಿನದ ಸುದ್ದಿ7 days ago
ಕವಿತೆ | ಏಜಾಕ್ಸ್ ಸಿಂದೂ ನೆಲದಲಿ ಪ್ರವೇಶಿಸಿದ ಪ್ರೇತ..!
-
ಕ್ರೀಡೆ6 days ago
ಬೆಳಗಿನ ಸುದ್ದಿ ಮುಖ್ಯಾಂಶಗಳು
-
ದಿನದ ಸುದ್ದಿ7 days ago
ಲೋಕಸಭೆ ಚುನಾವಣೆ | ಆರನೇ ಹಂತ ; ಕಣದಲ್ಲಿರುವ ಅಭ್ಯರ್ಥಿಗಳೆಷ್ಟು ಗೊತ್ತಾ..?
-
ದಿನದ ಸುದ್ದಿ7 days ago
ಪರಿಶಿಷ್ಟ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಹೆಚ್ಚಳ
-
ದಿನದ ಸುದ್ದಿ6 days ago
ರಾಜ್ಯ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮ | ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ7 days ago
ದಾವಣಗೆರೆ ಜಿಲ್ಲಾದ್ಯಂತ ಉತ್ತಮ ಮಳೆ