Connect with us

ದಿನದ ಸುದ್ದಿ

ಉತ್ಸವಗಳ ಹೆಸರಲ್ಲಿ ಮೌಢ್ಯ ತೊರೆಯಬೇಕು : ಈಶ್ವರಾನಂದಪುರಿ ಸ್ವಾಮೀಜಿ

Published

on

ಸುದ್ದಿದಿನ,ದಾವಣಗೆರೆ: ನಮಗೆ ಇಂದು ಭಕ್ತಿ ಮತ್ತು ಜ್ಞಾನ ಎರಡೂ ಮುಖ್ಯ. ಭಕ್ತಿ ಹೆಚ್ಚಿಸುವ ದೇವಾಲಯಗಳ ಜತೆಯಲ್ಲೇ ಜ್ಞಾನ ವಿಸ್ತರಿಸುವ ವಿದ್ಯಾಲಯಗಳೂ ಹೆಚ್ಚಬೇಕು ಎಂದು ಹೊಸದುರ್ಗ ಕನಕ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.

ತಾಲೂಕಿನ ಹಳೆಕುಂದುವಾಡ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶ್ರೀ ಆಂಜನೇಯ ಸ್ವಾಮಿ, ಶ್ರೀ ಬಸವೇಶ್ವರ ದೇವಸ್ಥಾನದ ಉದ್ಘಾಟನೆ, ಶಿಲಾಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಇಂದಿನ ಮಕ್ಕಳನ್ನು ಐಎಎಎಸ್, ಕೆಎಎಸ್‌ನಂತಹ ಉನ್ನತ ಶಿಕ್ಷಣ ಹಾಗೂ ಸಂಸ್ಕಾರ ನೀಡಲು ಪಾಲಕರು ಮುಂದಾಗಬೇಕು. ಉತ್ಸವಗಳ ಹೆಸರಲ್ಲಿ ಮೌಢ್ಯ ತೊರೆಯಬೇಕು. ದುಂದುವೆಚ್ಚ ಕಡಿಮೆ ಮಾಡಬೇಕು ಎಂದೂ ಸಲಹೆ ನೀಡಿದರು.

ಶ್ರೀಕೃಷ್ಣನು ಕನಕನಿಗೆ, ಶ್ರೀರಾಮನು ಶಬರಿಗೆ ಒಲಿದಿದ್ದು ಜಾತಿಯಿಂದಲ್ಲ; ಅವರಲ್ಲಿದ್ದ ಭಕ್ತಿಯಿಂದಾಗಿ. ಭಕ್ತಿ ಮತ್ತು ಭಕ್ತನಿಗೆ ಜಾತಿ ಇಲ್ಲ. ಎಲ್ಲ ಸ್ವಾಮೀಜಿಗಳನ್ನು, ವರ್ಗದವರನ್ನು ಒಗ್ಗೂಡಿಸಿದ ಕುಂದುವಾಡ, ಸಾಮರಸ್ಯದ ಗ್ರಾಮವಾಗಿದೆ. ಪ್ರತಿ ಗ್ರಾಮದಲ್ಲೂ ಇಂತಹ ವಾತಾವರಣ ಇರಬೇಕು ಎಂದು ಆಶಿಸಿದರು.

ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ ಆಂಜನೇಯನಿಗೆ ಸೀಮಿತ ಜಾತಿಯ ಭಕ್ತರಿಲ್ಲ. ಆತ ಜಾತ್ಯತೀತ ವ್ಯಕ್ತಿ. ಭಕ್ತಿಗೆ ಹೆಸರಾದ ಆಂಜನೇಯ ಹಾಗೂ ಸಮಾನತೆಗೆ ಹೆಸರಾದ ಬಸವೇಶ್ವರರ ದೇಗುಲ ಪ್ರತಿಷ್ಠಾಪನೆಯನ್ನು ಕುಂದುವಾಡ ಗ್ರಾಮಸ್ಥರು ಭಾವೈಕ್ಯ, ಸೌಹಾರ್ದ ಹಾಗೂ ಸಹಬಾಳ್ವೆಯಿಂದ ಮಾಡುತ್ತಿದ್ದಾರೆ. ಈ ಕುಂದುವಾಡ ಗ್ರಾಮ ಸೌಹಾರ್ದ ಗ್ರಾಮವಾಗಿ ಬದಲಾಗಲಿ ಎಂದು ಹೇಳಿದರು.

ಹದಡಿಯ ಚಂದ್ರಗಿರಿ ಮಠದ ಮುರಳೀಧರ ಸ್ವಾಮೀಜಿ ಮಾತನಾಡಿ ಎಲ್ಲವನ್ನು ಕೊಟ್ಟ ದೇವರನ್ನು ಮರೆಯುತ್ತಿದ್ದೇವೆ. ನಿಸರ್ಗವನ್ನು ಹಾಳು ಮಾಡುತ್ತ, ಮಾಲಿನ್ಯ ಹೆಚ್ಚಿಸುತ್ತಿದ್ದೇವೆ. ನಮ್ಮಲ್ಲಿ ಭಯ ಮೂಡಿಸಲು ಹಿರಿಯರು ಊರಿಗೊಂದು ದೇವಸ್ಥಾನ ನಿರ್ಮಿಸಿದ್ದಾರೆ. ಆದರೆ ನಮ್ಮೊಳಗಿರುವ ದೇವರನ್ನು ನಾವು ಕಾಣಬೇಕು. ಮದಗಳನ್ನು ಕೈಬಿಡಬೇಕು. ಧರ್ಮ ಕಾರ್ಯ, ಪರೋಪಕಾರ ಗುಣ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಮಾತನಾಡಿ ಬಸವತತ್ವ ಎಲ್ಲರೂ ಕೂಡಿ ಬಾಳುವುದನ್ನು ಹೇಳಿದೆ. ಎಲ್ಲ ವರ್ಗಗಳಿಗೂ ಬಸವಣ್ಣನವರು ಸಾಮಾಜಿಕ ನ್ಯಾಯ ನೀಡಿದರು. ನಾವಿಂದು ಅವರ ದಾರಿಯಲ್ಲಿ ಸಾಗಬೇಕಿದೆ. ಬಸವಣ್ಣ ಕಂಡು ಕನಸು ಕುಂದುವಾಡ ಗ್ರಾಮದಲ್ಲಿ ಅನಾವರಣವಾಗಿದ್ದು, ಇಲ್ಲಿ ಸದಾ ಶಾಂತಿ ನೆಲೆಸಲಿ ಎಂದು ಆಶಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಎಸ್. ಮಲ್ಲಿಕಾರ್ಜುನ್ ಮಾತನಾಡಿ, ಗ್ರಾಮದವರು ತುಂಬಾ ಒಗ್ಗಟ್ಟಿನಿಂದ ದೇವಾಲಯ ನಿರ್ಮಾಣ ಮಾಡಿರೋದು ಮೆಚ್ಚುವಂತಾಗಿದೆ,
ತಡವಾಗಿಯಾದರೂ ಗ್ರಾಮದಲ್ಲಿ ದೇಗುಲಗಳು ಉತ್ತಮವಾಗಿ ನಿರ್ಮಿತವಾಗಿವೆ. ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಹೇಳಿದರು.

ದಾವಣಗೆರೆ- ಹಳೇ ಕುಂದುವಾಡ ಮುಖ್ಯ ರಸ್ತೆಗೆ ಹೊಂದಿಕೊಂಡ ರಸ್ತೆ ವ್ಯಾಜ್ಯ ನ್ಯಾಯಾಲಯದಲ್ಲಿದ್ದು ಇದನ್ನು ತೆರವುಗೊಳಿಸಿದಲ್ಲಿ ಗ್ರಾಮಸ್ಥರು ಬಯಸಿದಂತೆ 80 ಅಡಿ ರಸ್ತೆ ನಿರ್ಮಾಣ ಮಾಡಲು ಬದ್ಧನಿದ್ದೇನೆ. ಈ ಸಂಬಂಧ ದೂಡಾ ಅಧಿಕಾರಿಗಳು, ಜಮೀನಿನ ಮಾಲೀಕರು, ಗುತ್ತಿಗೆದಾರರನ್ನು ಸೇರಿಸಿ ಸಭೆ ನಡೆಸೋಣ ಎಂದರು.

ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ಈ ಭಾಗದಲ್ಲಿ ದೇಗುಲಗಳ ಸಂಖ್ಯೆ ಹೆಚ್ಚಿದೆ. ಹಿಂದುಳಿದ ವರ್ಗದ ಮಕ್ಕಳು ವಿದ್ಯಾವಂತರಾದರೆ ಇಂತಹ ಹತ್ತು ದೇವಸ್ಥಾನ ಕಟ್ಟುತ್ತಾರೆ, ಹೀಗಾಗಿ ಶಾಲೆಗಳ ನಿರ್ಮಾಣಕ್ಕೂ ಮಹತ್ವ ನೀಡಿ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಮೈಲಾರ ಕ್ಷೇತ್ರದ ಕಾರ್ಣಿಕ ನುಡಿಯುವ ರಾಮಪ್ಪಜ್ಜ, ಹಳೆಕುಂದುವಾಡದ ಸ್ವಾಮಿಜಿ ರಾಜಣ್ಣ, ಮುಖಂಡರಾದ ಬಿ.ಜಿ. ಅಜಯಕುಮಾರ್, ಲೋಕಿಕೆರೆ ನಾಗರಾಜ್, ಶ್ರೀನಿವಾಸ ದಾಸಕರಿಯಪ್ಪ, ಎಚ್. ವೆಂಕಟೇಶ್, ಜೆ.ಎನ್. ಶ್ರೀನಿವಾಸ್. ಶ್ವೇತಾ ಶ್ರೀನಿವಾಸ್, ಮುದೇಗೌಡ್ರ ಗಿರೀಶ್, ತಹಸೀಲ್ದಾರ್ ಬಿ.ಎನ್.ಅಶ್ವಥ್, ದೇವಸ್ಥಾನ ಅಭಿವೃದ್ಧಿ ಸಮಿತಿ ಸದಸ್ಯರು, ಗ್ರಾಮದ ಮುಖಂಡರು, ಯುವಕರು, ಗ್ರಾಮಸ್ಥರು ಸೇರಿದಂತೆ ಇತರರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending